Homeಚಳವಳಿಕೋಮು ಗಲಭೆ ಬಿಟ್ಟು ಚಪ್ಪಲಿ ಅಂಗಡಿ ಹಾಕಿದ ಅಶೋಕ್: ಗುಜರಾತಿನ ಈ ಗೆಳೆಯರು ಇಂದಿನ ಭಾರತಕ್ಕೆ...

ಕೋಮು ಗಲಭೆ ಬಿಟ್ಟು ಚಪ್ಪಲಿ ಅಂಗಡಿ ಹಾಕಿದ ಅಶೋಕ್: ಗುಜರಾತಿನ ಈ ಗೆಳೆಯರು ಇಂದಿನ ಭಾರತಕ್ಕೆ ಮಾದರಿಯಾಗಬಲ್ಲರೆ?

ಅವನನ್ನು ಚೆನ್ನಾಗಿ ನೋಡುವುದನ್ನು ಬಿಟ್ಟು ನಾನು ಇನ್ನೇನು ಬಯಸುತ್ತೇನೆ? ನಾನು ಅಂಗಡಿ ಉದ್ಘಾಟಿಸಿದೆ ಮತ್ತು ಒಂದು ಜೋಡಿ ಚಪ್ಪಲಿಗಳನ್ನು ಕೂಡ ಖರೀದಿಸಿದೆ. ಅವನ ವ್ಯವಹಾರವು ಅಭಿವೃದ್ಧಿ ಹೊಂದುತ್ತದೆ ಎಂದು ನಾನು ಭಾವಿಸುತ್ತೇನೆ ಎನ್ನುತ್ತಾರೆ ಅನ್ಸಾರಿ

- Advertisement -
- Advertisement -

ಅಹಮದಾಬಾದ್ ನಲ್ಲಿ ಅಶೋಕ್ ಪರ್ಮಾರ್ ಎಂಬುವವರು ‘ಏಕತಾ ಚಪ್ಪಲ್ ಘರ್’ ಎಂಬ ಚಪ್ಪಲಿ ಶೂ ಅಂಗಡಿ ಆರಂಭಿಸಿದ್ದಾರೆ. ಅದನ್ನು ಕುತುಬುದ್ದೀನ್ ಅನ್ಸಾರಿ ಎಂಬುವವರು ಉದ್ಘಾಟಿಸಿದ್ದಾರೆ. ಆ ಇಬ್ಬರು ಗೆಳೆಯರು ಅಂಗಡಿಯ ಮುಂದೆ ನಿಂತು ತೆಗೆಸಿಕೊಂಡ ಫೋಟೊ ಎಲ್ಲಾ ಕಡೆ ವೈರಲ್ ಆಗಿದೆ. ಲಕ್ಷಾಂತರ ಜನ ಈ ಜೋಡಿಗೆ ಶುಭ ಹಾರೈಸಿದ್ದಾರೆ. ಏಕೆ? ಯಾರಿವರು? ಇವರ ಹಿನ್ನೆಲೆ ಏನು?

ಅದು 2002ರ ಕಾಲ. ಸರಿಯಾಗಿ 17 ವರ್ಷಗಳ ಹಿಂದೆ ಗುಜರಾತ್ ನಲ್ಲಿ ಕೋಮುಗಲಭೆಗಳು ಉತ್ತುಂಗಕ್ಕೇರಿದ್ದವು. ಗೋಧ್ರಾ ರೈಲು ದುರಂತಕ್ಕೆ ಸೇಡು ತೀರಿಸಬೇಕೆಂದು ಒಂದು ಸಮುದಾಯದವರು ಮತ್ತೊಂದು ಸಮುದಾಯದವರನ್ನು ಹುಡಕಿ ಕೊಲ್ಲುತ್ತಿದ್ದ ಸಮಯ. ವೃತ್ತಿಯಲ್ಲಿ ಟೈಲರ್ ಆದ ಕುತುಬುದ್ದೀನ್ ಅನ್ಸಾರಿ ಎಂಬ ಮುಸ್ಲಿಂ ಸಮುದಾಯದ ವ್ಯಕ್ತಿ ಫೆಬ್ರವರಿ 28, 2002 ರಂದು ಅಹಮದಾಬಾದ್‌ನ ನರೋಡಾ ಪಟಿಯಾ ಪ್ರದೇಶದಲ್ಲಿ ಗಲಭೆ ಉತ್ತುಂಗದಲ್ಲಿದ್ದಾಗ, ನರೋಲ್-ನರೋಡಾ ರಸ್ತೆಯಲ್ಲಿರುವ ತನ್ನ ಮನೆಯ ಹೊರಗೆ ಆತ ಸಹಾಯಕ್ಕಾಗಿ ರಾಪಿಡ್ ಆಕ್ಷನ್ ಫೋರ್ಸ್ (ಆರ್‌ಎಎಫ್) ಸಿಬ್ಬಂದಿಗೆ  ಕೈ ಮುಗಿದ ಮನವಿ ಮಾಡುವ ದೃಶ್ಯ ಕ್ಯಾಮೆರಾದಲ್ಲಿ ಸೆರೆಯಾಗಿತ್ತು. ಅವರ ರಕ್ತದ ಅಂಗಿಯ ಚಿತ್ರ ಮತ್ತು ಕಣ್ಣೀರು ತುಂಬಿದ ಕಣ್ಣುಗಳು ಗುಜರಾತ್ ಗಲಭೆಯ ಸಂತ್ರಸ್ತರನ್ನು ಪ್ರತಿನಿಧಿಸುವ ಚಿತ್ರವಾಯಿತು.

ಅದೇ ಸಂದರ್ಭದಲ್ಲಿ ಬಲಗೈಯ್ಯಲ್ಲೊಂದು ಕಬ್ಬಿಣದ ರಾಡ್, ತಲೆಗೆ ಕೇಸರಿ ಬಟ್ಟೆ ಕಟ್ಟಿ ಎರಡೂ ಕೈಗಳನ್ನು ಮೇಲಕ್ಕೆತ್ತಿ ಅಟ್ಟಹಾಸ ಮೆರೆಯುತ್ತಿರುವ ಹಿಂದೂ ಸಮುದಾಯಕ್ಕೆ ಸೇರಿದ ಅಶೋಕ್ ಪರ್ಮಾರ್ ಅಲಿಯಾಸ್ ಅಶೋಕ್ ಮೋಚಿಯ ಫೋಟೊ ಕೂಡ ಅಂದಿನ ದೌರ್ಜನ್ಯದ ಸಂಕೇತವಾಗಿತ್ತು.

ಆದರ ಗಲಭೆಗಳು ನಿಂತು ಬಹಳ ಕಾಲವಾದ ನಂತರ ಅವರಿಬ್ಬರನ್ನು ಮಾತನಾಡಿಸಿ ಅವರನ್ನು ಒಂದೇ ವೇದಿಕೆಗೆ ತರುವ ಮೂಲಕ ಕೋಮು ಸೌಹಾರ್ದತೆ ಸಾರಲು ಕೇರಳದ ಸಿಪಿಎಂ ಪಕ್ಷ ಪ್ರಯತ್ನಿಸಿತ್ತು ಮತ್ತು ಅದಕ್ಕೆ ಯಶ ಸಿಕ್ಕಿತು ಕೂಡ. ಅಶೋಕ್ ಪರ್ಮಾರ್ ರನ್ನು ಮಾತನಾಡಿಸಿ ಈ ರೀತಿ ಕೋಮುದ್ವೇಷ ಸಾಧಿಸಿ ದಾಳಿ ಮಾಡುವುದು ತಪ್ಪಲ್ಲವೇ? ಇದರಿಂದ ಸಮಾಜಕ್ಕಾಗುವ ಅಪಾಯಗಳನ್ನು ತಿಳಿಹೇಳಲಾಯಿತು. ಆತನಿಗೆ ತನ್ನ ತಪ್ಪಿನ ಮನವರಿಕೆಯಾಗಿ ಬಹಿರಂಗ ಕ್ಷಮೆ ಕೇಳಿದ್ದ. ಮುಂದೆಂದೂ ಕೋಮುಗಲಭೆಗಳಲ್ಲಿ ಭಾಗವಹಿಸದೇ ಸಾಮಾನ್ಯ ಜೀವನ ಸಾಗಿಸಲು ನಿರ್ಧರಿಸಿದ್ದ. ಕೇರಳದಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಇಬ್ಬರೂ ಭಾಗವಹಿಸಿ ಅಶೋಕ್ ಮೋಚಿ, ಅನ್ಸಾರಿಗೆ ಗುಲಾಬಿ ಹೂ ಕೊಡುವ ಮೂಲಕ ಭಾವೈಕ್ಯತೆ ಮೆರದಿದ್ದ.

ಅಶೋಕ್ ಪರ್ಮಾರ್ ಬಡವನಾಗಿದ್ದರಿಂದ ದೆಹಲಿಯ ಫುಟ್ ಪಾತ್ ಗಳಲ್ಲಿ ಶೂ, ಚಪ್ಪಲಿ ಹೊಲೆಯುತ್ತಿದ್ದ ಮತ್ತು ಮಾರುತ್ತಿದ್ದ. ತನ್ನ ಜೀವನವನ್ನು ಮತ್ತಷ್ಟು ತಹಬದಿಗೆ ತರುವುದಕ್ಕಾಗಿ ಈಗ ಅಹಮದಾಬಾದ್ ನಲ್ಲಿ ಹೊಸ ಚಪ್ಪಲಿ ಅಂಗಡಿ ಹಾಕಿದ್ದಾನೆ. ಇದಕ್ಕಾಗಿ ಆತನಿಗೆ ಕೇರಳದ ಸಿಪಿಎಂ ಪಕ್ಷವು ಆರಂಭಿಕ ಬಂಡವಾಳದ ಹಣಕಾಸು ಸಹಾಯ ಮಾಡಿದೆ. ಅದಕ್ಕೆ ‘ಏಕತಾ ಚಪ್ಪಲ್ ಘರ್’ ಎಂಬ ಸೌಹಾರ್ದ ಸೂಚಿಸುವ ಹೆಸರು ಸಹ ಇಟ್ಟಿದ್ದಾನೆ. ಜೊತೆಗೆ ತನ್ನ ಗೆಳೆಯ ಕುತುಬುದ್ದೀನ್ ಅನ್ಸಾರಿರವರಿಂದಲೇ ಅದರ ಉದ್ಘಾಟನೆ ಮಾಡಿಸುವ ಮೂಲಕ ತನ್ನ ಹಿಂದಿನ ತಪ್ಪುಗಳಿಗೆ ಒಂದು ರೀತಿಯ ಪ್ರಾಯಶ್ಚಿತ ಮಾಡಿಕೊಂಡಿದ್ದಾನೆ ಎಂದು ಎಲ್ಲೆಡೆ ಮಾತನಾಡಿಕೊಳ್ಳುತ್ತಿದ್ದಾರೆ.

ಇನ್ನು ಅಶೋಕ್ ಪರ್ಮಾರ್ ರವರ ಹೊಸ ಅಂಗಡಿ ಉದ್ಘಾಟನೆಯ ಗೌರವಾನ್ವಿತ ಅತಿಥಿಯಾಗಿದ್ದ ಕುತುಬುದ್ದೀನ್ ಅನ್ಸಾರಿ ಗಲಭೆಯ ನಂತರ ಪಶ್ಚಿಮ ಬಂಗಾಳದಲ್ಲಿ ತಾತ್ಕಾಲಿಕವಾಗಿ ನೆಲೆಸಿದ್ದರು. ಅಲ್ಲಿಯೂ ಅವರು ಟೈಲರ್ ಆಗಿ ಕೆಲಸ ಮಾಡುತ್ತಿದ್ದಾರೆ.

ಅಶೋಕ್ ಪರ್ಮಾರ್ ಮೋಚಿಯೊಂದಿಗಿನ ತನ್ನ ಸಂಬಂಧದ ಬಗ್ಗೆ ಮಾತನಾಡಿರುವ ಕುತುಬುದ್ದೀನ್ ಅನ್ಸಾರಿ, “ನಾವು ಕಾಲಕಾಲಕ್ಕೆ ಭೇಟಿಯಾಗುತ್ತಲೇ ಇರುತ್ತೇವೆ. ಅವರು (ಅಶೋಕ್) ಅವರು ತಮ್ಮ ಅಂಗಡಿಯನ್ನು ನಾನು ಉದ್ಘಾಟಿಸಬೇಕೆಂದು ಕೇಳಿದರು ಮತ್ತು ನಾನು ಒಪ್ಪಿಕೊಂಡೆ. ಅವನನ್ನು ಚೆನ್ನಾಗಿ ನೋಡುವುದನ್ನು ಬಿಟ್ಟು ನಾನು ಇನ್ನೇನು ಬಯಸುತ್ತೇನೆ? ನಾನು ಅಂಗಡಿ ಉದ್ಘಾಟಿಸಿದೆ ಮತ್ತು ಒಂದು ಜೋಡಿ ಚಪ್ಪಲಿಗಳನ್ನು ಕೂಡ ಖರೀದಿಸಿದೆ. ನಾನು ಅವನನ್ನು ಚೆನ್ನಾಗಿ ಇರಲು ಬಯಸುತ್ತೇನೆ ಮತ್ತು ಅವನ ವ್ಯವಹಾರವು ಅಭಿವೃದ್ಧಿ ಹೊಂದುತ್ತದೆ ಎಂದು ನಾನು ಭಾವಿಸುತ್ತೇನೆ” ಎಂದು ಹೇಳಿದ್ದಾರೆ. ಈ ಹೇಳಿಕೆ ಸಾಕಷ್ಟು ಜನರ ಮೆಚ್ಚುಗೆಯನ್ನು ಗಳಿಸಿದೆ.

“ಇದು ಹಿಂದೂ ವರ್ಣ ವ್ಯವಸ್ಥೆಯಾಗಿದ್ದು, ನನ್ನನ್ನು ಚಮ್ಮಾರನಾಗಿ ಸಿಲುಕಿಕೊಳ್ಳುತ್ತಲೇ ಇದೆ. ಅವರು ನಮಗೆ ಮುಂದುವರಿಯಲು ಬಿಡುವುದಿಲ್ಲ” ಎಂದಿರುವ ಅಶೋಕ್ ಪರ್ಮಾರ್ ಮೋಚಿ, ಉನಾದಲ್ಲಿ ದಲಿತರನ್ನು ಸಾರ್ವಜನಿಕವಾಗಿ ಥಳಿಸಿದ ನಂತರ ತಮ್ಮ ಸಮುದಾಯದ ಹಕ್ಕುಗಳಿಗಾಗಿ ಹೋರಾಡಲು 2017 ರಲ್ಲಿ ಗುಜರಾತ್‌ನ ದಲಿತ ಆಜಾದಿ ಕೂಚ್‌ಗೆ ಸೇರಿದ್ದರು. ತನ್ನ ಅಂಗಡಿಯ ಉದ್ಘಾಟನೆಯಲ್ಲಿ ತನ್ನ ಗೆಳೆಯ ಅನ್ಸಾರಿ ಟೇಪು ಕತ್ತರಿಸುವುದನ್ನು ನೋಡಿದ ಮೋಚಿ ಭಾವುಕಗೊಂಡಿದ್ದಾರೆ.

ಒಟ್ಟಿನಲ್ಲಿ ಗುಜರಾತ್ ಗಲಭೆಯ ಸಮಯದಲ್ಲಿ ಎರಡು ವಿರುದ್ಧ ಧ್ರುವಗಳನ್ನು ಪ್ರತಿನಿಧಿಸಿದ್ದ ಇಬ್ಬರೂ ವ್ಯಕ್ತಿಗಳು ವಾಸ್ತವವನ್ನು ಅರ್ಥ ಮಾಡಿಕೊಂಡು ಸೌಹಾರ್ದತೆ ಮೆರೆದಿದ್ದಾರೆ. ಅಲ್ಲದೇ ಕೇವಲ ಭಾವನಾತ್ಮಕ ವಿಚಾರದಲ್ಲಿ ಜನರು ಆವೇಶಗೊಳಗಾಗದೆ ತಮ್ಮ ಬದುಕನ್ನು ಸುಧಾರಿಸುವ ಜೀವನೋಪಾಯದ ಕಡೆ ಚಲಿಸಬೇಕೆಂಬುದನ್ನು ಸಹ ಈ ಚಪ್ಪಲಿ ಅಂಗಡಿ ತೋರಿಸಿದೆ. ಇದು ಇಂದು ಇಡೀ ಭಾರತ ಅರ್ಥ ಮಾಡಿಕೊಳ್ಳಬೇಕಾದ ಪಾಠವಾಗಿದೆ. ಧರ್ಮ-ಧರ್ಮಗಳ ನಡುವಿನ ಕಂದರಗಳನ್ನು ಮುಚ್ಚಿಹಾಕಿ ಭಾರತದ ಎಲ್ಲಾ ಜನರು ತಮ್ಮ ಬದುಕನ್ನು ಅರ್ಥಪೂರ್ಣವಾಗಿ ಕಟ್ಟಿಕೊಳ್ಳುವುದರ ಜೊತೆಗೆ ದೇಶದ ಐಕ್ಯತೆ, ಸೌಹರ್ದತೆಗೆ ಶ್ರಮಿಸಬೇಕಿದೆ.

ಕೊನೆಯಲ್ಲಿ ಈ ಗೆಳೆಯರು ಹೀಗೆ ಬದಲಾಗಲು, ಹೊಸ ಬದುಕು ಕಟ್ಟಿಕೊಳ್ಳಲು ನೆರವಾಗುತ್ತಿರುವ ಕೇರಳ ಸಿಪಿಎಂ ಪಕ್ಷವನ್ನು ಮನಃಪೂರ್ವಕವಾಗಿ ಅಭಿನಂದಿಸೋಣ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

3 COMMENTS

  1. ಸೌಹಾರ್ದ ಳ್ಳೆಯದು.
    ಆದರೆ ಸಿಪಿಐದು ಒನ್ ವೇ ಸೌಹಾರ್ದ. ಸೌಹಾರ್ದತೆಯಾಗಲೀ ಗಲಭೆಯಾಗಲೀ – ಒಂದೇ ಕೈಯಲ್ಲಿ ಚಪ್ಪಾಳೆ ಸಾಧ್ಯವಿಲ್ಲ.. ನಿಮಗೆ ಗೋಧ್ರಾ ರೈಲಿಗೆ ಬೆಂಕಿ ಆಕಸ್ಮಿಕ, ನಂತರದ ಗಲಭೆ ಪೂರ್ವಯೋಜಿತ !
    ಹಿಂದೂ ಮಾತ್ರ ಗಲಭೆಕೋರ
    ಮುಸ್ಲಿಮರು ಸಂತ್ರಸ್ತರು !
    ನೀವು ಸಾಮಾಜಿಕ ನ್ಯಾಯ ಸಾರುವವರೇ ಹೌದಾದರೆ ….
    ಕಾಶ್ಮೀರಿ ಪಂಡಿತರನ್ನು ಅವರ ನೆಲದಿಂದ ಒಕ್ಕಲೆಬ್ಬಿಸಿ, ಹೊಡೆದು, ಕೊಂದು, ಅತ್ಯಾಚಾರಗೈದು, ಬದುಕಿ ಉಳಿದವರನ್ನು ಓಡಿಸಿದವರಿಂದ ‘ಬನ್ನಿ, ನಮ್ಮೊಂದಿಗೆ ಬದುಕಿ, ಇಲ್ಲೇ ನೆಲೆಸಿ’ ಎಂಬ ಕರೆ ಕೊಡಿಸಿ…ಕೈ ಕುಲುಕಿಸಿ.
    ಅಂದೇ ನಿಮ್ಮ ಸಿದ್ಧಾಂತಗಳ ಅನುಯಾಯಿಯಾಗುತ್ತೇನೆ ..

  2. ಸೌಹಾರ್ದ ಳ್ಳೆಯದು.
    ಆದರೆ ಸಿಪಿಎಂದು ಒನ್ ವೇ ಸೌಹಾರ್ದ. ಸೌಹಾರ್ದತೆಯಾಗಲೀ ಗಲಭೆಯಾಗಲೀ – ಒಂದೇ ಕೈಯಲ್ಲಿ ಚಪ್ಪಾಳೆ ಸಾಧ್ಯವಿಲ್ಲ.. ನಿಮಗೆ ಗೋಧ್ರಾ ರೈಲಿಗೆ ಬೆಂಕಿ ಆಕಸ್ಮಿಕ, ನಂತರದ ಗಲಭೆ ಪೂರ್ವಯೋಜಿತ !
    ಹಿಂದೂ ಮಾತ್ರ ಗಲಭೆಕೋರ
    ಮುಸ್ಲಿಮರು ಸಂತ್ರಸ್ತರು !
    ನೀವು ಸಾಮಾಜಿಕ ನ್ಯಾಯ ಸಾರುವವರೇ ಹೌದಾದರೆ ….
    ಕಾಶ್ಮೀರಿ ಪಂಡಿತರನ್ನು ಅವರ ನೆಲದಿಂದ ಒಕ್ಕಲೆಬ್ಬಿಸಿ, ಹೊಡೆದು, ಕೊಂದು, ಅತ್ಯಾಚಾರಗೈದು, ಬದುಕಿ ಉಳಿದವರನ್ನು ಓಡಿಸಿದವರಿಂದ ‘ಬನ್ನಿ, ನಮ್ಮೊಂದಿಗೆ ಬದುಕಿ, ಇಲ್ಲೇ ನೆಲೆಸಿ’ ಎಂಬ ಕರೆ ಕೊಡಿಸಿ…ಕೈ ಕುಲುಕಿಸಿ.
    ಅಂದೇ ನಿಮ್ಮ ಸಿದ್ಧಾಂತಗಳ ಅನುಯಾಯಿಯಾಗುತ್ತೇನೆ ..

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...