Homeಮುಖಪುಟ'ಸತಿ ಸಹಗಮನ' ಪ್ರಕರಣ : ಎಂಟು ಮಂದಿ ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

‘ಸತಿ ಸಹಗಮನ’ ಪ್ರಕರಣ : ಎಂಟು ಮಂದಿ ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

- Advertisement -
- Advertisement -

ಭಾರತದಲ್ಲಿ ಕೊನೆಯದಾಗಿ ವರದಿಯಾಗಿದ್ದು ಎನ್ನಲಾದ ಸತಿ ಸಹಗಮನ ಪ್ರಕರಣದ ಎಂಟು ಮಂದಿ ಆರೋಪಿಗಳನ್ನು ರಾಜಸ್ಥಾನದ ಜೈಪುರದ ವಿಶೇಷ ನ್ಯಾಯಾಲಯವು ಬುಧವಾರ ದೋಷಮುಕ್ತಗೊಳಿಸಿದೆ ಎಂದು ಪಿಟಿಐ ವರದಿ ಮಾಡಿದೆ.

ಗಂಡ ಸತ್ತರೆ ಆತನ ಅಂತ್ಯಕ್ರಿಯೆಯ ವೇಳೆ ಹೆಂಡತಿಯೂ ಚಿತೆಗೆ ಹಾರಿ ಪ್ರಾಣ ಬಿಡಬೇಕೆಂಬ ಬಲವಂತ ಈ ಅನಿಷ್ಟ ಪದ್ದತಿಯನ್ನು 1829 ರಲ್ಲಿ ನಿಷೇಧಿಸಲಾಗಿದೆ.

ವರದಿಗಳ ಪ್ರಕಾರ, ಕೊನೆಯದಾಗಿ ಸೆಪ್ಟೆಂಬರ್ 4, 1987ರಂದು ರಾಜಸ್ಥಾನದಲ್ಲಿ ಸತಿ ಪದ್ದತಿ ಆಚರಣೆ ಸಂಬಂಧ ಪ್ರಕರಣವೊಂದು ದಾಖಲಾಗಿತ್ತು. ರೂಪ್ ಕನ್ವರ್ ಎಂಬ ಮಹಿಳೆಯನ್ನು ಆಕೆಯ ಗಂಡನ ಅಂತ್ಯಕ್ರಿಯೆ ವೇಳೆ ಬಲವಂತವಾಗಿ ಚಿತೆಗೆ ತಳ್ಳಿ ಸಜೀವ ದಹನ ಮಾಡಲಾಗಿತ್ತು.

1988ರಲ್ಲಿ, ಈ ಸಂಬಂಧ ಒಟ್ಟು 45 ಮಂದಿಯ ವಿರುದ್ಧ ಪ್ರಕರಣ ದಾಖಲಿಸಲಾಗಿತ್ತು. ಕಮಿಷನ್ ಆಫ್ ಸತಿ ಪ್ರಿವೆನ್ಶನ್ ಆಕ್ಟ್- 1987 ರ ಸೆಕ್ಷನ್ 5 ಅನ್ನು ಉಲ್ಲಂಘಿಸಿದ ಆರೋಪವನ್ನು ಅವರ ಮೇಲೆ ಹೊರಿಸಲಾಗಿತ್ತು. ಸೆಕ್ಷನ್ 5 ಸತಿ ಸಹಗಮನ ಪದ್ದತಿಯ ಆಚರಣೆಯ ವೈಭವೀಕರಣ ಅಥವಾ ಪ್ರಚಾರ ಮಾಡುವುದಕ್ಕೆ ಶಿಕ್ಷೆಯನ್ನು ಸೂಚಿಸುತ್ತದೆ.

ಬುಧವಾರ, ನ್ಯಾಯಾಲಯವು 45 ಆರೋಪಿಗಳಲ್ಲಿ ಎಂಟು ಜನರನ್ನು ದೋಷಮುಕ್ತಗೊಳಿಸಿದೆ ಎಂದು ಪರ ಅವರ ವಕೀಲ ಅಮನ್ ಚೈನ್ ಸಿಂಗ್ ಶೇಖಾವತ್ ಹೇಳಿದ್ದಾಗಿ ದಿ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

ಆರೋಪಿಗಳ ಪರ ವಕೀಲರ ಪ್ರಕಾರ, ಕಮಿಷನ್ ಆಫ್ ಸತಿ ಪ್ರಿವೆನ್ಶನ್ ಆಕ್ಟ್- 1987 ರ ಸೆಕ್ಷನ್ 5 ಸತಿ ಸಹಗಮನ ಪದ್ದತಿಯ ವೈಭವೀಕರಣ ಅಥವಾ ಪ್ರಚಾರಕ್ಕೆ ಸಂಬಂಧಿಸಿದ್ದಾಗಿದೆ. ಅದಕ್ಕೂ ಮುನ್ನ ಸೆಕ್ಷನ್ 3ರ ಅಡಿ ಸತಿ ಸಹಗಮನ ನಡೆದಿದೆ ಎಂಬುವುದು ರುಜುವಾತಾಗಬೇಕಿದೆ. ಪ್ರಾಸಿಕ್ಯೂಷನ್ ಸೆಕ್ಷನ್ 3ರಡಿ ಸತಿ ಸಹಗಮನ ನಡೆದಿರುವುದನ್ನು ದೃಢೀಕರಿಸುವಲ್ಲಿ ವಿಫಲವಾಗಿದೆ. ಹಾಗಾಗಿ, ನ್ಯಾಯಾಲಯ ಆರೋಪಿಗಳನ್ನು ಖುಲಾಸೆಗೊಳಿಸಿದೆ.

ಮಹೇಂದ್ರ ಸಿಂಗ್, ಶ್ರವಣ್ ಸಿಂಗ್, ನಿಹಾಲ್ ಸಿಂಗ್, ಜಿತೇಂದ್ರ ಸಿಂಗ್, ಉದಯ್ ಸಿಂಗ್, ದಶರಥ್ ಸಿಂಗ್, ಲಕ್ಷ್ಮಣ್ ಸಿಂಗ್ ಮತ್ತು ಭನ್ವರ್ ಸಿಂಗ್ ಖುಲಾಸೆಗೊಂಡ ಆರೋಪಿಗಳು. ಇವರಿಗೆ ಈ ಪ್ರಕರಣದಲ್ಲಿ ಈಗಾಗಲೇ ಜಾಮೀನು ಕೂಡ ಸಿಕ್ಕಿತ್ತು.

ಪ್ರಕರಣದ 25 ಮಂದಿ ಆರೋಪಿಗಳನ್ನು ಸಾಕ್ಷ್ಯಾಧಾರದ ಕೊರತೆಯಿಂದ 2004ರಲ್ಲಿ ಖುಲಾಸೆಗೊಳಿಸಲಾಗಿದೆ. ಇನ್ನೂ ನಾಲ್ವರು ತಲೆಮರೆಸಿಕೊಂಡಿದ್ದು, ಉಳಿದ ಎಂಟು ಮಂದಿ ಸಾವನ್ನಪ್ಪಿದ್ದಾರೆ.

ಈ ವರದಿಯಲ್ಲಿ ಉಲ್ಲೇಖಿಸಿದ ಪ್ರಕರಣವನ್ನು ಭಾರತದಲ್ಲಿ ವರದಿಯಾದ ಕೊನೆಯ ಸತಿ ಸಹಗಮನ ಪ್ರಕರಣ ಎಂದು ಹೇಳಲಾಗುತ್ತಿದೆ. ಆದರೆ, ವಾಸ್ತವತೆ ಬೇರೆಯೇ ಇದೆ. ನೇರವಾಗಿ ನಡೆಯದಿದ್ದರೂ, ವಿವಿಧ ರೂಪಗಳಲ್ಲಿ ಈ ಅನಿಷ್ಟ ಪದ್ದತಿ ಈಗಲೂ ಚಾಲ್ತಿಯಲ್ಲಿದೆ. ಅದನ್ನು ದೃಢೀಕರಿಸುವ ಘಟನೆಗಳು ಹಲವು ಭಾರೀ ನಡೆದಿದೆ. ಕಳೆದ ವರ್ಷ ಗುಜರಾತ್‌ನಲ್ಲಿ ನಡೆದ ಘಟನೆಯ ವರದಿಯೊಂದು ಕೆಳಗಿದೆ.

ಅನಿಷ್ಟ ಸತಿ ಪದ್ದತಿ ಇನ್ನೂ ಜೀವಂತ: ಸತಿ ಹಾರಬೇಕೆಂಬ ಒತ್ತಡಕ್ಕೆ ಬೇಸೆತ್ತು ಇಂಜಿನಿಯರ್ ಮಹಿಳೆ ಆತ್ಮಹತ್ಯೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉತ್ತರಾಖಂಡ| 150 ವರ್ಷಗಳ ಜಾತಿ ತಡೆಗೋಡೆ ಮುರಿದು ತಮ್ಮದೇ ಮುಖ್ಯಸ್ಥರ ಆಯ್ಕೆ ಮಾಡಿಕೊಂಡ ದಲಿತರು

ಉತ್ತರಾಖಂಡದ ದೂರದ ಜೌನ್ಸರ್-ಬವಾರ್ ಪ್ರದೇಶದ ಬಿಜ್ನು ಬಿಜ್ನಾಡ್ ಗ್ರಾಮದ ದಲಿತ ಸಮುದಾಯವು ಸುಮಾರು 150 ವರ್ಷಗಳಲ್ಲಿ ಮೊದಲ ಬಾರಿಗೆ ತನ್ನದೇ ಆದ 'ಸೈನಾ' (ಗ್ರಾಮದ ಮುಖ್ಯಸ್ಥ) ಆಯ್ಕೆ ಮಾಡುವ ಮೂಲಕ ಐತಿಹಾಸಿಕ ಹೆಜ್ಜೆ...

ರಿಲಯನ್ಸ್ ಇಂಡಸ್ಟ್ರೀಸ್‌ಗೆ ರೂ. 56.44 ಕೋಟಿ ಸಿಜಿಎಸ್‌ಟಿ ದಂಡ

ಮುಖೇಶ್ ಅಂಬಾನಿ ನೇತೃತ್ವದ ರಿಲಯನ್ಸ್ ಇಂಡಸ್ಟ್ರೀಸ್, ಅಹಮದಾಬಾದ್‌ನ ಸಿಜಿಎಸ್‌ಟಿ ಜಂಟಿ ಆಯುಕ್ತರಿಂದ 56.44 ಕೋಟಿ ರೂ. ದಂಡದ ಆದೇಶವನ್ನು ಸ್ವೀಕರಿಸಿದೆ ಎಂದು ಶುಕ್ರವಾರ ತಿಳಿಸಿದೆ. ನವೆಂಬರ್ 25 ರಂದು ಹೊರಡಿಸಲಾದ ಆದೇಶದಲ್ಲಿ, ಕಂಪನಿಯ ಇನ್‌ಪುಟ್...

ತಮಿಳುನಾಡು| ರಸ್ತೆ ಅಪಘಾತದಲ್ಲಿ ಇಬ್ಬರು ದಲಿತ ಯುವಕರು ಸಾವು; ಜಾತಿ ವೈಷಮ್ಯ ಆರೋಪ

ತಮಿಳುನಾಡಿನ ಧರ್ಮಪುರಿಯಲ್ಲಿ ಬುಧವಾರ ರಾತ್ರಿ ಚಿನ್ನಾರ್ಥಳ್ಳಿ ಕೂಟ್ ರಸ್ತೆಯ ಬಳಿ ಅಪರಿಚಿತ ವಾಹನವೊಂದು ಮೋಟಾರ್ ಸೈಕಲ್‌ಗೆ ಡಿಕ್ಕಿ ಹೊಡೆದ ಪರಿಣಾಮ ಸೊನ್ನಂಪಟ್ಟಿ ಗ್ರಾಮದ ಪರಿಶಿಷ್ಟ ಜಾತಿಗೆ ಸೇರಿದ ಇಬ್ಬರು ಯುವಕರು ಸಾವನ್ನಪ್ಪಿದ್ದಾರೆ ಎಂದು...

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...