Homeಮುಖಪುಟ'ಸತಿ ಸಹಗಮನ' ಪ್ರಕರಣ : ಎಂಟು ಮಂದಿ ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

‘ಸತಿ ಸಹಗಮನ’ ಪ್ರಕರಣ : ಎಂಟು ಮಂದಿ ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

- Advertisement -
- Advertisement -

ಭಾರತದಲ್ಲಿ ಕೊನೆಯದಾಗಿ ವರದಿಯಾಗಿದ್ದು ಎನ್ನಲಾದ ಸತಿ ಸಹಗಮನ ಪ್ರಕರಣದ ಎಂಟು ಮಂದಿ ಆರೋಪಿಗಳನ್ನು ರಾಜಸ್ಥಾನದ ಜೈಪುರದ ವಿಶೇಷ ನ್ಯಾಯಾಲಯವು ಬುಧವಾರ ದೋಷಮುಕ್ತಗೊಳಿಸಿದೆ ಎಂದು ಪಿಟಿಐ ವರದಿ ಮಾಡಿದೆ.

ಗಂಡ ಸತ್ತರೆ ಆತನ ಅಂತ್ಯಕ್ರಿಯೆಯ ವೇಳೆ ಹೆಂಡತಿಯೂ ಚಿತೆಗೆ ಹಾರಿ ಪ್ರಾಣ ಬಿಡಬೇಕೆಂಬ ಬಲವಂತ ಈ ಅನಿಷ್ಟ ಪದ್ದತಿಯನ್ನು 1829 ರಲ್ಲಿ ನಿಷೇಧಿಸಲಾಗಿದೆ.

ವರದಿಗಳ ಪ್ರಕಾರ, ಕೊನೆಯದಾಗಿ ಸೆಪ್ಟೆಂಬರ್ 4, 1987ರಂದು ರಾಜಸ್ಥಾನದಲ್ಲಿ ಸತಿ ಪದ್ದತಿ ಆಚರಣೆ ಸಂಬಂಧ ಪ್ರಕರಣವೊಂದು ದಾಖಲಾಗಿತ್ತು. ರೂಪ್ ಕನ್ವರ್ ಎಂಬ ಮಹಿಳೆಯನ್ನು ಆಕೆಯ ಗಂಡನ ಅಂತ್ಯಕ್ರಿಯೆ ವೇಳೆ ಬಲವಂತವಾಗಿ ಚಿತೆಗೆ ತಳ್ಳಿ ಸಜೀವ ದಹನ ಮಾಡಲಾಗಿತ್ತು.

1988ರಲ್ಲಿ, ಈ ಸಂಬಂಧ ಒಟ್ಟು 45 ಮಂದಿಯ ವಿರುದ್ಧ ಪ್ರಕರಣ ದಾಖಲಿಸಲಾಗಿತ್ತು. ಕಮಿಷನ್ ಆಫ್ ಸತಿ ಪ್ರಿವೆನ್ಶನ್ ಆಕ್ಟ್- 1987 ರ ಸೆಕ್ಷನ್ 5 ಅನ್ನು ಉಲ್ಲಂಘಿಸಿದ ಆರೋಪವನ್ನು ಅವರ ಮೇಲೆ ಹೊರಿಸಲಾಗಿತ್ತು. ಸೆಕ್ಷನ್ 5 ಸತಿ ಸಹಗಮನ ಪದ್ದತಿಯ ಆಚರಣೆಯ ವೈಭವೀಕರಣ ಅಥವಾ ಪ್ರಚಾರ ಮಾಡುವುದಕ್ಕೆ ಶಿಕ್ಷೆಯನ್ನು ಸೂಚಿಸುತ್ತದೆ.

ಬುಧವಾರ, ನ್ಯಾಯಾಲಯವು 45 ಆರೋಪಿಗಳಲ್ಲಿ ಎಂಟು ಜನರನ್ನು ದೋಷಮುಕ್ತಗೊಳಿಸಿದೆ ಎಂದು ಪರ ಅವರ ವಕೀಲ ಅಮನ್ ಚೈನ್ ಸಿಂಗ್ ಶೇಖಾವತ್ ಹೇಳಿದ್ದಾಗಿ ದಿ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

ಆರೋಪಿಗಳ ಪರ ವಕೀಲರ ಪ್ರಕಾರ, ಕಮಿಷನ್ ಆಫ್ ಸತಿ ಪ್ರಿವೆನ್ಶನ್ ಆಕ್ಟ್- 1987 ರ ಸೆಕ್ಷನ್ 5 ಸತಿ ಸಹಗಮನ ಪದ್ದತಿಯ ವೈಭವೀಕರಣ ಅಥವಾ ಪ್ರಚಾರಕ್ಕೆ ಸಂಬಂಧಿಸಿದ್ದಾಗಿದೆ. ಅದಕ್ಕೂ ಮುನ್ನ ಸೆಕ್ಷನ್ 3ರ ಅಡಿ ಸತಿ ಸಹಗಮನ ನಡೆದಿದೆ ಎಂಬುವುದು ರುಜುವಾತಾಗಬೇಕಿದೆ. ಪ್ರಾಸಿಕ್ಯೂಷನ್ ಸೆಕ್ಷನ್ 3ರಡಿ ಸತಿ ಸಹಗಮನ ನಡೆದಿರುವುದನ್ನು ದೃಢೀಕರಿಸುವಲ್ಲಿ ವಿಫಲವಾಗಿದೆ. ಹಾಗಾಗಿ, ನ್ಯಾಯಾಲಯ ಆರೋಪಿಗಳನ್ನು ಖುಲಾಸೆಗೊಳಿಸಿದೆ.

ಮಹೇಂದ್ರ ಸಿಂಗ್, ಶ್ರವಣ್ ಸಿಂಗ್, ನಿಹಾಲ್ ಸಿಂಗ್, ಜಿತೇಂದ್ರ ಸಿಂಗ್, ಉದಯ್ ಸಿಂಗ್, ದಶರಥ್ ಸಿಂಗ್, ಲಕ್ಷ್ಮಣ್ ಸಿಂಗ್ ಮತ್ತು ಭನ್ವರ್ ಸಿಂಗ್ ಖುಲಾಸೆಗೊಂಡ ಆರೋಪಿಗಳು. ಇವರಿಗೆ ಈ ಪ್ರಕರಣದಲ್ಲಿ ಈಗಾಗಲೇ ಜಾಮೀನು ಕೂಡ ಸಿಕ್ಕಿತ್ತು.

ಪ್ರಕರಣದ 25 ಮಂದಿ ಆರೋಪಿಗಳನ್ನು ಸಾಕ್ಷ್ಯಾಧಾರದ ಕೊರತೆಯಿಂದ 2004ರಲ್ಲಿ ಖುಲಾಸೆಗೊಳಿಸಲಾಗಿದೆ. ಇನ್ನೂ ನಾಲ್ವರು ತಲೆಮರೆಸಿಕೊಂಡಿದ್ದು, ಉಳಿದ ಎಂಟು ಮಂದಿ ಸಾವನ್ನಪ್ಪಿದ್ದಾರೆ.

ಈ ವರದಿಯಲ್ಲಿ ಉಲ್ಲೇಖಿಸಿದ ಪ್ರಕರಣವನ್ನು ಭಾರತದಲ್ಲಿ ವರದಿಯಾದ ಕೊನೆಯ ಸತಿ ಸಹಗಮನ ಪ್ರಕರಣ ಎಂದು ಹೇಳಲಾಗುತ್ತಿದೆ. ಆದರೆ, ವಾಸ್ತವತೆ ಬೇರೆಯೇ ಇದೆ. ನೇರವಾಗಿ ನಡೆಯದಿದ್ದರೂ, ವಿವಿಧ ರೂಪಗಳಲ್ಲಿ ಈ ಅನಿಷ್ಟ ಪದ್ದತಿ ಈಗಲೂ ಚಾಲ್ತಿಯಲ್ಲಿದೆ. ಅದನ್ನು ದೃಢೀಕರಿಸುವ ಘಟನೆಗಳು ಹಲವು ಭಾರೀ ನಡೆದಿದೆ. ಕಳೆದ ವರ್ಷ ಗುಜರಾತ್‌ನಲ್ಲಿ ನಡೆದ ಘಟನೆಯ ವರದಿಯೊಂದು ಕೆಳಗಿದೆ.

ಅನಿಷ್ಟ ಸತಿ ಪದ್ದತಿ ಇನ್ನೂ ಜೀವಂತ: ಸತಿ ಹಾರಬೇಕೆಂಬ ಒತ್ತಡಕ್ಕೆ ಬೇಸೆತ್ತು ಇಂಜಿನಿಯರ್ ಮಹಿಳೆ ಆತ್ಮಹತ್ಯೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹೊಸ ಕಾರ್ಮಿಕ ಕಾನೂನು ಶ್ರಮಿಕರ ಮೂಲಭೂತ ಹಕ್ಕುಗಳಿಗೆ ಕತ್ತರಿ!

"8 ಗಂಟೆ ಕೆಲಸ, 8 ಗಂಟೆ ಮನರಂಜನೆ, 8 ಗಂಟೆ ವಿಶ್ರಾಂತಿ" ಎಂಬ ತತ್ವವು ಸುಲಭವಾಗಿ ದೊರೆತದ್ದಲ್ಲ, ಇದು ದೀರ್ಘಕಾಲದ ಹೋರಾಟ, ತ್ಯಾಗ ಮತ್ತು ಏಕತೆಯ ಫಲವಾಗಿದೆ. ಕೆಲಸದ ಹೊರೆ ಅತಿಯಾಗಿ ಇದ್ದ...

ಮನರೇಗಾ ಯಶೋಗಾಥೆ: ಭಾಗ-1 ದಲಿತರು-ಮಹಿಳೆಯರಿಗೆ ಆರ್ಥಿಕ ಭದ್ರತೆ; ಗ್ರಾಮ ಸಬಲೀಕರಣಕ್ಕೆ ಮನರೇಗಾ ಕೊಟ್ಟ ಕೊಡುಗೆ ಅಪಾರ

2001-2004 ರವರೆಗಿನ ನಿರಂತರ ಬರ ಕರ್ನಾಟಕದ ಬಹುತೇಕ ಹಳ್ಳಿಗಳನ್ನು ಕಂಗಾಲಾಗಿಸಿದ್ದಂತೂ ನಿಜ. ಎಲ್ಲ ಕೆರೆಗಳು ಬತ್ತಿಹೋಗಿದ್ದರಿಂದ ದನಕರುಗಳಿಗೆ ನೀರು ಕುಡಿಸಲೂ ಜನ ಅಲೆದಾಡುತ್ತಿದ್ದರು. ಜನರಿಗೆ ಕುಡಿಯುವ ನೀರು ಪೂರೈಕೆ ಸಹ ಆ ಸಂದರ್ಭದಲ್ಲಿ...

ಮಣಿಪುರ: ಬುಡಕಟ್ಟು ಚರ್ಚ್ ನಾಯಕರ ಮೇಲೆ ಉಗ್ರ ದಾಳಿ:  ಹಲವೆಡೆ ಮೇಣದ ಬತ್ತಿಯ ಜೊತೆಗೆ ಶೋಕ ವ್ಯಕ್ತ ಪಡಿಸಿದ ಕುಕಿ ಸಮುದಾಯ 

ಇಂಫಾಲ್: ಮಣಿಪುರದ ಕಾಂಗ್‌ಪೋಕ್ಪಿ ಜಿಲ್ಲೆಯಲ್ಲಿ ಮೂವರು ಪ್ರಮುಖ ಕುಕಿ ಚರ್ಚ್ ನಾಯಕರನ್ನು ಹೊಂಚು ಹಾಕಿ ದಾಳಿ ನಡೆಸಿ ಕೊಲ್ಲಲಾಗಿದೆ. ಈ ಘಟನೆಯು ರಾಜ್ಯದಲ್ಲಿ ಜನಾಂಗೀಯ ಉದ್ವಿಗ್ನತೆಯನ್ನು ಮತ್ತಷ್ಟು ತೀವ್ರಗೊಳಿಸಿದೆ.  ಮೇ 13ರಂದು ಬೆಳಿಗ್ಗೆ ಚುರಾಚಂದ್‌ಪುರನಲ್ಲಿ...

ಗುಜರಾತ್| ಮದುವೆ ಮೆರವಣಿಗೆಯಲ್ಲಿ ಕುದುರೆ ಸವಾರಿ ಮಾಡಿದ ದಲಿತ ವರನ ಮೇಲೆ ಹಲ್ಲೆ

ಗುಜರಾತ್‌ನ ಮೆಹ್ಸಾನಾ ಜಿಲ್ಲೆಯ ಮಡಿ ಗ್ರಾಮದಲ್ಲಿ ಮದುವೆ ಮೆರವಣಿಗೆಯಲ್ಲಿ ಕುದುರೆ ಸವಾರಿ ಮಾಡುತ್ತಿದ್ದ ದಲಿತ ವರನ ಮೇಲೆ ಮೇಲ್ಜಾತಿಯ ಪುರುಷರ ಗುಂಪೊಂದು ಜಾತಿ ನಿಂದನೆ ಮಾಡಿ ನಿಂದಿಸಿದ್ದಾರೆ ಎಂದು ಆರೋಪಿಸಲಾಗಿದೆ. ಮೇ 10 ರಂದು...

ಆತಂಕಕಾರಿಯಾದ ಆನೆ ದಾಳಿ

ಆನೆ ದಾಳಿ ಹಿಂದೆಂದಿಗಿಂತಲೂ ದುಪ್ಪಟ್ಟಾಗಿದೆ. ಅರಣ್ಯಮಂತ್ರಿ ಈಶ್ವರ್ ಖಂಡ್ರೆಯವರ ಪ್ರಕಾರ ಆನೆಗಳ ಸಂಖ್ಯೆ ದುಪ್ಪಟ್ಟಾಗಿದೆ. ಕಾಡಿನ ಪ್ರಮಾಣ ಅಷ್ಟೆ ಇದೆ. ಅಂದರೆ ಕಾಡಿನ ಪ್ರಮಾಣ ಹೆಚ್ಚು ಮಾಡಬೇಕೆಂದರೆ ಮನುಷ್ಯರ ಆವಾಸ ಇಲ್ಲದೆ ಆನೆಗಳಿಗಾಗಿ...

ವೈದ್ಯಕೀಯ ಸೀಟುಗಳ ಹಂಚಿಕೆ ಕೇಂದ್ರೀಕರಣಕ್ಕೆ ದಕ್ಷಿಣದ ವಿರೋಧ; ನೀಟ್ ಪರೀಕ್ಷೆಯನ್ನೇ ರದ್ದುಗೊಳಿಸಲು ಇದು ಸಕಾಲ

ರಾಜ್ಯಪಟ್ಟಿಯಲ್ಲಿದ್ದ ಶಿಕ್ಷಣದ ಹಕ್ಕನ್ನು ನೀಟ್‌ ಹೆಸರಿನಲ್ಲಿ ಕೇಂದ್ರದ ಜಂಟಿ ಪಟ್ಟಿಗೆ ಸೇರಿಸುವ ಒಕ್ಕೂಟ ಸರ್ಕಾರದ ನಿರ್ಧಾರದಿಂದ ದಕ್ಷಿಣದ ರಾಜ್ಯಗಳು ಭಾರಿ ನಷ್ಟ ಅನುಭವಿಸುತ್ತಿವೆ. ಜೊತೆಗೆ, ನೀಟ್ ಪಾಸ್‌ ಮಾಡುವ ಒತ್ತಡ ತಾಳಲಾರದೆ ದೇಶದಾದ್ಯಂತ...

‘ಮತ’ ವ್ಯರ್ಥ ಮಾಡದ ಮತದಾರ: 2026ರಲ್ಲಿ ಕುಸಿಯಿತು ‘ನೋಟಾ’ ಅಬ್ಬರ

2026ರ ವಿಧಾನಸಭಾ ಚುನಾವಣೆಯಲ್ಲಿ ಅಸ್ಸಾಂ, ಕೇರಳ, ಪುದುಚೇರಿ, ತಮಿಳುನಾಡು ಮತ್ತು ಪಶ್ಚಿಮ ಬಂಗಾಳದಾದ್ಯಂತ ಸುಮಾರು 10.9 ಲಕ್ಷ ಮತಗಳು 'ನೋಟಾ' (ಯಾರಿಗೂ ಮತವಿಲ್ಲ) ಪಾಲಾಗಿವೆ. ಆದರೆ, 2016 ಮತ್ತು 2021ರ ಚುನಾವಣೆಗಳಿಗೆ ಹೋಲಿಸಿದರೆ...

ಕೇರಳದ 13ನೇ ಮುಖ್ಯಮಂತ್ರಿ ವಿ.ಡಿ. ಸತೀಶನ್: ವಿದ್ಯಾರ್ಥಿ ನಾಯಕನಿಂದ ಸಿಎಂ ಸ್ಥಾನದವರೆಗೆ ಸತೀಶನ್ ಪಯಣ

ತಿರುವನಂತಪುರಂ: ಕೇರಳಂನ ನೂತನ ಮುಖ್ಯಮಂತ್ರಿಯಾಗಿ ವಿ.ಡಿ. ಸತೀಶನ್ ಅವರನ್ನು ಕಾಂಗ್ರೆಸ್ ಹೈಕಮಾಂಡ್ ಆಯ್ಕೆ ಮಾಡಿದೆ. ಆ ಮೂಲಕ ಹಲವು ದಿನಗಳಿಂದ ಈ ಬಗ್ಗೆ ನಡೆಯುತ್ತಿದ್ದ ಕುತೂಹಲ ಮತ್ತು ಚರ್ಚೆಗಳಿಗೆ ತೆರೆ ಬಿದ್ದಿದೆ.  ಅಖಿಲ ಭಾರತ...

ದಲಿತರ ನ್ಯಾಯಕ್ಕೆ ಹೊಸ ಅಡ್ಡಿಯಾಗಲಿದೆಯೇ ‘ಸಾರ್ವಜನಿಕ ವೀಕ್ಷಣೆ’ ನಿಯಮ? ಪರಿಶಿಷ್ಟರನ್ನು ಆತಂಕಕ್ಕೆ ತಳ್ಳಿದ ಸುಪ್ರೀಂ ತೀರ್ಪು

ಸಾರ್ವಜನಿಕರು ನೋಡದ ಜಾಗದಲ್ಲಿ, ಅಂದರೆ ಯಾರೂ ನೋಡದ ಜಾಗದಲ್ಲಿ ಜಾತಿ ನಿಂದನೆ ಅಥವಾ ಅವಮಾನ ನಡೆದರೆ, ಅದು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆ 1989ರ ಅಡಿಯಲ್ಲಿ ಅಪರಾಧ...

ಪಶ್ಚಿಮ ಬಂಗಾಳ: “ಇದು ಬುಲ್ಡೋಜರ್ ರಾಜ್ಯವಲ್ಲ”: ಚುನಾವಣೋತ್ತರ ಹಿಂಸಾಚಾರದ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮತ್ತು ತೃಣಮೂಲ ಕಾಂಗ್ರೆಸ್ ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಚುನಾವಣೋತ್ತರ ಹಿಂಸಾಚಾರದ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ಗುರುವಾರ ವಕೀಲರ ನಿಲುವಂಗಿಯನ್ನು ಧರಿಸಿ ಕಲ್ಕತ್ತಾ ಹೈಕೋರ್ಟ್‌ಗೆ ಬಂದ ಅವರು ವಿಧಾನಸಭಾ...