Homeಅಂತರಾಷ್ಟ್ರೀಯ‘ಗಾಝಾದಲ್ಲಿ ಈದ್‌ ಪ್ರಾರಂಭ!’ - ಕದನ ವಿರಾಮ ಘೋಷಿಸಿದ ಇಸ್ರೇಲ್‌

‘ಗಾಝಾದಲ್ಲಿ ಈದ್‌ ಪ್ರಾರಂಭ!’ – ಕದನ ವಿರಾಮ ಘೋಷಿಸಿದ ಇಸ್ರೇಲ್‌

- Advertisement -
- Advertisement -

ಫ್ಯಾಲೆಸ್ತೀನ್‌‌ನ ಗಾಝಾದಲ್ಲಿ ನಡೆಯುತ್ತಿರುವ 11 ದಿನಗಳ ಸಂಘರ್ಷವನ್ನು ನಿಲ್ಲಿಸುವ ಒಪ್ಪಂದಕ್ಕೆ, ಇಸ್ರೇಲ್ ಮತ್ತು ಹಮಾಸ್ ನಡುವೆ ಈಜಿಫ್ಟ್‌‌ ಮದ್ಯವರ್ತಿಯಾದ ನಂತರ ಶುಕ್ರವಾರ ಮುಂಜಾನೆ ಗಾಜಾ ಪ್ರದೇಶದಲ್ಲಿ ಕದನ ವಿರಾಮ ಜಾರಿಗೆ ಬಂದಿದೆ.

ಇಸ್ರೇಲಿ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರ ಕಚೇರಿಯು, “ಭದ್ರತಾ ಕ್ಯಾಬಿನೆಟ್‌ ಬೇಷರತ್ತಾದ… ಕದನ ವಿರಾಮಕ್ಕಾಗಿ ಈಜಿಪ್ಟಿನ ಉಪಕ್ರಮವನ್ನು ಸ್ವೀಕರಿಸುವ ಶಿಫಾರಸುಗಳನ್ನು ಸರ್ವಾನುಮತದಿಂದ ಸ್ವೀಕರಿಸಿದೆ” ಎಂದು ಹೇಳಿದೆ.

ಪ್ಯಾಲೇಸ್ಟಿನಿಯನ್ ಗುಂಪುಗಳಾದ ಹಮಾಸ್ ಮತ್ತು ಇಸ್ಲಾಮಿಕ್ ಜಿಹಾದ್‌ ಮೂವ್ಮೆಂಟ್‌‌ ಕೂಡಾ ಕದನ ವಿರಾಮವನ್ನು ಶುಕ್ರವಾರ ಮುಂಜಾನೆ 2:00 ಗಂಟೆಗೆ (ಗುರುವಾರ 23:00 GMT) ಜಾರಿಗೆ ತರಲಿದೆ ಎಂದು ಹೇಳಿಕೆಯಲ್ಲಿ ದೃಡಪಡಿಸಿದೆ.

ಇದನ್ನೂ ಓದಿ: ಉತ್ತರ ಪ್ರದೇಶದ ಕೊರೊನಾ ನಿರ್ವಹಣೆ ಬಗ್ಗೆ ಸಿಎಂ ಆದಿತ್ಯನಾಥ್‌ಗೆ ಪತ್ರ ಬರೆದ ಪ್ರಿಯಾಂಕಾ ಗಾಂಧಿ

“ಇಸ್ರೇಲ್‌ನ ಈ ಘೋಷಣೆ ಪ್ರಧಾನಿ ನೆತನ್ಯಾಹು ಅವರ ಸೋಲು ಮತ್ತು ಪ್ಯಾಲೇಸ್ತೀನಿ ಜನರ ಜಯ” ಎಂದು ಹಮಾಸ್‌‌‌ನ ಅರಬ್ ಮತ್ತು ಇಸ್ಲಾಮಿಕ್ ಸಂಬಂಧಗಳ ಬ್ಯೂರೋದ ಸದಸ್ಯ ಅಲಿ ಬರಾಕೆಹ್ ಅಸೋಸಿಯೇಟೆಡ್ ಪ್ರೆಸ್ ಸುದ್ದಿ ಸಂಸ್ಥೆಗೆ ತಿಳಿಸಿದ್ದಾರೆ.

ಮೇ 10 ರಂದು ಹಿಂಸಾಚಾರ ಭುಗಿಲೆದ್ದ ನಂತರ 65 ಮಕ್ಕಳು ಮತ್ತು 39 ಮಹಿಳೆಯರು ಸೇರಿದಂತೆ 232 ಪ್ಯಾಲೆಸ್ತೀನಿ ಜನರು ಸಾವನ್ನಪ್ಪಿದ್ದಾರೆ. 1,900 ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ ಎಂದು ಗಾಜಾದ ಆರೋಗ್ಯ ಅಧಿಕಾರಿಗಳು ತಿಳಿಸಿದ್ದಾರೆ.

ಕನಿಷ್ಠ 160 ಇಸ್ರೇಲ್‌ನ ಯೋಧರನ್ನು ಗಾಝಾದಲ್ಲಿ ಕೊಲ್ಲಾಗಿದೆ ಎಂದು ಇಸ್ರೇಲ್ ಹೇಳಿದ್ದು, ಆದರೆ ಅದು ಯಾವುದೆ ಸಾಕ್ಷ್ಯಾಧಾರಗಳನ್ನು ನೀಡಿಲ್ಲ. ಹಮಾಸ್ ಮತ್ತು ಇಸ್ಲಾಮಿಕ್ ಜಿಹಾದ್ ಮೂವ್ಮೆಂಟ್‌ ಕೂಡಾ ತಮ್ಮ ಕನಿಷ್ಠ 20 ಯೋಧರನ್ನು ಕೊಲ್ಲಲಾಗಿದೆ ಎಂದು ಹೇಳಿದೆ.

ಇದನ್ನೂ ಓದಿ: ‘ಕಾಂಗ್ರೆಸ್‌ ಟೂಲ್‌ಕಿಟ್‌ ಎಕ್ಸ್‌ಪೋಸ್ಡ್‌‌’ ಎಂದು ನಕಲಿಯನ್ನು ಹಂಚಿದ ಇಡೀ ‘ಬಿಜೆಪಿ ಪರಿವಾರ’!

ಈ ಒಪ್ಪಂದವು 2014 ರಿಂದೀಚೆಗೆ ನಡೆಯುತ್ತಿರುವ ಕೆಲವು ಭೀಕರ ಹೋರಾಟಗಳನ್ನು ಕೊನೆಗೊಳಿಸುತ್ತದೆ. ಇದು ಗಾಝಾದಲ್ಲಿ ವ್ಯಾಪಕ ವಿನಾಶಕ್ಕೆ ಕಾರಣವಾಗಿದ್ದು, ಇಸ್ರೇಲ್‌ನಲ್ಲಿ ದೈನಂದಿನ ಜನ ಜೀವನದ ಬಹುಭಾಗವನ್ನು ನಿಲ್ಲಿಸಿತ್ತು.

ಕದನ ವಿರಾಮವನ್ನು ‘ಗಾಝಾದಲ್ಲಿ ಇಸ್ರೇಲ್‌ನ ಸೋಲು’ ಎಂದು ಹಮಾಸ್‌ ಬಣ್ಣಿಸಿದ್ದು ಸಾವಿರಾರು ಪ್ಯಾಲೆಸ್ತೀನಿಯರು ಗಾಝಾ ನಗರದ ಬೀದಿಗಳಲ್ಲಿ ಜಮಾಯಿಸಿ ಫ್ಯಾಲೆಸ್ತೀನ್‌ ಧ್ವಜಗಳನ್ನು ಬೀಸಿ ಸಂಭ್ರಮ ಆಚರಿಸಿದರು.

ಪ್ಯಾಲೆಸ್ತೀನಿ ಹೋರಾಟಗಾರ, ಪತ್ರಕರ್ತ ಮಹ್ಮೋದ್ ಅವರು, ಇದನ್ನು ಫ್ಯಾಲೆಸ್ತೀನಿಗಳ ಜಯ ಎಂದು ಬಣ್ಣಸಿದ್ದಾರೆ. “ಗಾಝಾ ಪಟ್ಟಿಯ ಹೋರಾಟಕ್ಕೆ ಜಯ ಸಿಕ್ಕಿದೆ. ಗಾಝಾದಲ್ಲಿ ‘ಈದ್‌’ ಈಗ ಪ್ರಾರಂಭವಾಯಿತು” ಎಂದು ಹೇಳಿದ್ದಾರೆ.

ಇದನ್ನೂ ಓದಿ: ‘56 ಇಂಚಿನ ಎದೆಯ ಧೈರ್ಯ ಎಂದರೆ ಇದೇನಾ?’- ಸಿದ್ದರಾಮಯ್ಯ ಆಕ್ರೋಶ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮುಂಗಾರು ಮಳೆ ಕೊರತೆ: ಇಡೀ ದೇಶದಲ್ಲಿ ಆತಂಕದ ಕಾರ್ಮೋಡ

ಭಾರತದ ಆಕಾಶದಲ್ಲಿ ಸದ್ಯ ಮೂಡುತ್ತಿರುವ ಉಪಗ್ರಹ ಚಿತ್ರಗಳು ಮತ್ತು ಹವಾಮಾನ ಇಲಾಖೆಯ ದತ್ತಾಂಶಗಳು ದೇಶಕ್ಕೆ ದೊಡ್ಡ ಗಂಡಾಂತರದ ಮುನ್ಸೂಚನೆ ನೀಡುತ್ತಿವೆ. ಕೃಷಿ ಚಟುವಟಿಕೆಗಳ ಅತ್ಯಂತ ನಿರ್ಣಾಯಕ ಅವಧಿಯಾದ ಜೂನ್ ತಿಂಗಳಲ್ಲೇ ಮುಂಗಾರು ಮಳೆ...

ನೀಟ್ ಪರೀಕ್ಷೆ ಪದೇ ಪದೇ ಬರೆಯುವಂತೆ ಮಾಡಿದ್ದು ಯಾರು? : ಬಿ.ಕೆ ಹರಿಪ್ರಸಾದ್

ನೀಟ್ ಪರೀಕ್ಷೆ ಪದೇ ಪದೇ ಬರೆಯುವಂತೆ ಮಾಡಿದ್ದು ಯಾರು? ಬಿಜೆಪಿ ನಾಯಕರ ಆರೋಪಗಳನ್ನು ನೋಡಿದರೆ, ತಪ್ಪು ಮಾಡಿದವರೇ ಉಪದೇಶ ಮಾಡುವ ಸ್ಥಿತಿಗೆ ಬಂದಂತಿದೆ ಎಂದು ಕೆಪಿಸಿಸಿ ನೂತನ ಅಧ್ಯಕ್ಷ ಬಿ.ಕೆ ಹರಿಪ್ರಸಾದ್ ಹೇಳಿದರು....

ಎಸ್‌ಐಆರ್‌ನಲ್ಲಿ ಕೈಬಿಟ್ಟ ವ್ಯಕ್ತಿ ಕುರಿತು ಮಹತ್ವದ ಹೇಳಿಕೆ ನೀಡಿದ ಸುಪ್ರೀಂ ಕೋರ್ಟ್

ವಿಶೇಷ ತೀವ್ರ ಪರಿಷ್ಕರಣೆಯ (Special Intensive Revision) ಸಂದರ್ಭದಲ್ಲಿ ಮತದಾರರ ಪಟ್ಟಿಯಿಂದ ಹೆಸರು ಕೈಬಿಟ್ಟಿರುವ ಅಥವಾ ಹೊರಗಿಟ್ಟಿರುವ ಬಂಗಾಳದ ಮುರ್ಷಿದಾಬಾದ್‌ನ 75 ವರ್ಷದ ವಕೀಲರೊಬ್ಬರು "ಪಶ್ಚಿಮ ಬಂಗಾಳದ ನಿಜವಾದ ಮತ್ತು ವಿಶ್ವಾಸಾರ್ಹ ನಾಗರಿಕ" ನಂತೆ...

ನೀಟ್ ಅಕ್ರಮ, ವ್ಯವಸ್ಥೆಯ ವೈಫಲ್ಯಕ್ಕೆ ಮತ್ತೊಂದು ಬಲಿ: ಮರು ಪರೀಕ್ಷೆ ಹಿಂದಿನ ದಿನವೇ ಆತ್ಮಹತ್ಯೆಗೆ ಶರಣಾದ ಪ್ರತಿಭಾವಂತ ವಿದ್ಯಾರ್ಥಿನಿ 

ಹೈದರಾಬಾದ್: ದೇಶದಲ್ಲಿ ವೈದ್ಯಕೀಯ ಶಿಕ್ಷಣದ ಪ್ರವೇಶಾತಿಗಾಗಿ ನಡೆಯುವ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆಯ (NEET) ಸುತ್ತ ಹಬ್ಬಿರುವ ಅಕ್ರಮಗಳ ಜಾಲ ಮತ್ತು ವ್ಯವಸ್ಥೆಯ ನಿರಂತರ ಗೊಂದಲಗಳು ಮತ್ತೊಂದು ಯುವ ಜೀವವನ್ನು ಬಲಿಪಡೆದಿವೆ.  ಜೂನ್...

ಸತತ ಮೂರನೇ ದಿನವೂ ಜಂತರ್ ಮಂತರ್‌ನಲ್ಲಿ ಮುಂದುವರೆದ ಸಿಜೆಪಿ ಪ್ರತಿಭಟನೆ; ಪ್ರಧಾನ್ ರಾಜೀನಾಮೆಗೆ ಪಟ್ಟು

ಪರೀಕ್ಷಾ ಅಕ್ರಮಗಳು ಮತ್ತು ಮೇ 3 ರ ನೀಟ್ ಪತ್ರಿಕೆ ಸೋರಿಕೆಯ ವಿರುದ್ಧ ತಮ್ಮ ಪ್ರತಿಭಟನೆಯನ್ನು ಮುಂದುವರಿಸಿರುವ ಜಿರಳೆ ಜನತಾ ಪಕ್ಷ (ಸಿಜೆಪಿ) ಸೋಮವಾರ ಸತತ ಮೂರನೇ ದಿನವೂ ಜಂತರ್ ಮಂತರ್‌ನಲ್ಲಿಯೇ ಕುಳಿತಿದ್ದಾರೆ. ಶನಿವಾರ...

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...