Homeಮುಖಪುಟಏಕನಾಥ್ ಶಿಂಧೆ ಬಣವೇ ನಿಜವಾದ ಶಿವಸೇನೆ: ಚುನಾವಣಾ ಆಯೋಗ ಆದೇಶ

ಏಕನಾಥ್ ಶಿಂಧೆ ಬಣವೇ ನಿಜವಾದ ಶಿವಸೇನೆ: ಚುನಾವಣಾ ಆಯೋಗ ಆದೇಶ

- Advertisement -
- Advertisement -

ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ ನೇತೃತ್ವದ ಬಣವೇ ನಿಜವಾದ ಶಿವಸೇನೆ ಎಂದು ಗುರುತಿಸಿ ಬಿಲ್ಲು ಮತ್ತು ಬಾಣದ ಚಿಹ್ನೆಯನ್ನು ಚುನಾವಣಾ ಆಯೋಗವು ನಿಗದಿಪಡಿಸಿದೆ.

ಶುಕ್ರವಾರ ಪ್ರಕಟಿಸಲಾದ 78 ಪುಟಗಳ ಆದೇಶದಲ್ಲಿ ಚುನಾವಣಾ ಆಯೋಗವು, “2019ರ ಮಹಾರಾಷ್ಟ್ರ ವಿಧಾನಸಭಾ ಚುನಾವಣೆಯಲ್ಲಿ ಶಿವಸೇನೆ ಗೆದ್ದ 55 ಅಭ್ಯರ್ಥಿಗಳ ಪೈಕಿ  ಶಿಂಧೆ ಅವರನ್ನು ಬೆಂಬಲಿಸುವ 40 ಶಾಸಕರು ಇದ್ದಾರೆ. ಅವರ ಪರವಾಗಿ ಸುಮಾರು 76% ಮತಗಳು ಬಿದ್ದಿವೆ. ಮತ್ತೊಂದೆಡೆ, ಉದ್ಧವ್ ಠಾಕ್ರೆ ಬಣದ 15 ಶಾಸಕರಿದ್ದು, ಅವರಿಗೆ 23.5% ಮತಗಳು ಬಂದಿವೆ” ಎಂದು ತಿಳಿಸಿದೆ.

“2019ರ ಲೋಕಸಭೆ ಚುನಾವಣೆಯಲ್ಲಿ ಶಿವಸೇನೆಯ ಪರವಾಗಿ ಚಲಾವಣೆಯಾದ ಒಟ್ಟು ಮತಗಳಲ್ಲಿ 73% ಶಿಂಧೆ ಬಣದ 13 ಸಂಸದರು ಪಡೆದರೆ, ಕೇವಲ 27% ಮತಗಳು ಠಾಕ್ರೆ ಪಾಳಯದ ಸಂಸದರಿಗೆ ಬಂದಿವೆ” ಎಂದಿದೆ.

ಶಿವಸೇನೆ, ನ್ಯಾಶನಲಿಸ್ಟ್ ಕಾಂಗ್ರೆಸ್ ಪಕ್ಷ ಮತ್ತು ಕಾಂಗ್ರೆಸ್‌ನ ಒಗ್ಗೂಡಿ ರಚಿಸಿದ ಮಹಾರಾಷ್ಟ್ರದ ಹಿಂದಿನ ಸರ್ಕಾರದ ವಿರುದ್ಧ ಶಿಂಧೆ ಮತ್ತು ಇತರ ಶಾಸಕರ ಗುಂಪು ಬಂಡಾಯವೆದ್ದ ನಂತರ ಮಹಾ ಅಘಾಡಿ ಸರ್ಕಾರವು ಜೂನ್‌ನಲ್ಲಿ ವಿಭಜನೆಯಾಯಿತು.

ಒಂದು ವಾರಕ್ಕೂ ಹೆಚ್ಚು ಕಾಲ ನಡೆದ ರಾಜಕೀಯ ನಾಟಕದ ನಂತರ, ಸಮ್ಮಿಶ್ರ ಸರ್ಕಾರ ಪತನವಾಯಿತು. ಜೂನ್ 30ರಂದು ಶಿಂಧೆಯವರು ಮಹಾರಾಷ್ಟ್ರದ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದರೆ, ಭಾರತೀಯ ಜನತಾ ಪಕ್ಷದ ದೇವೇಂದ್ರ ಫಡ್ನವಿಸ್ ಅವರು ಉಪಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದರು.

ಠಾಕ್ರೆ ಮತ್ತು ಶಿಂಧೆ ನೇತೃತ್ವದ ಎರಡು ಬಣಗಳ ನಡುವೆ ನಿಜವಾದ ಶಿವಸೇನೆ ಯಾವುದೆಂಬ ಜಟಾಪಟಿ ಉಂಟಾಗಿತ್ತು. ಅದಕ್ಕಾಗಿ ಚುನಾವಣಾ ಸಂಸ್ಥೆಯನ್ನು ಸಂಪರ್ಕಿಸಿದ್ದವು.

ಶಿಂಧೆ ಅವರನ್ನು ಬಾಳಾಸಾಹೆಬಂಚಿ ಶಿವಸೇನೆ ಎಂದು ಕರೆಯಲಾಗುವುದು ಎಂದು ಚುನಾವಣಾ ಆಯೋಗ ಮಧ್ಯಂತರ ನಿರ್ಧಾರದಲ್ಲಿ ಹೇಳಿತ್ತು. ಈ ಬಣವು ತನ್ನ ಮಧ್ಯಂತರ ಚಿಹ್ನೆಯಾಗಿ ಎರಡು ಕತ್ತಿಗಳು ಮತ್ತು ಗುರಾಣಿಯನ್ನು ಆರಿಸಿಕೊಂಡಿದೆ.

ಮಧ್ಯಂತರ ಹೆಸರು ಮತ್ತು ಚಿಹ್ನೆಯನ್ನು ಸ್ಥಗಿತದಲ್ಲಿ ಇಡಲಾಗುವುದು ಎಂದು ಚುನಾವಣಾ ಸಂಸ್ಥೆ ತಿಳಿಸಿದೆ. ರಾಜ್ಯದಲ್ಲಿ ವಿಧಾನಸಭಾ ಉಪಚುನಾವಣೆ ಮುಗಿಯುವವರೆಗೆ ಉದ್ಧವ್ ಠಾಕ್ರೆ ಬಣವು ತನ್ನ ಮಧ್ಯಂತರ ಚಿಹ್ನೆ – ಜ್ವಾಲೆಯ ಜ್ಯೋತಿಯನ್ನು ಇಟ್ಟುಕೊಳ್ಳಲು ಚುನಾವಣಾ ಆಯೋಗವು ಅನುಮತಿ ನೀಡಿದೆ.

ಶುಕ್ರವಾರ ಸಂಜೆ, ಶಿಂಧೆ ಸುದ್ದಿಗಾರರೊಂದಿಗೆ ಮಾತನಾಡುತ್ತಾ, “ಚುನಾವಣಾ ಆಯೋಗದ ನಿರ್ಧಾರವು ಸತ್ಯ ಮತ್ತು ಜನರ ವಿಜಯವಾಗಿದೆ. ನಾನು ಚುನಾವಣಾ ಆಯೋಗಕ್ಕೆ ಧನ್ಯವಾದ ಹೇಳುತ್ತೇನೆ. ಪ್ರಜಾಪ್ರಭುತ್ವದಲ್ಲಿ ಬಹುಮತ ಪರಿಗಣನೆಯಾಗುತ್ತದೆ. ಇದು ಬಾಳಾಸಾಹೇಬರ [ಠಾಕ್ರೆ] ಪರಂಪರೆಯ ವಿಜಯವಾಗಿದೆ” ಎಂದು ತಿಳಿಸಿದ್ದಾರೆ.

ಇದನ್ನೂ ಓದಿರಿ: ಅದಾನಿ ಹಗರಣ| ಸುಪ್ರೀಂ ಕೋರ್ಟ್ ಮುಂದಿವೆ ನಾಲ್ಕು ಅರ್ಜಿ

ಚುನಾವಣಾ ಆಯೋಗವು ಅರ್ಹತೆಯ ಆಧಾರದಲ್ಲಿ ನಿರ್ಧಾರ ಕೈಗೊಂಡಿದೆ ಎಂದು ಉಪಮುಖ್ಯಮಂತ್ರಿ ಹಾಗೂ ಬಿಜೆಪಿ ನಾಯಕ ದೇವೇಂದ್ರ ಫಡ್ನವೀಸ್ ಹೇಳಿದ್ದಾರೆ.

ಇದರ ನಡುವೆ ಠಾಕ್ರೆ ಬಣದ ಸಂಸದ ಸಂಜಯ್ ರಾವುತ್ ಪ್ರತಿಕ್ರಿಯಿಸಿ, “ಚುನಾವಣಾ ಆಯೋಗದ ನಿರ್ಧಾರವು ಪ್ರಜಾಪ್ರಭುತ್ವದ ಕೊಲೆಯಾಗಿದೆ” ಎಂದು ಬಣ್ಣಿಸಿದ್ದಾರೆ.

“ನಾವು ಈ ನಿರ್ಧಾರವನ್ನು ಪ್ರಶ್ನಿಸುತ್ತೇವೆ. ಇಂತಹ ನಿರ್ಧಾರವನ್ನು ನಿರೀಕ್ಷಿಸಲಾಗಿತ್ತು. ಇದೆಲ್ಲವೂ ಒತ್ತಡದಲ್ಲಿ ನಡೆದಿದೆ. ನನಗೆ ಚುನಾವಣಾ ಆಯೋಗದ ಮೇಲೆ ನಂಬಿಕೆ ಇಲ್ಲ” ಎಂದು ಟೀಕಿಸಿದ್ದಾರೆ.

‘ಶಿವಸೇನೆಯ ಸಂವಿಧಾನ ಪ್ರಜಾಸತ್ತಾತ್ಮಕವಲ್ಲ’

ಚುನಾವಣಾ ಆಯೋಗವು ತನ್ನ ಆದೇಶದಲ್ಲಿ, ಶಿವಸೇನೆ ಪಕ್ಷದ ಸಂವಿಧಾನವು ಪ್ರಜಾಸತ್ತಾತ್ಮಕವಲ್ಲ ಎಂದು ಗುರುತಿಸಿದೆ.

2018ರಲ್ಲಿ ಪಕ್ಷದ ಸಂವಿಧಾನದಲ್ಲಿ ಮಾಡಲಾದ ತಿದ್ದುಪಡಿಗಳ ಬಗ್ಗೆ ಚುನಾವಣಾ ಆಯೋಗಕ್ಕೆ ತಿಳಿಸಲಾಗಿಲ್ಲ ಎಂದು ಅದು ಗಮನಿಸಿದೆ. ಶಿವಸೇನಾ ಸಂಸ್ಥಾಪಕ ಬಾಳಾಸಾಹೇಬ್ ಠಾಕ್ರೆ ತಂದ ಪ್ರಜಾಸತ್ತಾತ್ಮಕ ಮಾನದಂಡಗಳನ್ನು ತೆಗೆದುಹಾಕಲಾಗಿದೆ ಎಂದು ಆಯೋಗ ಉಲ್ಲೇಖಿಸಿದೆ.

ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿಗಳು

ಠಾಕ್ರೆ ನೇತೃತ್ವದ ಸರ್ಕಾರದ ಪತನ ಮತ್ತು ಶಿಂಧೆ ಪ್ರಮಾಣ ವಚನಕ್ಕೆ ಕಾರಣವಾದ ರಾಜಕೀಯ ಬೆಳವಣಿಗೆಗಳಿಗೆ ಸಂಬಂಧಿಸಿದಂತೆ ಎರಡು ಬಣಗಳು ಸಲ್ಲಿಸಿರುವ ಅರ್ಜಿಯನ್ನು ಸುಪ್ರೀಂ ಕೋರ್ಟ್‌ ವಿಚಾರಣೆ ನಡೆಸುತ್ತಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...