Homeಮುಖಪುಟ'ಸತಿ ಸಹಗಮನ' ಪ್ರಕರಣ : ಎಂಟು ಮಂದಿ ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

‘ಸತಿ ಸಹಗಮನ’ ಪ್ರಕರಣ : ಎಂಟು ಮಂದಿ ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

- Advertisement -
- Advertisement -

ಭಾರತದಲ್ಲಿ ಕೊನೆಯದಾಗಿ ವರದಿಯಾಗಿದ್ದು ಎನ್ನಲಾದ ಸತಿ ಸಹಗಮನ ಪ್ರಕರಣದ ಎಂಟು ಮಂದಿ ಆರೋಪಿಗಳನ್ನು ರಾಜಸ್ಥಾನದ ಜೈಪುರದ ವಿಶೇಷ ನ್ಯಾಯಾಲಯವು ಬುಧವಾರ ದೋಷಮುಕ್ತಗೊಳಿಸಿದೆ ಎಂದು ಪಿಟಿಐ ವರದಿ ಮಾಡಿದೆ.

ಗಂಡ ಸತ್ತರೆ ಆತನ ಅಂತ್ಯಕ್ರಿಯೆಯ ವೇಳೆ ಹೆಂಡತಿಯೂ ಚಿತೆಗೆ ಹಾರಿ ಪ್ರಾಣ ಬಿಡಬೇಕೆಂಬ ಬಲವಂತ ಈ ಅನಿಷ್ಟ ಪದ್ದತಿಯನ್ನು 1829 ರಲ್ಲಿ ನಿಷೇಧಿಸಲಾಗಿದೆ.

ವರದಿಗಳ ಪ್ರಕಾರ, ಕೊನೆಯದಾಗಿ ಸೆಪ್ಟೆಂಬರ್ 4, 1987ರಂದು ರಾಜಸ್ಥಾನದಲ್ಲಿ ಸತಿ ಪದ್ದತಿ ಆಚರಣೆ ಸಂಬಂಧ ಪ್ರಕರಣವೊಂದು ದಾಖಲಾಗಿತ್ತು. ರೂಪ್ ಕನ್ವರ್ ಎಂಬ ಮಹಿಳೆಯನ್ನು ಆಕೆಯ ಗಂಡನ ಅಂತ್ಯಕ್ರಿಯೆ ವೇಳೆ ಬಲವಂತವಾಗಿ ಚಿತೆಗೆ ತಳ್ಳಿ ಸಜೀವ ದಹನ ಮಾಡಲಾಗಿತ್ತು.

1988ರಲ್ಲಿ, ಈ ಸಂಬಂಧ ಒಟ್ಟು 45 ಮಂದಿಯ ವಿರುದ್ಧ ಪ್ರಕರಣ ದಾಖಲಿಸಲಾಗಿತ್ತು. ಕಮಿಷನ್ ಆಫ್ ಸತಿ ಪ್ರಿವೆನ್ಶನ್ ಆಕ್ಟ್- 1987 ರ ಸೆಕ್ಷನ್ 5 ಅನ್ನು ಉಲ್ಲಂಘಿಸಿದ ಆರೋಪವನ್ನು ಅವರ ಮೇಲೆ ಹೊರಿಸಲಾಗಿತ್ತು. ಸೆಕ್ಷನ್ 5 ಸತಿ ಸಹಗಮನ ಪದ್ದತಿಯ ಆಚರಣೆಯ ವೈಭವೀಕರಣ ಅಥವಾ ಪ್ರಚಾರ ಮಾಡುವುದಕ್ಕೆ ಶಿಕ್ಷೆಯನ್ನು ಸೂಚಿಸುತ್ತದೆ.

ಬುಧವಾರ, ನ್ಯಾಯಾಲಯವು 45 ಆರೋಪಿಗಳಲ್ಲಿ ಎಂಟು ಜನರನ್ನು ದೋಷಮುಕ್ತಗೊಳಿಸಿದೆ ಎಂದು ಪರ ಅವರ ವಕೀಲ ಅಮನ್ ಚೈನ್ ಸಿಂಗ್ ಶೇಖಾವತ್ ಹೇಳಿದ್ದಾಗಿ ದಿ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

ಆರೋಪಿಗಳ ಪರ ವಕೀಲರ ಪ್ರಕಾರ, ಕಮಿಷನ್ ಆಫ್ ಸತಿ ಪ್ರಿವೆನ್ಶನ್ ಆಕ್ಟ್- 1987 ರ ಸೆಕ್ಷನ್ 5 ಸತಿ ಸಹಗಮನ ಪದ್ದತಿಯ ವೈಭವೀಕರಣ ಅಥವಾ ಪ್ರಚಾರಕ್ಕೆ ಸಂಬಂಧಿಸಿದ್ದಾಗಿದೆ. ಅದಕ್ಕೂ ಮುನ್ನ ಸೆಕ್ಷನ್ 3ರ ಅಡಿ ಸತಿ ಸಹಗಮನ ನಡೆದಿದೆ ಎಂಬುವುದು ರುಜುವಾತಾಗಬೇಕಿದೆ. ಪ್ರಾಸಿಕ್ಯೂಷನ್ ಸೆಕ್ಷನ್ 3ರಡಿ ಸತಿ ಸಹಗಮನ ನಡೆದಿರುವುದನ್ನು ದೃಢೀಕರಿಸುವಲ್ಲಿ ವಿಫಲವಾಗಿದೆ. ಹಾಗಾಗಿ, ನ್ಯಾಯಾಲಯ ಆರೋಪಿಗಳನ್ನು ಖುಲಾಸೆಗೊಳಿಸಿದೆ.

ಮಹೇಂದ್ರ ಸಿಂಗ್, ಶ್ರವಣ್ ಸಿಂಗ್, ನಿಹಾಲ್ ಸಿಂಗ್, ಜಿತೇಂದ್ರ ಸಿಂಗ್, ಉದಯ್ ಸಿಂಗ್, ದಶರಥ್ ಸಿಂಗ್, ಲಕ್ಷ್ಮಣ್ ಸಿಂಗ್ ಮತ್ತು ಭನ್ವರ್ ಸಿಂಗ್ ಖುಲಾಸೆಗೊಂಡ ಆರೋಪಿಗಳು. ಇವರಿಗೆ ಈ ಪ್ರಕರಣದಲ್ಲಿ ಈಗಾಗಲೇ ಜಾಮೀನು ಕೂಡ ಸಿಕ್ಕಿತ್ತು.

ಪ್ರಕರಣದ 25 ಮಂದಿ ಆರೋಪಿಗಳನ್ನು ಸಾಕ್ಷ್ಯಾಧಾರದ ಕೊರತೆಯಿಂದ 2004ರಲ್ಲಿ ಖುಲಾಸೆಗೊಳಿಸಲಾಗಿದೆ. ಇನ್ನೂ ನಾಲ್ವರು ತಲೆಮರೆಸಿಕೊಂಡಿದ್ದು, ಉಳಿದ ಎಂಟು ಮಂದಿ ಸಾವನ್ನಪ್ಪಿದ್ದಾರೆ.

ಈ ವರದಿಯಲ್ಲಿ ಉಲ್ಲೇಖಿಸಿದ ಪ್ರಕರಣವನ್ನು ಭಾರತದಲ್ಲಿ ವರದಿಯಾದ ಕೊನೆಯ ಸತಿ ಸಹಗಮನ ಪ್ರಕರಣ ಎಂದು ಹೇಳಲಾಗುತ್ತಿದೆ. ಆದರೆ, ವಾಸ್ತವತೆ ಬೇರೆಯೇ ಇದೆ. ನೇರವಾಗಿ ನಡೆಯದಿದ್ದರೂ, ವಿವಿಧ ರೂಪಗಳಲ್ಲಿ ಈ ಅನಿಷ್ಟ ಪದ್ದತಿ ಈಗಲೂ ಚಾಲ್ತಿಯಲ್ಲಿದೆ. ಅದನ್ನು ದೃಢೀಕರಿಸುವ ಘಟನೆಗಳು ಹಲವು ಭಾರೀ ನಡೆದಿದೆ. ಕಳೆದ ವರ್ಷ ಗುಜರಾತ್‌ನಲ್ಲಿ ನಡೆದ ಘಟನೆಯ ವರದಿಯೊಂದು ಕೆಳಗಿದೆ.

ಅನಿಷ್ಟ ಸತಿ ಪದ್ದತಿ ಇನ್ನೂ ಜೀವಂತ: ಸತಿ ಹಾರಬೇಕೆಂಬ ಒತ್ತಡಕ್ಕೆ ಬೇಸೆತ್ತು ಇಂಜಿನಿಯರ್ ಮಹಿಳೆ ಆತ್ಮಹತ್ಯೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ತೆರೆಮರೆಯಲ್ಲಿ ಏನೋ ಅನುಮಾನಾಸ್ಪದ ಘಟನೆ ನಡೆದಿದೆ..’; ಅಜಿತ್ ವಿಮಾನ ಅಪಘಾತದ ಕುರಿತು ಅನುಮಾನ ವ್ಯಕ್ತಪಡಿಸಿದ ರಾವತ್

ಜನವರಿ 28, 2026 ರಂದು ಮಹಾರಾಷ್ಟ್ರದ ಬಾರಾಮತಿ ಬಳಿ ನಡೆದ ವಿಮಾನ ಅಪಘಾತದಲ್ಲಿ ಉಪಮುಖ್ಯಮಂತ್ರಿ ಮತ್ತು ಎನ್‌ಸಿಪಿ ನಾಯಕ ಅಜಿತ್ ಪವಾರ್ ಅವರ ಹಠಾತ್ ಸಾವು ಸಾಕಷ್ಟು ಅನುಮಾನಗಳನ್ನು ಹುಟ್ಟುಹಾಕಿದೆ. ರಾಜಕೀಯ ವಲಯದಿಂದ...

ಸಿಜೆ ರಾಯ್ ಸಾವಿನ ನ್ಯಾಯಾಂಗ ತನಿಖೆ ಆಗ್ರಹಿಸಿದ ಕೇರಳ ಸಿಎಂ ಪಿಣರಾಯಿ ವಿಜಯನ್ : ಲೋಕಸಭೆಯಲ್ಲಿ ಚರ್ಚೆಗೆ ಕಾಂಗ್ರೆಸ್ ಆಗ್ರಹ

ಕಾನ್ಫಿಡೆಂಟ್ ಗ್ರೂಪ್ ಅಧ್ಯಕ್ಷ ಸಿ.ಜೆ ರಾಯ್ ಅವರ ಸಾವಿನ ಬಗ್ಗೆ ನ್ಯಾಯಾಂಗ ತನಿಖೆಗೆ ಆದೇಶಿಸುವಂತೆ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಕೇಂದ್ರ ಸರ್ಕಾರವನ್ನು ಒತ್ತಾಯಿಸಿದ್ದಾರೆ. ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರಿಗೆ ಭಾನುವಾರ...

ಮಹಾರಾಷ್ಟ್ರ ಉಪ ಮುಖ್ಯಮಂತ್ರಿಯಾಗಿ ಸುನೇತ್ರಾ ಪವಾರ್ ನೇಮಕದ ಹಿಂದೆ ಬಿಜೆಪಿ ನಾಯಕತ್ವದ ಮಾಸ್ಟರ್ ಮೈಂಡ್: ‘ಸಾಮ್ನಾ’

ಮಹಾರಾಷ್ಟ್ರದ ವಿರೋಧ ಪಕ್ಷವಾದ ಶಿವಸೇನೆ (ಯುಬಿಟಿ), ರಾಷ್ಟ್ರೀಯತಾವಾದಿ ಕಾಂಗ್ರೆಸ್ ಪಕ್ಷದ (ಎನ್‌ಸಿಪಿ) ನಾಯಕಿ ಸುನೇತ್ರಾ ಪವಾರ್ ಅವರು ಪತಿ ಅಜಿತ್ ಪವಾರ್ ನಿಧನರಾದ ಕೆಲವೇ ದಿನಗಳಲ್ಲಿ ರಾಜ್ಯದ ಉಪಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ...

ಎಪ್‌ಸ್ಟೀನ್‌ ಫೈಲ್ಸ್‌ನಲ್ಲಿ ಹೆಸರು ಉಲ್ಲೇಖ : ಸಚಿವ ಹರ್ದೀಪ್ ಸಿಂಗ್ ಪುರಿ ಹೇಳಿದ್ದೇನು?

ಜಗತ್ತಿನಾದ್ಯಂತ ಚರ್ಚೆಯ ವಿಷಯವಾಗಿರುವ ಜೆಫ್ರಿ ಎಪ್‌ಸ್ಟೀನ್‌ ಫೈಲ್ಸ್‌ನಲ್ಲಿ ಕೇಂದ್ರ ಸಚಿವ ಹರ್ದೀಪ್ ಸಿಂಗ್ ಪುರಿ ಅವರ ಹೆಸರಿದೆ, ಪುರಿ ಮತ್ತು ಎಪ್‌ಸ್ಟೀನ್ ನಡುವೆ ಇ-ಮೇಲ್ ಸಂಭಾಷಣೆಗಳು ನಡೆದಿವೆ. ಈ ಇ-ಮೇಲ್‌ಗಳು ಕೇವಲ ವ್ಯವಹಾರಿಕ...

ಕೇಂದ್ರ ಬಜೆಟ್ 2026: ‘ಇದು ನನ್ನ ರಾಜಕೀಯ ಜೀವನದ ಅತ್ಯಂತ ನಿರಾಶಾದಾಯಕ ಬಜೆಟ್’: ಸಿಎಂ ಸಿದ್ದರಾಮಯ್ಯ

‘ಮೋದಿ ಸರ್ಕಾರ ಆರ್ಥಿಕ ದೂರದೃಷ್ಟಿಕೋನಗಳಿಲ್ಲದೆ, ದೇಶವನ್ನು ಯಾವ ದಿಕ್ಕಿನತ್ತ ಮುನ್ನಡೆಸಬೇಕು ಎನ್ನುವುದರ ಬಗ್ಗೆ ಸ್ಪಷ್ಟತೆ ಇಲ್ಲದೆ ದಣಿದಿದೆ ಎಂಬುದರ ಸಂಕೇತ ಈ 2026 ಬಜೆಟ್’ ಎಂದು ಸಿಎಂ ಸಿದ್ದರಾಮಯ್ಯ ಕಿಡಿ ಕಾರಿದ್ದಾರೆ.  ಕಲಬುರಗಿ ವಿಮಾನ...

ಕೇಂದ್ರ ಬಜೆಟ್ 2026: ಅಪರೂಪದ ಭೂಮಿಯ ಕಾರಿಡಾರ್‌ನಿಂದ ಹೈಸ್ಪೀಡ್ ರೈಲಿನವರೆಗೆ: ಚುನಾವಣೆ ನಡೆಯಲಿರುವ ರಾಜ್ಯಗಳಿಗೆ ಕೇಂದ್ರ ಬಜೆಟ್ ನಲ್ಲಿ ಸಿಕ್ಕಿದ್ದೇನು?

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಲೋಕಸಭೆಯಲ್ಲಿ ತಮ್ಮ ಸತತ 9 ನೇ ಬಜೆಟ್ ಅನ್ನು ಮಂಡಿಸಿದ್ದಾರೆ. ಈ ಬಜೆಟ್ ನಲ್ಲಿ ಕೇರಳ, ತಮಿಳುನಾಡು, ಪಶ್ಚಿಮ ಬಂಗಾಳ ಮತ್ತು ಅಸ್ಸಾಂನಂತಹ ಚುನಾವಣೆ...

ಬಲೂಚಿಸ್ತಾನ: ಭದ್ರತಾ ಕಾರ್ಯಾಚರಣೆಯಲ್ಲಿ 15 ಪಾಕ್ ಸೈನಿಕರು, 92 ಭಯೋತ್ಪಾದಕರು ಸಾವು

ಬಲೂಚಿಸ್ತಾನ ಪ್ರಾಂತ್ಯದ ಸುಮಾರು 12 ಸ್ಥಳಗಳಲ್ಲಿ ನಡೆದ ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಗಳಲ್ಲಿ ಕನಿಷ್ಠ 15 ಪಾಕಿಸ್ತಾನಿ ಸೈನಿಕರು ಮತ್ತು 92 ಭಯೋತ್ಪಾದಕರನ್ನು ಹತ್ಯೆ ಮಾಡಲಾಗಿದೆ ಎಂದು ಪಾಕಿಸ್ತಾನಿ ಸೇನೆ ತಿಳಿಸಿರುವುದಾಗಿ ಪಿಟಿಐ ವರದಿ...

ಕೇಂದ್ರ ಬಜೆಟ್ 2026 | ಯಾವುದು ಅಗ್ಗ ಮತ್ತು ಯಾವುದು ದುಬಾರಿ..? 

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ (ಫೆಬ್ರವರಿ 1, 2026) ತಮ್ಮ ಒಂಬತ್ತನೇ ಬಜೆಟ್ ಮಂಡಿಸಿದ್ದಾರೆ. ಈ ವರ್ಷದ (2026-27 ಹಣಕಾಸು) ಬಜೆಟ್ ತೀವ್ರಗೊಳ್ಳುತ್ತಿರುವ ಜಾಗತಿಕ ವ್ಯಾಪಾರ ಉದ್ವಿಗ್ನತೆ, ರೂಪಾಯಿ ಮೌಲ್ಯದಲ್ಲಿ...

ಕೇಂದ್ರ ಬಜೆಟ್ 2026| ರಕ್ಷಣಾ ಇಲಾಖೆಗೆ 7.85 ಲಕ್ಷ ಕೋಟಿ ರೂ. ಮೀಸಲು

ಕೇಂದ್ರ ಸರ್ಕಾರದ ಬಜೆಟ್ 2026 ರಲ್ಲಿ ರಕ್ಷಣಾ ವೆಚ್ಚವನ್ನು ಗಣನೀಯವಾಗಿ ಹೆಚ್ಚಿಸಲಾಗಿದೆ. ಈ ವಲಯಕ್ಕೆ 7.85 ಲಕ್ಷ ಕೋಟಿ ರೂ.ಗಳನ್ನು ಮೀಸಲಿಟ್ಟಿದೆ. ಇದು ಕಳೆದ ವರ್ಷದ 6.81 ಲಕ್ಷ ಕೋಟಿ ರೂ.ಗಳಿಗಿಂತ ಗಮನಾರ್ಹ...

‘ಭಾರತ ವೆನೆಜುವೆಲಾದ ತೈಲ ಖರೀದಿಸಲಿದೆ’ ಎಂದ ಟ್ರಂಪ್: ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಕಾಂಗ್ರೆಸ್

ನವದೆಹಲಿ: ಭಾರತ ಇರಾನ್ ಬದಲು ವೆನೆಜುವೆಲಾದಿಂದ ತೈಲ ಖರೀದಿಸಲಿದೆ ಎಂಬ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಭಾನುವಾರ ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ. ಅಮೆರಿಕದ ನಾಯಕ "ನಮ್ಮ...