Homeಮುಖಪುಟಏಕನಾಥ್ ಶಿಂಧೆ ಬಣವೇ ನಿಜವಾದ ಶಿವಸೇನೆ: ಚುನಾವಣಾ ಆಯೋಗ ಆದೇಶ

ಏಕನಾಥ್ ಶಿಂಧೆ ಬಣವೇ ನಿಜವಾದ ಶಿವಸೇನೆ: ಚುನಾವಣಾ ಆಯೋಗ ಆದೇಶ

- Advertisement -
- Advertisement -

ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ ನೇತೃತ್ವದ ಬಣವೇ ನಿಜವಾದ ಶಿವಸೇನೆ ಎಂದು ಗುರುತಿಸಿ ಬಿಲ್ಲು ಮತ್ತು ಬಾಣದ ಚಿಹ್ನೆಯನ್ನು ಚುನಾವಣಾ ಆಯೋಗವು ನಿಗದಿಪಡಿಸಿದೆ.

ಶುಕ್ರವಾರ ಪ್ರಕಟಿಸಲಾದ 78 ಪುಟಗಳ ಆದೇಶದಲ್ಲಿ ಚುನಾವಣಾ ಆಯೋಗವು, “2019ರ ಮಹಾರಾಷ್ಟ್ರ ವಿಧಾನಸಭಾ ಚುನಾವಣೆಯಲ್ಲಿ ಶಿವಸೇನೆ ಗೆದ್ದ 55 ಅಭ್ಯರ್ಥಿಗಳ ಪೈಕಿ  ಶಿಂಧೆ ಅವರನ್ನು ಬೆಂಬಲಿಸುವ 40 ಶಾಸಕರು ಇದ್ದಾರೆ. ಅವರ ಪರವಾಗಿ ಸುಮಾರು 76% ಮತಗಳು ಬಿದ್ದಿವೆ. ಮತ್ತೊಂದೆಡೆ, ಉದ್ಧವ್ ಠಾಕ್ರೆ ಬಣದ 15 ಶಾಸಕರಿದ್ದು, ಅವರಿಗೆ 23.5% ಮತಗಳು ಬಂದಿವೆ” ಎಂದು ತಿಳಿಸಿದೆ.

“2019ರ ಲೋಕಸಭೆ ಚುನಾವಣೆಯಲ್ಲಿ ಶಿವಸೇನೆಯ ಪರವಾಗಿ ಚಲಾವಣೆಯಾದ ಒಟ್ಟು ಮತಗಳಲ್ಲಿ 73% ಶಿಂಧೆ ಬಣದ 13 ಸಂಸದರು ಪಡೆದರೆ, ಕೇವಲ 27% ಮತಗಳು ಠಾಕ್ರೆ ಪಾಳಯದ ಸಂಸದರಿಗೆ ಬಂದಿವೆ” ಎಂದಿದೆ.

ಶಿವಸೇನೆ, ನ್ಯಾಶನಲಿಸ್ಟ್ ಕಾಂಗ್ರೆಸ್ ಪಕ್ಷ ಮತ್ತು ಕಾಂಗ್ರೆಸ್‌ನ ಒಗ್ಗೂಡಿ ರಚಿಸಿದ ಮಹಾರಾಷ್ಟ್ರದ ಹಿಂದಿನ ಸರ್ಕಾರದ ವಿರುದ್ಧ ಶಿಂಧೆ ಮತ್ತು ಇತರ ಶಾಸಕರ ಗುಂಪು ಬಂಡಾಯವೆದ್ದ ನಂತರ ಮಹಾ ಅಘಾಡಿ ಸರ್ಕಾರವು ಜೂನ್‌ನಲ್ಲಿ ವಿಭಜನೆಯಾಯಿತು.

ಒಂದು ವಾರಕ್ಕೂ ಹೆಚ್ಚು ಕಾಲ ನಡೆದ ರಾಜಕೀಯ ನಾಟಕದ ನಂತರ, ಸಮ್ಮಿಶ್ರ ಸರ್ಕಾರ ಪತನವಾಯಿತು. ಜೂನ್ 30ರಂದು ಶಿಂಧೆಯವರು ಮಹಾರಾಷ್ಟ್ರದ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದರೆ, ಭಾರತೀಯ ಜನತಾ ಪಕ್ಷದ ದೇವೇಂದ್ರ ಫಡ್ನವಿಸ್ ಅವರು ಉಪಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದರು.

ಠಾಕ್ರೆ ಮತ್ತು ಶಿಂಧೆ ನೇತೃತ್ವದ ಎರಡು ಬಣಗಳ ನಡುವೆ ನಿಜವಾದ ಶಿವಸೇನೆ ಯಾವುದೆಂಬ ಜಟಾಪಟಿ ಉಂಟಾಗಿತ್ತು. ಅದಕ್ಕಾಗಿ ಚುನಾವಣಾ ಸಂಸ್ಥೆಯನ್ನು ಸಂಪರ್ಕಿಸಿದ್ದವು.

ಶಿಂಧೆ ಅವರನ್ನು ಬಾಳಾಸಾಹೆಬಂಚಿ ಶಿವಸೇನೆ ಎಂದು ಕರೆಯಲಾಗುವುದು ಎಂದು ಚುನಾವಣಾ ಆಯೋಗ ಮಧ್ಯಂತರ ನಿರ್ಧಾರದಲ್ಲಿ ಹೇಳಿತ್ತು. ಈ ಬಣವು ತನ್ನ ಮಧ್ಯಂತರ ಚಿಹ್ನೆಯಾಗಿ ಎರಡು ಕತ್ತಿಗಳು ಮತ್ತು ಗುರಾಣಿಯನ್ನು ಆರಿಸಿಕೊಂಡಿದೆ.

ಮಧ್ಯಂತರ ಹೆಸರು ಮತ್ತು ಚಿಹ್ನೆಯನ್ನು ಸ್ಥಗಿತದಲ್ಲಿ ಇಡಲಾಗುವುದು ಎಂದು ಚುನಾವಣಾ ಸಂಸ್ಥೆ ತಿಳಿಸಿದೆ. ರಾಜ್ಯದಲ್ಲಿ ವಿಧಾನಸಭಾ ಉಪಚುನಾವಣೆ ಮುಗಿಯುವವರೆಗೆ ಉದ್ಧವ್ ಠಾಕ್ರೆ ಬಣವು ತನ್ನ ಮಧ್ಯಂತರ ಚಿಹ್ನೆ – ಜ್ವಾಲೆಯ ಜ್ಯೋತಿಯನ್ನು ಇಟ್ಟುಕೊಳ್ಳಲು ಚುನಾವಣಾ ಆಯೋಗವು ಅನುಮತಿ ನೀಡಿದೆ.

ಶುಕ್ರವಾರ ಸಂಜೆ, ಶಿಂಧೆ ಸುದ್ದಿಗಾರರೊಂದಿಗೆ ಮಾತನಾಡುತ್ತಾ, “ಚುನಾವಣಾ ಆಯೋಗದ ನಿರ್ಧಾರವು ಸತ್ಯ ಮತ್ತು ಜನರ ವಿಜಯವಾಗಿದೆ. ನಾನು ಚುನಾವಣಾ ಆಯೋಗಕ್ಕೆ ಧನ್ಯವಾದ ಹೇಳುತ್ತೇನೆ. ಪ್ರಜಾಪ್ರಭುತ್ವದಲ್ಲಿ ಬಹುಮತ ಪರಿಗಣನೆಯಾಗುತ್ತದೆ. ಇದು ಬಾಳಾಸಾಹೇಬರ [ಠಾಕ್ರೆ] ಪರಂಪರೆಯ ವಿಜಯವಾಗಿದೆ” ಎಂದು ತಿಳಿಸಿದ್ದಾರೆ.

ಇದನ್ನೂ ಓದಿರಿ: ಅದಾನಿ ಹಗರಣ| ಸುಪ್ರೀಂ ಕೋರ್ಟ್ ಮುಂದಿವೆ ನಾಲ್ಕು ಅರ್ಜಿ

ಚುನಾವಣಾ ಆಯೋಗವು ಅರ್ಹತೆಯ ಆಧಾರದಲ್ಲಿ ನಿರ್ಧಾರ ಕೈಗೊಂಡಿದೆ ಎಂದು ಉಪಮುಖ್ಯಮಂತ್ರಿ ಹಾಗೂ ಬಿಜೆಪಿ ನಾಯಕ ದೇವೇಂದ್ರ ಫಡ್ನವೀಸ್ ಹೇಳಿದ್ದಾರೆ.

ಇದರ ನಡುವೆ ಠಾಕ್ರೆ ಬಣದ ಸಂಸದ ಸಂಜಯ್ ರಾವುತ್ ಪ್ರತಿಕ್ರಿಯಿಸಿ, “ಚುನಾವಣಾ ಆಯೋಗದ ನಿರ್ಧಾರವು ಪ್ರಜಾಪ್ರಭುತ್ವದ ಕೊಲೆಯಾಗಿದೆ” ಎಂದು ಬಣ್ಣಿಸಿದ್ದಾರೆ.

“ನಾವು ಈ ನಿರ್ಧಾರವನ್ನು ಪ್ರಶ್ನಿಸುತ್ತೇವೆ. ಇಂತಹ ನಿರ್ಧಾರವನ್ನು ನಿರೀಕ್ಷಿಸಲಾಗಿತ್ತು. ಇದೆಲ್ಲವೂ ಒತ್ತಡದಲ್ಲಿ ನಡೆದಿದೆ. ನನಗೆ ಚುನಾವಣಾ ಆಯೋಗದ ಮೇಲೆ ನಂಬಿಕೆ ಇಲ್ಲ” ಎಂದು ಟೀಕಿಸಿದ್ದಾರೆ.

‘ಶಿವಸೇನೆಯ ಸಂವಿಧಾನ ಪ್ರಜಾಸತ್ತಾತ್ಮಕವಲ್ಲ’

ಚುನಾವಣಾ ಆಯೋಗವು ತನ್ನ ಆದೇಶದಲ್ಲಿ, ಶಿವಸೇನೆ ಪಕ್ಷದ ಸಂವಿಧಾನವು ಪ್ರಜಾಸತ್ತಾತ್ಮಕವಲ್ಲ ಎಂದು ಗುರುತಿಸಿದೆ.

2018ರಲ್ಲಿ ಪಕ್ಷದ ಸಂವಿಧಾನದಲ್ಲಿ ಮಾಡಲಾದ ತಿದ್ದುಪಡಿಗಳ ಬಗ್ಗೆ ಚುನಾವಣಾ ಆಯೋಗಕ್ಕೆ ತಿಳಿಸಲಾಗಿಲ್ಲ ಎಂದು ಅದು ಗಮನಿಸಿದೆ. ಶಿವಸೇನಾ ಸಂಸ್ಥಾಪಕ ಬಾಳಾಸಾಹೇಬ್ ಠಾಕ್ರೆ ತಂದ ಪ್ರಜಾಸತ್ತಾತ್ಮಕ ಮಾನದಂಡಗಳನ್ನು ತೆಗೆದುಹಾಕಲಾಗಿದೆ ಎಂದು ಆಯೋಗ ಉಲ್ಲೇಖಿಸಿದೆ.

ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿಗಳು

ಠಾಕ್ರೆ ನೇತೃತ್ವದ ಸರ್ಕಾರದ ಪತನ ಮತ್ತು ಶಿಂಧೆ ಪ್ರಮಾಣ ವಚನಕ್ಕೆ ಕಾರಣವಾದ ರಾಜಕೀಯ ಬೆಳವಣಿಗೆಗಳಿಗೆ ಸಂಬಂಧಿಸಿದಂತೆ ಎರಡು ಬಣಗಳು ಸಲ್ಲಿಸಿರುವ ಅರ್ಜಿಯನ್ನು ಸುಪ್ರೀಂ ಕೋರ್ಟ್‌ ವಿಚಾರಣೆ ನಡೆಸುತ್ತಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...