Homeಅಂತರಾಷ್ಟ್ರೀಯ‘ಗಾಝಾದಲ್ಲಿ ಈದ್‌ ಪ್ರಾರಂಭ!’ - ಕದನ ವಿರಾಮ ಘೋಷಿಸಿದ ಇಸ್ರೇಲ್‌

‘ಗಾಝಾದಲ್ಲಿ ಈದ್‌ ಪ್ರಾರಂಭ!’ – ಕದನ ವಿರಾಮ ಘೋಷಿಸಿದ ಇಸ್ರೇಲ್‌

- Advertisement -
- Advertisement -

ಫ್ಯಾಲೆಸ್ತೀನ್‌‌ನ ಗಾಝಾದಲ್ಲಿ ನಡೆಯುತ್ತಿರುವ 11 ದಿನಗಳ ಸಂಘರ್ಷವನ್ನು ನಿಲ್ಲಿಸುವ ಒಪ್ಪಂದಕ್ಕೆ, ಇಸ್ರೇಲ್ ಮತ್ತು ಹಮಾಸ್ ನಡುವೆ ಈಜಿಫ್ಟ್‌‌ ಮದ್ಯವರ್ತಿಯಾದ ನಂತರ ಶುಕ್ರವಾರ ಮುಂಜಾನೆ ಗಾಜಾ ಪ್ರದೇಶದಲ್ಲಿ ಕದನ ವಿರಾಮ ಜಾರಿಗೆ ಬಂದಿದೆ.

ಇಸ್ರೇಲಿ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರ ಕಚೇರಿಯು, “ಭದ್ರತಾ ಕ್ಯಾಬಿನೆಟ್‌ ಬೇಷರತ್ತಾದ… ಕದನ ವಿರಾಮಕ್ಕಾಗಿ ಈಜಿಪ್ಟಿನ ಉಪಕ್ರಮವನ್ನು ಸ್ವೀಕರಿಸುವ ಶಿಫಾರಸುಗಳನ್ನು ಸರ್ವಾನುಮತದಿಂದ ಸ್ವೀಕರಿಸಿದೆ” ಎಂದು ಹೇಳಿದೆ.

ಪ್ಯಾಲೇಸ್ಟಿನಿಯನ್ ಗುಂಪುಗಳಾದ ಹಮಾಸ್ ಮತ್ತು ಇಸ್ಲಾಮಿಕ್ ಜಿಹಾದ್‌ ಮೂವ್ಮೆಂಟ್‌‌ ಕೂಡಾ ಕದನ ವಿರಾಮವನ್ನು ಶುಕ್ರವಾರ ಮುಂಜಾನೆ 2:00 ಗಂಟೆಗೆ (ಗುರುವಾರ 23:00 GMT) ಜಾರಿಗೆ ತರಲಿದೆ ಎಂದು ಹೇಳಿಕೆಯಲ್ಲಿ ದೃಡಪಡಿಸಿದೆ.

ಇದನ್ನೂ ಓದಿ: ಉತ್ತರ ಪ್ರದೇಶದ ಕೊರೊನಾ ನಿರ್ವಹಣೆ ಬಗ್ಗೆ ಸಿಎಂ ಆದಿತ್ಯನಾಥ್‌ಗೆ ಪತ್ರ ಬರೆದ ಪ್ರಿಯಾಂಕಾ ಗಾಂಧಿ

“ಇಸ್ರೇಲ್‌ನ ಈ ಘೋಷಣೆ ಪ್ರಧಾನಿ ನೆತನ್ಯಾಹು ಅವರ ಸೋಲು ಮತ್ತು ಪ್ಯಾಲೇಸ್ತೀನಿ ಜನರ ಜಯ” ಎಂದು ಹಮಾಸ್‌‌‌ನ ಅರಬ್ ಮತ್ತು ಇಸ್ಲಾಮಿಕ್ ಸಂಬಂಧಗಳ ಬ್ಯೂರೋದ ಸದಸ್ಯ ಅಲಿ ಬರಾಕೆಹ್ ಅಸೋಸಿಯೇಟೆಡ್ ಪ್ರೆಸ್ ಸುದ್ದಿ ಸಂಸ್ಥೆಗೆ ತಿಳಿಸಿದ್ದಾರೆ.

ಮೇ 10 ರಂದು ಹಿಂಸಾಚಾರ ಭುಗಿಲೆದ್ದ ನಂತರ 65 ಮಕ್ಕಳು ಮತ್ತು 39 ಮಹಿಳೆಯರು ಸೇರಿದಂತೆ 232 ಪ್ಯಾಲೆಸ್ತೀನಿ ಜನರು ಸಾವನ್ನಪ್ಪಿದ್ದಾರೆ. 1,900 ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ ಎಂದು ಗಾಜಾದ ಆರೋಗ್ಯ ಅಧಿಕಾರಿಗಳು ತಿಳಿಸಿದ್ದಾರೆ.

ಕನಿಷ್ಠ 160 ಇಸ್ರೇಲ್‌ನ ಯೋಧರನ್ನು ಗಾಝಾದಲ್ಲಿ ಕೊಲ್ಲಾಗಿದೆ ಎಂದು ಇಸ್ರೇಲ್ ಹೇಳಿದ್ದು, ಆದರೆ ಅದು ಯಾವುದೆ ಸಾಕ್ಷ್ಯಾಧಾರಗಳನ್ನು ನೀಡಿಲ್ಲ. ಹಮಾಸ್ ಮತ್ತು ಇಸ್ಲಾಮಿಕ್ ಜಿಹಾದ್ ಮೂವ್ಮೆಂಟ್‌ ಕೂಡಾ ತಮ್ಮ ಕನಿಷ್ಠ 20 ಯೋಧರನ್ನು ಕೊಲ್ಲಲಾಗಿದೆ ಎಂದು ಹೇಳಿದೆ.

ಇದನ್ನೂ ಓದಿ: ‘ಕಾಂಗ್ರೆಸ್‌ ಟೂಲ್‌ಕಿಟ್‌ ಎಕ್ಸ್‌ಪೋಸ್ಡ್‌‌’ ಎಂದು ನಕಲಿಯನ್ನು ಹಂಚಿದ ಇಡೀ ‘ಬಿಜೆಪಿ ಪರಿವಾರ’!

ಈ ಒಪ್ಪಂದವು 2014 ರಿಂದೀಚೆಗೆ ನಡೆಯುತ್ತಿರುವ ಕೆಲವು ಭೀಕರ ಹೋರಾಟಗಳನ್ನು ಕೊನೆಗೊಳಿಸುತ್ತದೆ. ಇದು ಗಾಝಾದಲ್ಲಿ ವ್ಯಾಪಕ ವಿನಾಶಕ್ಕೆ ಕಾರಣವಾಗಿದ್ದು, ಇಸ್ರೇಲ್‌ನಲ್ಲಿ ದೈನಂದಿನ ಜನ ಜೀವನದ ಬಹುಭಾಗವನ್ನು ನಿಲ್ಲಿಸಿತ್ತು.

ಕದನ ವಿರಾಮವನ್ನು ‘ಗಾಝಾದಲ್ಲಿ ಇಸ್ರೇಲ್‌ನ ಸೋಲು’ ಎಂದು ಹಮಾಸ್‌ ಬಣ್ಣಿಸಿದ್ದು ಸಾವಿರಾರು ಪ್ಯಾಲೆಸ್ತೀನಿಯರು ಗಾಝಾ ನಗರದ ಬೀದಿಗಳಲ್ಲಿ ಜಮಾಯಿಸಿ ಫ್ಯಾಲೆಸ್ತೀನ್‌ ಧ್ವಜಗಳನ್ನು ಬೀಸಿ ಸಂಭ್ರಮ ಆಚರಿಸಿದರು.

ಪ್ಯಾಲೆಸ್ತೀನಿ ಹೋರಾಟಗಾರ, ಪತ್ರಕರ್ತ ಮಹ್ಮೋದ್ ಅವರು, ಇದನ್ನು ಫ್ಯಾಲೆಸ್ತೀನಿಗಳ ಜಯ ಎಂದು ಬಣ್ಣಸಿದ್ದಾರೆ. “ಗಾಝಾ ಪಟ್ಟಿಯ ಹೋರಾಟಕ್ಕೆ ಜಯ ಸಿಕ್ಕಿದೆ. ಗಾಝಾದಲ್ಲಿ ‘ಈದ್‌’ ಈಗ ಪ್ರಾರಂಭವಾಯಿತು” ಎಂದು ಹೇಳಿದ್ದಾರೆ.

ಇದನ್ನೂ ಓದಿ: ‘56 ಇಂಚಿನ ಎದೆಯ ಧೈರ್ಯ ಎಂದರೆ ಇದೇನಾ?’- ಸಿದ್ದರಾಮಯ್ಯ ಆಕ್ರೋಶ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ನಾಸಿಕ್‌| ಅಧಿಕಾರಿಯ ಮೇಜಿನ ಮೇಲೆ ಬೀದಿ ನಾಯಿಗಳನ್ನು ಬಿಟ್ಟ ಪ್ರತಿಭಟನಾಕಾರರು

ಮಹಾರಾಷ್ಟ್ರದ ನಾಸಿಕ್ ಜಿಲ್ಲೆಯ ನಿಫಾದ್ ನಗರ ಪಂಚಾಯತ್ ವ್ಯಾಪ್ತಿಯಲ್ಲಿ ಬೀದಿ ನಾಯಿಗಳ ಹಾವಳಿಯನ್ನು ಖಂಡಿಸಿ ಮತ್ತು ಅಧಿಕಾರಿಗಳ ನಿರ್ಲಕ್ಷ್ಯವನ್ನು ಖಂಡಿಸಿದ ಪ್ರತಿಭಟನಾಕಾರರ ಗುಂಪೊಂದು ನಗರ ಪಂಚಾಯತ್ ಅಧಿಕಾರಿಯ ಮೇಜಿನ ಮೇಲೆ ಬೀದಿ ನಾಯಿಗಳನ್ನು...

ವಿವಾಹಿತೆ ಮೇಲೆ ಅತ್ಯಾಚಾರ ಆರೋಪ : ಬಿಜೆಪಿ ಮಾಜಿ ಶಾಸಕನ ವಿರುದ್ಧ ಎಫ್‌ಐಆರ್

ಗನ್‌ ಪಾಯಿಂಟ್‌ ಇಟ್ಟು ಬೆದರಿಸಿ 22 ವರ್ಷದ ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ ಪ್ರಕರಣದಲ್ಲಿ ಮಹಾರಾಷ್ಟ್ರದ ಬಿಜೆಪಿ ಮಾಜಿ ಶಾಸಕ ಮತ್ತು ವಜಾಗೊಂಡಿರುವ ಪೊಲೀಸ್ ಸಿಬ್ಬಂದಿಯೊಬ್ಬರ ವಿರುದ್ಧ ಗುರುವಾರ (ಸೆ.17)...

ಬ್ರಿಕ್ಸ್ ಶೃಂಗಸಭೆಯಲ್ಲಿ ಸಂಪೂರ್ಣ ಸಸ್ಯಹಾರಿ ಮೆನು; ಶಿವಸೇನೆ ತೀವ್ರ ವಾಗ್ದಾಳಿ

ದೆಹಲಿಯಲ್ಲಿ ನಡೆದ 18ನೇ ಬ್ರಿಕ್ಸ್ ಶೃಂಗಸಭೆಯಲ್ಲಿ ವಿದೇಶಿ ಪ್ರತಿನಿಧಿಗಳಿಗೆ ಕೇವಲ ಸಸ್ಯಹಾರಿ ಆಹಾರವನ್ನು ಬಡಿಸಿರುವುದನ್ನು ಖಂಡಿಸಿರುವ ಶಿವಸೇನೆ (ಯುಬಿಟಿ) ಗುರುವಾರ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದೆ. ಇದು ಅಂತರರಾಷ್ಟ್ರೀಯ ಅತಿಥಿಗಳ ಮೇಲೆ...

ದೆಹಲಿ ಎಸ್‌ಐಆರ್: ಮತದಾರರ ಪಟ್ಟಿಯಿಂದ ಹೆಸರುಗಳ ಡಿಲೀಟ್ ಪ್ರಶ್ನಿಸಿ ಅರ್ಜಿ; ವಿಚಾರಣೆಗೆ ಸುಪ್ರೀಂ ಕೋರ್ಟ್ ಒಪ್ಪಿಗೆ

ದೆಹಲಿಯಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಅಭಿಯಾನದಡಿ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದನ್ನು ಪ್ರಶ್ನಿಸಿ ಸಲ್ಲಿಕೆಯಾಗಿರುವ ಅರ್ಜಿಯ ವಿಚಾರಣೆಯನ್ನು ಸೆಪ್ಟೆಂಬರ್ 21ರಂದು ನಡೆಸಲು ಸುಪ್ರೀಂ ಕೋರ್ಟ್ ಗುರುವಾರ ಒಪ್ಪಿಗೆ ಸೂಚಿಸಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್...

ಕೇರಳ | ಮಿತಿಗಿಂತ ಹೆಚ್ಚು ಮದ್ಯ ಸಂಗ್ರಹ ಆರೋಪ : ರಿಪೋರ್ಟರ್ ಟಿವಿ ಎಂಡಿ ಆಂಟೋ ಆಗಸ್ಟಿನ್ ಬಂಧನ

ಕೇರಳ ಅಬಕಾರಿ ಇಲಾಖೆಯು ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ವ್ಯವಸ್ಥಾಪಕ ನಿರ್ದೇಶಕ (ಎಂಡಿ) ಆಂಟೋ ಆಗಸ್ಟಿನ್ ಅವರನ್ನು ಗುರುವಾರ (ಸೆ.17) ಮುಂಜಾನೆ ಬಂಧಿಸಿದೆ. ಎರ್ನಾಕುಲಂನಲ್ಲಿರುವ ಸುದ್ದಿ ವಾಹಿನಿಯ ಕಚೇರಿಯಿಂದ ಮುಂಜಾನೆ ಸುಮಾರು...

ದೆಹಲಿ: ಜಾಮೀನು ಸಿಕ್ಕ ಬೆನ್ನಲ್ಲೇ ಸ್ವತಂತ್ರ ಭಾರದ್ವಾಜ್ ವಿಡಿಯೋ ವೈರಲ್; ಷರತ್ತು ಉಲ್ಲಂಘನೆ ಆರೋಪ!

ಜಂತರ್ ಮಂತರ್‌ನಲ್ಲಿ ದಲಿತ ವಿದ್ಯಾರ್ಥಿ ಹೋರಾಟಗಾರ್ತಿ ನಿಶು ಆಜಾದ್ ಅವರ ತಂದೆಯ ಮೇಲೆ ಹಲ್ಲೆ ನಡೆಸಿದ ಆರೋಪದಲ್ಲಿ ಬಂಧಿತರಾಗಿದ್ದ ಹಿಂದುತ್ವ ಪ್ರಭಾವಿ ಸ್ವತಂತ್ರ ಭಾರದ್ವಾಜ್ ಅವರಿಗೆ ದೆಹಲಿ ನ್ಯಾಯಾಲಯ ಮೂರು ವಾರಗಳ ಮಧ್ಯಂತರ...

ಸರ್ಕಾರದ ಹಸ್ತಕ್ಷೇಪದಿಂದ ಕ್ಯಾಂಪಸ್ ನಿರ್ಬಂಧದವರೆಗೆ: ಭಾರತದಲ್ಲಿ ಶೈಕ್ಷಣಿಕ ಸ್ವಾತಂತ್ರ್ಯದ ಕುಸಿತ ಬಯಲಿಗೆಳೆದ ಜಾಗತಿಕ ವರದಿ 

ಭಾರತದಲ್ಲಿ ಶೈಕ್ಷಣಿಕ ಸ್ವಾತಂತ್ರ್ಯವು ತೀವ್ರವಾಗಿ ನಿರ್ಬಂಧಿತವಾಗಿದ್ದು, ಉನ್ನತ ಶಿಕ್ಷಣ ಸಂಸ್ಥೆಗಳ ಮೇಲೆ ಸರ್ಕಾರದ ಹೆಚ್ಚುತ್ತಿರುವ ಹಸ್ತಕ್ಷೇಪ, ಕ್ಯಾಂಪಸ್‌ಗಳಲ್ಲಿ ಶೈಕ್ಷಣಿಕ ಮತ್ತು ರಾಜಕೀಯ ಅಭಿವ್ಯಕ್ತಿಯ ಮೇಲಿನ ನಿರ್ಬಂಧಗಳು, ವಿದ್ವಾಂಸರು ಹಾಗೂ ವಿದ್ಯಾರ್ಥಿಗಳ ವಿರುದ್ಧದ ಕ್ರಮಗಳು...

ಬಿಹಾರ| ದಲಿತ ಯುವಕನ ವಿವಾಹವಾದ ಯುವತಿ; ಮಗಳ ಸಾಂಕೇತಿಕ ಅಂತ್ಯಕ್ರಿಯೆ ನಡೆಸಿದ ಪೋಷಕರು

ತಮ್ಮ 18 ವರ್ಷದ ಮಗಳು ಅಂತರ್ಜಾತಿ ವಿವಾಹವಾಗಿದ್ದಕ್ಕೆ ತೀವ್ರ ಆಕ್ರೋಶ ವ್ಯಕ್ತಪಡಿಸಿರುವ ಪೋಷಕರು, ಆಕೆಗೆ ಸಾಂಕೇತಿಕವಾಗಿ ಅಂತ್ಯಕ್ರಿಯೆ ನಡೆಸಿದ ಘಟನೆ ಬಿಹಾರದ ಪೂರ್ಣಿಯಾದಲ್ಲಿ ಬೆಳಕಿಗೆ ಬಂದಿದೆ. ಯುವತಿಯ ಫೋಟೋವಿರುವ ಪ್ರತಿಕೃತಿಯನ್ನು ಸಿದ್ಧಪಡಿಸಿ ಊರಿನಲ್ಲಿ ಶವಯಾತ್ರೆ...

ಸ್ವಇಚ್ಛೆಯಿಂದ ಇಸ್ಲಾಂ ಸ್ವೀಕಾರ : ಆಯುಷ್ ಮಲಿಕ್‌ರನ್ನು ಗೃಹಬಂಧನದಿಂದ ಬಿಡುಗಡೆಗೊಳಿಸಿದ ಅಲಹಾಬಾದ್ ಹೈಕೋರ್ಟ್

ತಾನು ಸ್ವಇಚ್ಛೆಯಿಂದ ಇಸ್ಲಾಂ ಧರ್ಮವನ್ನು ಸ್ವೀಕರಿಸಿರುವುದಾಗಿ ಮತ್ತು ಆ ನಂತರ ತನ್ನ ತಂದೆಯೇ ತನಗೆ ಬೆದರಿಕೆ ಹಾಕಿ, ಕಾನೂನುಬಾಹಿರವಾಗಿ ಗೃಹಬಂಧನದಲ್ಲಿ ಇರಿಸಿದ್ದರು ಎಂದು ಆರೋಪಿಸಿದ್ದ ಆಯುಷ್ ಮಲಿಕ್ ಎಂಬ 31 ವರ್ಷದ ಯುವಕನನ್ನು...

ಬಿಜ್ನೋರ್‌ನಲ್ಲಿ ಮುಸ್ಲಿಂ ಶಿಕ್ಷಕನ ಗುಂಡಿಕ್ಕಿ ಹತ್ಯೆ: ‘ಲವ್ ಜಿಹಾದ್’ ಆರೋಪ; ವೈಯಕ್ತಿಕ ದ್ವೇಷದ ಬಗ್ಗೆಯೂ ಪೊಲೀಸರಿಂದ ತನಿಖೆ 

ಬಿಜ್ನೋರ್: ಉತ್ತರ ಪ್ರದೇಶದ ಬಿಜ್ನೋರ್ ಜಿಲ್ಲೆಯಲ್ಲಿ 43 ವರ್ಷದ ಮುಸ್ಲಿಂ ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕನೊಬ್ಬರನ್ನು ರೈತನೊಬ್ಬ ಗುಂಡಿಕ್ಕಿ ಹತ್ಯೆ ಮಾಡಿರುವ ಘಟನೆ ನಡೆದಿದೆ. ಶಿಕ್ಷಕ ನೌಶಾದ್ ಅಹ್ಮದ್ ಅವರು ‘ಲವ್ ಜಿಹಾದ್’...