Homeಕರ್ನಾಟಕಅಪ್ಪು ಫೋಟೋ ಮುಂದೆ ಶಾಂಪೇನ್ ಸಂಭ್ರಮ: ಕ್ಷಮೆಯಾಚಿಸಿದ ನಿರ್ದೇಶಕ, ನಟ, ನಟಿಯರು

ಅಪ್ಪು ಫೋಟೋ ಮುಂದೆ ಶಾಂಪೇನ್ ಸಂಭ್ರಮ: ಕ್ಷಮೆಯಾಚಿಸಿದ ನಿರ್ದೇಶಕ, ನಟ, ನಟಿಯರು

’ಏಕ್ ಲವ್ ಯಾ’ ಚಿತ್ರದ ಹಾಡು ಬಿಡುಗಡೆ ವೇಳೆ ಪುನೀತ್ ಭಾವಚಿತ್ರದ ಮುಂದೆ ಶಾಂಪೇನ್ ಬಾಟಲ್ ಓಪನ್ ಮಾಡಿ ಸಂಭ್ರಮಿಸಲಾಗಿತ್ತು.

- Advertisement -
- Advertisement -

ಏಕ್‌ ಲವ್ ಯಾ ಚಿತ್ರದ ಹಾಡು ಬಿಡುಗಡೆ ಕಾರ್ಯಕ್ರಮದ ವೇಳೆ ಇತ್ತಿಚೆಗೆ ನಮ್ಮನ್ನಗಲಿದ ನಟ ಪುನೀತ್ ರಾಜ್‌ಕುಮಾರ್‌ ಭಾವಚಿತ್ರದ ಎದುರು ಶಾಂಪೇನ್ ಓಪನ್ ಮಾಡಿ ಸಂಭ್ರಮಿಸಿ ಅವರನ್ನು ಅವಮಾನಿಸಲಾಗಿದೆ ಎಂದು ಆಕ್ರೋಶ ವ್ಯಕ್ತವಾಗಿದೆ. ಚಿತ್ರತಂಡ ಕ್ಷಮೆ ಕೇಳಬೇಕು ಎಂದು ಹಲವು ಮಂದಿ ಒತ್ತಾಯಿಸಿದ್ದರು.

ಚಿತ್ರದ ನಿರ್ದೇಶಕ ಪ್ರೇಮ್, ನಿರ್ಮಾಪಕಿ ರಕ್ಷಿತಾ ಪ್ರೇಮ್, ನಟಿ ರಚಿತಾ ರಾಮ್ ಸೇರಿದಂತೆ ಚಿತ್ರತಂಡ ಜನರ ಕ್ಷಮೆ ಕೇಳಿದ್ದಾರೆ. ಶುಕ್ರವಾರ ಬೆಂಗಳೂರಿನ ತಾಜ್ ವೆಸ್ಟ್‌ ಎಂಡ್ ಹೋಟೆಲ್‌ನಲ್ಲಿ ಏಕ್ ಲವ್ ಯಾ ಚಿತ್ರದ “ಎಣ್ಣೆಗೂ ಹೆಣ್ಣಿಗೂ ಎಲ್ಲಿಂದ ಲಿಂಕ್ ಇಟ್ಟೆ” ಹಾಡು ಬಿಡುಗಡೆಯಾಗಿದೆ. ಈ ವೇಳೆ ಚಿತ್ರತಂಡ ಅಪ್ಪು ಅವರನ್ನು ಅವಮಾನಿಸಿದ್ದಾರೆ ಎಂದು ಅಭಿಮಾನಿಗಳು ಸೇರಿದಂತೆ ಚಿತ್ರರಂಗದ ಹಲವರು ಬೇಸರ ವ್ಯಕ್ತಪಡಿಸಿದ್ದರು.

ಕಾರ್ಯಕ್ರಮದಲ್ಲಿ ವೇದಿಎ ಮೇಳೆ ಮೊದಲಿಗೆ ಪುನೀತ್ ರಾಜ್‌ಕುಮಾರ್‌ ಅವರ ಭಾವಚಿತ್ರವನ್ನಿಟ್ಟು ಶ್ರದ್ಧಾಂಜಲಿ ಸಲ್ಲಿಸಲಾಗಿತ್ತು. ಬಳಿಕ ಅದೇ ಭಾವಚಿತ್ರದ ಮುಂದೆ ನಿರೂಪಕ ಅಕುಲ್ ಬಾಲಾಜಿ, ನಟಿಯರಾದ ರಚಿತಾ ರಾಮ್, ರಕ್ಷಿತಾ ಪ್ರೇಮ್, ನಿಶ್ವಿಕಾ ನಾಯ್ಡು, ಗಾಯಕಿ ಮಂಗ್ಲಿ ಶಾಂಪೇನ್ ಬಾಟಲ್ ಹಿಡಿದು ಸಮಭ್ರಮಿಸಿದ್ದರು. ಈ ವೇಳೆ ಹಿಂದಿನ ಸ್ಕ್ರೀನ್‌ನಲ್ಲಿ ನಟ ಪುನೀತ್ ಪೋಟೋ ಕೂಡ ಕಾಣಿಸಿಕೊಂಡಿತ್ತು. ಇದೆಲ್ಲಾ ಅಪ್ಪು ಅಭಿಮಾನಿಗಳ ಆಕ್ರೋಶಕ್ಕೆ ಕಾರಣವಾಗಿತ್ತು.

ಇದನ್ನೂ ಓದಿ: ಪುನೀತ್ ರಾಜಕುಮಾರ್ ನುಡಿನಮನ; ಮುಗ್ಧ ನಗುವೊಂದರ ಕಣ್ಮರೆ

ಕರ್ನಾಟಕ ವಾಣಿಜ್ಯ ಮಂಡಳಿಯ ಮಾಜಿ ಅಧ್ಯಕ, ನಿರ್ಮಾಪಕ ಸಾ.ರಾ.ಗೋವಿಂದು ಕೂಡ ’ಏಕ್ ಲವ್ ಯಾ’ ಚಿತ್ರರಂಗದ  ವರ್ತನೆಗೆ ಆಕ್ಷೇಪ ವ್ಯಕ್ತಪಡಿಸಿದ್ದರು. ’ನಮ್ಮ ಚಿತ್ರರಂಗದವರೇ ಇಂಥ ಕೆಲಸ ಮಾಡಿದರೆ ನಾವು ಯಾರ ಮೇಲೆ ಆಪಾದನೆ ಮಾಡೋದು? ದಯವಿಟ್ಟು ಇಂಥದ್ದನ್ನೆಲ್ಲ ಮಾಡಬೇಡಿ. ಪುನೀತ್​ ನಮ್ಮಿಂದ ದೂರವಾಗಿರಬಹುದು. ಅವರಿಗೆ ಅವಮಾನ ಆಗುವಂತಹ ಕೆಲಸವನ್ನು ಮಾಡಬೇಡಿ. ಪುನೀತ್​ಗೆ ಅವಮಾನ ಆಗುವಂತೆ ನಮ್ಮ ಚಿತ್ರರಂಗದವರು ನಡೆದುಕೊಂಡಿರುವು ನಾವೆಲ್ಲರೂ ತಲೆ ತಗ್ಗಿಸುವಂತೆ ಆಗಿದೆ’ ಎಂದು ಬೇಸರ ವ್ಯಕ್ತಪಡಿಸಿದ್ದರು.

ವಿವಾದ ಹೆಚ್ಚಾದ ಬಳಿಕ ಚಿತ್ರದ ನಿರ್ದೇಶಕ ಪ್ರೇಮ್, ನಿರ್ಮಾಪಕಿ ರಕ್ಷಿತಾ ಪ್ರೇಮ್, ನಟಿ ರಚಿತಾ ರಾಮ್ ಸೇರಿದಂತೆ ಚಿತ್ರತಂಡ ಜನರ ಕ್ಷಮೆ ಕೇಳಿದ್ದಾರೆ.

 

“ಅಪ್ಪು ಅವರ ಅಗಲಿಕೆಯ ನೋವು ಇನ್ನೂ ನಮ್ಮ ಮನಸ್ಸಿನಲ್ಲಿದೆ. ಆ ಕಾರಣಕ್ಕೆ ನ.4 ಕ್ಕೆ ಬಿಡುಗಡೆಯಾಗಬೇಕಿದ್ದ ಏಕ್ ಲವ್ ಯಾ ಸಿನಿಮಾದ ಹಾಡನ್ನು ನ.12 ಕ್ಕೆ ಬಿಡುಗಡೆ ಮಾಡಲಾಯಿತು. ಸಮಾರಂಭದ ಉದ್ಘಾಟನೆಯೇ ಅಪ್ಪು ಅವರನ್ನು ನೆನೆಯುತ್ತಾ, ಅವರ ವ್ಯಕ್ತಿತ್ವ, ಅವರ ಜೊತೆಗೆ ಕಳೆದ ಕ್ಷಣಗಳ ನೆನೆಯುತ್ತಾ ಶುರುವಾಯಿತು. ಈ ಹಾಡು ಶುರುವಾಗುವುದೇ ಅಪ್ಪು ಅಮರ ಎಂದು. ಅಪ್ಪು ಅವರ ಫೋಟೋ ಮುಂದೆ ಶಾಂಪೇನ್ ಓಪನ್ ಮಾಡಿದ ಉದ್ದೇಶ ಕೇವಲ ಹಾಡು ಬಿಡುಗಡೆಯ ಅಂಗವಾಗಿ. ಇದರಿಂದ ಅಪ್ಪು ಅವರ ಅಭಿಮಾನಿಗಳಿಗೆ ನೋವಾಗಿದ್ದಲ್ಲಿ ನನ್ನ ಹಾಗೂ ನನ್ನ ಇಡೀ ’ಏಕ್ ಲವ್ ಯಾ’ ಚಿತ್ರತಂಡದಿಂದ ಕ್ಷಮೆಯಾಚಿಸುತ್ತೇವೆ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಪುನೀತ್ ರಾಜಕುಮಾರ್ ‘ನಮ್ಮ ಅಪ್ಪು’ ಆದದ್ದು..: ಕೆ.ಫಣಿರಾಜ್

ನಟಿ ರಚಿತಾ ರಾಮ್ ಕೂಡ ಕ್ಷಮೆ ಕೇಳಿದ್ದಾರೆ.

“ನಿನ್ನೆಯ ಏಕ್​ ಲವ್​ ಯಾ ಸಿನಿಮಾದ ಸಾಂಗ್​ ಲಾಂಚ್​ ಕಾರ್ಯಕ್ರಮದಲ್ಲಿ ಶಾಂಪೇನ್​ ಬಾಟಲ್​ ಓಪನ್​ ಮಾಡಿ ಹಾಡನ್ನು ಬಿಡುಗಡೆಗೊಳಿಸಿರುವ ಬಗ್ಗೆ ನಿಮ್ಮೆಲ್ಲರಿಗೆ ಅಸಮಾಧಾನ ಆಗಿದೆ. ಆ ಬಗ್ಗೆ ದಯವಿಟ್ಟು ಕ್ಷಮೆ ಇರಲಿ. ನಾನೂ ಕೂಡ ಚಿತ್ರದ ಭಾಗವಾಗಿರುವುದರಿಂದ ಕ್ಷಮೆ ಕೇಳುತ್ತೇನೆ. ಅಪ್ಪು ಅವರಿಗೆ ಅವಮಾನ ಮಾಡುವ ಉದ್ದೇಶ, ಆಲೋಚನೆ ಯಾವ ಕನ್ನಡಿಗರಿಗೂ ಇರುವುದಿಲ್ಲ. ಆದಾಗಿಯೂ ಉದ್ದೇಶಪೂರ್ವಕವಲ್ಲದ ತಪ್ಪನ್ನು ಅಭಿಮಾನಿಗಳು ಮನ್ನಿಸುತ್ತಾರೆಂದು ನಂಬಿದ್ದೇನೆ” ಎಂದು ರಚಿತಾ ರಾಮ್ ತಮ್ಮ ಸಾಮಾಜಿಕ ಜಾಲತಾಣದಲ್ಲಿ ಬರೆದಿದ್ದಾರೆ.

ಚಿತ್ರದ ನಿರ್ಮಾಪಕಿ ರಕ್ಷಿತಾ ಪ್ರೇಮ್ ಕೂಡ ’ಅಪ್ಪು ಅಗಲಿಕೆಯ ನೋವಿನಿಂದ ನಾನಿನ್ನೂ ಹೊರ ಬರಲು ಸಾಧ್ಯವಾಗುತ್ತಿಲ್ಲ. ಅಪ್ಪುಗೆ ಅವಮಾನ ಮಾಡಲು ಯಾರಿಂದಲೂ ಸಾಧ್ಯವಿಲ್ಲ. ಶಾಂಪೇನ್ ಬಾಟಲಿ ಓಪನ್ ಮಾಡಿದ್ದು ಅಪ್ಪು ಅಭಿಮಾನಿಗಳಲ್ಲಿ ಅಸಮಾಧಾನ ಉಂಟಾಗಿದ್ದರೆ ನನ್ನ ಮತ್ತು ಚಿತ್ರತಂಡದ ಕಡೆಯಿಂದ ಕ್ಷಮೆಯಾಚಿಸುತ್ತೇವೆ. ಅಪ್ಪು ಎಂದಿಗೂ ನಮ್ಮ ಮನಸ್ಸಿನಲ್ಲಿ ಇದ್ದಾರೆ’ ಎಂದು ಕ್ಷಮೆ ಕೇಳಿದ್ದಾರೆ.


ಇದ ಓದಿ: ಕನ್ನಡ ಚಿತ್ರರಂಗಕ್ಕೆ ಹೊಸ ಕ್ರಿಯಾಶೀಲತೆ ತಂದುಕೊಟ್ಟ ’ಅಪ್ಪು ಡ್ಯಾನ್ಸ್’

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...