Homeಕರ್ನಾಟಕಅಪ್ಪು ಫೋಟೋ ಮುಂದೆ ಶಾಂಪೇನ್ ಸಂಭ್ರಮ: ಕ್ಷಮೆಯಾಚಿಸಿದ ನಿರ್ದೇಶಕ, ನಟ, ನಟಿಯರು

ಅಪ್ಪು ಫೋಟೋ ಮುಂದೆ ಶಾಂಪೇನ್ ಸಂಭ್ರಮ: ಕ್ಷಮೆಯಾಚಿಸಿದ ನಿರ್ದೇಶಕ, ನಟ, ನಟಿಯರು

’ಏಕ್ ಲವ್ ಯಾ’ ಚಿತ್ರದ ಹಾಡು ಬಿಡುಗಡೆ ವೇಳೆ ಪುನೀತ್ ಭಾವಚಿತ್ರದ ಮುಂದೆ ಶಾಂಪೇನ್ ಬಾಟಲ್ ಓಪನ್ ಮಾಡಿ ಸಂಭ್ರಮಿಸಲಾಗಿತ್ತು.

- Advertisement -
- Advertisement -

ಏಕ್‌ ಲವ್ ಯಾ ಚಿತ್ರದ ಹಾಡು ಬಿಡುಗಡೆ ಕಾರ್ಯಕ್ರಮದ ವೇಳೆ ಇತ್ತಿಚೆಗೆ ನಮ್ಮನ್ನಗಲಿದ ನಟ ಪುನೀತ್ ರಾಜ್‌ಕುಮಾರ್‌ ಭಾವಚಿತ್ರದ ಎದುರು ಶಾಂಪೇನ್ ಓಪನ್ ಮಾಡಿ ಸಂಭ್ರಮಿಸಿ ಅವರನ್ನು ಅವಮಾನಿಸಲಾಗಿದೆ ಎಂದು ಆಕ್ರೋಶ ವ್ಯಕ್ತವಾಗಿದೆ. ಚಿತ್ರತಂಡ ಕ್ಷಮೆ ಕೇಳಬೇಕು ಎಂದು ಹಲವು ಮಂದಿ ಒತ್ತಾಯಿಸಿದ್ದರು.

ಚಿತ್ರದ ನಿರ್ದೇಶಕ ಪ್ರೇಮ್, ನಿರ್ಮಾಪಕಿ ರಕ್ಷಿತಾ ಪ್ರೇಮ್, ನಟಿ ರಚಿತಾ ರಾಮ್ ಸೇರಿದಂತೆ ಚಿತ್ರತಂಡ ಜನರ ಕ್ಷಮೆ ಕೇಳಿದ್ದಾರೆ. ಶುಕ್ರವಾರ ಬೆಂಗಳೂರಿನ ತಾಜ್ ವೆಸ್ಟ್‌ ಎಂಡ್ ಹೋಟೆಲ್‌ನಲ್ಲಿ ಏಕ್ ಲವ್ ಯಾ ಚಿತ್ರದ “ಎಣ್ಣೆಗೂ ಹೆಣ್ಣಿಗೂ ಎಲ್ಲಿಂದ ಲಿಂಕ್ ಇಟ್ಟೆ” ಹಾಡು ಬಿಡುಗಡೆಯಾಗಿದೆ. ಈ ವೇಳೆ ಚಿತ್ರತಂಡ ಅಪ್ಪು ಅವರನ್ನು ಅವಮಾನಿಸಿದ್ದಾರೆ ಎಂದು ಅಭಿಮಾನಿಗಳು ಸೇರಿದಂತೆ ಚಿತ್ರರಂಗದ ಹಲವರು ಬೇಸರ ವ್ಯಕ್ತಪಡಿಸಿದ್ದರು.

ಕಾರ್ಯಕ್ರಮದಲ್ಲಿ ವೇದಿಎ ಮೇಳೆ ಮೊದಲಿಗೆ ಪುನೀತ್ ರಾಜ್‌ಕುಮಾರ್‌ ಅವರ ಭಾವಚಿತ್ರವನ್ನಿಟ್ಟು ಶ್ರದ್ಧಾಂಜಲಿ ಸಲ್ಲಿಸಲಾಗಿತ್ತು. ಬಳಿಕ ಅದೇ ಭಾವಚಿತ್ರದ ಮುಂದೆ ನಿರೂಪಕ ಅಕುಲ್ ಬಾಲಾಜಿ, ನಟಿಯರಾದ ರಚಿತಾ ರಾಮ್, ರಕ್ಷಿತಾ ಪ್ರೇಮ್, ನಿಶ್ವಿಕಾ ನಾಯ್ಡು, ಗಾಯಕಿ ಮಂಗ್ಲಿ ಶಾಂಪೇನ್ ಬಾಟಲ್ ಹಿಡಿದು ಸಮಭ್ರಮಿಸಿದ್ದರು. ಈ ವೇಳೆ ಹಿಂದಿನ ಸ್ಕ್ರೀನ್‌ನಲ್ಲಿ ನಟ ಪುನೀತ್ ಪೋಟೋ ಕೂಡ ಕಾಣಿಸಿಕೊಂಡಿತ್ತು. ಇದೆಲ್ಲಾ ಅಪ್ಪು ಅಭಿಮಾನಿಗಳ ಆಕ್ರೋಶಕ್ಕೆ ಕಾರಣವಾಗಿತ್ತು.

ಇದನ್ನೂ ಓದಿ: ಪುನೀತ್ ರಾಜಕುಮಾರ್ ನುಡಿನಮನ; ಮುಗ್ಧ ನಗುವೊಂದರ ಕಣ್ಮರೆ

ಕರ್ನಾಟಕ ವಾಣಿಜ್ಯ ಮಂಡಳಿಯ ಮಾಜಿ ಅಧ್ಯಕ, ನಿರ್ಮಾಪಕ ಸಾ.ರಾ.ಗೋವಿಂದು ಕೂಡ ’ಏಕ್ ಲವ್ ಯಾ’ ಚಿತ್ರರಂಗದ  ವರ್ತನೆಗೆ ಆಕ್ಷೇಪ ವ್ಯಕ್ತಪಡಿಸಿದ್ದರು. ’ನಮ್ಮ ಚಿತ್ರರಂಗದವರೇ ಇಂಥ ಕೆಲಸ ಮಾಡಿದರೆ ನಾವು ಯಾರ ಮೇಲೆ ಆಪಾದನೆ ಮಾಡೋದು? ದಯವಿಟ್ಟು ಇಂಥದ್ದನ್ನೆಲ್ಲ ಮಾಡಬೇಡಿ. ಪುನೀತ್​ ನಮ್ಮಿಂದ ದೂರವಾಗಿರಬಹುದು. ಅವರಿಗೆ ಅವಮಾನ ಆಗುವಂತಹ ಕೆಲಸವನ್ನು ಮಾಡಬೇಡಿ. ಪುನೀತ್​ಗೆ ಅವಮಾನ ಆಗುವಂತೆ ನಮ್ಮ ಚಿತ್ರರಂಗದವರು ನಡೆದುಕೊಂಡಿರುವು ನಾವೆಲ್ಲರೂ ತಲೆ ತಗ್ಗಿಸುವಂತೆ ಆಗಿದೆ’ ಎಂದು ಬೇಸರ ವ್ಯಕ್ತಪಡಿಸಿದ್ದರು.

ವಿವಾದ ಹೆಚ್ಚಾದ ಬಳಿಕ ಚಿತ್ರದ ನಿರ್ದೇಶಕ ಪ್ರೇಮ್, ನಿರ್ಮಾಪಕಿ ರಕ್ಷಿತಾ ಪ್ರೇಮ್, ನಟಿ ರಚಿತಾ ರಾಮ್ ಸೇರಿದಂತೆ ಚಿತ್ರತಂಡ ಜನರ ಕ್ಷಮೆ ಕೇಳಿದ್ದಾರೆ.

 

“ಅಪ್ಪು ಅವರ ಅಗಲಿಕೆಯ ನೋವು ಇನ್ನೂ ನಮ್ಮ ಮನಸ್ಸಿನಲ್ಲಿದೆ. ಆ ಕಾರಣಕ್ಕೆ ನ.4 ಕ್ಕೆ ಬಿಡುಗಡೆಯಾಗಬೇಕಿದ್ದ ಏಕ್ ಲವ್ ಯಾ ಸಿನಿಮಾದ ಹಾಡನ್ನು ನ.12 ಕ್ಕೆ ಬಿಡುಗಡೆ ಮಾಡಲಾಯಿತು. ಸಮಾರಂಭದ ಉದ್ಘಾಟನೆಯೇ ಅಪ್ಪು ಅವರನ್ನು ನೆನೆಯುತ್ತಾ, ಅವರ ವ್ಯಕ್ತಿತ್ವ, ಅವರ ಜೊತೆಗೆ ಕಳೆದ ಕ್ಷಣಗಳ ನೆನೆಯುತ್ತಾ ಶುರುವಾಯಿತು. ಈ ಹಾಡು ಶುರುವಾಗುವುದೇ ಅಪ್ಪು ಅಮರ ಎಂದು. ಅಪ್ಪು ಅವರ ಫೋಟೋ ಮುಂದೆ ಶಾಂಪೇನ್ ಓಪನ್ ಮಾಡಿದ ಉದ್ದೇಶ ಕೇವಲ ಹಾಡು ಬಿಡುಗಡೆಯ ಅಂಗವಾಗಿ. ಇದರಿಂದ ಅಪ್ಪು ಅವರ ಅಭಿಮಾನಿಗಳಿಗೆ ನೋವಾಗಿದ್ದಲ್ಲಿ ನನ್ನ ಹಾಗೂ ನನ್ನ ಇಡೀ ’ಏಕ್ ಲವ್ ಯಾ’ ಚಿತ್ರತಂಡದಿಂದ ಕ್ಷಮೆಯಾಚಿಸುತ್ತೇವೆ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಪುನೀತ್ ರಾಜಕುಮಾರ್ ‘ನಮ್ಮ ಅಪ್ಪು’ ಆದದ್ದು..: ಕೆ.ಫಣಿರಾಜ್

ನಟಿ ರಚಿತಾ ರಾಮ್ ಕೂಡ ಕ್ಷಮೆ ಕೇಳಿದ್ದಾರೆ.

“ನಿನ್ನೆಯ ಏಕ್​ ಲವ್​ ಯಾ ಸಿನಿಮಾದ ಸಾಂಗ್​ ಲಾಂಚ್​ ಕಾರ್ಯಕ್ರಮದಲ್ಲಿ ಶಾಂಪೇನ್​ ಬಾಟಲ್​ ಓಪನ್​ ಮಾಡಿ ಹಾಡನ್ನು ಬಿಡುಗಡೆಗೊಳಿಸಿರುವ ಬಗ್ಗೆ ನಿಮ್ಮೆಲ್ಲರಿಗೆ ಅಸಮಾಧಾನ ಆಗಿದೆ. ಆ ಬಗ್ಗೆ ದಯವಿಟ್ಟು ಕ್ಷಮೆ ಇರಲಿ. ನಾನೂ ಕೂಡ ಚಿತ್ರದ ಭಾಗವಾಗಿರುವುದರಿಂದ ಕ್ಷಮೆ ಕೇಳುತ್ತೇನೆ. ಅಪ್ಪು ಅವರಿಗೆ ಅವಮಾನ ಮಾಡುವ ಉದ್ದೇಶ, ಆಲೋಚನೆ ಯಾವ ಕನ್ನಡಿಗರಿಗೂ ಇರುವುದಿಲ್ಲ. ಆದಾಗಿಯೂ ಉದ್ದೇಶಪೂರ್ವಕವಲ್ಲದ ತಪ್ಪನ್ನು ಅಭಿಮಾನಿಗಳು ಮನ್ನಿಸುತ್ತಾರೆಂದು ನಂಬಿದ್ದೇನೆ” ಎಂದು ರಚಿತಾ ರಾಮ್ ತಮ್ಮ ಸಾಮಾಜಿಕ ಜಾಲತಾಣದಲ್ಲಿ ಬರೆದಿದ್ದಾರೆ.

ಚಿತ್ರದ ನಿರ್ಮಾಪಕಿ ರಕ್ಷಿತಾ ಪ್ರೇಮ್ ಕೂಡ ’ಅಪ್ಪು ಅಗಲಿಕೆಯ ನೋವಿನಿಂದ ನಾನಿನ್ನೂ ಹೊರ ಬರಲು ಸಾಧ್ಯವಾಗುತ್ತಿಲ್ಲ. ಅಪ್ಪುಗೆ ಅವಮಾನ ಮಾಡಲು ಯಾರಿಂದಲೂ ಸಾಧ್ಯವಿಲ್ಲ. ಶಾಂಪೇನ್ ಬಾಟಲಿ ಓಪನ್ ಮಾಡಿದ್ದು ಅಪ್ಪು ಅಭಿಮಾನಿಗಳಲ್ಲಿ ಅಸಮಾಧಾನ ಉಂಟಾಗಿದ್ದರೆ ನನ್ನ ಮತ್ತು ಚಿತ್ರತಂಡದ ಕಡೆಯಿಂದ ಕ್ಷಮೆಯಾಚಿಸುತ್ತೇವೆ. ಅಪ್ಪು ಎಂದಿಗೂ ನಮ್ಮ ಮನಸ್ಸಿನಲ್ಲಿ ಇದ್ದಾರೆ’ ಎಂದು ಕ್ಷಮೆ ಕೇಳಿದ್ದಾರೆ.


ಇದ ಓದಿ: ಕನ್ನಡ ಚಿತ್ರರಂಗಕ್ಕೆ ಹೊಸ ಕ್ರಿಯಾಶೀಲತೆ ತಂದುಕೊಟ್ಟ ’ಅಪ್ಪು ಡ್ಯಾನ್ಸ್’

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಧಿಕಾರದಲ್ಲಿರುವವರ ವಿರುದ್ಧ ಮಾತನಾಡುವ ಭಯವನ್ನು ನೀಟ್ ಚಳವಳಿ ಹೋಗಲಾಡಿಸಿದೆ: ನೇಹಾ ಬೋರಾ

ದೆಹಲಿಯ ಜಂತರ್ ಮಂತರ್‌ನಲ್ಲಿ ನಡೆದ 'ಜೆನ್ ಜಿ' ಚಳವಳಿಯು ಜನರಲ್ಲಿದ್ದ ಭಯವನ್ನು ಹೋಗಲಾಡಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ಹಾಗೂ ಆರ್‌ಎಸ್‌ಎಸ್‌ನವರು ವಿದ್ಯಾರ್ಥಿ ಮತ್ತು ಯುವಜನರನ್ನು ತಲುಪುವಂತೆ ಮಾಡಿದೆ ಎಂದು ಆಲ್...

Karnataka SIR : ನಿರ್ದೋಷಿ ಜನರೇಕೆ ದಾಖಲೆಗಾಗಿ ಅಲೆದಾಡಬೇಕು? ಲಾಜಿಕಲ್ ಡಿಸ್ಕ್ರಿಪೆನ್ಸಿ ನೋಟಿಸ್‌ಗೆ ನಾಗರಿಕ ಸಂಘಟನೆಗಳ ಆಕ್ಷೇಪ

ಕರ್ನಾಟಕದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ ಭಾಗವಾಗಿ ಮತದಾರರಿಗೆ ನೋಟಿಸ್ ನೀಡಲು ಮುಂದಾಗಿರುವ ಚುನಾವಣಾ ಆಯೋಗದ ಕ್ರಮವನ್ನು ನಾಗರಿಕ ಸಂಘಟನೆಗಳು ತೀವ್ರವಾಗಿ ವಿರೋಧಿಸಿವೆ. ಆಗಸ್ಟ್ 25ರಂದು ಎಸ್‌ಐಆರ್‌ಗೆ ಸಂಬಂಧಿಸಿದಂತೆ ಕೇಂದ್ರ ಚುನಾವಣಾ ಆಯೋಗದ...

ಮಳೆಯೇ ಇಲ್ಲದೆ ನೇಪಾಳದಲ್ಲಿ ಸಂಭವಿಸಿದ ಭೀಕರ ಪ್ರವಾಹಕ್ಕೆ ಕಾರಣವೇನು?

ನೇಪಾಳ-ಟಿಬೆಟ್ ಗಡಿಭಾಗದ ಹಿಮಾಲಯ ಪ್ರದೇಶದಲ್ಲಿ ಹಿಮನದಿ ಇದ್ದಕ್ಕಿದ್ದಂತೆ ಕರಗಿ ಕುಸಿದ ಪರಿಣಾಮ ಭೀಕರ ಪ್ರವಾಹ ಉಂಟಾಗಿದೆ. ಈ ವಿಕೋಪದಲ್ಲಿ ಇದುವರೆಗೆ 160ಕ್ಕೂ ಹೆಚ್ಚು ಜನರು ಮೃತಪಟ್ಟಿರುವುದು ದೃಢಪಟ್ಟಿದ್ದು, 800ಕ್ಕೂ ಹೆಚ್ಚು ವಿದೇಶಿ ಪ್ರವಾಸಿಗರು...

ರಾಹುಲ್ ಗಾಂಧಿ ಅವರ ‘ಛಾತ್ರೋನ್ ಕೀ ಗೂಂಜ್’ಗೆ ಹೇಳಿಕೆಗಳ ಫ್ಯಾಕ್ಟ್-ಚೆಕ್: ಬಿಜೆಪಿಯಿಂದ ‘ಜೂಠ್ ಕೀ ಗೂಂಜ್’ ವೆಬ್‌ಸೈಟ್ ಆರಂಭ

ಲೋಕಸಭೆ ವಿಪಕ್ಷ ನಾಯಕ, ಕಾಂಗ್ರೆಸ್‌ ಸಂಸದ ರಾಹುಲ್ ಗಾಂಧಿ ಅವರ 'ಛಾತ್ರೋನ್ ಕೀ ಗೂಂಜ್' ಅಭಿಯಾನದ ವೇಳೆ ನೀಡಲಾದ ಹೇಳಿಕೆಗಳನ್ನು ಫ್ಯಾಕ್ಟ್-ಚೆಕ್ (ಸತ್ಯಾಸತ್ಯತೆ ಪರಿಶೀಲನೆ) ಮಾಡುವ ವೆಬ್‌ಸೈಟ್‌ ಒಂದನ್ನು ಉಲ್ಲೇಖಿಸಿರುವ ಬಿಜೆಪಿ, "ರಾಹುಲ್...

101 ತಾಲ್ಲೂಕುಗಳನ್ನು ಬರಪೀಡಿತ ಎಂದು ಅಧಿಕೃತವಾಗಿ ಘೋಷಿಸಿದ ರಾಜ್ಯ ಸರ್ಕಾರ

ಮಳೆ ಕೊರತೆಯಿಂದ ತತ್ತರಿಸಿರುವ ಕರ್ನಾಟಕದಲ್ಲಿ ತೀವ್ರ ಬರ ಪರಿಸ್ಥಿತಿ ನಿರ್ಮಾಣವಾಗಿದ್ದು, ಮೊದಲ ಹಂತದಲ್ಲಿ 101 ತಾಲ್ಲೂಕುಗಳನ್ನು ಬರಪೀಡಿತ ಎಂದು ಸರ್ಕಾರ ಅಧಿಕೃತವಾಗಿ ಘೋಷಿಸಿದೆ. ಬರ ನಿರ್ವಹಣೆ ಮತ್ತು ಪರಿಹಾರ ಕಾರ್ಯಗಳಿಗಾಗಿ ಸರ್ಕಾರವು ₹350...

ಕೊಟ್ಟ ಭರವಸೆ ಈಡೇರಿಸದ ಕೇಂದ್ರ ಸರ್ಕಾರ: ಸೆಪ್ಟೆಂಬರ್ 5ರಂದು ಸಿಜೆಪಿಯಿಂದ ದೆಹಲಿಯಲ್ಲಿ ಶಾಂತಿಯುತ ಮೆರವಣಿಗೆ

ಜುಲೈ 25ರಂದು ದೇಶದ ಯುವಜನತೆಗೆ ನೀಡಿದ್ದ ಭರವಸೆಗಳನ್ನು ಈಡೇರಿಸುವಲ್ಲಿ ಕೇಂದ್ರ ಸರ್ಕಾರ ವಿಫಲವಾಗಿದೆ ಎಂದು ಆರೋಪಿಸಿರುವ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ), ಸೆಪ್ಟೆಂಬರ್ 5ರಂದು ರಾಷ್ಟ್ರ ರಾಜಧಾನಿಯಲ್ಲಿ ಶಾಂತಿಯುತ ಪ್ರತಿಭಟನಾ ಮೆರವಣಿಗೆ ನಡೆಸುವುದಾಗಿ...

Karnataka SIR : ಮತಹರಣದ ವಿರುದ್ಧ ಕಾನೂನು ಸಮರಕ್ಕೆ ಮುಂದಾದ ನಾಗರಿಕ ಸಂಘಟನೆಗಳು

ಕರ್ನಾಟಕದ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯಲ್ಲಿ ಉಂಟಾದ ಮತಹರಣದ ವಿರುದ್ಧ ಕಾನೂನು ಸಮರ ನಡೆಸಲು ನಾಗರಿಕ ಸಂಘಟನೆಗಳು ಮುಂದಾಗಿವೆ. ಆಗಸ್ಟ್ 25ರಂದು ಎಸ್‌ಐಆರ್‌ಗೆ ಸಂಬಂಧಿಸಿದಂತೆ ಕೇಂದ್ರ ಚುನಾವಣಾ ಆಯೋಗದ ವಿರುದ್ದ...

ಬೆಂಗಳೂರು ನ್ಯಾಷನಲ್ ಲಾ ಸ್ಕೂಲ್ ಘಟಿಕೋತ್ಸವ ರದ್ದು: ಸಿಜೆಐ, ಬಾರ್ ಕೌನ್ಸಿಲ್ ಮುಖ್ಯಸ್ಥರ ಆಹ್ವಾನಕ್ಕೆ ವಿದ್ಯಾರ್ಥಿಗಳ ತೀವ್ರ ವಿರೋಧ!

ಬೆಂಗಳೂರು: ದೇಶದ ಪ್ರತಿಷ್ಠಿತ ಕಾನೂನು ಶಿಕ್ಷಣ ಸಂಸ್ಥೆಯಾದ ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿ (NLSIU), ತನ್ನ 34ನೇ ವಾರ್ಷಿಕ ಘಟಿಕೋತ್ಸವ ಸಮಾರಂಭವನ್ನು ದಿಢೀರ್ ರದ್ದುಗೊಳಿಸಿದೆ. ಸೆಪ್ಟೆಂಬರ್ 12 ರಂದು...

ತಮಿಳುನಾಡು| ದಲಿತ ಯುವಕನ ಲಾಕಪ್ ಡೆತ್ ಪ್ರಕರಣ; ಆರು ಜನ ಪೊಲೀಸರ ವಿರುದ್ಧ ಪ್ರಕರಣ ದಾಖಲು

ಕಲೆದ ಮಾರ್ಚ್‌ನಲ್ಲಿ ತಮಿಳುನಾಡಿನ ಶಿವಗಂಗೈ ಜಿಲ್ಲೆಯಲ್ಲಿ ನಡೆಸಿದ್ದ 26 ವರ್ಷದ ದಲಿತ ಯುವಕ ಆಕಾಶ್ ಡೆಲಿಸನ್ ಲಾಕಪ್ ಡೆತ್ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿ-ಸಿಐಡಿ ಸಲ್ಲಿಸಿರುವ ದೋಷಾರೋಪಣೆ ಪಟ್ಟಿಯಲ್ಲಿ (ಚಾರ್ಜ್‌ಶೀಟ್), ಆರೋಪಿಗಳಾದ ಆರು ಮಂದಿ...

Karnataka SIR | ಡಿಲೀಟ್ ಪಟ್ಟಿಯಲ್ಲಿ ಅಂದಾಜು 52 ಲಕ್ಷ ಅರ್ಹ ಮತದಾರರಿದ್ದಾರೆ : ನಾಗರಿಕ ಸಂಘಟನೆಗಳಿಂದ ಗಂಭೀರ ಆರೋಪ

ಕರ್ನಾಟಕದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಭಾಗವಾಗಿ ಮತದಾರರ ಪಟ್ಟಿಯಿಂದ ಈಗಾಗಲೇ ಹೊರಗಿಟ್ಟಿರುವ 1.08 ಕೋಟಿ (1,07,96,415) ಮತದಾರರ ಪೈಕಿ ಅಂದಾಜು 52 ಲಕ್ಷ ಮಂದಿ ಅರ್ಹರಿದ್ದಾರೆ ಎಂದು ನಾಗರಿಕ ಸಂಘಟನೆಗಳು ಗಂಭೀರ...