Homeಅಂತರಾಷ್ಟ್ರೀಯ‘ಗಾಝಾದಲ್ಲಿ ಈದ್‌ ಪ್ರಾರಂಭ!’ - ಕದನ ವಿರಾಮ ಘೋಷಿಸಿದ ಇಸ್ರೇಲ್‌

‘ಗಾಝಾದಲ್ಲಿ ಈದ್‌ ಪ್ರಾರಂಭ!’ – ಕದನ ವಿರಾಮ ಘೋಷಿಸಿದ ಇಸ್ರೇಲ್‌

- Advertisement -
- Advertisement -

ಫ್ಯಾಲೆಸ್ತೀನ್‌‌ನ ಗಾಝಾದಲ್ಲಿ ನಡೆಯುತ್ತಿರುವ 11 ದಿನಗಳ ಸಂಘರ್ಷವನ್ನು ನಿಲ್ಲಿಸುವ ಒಪ್ಪಂದಕ್ಕೆ, ಇಸ್ರೇಲ್ ಮತ್ತು ಹಮಾಸ್ ನಡುವೆ ಈಜಿಫ್ಟ್‌‌ ಮದ್ಯವರ್ತಿಯಾದ ನಂತರ ಶುಕ್ರವಾರ ಮುಂಜಾನೆ ಗಾಜಾ ಪ್ರದೇಶದಲ್ಲಿ ಕದನ ವಿರಾಮ ಜಾರಿಗೆ ಬಂದಿದೆ.

ಇಸ್ರೇಲಿ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರ ಕಚೇರಿಯು, “ಭದ್ರತಾ ಕ್ಯಾಬಿನೆಟ್‌ ಬೇಷರತ್ತಾದ… ಕದನ ವಿರಾಮಕ್ಕಾಗಿ ಈಜಿಪ್ಟಿನ ಉಪಕ್ರಮವನ್ನು ಸ್ವೀಕರಿಸುವ ಶಿಫಾರಸುಗಳನ್ನು ಸರ್ವಾನುಮತದಿಂದ ಸ್ವೀಕರಿಸಿದೆ” ಎಂದು ಹೇಳಿದೆ.

ಪ್ಯಾಲೇಸ್ಟಿನಿಯನ್ ಗುಂಪುಗಳಾದ ಹಮಾಸ್ ಮತ್ತು ಇಸ್ಲಾಮಿಕ್ ಜಿಹಾದ್‌ ಮೂವ್ಮೆಂಟ್‌‌ ಕೂಡಾ ಕದನ ವಿರಾಮವನ್ನು ಶುಕ್ರವಾರ ಮುಂಜಾನೆ 2:00 ಗಂಟೆಗೆ (ಗುರುವಾರ 23:00 GMT) ಜಾರಿಗೆ ತರಲಿದೆ ಎಂದು ಹೇಳಿಕೆಯಲ್ಲಿ ದೃಡಪಡಿಸಿದೆ.

ಇದನ್ನೂ ಓದಿ: ಉತ್ತರ ಪ್ರದೇಶದ ಕೊರೊನಾ ನಿರ್ವಹಣೆ ಬಗ್ಗೆ ಸಿಎಂ ಆದಿತ್ಯನಾಥ್‌ಗೆ ಪತ್ರ ಬರೆದ ಪ್ರಿಯಾಂಕಾ ಗಾಂಧಿ

“ಇಸ್ರೇಲ್‌ನ ಈ ಘೋಷಣೆ ಪ್ರಧಾನಿ ನೆತನ್ಯಾಹು ಅವರ ಸೋಲು ಮತ್ತು ಪ್ಯಾಲೇಸ್ತೀನಿ ಜನರ ಜಯ” ಎಂದು ಹಮಾಸ್‌‌‌ನ ಅರಬ್ ಮತ್ತು ಇಸ್ಲಾಮಿಕ್ ಸಂಬಂಧಗಳ ಬ್ಯೂರೋದ ಸದಸ್ಯ ಅಲಿ ಬರಾಕೆಹ್ ಅಸೋಸಿಯೇಟೆಡ್ ಪ್ರೆಸ್ ಸುದ್ದಿ ಸಂಸ್ಥೆಗೆ ತಿಳಿಸಿದ್ದಾರೆ.

ಮೇ 10 ರಂದು ಹಿಂಸಾಚಾರ ಭುಗಿಲೆದ್ದ ನಂತರ 65 ಮಕ್ಕಳು ಮತ್ತು 39 ಮಹಿಳೆಯರು ಸೇರಿದಂತೆ 232 ಪ್ಯಾಲೆಸ್ತೀನಿ ಜನರು ಸಾವನ್ನಪ್ಪಿದ್ದಾರೆ. 1,900 ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ ಎಂದು ಗಾಜಾದ ಆರೋಗ್ಯ ಅಧಿಕಾರಿಗಳು ತಿಳಿಸಿದ್ದಾರೆ.

ಕನಿಷ್ಠ 160 ಇಸ್ರೇಲ್‌ನ ಯೋಧರನ್ನು ಗಾಝಾದಲ್ಲಿ ಕೊಲ್ಲಾಗಿದೆ ಎಂದು ಇಸ್ರೇಲ್ ಹೇಳಿದ್ದು, ಆದರೆ ಅದು ಯಾವುದೆ ಸಾಕ್ಷ್ಯಾಧಾರಗಳನ್ನು ನೀಡಿಲ್ಲ. ಹಮಾಸ್ ಮತ್ತು ಇಸ್ಲಾಮಿಕ್ ಜಿಹಾದ್ ಮೂವ್ಮೆಂಟ್‌ ಕೂಡಾ ತಮ್ಮ ಕನಿಷ್ಠ 20 ಯೋಧರನ್ನು ಕೊಲ್ಲಲಾಗಿದೆ ಎಂದು ಹೇಳಿದೆ.

ಇದನ್ನೂ ಓದಿ: ‘ಕಾಂಗ್ರೆಸ್‌ ಟೂಲ್‌ಕಿಟ್‌ ಎಕ್ಸ್‌ಪೋಸ್ಡ್‌‌’ ಎಂದು ನಕಲಿಯನ್ನು ಹಂಚಿದ ಇಡೀ ‘ಬಿಜೆಪಿ ಪರಿವಾರ’!

ಈ ಒಪ್ಪಂದವು 2014 ರಿಂದೀಚೆಗೆ ನಡೆಯುತ್ತಿರುವ ಕೆಲವು ಭೀಕರ ಹೋರಾಟಗಳನ್ನು ಕೊನೆಗೊಳಿಸುತ್ತದೆ. ಇದು ಗಾಝಾದಲ್ಲಿ ವ್ಯಾಪಕ ವಿನಾಶಕ್ಕೆ ಕಾರಣವಾಗಿದ್ದು, ಇಸ್ರೇಲ್‌ನಲ್ಲಿ ದೈನಂದಿನ ಜನ ಜೀವನದ ಬಹುಭಾಗವನ್ನು ನಿಲ್ಲಿಸಿತ್ತು.

ಕದನ ವಿರಾಮವನ್ನು ‘ಗಾಝಾದಲ್ಲಿ ಇಸ್ರೇಲ್‌ನ ಸೋಲು’ ಎಂದು ಹಮಾಸ್‌ ಬಣ್ಣಿಸಿದ್ದು ಸಾವಿರಾರು ಪ್ಯಾಲೆಸ್ತೀನಿಯರು ಗಾಝಾ ನಗರದ ಬೀದಿಗಳಲ್ಲಿ ಜಮಾಯಿಸಿ ಫ್ಯಾಲೆಸ್ತೀನ್‌ ಧ್ವಜಗಳನ್ನು ಬೀಸಿ ಸಂಭ್ರಮ ಆಚರಿಸಿದರು.

ಪ್ಯಾಲೆಸ್ತೀನಿ ಹೋರಾಟಗಾರ, ಪತ್ರಕರ್ತ ಮಹ್ಮೋದ್ ಅವರು, ಇದನ್ನು ಫ್ಯಾಲೆಸ್ತೀನಿಗಳ ಜಯ ಎಂದು ಬಣ್ಣಸಿದ್ದಾರೆ. “ಗಾಝಾ ಪಟ್ಟಿಯ ಹೋರಾಟಕ್ಕೆ ಜಯ ಸಿಕ್ಕಿದೆ. ಗಾಝಾದಲ್ಲಿ ‘ಈದ್‌’ ಈಗ ಪ್ರಾರಂಭವಾಯಿತು” ಎಂದು ಹೇಳಿದ್ದಾರೆ.

ಇದನ್ನೂ ಓದಿ: ‘56 ಇಂಚಿನ ಎದೆಯ ಧೈರ್ಯ ಎಂದರೆ ಇದೇನಾ?’- ಸಿದ್ದರಾಮಯ್ಯ ಆಕ್ರೋಶ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶ್ರೀಲಂಕಾ | 2019ರ ಈಸ್ಟರ್ ಬಾಂಬ್ ಸ್ಫೋಟ ಪ್ರಕರಣ: ಇಬ್ಬರು ಮಾಜಿ ಅಧಿಕಾರಿಗಳಿಗೆ ಮರಣದಂಡನೆ ವಿಧಿಸಿದ ಕೋರ್ಟ್

ಬರೋಬ್ಬರಿ 260ಕ್ಕೂ ಹೆಚ್ಚು ಜನರ ಸಾವಿಗೆ ಕಾರಣವಾಗಿದ್ದ 2019ರ ಶ್ರೀಲಂಕಾದ 'ಈಸ್ಟರ್ ಸಂಡೇ' ಬಾಂಬ್ ಸ್ಫೋಟ ಪ್ರಕರಣದಲ್ಲಿ ಕ್ರಿಮಿನಲ್ ನಿರ್ಲಕ್ಷ್ಯ ಆರೋಪ ಸಾಬೀತಾದ ಹಿನ್ನೆಲೆ, ಪೊಲೀಸ್ ಮಾಜಿ ಮುಖ್ಯಸ್ಥ ಮತ್ತು ರಕ್ಷಣಾ ಸಚಿವಾಲಯದ...

ಅಮೆರಿಕ ಓದಿಗೆ ಎಲ್ಲಿಂದ ಬಂತು ಹಣ? CJP ಸ್ಥಾಪಕ ಅಭಿಜೀತ್ ದೀಪ್ಕೆ ತಂದೆಯ ಆಸ್ತಿ ತನಿಖೆಗೆ RTI ಕಾರ್ಯಕರ್ತ ಆಗ್ರಹ

ಕಾಕ್ರೋಚ್ ಜನತಾ ಪಾರ್ಟಿ (CJP) ಸ್ಥಾಪಕ ಅಭಿಜೀತ್ ದೀಪ್ಕೆ ಅವರ ತಂದೆ, ಮಹಾರಾಷ್ಟ್ರ ಸರ್ಕಾರದ ನಿವೃತ್ತ ಉದ್ಯೋಗಿ ಭಗವಾನ್‌ರಾವ್ ದೀಪ್ಕೆ ಅವರ ಆದಾಯ ಮತ್ತು ಅಕ್ರಮ ಆಸ್ತಿ ಗಳಿಕೆ ಕುರಿತು ಸಮಗ್ರ ತನಿಖೆ...

ಕಾವೇರಿ ವಿಚಾರದಲ್ಲಿ ರಾಜಕೀಯ ಪಕ್ಕಕ್ಕಿಟ್ಟು ರಾಜ್ಯದ ಹಿತ ಕಾಯೋಣ: ಸರ್ವಪಕ್ಷ ಸಭೆಯಲ್ಲಿ ಸಿಎಂ ಡಿ.ಕೆ. ಶಿವಕುಮಾರ್ ಕರೆ

ಕಾವೇರಿ ನದಿ ನೀರು ಹಂಚಿಕೆ ವಿಚಾರವಾಗಿ ಪರಿಸ್ಥಿತಿ ಸುಧಾರಿಸುವ ಲಕ್ಷಣಗಳು ಕಂಡುಬರುತ್ತಿದ್ದು, ನದಿ ನೀರಿನ ಹಂಚಿಕೆಯಲ್ಲಿ ಸೌಹಾರ್ದಯುತವಾಗಿ ಸಮಸ್ಯೆ ನಿವಾರಿಸುವುದೇ ಸರ್ಕಾರದ ಮೊದಲ ಆದ್ಯತೆಯಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಕಾವೇರಿ...

ಉತ್ತರ ಪ್ರದೇಶ : 33 ವರ್ಷಗಳ ಬಳಿಕ ದೇಶದ್ರೋಹ ಪ್ರಕರಣದಿಂದ ಮುಸ್ಲಿಂ ವ್ಯಕ್ತಿ ಖುಲಾಸೆ

ಪ್ರಾಸಿಕ್ಯೂಷನ್ ಆರೋಪಗಳನ್ನು ಸಾಂದರ್ಭಿಕ ಪುರಾವೆಗಳೊಂದಿಗೆ ಸಾಬೀತುಪಡಿಸಲು ವಿಫಲವಾಗಿದೆ ಮತ್ತು ಆರೋಪಿಯನ್ನು ಕೃತ್ಯಕ್ಕೆ ಲಿಂಕ್ ಮಾಡುವ ಪ್ರಮುಖ ಪುರಾವೆಗಳು ಕಾಣೆಯಾಗಿವೆ ಎಂದು ಅಭಿಪ್ರಾಯಪಟ್ಟ ಲಕ್ನೋದ ವಿಶೇಷ ರಾಷ್ಟ್ರೀಯ ತನಿಖಾ ದಳ (ಎನ್ಐಎ) ನ್ಯಾಯಾಲಯ, ದೇಶದ್ರೋಹ...

‘ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು’ ಎಂಬಂತೆ NTA ಯಿಂದ ₹7.5 ಕೋಟಿಯ ಬೃಹತ್ ಸೆಕ್ಯೂರಿಟಿ ಟೆಂಡರ್

ನೀಟ್ ಪ್ರಶ್ನೆಪತ್ರಿಕೆ ಸೋರಿಕೆಯಾಗಿ, ಅಮಾಯಕ ವಿದ್ಯಾರ್ಥಿಗಳ ಜೀವ-ಭವಿಷ್ಯ ಹಾಳಾದ ಮೇಲೆ, ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು ಎಂಬಂತೆ ಈಗ ಎನ್‌ಟಿಎ (NTA) ₹7.5 ಕೋಟಿ ವೆಚ್ಚದ ಭದ್ರತಾ ಟೆಂಡರ್...

SIR: ನಮೂನೆಯೂ ಇಲ್ಲ, ನೋಟಿಸ್‌ ಇಲ್ಲ ಸ್ವಂತ ಮನೆಯಲ್ಲಿದ್ದವರ ಹೆಸರನ್ನೇ ಅಳಿಸಿಹಾಕಿದ ಚುನಾವಣಾ ಆಯೋಗ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಒಂದಾದ ಮೇಲೊಂದರಂತೆ ಆತಂಕಕಾರಿ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಮನೆಮನೆಗೆ ತೆರಳಿ ಎನ್ಯುಮರೇಷನ್ ನಮೂನೆ ವಿತರಿಸುವ ಮೊದಲ ಹಂತದ ಪ್ರಕ್ರಿಯೆ...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಅಮಾನತುಗೊಂಡಿದ್ದ ಯುಪಿ ಪೊಲೀಸ್ ಕಾನ್‌ಸ್ಟೇಬಲ್; ಮರುನೇಮಕದ ಬೆನ್ನಲ್ಲೇ ಬಾಲಕಿಯ ಅತ್ಯಾಚಾರ, ಕೊಲೆ!

ಹತ್ತು ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಆಕೆಯ ಸಾವಿಗೆ ಕಾರಣನಾದ ಆರೋಪದ ಮೇಲೆ ಬಂಧಿತನಾದ ಉತ್ತರ ಪ್ರದೇಶದ ಪೊಲೀಸ್ ಕಾನ್‌ಸ್ಟೇಬಲ್ ಅಭಿಷೇಕ್ ಯಾದವ್‌ನನ್ನು ವೈದ್ಯಕೀಯ ತಪಾಸಣೆಗಾಗಿ ಗೋರಖ್‌ಪುರದ ಜಿಲ್ಲಾಸ್ಪತ್ರೆಗೆ ಕರೆತಂದಾಗ, ಅಲ್ಲಿನ...

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...