Homeಕರ್ನಾಟಕಅಪ್ಪು ಫೋಟೋ ಮುಂದೆ ಶಾಂಪೇನ್ ಸಂಭ್ರಮ: ಕ್ಷಮೆಯಾಚಿಸಿದ ನಿರ್ದೇಶಕ, ನಟ, ನಟಿಯರು

ಅಪ್ಪು ಫೋಟೋ ಮುಂದೆ ಶಾಂಪೇನ್ ಸಂಭ್ರಮ: ಕ್ಷಮೆಯಾಚಿಸಿದ ನಿರ್ದೇಶಕ, ನಟ, ನಟಿಯರು

’ಏಕ್ ಲವ್ ಯಾ’ ಚಿತ್ರದ ಹಾಡು ಬಿಡುಗಡೆ ವೇಳೆ ಪುನೀತ್ ಭಾವಚಿತ್ರದ ಮುಂದೆ ಶಾಂಪೇನ್ ಬಾಟಲ್ ಓಪನ್ ಮಾಡಿ ಸಂಭ್ರಮಿಸಲಾಗಿತ್ತು.

- Advertisement -
- Advertisement -

ಏಕ್‌ ಲವ್ ಯಾ ಚಿತ್ರದ ಹಾಡು ಬಿಡುಗಡೆ ಕಾರ್ಯಕ್ರಮದ ವೇಳೆ ಇತ್ತಿಚೆಗೆ ನಮ್ಮನ್ನಗಲಿದ ನಟ ಪುನೀತ್ ರಾಜ್‌ಕುಮಾರ್‌ ಭಾವಚಿತ್ರದ ಎದುರು ಶಾಂಪೇನ್ ಓಪನ್ ಮಾಡಿ ಸಂಭ್ರಮಿಸಿ ಅವರನ್ನು ಅವಮಾನಿಸಲಾಗಿದೆ ಎಂದು ಆಕ್ರೋಶ ವ್ಯಕ್ತವಾಗಿದೆ. ಚಿತ್ರತಂಡ ಕ್ಷಮೆ ಕೇಳಬೇಕು ಎಂದು ಹಲವು ಮಂದಿ ಒತ್ತಾಯಿಸಿದ್ದರು.

ಚಿತ್ರದ ನಿರ್ದೇಶಕ ಪ್ರೇಮ್, ನಿರ್ಮಾಪಕಿ ರಕ್ಷಿತಾ ಪ್ರೇಮ್, ನಟಿ ರಚಿತಾ ರಾಮ್ ಸೇರಿದಂತೆ ಚಿತ್ರತಂಡ ಜನರ ಕ್ಷಮೆ ಕೇಳಿದ್ದಾರೆ. ಶುಕ್ರವಾರ ಬೆಂಗಳೂರಿನ ತಾಜ್ ವೆಸ್ಟ್‌ ಎಂಡ್ ಹೋಟೆಲ್‌ನಲ್ಲಿ ಏಕ್ ಲವ್ ಯಾ ಚಿತ್ರದ “ಎಣ್ಣೆಗೂ ಹೆಣ್ಣಿಗೂ ಎಲ್ಲಿಂದ ಲಿಂಕ್ ಇಟ್ಟೆ” ಹಾಡು ಬಿಡುಗಡೆಯಾಗಿದೆ. ಈ ವೇಳೆ ಚಿತ್ರತಂಡ ಅಪ್ಪು ಅವರನ್ನು ಅವಮಾನಿಸಿದ್ದಾರೆ ಎಂದು ಅಭಿಮಾನಿಗಳು ಸೇರಿದಂತೆ ಚಿತ್ರರಂಗದ ಹಲವರು ಬೇಸರ ವ್ಯಕ್ತಪಡಿಸಿದ್ದರು.

ಕಾರ್ಯಕ್ರಮದಲ್ಲಿ ವೇದಿಎ ಮೇಳೆ ಮೊದಲಿಗೆ ಪುನೀತ್ ರಾಜ್‌ಕುಮಾರ್‌ ಅವರ ಭಾವಚಿತ್ರವನ್ನಿಟ್ಟು ಶ್ರದ್ಧಾಂಜಲಿ ಸಲ್ಲಿಸಲಾಗಿತ್ತು. ಬಳಿಕ ಅದೇ ಭಾವಚಿತ್ರದ ಮುಂದೆ ನಿರೂಪಕ ಅಕುಲ್ ಬಾಲಾಜಿ, ನಟಿಯರಾದ ರಚಿತಾ ರಾಮ್, ರಕ್ಷಿತಾ ಪ್ರೇಮ್, ನಿಶ್ವಿಕಾ ನಾಯ್ಡು, ಗಾಯಕಿ ಮಂಗ್ಲಿ ಶಾಂಪೇನ್ ಬಾಟಲ್ ಹಿಡಿದು ಸಮಭ್ರಮಿಸಿದ್ದರು. ಈ ವೇಳೆ ಹಿಂದಿನ ಸ್ಕ್ರೀನ್‌ನಲ್ಲಿ ನಟ ಪುನೀತ್ ಪೋಟೋ ಕೂಡ ಕಾಣಿಸಿಕೊಂಡಿತ್ತು. ಇದೆಲ್ಲಾ ಅಪ್ಪು ಅಭಿಮಾನಿಗಳ ಆಕ್ರೋಶಕ್ಕೆ ಕಾರಣವಾಗಿತ್ತು.

ಇದನ್ನೂ ಓದಿ: ಪುನೀತ್ ರಾಜಕುಮಾರ್ ನುಡಿನಮನ; ಮುಗ್ಧ ನಗುವೊಂದರ ಕಣ್ಮರೆ

ಕರ್ನಾಟಕ ವಾಣಿಜ್ಯ ಮಂಡಳಿಯ ಮಾಜಿ ಅಧ್ಯಕ, ನಿರ್ಮಾಪಕ ಸಾ.ರಾ.ಗೋವಿಂದು ಕೂಡ ’ಏಕ್ ಲವ್ ಯಾ’ ಚಿತ್ರರಂಗದ  ವರ್ತನೆಗೆ ಆಕ್ಷೇಪ ವ್ಯಕ್ತಪಡಿಸಿದ್ದರು. ’ನಮ್ಮ ಚಿತ್ರರಂಗದವರೇ ಇಂಥ ಕೆಲಸ ಮಾಡಿದರೆ ನಾವು ಯಾರ ಮೇಲೆ ಆಪಾದನೆ ಮಾಡೋದು? ದಯವಿಟ್ಟು ಇಂಥದ್ದನ್ನೆಲ್ಲ ಮಾಡಬೇಡಿ. ಪುನೀತ್​ ನಮ್ಮಿಂದ ದೂರವಾಗಿರಬಹುದು. ಅವರಿಗೆ ಅವಮಾನ ಆಗುವಂತಹ ಕೆಲಸವನ್ನು ಮಾಡಬೇಡಿ. ಪುನೀತ್​ಗೆ ಅವಮಾನ ಆಗುವಂತೆ ನಮ್ಮ ಚಿತ್ರರಂಗದವರು ನಡೆದುಕೊಂಡಿರುವು ನಾವೆಲ್ಲರೂ ತಲೆ ತಗ್ಗಿಸುವಂತೆ ಆಗಿದೆ’ ಎಂದು ಬೇಸರ ವ್ಯಕ್ತಪಡಿಸಿದ್ದರು.

ವಿವಾದ ಹೆಚ್ಚಾದ ಬಳಿಕ ಚಿತ್ರದ ನಿರ್ದೇಶಕ ಪ್ರೇಮ್, ನಿರ್ಮಾಪಕಿ ರಕ್ಷಿತಾ ಪ್ರೇಮ್, ನಟಿ ರಚಿತಾ ರಾಮ್ ಸೇರಿದಂತೆ ಚಿತ್ರತಂಡ ಜನರ ಕ್ಷಮೆ ಕೇಳಿದ್ದಾರೆ.

 

“ಅಪ್ಪು ಅವರ ಅಗಲಿಕೆಯ ನೋವು ಇನ್ನೂ ನಮ್ಮ ಮನಸ್ಸಿನಲ್ಲಿದೆ. ಆ ಕಾರಣಕ್ಕೆ ನ.4 ಕ್ಕೆ ಬಿಡುಗಡೆಯಾಗಬೇಕಿದ್ದ ಏಕ್ ಲವ್ ಯಾ ಸಿನಿಮಾದ ಹಾಡನ್ನು ನ.12 ಕ್ಕೆ ಬಿಡುಗಡೆ ಮಾಡಲಾಯಿತು. ಸಮಾರಂಭದ ಉದ್ಘಾಟನೆಯೇ ಅಪ್ಪು ಅವರನ್ನು ನೆನೆಯುತ್ತಾ, ಅವರ ವ್ಯಕ್ತಿತ್ವ, ಅವರ ಜೊತೆಗೆ ಕಳೆದ ಕ್ಷಣಗಳ ನೆನೆಯುತ್ತಾ ಶುರುವಾಯಿತು. ಈ ಹಾಡು ಶುರುವಾಗುವುದೇ ಅಪ್ಪು ಅಮರ ಎಂದು. ಅಪ್ಪು ಅವರ ಫೋಟೋ ಮುಂದೆ ಶಾಂಪೇನ್ ಓಪನ್ ಮಾಡಿದ ಉದ್ದೇಶ ಕೇವಲ ಹಾಡು ಬಿಡುಗಡೆಯ ಅಂಗವಾಗಿ. ಇದರಿಂದ ಅಪ್ಪು ಅವರ ಅಭಿಮಾನಿಗಳಿಗೆ ನೋವಾಗಿದ್ದಲ್ಲಿ ನನ್ನ ಹಾಗೂ ನನ್ನ ಇಡೀ ’ಏಕ್ ಲವ್ ಯಾ’ ಚಿತ್ರತಂಡದಿಂದ ಕ್ಷಮೆಯಾಚಿಸುತ್ತೇವೆ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಪುನೀತ್ ರಾಜಕುಮಾರ್ ‘ನಮ್ಮ ಅಪ್ಪು’ ಆದದ್ದು..: ಕೆ.ಫಣಿರಾಜ್

ನಟಿ ರಚಿತಾ ರಾಮ್ ಕೂಡ ಕ್ಷಮೆ ಕೇಳಿದ್ದಾರೆ.

“ನಿನ್ನೆಯ ಏಕ್​ ಲವ್​ ಯಾ ಸಿನಿಮಾದ ಸಾಂಗ್​ ಲಾಂಚ್​ ಕಾರ್ಯಕ್ರಮದಲ್ಲಿ ಶಾಂಪೇನ್​ ಬಾಟಲ್​ ಓಪನ್​ ಮಾಡಿ ಹಾಡನ್ನು ಬಿಡುಗಡೆಗೊಳಿಸಿರುವ ಬಗ್ಗೆ ನಿಮ್ಮೆಲ್ಲರಿಗೆ ಅಸಮಾಧಾನ ಆಗಿದೆ. ಆ ಬಗ್ಗೆ ದಯವಿಟ್ಟು ಕ್ಷಮೆ ಇರಲಿ. ನಾನೂ ಕೂಡ ಚಿತ್ರದ ಭಾಗವಾಗಿರುವುದರಿಂದ ಕ್ಷಮೆ ಕೇಳುತ್ತೇನೆ. ಅಪ್ಪು ಅವರಿಗೆ ಅವಮಾನ ಮಾಡುವ ಉದ್ದೇಶ, ಆಲೋಚನೆ ಯಾವ ಕನ್ನಡಿಗರಿಗೂ ಇರುವುದಿಲ್ಲ. ಆದಾಗಿಯೂ ಉದ್ದೇಶಪೂರ್ವಕವಲ್ಲದ ತಪ್ಪನ್ನು ಅಭಿಮಾನಿಗಳು ಮನ್ನಿಸುತ್ತಾರೆಂದು ನಂಬಿದ್ದೇನೆ” ಎಂದು ರಚಿತಾ ರಾಮ್ ತಮ್ಮ ಸಾಮಾಜಿಕ ಜಾಲತಾಣದಲ್ಲಿ ಬರೆದಿದ್ದಾರೆ.

ಚಿತ್ರದ ನಿರ್ಮಾಪಕಿ ರಕ್ಷಿತಾ ಪ್ರೇಮ್ ಕೂಡ ’ಅಪ್ಪು ಅಗಲಿಕೆಯ ನೋವಿನಿಂದ ನಾನಿನ್ನೂ ಹೊರ ಬರಲು ಸಾಧ್ಯವಾಗುತ್ತಿಲ್ಲ. ಅಪ್ಪುಗೆ ಅವಮಾನ ಮಾಡಲು ಯಾರಿಂದಲೂ ಸಾಧ್ಯವಿಲ್ಲ. ಶಾಂಪೇನ್ ಬಾಟಲಿ ಓಪನ್ ಮಾಡಿದ್ದು ಅಪ್ಪು ಅಭಿಮಾನಿಗಳಲ್ಲಿ ಅಸಮಾಧಾನ ಉಂಟಾಗಿದ್ದರೆ ನನ್ನ ಮತ್ತು ಚಿತ್ರತಂಡದ ಕಡೆಯಿಂದ ಕ್ಷಮೆಯಾಚಿಸುತ್ತೇವೆ. ಅಪ್ಪು ಎಂದಿಗೂ ನಮ್ಮ ಮನಸ್ಸಿನಲ್ಲಿ ಇದ್ದಾರೆ’ ಎಂದು ಕ್ಷಮೆ ಕೇಳಿದ್ದಾರೆ.


ಇದ ಓದಿ: ಕನ್ನಡ ಚಿತ್ರರಂಗಕ್ಕೆ ಹೊಸ ಕ್ರಿಯಾಶೀಲತೆ ತಂದುಕೊಟ್ಟ ’ಅಪ್ಪು ಡ್ಯಾನ್ಸ್’

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ. ಬಂಗಾಳ ಎಸ್‌ಐಆರ್ | ಮೇಲ್ಮನವಿ ನ್ಯಾಯಮಂಡಳಿಗಳಿಗೆ ಕಾಲಮಿತಿ ನಿಗದಿಪಡಿಸಲು ಸಾಧ್ಯವಿಲ್ಲ ಎಂದ ಸುಪ್ರೀಂ ಕೋರ್ಟ್

ಪಶ್ಚಿಮ ಬಂಗಾಳದ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್) ಸಂಬಂಧಿಸಿದ ಮೇಲ್ಮನವಿಗಳ ವಿಚಾರಣೆ ನಡೆಸುತ್ತಿರುವ ಮೇಲ್ಮನವಿ ನ್ಯಾಯಾಧಿಕರಣಗಳ ನಿರ್ಧಾರಗಳಿಗೆ ಯಾವುದೇ ನಿರ್ದಿಷ್ಟ ಸಮಯದ ಮಿತಿಯನ್ನು ನಿಗದಿಪಡಿಸಲು ಸಾಧ್ಯವಿಲ್ಲ ಎಂದು ಸುಪ್ರೀಂ ಕೋರ್ಟ್...

‘ಎಸ್‌ಐಆರ್‌’ನಿಂದ ಹೆಸರು ಡಿಲೀಟ್‌ ಆದವರಿಗೆ ‘ಹೊಸ ಮತದಾರರ ನೋಂದಣಿ’ ಯಾಕೆ?

ಅಂತಿಮ ಮತದಾರರ ಪಟ್ಟಿಯಲ್ಲಿ ಹೆಸರು ಕಾಣೆಯಾಗಿದ್ದರೆ ನಮೂನೆ ಸಂಖ್ಯೆ 6 ಅನ್ನು (Form No. 6) ಸಲ್ಲಿಸಿ ಎಂದು ಜುಲೈ 22 ರಂದು ಮಂಗಳೂರಿನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಕರ್ನಾಟಕ ರಾಜ್ಯ ಮುಖ್ಯ ಚುನಾವಣಾ...

ನೀಟ್ ವಿರುದ್ಧ ನಿರ್ಣಯ ಅಂಗೀಕರಿಸಿದ ತಮಿಳುನಾಡು ವಿಧಾನಸಭೆ : ಸಭಾತ್ಯಾಗ ಮಾಡಿದ ಬಿಜೆಪಿಯ ಏಕೈಕ ಶಾಸಕ

ತಮಿಳುನಾಡು ವಿಧಾನಸಭೆಯು ಮಂಗಳವಾರ (ಆ.11) ವೈದ್ಯಕೀಯ ಕೋರ್ಸ್‌ಗಳ ಪ್ರವೇಶಕ್ಕಾಗಿ ನಡೆಸಲಾಗುವ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆಯನ್ನು (ನೀಟ್) ರದ್ದುಗೊಳಿಸುವಂತೆ ಕೇಂದ್ರ ಸರ್ಕಾರವನ್ನು ಒತ್ತಾಯಿಸುವ ನಿರ್ಣಯವನ್ನು ಸರ್ವಾನುಮತದಿಂದ ಅಂಗೀಕರಿಸಿದೆ. ಪರೀಕ್ಷೆಗಳನ್ನು ನಡೆಸುವಲ್ಲಿ ಪದೇ ಪದೇ...

‘ಬಹುಸಂಖ್ಯಾತ ಭಾವನೆಯು ಸಾಂವಿಧಾನಿಕ ಹಕ್ಕುಗಳನ್ನು ಮರೆಮಾಡಲು ಸಾಧ್ಯವಿಲ್ಲ’: ಇಸ್ಲಾಂ ಧರ್ಮ ಸ್ವೀಕರಿಸಿದ್ದ ಸಹೋದರಿಯರ ಅಕ್ರಮ ಬಂಧನಕ್ಕೆ ಅಲಹಾಬಾದ್ ಹೈಕೋರ್ಟ್ ತೀವ್ರ ತರಾಟೆ

ಹಿಂದೂ ಧರ್ಮದಿಂದ ಸ್ವಯಂಪ್ರೇರಿತವಾಗಿ ಇಸ್ಲಾಂ ಧರ್ಮಕ್ಕೆ ಮತಾಂತರಗೊಂಡ ನಂತರ, ಸ್ವಂತ ತಂದೆ ಹಾಗೂ ಉತ್ತರ ಪ್ರದೇಶ ರಾಜ್ಯ ಸರ್ಕಾರದ ಅಕ್ರಮ ಹಸ್ತಕ್ಷೇಪದಿಂದಾಗಿ ವರ್ಷಗಳ ಕಾಲ ತಮ್ಮ ಮೂಲಭೂತ ಸ್ವಾತಂತ್ರ್ಯವನ್ನು ಕಳೆದುಕೊಂಡಿದ್ದ ಇಬ್ಬರು ವಯಸ್ಕ...

ಸಂವಿಧಾನಬದ್ಧ ದಾಖಲೆಗಳಿದ್ದರೂ ಪಶ್ಚಿಮ ಬಂಗಾಳದ ಮುಸ್ಲಿಂ ಮಹಿಳೆ ‘ಒಳನುಸುಳುಕೋರ’ರೆಂದು ಬಾಂಗ್ಲಾಕ್ಕೆ ಗಡೀಪಾರು: ಭಾರತದಲ್ಲೇ ಉಳಿದ ಪತಿ, ಇಬ್ಬರು ಮಕ್ಕಳು

ಭಾರತೀಯ ಪೌರತ್ವವನ್ನು ಸ್ಪಷ್ಟವಾಗಿ ಸಾಬೀತುಪಡಿಸುವ ಜನನ ಪ್ರಮಾಣಪತ್ರ, ಮತದಾರರ ಗುರುತಿನ ಚೀಟಿ, ಪ್ಯಾನ್ ಕಾರ್ಡ್ ಮತ್ತು ಸ್ವಂತ ಭೂಮಿಯ ದಾಖಲೆಗಳು ಕೈಯಲ್ಲಿದ್ದರೂ, ಪಶ್ಚಿಮ ಬಂಗಾಳದ 40 ವರ್ಷದ ಮುಸ್ಲಿಂ ಮಹಿಳೆಯೊಬ್ಬರನ್ನು 'ಒಳನುಸುಳುಕೋರ' ಎಂಬ...

SIR ನಂತರ ಮತದಾರರ ಪಟ್ಟಿಯಿಂದ ನನ್ನ ಹೆಸರು ಡಿಲೀಟ್ ಆಗಿದೆ : ನಟ ಪ್ರಕಾಶ್ ರಾಜ್

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್ಐಆರ್) ನಂತರ ಬೆಂಗಳೂರಿನಲ್ಲಿ ಮತದಾರರ ಪಟ್ಟಿಯಿಂದ ನನ್ನ ಹೆಸರು ಡಿಲೀಟ್ ಆಗಿದೆ ಎಂದು ನಟ, ಸಾಮಾಜಿಕ ಹೋರಾಟಗಾರ ಪ್ರಕಾಶ್ ರಾಜ್ ಆರೋಪಿಸಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೋ ಹಂಚಿಕೊಂಡಿರುವ...

ಸರ್ಕಾರಿ ಶಾಲೆಗಳ ಸುಧಾರಣೆಗೆ ದೇಶಾದ್ಯಂತ ಅಭಿಯಾನ ಘೋಷಿಸಿದ ಅಭಿಜೀತ್ ದೀಪ್ಕೆ

ಗ್ರಾಮೀಣ ಪ್ರದೇಶಗಳಲ್ಲಿನ ಸರ್ಕಾರಿ ಶಾಲೆಗಳನ್ನು ಸುಧಾರಿಸಲು ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ ರಾಷ್ಟ್ರವ್ಯಾಪಿ ಅಭಿಯಾನ ಘೋಷಿಸಿದ್ದಾರೆ. "ಪೋಷಕರು ಶಾಲೆಗಳ ಮೂಲಭೂತ ಸೌಲಭ್ಯಗಳ ಸಾಮಾಜಿಕ ಲೆಕ್ಕಪರಿಶೋಧನೆ ನಡೆಸಬೇಕು, ಶಾಲೆಗಳನ್ನು ಸುಧಾರಿಸುವ...

ಕರ್ನಾಟಕದ ASDDO ಸಂಖ್ಯೆ 3 ಲಕ್ಷದಷ್ಟು ಇಳಿಕೆ : SIR ಪ್ರಕ್ರಿಯೆ ಬಗ್ಗೆಯೇ ಪ್ರಶ್ನೆಗಳನ್ನು ಹುಟ್ಟುಹಾಕಿದ ವರದಿ

ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಲ್ಲಿ ಇದುವರೆಗಿನ ಅತಿ ದೊಡ್ಡ ತಿದ್ದುಪಡಿ ಕರ್ನಾಟಕದಲ್ಲಿ ಆಗಿದ್ದು, ಮತದಾನದ ಹಕ್ಕನ್ನು ಕಳೆದುಕೊಳ್ಳುವ ಹಂತದಲ್ಲಿದ್ದ ಸುಮಾರು 3 ಲಕ್ಷ ಜನರನ್ನು ಮತ್ತೆ ಮತದಾರರ ಪಟ್ಟಿಗೆ...

ವಸತಿಗೃಹದಲ್ಲಿ ಹೋಮ-ಪೂಜೆ ಆಯೋಜನೆ; ಬಾಗಲಕೋಟೆ ತೋಟಗಾರಿಕೆ ವಿವಿ ಕುಲಪತಿಗಳಿಂದ ಅಧಿಕಾರ ದುರುಪಯೋಗ

ಬಾಗಲಕೋಟೆಯಲ್ಲಿರುವ ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದ ವಸತಿಗೃಹದಲ್ಲಿ ಧಾರ್ಮಿಕ ಪೂಜಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದ್ದು, ಈ ಕಾರ್ಯಕ್ರಮಕ್ಕೆ ವಿಶ್ವವಿದ್ಯಾಲಯದ ಅಧಿಕೃತ‌ ಲೆಟರ್‌ಹೆಡ್‌ ಮೂಲಕ ಆಹ್ವಾನವನ್ನೂ ಹೊರಡಿಸುವ ಮೂಲಕ ಕುಲಪತಿ ಡಾ. ವಿಷ್ಣುವರ್ಧನ ಅವರು ಅಧಿಕಾರ ದುರುಪಯೋಗ...

ಕಪ್ಪು ಕುರ್ತಾ-ಪೈಜಾಮ ಧರಿಸಿದ್ದ ಕಲಾವಿದನಿಗೆ ಥಳಿಸಿದ ಹಿಂದುತ್ವ ಗುಂಪು: ಮುಸ್ಲಿಂ ಎಂದು ಶಂಕಿಸಿ ಅಮಾನವೀಯ ಹಲ್ಲೆ

ರಂಗಭೂಮಿ ಕಲಾವಿದರೊಬ್ಬರು ಕಪ್ಪು ಕುರ್ತಾ-ಪೈಜಾಮ ಧರಿಸಿದ್ದಕ್ಕಾಗಿ ಮುಸ್ಲಿಂ ಎಂದು ಶಂಕಿಸಿ ಹಿಂದುತ್ವ ಯುವಕರ ಗುಂಪೊಂದು ಅವರನ್ನು ಕ್ರೂರವಾಗಿ ಥಳಿಸಿರುವ ಘಟನೆ ಪಶ್ಚಿಮ ಬಂಗಾಳದ ಉತ್ತರ 24 ಪರಗಣ ಜಿಲ್ಲೆಯಲ್ಲಿ ನಡೆದಿದೆ. ಶುಭಂಕರ್ ದಾಸ್ ಶರ್ಮಾ...