Homeಮುಖಪುಟ'ಸತಿ ಸಹಗಮನ' ಪ್ರಕರಣ : ಎಂಟು ಮಂದಿ ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

‘ಸತಿ ಸಹಗಮನ’ ಪ್ರಕರಣ : ಎಂಟು ಮಂದಿ ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

- Advertisement -
- Advertisement -

ಭಾರತದಲ್ಲಿ ಕೊನೆಯದಾಗಿ ವರದಿಯಾಗಿದ್ದು ಎನ್ನಲಾದ ಸತಿ ಸಹಗಮನ ಪ್ರಕರಣದ ಎಂಟು ಮಂದಿ ಆರೋಪಿಗಳನ್ನು ರಾಜಸ್ಥಾನದ ಜೈಪುರದ ವಿಶೇಷ ನ್ಯಾಯಾಲಯವು ಬುಧವಾರ ದೋಷಮುಕ್ತಗೊಳಿಸಿದೆ ಎಂದು ಪಿಟಿಐ ವರದಿ ಮಾಡಿದೆ.

ಗಂಡ ಸತ್ತರೆ ಆತನ ಅಂತ್ಯಕ್ರಿಯೆಯ ವೇಳೆ ಹೆಂಡತಿಯೂ ಚಿತೆಗೆ ಹಾರಿ ಪ್ರಾಣ ಬಿಡಬೇಕೆಂಬ ಬಲವಂತ ಈ ಅನಿಷ್ಟ ಪದ್ದತಿಯನ್ನು 1829 ರಲ್ಲಿ ನಿಷೇಧಿಸಲಾಗಿದೆ.

ವರದಿಗಳ ಪ್ರಕಾರ, ಕೊನೆಯದಾಗಿ ಸೆಪ್ಟೆಂಬರ್ 4, 1987ರಂದು ರಾಜಸ್ಥಾನದಲ್ಲಿ ಸತಿ ಪದ್ದತಿ ಆಚರಣೆ ಸಂಬಂಧ ಪ್ರಕರಣವೊಂದು ದಾಖಲಾಗಿತ್ತು. ರೂಪ್ ಕನ್ವರ್ ಎಂಬ ಮಹಿಳೆಯನ್ನು ಆಕೆಯ ಗಂಡನ ಅಂತ್ಯಕ್ರಿಯೆ ವೇಳೆ ಬಲವಂತವಾಗಿ ಚಿತೆಗೆ ತಳ್ಳಿ ಸಜೀವ ದಹನ ಮಾಡಲಾಗಿತ್ತು.

1988ರಲ್ಲಿ, ಈ ಸಂಬಂಧ ಒಟ್ಟು 45 ಮಂದಿಯ ವಿರುದ್ಧ ಪ್ರಕರಣ ದಾಖಲಿಸಲಾಗಿತ್ತು. ಕಮಿಷನ್ ಆಫ್ ಸತಿ ಪ್ರಿವೆನ್ಶನ್ ಆಕ್ಟ್- 1987 ರ ಸೆಕ್ಷನ್ 5 ಅನ್ನು ಉಲ್ಲಂಘಿಸಿದ ಆರೋಪವನ್ನು ಅವರ ಮೇಲೆ ಹೊರಿಸಲಾಗಿತ್ತು. ಸೆಕ್ಷನ್ 5 ಸತಿ ಸಹಗಮನ ಪದ್ದತಿಯ ಆಚರಣೆಯ ವೈಭವೀಕರಣ ಅಥವಾ ಪ್ರಚಾರ ಮಾಡುವುದಕ್ಕೆ ಶಿಕ್ಷೆಯನ್ನು ಸೂಚಿಸುತ್ತದೆ.

ಬುಧವಾರ, ನ್ಯಾಯಾಲಯವು 45 ಆರೋಪಿಗಳಲ್ಲಿ ಎಂಟು ಜನರನ್ನು ದೋಷಮುಕ್ತಗೊಳಿಸಿದೆ ಎಂದು ಪರ ಅವರ ವಕೀಲ ಅಮನ್ ಚೈನ್ ಸಿಂಗ್ ಶೇಖಾವತ್ ಹೇಳಿದ್ದಾಗಿ ದಿ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

ಆರೋಪಿಗಳ ಪರ ವಕೀಲರ ಪ್ರಕಾರ, ಕಮಿಷನ್ ಆಫ್ ಸತಿ ಪ್ರಿವೆನ್ಶನ್ ಆಕ್ಟ್- 1987 ರ ಸೆಕ್ಷನ್ 5 ಸತಿ ಸಹಗಮನ ಪದ್ದತಿಯ ವೈಭವೀಕರಣ ಅಥವಾ ಪ್ರಚಾರಕ್ಕೆ ಸಂಬಂಧಿಸಿದ್ದಾಗಿದೆ. ಅದಕ್ಕೂ ಮುನ್ನ ಸೆಕ್ಷನ್ 3ರ ಅಡಿ ಸತಿ ಸಹಗಮನ ನಡೆದಿದೆ ಎಂಬುವುದು ರುಜುವಾತಾಗಬೇಕಿದೆ. ಪ್ರಾಸಿಕ್ಯೂಷನ್ ಸೆಕ್ಷನ್ 3ರಡಿ ಸತಿ ಸಹಗಮನ ನಡೆದಿರುವುದನ್ನು ದೃಢೀಕರಿಸುವಲ್ಲಿ ವಿಫಲವಾಗಿದೆ. ಹಾಗಾಗಿ, ನ್ಯಾಯಾಲಯ ಆರೋಪಿಗಳನ್ನು ಖುಲಾಸೆಗೊಳಿಸಿದೆ.

ಮಹೇಂದ್ರ ಸಿಂಗ್, ಶ್ರವಣ್ ಸಿಂಗ್, ನಿಹಾಲ್ ಸಿಂಗ್, ಜಿತೇಂದ್ರ ಸಿಂಗ್, ಉದಯ್ ಸಿಂಗ್, ದಶರಥ್ ಸಿಂಗ್, ಲಕ್ಷ್ಮಣ್ ಸಿಂಗ್ ಮತ್ತು ಭನ್ವರ್ ಸಿಂಗ್ ಖುಲಾಸೆಗೊಂಡ ಆರೋಪಿಗಳು. ಇವರಿಗೆ ಈ ಪ್ರಕರಣದಲ್ಲಿ ಈಗಾಗಲೇ ಜಾಮೀನು ಕೂಡ ಸಿಕ್ಕಿತ್ತು.

ಪ್ರಕರಣದ 25 ಮಂದಿ ಆರೋಪಿಗಳನ್ನು ಸಾಕ್ಷ್ಯಾಧಾರದ ಕೊರತೆಯಿಂದ 2004ರಲ್ಲಿ ಖುಲಾಸೆಗೊಳಿಸಲಾಗಿದೆ. ಇನ್ನೂ ನಾಲ್ವರು ತಲೆಮರೆಸಿಕೊಂಡಿದ್ದು, ಉಳಿದ ಎಂಟು ಮಂದಿ ಸಾವನ್ನಪ್ಪಿದ್ದಾರೆ.

ಈ ವರದಿಯಲ್ಲಿ ಉಲ್ಲೇಖಿಸಿದ ಪ್ರಕರಣವನ್ನು ಭಾರತದಲ್ಲಿ ವರದಿಯಾದ ಕೊನೆಯ ಸತಿ ಸಹಗಮನ ಪ್ರಕರಣ ಎಂದು ಹೇಳಲಾಗುತ್ತಿದೆ. ಆದರೆ, ವಾಸ್ತವತೆ ಬೇರೆಯೇ ಇದೆ. ನೇರವಾಗಿ ನಡೆಯದಿದ್ದರೂ, ವಿವಿಧ ರೂಪಗಳಲ್ಲಿ ಈ ಅನಿಷ್ಟ ಪದ್ದತಿ ಈಗಲೂ ಚಾಲ್ತಿಯಲ್ಲಿದೆ. ಅದನ್ನು ದೃಢೀಕರಿಸುವ ಘಟನೆಗಳು ಹಲವು ಭಾರೀ ನಡೆದಿದೆ. ಕಳೆದ ವರ್ಷ ಗುಜರಾತ್‌ನಲ್ಲಿ ನಡೆದ ಘಟನೆಯ ವರದಿಯೊಂದು ಕೆಳಗಿದೆ.

ಅನಿಷ್ಟ ಸತಿ ಪದ್ದತಿ ಇನ್ನೂ ಜೀವಂತ: ಸತಿ ಹಾರಬೇಕೆಂಬ ಒತ್ತಡಕ್ಕೆ ಬೇಸೆತ್ತು ಇಂಜಿನಿಯರ್ ಮಹಿಳೆ ಆತ್ಮಹತ್ಯೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಡದಿ ಟೌನ್‌ಶಿಪ್: 80% ರೈತರ ಒಪ್ಪಿಗೆ ಇದೆ ಎಂಬ ವಾದ ಸಾಬೀತುಪಡಿಸಿ – ಸರ್ಕಾರಕ್ಕೆ ಸಂಯುಕ್ತ ಹೋರಾಟ ಸವಾಲು

ಬಿಡದಿ ಟೌನ್‌ಶಿಪ್ ಯೋಜನೆಗೆ ಭೂಮಿ ನೀಡಲು ಉದ್ದೇಶಿತ ಪ್ರದೇಶದ ಶೇಕಡಾ 80 ರಷ್ಟು ರೈತರು ಒಪ್ಪಿದ್ದಾರೆ ಎಂಬ ಸರ್ಕಾರದ ವಾದಕ್ಕೆ ಯಾವುದೇ ವಾಸ್ತವಿಕ ಆಧಾರವಿಲ್ಲ. ಸರ್ಕಾರಕ್ಕೆ ಧೈರ್ಯವಿದ್ದರೆ ತನ್ನ ಈ ಹೇಳಿಕೆಯನ್ನು ಜನರ...

ವಿದ್ಯಾರ್ಥಿಗಳ ಮೇಲಿನ ಪೊಲೀಸ್ ದೌರ್ಜನ್ಯ: ವಿಚಾರಣೆ ತಿರಸ್ಕರಿಸಿದ ಸುಪ್ರೀಂ; “ವಿಡಿಯೋ ನೋಡಲು ನಮಗೆ ಆಸಕ್ತಿಯೂ ಇಲ್ಲ, ಸಮಯವೂ ಇಲ್ಲ” ಎಂದ ನ್ಯಾಯಮೂರ್ತಿ ಸೂರ್ಯಕಾಂತ್

ನವದೆಹಲಿ: ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಶಾಂತಿಯುತವಾಗಿ ಹೋರಾಡುತ್ತಿದ್ದ ಯುವ ಸಮೂಹದ ಮೇಲೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯದ ವಿರುದ್ಧ ನ್ಯಾಯದ ನಿರೀಕ್ಷೆಯಲ್ಲಿದ್ದ ವಿದ್ಯಾರ್ಥಿಗಳಿಗೆ ದೇಶದ ಅತ್ಯುನ್ನತ ನ್ಯಾಯಾಲಯದಿಂದ...

ರಾಹುಲ್ ಗಾಂಧಿ ವಿದ್ಯಾರ್ಥಿಗಳನ್ನು ‘ರಾಜಕೀಯ ದಾಳ’ವಾಗಿ ಬಳಸುತ್ತಿದ್ದಾರೆ ಎಂದ ಧರ್ಮೇಂದ್ರ ಪ್ರಧಾನ್ ವಿರುದ್ಧ ವ್ಯಾಪಕ ಆಕ್ರೋಶ

ನವದೆಹಲಿ: ದೇಶಾದ್ಯಂತ ನೀಟ್ (NEET) ಪರೀಕ್ಷೆಯ ಅಕ್ರಮಗಳು, ಪ್ರಶ್ನೆಪತ್ರಿಕೆ ಸೋರಿಕೆ ಹಾಗೂ ಶಿಕ್ಷಣ ಇಲಾಖೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ವಿದ್ಯಾರ್ಥಿಗಳು ಮತ್ತು ವಿರೋಧ ಪಕ್ಷಗಳು ತೀವ್ರ ಪ್ರತಿಭಟನೆ ನಡೆಸುತ್ತಿದ್ದು, ಶಿಕ್ಷಣ ಸಚಿವ ಧರ್ಮೇಂದ್ರ...

ಸಿಜೆಪಿ ಪ್ರತಿಭಟನಾಕಾರರ ಮೇಲೆ ಪೆಲೆಟ್ ಗನ್ ಬಳಕೆ, ವಿದ್ಯುತ್ ಲಾಠಿ ಪ್ರಹಾರ: ಆರೋಪ ನಿರಾಕರಿಸಿದ ಪೊಲೀಸರು

ಸೋಮವಾರ (ಜುಲೈ 20) ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಕರೆ ನೀಡಿದ್ದ ಸಂಸತ್ ಚಲೋ ಮೆರವಣಿ ಸಂದರ್ಭದಲ್ಲಿ ನಡೆದ ಪೊಲೀಸರ ದೌರ್ಜನ್ಯದಲ್ಲಿ ಗಾಯಗೊಂಡ 80 ಪ್ರತಿಭಟನಾಕಾರರಲ್ಲಿ ಕನಿಷ್ಠ ಒಬ್ಬರಿಗೆ ಪೆಲೆಟ್ ಗನ್ ಗಾಯಗಳಾಗಿವೆ...

ಪ್ರತಿಭಟನಾನಿರತ ಮಹಿಳೆಯ ಕೆನ್ನೆಗೆ ಹೊಡೆದ ದೆಹಲಿ ಪೊಲೀಸ್ ಅಧಿಕಾರಿ ಸಂದೀಪ್ ಲಂಬಾ: ವಿಡಿಯೋ ವೈರಲ್ ನಂತರ ವ್ಯಾಪಕ ಟೀಕೆ

ದೆಹಲಿ: ಶಾಂತಿಯುತವಾಗಿ ತಮ್ಮ ಹಕ್ಕುಗಳಿಗಾಗಿ ಹೋರಾಡುತ್ತಿದ್ದ ಪ್ರತಿಭಟನಾಕಾರರ ಮೇಲೆ ದೆಹಲಿ ಪೊಲೀಸರು ನಡೆಸಿದ ಕ್ರೂರ ದಮನ ಕಾರ್ಯಾಚರಣೆಯ ಭೀಕರ ಮುಖವಾಡವೊಂದು ಮತ್ತೆ ಜಗಜ್ಜಾಹೀರಾಗಿದೆ. ಸೋಮವಾರ ಸಂಸತ್ತಿನ ಮೆರವಣಿಗೆಯಲ್ಲಿ ಭಾಗವಹಿಸಿದ್ದ ಪ್ರತಿಭಟನಾಕಾರರನ್ನು ಹತ್ತಿಕ್ಕುವ ನೆಪದಲ್ಲಿ,...

‘ಪೊಲೀಸರನ್ನು ನಿಯಂತ್ರಿಸದಿದ್ದರೆ ಜರ್ಮನಿಯ ನಾಜಿಗಳಂತೆ ಆಗಬಹುದು’: ದಲಿತ ವ್ಯಕ್ತಿಯ ಮೇಲಿನ ದೌರ್ಜನ್ಯ ಪ್ರಕರಣದಲ್ಲಿ ಪಾಟ್ನಾ ಹೈಕೋರ್ಟ್ ಕಳವಳ

ದಲಿತ ವ್ಯಕ್ತಿಯೊಬ್ಬರ ಜಾತಿ ತಿಳಿದ ನಂತರ ಅವರ ಮೇಲೆ ಕ್ರೂರವಾಗಿ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಬಿಹಾರದ ಮಾಜಿ ಪೊಲೀಸ್ ಅಧಿಕಾರಿಯ ವಿರುದ್ಧ ತಕ್ಷಣವೇ ಎಫ್‌ಐಆರ್ (FIR) ದಾಖಲಿಸುವಂತೆ ಪಾಟ್ನಾ ಹೈಕೋರ್ಟ್ ನಿರ್ದೇಶಿಸಿದೆ....

“ಎಷ್ಟೊಂದು ದುರಹಂಕಾರ!”: ಜೆ.ಪಿ.ನಡ್ಡಾ ಹೇಳಿಕೆಗೆ ಕಪಿಲ್ ಸಿಬಲ್ ತೀವ್ರ ಆಕ್ಷೇಪ; ಪ್ರತಿಭಟನಾನಿರತ ಸಿಜೆಪಿ ಬೆಂಬಲಿಸಿ ವೀಡಿಯೋ ಸಂದೇಶ

ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಕ್ರಾಂತಿಕಾರಿ ಜಿರಳೆ ಜನತಾ ಪಕ್ಷ (ಸಿಜೆಪಿ) ನಡೆಸುತ್ತಿರುವ ವಿದ್ಯಾರ್ಥಿ ಪ್ರತಿಭಟನೆಯ ವಿಚಾರದಲ್ಲಿ ಕೇಂದ್ರ ಸರ್ಕಾರದ ನಡೆಗೆ ದೇಶಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ. ಈ ನಡುವೆ ಕೇಂದ್ರ ಸಚಿವ ಜೆ.ಪಿ....

ವಿದ್ಯಾರ್ಥಿಗಳ ಮೇಲೆ ಪೊಲೀಸ್ ದೌರ್ಜನ್ಯ: ಮೋದಿ-ಅಮಿತ್ ಶಾ ರಾಜೀನಾಮೆಗೆ ರಾಹುಲ್ ಗಾಂಧಿ ಆಗ್ರಹ

ನೀಟ್‌ ಪ್ರಶ್ನೆ ಪತ್ರಿಕೆ ಸೋರಿಕೆ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ 'ಸಂಸತ್ ಚಲೋ' ಹಮ್ಮಿಕೊಂಡಿದ್ದ ವಿದ್ಯಾರ್ಥಿಗಳ ಮೇಲೆ ನಡೆದ ಪೊಲೀಸ್ ದೌರ್ಜನ್ಯವನ್ನು ಕಾಂಗ್ರೆಸ್ ನಾಯಕ ರಾಹುಲ್...

ಕೇಂದ್ರ ಸಚಿವ ಜೆ.ಪಿ.ನಡ್ಡಾ ಅವರನ್ನು ಭೇಟಿಯಾದ ಸಿಜೆಪಿ ನಿಯೋಗ; ಮನವಿ ಪತ್ರ ಸಲ್ಲಿಕೆ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಆಗ್ರಹಿಸಿ ನವದೆಹಲಿಯಲ್ಲಿ ಪ್ರತಿಭಟನೆ ತೀವ್ರಗೊಂಡಿರುವ ಬೆನ್ನಲ್ಲೇ ಇಂದು ಕೇಂದ್ರ ಸಚಿವ ಜೆಪಿ ನಡ್ಡಾ ಅವರನ್ನು ಸಿಜೆಪಿ ಸದಸ್ಯರಾದ ಸೌರವ್ ದಾಸ್ ಮತ್ತು ಅಶುತೋಷ್ ರಂಕಾ...

‘ಸಂಸತ್ ಚಲೋ’: ‘ಸೋನಮ್ ವಾಂಗ್ಚುಕ್ ಪತ್ನಿ ಮೇಲೆ ದೆಹಲಿ ಪೊಲೀಸರಿಂದ ಹಲ್ಲೆ’: ವಿದ್ಯಾರ್ಥಿಗಳ ಮೇಲೂ ಲಾಠಿ ಚಾರ್ಜ್  

ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಆಯೋಜಿಸಲಾಗಿದ್ದ ‘ಸಂಸದ್ ಚಲೋ’ ಮೆರವಣಿಗೆಯ ವೇಳೆ ಶಿಕ್ಷಣ ತಜ್ಞ ಹಾಗೂ ಲಡಾಖ್ ಹೋರಾಟಗಾರ ಸೋನಮ್ ವಾಂಗ್ಚುಕ್ ಅವರ ಪತ್ನಿ ಗೀತಾಂಜಲಿ ಜೆ. ಆಂಗ್ಮೋ ಸೇರಿದಂತೆ ಹಲವಾರು ಪ್ರತಿಭಟನಾಕಾರರ ಮೇಲೆ...