Homeಮುಖಪುಟಏಕನಾಥ್ ಶಿಂಧೆ ಬಣವೇ ನಿಜವಾದ ಶಿವಸೇನೆ: ಚುನಾವಣಾ ಆಯೋಗ ಆದೇಶ

ಏಕನಾಥ್ ಶಿಂಧೆ ಬಣವೇ ನಿಜವಾದ ಶಿವಸೇನೆ: ಚುನಾವಣಾ ಆಯೋಗ ಆದೇಶ

- Advertisement -
- Advertisement -

ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ ನೇತೃತ್ವದ ಬಣವೇ ನಿಜವಾದ ಶಿವಸೇನೆ ಎಂದು ಗುರುತಿಸಿ ಬಿಲ್ಲು ಮತ್ತು ಬಾಣದ ಚಿಹ್ನೆಯನ್ನು ಚುನಾವಣಾ ಆಯೋಗವು ನಿಗದಿಪಡಿಸಿದೆ.

ಶುಕ್ರವಾರ ಪ್ರಕಟಿಸಲಾದ 78 ಪುಟಗಳ ಆದೇಶದಲ್ಲಿ ಚುನಾವಣಾ ಆಯೋಗವು, “2019ರ ಮಹಾರಾಷ್ಟ್ರ ವಿಧಾನಸಭಾ ಚುನಾವಣೆಯಲ್ಲಿ ಶಿವಸೇನೆ ಗೆದ್ದ 55 ಅಭ್ಯರ್ಥಿಗಳ ಪೈಕಿ  ಶಿಂಧೆ ಅವರನ್ನು ಬೆಂಬಲಿಸುವ 40 ಶಾಸಕರು ಇದ್ದಾರೆ. ಅವರ ಪರವಾಗಿ ಸುಮಾರು 76% ಮತಗಳು ಬಿದ್ದಿವೆ. ಮತ್ತೊಂದೆಡೆ, ಉದ್ಧವ್ ಠಾಕ್ರೆ ಬಣದ 15 ಶಾಸಕರಿದ್ದು, ಅವರಿಗೆ 23.5% ಮತಗಳು ಬಂದಿವೆ” ಎಂದು ತಿಳಿಸಿದೆ.

“2019ರ ಲೋಕಸಭೆ ಚುನಾವಣೆಯಲ್ಲಿ ಶಿವಸೇನೆಯ ಪರವಾಗಿ ಚಲಾವಣೆಯಾದ ಒಟ್ಟು ಮತಗಳಲ್ಲಿ 73% ಶಿಂಧೆ ಬಣದ 13 ಸಂಸದರು ಪಡೆದರೆ, ಕೇವಲ 27% ಮತಗಳು ಠಾಕ್ರೆ ಪಾಳಯದ ಸಂಸದರಿಗೆ ಬಂದಿವೆ” ಎಂದಿದೆ.

ಶಿವಸೇನೆ, ನ್ಯಾಶನಲಿಸ್ಟ್ ಕಾಂಗ್ರೆಸ್ ಪಕ್ಷ ಮತ್ತು ಕಾಂಗ್ರೆಸ್‌ನ ಒಗ್ಗೂಡಿ ರಚಿಸಿದ ಮಹಾರಾಷ್ಟ್ರದ ಹಿಂದಿನ ಸರ್ಕಾರದ ವಿರುದ್ಧ ಶಿಂಧೆ ಮತ್ತು ಇತರ ಶಾಸಕರ ಗುಂಪು ಬಂಡಾಯವೆದ್ದ ನಂತರ ಮಹಾ ಅಘಾಡಿ ಸರ್ಕಾರವು ಜೂನ್‌ನಲ್ಲಿ ವಿಭಜನೆಯಾಯಿತು.

ಒಂದು ವಾರಕ್ಕೂ ಹೆಚ್ಚು ಕಾಲ ನಡೆದ ರಾಜಕೀಯ ನಾಟಕದ ನಂತರ, ಸಮ್ಮಿಶ್ರ ಸರ್ಕಾರ ಪತನವಾಯಿತು. ಜೂನ್ 30ರಂದು ಶಿಂಧೆಯವರು ಮಹಾರಾಷ್ಟ್ರದ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದರೆ, ಭಾರತೀಯ ಜನತಾ ಪಕ್ಷದ ದೇವೇಂದ್ರ ಫಡ್ನವಿಸ್ ಅವರು ಉಪಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದರು.

ಠಾಕ್ರೆ ಮತ್ತು ಶಿಂಧೆ ನೇತೃತ್ವದ ಎರಡು ಬಣಗಳ ನಡುವೆ ನಿಜವಾದ ಶಿವಸೇನೆ ಯಾವುದೆಂಬ ಜಟಾಪಟಿ ಉಂಟಾಗಿತ್ತು. ಅದಕ್ಕಾಗಿ ಚುನಾವಣಾ ಸಂಸ್ಥೆಯನ್ನು ಸಂಪರ್ಕಿಸಿದ್ದವು.

ಶಿಂಧೆ ಅವರನ್ನು ಬಾಳಾಸಾಹೆಬಂಚಿ ಶಿವಸೇನೆ ಎಂದು ಕರೆಯಲಾಗುವುದು ಎಂದು ಚುನಾವಣಾ ಆಯೋಗ ಮಧ್ಯಂತರ ನಿರ್ಧಾರದಲ್ಲಿ ಹೇಳಿತ್ತು. ಈ ಬಣವು ತನ್ನ ಮಧ್ಯಂತರ ಚಿಹ್ನೆಯಾಗಿ ಎರಡು ಕತ್ತಿಗಳು ಮತ್ತು ಗುರಾಣಿಯನ್ನು ಆರಿಸಿಕೊಂಡಿದೆ.

ಮಧ್ಯಂತರ ಹೆಸರು ಮತ್ತು ಚಿಹ್ನೆಯನ್ನು ಸ್ಥಗಿತದಲ್ಲಿ ಇಡಲಾಗುವುದು ಎಂದು ಚುನಾವಣಾ ಸಂಸ್ಥೆ ತಿಳಿಸಿದೆ. ರಾಜ್ಯದಲ್ಲಿ ವಿಧಾನಸಭಾ ಉಪಚುನಾವಣೆ ಮುಗಿಯುವವರೆಗೆ ಉದ್ಧವ್ ಠಾಕ್ರೆ ಬಣವು ತನ್ನ ಮಧ್ಯಂತರ ಚಿಹ್ನೆ – ಜ್ವಾಲೆಯ ಜ್ಯೋತಿಯನ್ನು ಇಟ್ಟುಕೊಳ್ಳಲು ಚುನಾವಣಾ ಆಯೋಗವು ಅನುಮತಿ ನೀಡಿದೆ.

ಶುಕ್ರವಾರ ಸಂಜೆ, ಶಿಂಧೆ ಸುದ್ದಿಗಾರರೊಂದಿಗೆ ಮಾತನಾಡುತ್ತಾ, “ಚುನಾವಣಾ ಆಯೋಗದ ನಿರ್ಧಾರವು ಸತ್ಯ ಮತ್ತು ಜನರ ವಿಜಯವಾಗಿದೆ. ನಾನು ಚುನಾವಣಾ ಆಯೋಗಕ್ಕೆ ಧನ್ಯವಾದ ಹೇಳುತ್ತೇನೆ. ಪ್ರಜಾಪ್ರಭುತ್ವದಲ್ಲಿ ಬಹುಮತ ಪರಿಗಣನೆಯಾಗುತ್ತದೆ. ಇದು ಬಾಳಾಸಾಹೇಬರ [ಠಾಕ್ರೆ] ಪರಂಪರೆಯ ವಿಜಯವಾಗಿದೆ” ಎಂದು ತಿಳಿಸಿದ್ದಾರೆ.

ಇದನ್ನೂ ಓದಿರಿ: ಅದಾನಿ ಹಗರಣ| ಸುಪ್ರೀಂ ಕೋರ್ಟ್ ಮುಂದಿವೆ ನಾಲ್ಕು ಅರ್ಜಿ

ಚುನಾವಣಾ ಆಯೋಗವು ಅರ್ಹತೆಯ ಆಧಾರದಲ್ಲಿ ನಿರ್ಧಾರ ಕೈಗೊಂಡಿದೆ ಎಂದು ಉಪಮುಖ್ಯಮಂತ್ರಿ ಹಾಗೂ ಬಿಜೆಪಿ ನಾಯಕ ದೇವೇಂದ್ರ ಫಡ್ನವೀಸ್ ಹೇಳಿದ್ದಾರೆ.

ಇದರ ನಡುವೆ ಠಾಕ್ರೆ ಬಣದ ಸಂಸದ ಸಂಜಯ್ ರಾವುತ್ ಪ್ರತಿಕ್ರಿಯಿಸಿ, “ಚುನಾವಣಾ ಆಯೋಗದ ನಿರ್ಧಾರವು ಪ್ರಜಾಪ್ರಭುತ್ವದ ಕೊಲೆಯಾಗಿದೆ” ಎಂದು ಬಣ್ಣಿಸಿದ್ದಾರೆ.

“ನಾವು ಈ ನಿರ್ಧಾರವನ್ನು ಪ್ರಶ್ನಿಸುತ್ತೇವೆ. ಇಂತಹ ನಿರ್ಧಾರವನ್ನು ನಿರೀಕ್ಷಿಸಲಾಗಿತ್ತು. ಇದೆಲ್ಲವೂ ಒತ್ತಡದಲ್ಲಿ ನಡೆದಿದೆ. ನನಗೆ ಚುನಾವಣಾ ಆಯೋಗದ ಮೇಲೆ ನಂಬಿಕೆ ಇಲ್ಲ” ಎಂದು ಟೀಕಿಸಿದ್ದಾರೆ.

‘ಶಿವಸೇನೆಯ ಸಂವಿಧಾನ ಪ್ರಜಾಸತ್ತಾತ್ಮಕವಲ್ಲ’

ಚುನಾವಣಾ ಆಯೋಗವು ತನ್ನ ಆದೇಶದಲ್ಲಿ, ಶಿವಸೇನೆ ಪಕ್ಷದ ಸಂವಿಧಾನವು ಪ್ರಜಾಸತ್ತಾತ್ಮಕವಲ್ಲ ಎಂದು ಗುರುತಿಸಿದೆ.

2018ರಲ್ಲಿ ಪಕ್ಷದ ಸಂವಿಧಾನದಲ್ಲಿ ಮಾಡಲಾದ ತಿದ್ದುಪಡಿಗಳ ಬಗ್ಗೆ ಚುನಾವಣಾ ಆಯೋಗಕ್ಕೆ ತಿಳಿಸಲಾಗಿಲ್ಲ ಎಂದು ಅದು ಗಮನಿಸಿದೆ. ಶಿವಸೇನಾ ಸಂಸ್ಥಾಪಕ ಬಾಳಾಸಾಹೇಬ್ ಠಾಕ್ರೆ ತಂದ ಪ್ರಜಾಸತ್ತಾತ್ಮಕ ಮಾನದಂಡಗಳನ್ನು ತೆಗೆದುಹಾಕಲಾಗಿದೆ ಎಂದು ಆಯೋಗ ಉಲ್ಲೇಖಿಸಿದೆ.

ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿಗಳು

ಠಾಕ್ರೆ ನೇತೃತ್ವದ ಸರ್ಕಾರದ ಪತನ ಮತ್ತು ಶಿಂಧೆ ಪ್ರಮಾಣ ವಚನಕ್ಕೆ ಕಾರಣವಾದ ರಾಜಕೀಯ ಬೆಳವಣಿಗೆಗಳಿಗೆ ಸಂಬಂಧಿಸಿದಂತೆ ಎರಡು ಬಣಗಳು ಸಲ್ಲಿಸಿರುವ ಅರ್ಜಿಯನ್ನು ಸುಪ್ರೀಂ ಕೋರ್ಟ್‌ ವಿಚಾರಣೆ ನಡೆಸುತ್ತಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...