Homeಕರ್ನಾಟಕಅಪ್ಪು ಫೋಟೋ ಮುಂದೆ ಶಾಂಪೇನ್ ಸಂಭ್ರಮ: ಕ್ಷಮೆಯಾಚಿಸಿದ ನಿರ್ದೇಶಕ, ನಟ, ನಟಿಯರು

ಅಪ್ಪು ಫೋಟೋ ಮುಂದೆ ಶಾಂಪೇನ್ ಸಂಭ್ರಮ: ಕ್ಷಮೆಯಾಚಿಸಿದ ನಿರ್ದೇಶಕ, ನಟ, ನಟಿಯರು

’ಏಕ್ ಲವ್ ಯಾ’ ಚಿತ್ರದ ಹಾಡು ಬಿಡುಗಡೆ ವೇಳೆ ಪುನೀತ್ ಭಾವಚಿತ್ರದ ಮುಂದೆ ಶಾಂಪೇನ್ ಬಾಟಲ್ ಓಪನ್ ಮಾಡಿ ಸಂಭ್ರಮಿಸಲಾಗಿತ್ತು.

- Advertisement -
- Advertisement -

ಏಕ್‌ ಲವ್ ಯಾ ಚಿತ್ರದ ಹಾಡು ಬಿಡುಗಡೆ ಕಾರ್ಯಕ್ರಮದ ವೇಳೆ ಇತ್ತಿಚೆಗೆ ನಮ್ಮನ್ನಗಲಿದ ನಟ ಪುನೀತ್ ರಾಜ್‌ಕುಮಾರ್‌ ಭಾವಚಿತ್ರದ ಎದುರು ಶಾಂಪೇನ್ ಓಪನ್ ಮಾಡಿ ಸಂಭ್ರಮಿಸಿ ಅವರನ್ನು ಅವಮಾನಿಸಲಾಗಿದೆ ಎಂದು ಆಕ್ರೋಶ ವ್ಯಕ್ತವಾಗಿದೆ. ಚಿತ್ರತಂಡ ಕ್ಷಮೆ ಕೇಳಬೇಕು ಎಂದು ಹಲವು ಮಂದಿ ಒತ್ತಾಯಿಸಿದ್ದರು.

ಚಿತ್ರದ ನಿರ್ದೇಶಕ ಪ್ರೇಮ್, ನಿರ್ಮಾಪಕಿ ರಕ್ಷಿತಾ ಪ್ರೇಮ್, ನಟಿ ರಚಿತಾ ರಾಮ್ ಸೇರಿದಂತೆ ಚಿತ್ರತಂಡ ಜನರ ಕ್ಷಮೆ ಕೇಳಿದ್ದಾರೆ. ಶುಕ್ರವಾರ ಬೆಂಗಳೂರಿನ ತಾಜ್ ವೆಸ್ಟ್‌ ಎಂಡ್ ಹೋಟೆಲ್‌ನಲ್ಲಿ ಏಕ್ ಲವ್ ಯಾ ಚಿತ್ರದ “ಎಣ್ಣೆಗೂ ಹೆಣ್ಣಿಗೂ ಎಲ್ಲಿಂದ ಲಿಂಕ್ ಇಟ್ಟೆ” ಹಾಡು ಬಿಡುಗಡೆಯಾಗಿದೆ. ಈ ವೇಳೆ ಚಿತ್ರತಂಡ ಅಪ್ಪು ಅವರನ್ನು ಅವಮಾನಿಸಿದ್ದಾರೆ ಎಂದು ಅಭಿಮಾನಿಗಳು ಸೇರಿದಂತೆ ಚಿತ್ರರಂಗದ ಹಲವರು ಬೇಸರ ವ್ಯಕ್ತಪಡಿಸಿದ್ದರು.

ಕಾರ್ಯಕ್ರಮದಲ್ಲಿ ವೇದಿಎ ಮೇಳೆ ಮೊದಲಿಗೆ ಪುನೀತ್ ರಾಜ್‌ಕುಮಾರ್‌ ಅವರ ಭಾವಚಿತ್ರವನ್ನಿಟ್ಟು ಶ್ರದ್ಧಾಂಜಲಿ ಸಲ್ಲಿಸಲಾಗಿತ್ತು. ಬಳಿಕ ಅದೇ ಭಾವಚಿತ್ರದ ಮುಂದೆ ನಿರೂಪಕ ಅಕುಲ್ ಬಾಲಾಜಿ, ನಟಿಯರಾದ ರಚಿತಾ ರಾಮ್, ರಕ್ಷಿತಾ ಪ್ರೇಮ್, ನಿಶ್ವಿಕಾ ನಾಯ್ಡು, ಗಾಯಕಿ ಮಂಗ್ಲಿ ಶಾಂಪೇನ್ ಬಾಟಲ್ ಹಿಡಿದು ಸಮಭ್ರಮಿಸಿದ್ದರು. ಈ ವೇಳೆ ಹಿಂದಿನ ಸ್ಕ್ರೀನ್‌ನಲ್ಲಿ ನಟ ಪುನೀತ್ ಪೋಟೋ ಕೂಡ ಕಾಣಿಸಿಕೊಂಡಿತ್ತು. ಇದೆಲ್ಲಾ ಅಪ್ಪು ಅಭಿಮಾನಿಗಳ ಆಕ್ರೋಶಕ್ಕೆ ಕಾರಣವಾಗಿತ್ತು.

ಇದನ್ನೂ ಓದಿ: ಪುನೀತ್ ರಾಜಕುಮಾರ್ ನುಡಿನಮನ; ಮುಗ್ಧ ನಗುವೊಂದರ ಕಣ್ಮರೆ

ಕರ್ನಾಟಕ ವಾಣಿಜ್ಯ ಮಂಡಳಿಯ ಮಾಜಿ ಅಧ್ಯಕ, ನಿರ್ಮಾಪಕ ಸಾ.ರಾ.ಗೋವಿಂದು ಕೂಡ ’ಏಕ್ ಲವ್ ಯಾ’ ಚಿತ್ರರಂಗದ  ವರ್ತನೆಗೆ ಆಕ್ಷೇಪ ವ್ಯಕ್ತಪಡಿಸಿದ್ದರು. ’ನಮ್ಮ ಚಿತ್ರರಂಗದವರೇ ಇಂಥ ಕೆಲಸ ಮಾಡಿದರೆ ನಾವು ಯಾರ ಮೇಲೆ ಆಪಾದನೆ ಮಾಡೋದು? ದಯವಿಟ್ಟು ಇಂಥದ್ದನ್ನೆಲ್ಲ ಮಾಡಬೇಡಿ. ಪುನೀತ್​ ನಮ್ಮಿಂದ ದೂರವಾಗಿರಬಹುದು. ಅವರಿಗೆ ಅವಮಾನ ಆಗುವಂತಹ ಕೆಲಸವನ್ನು ಮಾಡಬೇಡಿ. ಪುನೀತ್​ಗೆ ಅವಮಾನ ಆಗುವಂತೆ ನಮ್ಮ ಚಿತ್ರರಂಗದವರು ನಡೆದುಕೊಂಡಿರುವು ನಾವೆಲ್ಲರೂ ತಲೆ ತಗ್ಗಿಸುವಂತೆ ಆಗಿದೆ’ ಎಂದು ಬೇಸರ ವ್ಯಕ್ತಪಡಿಸಿದ್ದರು.

ವಿವಾದ ಹೆಚ್ಚಾದ ಬಳಿಕ ಚಿತ್ರದ ನಿರ್ದೇಶಕ ಪ್ರೇಮ್, ನಿರ್ಮಾಪಕಿ ರಕ್ಷಿತಾ ಪ್ರೇಮ್, ನಟಿ ರಚಿತಾ ರಾಮ್ ಸೇರಿದಂತೆ ಚಿತ್ರತಂಡ ಜನರ ಕ್ಷಮೆ ಕೇಳಿದ್ದಾರೆ.

 

“ಅಪ್ಪು ಅವರ ಅಗಲಿಕೆಯ ನೋವು ಇನ್ನೂ ನಮ್ಮ ಮನಸ್ಸಿನಲ್ಲಿದೆ. ಆ ಕಾರಣಕ್ಕೆ ನ.4 ಕ್ಕೆ ಬಿಡುಗಡೆಯಾಗಬೇಕಿದ್ದ ಏಕ್ ಲವ್ ಯಾ ಸಿನಿಮಾದ ಹಾಡನ್ನು ನ.12 ಕ್ಕೆ ಬಿಡುಗಡೆ ಮಾಡಲಾಯಿತು. ಸಮಾರಂಭದ ಉದ್ಘಾಟನೆಯೇ ಅಪ್ಪು ಅವರನ್ನು ನೆನೆಯುತ್ತಾ, ಅವರ ವ್ಯಕ್ತಿತ್ವ, ಅವರ ಜೊತೆಗೆ ಕಳೆದ ಕ್ಷಣಗಳ ನೆನೆಯುತ್ತಾ ಶುರುವಾಯಿತು. ಈ ಹಾಡು ಶುರುವಾಗುವುದೇ ಅಪ್ಪು ಅಮರ ಎಂದು. ಅಪ್ಪು ಅವರ ಫೋಟೋ ಮುಂದೆ ಶಾಂಪೇನ್ ಓಪನ್ ಮಾಡಿದ ಉದ್ದೇಶ ಕೇವಲ ಹಾಡು ಬಿಡುಗಡೆಯ ಅಂಗವಾಗಿ. ಇದರಿಂದ ಅಪ್ಪು ಅವರ ಅಭಿಮಾನಿಗಳಿಗೆ ನೋವಾಗಿದ್ದಲ್ಲಿ ನನ್ನ ಹಾಗೂ ನನ್ನ ಇಡೀ ’ಏಕ್ ಲವ್ ಯಾ’ ಚಿತ್ರತಂಡದಿಂದ ಕ್ಷಮೆಯಾಚಿಸುತ್ತೇವೆ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಪುನೀತ್ ರಾಜಕುಮಾರ್ ‘ನಮ್ಮ ಅಪ್ಪು’ ಆದದ್ದು..: ಕೆ.ಫಣಿರಾಜ್

ನಟಿ ರಚಿತಾ ರಾಮ್ ಕೂಡ ಕ್ಷಮೆ ಕೇಳಿದ್ದಾರೆ.

“ನಿನ್ನೆಯ ಏಕ್​ ಲವ್​ ಯಾ ಸಿನಿಮಾದ ಸಾಂಗ್​ ಲಾಂಚ್​ ಕಾರ್ಯಕ್ರಮದಲ್ಲಿ ಶಾಂಪೇನ್​ ಬಾಟಲ್​ ಓಪನ್​ ಮಾಡಿ ಹಾಡನ್ನು ಬಿಡುಗಡೆಗೊಳಿಸಿರುವ ಬಗ್ಗೆ ನಿಮ್ಮೆಲ್ಲರಿಗೆ ಅಸಮಾಧಾನ ಆಗಿದೆ. ಆ ಬಗ್ಗೆ ದಯವಿಟ್ಟು ಕ್ಷಮೆ ಇರಲಿ. ನಾನೂ ಕೂಡ ಚಿತ್ರದ ಭಾಗವಾಗಿರುವುದರಿಂದ ಕ್ಷಮೆ ಕೇಳುತ್ತೇನೆ. ಅಪ್ಪು ಅವರಿಗೆ ಅವಮಾನ ಮಾಡುವ ಉದ್ದೇಶ, ಆಲೋಚನೆ ಯಾವ ಕನ್ನಡಿಗರಿಗೂ ಇರುವುದಿಲ್ಲ. ಆದಾಗಿಯೂ ಉದ್ದೇಶಪೂರ್ವಕವಲ್ಲದ ತಪ್ಪನ್ನು ಅಭಿಮಾನಿಗಳು ಮನ್ನಿಸುತ್ತಾರೆಂದು ನಂಬಿದ್ದೇನೆ” ಎಂದು ರಚಿತಾ ರಾಮ್ ತಮ್ಮ ಸಾಮಾಜಿಕ ಜಾಲತಾಣದಲ್ಲಿ ಬರೆದಿದ್ದಾರೆ.

ಚಿತ್ರದ ನಿರ್ಮಾಪಕಿ ರಕ್ಷಿತಾ ಪ್ರೇಮ್ ಕೂಡ ’ಅಪ್ಪು ಅಗಲಿಕೆಯ ನೋವಿನಿಂದ ನಾನಿನ್ನೂ ಹೊರ ಬರಲು ಸಾಧ್ಯವಾಗುತ್ತಿಲ್ಲ. ಅಪ್ಪುಗೆ ಅವಮಾನ ಮಾಡಲು ಯಾರಿಂದಲೂ ಸಾಧ್ಯವಿಲ್ಲ. ಶಾಂಪೇನ್ ಬಾಟಲಿ ಓಪನ್ ಮಾಡಿದ್ದು ಅಪ್ಪು ಅಭಿಮಾನಿಗಳಲ್ಲಿ ಅಸಮಾಧಾನ ಉಂಟಾಗಿದ್ದರೆ ನನ್ನ ಮತ್ತು ಚಿತ್ರತಂಡದ ಕಡೆಯಿಂದ ಕ್ಷಮೆಯಾಚಿಸುತ್ತೇವೆ. ಅಪ್ಪು ಎಂದಿಗೂ ನಮ್ಮ ಮನಸ್ಸಿನಲ್ಲಿ ಇದ್ದಾರೆ’ ಎಂದು ಕ್ಷಮೆ ಕೇಳಿದ್ದಾರೆ.


ಇದ ಓದಿ: ಕನ್ನಡ ಚಿತ್ರರಂಗಕ್ಕೆ ಹೊಸ ಕ್ರಿಯಾಶೀಲತೆ ತಂದುಕೊಟ್ಟ ’ಅಪ್ಪು ಡ್ಯಾನ್ಸ್’

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...