Homeಮುಖಪುಟಏಕನಾಥ್ ಶಿಂಧೆ ಬಣವೇ ನಿಜವಾದ ಶಿವಸೇನೆ: ಚುನಾವಣಾ ಆಯೋಗ ಆದೇಶ

ಏಕನಾಥ್ ಶಿಂಧೆ ಬಣವೇ ನಿಜವಾದ ಶಿವಸೇನೆ: ಚುನಾವಣಾ ಆಯೋಗ ಆದೇಶ

- Advertisement -
- Advertisement -

ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ ನೇತೃತ್ವದ ಬಣವೇ ನಿಜವಾದ ಶಿವಸೇನೆ ಎಂದು ಗುರುತಿಸಿ ಬಿಲ್ಲು ಮತ್ತು ಬಾಣದ ಚಿಹ್ನೆಯನ್ನು ಚುನಾವಣಾ ಆಯೋಗವು ನಿಗದಿಪಡಿಸಿದೆ.

ಶುಕ್ರವಾರ ಪ್ರಕಟಿಸಲಾದ 78 ಪುಟಗಳ ಆದೇಶದಲ್ಲಿ ಚುನಾವಣಾ ಆಯೋಗವು, “2019ರ ಮಹಾರಾಷ್ಟ್ರ ವಿಧಾನಸಭಾ ಚುನಾವಣೆಯಲ್ಲಿ ಶಿವಸೇನೆ ಗೆದ್ದ 55 ಅಭ್ಯರ್ಥಿಗಳ ಪೈಕಿ  ಶಿಂಧೆ ಅವರನ್ನು ಬೆಂಬಲಿಸುವ 40 ಶಾಸಕರು ಇದ್ದಾರೆ. ಅವರ ಪರವಾಗಿ ಸುಮಾರು 76% ಮತಗಳು ಬಿದ್ದಿವೆ. ಮತ್ತೊಂದೆಡೆ, ಉದ್ಧವ್ ಠಾಕ್ರೆ ಬಣದ 15 ಶಾಸಕರಿದ್ದು, ಅವರಿಗೆ 23.5% ಮತಗಳು ಬಂದಿವೆ” ಎಂದು ತಿಳಿಸಿದೆ.

“2019ರ ಲೋಕಸಭೆ ಚುನಾವಣೆಯಲ್ಲಿ ಶಿವಸೇನೆಯ ಪರವಾಗಿ ಚಲಾವಣೆಯಾದ ಒಟ್ಟು ಮತಗಳಲ್ಲಿ 73% ಶಿಂಧೆ ಬಣದ 13 ಸಂಸದರು ಪಡೆದರೆ, ಕೇವಲ 27% ಮತಗಳು ಠಾಕ್ರೆ ಪಾಳಯದ ಸಂಸದರಿಗೆ ಬಂದಿವೆ” ಎಂದಿದೆ.

ಶಿವಸೇನೆ, ನ್ಯಾಶನಲಿಸ್ಟ್ ಕಾಂಗ್ರೆಸ್ ಪಕ್ಷ ಮತ್ತು ಕಾಂಗ್ರೆಸ್‌ನ ಒಗ್ಗೂಡಿ ರಚಿಸಿದ ಮಹಾರಾಷ್ಟ್ರದ ಹಿಂದಿನ ಸರ್ಕಾರದ ವಿರುದ್ಧ ಶಿಂಧೆ ಮತ್ತು ಇತರ ಶಾಸಕರ ಗುಂಪು ಬಂಡಾಯವೆದ್ದ ನಂತರ ಮಹಾ ಅಘಾಡಿ ಸರ್ಕಾರವು ಜೂನ್‌ನಲ್ಲಿ ವಿಭಜನೆಯಾಯಿತು.

ಒಂದು ವಾರಕ್ಕೂ ಹೆಚ್ಚು ಕಾಲ ನಡೆದ ರಾಜಕೀಯ ನಾಟಕದ ನಂತರ, ಸಮ್ಮಿಶ್ರ ಸರ್ಕಾರ ಪತನವಾಯಿತು. ಜೂನ್ 30ರಂದು ಶಿಂಧೆಯವರು ಮಹಾರಾಷ್ಟ್ರದ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದರೆ, ಭಾರತೀಯ ಜನತಾ ಪಕ್ಷದ ದೇವೇಂದ್ರ ಫಡ್ನವಿಸ್ ಅವರು ಉಪಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದರು.

ಠಾಕ್ರೆ ಮತ್ತು ಶಿಂಧೆ ನೇತೃತ್ವದ ಎರಡು ಬಣಗಳ ನಡುವೆ ನಿಜವಾದ ಶಿವಸೇನೆ ಯಾವುದೆಂಬ ಜಟಾಪಟಿ ಉಂಟಾಗಿತ್ತು. ಅದಕ್ಕಾಗಿ ಚುನಾವಣಾ ಸಂಸ್ಥೆಯನ್ನು ಸಂಪರ್ಕಿಸಿದ್ದವು.

ಶಿಂಧೆ ಅವರನ್ನು ಬಾಳಾಸಾಹೆಬಂಚಿ ಶಿವಸೇನೆ ಎಂದು ಕರೆಯಲಾಗುವುದು ಎಂದು ಚುನಾವಣಾ ಆಯೋಗ ಮಧ್ಯಂತರ ನಿರ್ಧಾರದಲ್ಲಿ ಹೇಳಿತ್ತು. ಈ ಬಣವು ತನ್ನ ಮಧ್ಯಂತರ ಚಿಹ್ನೆಯಾಗಿ ಎರಡು ಕತ್ತಿಗಳು ಮತ್ತು ಗುರಾಣಿಯನ್ನು ಆರಿಸಿಕೊಂಡಿದೆ.

ಮಧ್ಯಂತರ ಹೆಸರು ಮತ್ತು ಚಿಹ್ನೆಯನ್ನು ಸ್ಥಗಿತದಲ್ಲಿ ಇಡಲಾಗುವುದು ಎಂದು ಚುನಾವಣಾ ಸಂಸ್ಥೆ ತಿಳಿಸಿದೆ. ರಾಜ್ಯದಲ್ಲಿ ವಿಧಾನಸಭಾ ಉಪಚುನಾವಣೆ ಮುಗಿಯುವವರೆಗೆ ಉದ್ಧವ್ ಠಾಕ್ರೆ ಬಣವು ತನ್ನ ಮಧ್ಯಂತರ ಚಿಹ್ನೆ – ಜ್ವಾಲೆಯ ಜ್ಯೋತಿಯನ್ನು ಇಟ್ಟುಕೊಳ್ಳಲು ಚುನಾವಣಾ ಆಯೋಗವು ಅನುಮತಿ ನೀಡಿದೆ.

ಶುಕ್ರವಾರ ಸಂಜೆ, ಶಿಂಧೆ ಸುದ್ದಿಗಾರರೊಂದಿಗೆ ಮಾತನಾಡುತ್ತಾ, “ಚುನಾವಣಾ ಆಯೋಗದ ನಿರ್ಧಾರವು ಸತ್ಯ ಮತ್ತು ಜನರ ವಿಜಯವಾಗಿದೆ. ನಾನು ಚುನಾವಣಾ ಆಯೋಗಕ್ಕೆ ಧನ್ಯವಾದ ಹೇಳುತ್ತೇನೆ. ಪ್ರಜಾಪ್ರಭುತ್ವದಲ್ಲಿ ಬಹುಮತ ಪರಿಗಣನೆಯಾಗುತ್ತದೆ. ಇದು ಬಾಳಾಸಾಹೇಬರ [ಠಾಕ್ರೆ] ಪರಂಪರೆಯ ವಿಜಯವಾಗಿದೆ” ಎಂದು ತಿಳಿಸಿದ್ದಾರೆ.

ಇದನ್ನೂ ಓದಿರಿ: ಅದಾನಿ ಹಗರಣ| ಸುಪ್ರೀಂ ಕೋರ್ಟ್ ಮುಂದಿವೆ ನಾಲ್ಕು ಅರ್ಜಿ

ಚುನಾವಣಾ ಆಯೋಗವು ಅರ್ಹತೆಯ ಆಧಾರದಲ್ಲಿ ನಿರ್ಧಾರ ಕೈಗೊಂಡಿದೆ ಎಂದು ಉಪಮುಖ್ಯಮಂತ್ರಿ ಹಾಗೂ ಬಿಜೆಪಿ ನಾಯಕ ದೇವೇಂದ್ರ ಫಡ್ನವೀಸ್ ಹೇಳಿದ್ದಾರೆ.

ಇದರ ನಡುವೆ ಠಾಕ್ರೆ ಬಣದ ಸಂಸದ ಸಂಜಯ್ ರಾವುತ್ ಪ್ರತಿಕ್ರಿಯಿಸಿ, “ಚುನಾವಣಾ ಆಯೋಗದ ನಿರ್ಧಾರವು ಪ್ರಜಾಪ್ರಭುತ್ವದ ಕೊಲೆಯಾಗಿದೆ” ಎಂದು ಬಣ್ಣಿಸಿದ್ದಾರೆ.

“ನಾವು ಈ ನಿರ್ಧಾರವನ್ನು ಪ್ರಶ್ನಿಸುತ್ತೇವೆ. ಇಂತಹ ನಿರ್ಧಾರವನ್ನು ನಿರೀಕ್ಷಿಸಲಾಗಿತ್ತು. ಇದೆಲ್ಲವೂ ಒತ್ತಡದಲ್ಲಿ ನಡೆದಿದೆ. ನನಗೆ ಚುನಾವಣಾ ಆಯೋಗದ ಮೇಲೆ ನಂಬಿಕೆ ಇಲ್ಲ” ಎಂದು ಟೀಕಿಸಿದ್ದಾರೆ.

‘ಶಿವಸೇನೆಯ ಸಂವಿಧಾನ ಪ್ರಜಾಸತ್ತಾತ್ಮಕವಲ್ಲ’

ಚುನಾವಣಾ ಆಯೋಗವು ತನ್ನ ಆದೇಶದಲ್ಲಿ, ಶಿವಸೇನೆ ಪಕ್ಷದ ಸಂವಿಧಾನವು ಪ್ರಜಾಸತ್ತಾತ್ಮಕವಲ್ಲ ಎಂದು ಗುರುತಿಸಿದೆ.

2018ರಲ್ಲಿ ಪಕ್ಷದ ಸಂವಿಧಾನದಲ್ಲಿ ಮಾಡಲಾದ ತಿದ್ದುಪಡಿಗಳ ಬಗ್ಗೆ ಚುನಾವಣಾ ಆಯೋಗಕ್ಕೆ ತಿಳಿಸಲಾಗಿಲ್ಲ ಎಂದು ಅದು ಗಮನಿಸಿದೆ. ಶಿವಸೇನಾ ಸಂಸ್ಥಾಪಕ ಬಾಳಾಸಾಹೇಬ್ ಠಾಕ್ರೆ ತಂದ ಪ್ರಜಾಸತ್ತಾತ್ಮಕ ಮಾನದಂಡಗಳನ್ನು ತೆಗೆದುಹಾಕಲಾಗಿದೆ ಎಂದು ಆಯೋಗ ಉಲ್ಲೇಖಿಸಿದೆ.

ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿಗಳು

ಠಾಕ್ರೆ ನೇತೃತ್ವದ ಸರ್ಕಾರದ ಪತನ ಮತ್ತು ಶಿಂಧೆ ಪ್ರಮಾಣ ವಚನಕ್ಕೆ ಕಾರಣವಾದ ರಾಜಕೀಯ ಬೆಳವಣಿಗೆಗಳಿಗೆ ಸಂಬಂಧಿಸಿದಂತೆ ಎರಡು ಬಣಗಳು ಸಲ್ಲಿಸಿರುವ ಅರ್ಜಿಯನ್ನು ಸುಪ್ರೀಂ ಕೋರ್ಟ್‌ ವಿಚಾರಣೆ ನಡೆಸುತ್ತಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಾಗಲಕೋಟೆ: ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲು ತೂರಾಟ, ಉದ್ವಿಗ್ನ ಪರಿಸ್ಥಿತಿ: ಫೆ.24ರವರೆಗೆ ನಿಷೇಧಾಜ್ಞೆ ಜಾರಿ

ಬಾಗಲಕೋಟೆಯಲ್ಲಿ ಗುರುವಾರ ಛತ್ರಪತಿ ಶಿವಾಜಿ ಮಹಾರಾಜರ ಜಯಂತಿಯಂದು ನಡೆದ ಪ್ರತಿಮೆ ಮೆರವಣಿಗೆಯ ಸಂದರ್ಭದಲ್ಲಿ ಕಲ್ಲು ತೂರಾಟ ನಡೆದ ಘಟನೆ ವರದಿಯಾಗಿದೆ. ಹಳೆಯ ನಗರ ಪ್ರದೇಶದ ಪಂಕ ಮಸೀದಿ ಬಳಿ ಮೆರವಣಿಗೆ ಸಾಗುತ್ತಿದ್ದಾಗ ಈ...

ನಿಯಮಿತವಾಗಿ ಎಸ್‌ಸಿ/ಎಸ್‌ಟಿ ಕಾಯ್ದೆ ಕೋಶದ ಸಭೆ ನಡೆಸುತ್ತಿಲ್ಲ ಎಂದು ಆರೋಪಿಸಿದ ಮೇವಾನಿ; ಗುಜರಾತ್ ವಿಧಾನಸಭೆಯಲ್ಲಿ ಕಾಂಗ್ರೆಸ್- ಬಿಜೆಪಿ ನಡುವೆ ವಾಗ್ವಾದ

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆಯಡಿಯಲ್ಲಿ ರಚಿಸಲಾದ ರಾಜ್ಯ ಮೇಲ್ವಿಚಾರಣಾ ಕೋಶದ (ಎಸ್‌ಎಂಸಿ) ನಿಯಮಿತ ಸಭೆಗಳನ್ನು ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಕರೆಯುತ್ತಿಲ್ಲ ಎಂದು ವಡ್ಗಾಮ್‌ನ ಕಾಂಗ್ರೆಸ್ ಶಾಸಕ ಜಿಗ್ನೇಶ್...

ನೆಲಮಂಗಲದಲ್ಲಿ ಹಾಸಿಗೆ ಹಿಡಿದ ಪತಿಯ ಎದುರೇ 60ವರ್ಷದ ಮಹಿಳೆಯ ಕೊಲೆ; ಐದು ಗಂಟೆಗಳಲ್ಲಿ ಆರೋಪಿ ಬಂಧನ

ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲದ ಪೇಟೆ ಬೀದಿಯಲ್ಲಿ ವೀಲ್‌ಚೇರ್‌ನಲ್ಲಿ ಕುಳಿತಿದ್ದ ಗಂಡನ ಮುಂದೆಯೇ ಮಹಿಳೆಯೊಬ್ಬಳ ಕೊಲೆಯಾದ ಐದು ಗಂಟೆಗಳಲ್ಲಿ ನೆಲಮಂಗಲ ಪಟ್ಟಣ ಪೊಲೀಸರು 45 ವರ್ಷದ ದಿನಸಿ ಅಂಗಡಿ ಮಾಲೀಕನನ್ನು ಬಂಧಿಸಿದ್ದಾರೆ. ಫೆಬ್ರವರಿ...

‘ದಿ ಕೇರಳ ಸ್ಟೋರಿ 2’ ಚಿತ್ರ ನಿರ್ಮಾಪಕರು, ಸಿಬಿಎಫ್‌ಸಿ ಮಂಡಳಿಗೆ ನೋಟಿಸ್ ಜಾರಿ ಮಾಡಿದ ಕೇರಳ ಹೈಕೋರ್ಟ್

ಕೊಚ್ಚಿ: 'ದಿ ಕೇರಳ ಸ್ಟೋರಿ 2 - ಗೋಸ್ ಬಿಯಾಂಡ್' ಚಿತ್ರದ ಪ್ರಮಾಣೀಕರಣವನ್ನು ರದ್ದುಗೊಳಿಸುವಂತೆ ಮತ್ತು ಅದರ ಶೀರ್ಷಿಕೆಯ ಮರುಪರಿಶೀಲನೆ ಸೇರಿದಂತೆ ಮಾರ್ಪಾಡುಗಳಿಗೆ ನಿರ್ದೇಶನ ನೀಡಬೇಕೆಂದು ಕೋರಿ ಕಣ್ಣೂರು ಮೂಲದವರು ಸಲ್ಲಿಸಿದ ಅರ್ಜಿಯ...

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...