Homeಚಳವಳಿಕೋಮು ಗಲಭೆ ಬಿಟ್ಟು ಚಪ್ಪಲಿ ಅಂಗಡಿ ಹಾಕಿದ ಅಶೋಕ್: ಗುಜರಾತಿನ ಈ ಗೆಳೆಯರು ಇಂದಿನ ಭಾರತಕ್ಕೆ...

ಕೋಮು ಗಲಭೆ ಬಿಟ್ಟು ಚಪ್ಪಲಿ ಅಂಗಡಿ ಹಾಕಿದ ಅಶೋಕ್: ಗುಜರಾತಿನ ಈ ಗೆಳೆಯರು ಇಂದಿನ ಭಾರತಕ್ಕೆ ಮಾದರಿಯಾಗಬಲ್ಲರೆ?

ಅವನನ್ನು ಚೆನ್ನಾಗಿ ನೋಡುವುದನ್ನು ಬಿಟ್ಟು ನಾನು ಇನ್ನೇನು ಬಯಸುತ್ತೇನೆ? ನಾನು ಅಂಗಡಿ ಉದ್ಘಾಟಿಸಿದೆ ಮತ್ತು ಒಂದು ಜೋಡಿ ಚಪ್ಪಲಿಗಳನ್ನು ಕೂಡ ಖರೀದಿಸಿದೆ. ಅವನ ವ್ಯವಹಾರವು ಅಭಿವೃದ್ಧಿ ಹೊಂದುತ್ತದೆ ಎಂದು ನಾನು ಭಾವಿಸುತ್ತೇನೆ ಎನ್ನುತ್ತಾರೆ ಅನ್ಸಾರಿ

- Advertisement -
- Advertisement -

ಅಹಮದಾಬಾದ್ ನಲ್ಲಿ ಅಶೋಕ್ ಪರ್ಮಾರ್ ಎಂಬುವವರು ‘ಏಕತಾ ಚಪ್ಪಲ್ ಘರ್’ ಎಂಬ ಚಪ್ಪಲಿ ಶೂ ಅಂಗಡಿ ಆರಂಭಿಸಿದ್ದಾರೆ. ಅದನ್ನು ಕುತುಬುದ್ದೀನ್ ಅನ್ಸಾರಿ ಎಂಬುವವರು ಉದ್ಘಾಟಿಸಿದ್ದಾರೆ. ಆ ಇಬ್ಬರು ಗೆಳೆಯರು ಅಂಗಡಿಯ ಮುಂದೆ ನಿಂತು ತೆಗೆಸಿಕೊಂಡ ಫೋಟೊ ಎಲ್ಲಾ ಕಡೆ ವೈರಲ್ ಆಗಿದೆ. ಲಕ್ಷಾಂತರ ಜನ ಈ ಜೋಡಿಗೆ ಶುಭ ಹಾರೈಸಿದ್ದಾರೆ. ಏಕೆ? ಯಾರಿವರು? ಇವರ ಹಿನ್ನೆಲೆ ಏನು?

ಅದು 2002ರ ಕಾಲ. ಸರಿಯಾಗಿ 17 ವರ್ಷಗಳ ಹಿಂದೆ ಗುಜರಾತ್ ನಲ್ಲಿ ಕೋಮುಗಲಭೆಗಳು ಉತ್ತುಂಗಕ್ಕೇರಿದ್ದವು. ಗೋಧ್ರಾ ರೈಲು ದುರಂತಕ್ಕೆ ಸೇಡು ತೀರಿಸಬೇಕೆಂದು ಒಂದು ಸಮುದಾಯದವರು ಮತ್ತೊಂದು ಸಮುದಾಯದವರನ್ನು ಹುಡಕಿ ಕೊಲ್ಲುತ್ತಿದ್ದ ಸಮಯ. ವೃತ್ತಿಯಲ್ಲಿ ಟೈಲರ್ ಆದ ಕುತುಬುದ್ದೀನ್ ಅನ್ಸಾರಿ ಎಂಬ ಮುಸ್ಲಿಂ ಸಮುದಾಯದ ವ್ಯಕ್ತಿ ಫೆಬ್ರವರಿ 28, 2002 ರಂದು ಅಹಮದಾಬಾದ್‌ನ ನರೋಡಾ ಪಟಿಯಾ ಪ್ರದೇಶದಲ್ಲಿ ಗಲಭೆ ಉತ್ತುಂಗದಲ್ಲಿದ್ದಾಗ, ನರೋಲ್-ನರೋಡಾ ರಸ್ತೆಯಲ್ಲಿರುವ ತನ್ನ ಮನೆಯ ಹೊರಗೆ ಆತ ಸಹಾಯಕ್ಕಾಗಿ ರಾಪಿಡ್ ಆಕ್ಷನ್ ಫೋರ್ಸ್ (ಆರ್‌ಎಎಫ್) ಸಿಬ್ಬಂದಿಗೆ  ಕೈ ಮುಗಿದ ಮನವಿ ಮಾಡುವ ದೃಶ್ಯ ಕ್ಯಾಮೆರಾದಲ್ಲಿ ಸೆರೆಯಾಗಿತ್ತು. ಅವರ ರಕ್ತದ ಅಂಗಿಯ ಚಿತ್ರ ಮತ್ತು ಕಣ್ಣೀರು ತುಂಬಿದ ಕಣ್ಣುಗಳು ಗುಜರಾತ್ ಗಲಭೆಯ ಸಂತ್ರಸ್ತರನ್ನು ಪ್ರತಿನಿಧಿಸುವ ಚಿತ್ರವಾಯಿತು.

ಅದೇ ಸಂದರ್ಭದಲ್ಲಿ ಬಲಗೈಯ್ಯಲ್ಲೊಂದು ಕಬ್ಬಿಣದ ರಾಡ್, ತಲೆಗೆ ಕೇಸರಿ ಬಟ್ಟೆ ಕಟ್ಟಿ ಎರಡೂ ಕೈಗಳನ್ನು ಮೇಲಕ್ಕೆತ್ತಿ ಅಟ್ಟಹಾಸ ಮೆರೆಯುತ್ತಿರುವ ಹಿಂದೂ ಸಮುದಾಯಕ್ಕೆ ಸೇರಿದ ಅಶೋಕ್ ಪರ್ಮಾರ್ ಅಲಿಯಾಸ್ ಅಶೋಕ್ ಮೋಚಿಯ ಫೋಟೊ ಕೂಡ ಅಂದಿನ ದೌರ್ಜನ್ಯದ ಸಂಕೇತವಾಗಿತ್ತು.

ಆದರ ಗಲಭೆಗಳು ನಿಂತು ಬಹಳ ಕಾಲವಾದ ನಂತರ ಅವರಿಬ್ಬರನ್ನು ಮಾತನಾಡಿಸಿ ಅವರನ್ನು ಒಂದೇ ವೇದಿಕೆಗೆ ತರುವ ಮೂಲಕ ಕೋಮು ಸೌಹಾರ್ದತೆ ಸಾರಲು ಕೇರಳದ ಸಿಪಿಎಂ ಪಕ್ಷ ಪ್ರಯತ್ನಿಸಿತ್ತು ಮತ್ತು ಅದಕ್ಕೆ ಯಶ ಸಿಕ್ಕಿತು ಕೂಡ. ಅಶೋಕ್ ಪರ್ಮಾರ್ ರನ್ನು ಮಾತನಾಡಿಸಿ ಈ ರೀತಿ ಕೋಮುದ್ವೇಷ ಸಾಧಿಸಿ ದಾಳಿ ಮಾಡುವುದು ತಪ್ಪಲ್ಲವೇ? ಇದರಿಂದ ಸಮಾಜಕ್ಕಾಗುವ ಅಪಾಯಗಳನ್ನು ತಿಳಿಹೇಳಲಾಯಿತು. ಆತನಿಗೆ ತನ್ನ ತಪ್ಪಿನ ಮನವರಿಕೆಯಾಗಿ ಬಹಿರಂಗ ಕ್ಷಮೆ ಕೇಳಿದ್ದ. ಮುಂದೆಂದೂ ಕೋಮುಗಲಭೆಗಳಲ್ಲಿ ಭಾಗವಹಿಸದೇ ಸಾಮಾನ್ಯ ಜೀವನ ಸಾಗಿಸಲು ನಿರ್ಧರಿಸಿದ್ದ. ಕೇರಳದಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಇಬ್ಬರೂ ಭಾಗವಹಿಸಿ ಅಶೋಕ್ ಮೋಚಿ, ಅನ್ಸಾರಿಗೆ ಗುಲಾಬಿ ಹೂ ಕೊಡುವ ಮೂಲಕ ಭಾವೈಕ್ಯತೆ ಮೆರದಿದ್ದ.

ಅಶೋಕ್ ಪರ್ಮಾರ್ ಬಡವನಾಗಿದ್ದರಿಂದ ದೆಹಲಿಯ ಫುಟ್ ಪಾತ್ ಗಳಲ್ಲಿ ಶೂ, ಚಪ್ಪಲಿ ಹೊಲೆಯುತ್ತಿದ್ದ ಮತ್ತು ಮಾರುತ್ತಿದ್ದ. ತನ್ನ ಜೀವನವನ್ನು ಮತ್ತಷ್ಟು ತಹಬದಿಗೆ ತರುವುದಕ್ಕಾಗಿ ಈಗ ಅಹಮದಾಬಾದ್ ನಲ್ಲಿ ಹೊಸ ಚಪ್ಪಲಿ ಅಂಗಡಿ ಹಾಕಿದ್ದಾನೆ. ಇದಕ್ಕಾಗಿ ಆತನಿಗೆ ಕೇರಳದ ಸಿಪಿಎಂ ಪಕ್ಷವು ಆರಂಭಿಕ ಬಂಡವಾಳದ ಹಣಕಾಸು ಸಹಾಯ ಮಾಡಿದೆ. ಅದಕ್ಕೆ ‘ಏಕತಾ ಚಪ್ಪಲ್ ಘರ್’ ಎಂಬ ಸೌಹಾರ್ದ ಸೂಚಿಸುವ ಹೆಸರು ಸಹ ಇಟ್ಟಿದ್ದಾನೆ. ಜೊತೆಗೆ ತನ್ನ ಗೆಳೆಯ ಕುತುಬುದ್ದೀನ್ ಅನ್ಸಾರಿರವರಿಂದಲೇ ಅದರ ಉದ್ಘಾಟನೆ ಮಾಡಿಸುವ ಮೂಲಕ ತನ್ನ ಹಿಂದಿನ ತಪ್ಪುಗಳಿಗೆ ಒಂದು ರೀತಿಯ ಪ್ರಾಯಶ್ಚಿತ ಮಾಡಿಕೊಂಡಿದ್ದಾನೆ ಎಂದು ಎಲ್ಲೆಡೆ ಮಾತನಾಡಿಕೊಳ್ಳುತ್ತಿದ್ದಾರೆ.

ಇನ್ನು ಅಶೋಕ್ ಪರ್ಮಾರ್ ರವರ ಹೊಸ ಅಂಗಡಿ ಉದ್ಘಾಟನೆಯ ಗೌರವಾನ್ವಿತ ಅತಿಥಿಯಾಗಿದ್ದ ಕುತುಬುದ್ದೀನ್ ಅನ್ಸಾರಿ ಗಲಭೆಯ ನಂತರ ಪಶ್ಚಿಮ ಬಂಗಾಳದಲ್ಲಿ ತಾತ್ಕಾಲಿಕವಾಗಿ ನೆಲೆಸಿದ್ದರು. ಅಲ್ಲಿಯೂ ಅವರು ಟೈಲರ್ ಆಗಿ ಕೆಲಸ ಮಾಡುತ್ತಿದ್ದಾರೆ.

ಅಶೋಕ್ ಪರ್ಮಾರ್ ಮೋಚಿಯೊಂದಿಗಿನ ತನ್ನ ಸಂಬಂಧದ ಬಗ್ಗೆ ಮಾತನಾಡಿರುವ ಕುತುಬುದ್ದೀನ್ ಅನ್ಸಾರಿ, “ನಾವು ಕಾಲಕಾಲಕ್ಕೆ ಭೇಟಿಯಾಗುತ್ತಲೇ ಇರುತ್ತೇವೆ. ಅವರು (ಅಶೋಕ್) ಅವರು ತಮ್ಮ ಅಂಗಡಿಯನ್ನು ನಾನು ಉದ್ಘಾಟಿಸಬೇಕೆಂದು ಕೇಳಿದರು ಮತ್ತು ನಾನು ಒಪ್ಪಿಕೊಂಡೆ. ಅವನನ್ನು ಚೆನ್ನಾಗಿ ನೋಡುವುದನ್ನು ಬಿಟ್ಟು ನಾನು ಇನ್ನೇನು ಬಯಸುತ್ತೇನೆ? ನಾನು ಅಂಗಡಿ ಉದ್ಘಾಟಿಸಿದೆ ಮತ್ತು ಒಂದು ಜೋಡಿ ಚಪ್ಪಲಿಗಳನ್ನು ಕೂಡ ಖರೀದಿಸಿದೆ. ನಾನು ಅವನನ್ನು ಚೆನ್ನಾಗಿ ಇರಲು ಬಯಸುತ್ತೇನೆ ಮತ್ತು ಅವನ ವ್ಯವಹಾರವು ಅಭಿವೃದ್ಧಿ ಹೊಂದುತ್ತದೆ ಎಂದು ನಾನು ಭಾವಿಸುತ್ತೇನೆ” ಎಂದು ಹೇಳಿದ್ದಾರೆ. ಈ ಹೇಳಿಕೆ ಸಾಕಷ್ಟು ಜನರ ಮೆಚ್ಚುಗೆಯನ್ನು ಗಳಿಸಿದೆ.

“ಇದು ಹಿಂದೂ ವರ್ಣ ವ್ಯವಸ್ಥೆಯಾಗಿದ್ದು, ನನ್ನನ್ನು ಚಮ್ಮಾರನಾಗಿ ಸಿಲುಕಿಕೊಳ್ಳುತ್ತಲೇ ಇದೆ. ಅವರು ನಮಗೆ ಮುಂದುವರಿಯಲು ಬಿಡುವುದಿಲ್ಲ” ಎಂದಿರುವ ಅಶೋಕ್ ಪರ್ಮಾರ್ ಮೋಚಿ, ಉನಾದಲ್ಲಿ ದಲಿತರನ್ನು ಸಾರ್ವಜನಿಕವಾಗಿ ಥಳಿಸಿದ ನಂತರ ತಮ್ಮ ಸಮುದಾಯದ ಹಕ್ಕುಗಳಿಗಾಗಿ ಹೋರಾಡಲು 2017 ರಲ್ಲಿ ಗುಜರಾತ್‌ನ ದಲಿತ ಆಜಾದಿ ಕೂಚ್‌ಗೆ ಸೇರಿದ್ದರು. ತನ್ನ ಅಂಗಡಿಯ ಉದ್ಘಾಟನೆಯಲ್ಲಿ ತನ್ನ ಗೆಳೆಯ ಅನ್ಸಾರಿ ಟೇಪು ಕತ್ತರಿಸುವುದನ್ನು ನೋಡಿದ ಮೋಚಿ ಭಾವುಕಗೊಂಡಿದ್ದಾರೆ.

ಒಟ್ಟಿನಲ್ಲಿ ಗುಜರಾತ್ ಗಲಭೆಯ ಸಮಯದಲ್ಲಿ ಎರಡು ವಿರುದ್ಧ ಧ್ರುವಗಳನ್ನು ಪ್ರತಿನಿಧಿಸಿದ್ದ ಇಬ್ಬರೂ ವ್ಯಕ್ತಿಗಳು ವಾಸ್ತವವನ್ನು ಅರ್ಥ ಮಾಡಿಕೊಂಡು ಸೌಹಾರ್ದತೆ ಮೆರೆದಿದ್ದಾರೆ. ಅಲ್ಲದೇ ಕೇವಲ ಭಾವನಾತ್ಮಕ ವಿಚಾರದಲ್ಲಿ ಜನರು ಆವೇಶಗೊಳಗಾಗದೆ ತಮ್ಮ ಬದುಕನ್ನು ಸುಧಾರಿಸುವ ಜೀವನೋಪಾಯದ ಕಡೆ ಚಲಿಸಬೇಕೆಂಬುದನ್ನು ಸಹ ಈ ಚಪ್ಪಲಿ ಅಂಗಡಿ ತೋರಿಸಿದೆ. ಇದು ಇಂದು ಇಡೀ ಭಾರತ ಅರ್ಥ ಮಾಡಿಕೊಳ್ಳಬೇಕಾದ ಪಾಠವಾಗಿದೆ. ಧರ್ಮ-ಧರ್ಮಗಳ ನಡುವಿನ ಕಂದರಗಳನ್ನು ಮುಚ್ಚಿಹಾಕಿ ಭಾರತದ ಎಲ್ಲಾ ಜನರು ತಮ್ಮ ಬದುಕನ್ನು ಅರ್ಥಪೂರ್ಣವಾಗಿ ಕಟ್ಟಿಕೊಳ್ಳುವುದರ ಜೊತೆಗೆ ದೇಶದ ಐಕ್ಯತೆ, ಸೌಹರ್ದತೆಗೆ ಶ್ರಮಿಸಬೇಕಿದೆ.

ಕೊನೆಯಲ್ಲಿ ಈ ಗೆಳೆಯರು ಹೀಗೆ ಬದಲಾಗಲು, ಹೊಸ ಬದುಕು ಕಟ್ಟಿಕೊಳ್ಳಲು ನೆರವಾಗುತ್ತಿರುವ ಕೇರಳ ಸಿಪಿಎಂ ಪಕ್ಷವನ್ನು ಮನಃಪೂರ್ವಕವಾಗಿ ಅಭಿನಂದಿಸೋಣ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

3 COMMENTS

  1. ಸೌಹಾರ್ದ ಳ್ಳೆಯದು.
    ಆದರೆ ಸಿಪಿಐದು ಒನ್ ವೇ ಸೌಹಾರ್ದ. ಸೌಹಾರ್ದತೆಯಾಗಲೀ ಗಲಭೆಯಾಗಲೀ – ಒಂದೇ ಕೈಯಲ್ಲಿ ಚಪ್ಪಾಳೆ ಸಾಧ್ಯವಿಲ್ಲ.. ನಿಮಗೆ ಗೋಧ್ರಾ ರೈಲಿಗೆ ಬೆಂಕಿ ಆಕಸ್ಮಿಕ, ನಂತರದ ಗಲಭೆ ಪೂರ್ವಯೋಜಿತ !
    ಹಿಂದೂ ಮಾತ್ರ ಗಲಭೆಕೋರ
    ಮುಸ್ಲಿಮರು ಸಂತ್ರಸ್ತರು !
    ನೀವು ಸಾಮಾಜಿಕ ನ್ಯಾಯ ಸಾರುವವರೇ ಹೌದಾದರೆ ….
    ಕಾಶ್ಮೀರಿ ಪಂಡಿತರನ್ನು ಅವರ ನೆಲದಿಂದ ಒಕ್ಕಲೆಬ್ಬಿಸಿ, ಹೊಡೆದು, ಕೊಂದು, ಅತ್ಯಾಚಾರಗೈದು, ಬದುಕಿ ಉಳಿದವರನ್ನು ಓಡಿಸಿದವರಿಂದ ‘ಬನ್ನಿ, ನಮ್ಮೊಂದಿಗೆ ಬದುಕಿ, ಇಲ್ಲೇ ನೆಲೆಸಿ’ ಎಂಬ ಕರೆ ಕೊಡಿಸಿ…ಕೈ ಕುಲುಕಿಸಿ.
    ಅಂದೇ ನಿಮ್ಮ ಸಿದ್ಧಾಂತಗಳ ಅನುಯಾಯಿಯಾಗುತ್ತೇನೆ ..

  2. ಸೌಹಾರ್ದ ಳ್ಳೆಯದು.
    ಆದರೆ ಸಿಪಿಎಂದು ಒನ್ ವೇ ಸೌಹಾರ್ದ. ಸೌಹಾರ್ದತೆಯಾಗಲೀ ಗಲಭೆಯಾಗಲೀ – ಒಂದೇ ಕೈಯಲ್ಲಿ ಚಪ್ಪಾಳೆ ಸಾಧ್ಯವಿಲ್ಲ.. ನಿಮಗೆ ಗೋಧ್ರಾ ರೈಲಿಗೆ ಬೆಂಕಿ ಆಕಸ್ಮಿಕ, ನಂತರದ ಗಲಭೆ ಪೂರ್ವಯೋಜಿತ !
    ಹಿಂದೂ ಮಾತ್ರ ಗಲಭೆಕೋರ
    ಮುಸ್ಲಿಮರು ಸಂತ್ರಸ್ತರು !
    ನೀವು ಸಾಮಾಜಿಕ ನ್ಯಾಯ ಸಾರುವವರೇ ಹೌದಾದರೆ ….
    ಕಾಶ್ಮೀರಿ ಪಂಡಿತರನ್ನು ಅವರ ನೆಲದಿಂದ ಒಕ್ಕಲೆಬ್ಬಿಸಿ, ಹೊಡೆದು, ಕೊಂದು, ಅತ್ಯಾಚಾರಗೈದು, ಬದುಕಿ ಉಳಿದವರನ್ನು ಓಡಿಸಿದವರಿಂದ ‘ಬನ್ನಿ, ನಮ್ಮೊಂದಿಗೆ ಬದುಕಿ, ಇಲ್ಲೇ ನೆಲೆಸಿ’ ಎಂಬ ಕರೆ ಕೊಡಿಸಿ…ಕೈ ಕುಲುಕಿಸಿ.
    ಅಂದೇ ನಿಮ್ಮ ಸಿದ್ಧಾಂತಗಳ ಅನುಯಾಯಿಯಾಗುತ್ತೇನೆ ..

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...