Homeಚಳವಳಿಕೋಮು ಗಲಭೆ ಬಿಟ್ಟು ಚಪ್ಪಲಿ ಅಂಗಡಿ ಹಾಕಿದ ಅಶೋಕ್: ಗುಜರಾತಿನ ಈ ಗೆಳೆಯರು ಇಂದಿನ ಭಾರತಕ್ಕೆ...

ಕೋಮು ಗಲಭೆ ಬಿಟ್ಟು ಚಪ್ಪಲಿ ಅಂಗಡಿ ಹಾಕಿದ ಅಶೋಕ್: ಗುಜರಾತಿನ ಈ ಗೆಳೆಯರು ಇಂದಿನ ಭಾರತಕ್ಕೆ ಮಾದರಿಯಾಗಬಲ್ಲರೆ?

ಅವನನ್ನು ಚೆನ್ನಾಗಿ ನೋಡುವುದನ್ನು ಬಿಟ್ಟು ನಾನು ಇನ್ನೇನು ಬಯಸುತ್ತೇನೆ? ನಾನು ಅಂಗಡಿ ಉದ್ಘಾಟಿಸಿದೆ ಮತ್ತು ಒಂದು ಜೋಡಿ ಚಪ್ಪಲಿಗಳನ್ನು ಕೂಡ ಖರೀದಿಸಿದೆ. ಅವನ ವ್ಯವಹಾರವು ಅಭಿವೃದ್ಧಿ ಹೊಂದುತ್ತದೆ ಎಂದು ನಾನು ಭಾವಿಸುತ್ತೇನೆ ಎನ್ನುತ್ತಾರೆ ಅನ್ಸಾರಿ

- Advertisement -
- Advertisement -

ಅಹಮದಾಬಾದ್ ನಲ್ಲಿ ಅಶೋಕ್ ಪರ್ಮಾರ್ ಎಂಬುವವರು ‘ಏಕತಾ ಚಪ್ಪಲ್ ಘರ್’ ಎಂಬ ಚಪ್ಪಲಿ ಶೂ ಅಂಗಡಿ ಆರಂಭಿಸಿದ್ದಾರೆ. ಅದನ್ನು ಕುತುಬುದ್ದೀನ್ ಅನ್ಸಾರಿ ಎಂಬುವವರು ಉದ್ಘಾಟಿಸಿದ್ದಾರೆ. ಆ ಇಬ್ಬರು ಗೆಳೆಯರು ಅಂಗಡಿಯ ಮುಂದೆ ನಿಂತು ತೆಗೆಸಿಕೊಂಡ ಫೋಟೊ ಎಲ್ಲಾ ಕಡೆ ವೈರಲ್ ಆಗಿದೆ. ಲಕ್ಷಾಂತರ ಜನ ಈ ಜೋಡಿಗೆ ಶುಭ ಹಾರೈಸಿದ್ದಾರೆ. ಏಕೆ? ಯಾರಿವರು? ಇವರ ಹಿನ್ನೆಲೆ ಏನು?

ಅದು 2002ರ ಕಾಲ. ಸರಿಯಾಗಿ 17 ವರ್ಷಗಳ ಹಿಂದೆ ಗುಜರಾತ್ ನಲ್ಲಿ ಕೋಮುಗಲಭೆಗಳು ಉತ್ತುಂಗಕ್ಕೇರಿದ್ದವು. ಗೋಧ್ರಾ ರೈಲು ದುರಂತಕ್ಕೆ ಸೇಡು ತೀರಿಸಬೇಕೆಂದು ಒಂದು ಸಮುದಾಯದವರು ಮತ್ತೊಂದು ಸಮುದಾಯದವರನ್ನು ಹುಡಕಿ ಕೊಲ್ಲುತ್ತಿದ್ದ ಸಮಯ. ವೃತ್ತಿಯಲ್ಲಿ ಟೈಲರ್ ಆದ ಕುತುಬುದ್ದೀನ್ ಅನ್ಸಾರಿ ಎಂಬ ಮುಸ್ಲಿಂ ಸಮುದಾಯದ ವ್ಯಕ್ತಿ ಫೆಬ್ರವರಿ 28, 2002 ರಂದು ಅಹಮದಾಬಾದ್‌ನ ನರೋಡಾ ಪಟಿಯಾ ಪ್ರದೇಶದಲ್ಲಿ ಗಲಭೆ ಉತ್ತುಂಗದಲ್ಲಿದ್ದಾಗ, ನರೋಲ್-ನರೋಡಾ ರಸ್ತೆಯಲ್ಲಿರುವ ತನ್ನ ಮನೆಯ ಹೊರಗೆ ಆತ ಸಹಾಯಕ್ಕಾಗಿ ರಾಪಿಡ್ ಆಕ್ಷನ್ ಫೋರ್ಸ್ (ಆರ್‌ಎಎಫ್) ಸಿಬ್ಬಂದಿಗೆ  ಕೈ ಮುಗಿದ ಮನವಿ ಮಾಡುವ ದೃಶ್ಯ ಕ್ಯಾಮೆರಾದಲ್ಲಿ ಸೆರೆಯಾಗಿತ್ತು. ಅವರ ರಕ್ತದ ಅಂಗಿಯ ಚಿತ್ರ ಮತ್ತು ಕಣ್ಣೀರು ತುಂಬಿದ ಕಣ್ಣುಗಳು ಗುಜರಾತ್ ಗಲಭೆಯ ಸಂತ್ರಸ್ತರನ್ನು ಪ್ರತಿನಿಧಿಸುವ ಚಿತ್ರವಾಯಿತು.

ಅದೇ ಸಂದರ್ಭದಲ್ಲಿ ಬಲಗೈಯ್ಯಲ್ಲೊಂದು ಕಬ್ಬಿಣದ ರಾಡ್, ತಲೆಗೆ ಕೇಸರಿ ಬಟ್ಟೆ ಕಟ್ಟಿ ಎರಡೂ ಕೈಗಳನ್ನು ಮೇಲಕ್ಕೆತ್ತಿ ಅಟ್ಟಹಾಸ ಮೆರೆಯುತ್ತಿರುವ ಹಿಂದೂ ಸಮುದಾಯಕ್ಕೆ ಸೇರಿದ ಅಶೋಕ್ ಪರ್ಮಾರ್ ಅಲಿಯಾಸ್ ಅಶೋಕ್ ಮೋಚಿಯ ಫೋಟೊ ಕೂಡ ಅಂದಿನ ದೌರ್ಜನ್ಯದ ಸಂಕೇತವಾಗಿತ್ತು.

ಆದರ ಗಲಭೆಗಳು ನಿಂತು ಬಹಳ ಕಾಲವಾದ ನಂತರ ಅವರಿಬ್ಬರನ್ನು ಮಾತನಾಡಿಸಿ ಅವರನ್ನು ಒಂದೇ ವೇದಿಕೆಗೆ ತರುವ ಮೂಲಕ ಕೋಮು ಸೌಹಾರ್ದತೆ ಸಾರಲು ಕೇರಳದ ಸಿಪಿಎಂ ಪಕ್ಷ ಪ್ರಯತ್ನಿಸಿತ್ತು ಮತ್ತು ಅದಕ್ಕೆ ಯಶ ಸಿಕ್ಕಿತು ಕೂಡ. ಅಶೋಕ್ ಪರ್ಮಾರ್ ರನ್ನು ಮಾತನಾಡಿಸಿ ಈ ರೀತಿ ಕೋಮುದ್ವೇಷ ಸಾಧಿಸಿ ದಾಳಿ ಮಾಡುವುದು ತಪ್ಪಲ್ಲವೇ? ಇದರಿಂದ ಸಮಾಜಕ್ಕಾಗುವ ಅಪಾಯಗಳನ್ನು ತಿಳಿಹೇಳಲಾಯಿತು. ಆತನಿಗೆ ತನ್ನ ತಪ್ಪಿನ ಮನವರಿಕೆಯಾಗಿ ಬಹಿರಂಗ ಕ್ಷಮೆ ಕೇಳಿದ್ದ. ಮುಂದೆಂದೂ ಕೋಮುಗಲಭೆಗಳಲ್ಲಿ ಭಾಗವಹಿಸದೇ ಸಾಮಾನ್ಯ ಜೀವನ ಸಾಗಿಸಲು ನಿರ್ಧರಿಸಿದ್ದ. ಕೇರಳದಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಇಬ್ಬರೂ ಭಾಗವಹಿಸಿ ಅಶೋಕ್ ಮೋಚಿ, ಅನ್ಸಾರಿಗೆ ಗುಲಾಬಿ ಹೂ ಕೊಡುವ ಮೂಲಕ ಭಾವೈಕ್ಯತೆ ಮೆರದಿದ್ದ.

ಅಶೋಕ್ ಪರ್ಮಾರ್ ಬಡವನಾಗಿದ್ದರಿಂದ ದೆಹಲಿಯ ಫುಟ್ ಪಾತ್ ಗಳಲ್ಲಿ ಶೂ, ಚಪ್ಪಲಿ ಹೊಲೆಯುತ್ತಿದ್ದ ಮತ್ತು ಮಾರುತ್ತಿದ್ದ. ತನ್ನ ಜೀವನವನ್ನು ಮತ್ತಷ್ಟು ತಹಬದಿಗೆ ತರುವುದಕ್ಕಾಗಿ ಈಗ ಅಹಮದಾಬಾದ್ ನಲ್ಲಿ ಹೊಸ ಚಪ್ಪಲಿ ಅಂಗಡಿ ಹಾಕಿದ್ದಾನೆ. ಇದಕ್ಕಾಗಿ ಆತನಿಗೆ ಕೇರಳದ ಸಿಪಿಎಂ ಪಕ್ಷವು ಆರಂಭಿಕ ಬಂಡವಾಳದ ಹಣಕಾಸು ಸಹಾಯ ಮಾಡಿದೆ. ಅದಕ್ಕೆ ‘ಏಕತಾ ಚಪ್ಪಲ್ ಘರ್’ ಎಂಬ ಸೌಹಾರ್ದ ಸೂಚಿಸುವ ಹೆಸರು ಸಹ ಇಟ್ಟಿದ್ದಾನೆ. ಜೊತೆಗೆ ತನ್ನ ಗೆಳೆಯ ಕುತುಬುದ್ದೀನ್ ಅನ್ಸಾರಿರವರಿಂದಲೇ ಅದರ ಉದ್ಘಾಟನೆ ಮಾಡಿಸುವ ಮೂಲಕ ತನ್ನ ಹಿಂದಿನ ತಪ್ಪುಗಳಿಗೆ ಒಂದು ರೀತಿಯ ಪ್ರಾಯಶ್ಚಿತ ಮಾಡಿಕೊಂಡಿದ್ದಾನೆ ಎಂದು ಎಲ್ಲೆಡೆ ಮಾತನಾಡಿಕೊಳ್ಳುತ್ತಿದ್ದಾರೆ.

ಇನ್ನು ಅಶೋಕ್ ಪರ್ಮಾರ್ ರವರ ಹೊಸ ಅಂಗಡಿ ಉದ್ಘಾಟನೆಯ ಗೌರವಾನ್ವಿತ ಅತಿಥಿಯಾಗಿದ್ದ ಕುತುಬುದ್ದೀನ್ ಅನ್ಸಾರಿ ಗಲಭೆಯ ನಂತರ ಪಶ್ಚಿಮ ಬಂಗಾಳದಲ್ಲಿ ತಾತ್ಕಾಲಿಕವಾಗಿ ನೆಲೆಸಿದ್ದರು. ಅಲ್ಲಿಯೂ ಅವರು ಟೈಲರ್ ಆಗಿ ಕೆಲಸ ಮಾಡುತ್ತಿದ್ದಾರೆ.

ಅಶೋಕ್ ಪರ್ಮಾರ್ ಮೋಚಿಯೊಂದಿಗಿನ ತನ್ನ ಸಂಬಂಧದ ಬಗ್ಗೆ ಮಾತನಾಡಿರುವ ಕುತುಬುದ್ದೀನ್ ಅನ್ಸಾರಿ, “ನಾವು ಕಾಲಕಾಲಕ್ಕೆ ಭೇಟಿಯಾಗುತ್ತಲೇ ಇರುತ್ತೇವೆ. ಅವರು (ಅಶೋಕ್) ಅವರು ತಮ್ಮ ಅಂಗಡಿಯನ್ನು ನಾನು ಉದ್ಘಾಟಿಸಬೇಕೆಂದು ಕೇಳಿದರು ಮತ್ತು ನಾನು ಒಪ್ಪಿಕೊಂಡೆ. ಅವನನ್ನು ಚೆನ್ನಾಗಿ ನೋಡುವುದನ್ನು ಬಿಟ್ಟು ನಾನು ಇನ್ನೇನು ಬಯಸುತ್ತೇನೆ? ನಾನು ಅಂಗಡಿ ಉದ್ಘಾಟಿಸಿದೆ ಮತ್ತು ಒಂದು ಜೋಡಿ ಚಪ್ಪಲಿಗಳನ್ನು ಕೂಡ ಖರೀದಿಸಿದೆ. ನಾನು ಅವನನ್ನು ಚೆನ್ನಾಗಿ ಇರಲು ಬಯಸುತ್ತೇನೆ ಮತ್ತು ಅವನ ವ್ಯವಹಾರವು ಅಭಿವೃದ್ಧಿ ಹೊಂದುತ್ತದೆ ಎಂದು ನಾನು ಭಾವಿಸುತ್ತೇನೆ” ಎಂದು ಹೇಳಿದ್ದಾರೆ. ಈ ಹೇಳಿಕೆ ಸಾಕಷ್ಟು ಜನರ ಮೆಚ್ಚುಗೆಯನ್ನು ಗಳಿಸಿದೆ.

“ಇದು ಹಿಂದೂ ವರ್ಣ ವ್ಯವಸ್ಥೆಯಾಗಿದ್ದು, ನನ್ನನ್ನು ಚಮ್ಮಾರನಾಗಿ ಸಿಲುಕಿಕೊಳ್ಳುತ್ತಲೇ ಇದೆ. ಅವರು ನಮಗೆ ಮುಂದುವರಿಯಲು ಬಿಡುವುದಿಲ್ಲ” ಎಂದಿರುವ ಅಶೋಕ್ ಪರ್ಮಾರ್ ಮೋಚಿ, ಉನಾದಲ್ಲಿ ದಲಿತರನ್ನು ಸಾರ್ವಜನಿಕವಾಗಿ ಥಳಿಸಿದ ನಂತರ ತಮ್ಮ ಸಮುದಾಯದ ಹಕ್ಕುಗಳಿಗಾಗಿ ಹೋರಾಡಲು 2017 ರಲ್ಲಿ ಗುಜರಾತ್‌ನ ದಲಿತ ಆಜಾದಿ ಕೂಚ್‌ಗೆ ಸೇರಿದ್ದರು. ತನ್ನ ಅಂಗಡಿಯ ಉದ್ಘಾಟನೆಯಲ್ಲಿ ತನ್ನ ಗೆಳೆಯ ಅನ್ಸಾರಿ ಟೇಪು ಕತ್ತರಿಸುವುದನ್ನು ನೋಡಿದ ಮೋಚಿ ಭಾವುಕಗೊಂಡಿದ್ದಾರೆ.

ಒಟ್ಟಿನಲ್ಲಿ ಗುಜರಾತ್ ಗಲಭೆಯ ಸಮಯದಲ್ಲಿ ಎರಡು ವಿರುದ್ಧ ಧ್ರುವಗಳನ್ನು ಪ್ರತಿನಿಧಿಸಿದ್ದ ಇಬ್ಬರೂ ವ್ಯಕ್ತಿಗಳು ವಾಸ್ತವವನ್ನು ಅರ್ಥ ಮಾಡಿಕೊಂಡು ಸೌಹಾರ್ದತೆ ಮೆರೆದಿದ್ದಾರೆ. ಅಲ್ಲದೇ ಕೇವಲ ಭಾವನಾತ್ಮಕ ವಿಚಾರದಲ್ಲಿ ಜನರು ಆವೇಶಗೊಳಗಾಗದೆ ತಮ್ಮ ಬದುಕನ್ನು ಸುಧಾರಿಸುವ ಜೀವನೋಪಾಯದ ಕಡೆ ಚಲಿಸಬೇಕೆಂಬುದನ್ನು ಸಹ ಈ ಚಪ್ಪಲಿ ಅಂಗಡಿ ತೋರಿಸಿದೆ. ಇದು ಇಂದು ಇಡೀ ಭಾರತ ಅರ್ಥ ಮಾಡಿಕೊಳ್ಳಬೇಕಾದ ಪಾಠವಾಗಿದೆ. ಧರ್ಮ-ಧರ್ಮಗಳ ನಡುವಿನ ಕಂದರಗಳನ್ನು ಮುಚ್ಚಿಹಾಕಿ ಭಾರತದ ಎಲ್ಲಾ ಜನರು ತಮ್ಮ ಬದುಕನ್ನು ಅರ್ಥಪೂರ್ಣವಾಗಿ ಕಟ್ಟಿಕೊಳ್ಳುವುದರ ಜೊತೆಗೆ ದೇಶದ ಐಕ್ಯತೆ, ಸೌಹರ್ದತೆಗೆ ಶ್ರಮಿಸಬೇಕಿದೆ.

ಕೊನೆಯಲ್ಲಿ ಈ ಗೆಳೆಯರು ಹೀಗೆ ಬದಲಾಗಲು, ಹೊಸ ಬದುಕು ಕಟ್ಟಿಕೊಳ್ಳಲು ನೆರವಾಗುತ್ತಿರುವ ಕೇರಳ ಸಿಪಿಎಂ ಪಕ್ಷವನ್ನು ಮನಃಪೂರ್ವಕವಾಗಿ ಅಭಿನಂದಿಸೋಣ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

3 COMMENTS

  1. ಸೌಹಾರ್ದ ಳ್ಳೆಯದು.
    ಆದರೆ ಸಿಪಿಐದು ಒನ್ ವೇ ಸೌಹಾರ್ದ. ಸೌಹಾರ್ದತೆಯಾಗಲೀ ಗಲಭೆಯಾಗಲೀ – ಒಂದೇ ಕೈಯಲ್ಲಿ ಚಪ್ಪಾಳೆ ಸಾಧ್ಯವಿಲ್ಲ.. ನಿಮಗೆ ಗೋಧ್ರಾ ರೈಲಿಗೆ ಬೆಂಕಿ ಆಕಸ್ಮಿಕ, ನಂತರದ ಗಲಭೆ ಪೂರ್ವಯೋಜಿತ !
    ಹಿಂದೂ ಮಾತ್ರ ಗಲಭೆಕೋರ
    ಮುಸ್ಲಿಮರು ಸಂತ್ರಸ್ತರು !
    ನೀವು ಸಾಮಾಜಿಕ ನ್ಯಾಯ ಸಾರುವವರೇ ಹೌದಾದರೆ ….
    ಕಾಶ್ಮೀರಿ ಪಂಡಿತರನ್ನು ಅವರ ನೆಲದಿಂದ ಒಕ್ಕಲೆಬ್ಬಿಸಿ, ಹೊಡೆದು, ಕೊಂದು, ಅತ್ಯಾಚಾರಗೈದು, ಬದುಕಿ ಉಳಿದವರನ್ನು ಓಡಿಸಿದವರಿಂದ ‘ಬನ್ನಿ, ನಮ್ಮೊಂದಿಗೆ ಬದುಕಿ, ಇಲ್ಲೇ ನೆಲೆಸಿ’ ಎಂಬ ಕರೆ ಕೊಡಿಸಿ…ಕೈ ಕುಲುಕಿಸಿ.
    ಅಂದೇ ನಿಮ್ಮ ಸಿದ್ಧಾಂತಗಳ ಅನುಯಾಯಿಯಾಗುತ್ತೇನೆ ..

  2. ಸೌಹಾರ್ದ ಳ್ಳೆಯದು.
    ಆದರೆ ಸಿಪಿಎಂದು ಒನ್ ವೇ ಸೌಹಾರ್ದ. ಸೌಹಾರ್ದತೆಯಾಗಲೀ ಗಲಭೆಯಾಗಲೀ – ಒಂದೇ ಕೈಯಲ್ಲಿ ಚಪ್ಪಾಳೆ ಸಾಧ್ಯವಿಲ್ಲ.. ನಿಮಗೆ ಗೋಧ್ರಾ ರೈಲಿಗೆ ಬೆಂಕಿ ಆಕಸ್ಮಿಕ, ನಂತರದ ಗಲಭೆ ಪೂರ್ವಯೋಜಿತ !
    ಹಿಂದೂ ಮಾತ್ರ ಗಲಭೆಕೋರ
    ಮುಸ್ಲಿಮರು ಸಂತ್ರಸ್ತರು !
    ನೀವು ಸಾಮಾಜಿಕ ನ್ಯಾಯ ಸಾರುವವರೇ ಹೌದಾದರೆ ….
    ಕಾಶ್ಮೀರಿ ಪಂಡಿತರನ್ನು ಅವರ ನೆಲದಿಂದ ಒಕ್ಕಲೆಬ್ಬಿಸಿ, ಹೊಡೆದು, ಕೊಂದು, ಅತ್ಯಾಚಾರಗೈದು, ಬದುಕಿ ಉಳಿದವರನ್ನು ಓಡಿಸಿದವರಿಂದ ‘ಬನ್ನಿ, ನಮ್ಮೊಂದಿಗೆ ಬದುಕಿ, ಇಲ್ಲೇ ನೆಲೆಸಿ’ ಎಂಬ ಕರೆ ಕೊಡಿಸಿ…ಕೈ ಕುಲುಕಿಸಿ.
    ಅಂದೇ ನಿಮ್ಮ ಸಿದ್ಧಾಂತಗಳ ಅನುಯಾಯಿಯಾಗುತ್ತೇನೆ ..

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....