Homeಚಳವಳಿಕೋಮು ಗಲಭೆ ಬಿಟ್ಟು ಚಪ್ಪಲಿ ಅಂಗಡಿ ಹಾಕಿದ ಅಶೋಕ್: ಗುಜರಾತಿನ ಈ ಗೆಳೆಯರು ಇಂದಿನ ಭಾರತಕ್ಕೆ...

ಕೋಮು ಗಲಭೆ ಬಿಟ್ಟು ಚಪ್ಪಲಿ ಅಂಗಡಿ ಹಾಕಿದ ಅಶೋಕ್: ಗುಜರಾತಿನ ಈ ಗೆಳೆಯರು ಇಂದಿನ ಭಾರತಕ್ಕೆ ಮಾದರಿಯಾಗಬಲ್ಲರೆ?

ಅವನನ್ನು ಚೆನ್ನಾಗಿ ನೋಡುವುದನ್ನು ಬಿಟ್ಟು ನಾನು ಇನ್ನೇನು ಬಯಸುತ್ತೇನೆ? ನಾನು ಅಂಗಡಿ ಉದ್ಘಾಟಿಸಿದೆ ಮತ್ತು ಒಂದು ಜೋಡಿ ಚಪ್ಪಲಿಗಳನ್ನು ಕೂಡ ಖರೀದಿಸಿದೆ. ಅವನ ವ್ಯವಹಾರವು ಅಭಿವೃದ್ಧಿ ಹೊಂದುತ್ತದೆ ಎಂದು ನಾನು ಭಾವಿಸುತ್ತೇನೆ ಎನ್ನುತ್ತಾರೆ ಅನ್ಸಾರಿ

- Advertisement -
- Advertisement -

ಅಹಮದಾಬಾದ್ ನಲ್ಲಿ ಅಶೋಕ್ ಪರ್ಮಾರ್ ಎಂಬುವವರು ‘ಏಕತಾ ಚಪ್ಪಲ್ ಘರ್’ ಎಂಬ ಚಪ್ಪಲಿ ಶೂ ಅಂಗಡಿ ಆರಂಭಿಸಿದ್ದಾರೆ. ಅದನ್ನು ಕುತುಬುದ್ದೀನ್ ಅನ್ಸಾರಿ ಎಂಬುವವರು ಉದ್ಘಾಟಿಸಿದ್ದಾರೆ. ಆ ಇಬ್ಬರು ಗೆಳೆಯರು ಅಂಗಡಿಯ ಮುಂದೆ ನಿಂತು ತೆಗೆಸಿಕೊಂಡ ಫೋಟೊ ಎಲ್ಲಾ ಕಡೆ ವೈರಲ್ ಆಗಿದೆ. ಲಕ್ಷಾಂತರ ಜನ ಈ ಜೋಡಿಗೆ ಶುಭ ಹಾರೈಸಿದ್ದಾರೆ. ಏಕೆ? ಯಾರಿವರು? ಇವರ ಹಿನ್ನೆಲೆ ಏನು?

ಅದು 2002ರ ಕಾಲ. ಸರಿಯಾಗಿ 17 ವರ್ಷಗಳ ಹಿಂದೆ ಗುಜರಾತ್ ನಲ್ಲಿ ಕೋಮುಗಲಭೆಗಳು ಉತ್ತುಂಗಕ್ಕೇರಿದ್ದವು. ಗೋಧ್ರಾ ರೈಲು ದುರಂತಕ್ಕೆ ಸೇಡು ತೀರಿಸಬೇಕೆಂದು ಒಂದು ಸಮುದಾಯದವರು ಮತ್ತೊಂದು ಸಮುದಾಯದವರನ್ನು ಹುಡಕಿ ಕೊಲ್ಲುತ್ತಿದ್ದ ಸಮಯ. ವೃತ್ತಿಯಲ್ಲಿ ಟೈಲರ್ ಆದ ಕುತುಬುದ್ದೀನ್ ಅನ್ಸಾರಿ ಎಂಬ ಮುಸ್ಲಿಂ ಸಮುದಾಯದ ವ್ಯಕ್ತಿ ಫೆಬ್ರವರಿ 28, 2002 ರಂದು ಅಹಮದಾಬಾದ್‌ನ ನರೋಡಾ ಪಟಿಯಾ ಪ್ರದೇಶದಲ್ಲಿ ಗಲಭೆ ಉತ್ತುಂಗದಲ್ಲಿದ್ದಾಗ, ನರೋಲ್-ನರೋಡಾ ರಸ್ತೆಯಲ್ಲಿರುವ ತನ್ನ ಮನೆಯ ಹೊರಗೆ ಆತ ಸಹಾಯಕ್ಕಾಗಿ ರಾಪಿಡ್ ಆಕ್ಷನ್ ಫೋರ್ಸ್ (ಆರ್‌ಎಎಫ್) ಸಿಬ್ಬಂದಿಗೆ  ಕೈ ಮುಗಿದ ಮನವಿ ಮಾಡುವ ದೃಶ್ಯ ಕ್ಯಾಮೆರಾದಲ್ಲಿ ಸೆರೆಯಾಗಿತ್ತು. ಅವರ ರಕ್ತದ ಅಂಗಿಯ ಚಿತ್ರ ಮತ್ತು ಕಣ್ಣೀರು ತುಂಬಿದ ಕಣ್ಣುಗಳು ಗುಜರಾತ್ ಗಲಭೆಯ ಸಂತ್ರಸ್ತರನ್ನು ಪ್ರತಿನಿಧಿಸುವ ಚಿತ್ರವಾಯಿತು.

ಅದೇ ಸಂದರ್ಭದಲ್ಲಿ ಬಲಗೈಯ್ಯಲ್ಲೊಂದು ಕಬ್ಬಿಣದ ರಾಡ್, ತಲೆಗೆ ಕೇಸರಿ ಬಟ್ಟೆ ಕಟ್ಟಿ ಎರಡೂ ಕೈಗಳನ್ನು ಮೇಲಕ್ಕೆತ್ತಿ ಅಟ್ಟಹಾಸ ಮೆರೆಯುತ್ತಿರುವ ಹಿಂದೂ ಸಮುದಾಯಕ್ಕೆ ಸೇರಿದ ಅಶೋಕ್ ಪರ್ಮಾರ್ ಅಲಿಯಾಸ್ ಅಶೋಕ್ ಮೋಚಿಯ ಫೋಟೊ ಕೂಡ ಅಂದಿನ ದೌರ್ಜನ್ಯದ ಸಂಕೇತವಾಗಿತ್ತು.

ಆದರ ಗಲಭೆಗಳು ನಿಂತು ಬಹಳ ಕಾಲವಾದ ನಂತರ ಅವರಿಬ್ಬರನ್ನು ಮಾತನಾಡಿಸಿ ಅವರನ್ನು ಒಂದೇ ವೇದಿಕೆಗೆ ತರುವ ಮೂಲಕ ಕೋಮು ಸೌಹಾರ್ದತೆ ಸಾರಲು ಕೇರಳದ ಸಿಪಿಎಂ ಪಕ್ಷ ಪ್ರಯತ್ನಿಸಿತ್ತು ಮತ್ತು ಅದಕ್ಕೆ ಯಶ ಸಿಕ್ಕಿತು ಕೂಡ. ಅಶೋಕ್ ಪರ್ಮಾರ್ ರನ್ನು ಮಾತನಾಡಿಸಿ ಈ ರೀತಿ ಕೋಮುದ್ವೇಷ ಸಾಧಿಸಿ ದಾಳಿ ಮಾಡುವುದು ತಪ್ಪಲ್ಲವೇ? ಇದರಿಂದ ಸಮಾಜಕ್ಕಾಗುವ ಅಪಾಯಗಳನ್ನು ತಿಳಿಹೇಳಲಾಯಿತು. ಆತನಿಗೆ ತನ್ನ ತಪ್ಪಿನ ಮನವರಿಕೆಯಾಗಿ ಬಹಿರಂಗ ಕ್ಷಮೆ ಕೇಳಿದ್ದ. ಮುಂದೆಂದೂ ಕೋಮುಗಲಭೆಗಳಲ್ಲಿ ಭಾಗವಹಿಸದೇ ಸಾಮಾನ್ಯ ಜೀವನ ಸಾಗಿಸಲು ನಿರ್ಧರಿಸಿದ್ದ. ಕೇರಳದಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಇಬ್ಬರೂ ಭಾಗವಹಿಸಿ ಅಶೋಕ್ ಮೋಚಿ, ಅನ್ಸಾರಿಗೆ ಗುಲಾಬಿ ಹೂ ಕೊಡುವ ಮೂಲಕ ಭಾವೈಕ್ಯತೆ ಮೆರದಿದ್ದ.

ಅಶೋಕ್ ಪರ್ಮಾರ್ ಬಡವನಾಗಿದ್ದರಿಂದ ದೆಹಲಿಯ ಫುಟ್ ಪಾತ್ ಗಳಲ್ಲಿ ಶೂ, ಚಪ್ಪಲಿ ಹೊಲೆಯುತ್ತಿದ್ದ ಮತ್ತು ಮಾರುತ್ತಿದ್ದ. ತನ್ನ ಜೀವನವನ್ನು ಮತ್ತಷ್ಟು ತಹಬದಿಗೆ ತರುವುದಕ್ಕಾಗಿ ಈಗ ಅಹಮದಾಬಾದ್ ನಲ್ಲಿ ಹೊಸ ಚಪ್ಪಲಿ ಅಂಗಡಿ ಹಾಕಿದ್ದಾನೆ. ಇದಕ್ಕಾಗಿ ಆತನಿಗೆ ಕೇರಳದ ಸಿಪಿಎಂ ಪಕ್ಷವು ಆರಂಭಿಕ ಬಂಡವಾಳದ ಹಣಕಾಸು ಸಹಾಯ ಮಾಡಿದೆ. ಅದಕ್ಕೆ ‘ಏಕತಾ ಚಪ್ಪಲ್ ಘರ್’ ಎಂಬ ಸೌಹಾರ್ದ ಸೂಚಿಸುವ ಹೆಸರು ಸಹ ಇಟ್ಟಿದ್ದಾನೆ. ಜೊತೆಗೆ ತನ್ನ ಗೆಳೆಯ ಕುತುಬುದ್ದೀನ್ ಅನ್ಸಾರಿರವರಿಂದಲೇ ಅದರ ಉದ್ಘಾಟನೆ ಮಾಡಿಸುವ ಮೂಲಕ ತನ್ನ ಹಿಂದಿನ ತಪ್ಪುಗಳಿಗೆ ಒಂದು ರೀತಿಯ ಪ್ರಾಯಶ್ಚಿತ ಮಾಡಿಕೊಂಡಿದ್ದಾನೆ ಎಂದು ಎಲ್ಲೆಡೆ ಮಾತನಾಡಿಕೊಳ್ಳುತ್ತಿದ್ದಾರೆ.

ಇನ್ನು ಅಶೋಕ್ ಪರ್ಮಾರ್ ರವರ ಹೊಸ ಅಂಗಡಿ ಉದ್ಘಾಟನೆಯ ಗೌರವಾನ್ವಿತ ಅತಿಥಿಯಾಗಿದ್ದ ಕುತುಬುದ್ದೀನ್ ಅನ್ಸಾರಿ ಗಲಭೆಯ ನಂತರ ಪಶ್ಚಿಮ ಬಂಗಾಳದಲ್ಲಿ ತಾತ್ಕಾಲಿಕವಾಗಿ ನೆಲೆಸಿದ್ದರು. ಅಲ್ಲಿಯೂ ಅವರು ಟೈಲರ್ ಆಗಿ ಕೆಲಸ ಮಾಡುತ್ತಿದ್ದಾರೆ.

ಅಶೋಕ್ ಪರ್ಮಾರ್ ಮೋಚಿಯೊಂದಿಗಿನ ತನ್ನ ಸಂಬಂಧದ ಬಗ್ಗೆ ಮಾತನಾಡಿರುವ ಕುತುಬುದ್ದೀನ್ ಅನ್ಸಾರಿ, “ನಾವು ಕಾಲಕಾಲಕ್ಕೆ ಭೇಟಿಯಾಗುತ್ತಲೇ ಇರುತ್ತೇವೆ. ಅವರು (ಅಶೋಕ್) ಅವರು ತಮ್ಮ ಅಂಗಡಿಯನ್ನು ನಾನು ಉದ್ಘಾಟಿಸಬೇಕೆಂದು ಕೇಳಿದರು ಮತ್ತು ನಾನು ಒಪ್ಪಿಕೊಂಡೆ. ಅವನನ್ನು ಚೆನ್ನಾಗಿ ನೋಡುವುದನ್ನು ಬಿಟ್ಟು ನಾನು ಇನ್ನೇನು ಬಯಸುತ್ತೇನೆ? ನಾನು ಅಂಗಡಿ ಉದ್ಘಾಟಿಸಿದೆ ಮತ್ತು ಒಂದು ಜೋಡಿ ಚಪ್ಪಲಿಗಳನ್ನು ಕೂಡ ಖರೀದಿಸಿದೆ. ನಾನು ಅವನನ್ನು ಚೆನ್ನಾಗಿ ಇರಲು ಬಯಸುತ್ತೇನೆ ಮತ್ತು ಅವನ ವ್ಯವಹಾರವು ಅಭಿವೃದ್ಧಿ ಹೊಂದುತ್ತದೆ ಎಂದು ನಾನು ಭಾವಿಸುತ್ತೇನೆ” ಎಂದು ಹೇಳಿದ್ದಾರೆ. ಈ ಹೇಳಿಕೆ ಸಾಕಷ್ಟು ಜನರ ಮೆಚ್ಚುಗೆಯನ್ನು ಗಳಿಸಿದೆ.

“ಇದು ಹಿಂದೂ ವರ್ಣ ವ್ಯವಸ್ಥೆಯಾಗಿದ್ದು, ನನ್ನನ್ನು ಚಮ್ಮಾರನಾಗಿ ಸಿಲುಕಿಕೊಳ್ಳುತ್ತಲೇ ಇದೆ. ಅವರು ನಮಗೆ ಮುಂದುವರಿಯಲು ಬಿಡುವುದಿಲ್ಲ” ಎಂದಿರುವ ಅಶೋಕ್ ಪರ್ಮಾರ್ ಮೋಚಿ, ಉನಾದಲ್ಲಿ ದಲಿತರನ್ನು ಸಾರ್ವಜನಿಕವಾಗಿ ಥಳಿಸಿದ ನಂತರ ತಮ್ಮ ಸಮುದಾಯದ ಹಕ್ಕುಗಳಿಗಾಗಿ ಹೋರಾಡಲು 2017 ರಲ್ಲಿ ಗುಜರಾತ್‌ನ ದಲಿತ ಆಜಾದಿ ಕೂಚ್‌ಗೆ ಸೇರಿದ್ದರು. ತನ್ನ ಅಂಗಡಿಯ ಉದ್ಘಾಟನೆಯಲ್ಲಿ ತನ್ನ ಗೆಳೆಯ ಅನ್ಸಾರಿ ಟೇಪು ಕತ್ತರಿಸುವುದನ್ನು ನೋಡಿದ ಮೋಚಿ ಭಾವುಕಗೊಂಡಿದ್ದಾರೆ.

ಒಟ್ಟಿನಲ್ಲಿ ಗುಜರಾತ್ ಗಲಭೆಯ ಸಮಯದಲ್ಲಿ ಎರಡು ವಿರುದ್ಧ ಧ್ರುವಗಳನ್ನು ಪ್ರತಿನಿಧಿಸಿದ್ದ ಇಬ್ಬರೂ ವ್ಯಕ್ತಿಗಳು ವಾಸ್ತವವನ್ನು ಅರ್ಥ ಮಾಡಿಕೊಂಡು ಸೌಹಾರ್ದತೆ ಮೆರೆದಿದ್ದಾರೆ. ಅಲ್ಲದೇ ಕೇವಲ ಭಾವನಾತ್ಮಕ ವಿಚಾರದಲ್ಲಿ ಜನರು ಆವೇಶಗೊಳಗಾಗದೆ ತಮ್ಮ ಬದುಕನ್ನು ಸುಧಾರಿಸುವ ಜೀವನೋಪಾಯದ ಕಡೆ ಚಲಿಸಬೇಕೆಂಬುದನ್ನು ಸಹ ಈ ಚಪ್ಪಲಿ ಅಂಗಡಿ ತೋರಿಸಿದೆ. ಇದು ಇಂದು ಇಡೀ ಭಾರತ ಅರ್ಥ ಮಾಡಿಕೊಳ್ಳಬೇಕಾದ ಪಾಠವಾಗಿದೆ. ಧರ್ಮ-ಧರ್ಮಗಳ ನಡುವಿನ ಕಂದರಗಳನ್ನು ಮುಚ್ಚಿಹಾಕಿ ಭಾರತದ ಎಲ್ಲಾ ಜನರು ತಮ್ಮ ಬದುಕನ್ನು ಅರ್ಥಪೂರ್ಣವಾಗಿ ಕಟ್ಟಿಕೊಳ್ಳುವುದರ ಜೊತೆಗೆ ದೇಶದ ಐಕ್ಯತೆ, ಸೌಹರ್ದತೆಗೆ ಶ್ರಮಿಸಬೇಕಿದೆ.

ಕೊನೆಯಲ್ಲಿ ಈ ಗೆಳೆಯರು ಹೀಗೆ ಬದಲಾಗಲು, ಹೊಸ ಬದುಕು ಕಟ್ಟಿಕೊಳ್ಳಲು ನೆರವಾಗುತ್ತಿರುವ ಕೇರಳ ಸಿಪಿಎಂ ಪಕ್ಷವನ್ನು ಮನಃಪೂರ್ವಕವಾಗಿ ಅಭಿನಂದಿಸೋಣ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

3 COMMENTS

  1. ಸೌಹಾರ್ದ ಳ್ಳೆಯದು.
    ಆದರೆ ಸಿಪಿಐದು ಒನ್ ವೇ ಸೌಹಾರ್ದ. ಸೌಹಾರ್ದತೆಯಾಗಲೀ ಗಲಭೆಯಾಗಲೀ – ಒಂದೇ ಕೈಯಲ್ಲಿ ಚಪ್ಪಾಳೆ ಸಾಧ್ಯವಿಲ್ಲ.. ನಿಮಗೆ ಗೋಧ್ರಾ ರೈಲಿಗೆ ಬೆಂಕಿ ಆಕಸ್ಮಿಕ, ನಂತರದ ಗಲಭೆ ಪೂರ್ವಯೋಜಿತ !
    ಹಿಂದೂ ಮಾತ್ರ ಗಲಭೆಕೋರ
    ಮುಸ್ಲಿಮರು ಸಂತ್ರಸ್ತರು !
    ನೀವು ಸಾಮಾಜಿಕ ನ್ಯಾಯ ಸಾರುವವರೇ ಹೌದಾದರೆ ….
    ಕಾಶ್ಮೀರಿ ಪಂಡಿತರನ್ನು ಅವರ ನೆಲದಿಂದ ಒಕ್ಕಲೆಬ್ಬಿಸಿ, ಹೊಡೆದು, ಕೊಂದು, ಅತ್ಯಾಚಾರಗೈದು, ಬದುಕಿ ಉಳಿದವರನ್ನು ಓಡಿಸಿದವರಿಂದ ‘ಬನ್ನಿ, ನಮ್ಮೊಂದಿಗೆ ಬದುಕಿ, ಇಲ್ಲೇ ನೆಲೆಸಿ’ ಎಂಬ ಕರೆ ಕೊಡಿಸಿ…ಕೈ ಕುಲುಕಿಸಿ.
    ಅಂದೇ ನಿಮ್ಮ ಸಿದ್ಧಾಂತಗಳ ಅನುಯಾಯಿಯಾಗುತ್ತೇನೆ ..

  2. ಸೌಹಾರ್ದ ಳ್ಳೆಯದು.
    ಆದರೆ ಸಿಪಿಎಂದು ಒನ್ ವೇ ಸೌಹಾರ್ದ. ಸೌಹಾರ್ದತೆಯಾಗಲೀ ಗಲಭೆಯಾಗಲೀ – ಒಂದೇ ಕೈಯಲ್ಲಿ ಚಪ್ಪಾಳೆ ಸಾಧ್ಯವಿಲ್ಲ.. ನಿಮಗೆ ಗೋಧ್ರಾ ರೈಲಿಗೆ ಬೆಂಕಿ ಆಕಸ್ಮಿಕ, ನಂತರದ ಗಲಭೆ ಪೂರ್ವಯೋಜಿತ !
    ಹಿಂದೂ ಮಾತ್ರ ಗಲಭೆಕೋರ
    ಮುಸ್ಲಿಮರು ಸಂತ್ರಸ್ತರು !
    ನೀವು ಸಾಮಾಜಿಕ ನ್ಯಾಯ ಸಾರುವವರೇ ಹೌದಾದರೆ ….
    ಕಾಶ್ಮೀರಿ ಪಂಡಿತರನ್ನು ಅವರ ನೆಲದಿಂದ ಒಕ್ಕಲೆಬ್ಬಿಸಿ, ಹೊಡೆದು, ಕೊಂದು, ಅತ್ಯಾಚಾರಗೈದು, ಬದುಕಿ ಉಳಿದವರನ್ನು ಓಡಿಸಿದವರಿಂದ ‘ಬನ್ನಿ, ನಮ್ಮೊಂದಿಗೆ ಬದುಕಿ, ಇಲ್ಲೇ ನೆಲೆಸಿ’ ಎಂಬ ಕರೆ ಕೊಡಿಸಿ…ಕೈ ಕುಲುಕಿಸಿ.
    ಅಂದೇ ನಿಮ್ಮ ಸಿದ್ಧಾಂತಗಳ ಅನುಯಾಯಿಯಾಗುತ್ತೇನೆ ..

LEAVE A REPLY

Please enter your comment!
Please enter your name here

- Advertisment -

ಅಮಾನವೀಯ ಕೃತ್ಯ : ಮಹಿಳೆಗೆ ಥಳಿಸಿ, ಕೂದಲು ಹಿಡಿದು ಎಳೆದೊಯ್ದ ಪೊಲೀಸ್ ಸಿಬ್ಬಂದಿ

ತೆಲಂಗಾಣದ ಹಫೀಝ್‌ಪೇಟ್ ರೈಲ್ವೆ ನಿಲ್ದಾಣದಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರು ಮಹಿಳೆಗೆ ಥಳಿಸಿ, ಆಕೆಯ ತಲೆಕೂದಲು ಹಿಡಿದು ಎಳೆದೊಯ್ದಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ತೀವ್ರ ಆಕ್ರೋಶ ವ್ಯಕ್ತವಾಗಿದೆ. ಶುಕ್ರವಾರ (ಸೆ.18) ರಾತ್ರಿ ರೈಲ್ವೆ...

ರಾಮಮಂದಿರ ದೇಣಿಗೆ ಕಳವು ಪ್ರಕರಣ: ಆರೋಪಿಗಳ ನ್ಯಾಯಾಂಗ ಬಂಧನ ಅವಧಿ ವಿಸ್ತರಣೆ

ರಾಮಮಂದಿರದಲ್ಲಿ ದೇಣಿಗೆ ಹಣ ಕಳವು ಮಾಡಿದ ಆರೋಪದ ಮೇಲೆ ಬಂಧಿಸಲಾಗಿರುವ ಎಲ್ಲಾ ಎಂಟು ಆರೋಪಿಗಳ ನ್ಯಾಯಾಂಗ ಬಂಧನವನ್ನು ಸೆಪ್ಟೆಂಬರ್ 21ರವರೆಗೆ ವಿಸ್ತರಿಸಲಾಗಿದೆ ಎಂದು ಅವರ ವಕೀಲರು (ಸೆ.18) ತಿಳಿಸಿದ್ದಾರೆ. ಅಯೋಧ್ಯೆಯ ಭ್ರಷ್ಟಾಚಾರ ನಿಗ್ರಹ ನ್ಯಾಯಾಲಯದ...

ಬಂಗಾಳದಲ್ಲಿ ಬಿಜೆಪಿ ದ್ವೇಷ ರಾಜಕಾರಣ: ಮಾಮತಾ ಬ್ಯಾನರ್ಜಿ ಬೆಂಬಲ ಘೋಷಿಸಿದ ಬೆನ್ನಲ್ಲೇ ನಂದಿಗ್ರಾಮ ಕಾಂಗ್ರೆಸ್ ಅಭ್ಯರ್ಥಿ ಬಂಧನ

ಪಶ್ಚಿಮ ಬಂಗಾಳದ ಪೂರ್ವ ಮೇದಿನಿಪುರ ಜಿಲ್ಲೆಯ ನಂದಿಗ್ರಾಮ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಮಿಲನ್ ಪ್ರಧಾನ್ ಅವರನ್ನು ಹಳೆಯ ಪ್ರಕರಣವೊಂದರಲ್ಲಿ ಶುಕ್ರವಾರ (ಸೆ.18) ಬಂಧಿಸಲಾಗಿದೆ ಎಂದು ಪೂರ್ವ ಮೇದಿನಿಪುರ ಜಿಲ್ಲಾ ಪೊಲೀಸ್...

‘ವೆಟ್ಟುವಂ’ ಪಾ.ರಂಜಿತ್ ಅವರ ಅದ್ಭುತ ಅಪೋಕಲಿಪ್ಟಿಕ್ ಆಕ್ಷನ್ ಸಿನಿಮಾ: ರಂಗನಾಥ್ ಆರ್. ವಿ

ತಮಿಳಿನ ಖ್ಯಾತ ನಿರ್ದೇಶಕ ಪಾ.ರಂಜಿತ್ ಅವರ ನಿರ್ದೇಶನದಲ್ಲಿ ಮೂಡಿಬರುತ್ತಿರುವ 'ವೆಟ್ಟುವಂ' ಚಿತ್ರವನ್ನು 'ಲರ್ನ್ ಆಂಡ್ ಟೀಚ್ ಪ್ರೊಡಕ್ಷನ್' ಸಂಸ್ಥೆಯ ಸಹಯೋಗದೊಂದಿಗೆ, ಪಾ.ರಂಜಿತ್ ಅವರ 'ನೀಲಂ ಪ್ರೊಡಕ್ಷನ್ಸ್' ನಿರ್ಮಿಸಿದೆ. ಈ ಚಿತ್ರದ ಜಗತ್ತನ್ನು ಪರಿಚಯಿಸುವ...

SIR ಮೋಸ: ಅಗತ್ಯಬಿದ್ದರೆ ಕಾಂಗ್ರೆಸ್‌ನಿಂದ ಕಾನೂನು ಹೋರಾಟ ಬಿ.ಕೆ. ಹರಿಪ್ರಸಾದ್ ಎಚ್ಚರಿಕೆ

ಕರ್ನಾಟಕದಲ್ಲಿ ಪ್ರಸ್ತುತ ನಡೆಯುತ್ತಿರುವ 2026ರ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಭಾರಿ ಪ್ರಮಾಣದ ತಾಂತ್ರಿಕ ಲೋಪಗಳು, ಅಂಕಿಅಂಶಗಳ ವ್ಯತ್ಯಾಸ ಹಾಗೂ ಮತದಾರರ ಪಟ್ಟಿಗೆ ಸಂಬಂಧಿಸಿದಂತೆ ಸ್ಪಷ್ಟತೆಯ ಕೊರತೆ ಎದ್ದುಕಾಣುತ್ತಿದೆ ಎಂದು...

ವಿಚಾರಣೆಯಿಲ್ಲದೆ ಆರು ವರ್ಷ ಜೈಲುವಾಸ: ಉಮರ್ ಖಾಲಿದ್ ಹೋರಾಟದ ಹಾದಿ

ಸೆಪ್ಟೆಂಬರ್ 13, 2020 ರಂದು, ಮಾನವ ಹಕ್ಕುಗಳ ಯುವ ಕಾರ್ಯಕರ್ತ ಉಮರ್ ಖಾಲಿದ್ ಅವರನ್ನು ದೇಶದ ರಾಜಧಾನಿಯಲ್ಲಿ ಗುರಿಯಾಗಿಸಿಕೊಳ್ಳಲಾಯಿತು. ವಿಚಾರಣೆಯೇ ಇಲ್ಲದೆ ಅವರು ಜೈಲಿನಲ್ಲಿ ಆರು ವರ್ಷಗಳನ್ನು ಪೂರೈಸಿದ್ದಾರೆ. ಸರ್ಕಾರದ ವಿರುದ್ಧದ ರಾಜಕೀಯ...

ಕನ್ವರ್ ಯಾತ್ರೆ ವೇಳೆ 18 ದ್ವೇಷ ಘಟನೆಗಳು: ಮುಸ್ಲಿಮರು, ಅವರ ವ್ಯಾಪಾರಗಳನ್ನು ಗುರಿಯಾಗಿಸಿಕೊಂಡ ಪ್ರಕರಣಗಳೇ ಹೆಚ್ಚು; APCR ವರದಿ

ನವದೆಹಲಿ: 2026ರ ಕನ್ವರ್ ಯಾತ್ರೆಯ 13 ದಿನಗಳ ಅವಧಿಯಲ್ಲಿ ಹಿಂಸಾಚಾರ, ಬಲವಂತ, ತಾರತಮ್ಯ, ಆರ್ಥಿಕ ಬಹಿಷ್ಕಾರ ಹಾಗೂ ಸಾರ್ವಜನಿಕ ಅಶ್ಲೀಲ ವರ್ತನೆಗೆ ಸಂಬಂಧಿಸಿದ ಕನಿಷ್ಠ 18 ಘಟನೆಗಳು ವರದಿಯಾಗಿವೆ ಎಂದು ನಾಗರಿಕ ಹಕ್ಕುಗಳ...

ಸಿಐಟಿಯು ಕಾನೂನು ಹೋರಾಟಕ್ಕೆ ಮೊದಲ ಜಯ: ಕನಿಷ್ಠ ವೇತನ ತಡೆಹಿಡಿದಿದ್ದ ಸರ್ಕಾರದ ಮೂರು ಸುತ್ತೋಲೆಗಳಿಗೆ ಹೈಕೋರ್ಟ್ ತಡೆ

ಸರ್ಕಾರಿ ಇಲಾಖೆಗಳು ಮತ್ತು ಸ್ಥಳೀಯ ಸಂಸ್ಥೆಗಳಲ್ಲಿ ಕೆಲಸ ಮಾಡುವ ಲಕ್ಷಾಂತರ ಕಾರ್ಮಿಕರ ಹೊಸ ಕನಿಷ್ಠ ವೇತನವನ್ನು ತಡೆಹಿಡಿದಿದ್ದ ಸರ್ಕಾರದ ನಿರ್ಧಾರಕ್ಕೆ ಹೈಕೋರ್ಟ್ ಬ್ರೇಕ್ ಹಾಕಿದೆ. ಹೊಸ ವೇತನ ನೀಡುವುದನ್ನು ಅಮಾನತಿನಲ್ಲಿಟ್ಟಿದ್ದ ಸರ್ಕಾರದ ಮೂರು...

ಟಿಎಂಸಿ ಹೆಸರು, ಚಿಹ್ನೆ ಫ್ರೀಜ್: ಮಮತಾ ಬ್ಯಾನರ್ಜಿಗೆ ‘ಫುಟ್‌ಬಾಲ್ ಪ್ಲೇಯರ್’, ಬಂಡಾಯ ಬಣಕ್ಕೆ ‘ಲಕೋಟೆ’ ಚಿಹ್ನೆ ನೀಡಿದ ಚುನಾವಣಾ ಆಯೋಗ

ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂಲ ಹೆಸರು ಮತ್ತು ಸಾಂಪ್ರದಾಯಿಕ 'ಹೂವು-ಹುಲ್ಲು' ಚಿಹ್ನೆಯನ್ನು ಮುಟ್ಟುಗೋಲು (ಫ್ರೀಜ್) ಹಾಕಿದ ನಂತರ, ಭಾರತೀಯ ಚುನಾವಣಾ ಆಯೋಗವು ಶುಕ್ರವಾರ ಎರಡೂ ಎದುರಾಳಿ ಬಣಗಳಿಗೆ ಪ್ರತ್ಯೇಕ ಮಧ್ಯಂತರ ಹೆಸರು...

‘ರೋಹಿತ್ ವೇಮುಲಾ ಸ್ಥಿತಿ ನನಗೆ ಬಾರದಿರಲಿ..’; ವಿದೇಶದಲ್ಲಿ ಕಷ್ಟಕ್ಕೆ ಸಿಲುಕಿದ ತಮಿಳುನಾಡಿನ ದಲಿತ ಸಂಶೋಧಕ

ಮಲೇಷ್ಯಾದಲ್ಲಿ ಪಿಎಚ್‌ಡಿ ವ್ಯಾಸಂಗ ಮಾಡುತ್ತಿರುವ ತಮಿಳುನಾಡಿನ ದಲಿತ ಸಂಶೋಧನಾ ವಿದ್ಯಾರ್ಥಿ ಭಾರತಿ ದಾಸನ್ ರಾಮನ್, ತಮಿಳುನಾಡು ಸರ್ಕಾರದ ಸಾಮಾಜಿಕ ನ್ಯಾಯ ಇಲಾಖೆಯು ನನ್ನನ್ನು ಗುರಿಯಾಗಿಸಿಕೊಂಡಿದೆ ಎಂದು ಆರೋಪಿಸಿದ್ದಾರೆ ಎಂದು 'ದಿ ನ್ಯೂಸ್‌ ಮಿನಿಟ್'...