Homeಮುಖಪುಟಏಕನಾಥ್ ಶಿಂಧೆ ಬಣವೇ ನಿಜವಾದ ಶಿವಸೇನೆ: ಚುನಾವಣಾ ಆಯೋಗ ಆದೇಶ

ಏಕನಾಥ್ ಶಿಂಧೆ ಬಣವೇ ನಿಜವಾದ ಶಿವಸೇನೆ: ಚುನಾವಣಾ ಆಯೋಗ ಆದೇಶ

- Advertisement -
- Advertisement -

ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ ನೇತೃತ್ವದ ಬಣವೇ ನಿಜವಾದ ಶಿವಸೇನೆ ಎಂದು ಗುರುತಿಸಿ ಬಿಲ್ಲು ಮತ್ತು ಬಾಣದ ಚಿಹ್ನೆಯನ್ನು ಚುನಾವಣಾ ಆಯೋಗವು ನಿಗದಿಪಡಿಸಿದೆ.

ಶುಕ್ರವಾರ ಪ್ರಕಟಿಸಲಾದ 78 ಪುಟಗಳ ಆದೇಶದಲ್ಲಿ ಚುನಾವಣಾ ಆಯೋಗವು, “2019ರ ಮಹಾರಾಷ್ಟ್ರ ವಿಧಾನಸಭಾ ಚುನಾವಣೆಯಲ್ಲಿ ಶಿವಸೇನೆ ಗೆದ್ದ 55 ಅಭ್ಯರ್ಥಿಗಳ ಪೈಕಿ  ಶಿಂಧೆ ಅವರನ್ನು ಬೆಂಬಲಿಸುವ 40 ಶಾಸಕರು ಇದ್ದಾರೆ. ಅವರ ಪರವಾಗಿ ಸುಮಾರು 76% ಮತಗಳು ಬಿದ್ದಿವೆ. ಮತ್ತೊಂದೆಡೆ, ಉದ್ಧವ್ ಠಾಕ್ರೆ ಬಣದ 15 ಶಾಸಕರಿದ್ದು, ಅವರಿಗೆ 23.5% ಮತಗಳು ಬಂದಿವೆ” ಎಂದು ತಿಳಿಸಿದೆ.

“2019ರ ಲೋಕಸಭೆ ಚುನಾವಣೆಯಲ್ಲಿ ಶಿವಸೇನೆಯ ಪರವಾಗಿ ಚಲಾವಣೆಯಾದ ಒಟ್ಟು ಮತಗಳಲ್ಲಿ 73% ಶಿಂಧೆ ಬಣದ 13 ಸಂಸದರು ಪಡೆದರೆ, ಕೇವಲ 27% ಮತಗಳು ಠಾಕ್ರೆ ಪಾಳಯದ ಸಂಸದರಿಗೆ ಬಂದಿವೆ” ಎಂದಿದೆ.

ಶಿವಸೇನೆ, ನ್ಯಾಶನಲಿಸ್ಟ್ ಕಾಂಗ್ರೆಸ್ ಪಕ್ಷ ಮತ್ತು ಕಾಂಗ್ರೆಸ್‌ನ ಒಗ್ಗೂಡಿ ರಚಿಸಿದ ಮಹಾರಾಷ್ಟ್ರದ ಹಿಂದಿನ ಸರ್ಕಾರದ ವಿರುದ್ಧ ಶಿಂಧೆ ಮತ್ತು ಇತರ ಶಾಸಕರ ಗುಂಪು ಬಂಡಾಯವೆದ್ದ ನಂತರ ಮಹಾ ಅಘಾಡಿ ಸರ್ಕಾರವು ಜೂನ್‌ನಲ್ಲಿ ವಿಭಜನೆಯಾಯಿತು.

ಒಂದು ವಾರಕ್ಕೂ ಹೆಚ್ಚು ಕಾಲ ನಡೆದ ರಾಜಕೀಯ ನಾಟಕದ ನಂತರ, ಸಮ್ಮಿಶ್ರ ಸರ್ಕಾರ ಪತನವಾಯಿತು. ಜೂನ್ 30ರಂದು ಶಿಂಧೆಯವರು ಮಹಾರಾಷ್ಟ್ರದ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದರೆ, ಭಾರತೀಯ ಜನತಾ ಪಕ್ಷದ ದೇವೇಂದ್ರ ಫಡ್ನವಿಸ್ ಅವರು ಉಪಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದರು.

ಠಾಕ್ರೆ ಮತ್ತು ಶಿಂಧೆ ನೇತೃತ್ವದ ಎರಡು ಬಣಗಳ ನಡುವೆ ನಿಜವಾದ ಶಿವಸೇನೆ ಯಾವುದೆಂಬ ಜಟಾಪಟಿ ಉಂಟಾಗಿತ್ತು. ಅದಕ್ಕಾಗಿ ಚುನಾವಣಾ ಸಂಸ್ಥೆಯನ್ನು ಸಂಪರ್ಕಿಸಿದ್ದವು.

ಶಿಂಧೆ ಅವರನ್ನು ಬಾಳಾಸಾಹೆಬಂಚಿ ಶಿವಸೇನೆ ಎಂದು ಕರೆಯಲಾಗುವುದು ಎಂದು ಚುನಾವಣಾ ಆಯೋಗ ಮಧ್ಯಂತರ ನಿರ್ಧಾರದಲ್ಲಿ ಹೇಳಿತ್ತು. ಈ ಬಣವು ತನ್ನ ಮಧ್ಯಂತರ ಚಿಹ್ನೆಯಾಗಿ ಎರಡು ಕತ್ತಿಗಳು ಮತ್ತು ಗುರಾಣಿಯನ್ನು ಆರಿಸಿಕೊಂಡಿದೆ.

ಮಧ್ಯಂತರ ಹೆಸರು ಮತ್ತು ಚಿಹ್ನೆಯನ್ನು ಸ್ಥಗಿತದಲ್ಲಿ ಇಡಲಾಗುವುದು ಎಂದು ಚುನಾವಣಾ ಸಂಸ್ಥೆ ತಿಳಿಸಿದೆ. ರಾಜ್ಯದಲ್ಲಿ ವಿಧಾನಸಭಾ ಉಪಚುನಾವಣೆ ಮುಗಿಯುವವರೆಗೆ ಉದ್ಧವ್ ಠಾಕ್ರೆ ಬಣವು ತನ್ನ ಮಧ್ಯಂತರ ಚಿಹ್ನೆ – ಜ್ವಾಲೆಯ ಜ್ಯೋತಿಯನ್ನು ಇಟ್ಟುಕೊಳ್ಳಲು ಚುನಾವಣಾ ಆಯೋಗವು ಅನುಮತಿ ನೀಡಿದೆ.

ಶುಕ್ರವಾರ ಸಂಜೆ, ಶಿಂಧೆ ಸುದ್ದಿಗಾರರೊಂದಿಗೆ ಮಾತನಾಡುತ್ತಾ, “ಚುನಾವಣಾ ಆಯೋಗದ ನಿರ್ಧಾರವು ಸತ್ಯ ಮತ್ತು ಜನರ ವಿಜಯವಾಗಿದೆ. ನಾನು ಚುನಾವಣಾ ಆಯೋಗಕ್ಕೆ ಧನ್ಯವಾದ ಹೇಳುತ್ತೇನೆ. ಪ್ರಜಾಪ್ರಭುತ್ವದಲ್ಲಿ ಬಹುಮತ ಪರಿಗಣನೆಯಾಗುತ್ತದೆ. ಇದು ಬಾಳಾಸಾಹೇಬರ [ಠಾಕ್ರೆ] ಪರಂಪರೆಯ ವಿಜಯವಾಗಿದೆ” ಎಂದು ತಿಳಿಸಿದ್ದಾರೆ.

ಇದನ್ನೂ ಓದಿರಿ: ಅದಾನಿ ಹಗರಣ| ಸುಪ್ರೀಂ ಕೋರ್ಟ್ ಮುಂದಿವೆ ನಾಲ್ಕು ಅರ್ಜಿ

ಚುನಾವಣಾ ಆಯೋಗವು ಅರ್ಹತೆಯ ಆಧಾರದಲ್ಲಿ ನಿರ್ಧಾರ ಕೈಗೊಂಡಿದೆ ಎಂದು ಉಪಮುಖ್ಯಮಂತ್ರಿ ಹಾಗೂ ಬಿಜೆಪಿ ನಾಯಕ ದೇವೇಂದ್ರ ಫಡ್ನವೀಸ್ ಹೇಳಿದ್ದಾರೆ.

ಇದರ ನಡುವೆ ಠಾಕ್ರೆ ಬಣದ ಸಂಸದ ಸಂಜಯ್ ರಾವುತ್ ಪ್ರತಿಕ್ರಿಯಿಸಿ, “ಚುನಾವಣಾ ಆಯೋಗದ ನಿರ್ಧಾರವು ಪ್ರಜಾಪ್ರಭುತ್ವದ ಕೊಲೆಯಾಗಿದೆ” ಎಂದು ಬಣ್ಣಿಸಿದ್ದಾರೆ.

“ನಾವು ಈ ನಿರ್ಧಾರವನ್ನು ಪ್ರಶ್ನಿಸುತ್ತೇವೆ. ಇಂತಹ ನಿರ್ಧಾರವನ್ನು ನಿರೀಕ್ಷಿಸಲಾಗಿತ್ತು. ಇದೆಲ್ಲವೂ ಒತ್ತಡದಲ್ಲಿ ನಡೆದಿದೆ. ನನಗೆ ಚುನಾವಣಾ ಆಯೋಗದ ಮೇಲೆ ನಂಬಿಕೆ ಇಲ್ಲ” ಎಂದು ಟೀಕಿಸಿದ್ದಾರೆ.

‘ಶಿವಸೇನೆಯ ಸಂವಿಧಾನ ಪ್ರಜಾಸತ್ತಾತ್ಮಕವಲ್ಲ’

ಚುನಾವಣಾ ಆಯೋಗವು ತನ್ನ ಆದೇಶದಲ್ಲಿ, ಶಿವಸೇನೆ ಪಕ್ಷದ ಸಂವಿಧಾನವು ಪ್ರಜಾಸತ್ತಾತ್ಮಕವಲ್ಲ ಎಂದು ಗುರುತಿಸಿದೆ.

2018ರಲ್ಲಿ ಪಕ್ಷದ ಸಂವಿಧಾನದಲ್ಲಿ ಮಾಡಲಾದ ತಿದ್ದುಪಡಿಗಳ ಬಗ್ಗೆ ಚುನಾವಣಾ ಆಯೋಗಕ್ಕೆ ತಿಳಿಸಲಾಗಿಲ್ಲ ಎಂದು ಅದು ಗಮನಿಸಿದೆ. ಶಿವಸೇನಾ ಸಂಸ್ಥಾಪಕ ಬಾಳಾಸಾಹೇಬ್ ಠಾಕ್ರೆ ತಂದ ಪ್ರಜಾಸತ್ತಾತ್ಮಕ ಮಾನದಂಡಗಳನ್ನು ತೆಗೆದುಹಾಕಲಾಗಿದೆ ಎಂದು ಆಯೋಗ ಉಲ್ಲೇಖಿಸಿದೆ.

ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿಗಳು

ಠಾಕ್ರೆ ನೇತೃತ್ವದ ಸರ್ಕಾರದ ಪತನ ಮತ್ತು ಶಿಂಧೆ ಪ್ರಮಾಣ ವಚನಕ್ಕೆ ಕಾರಣವಾದ ರಾಜಕೀಯ ಬೆಳವಣಿಗೆಗಳಿಗೆ ಸಂಬಂಧಿಸಿದಂತೆ ಎರಡು ಬಣಗಳು ಸಲ್ಲಿಸಿರುವ ಅರ್ಜಿಯನ್ನು ಸುಪ್ರೀಂ ಕೋರ್ಟ್‌ ವಿಚಾರಣೆ ನಡೆಸುತ್ತಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...