Homeಕರ್ನಾಟಕಅಪ್ಪು ಫೋಟೋ ಮುಂದೆ ಶಾಂಪೇನ್ ಸಂಭ್ರಮ: ಕ್ಷಮೆಯಾಚಿಸಿದ ನಿರ್ದೇಶಕ, ನಟ, ನಟಿಯರು

ಅಪ್ಪು ಫೋಟೋ ಮುಂದೆ ಶಾಂಪೇನ್ ಸಂಭ್ರಮ: ಕ್ಷಮೆಯಾಚಿಸಿದ ನಿರ್ದೇಶಕ, ನಟ, ನಟಿಯರು

’ಏಕ್ ಲವ್ ಯಾ’ ಚಿತ್ರದ ಹಾಡು ಬಿಡುಗಡೆ ವೇಳೆ ಪುನೀತ್ ಭಾವಚಿತ್ರದ ಮುಂದೆ ಶಾಂಪೇನ್ ಬಾಟಲ್ ಓಪನ್ ಮಾಡಿ ಸಂಭ್ರಮಿಸಲಾಗಿತ್ತು.

- Advertisement -
- Advertisement -

ಏಕ್‌ ಲವ್ ಯಾ ಚಿತ್ರದ ಹಾಡು ಬಿಡುಗಡೆ ಕಾರ್ಯಕ್ರಮದ ವೇಳೆ ಇತ್ತಿಚೆಗೆ ನಮ್ಮನ್ನಗಲಿದ ನಟ ಪುನೀತ್ ರಾಜ್‌ಕುಮಾರ್‌ ಭಾವಚಿತ್ರದ ಎದುರು ಶಾಂಪೇನ್ ಓಪನ್ ಮಾಡಿ ಸಂಭ್ರಮಿಸಿ ಅವರನ್ನು ಅವಮಾನಿಸಲಾಗಿದೆ ಎಂದು ಆಕ್ರೋಶ ವ್ಯಕ್ತವಾಗಿದೆ. ಚಿತ್ರತಂಡ ಕ್ಷಮೆ ಕೇಳಬೇಕು ಎಂದು ಹಲವು ಮಂದಿ ಒತ್ತಾಯಿಸಿದ್ದರು.

ಚಿತ್ರದ ನಿರ್ದೇಶಕ ಪ್ರೇಮ್, ನಿರ್ಮಾಪಕಿ ರಕ್ಷಿತಾ ಪ್ರೇಮ್, ನಟಿ ರಚಿತಾ ರಾಮ್ ಸೇರಿದಂತೆ ಚಿತ್ರತಂಡ ಜನರ ಕ್ಷಮೆ ಕೇಳಿದ್ದಾರೆ. ಶುಕ್ರವಾರ ಬೆಂಗಳೂರಿನ ತಾಜ್ ವೆಸ್ಟ್‌ ಎಂಡ್ ಹೋಟೆಲ್‌ನಲ್ಲಿ ಏಕ್ ಲವ್ ಯಾ ಚಿತ್ರದ “ಎಣ್ಣೆಗೂ ಹೆಣ್ಣಿಗೂ ಎಲ್ಲಿಂದ ಲಿಂಕ್ ಇಟ್ಟೆ” ಹಾಡು ಬಿಡುಗಡೆಯಾಗಿದೆ. ಈ ವೇಳೆ ಚಿತ್ರತಂಡ ಅಪ್ಪು ಅವರನ್ನು ಅವಮಾನಿಸಿದ್ದಾರೆ ಎಂದು ಅಭಿಮಾನಿಗಳು ಸೇರಿದಂತೆ ಚಿತ್ರರಂಗದ ಹಲವರು ಬೇಸರ ವ್ಯಕ್ತಪಡಿಸಿದ್ದರು.

ಕಾರ್ಯಕ್ರಮದಲ್ಲಿ ವೇದಿಎ ಮೇಳೆ ಮೊದಲಿಗೆ ಪುನೀತ್ ರಾಜ್‌ಕುಮಾರ್‌ ಅವರ ಭಾವಚಿತ್ರವನ್ನಿಟ್ಟು ಶ್ರದ್ಧಾಂಜಲಿ ಸಲ್ಲಿಸಲಾಗಿತ್ತು. ಬಳಿಕ ಅದೇ ಭಾವಚಿತ್ರದ ಮುಂದೆ ನಿರೂಪಕ ಅಕುಲ್ ಬಾಲಾಜಿ, ನಟಿಯರಾದ ರಚಿತಾ ರಾಮ್, ರಕ್ಷಿತಾ ಪ್ರೇಮ್, ನಿಶ್ವಿಕಾ ನಾಯ್ಡು, ಗಾಯಕಿ ಮಂಗ್ಲಿ ಶಾಂಪೇನ್ ಬಾಟಲ್ ಹಿಡಿದು ಸಮಭ್ರಮಿಸಿದ್ದರು. ಈ ವೇಳೆ ಹಿಂದಿನ ಸ್ಕ್ರೀನ್‌ನಲ್ಲಿ ನಟ ಪುನೀತ್ ಪೋಟೋ ಕೂಡ ಕಾಣಿಸಿಕೊಂಡಿತ್ತು. ಇದೆಲ್ಲಾ ಅಪ್ಪು ಅಭಿಮಾನಿಗಳ ಆಕ್ರೋಶಕ್ಕೆ ಕಾರಣವಾಗಿತ್ತು.

ಇದನ್ನೂ ಓದಿ: ಪುನೀತ್ ರಾಜಕುಮಾರ್ ನುಡಿನಮನ; ಮುಗ್ಧ ನಗುವೊಂದರ ಕಣ್ಮರೆ

ಕರ್ನಾಟಕ ವಾಣಿಜ್ಯ ಮಂಡಳಿಯ ಮಾಜಿ ಅಧ್ಯಕ, ನಿರ್ಮಾಪಕ ಸಾ.ರಾ.ಗೋವಿಂದು ಕೂಡ ’ಏಕ್ ಲವ್ ಯಾ’ ಚಿತ್ರರಂಗದ  ವರ್ತನೆಗೆ ಆಕ್ಷೇಪ ವ್ಯಕ್ತಪಡಿಸಿದ್ದರು. ’ನಮ್ಮ ಚಿತ್ರರಂಗದವರೇ ಇಂಥ ಕೆಲಸ ಮಾಡಿದರೆ ನಾವು ಯಾರ ಮೇಲೆ ಆಪಾದನೆ ಮಾಡೋದು? ದಯವಿಟ್ಟು ಇಂಥದ್ದನ್ನೆಲ್ಲ ಮಾಡಬೇಡಿ. ಪುನೀತ್​ ನಮ್ಮಿಂದ ದೂರವಾಗಿರಬಹುದು. ಅವರಿಗೆ ಅವಮಾನ ಆಗುವಂತಹ ಕೆಲಸವನ್ನು ಮಾಡಬೇಡಿ. ಪುನೀತ್​ಗೆ ಅವಮಾನ ಆಗುವಂತೆ ನಮ್ಮ ಚಿತ್ರರಂಗದವರು ನಡೆದುಕೊಂಡಿರುವು ನಾವೆಲ್ಲರೂ ತಲೆ ತಗ್ಗಿಸುವಂತೆ ಆಗಿದೆ’ ಎಂದು ಬೇಸರ ವ್ಯಕ್ತಪಡಿಸಿದ್ದರು.

ವಿವಾದ ಹೆಚ್ಚಾದ ಬಳಿಕ ಚಿತ್ರದ ನಿರ್ದೇಶಕ ಪ್ರೇಮ್, ನಿರ್ಮಾಪಕಿ ರಕ್ಷಿತಾ ಪ್ರೇಮ್, ನಟಿ ರಚಿತಾ ರಾಮ್ ಸೇರಿದಂತೆ ಚಿತ್ರತಂಡ ಜನರ ಕ್ಷಮೆ ಕೇಳಿದ್ದಾರೆ.

 

“ಅಪ್ಪು ಅವರ ಅಗಲಿಕೆಯ ನೋವು ಇನ್ನೂ ನಮ್ಮ ಮನಸ್ಸಿನಲ್ಲಿದೆ. ಆ ಕಾರಣಕ್ಕೆ ನ.4 ಕ್ಕೆ ಬಿಡುಗಡೆಯಾಗಬೇಕಿದ್ದ ಏಕ್ ಲವ್ ಯಾ ಸಿನಿಮಾದ ಹಾಡನ್ನು ನ.12 ಕ್ಕೆ ಬಿಡುಗಡೆ ಮಾಡಲಾಯಿತು. ಸಮಾರಂಭದ ಉದ್ಘಾಟನೆಯೇ ಅಪ್ಪು ಅವರನ್ನು ನೆನೆಯುತ್ತಾ, ಅವರ ವ್ಯಕ್ತಿತ್ವ, ಅವರ ಜೊತೆಗೆ ಕಳೆದ ಕ್ಷಣಗಳ ನೆನೆಯುತ್ತಾ ಶುರುವಾಯಿತು. ಈ ಹಾಡು ಶುರುವಾಗುವುದೇ ಅಪ್ಪು ಅಮರ ಎಂದು. ಅಪ್ಪು ಅವರ ಫೋಟೋ ಮುಂದೆ ಶಾಂಪೇನ್ ಓಪನ್ ಮಾಡಿದ ಉದ್ದೇಶ ಕೇವಲ ಹಾಡು ಬಿಡುಗಡೆಯ ಅಂಗವಾಗಿ. ಇದರಿಂದ ಅಪ್ಪು ಅವರ ಅಭಿಮಾನಿಗಳಿಗೆ ನೋವಾಗಿದ್ದಲ್ಲಿ ನನ್ನ ಹಾಗೂ ನನ್ನ ಇಡೀ ’ಏಕ್ ಲವ್ ಯಾ’ ಚಿತ್ರತಂಡದಿಂದ ಕ್ಷಮೆಯಾಚಿಸುತ್ತೇವೆ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಪುನೀತ್ ರಾಜಕುಮಾರ್ ‘ನಮ್ಮ ಅಪ್ಪು’ ಆದದ್ದು..: ಕೆ.ಫಣಿರಾಜ್

ನಟಿ ರಚಿತಾ ರಾಮ್ ಕೂಡ ಕ್ಷಮೆ ಕೇಳಿದ್ದಾರೆ.

“ನಿನ್ನೆಯ ಏಕ್​ ಲವ್​ ಯಾ ಸಿನಿಮಾದ ಸಾಂಗ್​ ಲಾಂಚ್​ ಕಾರ್ಯಕ್ರಮದಲ್ಲಿ ಶಾಂಪೇನ್​ ಬಾಟಲ್​ ಓಪನ್​ ಮಾಡಿ ಹಾಡನ್ನು ಬಿಡುಗಡೆಗೊಳಿಸಿರುವ ಬಗ್ಗೆ ನಿಮ್ಮೆಲ್ಲರಿಗೆ ಅಸಮಾಧಾನ ಆಗಿದೆ. ಆ ಬಗ್ಗೆ ದಯವಿಟ್ಟು ಕ್ಷಮೆ ಇರಲಿ. ನಾನೂ ಕೂಡ ಚಿತ್ರದ ಭಾಗವಾಗಿರುವುದರಿಂದ ಕ್ಷಮೆ ಕೇಳುತ್ತೇನೆ. ಅಪ್ಪು ಅವರಿಗೆ ಅವಮಾನ ಮಾಡುವ ಉದ್ದೇಶ, ಆಲೋಚನೆ ಯಾವ ಕನ್ನಡಿಗರಿಗೂ ಇರುವುದಿಲ್ಲ. ಆದಾಗಿಯೂ ಉದ್ದೇಶಪೂರ್ವಕವಲ್ಲದ ತಪ್ಪನ್ನು ಅಭಿಮಾನಿಗಳು ಮನ್ನಿಸುತ್ತಾರೆಂದು ನಂಬಿದ್ದೇನೆ” ಎಂದು ರಚಿತಾ ರಾಮ್ ತಮ್ಮ ಸಾಮಾಜಿಕ ಜಾಲತಾಣದಲ್ಲಿ ಬರೆದಿದ್ದಾರೆ.

ಚಿತ್ರದ ನಿರ್ಮಾಪಕಿ ರಕ್ಷಿತಾ ಪ್ರೇಮ್ ಕೂಡ ’ಅಪ್ಪು ಅಗಲಿಕೆಯ ನೋವಿನಿಂದ ನಾನಿನ್ನೂ ಹೊರ ಬರಲು ಸಾಧ್ಯವಾಗುತ್ತಿಲ್ಲ. ಅಪ್ಪುಗೆ ಅವಮಾನ ಮಾಡಲು ಯಾರಿಂದಲೂ ಸಾಧ್ಯವಿಲ್ಲ. ಶಾಂಪೇನ್ ಬಾಟಲಿ ಓಪನ್ ಮಾಡಿದ್ದು ಅಪ್ಪು ಅಭಿಮಾನಿಗಳಲ್ಲಿ ಅಸಮಾಧಾನ ಉಂಟಾಗಿದ್ದರೆ ನನ್ನ ಮತ್ತು ಚಿತ್ರತಂಡದ ಕಡೆಯಿಂದ ಕ್ಷಮೆಯಾಚಿಸುತ್ತೇವೆ. ಅಪ್ಪು ಎಂದಿಗೂ ನಮ್ಮ ಮನಸ್ಸಿನಲ್ಲಿ ಇದ್ದಾರೆ’ ಎಂದು ಕ್ಷಮೆ ಕೇಳಿದ್ದಾರೆ.


ಇದ ಓದಿ: ಕನ್ನಡ ಚಿತ್ರರಂಗಕ್ಕೆ ಹೊಸ ಕ್ರಿಯಾಶೀಲತೆ ತಂದುಕೊಟ್ಟ ’ಅಪ್ಪು ಡ್ಯಾನ್ಸ್’

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....