Homeಎಕಾನಮಿಹದಗೆಟ್ಟ ಅರ್ಥವ್ಯವಸ್ಥೆಯಿಂದ ಎಂಟು ಮೂಲ ಕೈಗಾರಿಕೆಗಳು ಮತ್ತಷ್ಟು ಅವನತಿಯತ್ತ: -0.5ಗೆ ಕುಸಿದ ಬೆಳವಣಿಗೆಯ ದರ.

ಹದಗೆಟ್ಟ ಅರ್ಥವ್ಯವಸ್ಥೆಯಿಂದ ಎಂಟು ಮೂಲ ಕೈಗಾರಿಕೆಗಳು ಮತ್ತಷ್ಟು ಅವನತಿಯತ್ತ: -0.5ಗೆ ಕುಸಿದ ಬೆಳವಣಿಗೆಯ ದರ.

- Advertisement -
- Advertisement -

ಭಾರತ ಸರ್ಕಾರವು ಮತ್ತೊಂದು ಶಾಕಿಂಗ್ ಆದ ಅಂಕಿ ಅಂಶಗಳನ್ನು ಬಿಡುಗಡೆ ಮಾಡಿದೆ. ಆರ್ಥಿಕ ಕುಸಿತದ ಪರಿಣಾಮವಾಗಿ ೮ ಮೂಲ ಕೈಗಾರಿಕೆಗಳು ಋಣಾತ್ಮಕ ಬೆಳವಣಿಗೆಯ ಹಾದಿ ಹಿಡಿದಿವೆ ಎಂದು ಸರ್ಕಾರ ಹೇಳಿದೆ. ಆ ಕೈಗಾರಿಕೆಗಳ ಬೆಳವಣಿಗೆ ದರ ಸುಮಾರು -0.5 ನಷ್ಟು ಕುಸಿದಿದೆ ಎಂಬ ಆತಂಕಕಾರಿ ಮಾಹಿತಿ ಹೊರಬಿದ್ದಿದೆ.

ಕಲ್ಲಿದ್ದಲು, ಕಚ್ಚಾ ತೈಲ, ನೈಸರ್ಗಿಕ ಅನಿಲ, ಸಿಮೆಂಟ್, ರಾಸಾಯನಿಕ ಗೊಬ್ಬರ, ಕಬ್ಬಿಣ, ಸಂಸ್ಕರಣಾಗಾರ ಉತ್ಪನ್ನಗಳು ಮತ್ತು ಎಲೆಕ್ಟ್ರಿಸಿಟಿ ಕ್ಷೇತ್ರಗಳು ಸಂಪೂರ್ಣವಾಗಿ ನೆಲಕಚ್ಚಿರುವ ಆ ಎಂಟು ಕ್ಷೇತ್ರಗಳಾಗಿವೆ.

ಎಂಟು ವಲಯ ಕೈಗಾರಿಕೆಗಳ ಬೆಳವಣಿಗೆಯ ದರ ಕಳೆದ ವರ್ಷದ ಆಗಸ್ಟ್ ನಲ್ಲಿ ಶೇ 4.7 ರಷ್ಟಿತ್ತು. ಆದರೆ ಪ್ರಸಕ್ತ ಸಾಲಿನ ಆಗಸ್ಟ್ ನಲ್ಲಿ ಸಂಪೂರ್ಣವಾಗಿ ಬಿದ್ದು ಹೋಗಿದ್ದು ಶೇ. -0.5ಕ್ಕೆ ಕುಸಿಯುವ ಮೂಲಕ ಆತಂಕ ಹೆಚ್ಚಿಸಿದೆ.

ಆದರೆ ಇದ್ಯಾವುದರ ಬಗ್ಗೆಯೂ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಗಮನಹರಿಸುತ್ತಿಲ್ಲ. ಅರ್ಥವ್ಯವಸ್ಥೆಯ ಸುಧಾರಣೆ ಹಾಗೂ ಉದ್ಯಮಗಳ ಸ್ಥಿತಿ ಚೇತರಿಕೆ, ಕುಸಿಯುತ್ತಿರುವ ಅರ್ಥ ವ್ಯವಸ್ಥೆಯನ್ನು ತಡೆಯಲು ಹೇಗೆ ಯೋಜನೆ ರೂಪಿಸುತ್ತಾರೆ ಅನ್ನೋದೆ ಬೃಹತ್ ಪ್ರಶ್ನೆಯಾಗಿದೆ

ಆರ್ಥಿಕ ವ್ಯವಸ್ಥೆ, ಅಭಿವೃದ್ಧಿ ಕುಂಠಿತ, ಉದ್ಯಮದಲ್ಲಿ ನಷ್ಟ, ಜಿಡಿಪಿ ಕುಸಿತದಂತಹ ಸಮಸ್ಯೆಗಳು ಪ್ರಸ್ತುತ ಭಾರತದ ಜನತೆಯನ್ನು ಹೈರಾಣಾಗಿಸಿವೆ. ಒಂದು ಕಡೆ ಕೆಲಸ ಕಳೆದುಕೊಂಡು ದಿಕ್ಕು ತೋಚದೆ ಕುಳಿತಿರುವ ನೌಕರರು, ಉದ್ಯಮದಲ್ಲಿ ಭಾರಿ ನಷ್ಟ ಅನುಭವಿಸಿ ಬಾಗಿಲು ಮುಚ್ಚುತ್ತಿರುವ ಕಂಪನಿಗಳು, ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಆರ್ಥಿಕ ಕುಸಿತ ದೇಶದ ಉತ್ಪಾದನೆಗೆ ಹೊಡೆತ ನೀಡಿವೆ. ಸಂಪೂರ್ಣವಾಗಿ ಬಿದ್ದು ಹೋಗಿರುವ ಅಟೋಮೊಬೈಲ್, ವಾಹನ ಉದ್ಯಮ, ಪ್ರೋತ್ಸಾಹವಿಲ್ಲದೇ ಪ್ರಾಕೃತಿಕ ವಿಕೋಪದಿಂದ ಸೊರಗಿರುವ ಕೃಷಿ, ಬಂಡವಾಳವಿಲ್ಲದೆ ಸ್ತಬ್ಧವಾಗಿರುವ ಸಣ್ಣ ಹಾಗೂ ಬೃಹತ್ ಕೈಗಾರಿಕೆಗಳು ದೇಶದ ಆರ್ಥಿಕ ವ್ಯವಸ್ಥೆ ಹದಗೆಟ್ಟಿದ್ದನ್ನು ಸಾರಿ ಸಾರಿ ಹೇಳುತ್ತಿವೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...