Homeಎಕಾನಮಿಹದಗೆಟ್ಟ ಅರ್ಥವ್ಯವಸ್ಥೆಯಿಂದ ಎಂಟು ಮೂಲ ಕೈಗಾರಿಕೆಗಳು ಮತ್ತಷ್ಟು ಅವನತಿಯತ್ತ: -0.5ಗೆ ಕುಸಿದ ಬೆಳವಣಿಗೆಯ ದರ.

ಹದಗೆಟ್ಟ ಅರ್ಥವ್ಯವಸ್ಥೆಯಿಂದ ಎಂಟು ಮೂಲ ಕೈಗಾರಿಕೆಗಳು ಮತ್ತಷ್ಟು ಅವನತಿಯತ್ತ: -0.5ಗೆ ಕುಸಿದ ಬೆಳವಣಿಗೆಯ ದರ.

- Advertisement -
- Advertisement -

ಭಾರತ ಸರ್ಕಾರವು ಮತ್ತೊಂದು ಶಾಕಿಂಗ್ ಆದ ಅಂಕಿ ಅಂಶಗಳನ್ನು ಬಿಡುಗಡೆ ಮಾಡಿದೆ. ಆರ್ಥಿಕ ಕುಸಿತದ ಪರಿಣಾಮವಾಗಿ ೮ ಮೂಲ ಕೈಗಾರಿಕೆಗಳು ಋಣಾತ್ಮಕ ಬೆಳವಣಿಗೆಯ ಹಾದಿ ಹಿಡಿದಿವೆ ಎಂದು ಸರ್ಕಾರ ಹೇಳಿದೆ. ಆ ಕೈಗಾರಿಕೆಗಳ ಬೆಳವಣಿಗೆ ದರ ಸುಮಾರು -0.5 ನಷ್ಟು ಕುಸಿದಿದೆ ಎಂಬ ಆತಂಕಕಾರಿ ಮಾಹಿತಿ ಹೊರಬಿದ್ದಿದೆ.

ಕಲ್ಲಿದ್ದಲು, ಕಚ್ಚಾ ತೈಲ, ನೈಸರ್ಗಿಕ ಅನಿಲ, ಸಿಮೆಂಟ್, ರಾಸಾಯನಿಕ ಗೊಬ್ಬರ, ಕಬ್ಬಿಣ, ಸಂಸ್ಕರಣಾಗಾರ ಉತ್ಪನ್ನಗಳು ಮತ್ತು ಎಲೆಕ್ಟ್ರಿಸಿಟಿ ಕ್ಷೇತ್ರಗಳು ಸಂಪೂರ್ಣವಾಗಿ ನೆಲಕಚ್ಚಿರುವ ಆ ಎಂಟು ಕ್ಷೇತ್ರಗಳಾಗಿವೆ.

ಎಂಟು ವಲಯ ಕೈಗಾರಿಕೆಗಳ ಬೆಳವಣಿಗೆಯ ದರ ಕಳೆದ ವರ್ಷದ ಆಗಸ್ಟ್ ನಲ್ಲಿ ಶೇ 4.7 ರಷ್ಟಿತ್ತು. ಆದರೆ ಪ್ರಸಕ್ತ ಸಾಲಿನ ಆಗಸ್ಟ್ ನಲ್ಲಿ ಸಂಪೂರ್ಣವಾಗಿ ಬಿದ್ದು ಹೋಗಿದ್ದು ಶೇ. -0.5ಕ್ಕೆ ಕುಸಿಯುವ ಮೂಲಕ ಆತಂಕ ಹೆಚ್ಚಿಸಿದೆ.

ಆದರೆ ಇದ್ಯಾವುದರ ಬಗ್ಗೆಯೂ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಗಮನಹರಿಸುತ್ತಿಲ್ಲ. ಅರ್ಥವ್ಯವಸ್ಥೆಯ ಸುಧಾರಣೆ ಹಾಗೂ ಉದ್ಯಮಗಳ ಸ್ಥಿತಿ ಚೇತರಿಕೆ, ಕುಸಿಯುತ್ತಿರುವ ಅರ್ಥ ವ್ಯವಸ್ಥೆಯನ್ನು ತಡೆಯಲು ಹೇಗೆ ಯೋಜನೆ ರೂಪಿಸುತ್ತಾರೆ ಅನ್ನೋದೆ ಬೃಹತ್ ಪ್ರಶ್ನೆಯಾಗಿದೆ

ಆರ್ಥಿಕ ವ್ಯವಸ್ಥೆ, ಅಭಿವೃದ್ಧಿ ಕುಂಠಿತ, ಉದ್ಯಮದಲ್ಲಿ ನಷ್ಟ, ಜಿಡಿಪಿ ಕುಸಿತದಂತಹ ಸಮಸ್ಯೆಗಳು ಪ್ರಸ್ತುತ ಭಾರತದ ಜನತೆಯನ್ನು ಹೈರಾಣಾಗಿಸಿವೆ. ಒಂದು ಕಡೆ ಕೆಲಸ ಕಳೆದುಕೊಂಡು ದಿಕ್ಕು ತೋಚದೆ ಕುಳಿತಿರುವ ನೌಕರರು, ಉದ್ಯಮದಲ್ಲಿ ಭಾರಿ ನಷ್ಟ ಅನುಭವಿಸಿ ಬಾಗಿಲು ಮುಚ್ಚುತ್ತಿರುವ ಕಂಪನಿಗಳು, ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಆರ್ಥಿಕ ಕುಸಿತ ದೇಶದ ಉತ್ಪಾದನೆಗೆ ಹೊಡೆತ ನೀಡಿವೆ. ಸಂಪೂರ್ಣವಾಗಿ ಬಿದ್ದು ಹೋಗಿರುವ ಅಟೋಮೊಬೈಲ್, ವಾಹನ ಉದ್ಯಮ, ಪ್ರೋತ್ಸಾಹವಿಲ್ಲದೇ ಪ್ರಾಕೃತಿಕ ವಿಕೋಪದಿಂದ ಸೊರಗಿರುವ ಕೃಷಿ, ಬಂಡವಾಳವಿಲ್ಲದೆ ಸ್ತಬ್ಧವಾಗಿರುವ ಸಣ್ಣ ಹಾಗೂ ಬೃಹತ್ ಕೈಗಾರಿಕೆಗಳು ದೇಶದ ಆರ್ಥಿಕ ವ್ಯವಸ್ಥೆ ಹದಗೆಟ್ಟಿದ್ದನ್ನು ಸಾರಿ ಸಾರಿ ಹೇಳುತ್ತಿವೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...

ಸರ್ಕಾರ ಆಧಾರ್ ವ್ಯವಸ್ಥೆಯನ್ನು ನಂಬುವುದಾದರೆ, SIR‌ ತಪಾಸಣೆಗೂ ಇದನ್ನೇ ಬಳಸಲಿ: ಆರ್‌ ಎಸ್‌ ಶರ್ಮಾ ಸಲಹೆ

ಪ್ರಸ್ತುತ ಚರ್ಚೆಯಲ್ಲಿರುವ ಮತದಾರರ ಪಟ್ಟಿ ಪರಿಷ್ಕರಣೆ (SIR) ಮತ್ತು ದಾಖಲೆಗಳ ತಪಾಸಣೆ ಪ್ರಕ್ರಿಯೆಗೆ ಸಂಬಂಧಿಸಿದಂತೆ ಆಧಾರ್‌ ವ್ಯವಸ್ಥೆಯ ಮಾಜಿ ಮುಖ್ಯಸ್ಥ (UIDAI) ಶರ್ಮಾ ಅವರು ಮಹತ್ವದ ಸಲಹೆಯೊಂದನ್ನು ನೀಡಿದ್ದಾರೆ. ಪ್ರತಿ ಬಾರಿ ಸಾವಿರಾರು...

ಸೋಶಿಯಲ್ ಮೀಡಿಯಾಗಳಲ್ಲಿ ಅಪ್ರಾಪ್ತರಿಗೆ ಹೆಚ್ಚುತ್ತಿರುವ ಅಪಾಯ; ಲೈಂಗಿಕ ಶೋಷಣೆ ತಡೆಗೆ ಮೆಟಾದಿಂದ ಮಹತ್ವದ ನಿರ್ಧಾರ!

ಸಾಮಾಜಿಕ ಜಾಲತಾಣಗಳ ಬಳಕೆ ಯುವಜನರು ಮತ್ತು ಮಕ್ಕಳ ದೈನಂದಿನ ಬದುಕಿನ ಅವಿಭಾಜ್ಯ ಭಾಗವಾಗಿರುವ ಬೆನ್ನಲ್ಲೇ, ಆನ್‌ಲೈನ್‌ನಲ್ಲಿ ಮಕ್ಕಳ ಲೈಂಗಿಕ ಶೋಷಣೆ ಮತ್ತು ದೌರ್ಜನ್ಯಕ್ಕೆ ಸಂಬಂಧಿಸಿದ ಪ್ರಕರಣಗಳನ್ನು ಎದುರಿಸಲು ಮೆಟಾ ಮಹತ್ವದ ನಿರ್ಧಾರ ಕೈಗೊಂಡಿದೆ....

ಬೆಂಗಳೂರಿನ ಎನ್‌ಎಲ್‌ಎಸ್‌ಐಯು‌ನಲ್ಲಿ ಉಮರ್ ಖಾಲಿದ್ ಸಾಕ್ಷ್ಯಚಿತ್ರ ಪ್ರದರ್ಶನ; ಕೇಂದ್ರದ ಹಸ್ತಕ್ಷೇಪಕ್ಕೆ ಎಬಿವಿಪಿ ಮನವಿ

ಬೆಂಗಳೂರಿನಲ್ಲಿರುವ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು‌) ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರದ ಪ್ರದರ್ಶನವನ್ನು ಕಾಯಂ ಆಗಿ ರದ್ದುಗೊಳಿಸಲು ಆರ್‌ಎಸ್ಎಸ್ ಸಂಯೋಜಿತ ವಿದ್ಯಾರ್ಥಿ ಸಂಘಟನೆ ಎಬಿವಿಪಿ ಕೇಂದ್ರ...