Homeಚಳವಳಿಕೋಮು ಗಲಭೆ ಬಿಟ್ಟು ಚಪ್ಪಲಿ ಅಂಗಡಿ ಹಾಕಿದ ಅಶೋಕ್: ಗುಜರಾತಿನ ಈ ಗೆಳೆಯರು ಇಂದಿನ ಭಾರತಕ್ಕೆ...

ಕೋಮು ಗಲಭೆ ಬಿಟ್ಟು ಚಪ್ಪಲಿ ಅಂಗಡಿ ಹಾಕಿದ ಅಶೋಕ್: ಗುಜರಾತಿನ ಈ ಗೆಳೆಯರು ಇಂದಿನ ಭಾರತಕ್ಕೆ ಮಾದರಿಯಾಗಬಲ್ಲರೆ?

ಅವನನ್ನು ಚೆನ್ನಾಗಿ ನೋಡುವುದನ್ನು ಬಿಟ್ಟು ನಾನು ಇನ್ನೇನು ಬಯಸುತ್ತೇನೆ? ನಾನು ಅಂಗಡಿ ಉದ್ಘಾಟಿಸಿದೆ ಮತ್ತು ಒಂದು ಜೋಡಿ ಚಪ್ಪಲಿಗಳನ್ನು ಕೂಡ ಖರೀದಿಸಿದೆ. ಅವನ ವ್ಯವಹಾರವು ಅಭಿವೃದ್ಧಿ ಹೊಂದುತ್ತದೆ ಎಂದು ನಾನು ಭಾವಿಸುತ್ತೇನೆ ಎನ್ನುತ್ತಾರೆ ಅನ್ಸಾರಿ

- Advertisement -
- Advertisement -

ಅಹಮದಾಬಾದ್ ನಲ್ಲಿ ಅಶೋಕ್ ಪರ್ಮಾರ್ ಎಂಬುವವರು ‘ಏಕತಾ ಚಪ್ಪಲ್ ಘರ್’ ಎಂಬ ಚಪ್ಪಲಿ ಶೂ ಅಂಗಡಿ ಆರಂಭಿಸಿದ್ದಾರೆ. ಅದನ್ನು ಕುತುಬುದ್ದೀನ್ ಅನ್ಸಾರಿ ಎಂಬುವವರು ಉದ್ಘಾಟಿಸಿದ್ದಾರೆ. ಆ ಇಬ್ಬರು ಗೆಳೆಯರು ಅಂಗಡಿಯ ಮುಂದೆ ನಿಂತು ತೆಗೆಸಿಕೊಂಡ ಫೋಟೊ ಎಲ್ಲಾ ಕಡೆ ವೈರಲ್ ಆಗಿದೆ. ಲಕ್ಷಾಂತರ ಜನ ಈ ಜೋಡಿಗೆ ಶುಭ ಹಾರೈಸಿದ್ದಾರೆ. ಏಕೆ? ಯಾರಿವರು? ಇವರ ಹಿನ್ನೆಲೆ ಏನು?

ಅದು 2002ರ ಕಾಲ. ಸರಿಯಾಗಿ 17 ವರ್ಷಗಳ ಹಿಂದೆ ಗುಜರಾತ್ ನಲ್ಲಿ ಕೋಮುಗಲಭೆಗಳು ಉತ್ತುಂಗಕ್ಕೇರಿದ್ದವು. ಗೋಧ್ರಾ ರೈಲು ದುರಂತಕ್ಕೆ ಸೇಡು ತೀರಿಸಬೇಕೆಂದು ಒಂದು ಸಮುದಾಯದವರು ಮತ್ತೊಂದು ಸಮುದಾಯದವರನ್ನು ಹುಡಕಿ ಕೊಲ್ಲುತ್ತಿದ್ದ ಸಮಯ. ವೃತ್ತಿಯಲ್ಲಿ ಟೈಲರ್ ಆದ ಕುತುಬುದ್ದೀನ್ ಅನ್ಸಾರಿ ಎಂಬ ಮುಸ್ಲಿಂ ಸಮುದಾಯದ ವ್ಯಕ್ತಿ ಫೆಬ್ರವರಿ 28, 2002 ರಂದು ಅಹಮದಾಬಾದ್‌ನ ನರೋಡಾ ಪಟಿಯಾ ಪ್ರದೇಶದಲ್ಲಿ ಗಲಭೆ ಉತ್ತುಂಗದಲ್ಲಿದ್ದಾಗ, ನರೋಲ್-ನರೋಡಾ ರಸ್ತೆಯಲ್ಲಿರುವ ತನ್ನ ಮನೆಯ ಹೊರಗೆ ಆತ ಸಹಾಯಕ್ಕಾಗಿ ರಾಪಿಡ್ ಆಕ್ಷನ್ ಫೋರ್ಸ್ (ಆರ್‌ಎಎಫ್) ಸಿಬ್ಬಂದಿಗೆ  ಕೈ ಮುಗಿದ ಮನವಿ ಮಾಡುವ ದೃಶ್ಯ ಕ್ಯಾಮೆರಾದಲ್ಲಿ ಸೆರೆಯಾಗಿತ್ತು. ಅವರ ರಕ್ತದ ಅಂಗಿಯ ಚಿತ್ರ ಮತ್ತು ಕಣ್ಣೀರು ತುಂಬಿದ ಕಣ್ಣುಗಳು ಗುಜರಾತ್ ಗಲಭೆಯ ಸಂತ್ರಸ್ತರನ್ನು ಪ್ರತಿನಿಧಿಸುವ ಚಿತ್ರವಾಯಿತು.

ಅದೇ ಸಂದರ್ಭದಲ್ಲಿ ಬಲಗೈಯ್ಯಲ್ಲೊಂದು ಕಬ್ಬಿಣದ ರಾಡ್, ತಲೆಗೆ ಕೇಸರಿ ಬಟ್ಟೆ ಕಟ್ಟಿ ಎರಡೂ ಕೈಗಳನ್ನು ಮೇಲಕ್ಕೆತ್ತಿ ಅಟ್ಟಹಾಸ ಮೆರೆಯುತ್ತಿರುವ ಹಿಂದೂ ಸಮುದಾಯಕ್ಕೆ ಸೇರಿದ ಅಶೋಕ್ ಪರ್ಮಾರ್ ಅಲಿಯಾಸ್ ಅಶೋಕ್ ಮೋಚಿಯ ಫೋಟೊ ಕೂಡ ಅಂದಿನ ದೌರ್ಜನ್ಯದ ಸಂಕೇತವಾಗಿತ್ತು.

ಆದರ ಗಲಭೆಗಳು ನಿಂತು ಬಹಳ ಕಾಲವಾದ ನಂತರ ಅವರಿಬ್ಬರನ್ನು ಮಾತನಾಡಿಸಿ ಅವರನ್ನು ಒಂದೇ ವೇದಿಕೆಗೆ ತರುವ ಮೂಲಕ ಕೋಮು ಸೌಹಾರ್ದತೆ ಸಾರಲು ಕೇರಳದ ಸಿಪಿಎಂ ಪಕ್ಷ ಪ್ರಯತ್ನಿಸಿತ್ತು ಮತ್ತು ಅದಕ್ಕೆ ಯಶ ಸಿಕ್ಕಿತು ಕೂಡ. ಅಶೋಕ್ ಪರ್ಮಾರ್ ರನ್ನು ಮಾತನಾಡಿಸಿ ಈ ರೀತಿ ಕೋಮುದ್ವೇಷ ಸಾಧಿಸಿ ದಾಳಿ ಮಾಡುವುದು ತಪ್ಪಲ್ಲವೇ? ಇದರಿಂದ ಸಮಾಜಕ್ಕಾಗುವ ಅಪಾಯಗಳನ್ನು ತಿಳಿಹೇಳಲಾಯಿತು. ಆತನಿಗೆ ತನ್ನ ತಪ್ಪಿನ ಮನವರಿಕೆಯಾಗಿ ಬಹಿರಂಗ ಕ್ಷಮೆ ಕೇಳಿದ್ದ. ಮುಂದೆಂದೂ ಕೋಮುಗಲಭೆಗಳಲ್ಲಿ ಭಾಗವಹಿಸದೇ ಸಾಮಾನ್ಯ ಜೀವನ ಸಾಗಿಸಲು ನಿರ್ಧರಿಸಿದ್ದ. ಕೇರಳದಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಇಬ್ಬರೂ ಭಾಗವಹಿಸಿ ಅಶೋಕ್ ಮೋಚಿ, ಅನ್ಸಾರಿಗೆ ಗುಲಾಬಿ ಹೂ ಕೊಡುವ ಮೂಲಕ ಭಾವೈಕ್ಯತೆ ಮೆರದಿದ್ದ.

ಅಶೋಕ್ ಪರ್ಮಾರ್ ಬಡವನಾಗಿದ್ದರಿಂದ ದೆಹಲಿಯ ಫುಟ್ ಪಾತ್ ಗಳಲ್ಲಿ ಶೂ, ಚಪ್ಪಲಿ ಹೊಲೆಯುತ್ತಿದ್ದ ಮತ್ತು ಮಾರುತ್ತಿದ್ದ. ತನ್ನ ಜೀವನವನ್ನು ಮತ್ತಷ್ಟು ತಹಬದಿಗೆ ತರುವುದಕ್ಕಾಗಿ ಈಗ ಅಹಮದಾಬಾದ್ ನಲ್ಲಿ ಹೊಸ ಚಪ್ಪಲಿ ಅಂಗಡಿ ಹಾಕಿದ್ದಾನೆ. ಇದಕ್ಕಾಗಿ ಆತನಿಗೆ ಕೇರಳದ ಸಿಪಿಎಂ ಪಕ್ಷವು ಆರಂಭಿಕ ಬಂಡವಾಳದ ಹಣಕಾಸು ಸಹಾಯ ಮಾಡಿದೆ. ಅದಕ್ಕೆ ‘ಏಕತಾ ಚಪ್ಪಲ್ ಘರ್’ ಎಂಬ ಸೌಹಾರ್ದ ಸೂಚಿಸುವ ಹೆಸರು ಸಹ ಇಟ್ಟಿದ್ದಾನೆ. ಜೊತೆಗೆ ತನ್ನ ಗೆಳೆಯ ಕುತುಬುದ್ದೀನ್ ಅನ್ಸಾರಿರವರಿಂದಲೇ ಅದರ ಉದ್ಘಾಟನೆ ಮಾಡಿಸುವ ಮೂಲಕ ತನ್ನ ಹಿಂದಿನ ತಪ್ಪುಗಳಿಗೆ ಒಂದು ರೀತಿಯ ಪ್ರಾಯಶ್ಚಿತ ಮಾಡಿಕೊಂಡಿದ್ದಾನೆ ಎಂದು ಎಲ್ಲೆಡೆ ಮಾತನಾಡಿಕೊಳ್ಳುತ್ತಿದ್ದಾರೆ.

ಇನ್ನು ಅಶೋಕ್ ಪರ್ಮಾರ್ ರವರ ಹೊಸ ಅಂಗಡಿ ಉದ್ಘಾಟನೆಯ ಗೌರವಾನ್ವಿತ ಅತಿಥಿಯಾಗಿದ್ದ ಕುತುಬುದ್ದೀನ್ ಅನ್ಸಾರಿ ಗಲಭೆಯ ನಂತರ ಪಶ್ಚಿಮ ಬಂಗಾಳದಲ್ಲಿ ತಾತ್ಕಾಲಿಕವಾಗಿ ನೆಲೆಸಿದ್ದರು. ಅಲ್ಲಿಯೂ ಅವರು ಟೈಲರ್ ಆಗಿ ಕೆಲಸ ಮಾಡುತ್ತಿದ್ದಾರೆ.

ಅಶೋಕ್ ಪರ್ಮಾರ್ ಮೋಚಿಯೊಂದಿಗಿನ ತನ್ನ ಸಂಬಂಧದ ಬಗ್ಗೆ ಮಾತನಾಡಿರುವ ಕುತುಬುದ್ದೀನ್ ಅನ್ಸಾರಿ, “ನಾವು ಕಾಲಕಾಲಕ್ಕೆ ಭೇಟಿಯಾಗುತ್ತಲೇ ಇರುತ್ತೇವೆ. ಅವರು (ಅಶೋಕ್) ಅವರು ತಮ್ಮ ಅಂಗಡಿಯನ್ನು ನಾನು ಉದ್ಘಾಟಿಸಬೇಕೆಂದು ಕೇಳಿದರು ಮತ್ತು ನಾನು ಒಪ್ಪಿಕೊಂಡೆ. ಅವನನ್ನು ಚೆನ್ನಾಗಿ ನೋಡುವುದನ್ನು ಬಿಟ್ಟು ನಾನು ಇನ್ನೇನು ಬಯಸುತ್ತೇನೆ? ನಾನು ಅಂಗಡಿ ಉದ್ಘಾಟಿಸಿದೆ ಮತ್ತು ಒಂದು ಜೋಡಿ ಚಪ್ಪಲಿಗಳನ್ನು ಕೂಡ ಖರೀದಿಸಿದೆ. ನಾನು ಅವನನ್ನು ಚೆನ್ನಾಗಿ ಇರಲು ಬಯಸುತ್ತೇನೆ ಮತ್ತು ಅವನ ವ್ಯವಹಾರವು ಅಭಿವೃದ್ಧಿ ಹೊಂದುತ್ತದೆ ಎಂದು ನಾನು ಭಾವಿಸುತ್ತೇನೆ” ಎಂದು ಹೇಳಿದ್ದಾರೆ. ಈ ಹೇಳಿಕೆ ಸಾಕಷ್ಟು ಜನರ ಮೆಚ್ಚುಗೆಯನ್ನು ಗಳಿಸಿದೆ.

“ಇದು ಹಿಂದೂ ವರ್ಣ ವ್ಯವಸ್ಥೆಯಾಗಿದ್ದು, ನನ್ನನ್ನು ಚಮ್ಮಾರನಾಗಿ ಸಿಲುಕಿಕೊಳ್ಳುತ್ತಲೇ ಇದೆ. ಅವರು ನಮಗೆ ಮುಂದುವರಿಯಲು ಬಿಡುವುದಿಲ್ಲ” ಎಂದಿರುವ ಅಶೋಕ್ ಪರ್ಮಾರ್ ಮೋಚಿ, ಉನಾದಲ್ಲಿ ದಲಿತರನ್ನು ಸಾರ್ವಜನಿಕವಾಗಿ ಥಳಿಸಿದ ನಂತರ ತಮ್ಮ ಸಮುದಾಯದ ಹಕ್ಕುಗಳಿಗಾಗಿ ಹೋರಾಡಲು 2017 ರಲ್ಲಿ ಗುಜರಾತ್‌ನ ದಲಿತ ಆಜಾದಿ ಕೂಚ್‌ಗೆ ಸೇರಿದ್ದರು. ತನ್ನ ಅಂಗಡಿಯ ಉದ್ಘಾಟನೆಯಲ್ಲಿ ತನ್ನ ಗೆಳೆಯ ಅನ್ಸಾರಿ ಟೇಪು ಕತ್ತರಿಸುವುದನ್ನು ನೋಡಿದ ಮೋಚಿ ಭಾವುಕಗೊಂಡಿದ್ದಾರೆ.

ಒಟ್ಟಿನಲ್ಲಿ ಗುಜರಾತ್ ಗಲಭೆಯ ಸಮಯದಲ್ಲಿ ಎರಡು ವಿರುದ್ಧ ಧ್ರುವಗಳನ್ನು ಪ್ರತಿನಿಧಿಸಿದ್ದ ಇಬ್ಬರೂ ವ್ಯಕ್ತಿಗಳು ವಾಸ್ತವವನ್ನು ಅರ್ಥ ಮಾಡಿಕೊಂಡು ಸೌಹಾರ್ದತೆ ಮೆರೆದಿದ್ದಾರೆ. ಅಲ್ಲದೇ ಕೇವಲ ಭಾವನಾತ್ಮಕ ವಿಚಾರದಲ್ಲಿ ಜನರು ಆವೇಶಗೊಳಗಾಗದೆ ತಮ್ಮ ಬದುಕನ್ನು ಸುಧಾರಿಸುವ ಜೀವನೋಪಾಯದ ಕಡೆ ಚಲಿಸಬೇಕೆಂಬುದನ್ನು ಸಹ ಈ ಚಪ್ಪಲಿ ಅಂಗಡಿ ತೋರಿಸಿದೆ. ಇದು ಇಂದು ಇಡೀ ಭಾರತ ಅರ್ಥ ಮಾಡಿಕೊಳ್ಳಬೇಕಾದ ಪಾಠವಾಗಿದೆ. ಧರ್ಮ-ಧರ್ಮಗಳ ನಡುವಿನ ಕಂದರಗಳನ್ನು ಮುಚ್ಚಿಹಾಕಿ ಭಾರತದ ಎಲ್ಲಾ ಜನರು ತಮ್ಮ ಬದುಕನ್ನು ಅರ್ಥಪೂರ್ಣವಾಗಿ ಕಟ್ಟಿಕೊಳ್ಳುವುದರ ಜೊತೆಗೆ ದೇಶದ ಐಕ್ಯತೆ, ಸೌಹರ್ದತೆಗೆ ಶ್ರಮಿಸಬೇಕಿದೆ.

ಕೊನೆಯಲ್ಲಿ ಈ ಗೆಳೆಯರು ಹೀಗೆ ಬದಲಾಗಲು, ಹೊಸ ಬದುಕು ಕಟ್ಟಿಕೊಳ್ಳಲು ನೆರವಾಗುತ್ತಿರುವ ಕೇರಳ ಸಿಪಿಎಂ ಪಕ್ಷವನ್ನು ಮನಃಪೂರ್ವಕವಾಗಿ ಅಭಿನಂದಿಸೋಣ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

3 COMMENTS

  1. ಸೌಹಾರ್ದ ಳ್ಳೆಯದು.
    ಆದರೆ ಸಿಪಿಐದು ಒನ್ ವೇ ಸೌಹಾರ್ದ. ಸೌಹಾರ್ದತೆಯಾಗಲೀ ಗಲಭೆಯಾಗಲೀ – ಒಂದೇ ಕೈಯಲ್ಲಿ ಚಪ್ಪಾಳೆ ಸಾಧ್ಯವಿಲ್ಲ.. ನಿಮಗೆ ಗೋಧ್ರಾ ರೈಲಿಗೆ ಬೆಂಕಿ ಆಕಸ್ಮಿಕ, ನಂತರದ ಗಲಭೆ ಪೂರ್ವಯೋಜಿತ !
    ಹಿಂದೂ ಮಾತ್ರ ಗಲಭೆಕೋರ
    ಮುಸ್ಲಿಮರು ಸಂತ್ರಸ್ತರು !
    ನೀವು ಸಾಮಾಜಿಕ ನ್ಯಾಯ ಸಾರುವವರೇ ಹೌದಾದರೆ ….
    ಕಾಶ್ಮೀರಿ ಪಂಡಿತರನ್ನು ಅವರ ನೆಲದಿಂದ ಒಕ್ಕಲೆಬ್ಬಿಸಿ, ಹೊಡೆದು, ಕೊಂದು, ಅತ್ಯಾಚಾರಗೈದು, ಬದುಕಿ ಉಳಿದವರನ್ನು ಓಡಿಸಿದವರಿಂದ ‘ಬನ್ನಿ, ನಮ್ಮೊಂದಿಗೆ ಬದುಕಿ, ಇಲ್ಲೇ ನೆಲೆಸಿ’ ಎಂಬ ಕರೆ ಕೊಡಿಸಿ…ಕೈ ಕುಲುಕಿಸಿ.
    ಅಂದೇ ನಿಮ್ಮ ಸಿದ್ಧಾಂತಗಳ ಅನುಯಾಯಿಯಾಗುತ್ತೇನೆ ..

  2. ಸೌಹಾರ್ದ ಳ್ಳೆಯದು.
    ಆದರೆ ಸಿಪಿಎಂದು ಒನ್ ವೇ ಸೌಹಾರ್ದ. ಸೌಹಾರ್ದತೆಯಾಗಲೀ ಗಲಭೆಯಾಗಲೀ – ಒಂದೇ ಕೈಯಲ್ಲಿ ಚಪ್ಪಾಳೆ ಸಾಧ್ಯವಿಲ್ಲ.. ನಿಮಗೆ ಗೋಧ್ರಾ ರೈಲಿಗೆ ಬೆಂಕಿ ಆಕಸ್ಮಿಕ, ನಂತರದ ಗಲಭೆ ಪೂರ್ವಯೋಜಿತ !
    ಹಿಂದೂ ಮಾತ್ರ ಗಲಭೆಕೋರ
    ಮುಸ್ಲಿಮರು ಸಂತ್ರಸ್ತರು !
    ನೀವು ಸಾಮಾಜಿಕ ನ್ಯಾಯ ಸಾರುವವರೇ ಹೌದಾದರೆ ….
    ಕಾಶ್ಮೀರಿ ಪಂಡಿತರನ್ನು ಅವರ ನೆಲದಿಂದ ಒಕ್ಕಲೆಬ್ಬಿಸಿ, ಹೊಡೆದು, ಕೊಂದು, ಅತ್ಯಾಚಾರಗೈದು, ಬದುಕಿ ಉಳಿದವರನ್ನು ಓಡಿಸಿದವರಿಂದ ‘ಬನ್ನಿ, ನಮ್ಮೊಂದಿಗೆ ಬದುಕಿ, ಇಲ್ಲೇ ನೆಲೆಸಿ’ ಎಂಬ ಕರೆ ಕೊಡಿಸಿ…ಕೈ ಕುಲುಕಿಸಿ.
    ಅಂದೇ ನಿಮ್ಮ ಸಿದ್ಧಾಂತಗಳ ಅನುಯಾಯಿಯಾಗುತ್ತೇನೆ ..

LEAVE A REPLY

Please enter your comment!
Please enter your name here

- Advertisment -

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...

ಕ್ಷೇತ್ರ ಮರುವಿಂಗಡನೆ : ಗೃಹ ಸಚಿವ ಅಮಿತ್ ಶಾ ಹೇಳಿದ್ದೆಲ್ಲವು ನಿಜವೇ?..ಇಲ್ಲಿದೆ ವಾಸ್ತವಾಂಶ

ದೇಶದ ಗೃಹ ಸಚಿವರು ಸಂಸತ್ತಿನಲ್ಲಿ ಪ್ರಮುಖ ಕಾನೂನಿನ ಬಗ್ಗೆ ವಿವರಿಸುವಾಗ ವಿಷಯ ಸ್ಪಷ್ಟವಾಗಿರಬೇಕು. ಆದರೆ, ಕ್ಷೇತ್ರ ಮರುವಿಂಗಡನೆ ಕುರಿತು ಗೃಹ ಸಚಿವ ಅಮಿತ್ ಶಾ ಮಾತನಾಡಿರುವುದು ಹಾಗಿರಲಿಲ್ಲ. ದಕ್ಷಿಣ ಭಾರತದ ರಾಜ್ಯಗಳು ತಮ್ಮ...

ಮಹಿಳಾ ಮೀಸಲು ಮಸೂದೆ 2023ರಲ್ಲೇ ಗೆದ್ದಿದೆ, ಈಗ ಸೋತಿರುವುದು ಮೋದಿ ಸರ್ಕಾರ

ಮೋದಿ ಸರ್ಕಾರ ಮಂಡಿಸಿದ್ದ ಮಹಿಳಾ ಮೀಸಲಾತಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾಗಿದೆ ಎಂಬುವುದು ದೇಶದಲ್ಲಿ ಪ್ರಸ್ತುತ ದೊಡ್ಡ ಚರ್ಚೆಯ ವಿಷಯವಾಗಿದೆ. ಕಾಂಗ್ರೆಸ್‌ ನೇತೃತ್ವದಲ್ಲಿ ವಿಪಕ್ಷಗಳು ಮಸೂದೆಯನ್ನು ಸೋಲಿಸುವ ಮೂಲಕ ದೇಶದ ಮಹಿಳೆಯರ ಸಬಲೀಕರಣಕ್ಕೆ...