Homeಮುಖಪುಟ'ಸತಿ ಸಹಗಮನ' ಪ್ರಕರಣ : ಎಂಟು ಮಂದಿ ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

‘ಸತಿ ಸಹಗಮನ’ ಪ್ರಕರಣ : ಎಂಟು ಮಂದಿ ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

- Advertisement -
- Advertisement -

ಭಾರತದಲ್ಲಿ ಕೊನೆಯದಾಗಿ ವರದಿಯಾಗಿದ್ದು ಎನ್ನಲಾದ ಸತಿ ಸಹಗಮನ ಪ್ರಕರಣದ ಎಂಟು ಮಂದಿ ಆರೋಪಿಗಳನ್ನು ರಾಜಸ್ಥಾನದ ಜೈಪುರದ ವಿಶೇಷ ನ್ಯಾಯಾಲಯವು ಬುಧವಾರ ದೋಷಮುಕ್ತಗೊಳಿಸಿದೆ ಎಂದು ಪಿಟಿಐ ವರದಿ ಮಾಡಿದೆ.

ಗಂಡ ಸತ್ತರೆ ಆತನ ಅಂತ್ಯಕ್ರಿಯೆಯ ವೇಳೆ ಹೆಂಡತಿಯೂ ಚಿತೆಗೆ ಹಾರಿ ಪ್ರಾಣ ಬಿಡಬೇಕೆಂಬ ಬಲವಂತ ಈ ಅನಿಷ್ಟ ಪದ್ದತಿಯನ್ನು 1829 ರಲ್ಲಿ ನಿಷೇಧಿಸಲಾಗಿದೆ.

ವರದಿಗಳ ಪ್ರಕಾರ, ಕೊನೆಯದಾಗಿ ಸೆಪ್ಟೆಂಬರ್ 4, 1987ರಂದು ರಾಜಸ್ಥಾನದಲ್ಲಿ ಸತಿ ಪದ್ದತಿ ಆಚರಣೆ ಸಂಬಂಧ ಪ್ರಕರಣವೊಂದು ದಾಖಲಾಗಿತ್ತು. ರೂಪ್ ಕನ್ವರ್ ಎಂಬ ಮಹಿಳೆಯನ್ನು ಆಕೆಯ ಗಂಡನ ಅಂತ್ಯಕ್ರಿಯೆ ವೇಳೆ ಬಲವಂತವಾಗಿ ಚಿತೆಗೆ ತಳ್ಳಿ ಸಜೀವ ದಹನ ಮಾಡಲಾಗಿತ್ತು.

1988ರಲ್ಲಿ, ಈ ಸಂಬಂಧ ಒಟ್ಟು 45 ಮಂದಿಯ ವಿರುದ್ಧ ಪ್ರಕರಣ ದಾಖಲಿಸಲಾಗಿತ್ತು. ಕಮಿಷನ್ ಆಫ್ ಸತಿ ಪ್ರಿವೆನ್ಶನ್ ಆಕ್ಟ್- 1987 ರ ಸೆಕ್ಷನ್ 5 ಅನ್ನು ಉಲ್ಲಂಘಿಸಿದ ಆರೋಪವನ್ನು ಅವರ ಮೇಲೆ ಹೊರಿಸಲಾಗಿತ್ತು. ಸೆಕ್ಷನ್ 5 ಸತಿ ಸಹಗಮನ ಪದ್ದತಿಯ ಆಚರಣೆಯ ವೈಭವೀಕರಣ ಅಥವಾ ಪ್ರಚಾರ ಮಾಡುವುದಕ್ಕೆ ಶಿಕ್ಷೆಯನ್ನು ಸೂಚಿಸುತ್ತದೆ.

ಬುಧವಾರ, ನ್ಯಾಯಾಲಯವು 45 ಆರೋಪಿಗಳಲ್ಲಿ ಎಂಟು ಜನರನ್ನು ದೋಷಮುಕ್ತಗೊಳಿಸಿದೆ ಎಂದು ಪರ ಅವರ ವಕೀಲ ಅಮನ್ ಚೈನ್ ಸಿಂಗ್ ಶೇಖಾವತ್ ಹೇಳಿದ್ದಾಗಿ ದಿ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

ಆರೋಪಿಗಳ ಪರ ವಕೀಲರ ಪ್ರಕಾರ, ಕಮಿಷನ್ ಆಫ್ ಸತಿ ಪ್ರಿವೆನ್ಶನ್ ಆಕ್ಟ್- 1987 ರ ಸೆಕ್ಷನ್ 5 ಸತಿ ಸಹಗಮನ ಪದ್ದತಿಯ ವೈಭವೀಕರಣ ಅಥವಾ ಪ್ರಚಾರಕ್ಕೆ ಸಂಬಂಧಿಸಿದ್ದಾಗಿದೆ. ಅದಕ್ಕೂ ಮುನ್ನ ಸೆಕ್ಷನ್ 3ರ ಅಡಿ ಸತಿ ಸಹಗಮನ ನಡೆದಿದೆ ಎಂಬುವುದು ರುಜುವಾತಾಗಬೇಕಿದೆ. ಪ್ರಾಸಿಕ್ಯೂಷನ್ ಸೆಕ್ಷನ್ 3ರಡಿ ಸತಿ ಸಹಗಮನ ನಡೆದಿರುವುದನ್ನು ದೃಢೀಕರಿಸುವಲ್ಲಿ ವಿಫಲವಾಗಿದೆ. ಹಾಗಾಗಿ, ನ್ಯಾಯಾಲಯ ಆರೋಪಿಗಳನ್ನು ಖುಲಾಸೆಗೊಳಿಸಿದೆ.

ಮಹೇಂದ್ರ ಸಿಂಗ್, ಶ್ರವಣ್ ಸಿಂಗ್, ನಿಹಾಲ್ ಸಿಂಗ್, ಜಿತೇಂದ್ರ ಸಿಂಗ್, ಉದಯ್ ಸಿಂಗ್, ದಶರಥ್ ಸಿಂಗ್, ಲಕ್ಷ್ಮಣ್ ಸಿಂಗ್ ಮತ್ತು ಭನ್ವರ್ ಸಿಂಗ್ ಖುಲಾಸೆಗೊಂಡ ಆರೋಪಿಗಳು. ಇವರಿಗೆ ಈ ಪ್ರಕರಣದಲ್ಲಿ ಈಗಾಗಲೇ ಜಾಮೀನು ಕೂಡ ಸಿಕ್ಕಿತ್ತು.

ಪ್ರಕರಣದ 25 ಮಂದಿ ಆರೋಪಿಗಳನ್ನು ಸಾಕ್ಷ್ಯಾಧಾರದ ಕೊರತೆಯಿಂದ 2004ರಲ್ಲಿ ಖುಲಾಸೆಗೊಳಿಸಲಾಗಿದೆ. ಇನ್ನೂ ನಾಲ್ವರು ತಲೆಮರೆಸಿಕೊಂಡಿದ್ದು, ಉಳಿದ ಎಂಟು ಮಂದಿ ಸಾವನ್ನಪ್ಪಿದ್ದಾರೆ.

ಈ ವರದಿಯಲ್ಲಿ ಉಲ್ಲೇಖಿಸಿದ ಪ್ರಕರಣವನ್ನು ಭಾರತದಲ್ಲಿ ವರದಿಯಾದ ಕೊನೆಯ ಸತಿ ಸಹಗಮನ ಪ್ರಕರಣ ಎಂದು ಹೇಳಲಾಗುತ್ತಿದೆ. ಆದರೆ, ವಾಸ್ತವತೆ ಬೇರೆಯೇ ಇದೆ. ನೇರವಾಗಿ ನಡೆಯದಿದ್ದರೂ, ವಿವಿಧ ರೂಪಗಳಲ್ಲಿ ಈ ಅನಿಷ್ಟ ಪದ್ದತಿ ಈಗಲೂ ಚಾಲ್ತಿಯಲ್ಲಿದೆ. ಅದನ್ನು ದೃಢೀಕರಿಸುವ ಘಟನೆಗಳು ಹಲವು ಭಾರೀ ನಡೆದಿದೆ. ಕಳೆದ ವರ್ಷ ಗುಜರಾತ್‌ನಲ್ಲಿ ನಡೆದ ಘಟನೆಯ ವರದಿಯೊಂದು ಕೆಳಗಿದೆ.

ಅನಿಷ್ಟ ಸತಿ ಪದ್ದತಿ ಇನ್ನೂ ಜೀವಂತ: ಸತಿ ಹಾರಬೇಕೆಂಬ ಒತ್ತಡಕ್ಕೆ ಬೇಸೆತ್ತು ಇಂಜಿನಿಯರ್ ಮಹಿಳೆ ಆತ್ಮಹತ್ಯೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳದ ಸೋಲಿನ ಬಳಿಕ ‘ಇಂಡಿಯಾದ ಆಸರೆ’ ಬಯಸಿದ ಮಮತಾ

2026ರ ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯ ಸೋಲಿನ ನಂತರ ಮಮತಾ ಬ್ಯಾನರ್ಜಿ ಅವರು ಇದ್ದಕ್ಕಿದ್ದಂತೆ ‘ಇಂಡಿಯಾ’ (INDIA) ಒಕ್ಕೂಟ ಮತ್ತು ರಾಷ್ಟ್ರೀಯ ಮಟ್ಟದ ವಿರೋಧ ಪಕ್ಷಗಳ ಒಗ್ಗಟ್ಟಿಗೆ ಇಷ್ಟೊಂದು ಪ್ರಾಮುಖ್ಯತೆ ನೀಡುತ್ತಿರುವುದು ಏಕೆ? ದೀರ್ಘಕಾಲದವರೆಗೆ...

ಪಶ್ಚಿಮ ಬಂಗಾಳ| ಮತದಾರರ ಪಟ್ಟಿಯಿಂದ ಡಿಲೀಟ್‌ ಆದವರಿಗೆ ಪಡಿತರ ಪ್ರಯೋಜನಗಳಿಲ್ಲ

ಚುನಾವಣಾ ಆಯೋಗದ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಯಿಂದಾಗಿ ಪಶ್ಚಿಮ ಬಂಗಾಳದ ಚುನಾವಣಾ ಪ್ರಕ್ರಿಯೆಯಿಂದ ಹೊರಗುಳಿದವರಿಗೆ ಈಗ ಎರಡು ಹೊಡೆತ ಎದುರಾಗಿದೆ. ರಾಜ್ಯ ಸರ್ಕಾರವು ಈಗ ಅವರ ಪಡಿತರ ಚೀಟಿಗಳನ್ನು ಸಹ ನಿಷ್ಕ್ರಿಯಗೊಳಿಸಲು...

ಇಂಡಿಯಾ ಮೈತ್ರಿಕೂಟದ ಸಭೆ: ಎಸ್‌ಐಆರ್, ಬೆಲೆ ಏರಿಕೆ, ನಿರುದ್ಯೋಗದ ಕುರಿತು ಖರ್ಗೆ ಕಳವಳ; ಒಗ್ಗಟ್ಟಿನ ಹೋರಾಟಕ್ಕೆ ಕರೆ

ರಾಜಕೀಯ, ಆರ್ಥಿಕ, ಸಾಮಾಜಿಕ ಮತ್ತು ವಿದೇಶಾಂಗ ನೀತಿ ರಂಗಗಳಲ್ಲಿ ಮೋದಿ ಸರ್ಕಾರದ ವೈಫಲ್ಯಗಳನ್ನು ಎದುರಿಸಲು ತನ್ನ ಒಗ್ಗಟ್ಟನ್ನು ಬಲಪಡಿಸಿಕೊಳ್ಳುವಂತೆ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಸೋಮವಾರ (ಜೂ.8) ಇಂಡಿಯಾ ಮೈತ್ರಿಕೂಟಕ್ಕೆ ಕರೆ...

ಟೆಹ್ರಾನ್ ಮೇಲಿನ ದಾಳಿಗೆ ಪ್ರತೀಕಾರ: ಇಸ್ರೇಲ್ ಮೇಲೆ ಕ್ಷಿಪಣಿ ಹಾರಿಸಿದ ಇರಾನ್

ಟೆಹ್ರಾನ್, ತಬ್ರಿಜ್ ಮತ್ತು ಇಸ್ಫಹಾನ್‌ ಮೇಲಿನ ದಾಲಿಗಳಿಗೆ ಪ್ರತೀಕಾರವಾಗಿ, ಇರಾನ್ ಸೇನೆಯು ಇಸ್ರೇಲ್‌ ಮೇಲೆ ಎರಡನೇ ತರಂಗದ ಕ್ಷಿಪಣಿಗಳನ್ನು ಹಾರಿಸಿದೆ. ದೇಶಾದ್ಯಂತ ಸೈರನ್‌ಗಳು ಮೊಳಗುತ್ತಿವೆ ಎಂದು ಇಸ್ರೇಲ್ ಮಿಲಿಟರಿ ಹೇಳಿದೆ ಎಂದು ಅಂತರಾಷ್ಟ್ರೀಯ...

ಭಾರತದಲ್ಲಿ ಬೆಂಕಿ ದುರಂತ ‘ದಿನವೊಂದಕ್ಕೆ ಬಲಿಯಾಗುತ್ತಿವೆ 16 ಜೀವಗಳು’ NCRB ವರದಿ

ಇತ್ತೀಚೆಗೆ ದೆಹಲಿಯ ಮಾಳವೀಯ ನಗರದ ಹೋಟೆಲ್‌ ಒಂದರಲ್ಲಿ ನಡೆದ ಭೀಕರ ಬೆಂಕಿ ದುರಂತ (ಇದರಲ್ಲಿ 22 ಜನರು ಸಜೀವ ದಹನವಾಗಿದ್ದರು) ಇಡೀ ದೇಶವನ್ನೇ ನಡುಗಿಸಿದೆ. ಈ ದುರಂತದ ಬೆನ್ನಲ್ಲೇ ಕರ್ನಾಟಕದಲ್ಲೂ ವಾಣಿಜ್ಯ ಮತ್ತು...

ಈದ್ ಹಬ್ಬದ ವೇಳೆ ಮುಸ್ಲೀಮರನ್ನು ಗುರಿಯಾಗಿಸಿ 46 ದ್ವೇಷ ಅಪರಾಧಗಳು, ಮೂವರ ಹತ್ಯೆ: APCR ಆತಂಕಕಾರಿ ವರದಿ

ಇತ್ತೀಚಿನ ಬಕ್ರೀದ್ (ಈದ್ ಉಲ್-ಅಧಾ) ಹಬ್ಬದ ಆಚರಣೆಯ ಸಂದರ್ಭದಲ್ಲಿ ದೇಶದ ವಿವಿಧೆಡೆ ಅಲ್ಪಸಂಖ್ಯಾತರನ್ನು ಗುರಿಯಾಗಿಸಿಕೊಂಡು ನಡೆದ ಕೋಮು ಕಿರುಕುಳ, ದ್ವೇಷ ಭಾಷಣ ಹಾಗೂ ಹಿಂಸಾಚಾರದ ಘಟನೆಗಳ ಕುರಿತು 'ನಾಗರಿಕ ಹಕ್ಕುಗಳ ರಕ್ಷಣಾ ಸಂಘ'...

ಗ್ರೇಟ್ ನಿಕೋಬಾರ್ : ಕಾರ್ಪೊರೇಟ್ ಹಿತಾಸಕ್ತಿಗೆ ಬಲಿಯಾಗುತ್ತಿರುವ ಪರಿಸರ, ಆದಿವಾಸಿಗಳ ಅಸ್ತಿತ್ವ

ಬಂಗಾಳಕೊಲ್ಲಿಯಲ್ಲಿರುವ ಭಾರತದ ದಕ್ಷಿಣ ತುದಿಯ ದ್ವೀಪದ ಸಮಗ್ರ ಅಭಿವೃದ್ಧಿಯ ಹೆಸರಿನಲ್ಲಿ ಕೇಂದ್ರ ಸರ್ಕಾರ ಬರೋಬ್ಬರಿ 72 ಸಾವಿರದಿಂದ 81 ಸಾವಿರ ಕೋಟಿ ರೂಪಾಯಿ ವೆಚ್ಚದ ’ಗ್ರೇಟ್ ನಿಕೋಬಾರ್ ದ್ವೀಪ ಅಭಿವೃದ್ಧಿ ಯೋಜನೆ’ಯನ್ನು ರೂಪಿಸಿದೆ.ಈ...

ಅಸ್ಸಾಂನ ನಾಲ್ವರು ಮುಸ್ಲಿಂ ಮಹಿಳೆಯರ ಗಡೀಪಾರು ಪ್ರಕ್ರಿಯೆಗೆ ಸುಪ್ರೀಂ ತಡೆ: ಕೇಂದ್ರ, ರಾಜ್ಯ ಸರ್ಕಾರಗಳಿಗೆ ನೋಟಿಸ್‌

ಅಸ್ಸಾಂನಲ್ಲಿ 'ವಿದೇಶಿಯರು' ಎಂದು ಘೋಷಿತರಾಗಿ ಗಡೀಪಾರು ಭೀತಿ ಎದುರಿಸುತ್ತಿದ್ದ ನಾಲ್ವರು ಮುಸ್ಲಿಂ ಮಹಿಳೆಯರ ವಿಚಾರದಲ್ಲಿ ಭಾರತದ ಸುಪ್ರೀಂ ಕೋರ್ಟ್ ಮಹತ್ವದ ಮಧ್ಯಪ್ರವೇಶ ಮಾಡಿದೆ. ಈ ಮಹಿಳೆಯರನ್ನು ದೇಶದಿಂದ ಹೊರಹಾಕುವ (ಗಡೀಪಾರು ಮಾಡುವ) ಪ್ರಕ್ರಿಯೆಗೆ...

ದೆಹಲಿಗೆ ಬಂದಿಳಿದ ಕಾಕ್ರೋಚ್ ಪಾರ್ಟಿ ಸಂಸ್ಥಾಪಕ ಅಭಿಜೀತ್ ದೀಪ್ಕೆ : ಜಂತರ್‌ ಮಂತರ್‌ನಲ್ಲಿ ಪ್ರತಿಭಟಿಸಲು ಪೊಲೀಸರಿಂದ ಅನುಮತಿ

ಶನಿವಾರ (ಜೂ.6) ಬೆಳಿಗ್ಗೆ ದೆಹಲಿಗೆ ಆಗಮಿಸಿದ ಕಾಕ್ರೋಚ್ ಜನತಾ ಪಾರ್ಟಿಯ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ, ಪ್ರತಿಭಟನೆಗೆ ದೆಹಲಿ ಪೊಲೀಸರು ಅನುಮತಿ ನೀಡಿದ್ದಾರೆ ಎಂದು ತಿಳಿಸಿದ್ದು, ಯೋಜಿತ ಆಂದೋಲನಕ್ಕಾಗಿ ನೇರವಾಗಿ ಜಂತರ್ ಮಂತರ್‌ನಲ್ಲಿ...

ಜಾಗತಿಕವಾಗಿ ಮೂರು ವರ್ಷಗಳಲ್ಲಿ 600 ಪರಿಸರ ರಕ್ಷಕರ ಹತ್ಯೆ: ವಿಶ್ವಸಂಸ್ಥೆ ತೀವ್ರ ಕಳವಳ: ಜಾಗತಿಕ ತಾಪಮಾನಕ್ಕೆ ಸಾಕ್ಷಿಯಾಗುತ್ತಿರುವ ಭಾರತ

ಜೂನ್ 5 ವಿಶ್ವ ಪರಿಸರ ದಿನ. ಜಗತ್ತಿನಾದ್ಯಂತ ಗಿಡ ನೆಡುವ, ಹಸಿರು ಭಾಷಣ ಬಿಗಿಯುವ ಮತ್ತು ಪರಿಸರ ಕಾಳಜಿಯ ಸಡಗರದ ಆಚರಣೆಗಳು ಎಲ್ಲೆಡೆ ವಿಭಿನ್ನ ರೀತಿಗಳಲ್ಲಿ ವಿಜೃಂಭಿಸುತ್ತಿವೆ. ಆದರೆ, ಇದೇ ಹೊತ್ತಿನಲ್ಲಿ ವಿಶ್ವಸಂಸ್ಥೆಯು...