Homeಮುಖಪುಟ‘ಕೆಲವು ಜನರ ಅಹಂ ತಣಿಸಲು ಹೊರಗಡೆ ಮಾಂಸಾಹಾರ ಮಾರಾಟ ಮಾಡಬೇಡಿ ಎನ್ನುತ್ತೀರಿ’: ಚಾಟಿ ಬೀಸಿದ ಗುಜರಾತ್‌...

‘ಕೆಲವು ಜನರ ಅಹಂ ತಣಿಸಲು ಹೊರಗಡೆ ಮಾಂಸಾಹಾರ ಮಾರಾಟ ಮಾಡಬೇಡಿ ಎನ್ನುತ್ತೀರಿ’: ಚಾಟಿ ಬೀಸಿದ ಗುಜರಾತ್‌ ಹೈಕೋರ್ಟ್‌

`ನಾನು ಹೊರಗೆ ಏನು ತಿನ್ನಬೇಕು ಎಂದು ನೀವು ಹೇಗೆ ನಿರ್ಧರಿಸುತ್ತೀರಿ’ ಎಂದು ಮಾಂಸಾಹಾರಿ ಸ್ಟಾಲ್‌ಗಳ ತೆರವಿಗೆ ಹೈಕೋರ್ಟ್‌ ಪ್ರತಿಕ್ರಿಯಿಸಿದೆ

- Advertisement -
- Advertisement -

ಮಾಂಸಾಹಾರಿ ಆಹಾರವನ್ನು ಮಾರಾಟ ಮಾಡುವ ಬೀದಿ ವ್ಯಾಪಾರಿಗಳನ್ನು ಗುರಿಯಾಗಿಸಿಕೊಂಡಿದ್ದಕ್ಕಾಗಿ ಅಹಮದಾಬಾದ್ ಮುನ್ಸಿಪಲ್‌ ಕಾರ್ಪೋರೇಷನ್‌ಗೆ ಗುಜರಾತ್ ಹೈಕೋರ್ಟ್ ಗುರುವಾರ ಎಚ್ಚರಿಕೆ ನೀಡಿದ್ದು, ಅಂತಹ ಯಾವುದೇ ನಿರ್ಧಾರವನ್ನು ಜಾರಿಗೆ ತರಬಾರದು ಎಂದು ಎಚ್ಚರಿಸಿದೆ. ಸಂತ್ರಸ್ತ ಬೀದಿ ವ್ಯಾಪಾರಿಗಳು ಸಲ್ಲಿಸಿದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಾಲಯವು, “ಕೆಲವು ಜನರ ಅಹಂಕಾರ”ವನ್ನು ತೃಪ್ತಿಪಡಿಸಲು ಅಥವಾ “ಅಧಿಕಾರದಲ್ಲಿರುವ ಪಕ್ಷ ನಿರ್ದಿಷ್ಟ ಆಹಾರದ ವಿರುದ್ಧ ಇದೆ” ಎಂಬ ಕಾರಣಕ್ಕಾಗಿ ಇಂತಹ ನಿರ್ಧಾರವನ್ನು ಕೈಗೊಳ್ಳದಂತೆ ಮುನ್ಸಿಪಲ್‌‌ಗೆ ಗುರುವಾರ ಚಾಟಿ ಬೀಸಿದೆ.

ಅಹಮದಾಬಾದ್ ಮುನ್ಸಿಪಲ್ ಕಾರ್ಪೊರೇಷನ್ ತಮ್ಮ ಗಾಡಿಗಳನ್ನು ವಶಪಡಿಸಿಕೊಂಡಿದೆ ಎಂದು 25 ಬೀದಿ ವ್ಯಾಪಾರಿಗಳು ಗುಜರಾತ್‌ ಹೈಕೋರ್ಟ್‌ಗೆ ಮನವಿ ಸಲ್ಲಿಸಿದ್ದರು. ಬೀದಿ ವ್ಯಾಪಾರಿಗಳ ಮನವಿ ಆಲಿಸಿದ ಆಲಿಸಿದ ಗುಜರಾತ್ ಹೈಕೋರ್ಟ್, ಮುನ್ಸಿಪಲ್‌ ಕಾರ್ಪೋರೇಷನ್‌‌ ಅನ್ನು ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದೆ. ಪ್ರಕರಣಗಳನ್ನು ತ್ವರಿತವಾಗಿ ಪರಿಗಣಿಸುವಂತೆ ಸೂಚನೆ ನೀಡಿದ ನ್ಯಾಯಾಲಯ, ಬೀದಿ ವ್ಯಪಾರಿಗಳು ತಮ್ಮ ಸರಕುಗಳನ್ನು ಬಿಡುಗಡೆ ಮಾಡಲು ಸಂಪರ್ಕಿಸಿದರೆ 24 ಗಂಟೆಗಳ ಒಳಗೆ ಅದನ್ನು ಅವರಿಗೆ ನೀಡಬೇಕು ಎಂದು ನಿರ್ದೇಶನ ನೀಡಿದೆ.

ಇದನ್ನೂ ಓದಿ:ಗುಜರಾತ್‌: ಬೀದಿಬದಿ ವ್ಯಾಪಾರಿಗಳ ಹೊಟ್ಟೆ ಮೇಲೆ ಹೊಡೆದ ‘ಮಾಂಸಾಹಾರ ಮಳಿಗೆ ತೆರವು’ ಕಾರ್ಯಾಚರಣೆ

ವಿಚಾರಣೆಯ ಸಂದರ್ಭದಲ್ಲಿ, ನ್ಯಾಯಮೂರ್ತಿ ಬಿರೇನ್ ವೈಷ್ಣವ್, “ಮಾಂಸಾಹಾರದಿಂದ ನಗರಸಭೆಗೆ ಏನು ತೊಂದರೆಯಾಗುತ್ತದೆ?” ಎಂದು ಪ್ರಶ್ನಿಸಿದ್ದಾರೆ.

ಸರ್ಕಾರಿ ವಕೀಲರನ್ನು ಉದ್ದೇಶಿಸಿ ನ್ಯಾಯಾಲಯವು , “ನಿಮ್ಮ ಸಮಸ್ಯೆ ಏನು? ಮಾಂಸಾಹಾರ ನಿಮಗೆ ಇಷ್ಟವಿಲ್ಲ, ಅದು ನಿಮ್ಮ ಇಷ್ಟ. ಆದರೆ ನಾನು ಹೊರಗೆ ಏನು ತಿನ್ನಬೇಕು ಎಂದು ನೀವು ಹೇಗೆ ನಿರ್ಧರಿಸುತ್ತೀರಿ…ಇದ್ದಕ್ಕಿದ್ದಂತೆ ಅಧಿಕಾರದಲ್ಲಿರುವವರು ಇದನ್ನೇ ಮಾಡಬೇಕೆಂದು ಹೇಳುತ್ತಾರೆ? ನಾಳೆ ನೀವು ನನ್ನ ಮನೆಯ ಹೊರಗೆ ನಾನು ಏನು ತಿನ್ನಬೇಕೆಂದು ನಿರ್ಧರಿಸಿ…ಕಬ್ಬಿನ ರಸ ಮಧುಮೇಹಕ್ಕೆ ಕಾರಣವಾಗುತ್ತದೆ ಅಥವಾ ಕಾಫಿ ಆರೋಗ್ಯಕ್ಕೆ ಹಾನಿಕಾರಕ ಎಂಬ ಕಾರಣದಿಂದ ನಾನು ಅವುಗಳನ್ನು ಸೇವಿಸಬಾರದು ಎಂದು ಅವರು ನನಗೆ ಹೇಳುತ್ತಾರೆ. ಪಾಲಿಕೆ ಆಯುಕ್ತರಿಗೆ ಫೋನ್ ಮಾಡಿ ನೀವು ಏನು ಮಾಡುತ್ತಿದ್ದೀರಿ ಎಂದು ಕೇಳಿ” ಎಂದು ಹೇಳಿದೆ.

ಯಾವುದೇ ಅಧಿಕೃತ ಆದೇಶವಿಲ್ಲದೆ ಮತ್ತು ವಡೋದರಾ, ಸೂರತ್, ಭಾವನಗರ, ಜುನಾಗಢ ಮತ್ತು ಅಹಮದಾಬಾದ್‌ನಲ್ಲಿನ ಮುನ್ಸಿಪಲ್‌ ಕಾರ್ಪೋರೇಷನ್‌ಗಳು ಈ ನಿರ್ಧಾರ ತೆಗೆದುಕೊಂಡು ಬೀದಿಬದಿ ವ್ಯಾಪಾರಿಗಳ ಗಾಡಿಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ವ್ಯಾಪಾರಿಗಳ ಪರವಾಗಿ ವಕೀಲ ರೋನಿತ್ ಜಾಯ್ ನ್ಯಾಯಾಲಯಕ್ಕೆ ಹೇಳಿಕೆ ನೀಡಿದರು.

ಕಳೆದ ತಿಂಗಳು ರಾಜ್‌ಕೋಟ್ ಮೇಯರ್ ಮಾಂಸಾಹಾರ ಮಾರಾಟ ಮಾಡುವ ಗಾಡಿಗಳು ಧಾರ್ಮಿಕ ಭಾವನೆಗಳಿಗೆ ಧಕ್ಕೆ ತರುತ್ತಿವೆ ಎಂದು ಹೇಳಿಕೆ ನೀಡಿದ್ದರು.

ಇದನ್ನೂ ಓದಿ:ಗುಜರಾತ್‌: ಮಾಂಸಾಹಾರ ಮಳಿಗೆಗಳಿಗೆ ನಿರ್ಬಂಧ; ಬಿಜೆಪಿ ನಾಯಕರಲ್ಲಿ ಭಿನ್ನಮತ

ಬೀದಿ ವ್ಯಾಪಾರಿಗಳ ಅರ್ಜಿಯ ಮೊದಲ ವಿಚಾರಣೆ ಮುಗಿದ ನಂತರ, ಅಹಮದಾಬಾದ್ ಮುನ್ಸಿಪಲ್ ಕಾರ್ಪೊರೇಶನ್‌ನ ಸ್ಥಾಯಿ ವಕೀಲ ಸತ್ಯಂ ಛಾಯಾ ಅವರಿಗೆ ನ್ಯಾಯಾಲಯವು ಹಾಜರಾಗುವಂತೆ ಸೂಚಿಸುವುದರೊಂದಿಗೆ, ಪ್ರಕರಣವನ್ನು ದ್ವಿತೀಯಾರ್ಧದಲ್ಲಿ ಹೆಚ್ಚಿನ ವಿಚಾರಣೆ ನ್ಯಾಯಾಲಯ ನಡೆಸಿತು.

ನಗರಸಭೆ ವಕೀಲ ಛಾಯಾ ಅವರು ನ್ಯಾಯಾಲಯಕ್ಕೆ, “ಕೆಲವು ತಪ್ಪು ಕಲ್ಪನೆಯಡಿಯಲ್ಲಿ ಮನವಿ ಸಲ್ಲಿಸಲಾಗಿದೆ. ಎಲ್ಲಾ ಮಾಂಸಾಹಾರದ ಗಾಡಿಗಳನ್ನು ತೆಗೆದುಹಾಕಬೇಕು ಎಂದು ಯಾವುದೇ ಸೂಚನೆ ನೀಡಿಲ್ಲ. ರಸ್ತೆಯ ಮೇಲಿನ ಅತಿಕ್ರಮಣ, ಇದು ಸಾರ್ವಜನಿಕ ಸಂಚಾರಕ್ಕೆ ಅಡ್ಡಿ ಅಥವಾ ಪಾದಚಾರಿಗಳಿಗೆ ತೊಂದರೆಯಾಗುವ ಗಾಡಿಗಳನ್ನು ತೆಗೆದು ಹಾಕಲಾಗಿದೆ” ಎಂದು ಹೇಳಿದ್ದಾರೆ.

ಆದರೆ, ಮಾಂಸಾಹಾರ ಮಾರಾಟಗಾರರನ್ನು ಗುರಿಯಾಗಿಸಿಕೊಂಡು ಅತಿಕ್ರಮಣ ತೆರವು ಕಾರ್ಯ ಕೈಗೊಳ್ಳಲಾಗುತ್ತಿದೆಯೇ ಎಂದು ನ್ಯಾಯಮೂರ್ತಿ ವೈಷ್ಣವ್ ಪ್ರಶ್ನಿಸಿದ್ದಾರೆ.

ಇದನ್ನೂ ಓದಿ:ವಡೋದರಾ: ಮಾಂಸಾಹಾರವನ್ನು ಬೀದಿಯಲ್ಲಿ ಪ್ರದರ್ಶಿಸದಂತೆ ಸೂಚನೆ!

ಛಾಯಾ ಅವರ ಹೇಳಿಕೆಯನ್ನು ಅನುಸರಿಸಿ, ನ್ಯಾಯಮೂರ್ತಿ ವೈಷ್ಣವ್, “ಏನನ್ನಾದರೂ ಅನುಷ್ಠಾನಗೊಳಿಸುವ ನೆಪದಲ್ಲಿ, ಉದಾಹರಣೆಗೆ, ವಸ್ತ್ರಪುರ ಕೆರೆಯ ಸುತ್ತಲೂ ರಾತ್ರಿ ಹೊತ್ತಲ್ಲಿ ಮೊಟ್ಟೆ ಮತ್ತು ಆಮ್ಲೆಟ್ ಮಾಡುವ ವ್ಯಾಪಾರಿಗಳಿದ್ದರೆ ಅಧಿಕಾರದಲ್ಲಿ ಇರುವ ಪಕ್ಷವು ಅದನ್ನು ತಿನ್ನಬಾರದು ಎಂದು ನಿರ್ಧರಿಸುತ್ತದೆ, ಅವುಗಳನ್ನು ನಿಲ್ಲಿಸಲು ಬಯಸುತ್ತವೆ…ನೀವು ಅವುಗಳನ್ನು ಎತ್ತಿಕೊಂಡು ತೆಗೆದುಕೊಂಡು ಹೋಗುತ್ತೀರಾ? ಪ್ರಾಮಾಣಿಕವಾಗಿ ಹೇಳಿ.” ಎಂದು ಹೇಳಿದ್ದಾರೆ.

“ನೀವು ಅದನ್ನು ಏಕೆ ಮಾಡುತ್ತೀರಿ? ನಿಮ್ಮ ಕಾರ್ಪೊರೇಷನ್ ಕಮಿಷನರ್ ಅವರನ್ನು ಇಲ್ಲಿಯೇ ಬರುವಂತೆ ಕೇಳಿ…ಜನರನ್ನು ಮನಬಂದಂತೆ ಎತ್ತಿಕೊಂಡು ಹೋಗುತ್ತೀರಲ್ಲ, ಎಷ್ಟು ಧೈರ್ಯ ನಿಮಗೆ?” ಎಂದು ನ್ಯಾಯಮೂರ್ತಿ ವೈಷ್ಣವ್‌ ಕಿಡಿ ಕಾರಿದ್ದಾರೆ.

ಆದರೆ ವಕೀಲ ಛಾಯಾ ಅವರು ನ್ಯಾಯಾಲಯದ ಮಾತನ್ನು ನಿರಾಕರಿಸಿ, ಫುಟ್‌ಪಾತ್‌ಗಳ ಫೋಟೋಗಳನ್ನು ಉಲ್ಲೇಖಿಸಿದ್ದಾರೆ. ಇದಕ್ಕೆ ಮತ್ತೆ ಪ್ರತಿಕ್ರಿಯಿಸಿದ ನ್ಯಾಯಮೂರ್ತಿ ವೈಷ್ಣವ್, “ಅತಿಕ್ರಮಣಗಳಿದ್ದರೆ, ಅದ್ನನು ತೆರವುಗೊಳಿಸಬೇಕು, ಆದರೆ ಜಪ್ತಿ ಮಾಡಬೇಡಿ. ಯಾಕೆಂದರೆ ಇಂದು ಬೆಳಿಗ್ಗೆ ಯಾರಾದರೂ, ‘ನಾಳೆಯಿಂದ ನನ್ನ ಸುತ್ತಲೂ ಮೊಟ್ಟೆಯ ತಿನಿಸುಗಳು ಬೇಡ’ ಎಂದು ಹೇಳಿಕೆ ನೀಡುತ್ತಾರೆ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಕೊರೊನ ವೈರಸ್ ಕೇವಲ ವೈರಸ್‌ ಅಲ್ಲ. ‘ಮಾಂಸಾಹಾರಿಗಳನ್ನು ಶಿಕ್ಷಿಸಲು’ ಬಂದ ಅವತಾರ ಎಂದ ಹಿಂದೂ ಮಹಾಸಭಾ ಮುಖ್ಯಸ್ಥ!

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಡದಿ ರೈತರ ವಿಚಾರದಲ್ಲಿ ಸರ್ಕಾರದ ನಿರ್ಧಾರ ಸ್ವಾಗತಾರ್ಹ ಆದರೆ.., ಸಂಯುಕ್ತ ಹೋರಾಟ ಸಮಿತಿಯ ಎಚ್ಚರಿಕೆಯ ಮಾತು

ಬಿಡದಿ ಟೌನ್‌ಶಿಪ್ ವಿಚಾರದಲ್ಲಿ ಬಲವಂತವಾಗಿ ಯಾವುದೇ ರೈತರ ಭೂಮಿ ಕಿತ್ತುಕೊಳ್ಳುವುದಿಲ್ಲ ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳುತ್ತಿರುವುದು ಕೇವಲ ಮಾತಿನ ಜಾಣ್ಮೆಯಷ್ಟೇ. ಬಿಡದಿ ಭಾಗದ ಮೂರು ಗ್ರಾಮಗಳಿಗೆ ಹೊರಡಿಸಲಾಗಿರುವ ಭೂಸ್ವಾಧೀನದ ಅಂತಿಮ ಅಧಿಸೂಚನೆಯನ್ನು ಸಂಪೂರ್ಣವಾಗಿ...

“8.5 ಕೆಜಿ ತೂಕ ಇಳಿಸಿಕೊಂಡ ಸೋನಮ್ ವಾಂಗ್‌ಚುಕ್ ಜೀವಕ್ಕೆ ಅಪಾಯ: ಬಲವಂತ ಆಹಾರ ನೀಡುವಂತೆ ದೆಹಲಿ ಹೈಕೋರ್ಟ್‌ನಲ್ಲಿ ಪಿಐಎಲ್”

ದೇಶದ ಶೈಕ್ಷಣಿಕ ವ್ಯವಸ್ಥೆಯ ಭವಿಷ್ಯವನ್ನು ಗಾಳಿಗೆ ತೂರಿರುವ ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಸಾಲು ಸಾಲು ಭ್ರಷ್ಟಾಚಾರದ ವಿರುದ್ಧ ಸಿಡಿದೆದ್ದು, ದೆಹಲಿಯ ಜಂತರ್ ಮಂತರ್‌ನಲ್ಲಿ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಪ್ರಖ್ಯಾತ ಹವಾಮಾನ ಮತ್ತು...

ಇನ್‌ಸ್ಟಾಮಾರ್ಟ್‌ನಲ್ಲಿ ಸಿಗಲಿದೆ ಎಲ್‌ಪಿಜಿ ಸಿಲಿಂಡರ್: ಬೆಂಗಳೂರಿನಲ್ಲಿ ಹೊಸ ಸೇವೆ ಆರಂಭ!

ಬೆಂಗಳೂರು: ದೇಶದಲ್ಲೇ ಮೊದಲ ಬಾರಿಗೆ ಬೆಂಗಳೂರಿನ ಗ್ರಾಹಕರು ಇನ್ನು ಮುಂದೆ ಪ್ರಮುಖ ಕ್ವಿಕ್ ಕಾಮರ್ಸ್ ಸಂಸ್ಥೆಯಾದ 'ಇನ್‌ಸ್ಟಾಮಾರ್ಟ್' (Instamart) ಆ್ಯಪ್ ಮೂಲಕವೇ ಎಲ್‌ಪಿಜಿ ಗ್ಯಾಸ್ ಸಿಲಿಂಡರ್‌ಗಳನ್ನು ಬುಕ್ ಮಾಡಬಹುದು. ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೊರೇಷನ್...

ಬಿಡದಿ ರೈತರ ಹೋರಾಟಕ್ಕೆ ಜಯ: ಬಲವಂತವಾಗಿ ಒಬ್ಬೇ ಒಬ್ಬ ರೈತರ ಜಮೀನನ್ನೂ ಪಡೆಯಲ್ಲ ಸಿಎಂ ಡಿ.ಕೆ.ಶಿವಕುಮಾರ್

"ಬಿಡದಿ ಸ್ಮಾರ್ಟ್ ಸಿಟಿ/ಟೌನ್ ಶಿಪ್ ಯೋಜನೆಯ ಹೆಸರಿನಲ್ಲಿ ಬಲವಂತವಾಗಿ ಒಬ್ಬೇ ಒಬ್ಬ ರೈತರ ಅಥವಾ ರೈತ ಮಹಿಳೆಯರ ಜಮೀನನ್ನು ನಮ್ಮ ಸರ್ಕಾರ ಭೂಸ್ವಾಧೀನ ಮಾಡಿಕೊಳ್ಳುವುದಿಲ್ಲ," ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ. ಬಿಡದಿ ಟೌನ್‌ಶಿಪ್...

ಪಶ್ಚಿಮ ಬಂಗಾಳ: TMC ಬಂಡಾಯ ನಾಯಕ ರಿತಬ್ರತ ಬ್ಯಾನರ್ಜಿಗೆ ವಿಪಕ್ಷ ಸ್ಥಾನ ನೀಡಿದ್ದಕ್ಕೆ ನ್ಯಾಯಾಧೀಶರ ತೀವ್ರ ಆಕ್ಷೇಪ

ತೃಣಮೂಲ ಕಾಂಗ್ರೆಸ್‌ನ ಬಂಡಾಯ ಬಣದ ಮುಖ್ಯಸ್ಥ ರಿತಬ್ರತ ಬ್ಯಾನರ್ಜಿ ಅವರನ್ನು ಪಶ್ಚಿಮ ಬಂಗಾಳದ ವಿಧಾನಸಭೆಯ ವಿರೋಧ ಪಕ್ಷದ ನಾಯಕರನ್ನಾಗಿ ನೇಮಕ ಮಾಡುವಲ್ಲಿ ಸ್ಪೀಕರ್ ರತೀಂದ್ರ ಬೋಸ್ ತೋರಿರುವ "ತರಾತುರಿ"ಯನ್ನು ಕಲ್ಕತ್ತಾ ಹೈಕೋರ್ಟ್‌ನ ನ್ಯಾಯಮೂರ್ತಿ...

ಎರಡು ವರ್ಷಗಳಲ್ಲಿ 1,679 ಜನರನ್ನು ಬಾಂಗ್ಲಾದೇಶಕ್ಕೆ ಕಳುಹಿಸಲಾಗಿದೆ; ಇವರಲ್ಲಿ 193 ಮಂದಿ ವಿದೇಶಿಯರೆಂದು ಘೋಷಿತರು: ಅಸ್ಸಾಂ ಸರ್ಕಾರ

ಗುವಾಹಟಿ: ಕಳೆದ ಎರಡು ವರ್ಷಗಳ ಅವಧಿಯಲ್ಲಿ ಗಡೀಪಾರು, ಗಡಿಯಿಂದ ಆಚೆಗೆ ತಳ್ಳುವಿಕೆ (ಪುಶ್‌ಬ್ಯಾಕ್) ಅಥವಾ ಉಚ್ಚಾಟನೆ ಪ್ರಕ್ರಿಯೆಯ ಮೂಲಕ ಒಟ್ಟು 1,679 ಜನರನ್ನು ಬಾಂಗ್ಲಾದೇಶಕ್ಕೆ ಕಳುಹಿಸಲಾಗಿದೆ ಎಂದು ಅಸ್ಸಾಂ ಸರ್ಕಾರ ರಾಜ್ಯ ವಿಧಾನಸಭೆಗೆ...

17 ದಿನ, 9 ಕೆಜಿ ತೂಕ ಇಳಿಕೆ, ಸೋನಮ್ ವಾಂಗ್‌ಚುಕ್ ಆರೋಗ್ಯ ಸ್ಥಿತಿ ಗಂಭೀರ: ಉಪವಾಸ ಕೈಬಿಡುವಂತೆ ಅಖಿಲೇಶ್-ಕೇಜ್ರಿವಾಲ್ ಮನವಿ

ದೇಶದ ಶಿಕ್ಷಣ ವ್ಯವಸ್ಥೆಯನ್ನು ಜರ್ಜರಿತಗೊಳಿಸಿರುವ ಸರಣಿ ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು ಭ್ರಷ್ಟಾಚಾರವನ್ನು ವಿರೋಧಿಸಿ ಹಾಗೂ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿ ಖ್ಯಾತ ಪರಿಸರ ಕಾರ್ಯಕರ್ತ ಸೋನಮ್...

ಎನ್‌ಸಿಪಿಯ ಎರಡೂ ಬಣಗಳಲ್ಲೂ ಬಿರುಸಿನ ಬೆಳವಣಿಗೆ : ಬಿಜೆಪಿ ತೆಕ್ಕೆಗೆ ಮತ್ತೊಂದು ಪಕ್ಷ?

ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿಯ (ಎನ್‌ಸಿಪಿ) ಎರಡೂ ಬಣಗಳ ಮುಖ್ಯ ನಾಯಕರು ಮಂಗಳವಾರ (ಜು.14) ರಾತ್ರಿ ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರನ್ನು ಭೇಟಿಯಾಗಿ ಚರ್ಚೆ ನಡೆಸಿದ್ದಾರೆ. ಈ ಸಭೆಯು ಶರದ್ ಪವಾರ್ ಅವರ...

ಮೋದಿಯ ಮೌನವನ್ನು ಪ್ರಶ್ನಿಸುವ ರಾಹುಲ್ ಗಾಂಧಿ, ಸಾರ್ವಜನಿಕ ಹಿತಾಸಕ್ತಿಯ ಈ ವಿಷಯಗಳಲ್ಲಿ ತಾವೇಕೆ ಮೌನ?

ಪ್ರಧಾನಿ ಮೋದಿಯವರದ್ದು ಜಾಣ ಮೌನ ಎಂದು ಈಗಾಗಲೇ ಈ ದೇಶದ ಜನಕ್ಕೆ ಮನವರಿಕೆಯಾಗಿದೆ. ಕಳೆದ 14ವರ್ಷದಲ್ಲಿ ಒಂದೇ ಒಂದು ಪ್ರೆಸ್ ಮೀಟ್‌ಅನ್ನು ಅಡ್ರೆಸ್ ಮಾಡದೆ ಇರುವವರ ಬಗ್ಗೆ ಜನ ಹೆಚ್ಚಿನದ್ದೇನನ್ನು ನಿರೀಕ್ಷಿಸಲಾರರು, ಆದರೆ...

ಹೊಸ ಮತದಾರರ ಫಾರಂ 6ಕ್ಕೆ ಪೋಷಕರ ಎಸ್‌ಐಆರ್ ಕಡ್ಡಾಯಗೊಳಿಸಿದ ಚು. ಆಯೋಗ : ಸಂಪೂರ್ಣ ಕಾನೂನುಬಾಹಿರ ಎಂದ ಸಂಸದ ಜಾನ್ ಬ್ರಿಟ್ಟಾಸ್

ಹೊಸ ಮತದಾರರನ್ನು ನೋಂದಾಯಿಸಲು ಬಳಸುವ ತನ್ನ ಆನ್‌ಲೈನ್ ಅರ್ಜಿಯಲ್ಲಿ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್) ಸಂಬಂಧಿಸಿದ ಹೊಸ ವಿಭಾಗವನ್ನು ಸೇರಿಸುವ ಮೂಲಕ ಚುನಾವಣಾ ಆಯೋಗವು (ಇಸಿ) "ಸಂಪೂರ್ಣವಾಗಿ ಕಾನೂನು ಅಧಿಕಾರವಿಲ್ಲದೆ ಕಾರ್ಯನಿರ್ವಹಿಸಿದೆ" ಎಂದು...