Homeಮುಖಪುಟಬಿಜೆಪಿ ಸೇರದಿದ್ದರೆ ಜೈಲುಪಾಲಾಗುತ್ತೇನೆಂದು ಏಕನಾಥ್ ಶಿಂಧೆ ಕಣ್ಣೀರು ಹಾಕಿದ್ದರು: ಆದಿತ್ಯ ಠಾಕ್ರೆ

ಬಿಜೆಪಿ ಸೇರದಿದ್ದರೆ ಜೈಲುಪಾಲಾಗುತ್ತೇನೆಂದು ಏಕನಾಥ್ ಶಿಂಧೆ ಕಣ್ಣೀರು ಹಾಕಿದ್ದರು: ಆದಿತ್ಯ ಠಾಕ್ರೆ

- Advertisement -
- Advertisement -

ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ ಅವರು ಠಾಕ್ರೆಗಳ ವಿರೋಧ ಕಟ್ಟಿಕೊಳ್ಳುವ ಮುನ್ನ ಕೇಂದ್ರ ಏಜೆನ್ಸಿಯಿಂದ ಬಂಧಿಸುವ ಭಯದಿಂದ ಮಾತೋಶ್ರೀ ಬಳಿ ಅಳಲು ತೋಡಿಕೊಂಡಿದ್ದಾರೆ ಎಂದು ಶಿವಸೇನೆ (ಯುಬಿಟಿ) ನಾಯಕ ಆದಿತ್ಯ ಠಾಕ್ರೆ ಗುರುವಾರ ಹೇಳಿದ್ದಾರೆ.

ವಿಶಾಖಪಟ್ಟಣಂನಲ್ಲಿರುವ ವಿಶ್ವವಿದ್ಯಾನಿಲಯದಲ್ಲಿ ನಡೆದ ಸಂವಾದದ ವೇಳೆ ಮಾತನಾಡಿದ ಆದಿತ್ಯ ಠಾಕ್ರೆ, ”ಏಕನಾಥ್ ಶಿಂಧೆ ಬಂಧನದ ಭೀತಿಯಿಂದ ಬಂಡಾಯದ ಮೊದಲು ಮಾತೋಶ್ರೀ ಬಳಿ ಬಂದು ಅಳುತ್ತಿದ್ದರು. 2022ರಲ್ಲಿ 40 ಶಾಸಕರು ತಮ್ಮ ಸ್ವಂತ ಸ್ಥಾನ ಮತ್ತು ”ಹಣ”ಕ್ಕಾಗಿ ಶಿವಸೇನಾ ನಾಯಕತ್ವದ ವಿರುದ್ಧ ಬಂಡಾಯವೆದ್ದರು” ಎಂದು ಅವರು ಹೇಳಿದರು.

”ಈಗಿನ ಮುಖ್ಯಮಂತ್ರಿ [ಏಕನಾಥ್ ಶಿಂಧೆ] ನಮ್ಮ ಮನೆಗೆ ಬಂದು ಅವರನ್ನು ಕೇಂದ್ರೀಯ ಸಂಸ್ಥೆಯಿಂದ ಬಂಧಿಸಲು ಹೊರಟಿದ್ದಾರೆ ಎಂದು ಅಳುತ್ತಿದ್ದರು ಮತ್ತು ಅವರು, ‘ನಾನು ಬಿಜೆಪಿಗೆ ಹೋಗಬೇಕಾಗುತ್ತದೆ ಇಲ್ಲದಿದ್ದರೆ ಅವರು ನನ್ನನ್ನು ಬಂಧಿಸುತ್ತಾರೆ’ ಎಂದಿದ್ದರು ಎಂದು ಠಾಕ್ರೆ ಹೇಳಿದರು.

ಇದನ್ನೂ ಓದಿ: ಇಂದಿರಾ ಗಾಂಧಿ ಕಾಂಗ್ರೆಸ್ ಚಿಹ್ನೆ ಕಳೆದುಕೊಂಡಿದ್ದನ್ನು ಠಾಕ್ರೆಗೆ ನೆನಪಿಸಿದ ಶರದ್ ಪವಾರ್

”ಆನಂತರ ಈ ವ್ಯಕ್ತಿ ಬಿಜೆಪಿ ಜೊತೆ ಕೈ ಜೋಡಿಸಿದನು. ಆಗ ಬಿಜೆಪಿಯವರು, ಶಿಂಧೆ ಬಣವೇ ನಿಜವಾದ ಶಿವಸೇನಾ ಎಂದು ತೋರಿಸಲು ಬಿಜೆಪಿ ಇವನನ್ನೇ ಸಿಎಂ ಮಾಡಿತು. ಇದು ಅವನ ಅದೃಷ್ಟ” ಎಂದು ಆದಿತ್ಯ ಠಾಕ್ರೆ ಹೇಳಿದರು.

ಮುಖ್ಯಮಂತ್ರಿ ಏಕನಾಥ್ ಶಿಂಧೆ ಅವರ ವಿರುದ್ಧದ ಆದಿತ್ಯ ಠಾಕ್ರೆ ಅವರ ಹೇಳಿಕೆಯನ್ನು ಶಿವಸೇನೆ ನಾಯಕರು ನಿರಾಕರಿಸಿದ್ದಾರೆ.

ಈ ಬಗ್ಗೆ ಮಾತನಾಡಿದ ಶಾಸಕ ಸಂತೋಷ್ ಬಂಗಾರ್ ಅವರು, ”ಆದಿತ್ಯ ಠಾಕ್ರೆ ಅವರ ಹೇಳಿಕೆ ಸುಳ್ಳು, ಬಿಜೆಪಿಯಿಂದ ಯಾವುದೇ ಬೆದರಿಕೆ ಇಲ್ಲ. ರಾಷ್ಟ್ರೀಯವಾದಿ ಕಾಂಗ್ರೆಸ್ ಪಕ್ಷ (ಎನ್‌ಸಿಪಿ) ಮತ್ತು ಕಾಂಗ್ರೆಸ್‌ನೊಂದಿಗಿನ ಅವರ ಮೈತ್ರಿಯಿಂದಾಗಿ 2022ರಲ್ಲಿ ಠಾಕ್ರೆಗಳ ವಿರೋಧ ಕಟ್ಟಿಕೊಂಡಿದ್ದು” ಎಂದು ಹೇಳಿದರು.

ಕೇಂದ್ರ ಸಚಿವ ರಾಮದಾಸ್ ಅಠವಳೆ ಪ್ರತಿಕ್ರಿಸಿದ್ದು, ಶಿಂಧೆ ವಿರುದ್ಧದ ಆರೋಪಗಳು ಸುಳ್ಳು ಮತ್ತು ಅವರು ”ಧೈರ್ಯವಂತ” ವ್ಯಕ್ತಿ ಹಾಗಾಗಿ ಅವರು ಎಂದಿಗೂ ಅಳುವುದಿಲ್ಲ ಎಂದು ಹೇಳಿದರು.

ಕಾಂಗ್ರೆಸ್ ಮತ್ತು ಎನ್‌ಸಿಪಿಯೊಂದಿಗೆ ತಮ್ಮ ಪಕ್ಷದ ಮೈತ್ರಿ ಕುರಿತು ಮಾತನಾಡಿದ ಆದಿತ್ಯ ಠಾಕ್ರೆ, ”ನನ್ನ ತಾತ [ಬಾಳಾಸಾಹೇಬ್ ಠಾಕ್ರೆ] ಮೊದಲು ಕಾಂಗ್ರೆಸ್‌ನೊಂದಿಗೆ ಮೈತ್ರಿ ಮಾಡಿಕೊಂಡಿದ್ದರು. ಈ ಹಿಂದೆಯೂ ಅವರು ಗಾಂಧಿ ಕುಟುಂಬದೊಂದಿಗೆ ಉತ್ತಮ ಸಂಬಂಧ ಹೊಂದಿದ್ದರು. ಬಿಜೆಪಿ ಬೇರೆ ಅಭ್ಯರ್ಥಿಯನ್ನು [ರಾಷ್ಟ್ರಪತಿ ಚುನಾವಣೆಯ ಸಮಯದಲ್ಲಿ] ಹಾಕಿದಾಗ ಅವರು ಬಹಿರಂಗವಾಗಿ ಪ್ರಣಬ್ ಮುಖರ್ಜಿ ಮತ್ತು ಪ್ರತಿಭಾ ಪಾಟೀಲ್ ಅವರನ್ನು ಬಹಿರಂಗವಾಗಿ ಬೆಂಬಲಿಸಿದ್ದರು” ಎಂದು ಹೇಳಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಎಸ್‌ಐಆರ್‌ಗೂ ಸರ್ಕಾರಿ ಸೌಲಭ್ಯಕ್ಕೂ ಲಿಂಕ್; ಅರ್ಜಿ ವಿಚಾರಣೆಗೆ ಸುಪ್ರೀಂ ನಕಾರ : ನಿಜವಾದ ಆತಂಕ

ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳದ ಹೊಸ ಸರ್ಕಾರ ನೀಡಿರುವ ಆದೇಶಗಳ ವಿರುದ್ಧ ಸಲ್ಲಿಕೆಯಾಗಿದ್ದ ಅರ್ಜಿಯೊಂದರ ತುರ್ತು ವಿಚಾರಣೆಗೆ ಸುಪ್ರೀಂ ಕೋರ್ಟ್ 23 ಜೂನ್ 2026ರಂದು ನಿರಾಕರಿಸಿದೆ. ವಿಧಾನಸಭೆ ಚುನಾವಣೆಗೆ ಮುನ್ನ ನಡೆದ ವಿಶೇಷ...

ಒಂಬತ್ತನೇ ತರಗತಿ ಪಠ್ಯಪುಸ್ತಕದಲ್ಲಿ ತುರ್ತು ಪರಿಸ್ಥಿತಿ ಅಧ್ಯಾಯ ಸೇರಿಸಿದ ಎನ್‌ಸಿಇಆರ್‌ಟಿ

ಭಾರತದಲ್ಲಿ ತುರ್ತು ಪರಿಸ್ಥಿತಿ ಘೋಷಿಸಲ್ಪಟ್ಟ ಸುಮಾರು ಐದು ದಶಕಗಳ ನಂತರ, ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ ಮತ್ತು ತರಬೇತಿ ಮಂಡಳಿ (ಎನ್‌ಸಿಇಆರ್‌ಟಿ) ಈ ವಿಷಯವನ್ನು 9 ನೇ ತರಗತಿಯ ಸಮಾಜ ವಿಜ್ಞಾನ ಪಠ್ಯಪುಸ್ತಕದಲ್ಲಿ ಮೊದಲ...

‘ಆರ್‌ಎಸ್‌ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದೆ’: ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ

ಬೆಂಗಳೂರು: ರಾಷ್ಟ್ರೀಯ ಸ್ವಯಂಸೇವಕ ಸಂಘ (RSS) ಹಾಗೂ ಆಡಳಿತಾರೂಢ ಬಿಜೆಪಿ ವಿರುದ್ಧ ಕರ್ನಾಟಕದ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಮತ್ತೊಮ್ಮೆ ತೀವ್ರ ಸ್ವರೂಪದ ಸೈದ್ಧಾಂತಿಕ ದಾಳಿ ನಡೆಸಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ಸರಣಿ ಪ್ರಶ್ನೆಗಳನ್ನು...

ಹೊಸ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ ಜಾರಿಯ ಜೊತೆಯಲ್ಲೆ ಸುಪ್ರೀಂ ಕೋರ್ಟ್‌ಗೆ ಹೋಗಲು ಕರ್ನಾಟಕ ಸಜ್ಜು

ಕೇಂದ್ರ ಸರ್ಕಾರದ ಹೊಸ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ ‘ವಿಕಸಿತ ಭಾರತ-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ)’ (VB-G RAM G) ಕಾಯ್ದೆಯ ಹಲವು ನಿಯಮಗಳಿಗೆ ತೀವ್ರ ವಿರೋಧ ವ್ಯಕ್ತಪಡಿಸಿದ್ದರೂ...

ಉತ್ತರ ಪ್ರದೇಶ: ಮದುವೆ ರಿಸೆಪ್ಷನ್‌ನಲ್ಲಿ ಗೋಮಾಂಸ ಬಡಿಸಿದ ಆರೋಪ; ವರನ ತಂದೆ ಸೇರಿ ಏಳು ಮಂದಿ ಬಂಧನ, ಮಂಟಪ ಸೀಲ್

ಶಾಮ್ಲಿ (ಉತ್ತರ ಪ್ರದೇಶ): ಉತ್ತರ ಪ್ರದೇಶದ ಶಾಮ್ಲಿ ಜಿಲ್ಲೆಯ ಕೈರಾನಾ ಪಟ್ಟಣದಲ್ಲಿ ನಡೆದ ಮದುವೆ ಆರತಕ್ಷತೆ (ವಲೀಮಾ) ಸಮಾರಂಭವೊಂದು ಈಗ ಭಾರೀ ವಿವಾದಕ್ಕೆ ಕಾರಣವಾಗಿದೆ. ಸಮಾರಂಭದಲ್ಲಿ ಅತಿಥಿಗಳಿಗೆ ಗೋಮಾಂಸವನ್ನು ಬೇಯಿಸಿ ಬಡಿಸಲಾಗಿದೆ ಎಂಬ...

ರಾಮ ಮಂದಿರ ದೇಣಿಗೆ ವಿವಾದ: ಎಫ್‌ಐಆರ್ ದಾಖಲಿಸಿ ತ್ವರಿತ ನ್ಯಾಯಾಲಯದ ವಿಚಾರಣೆಗೆ ವಿಶ್ವ ಹಿಂದೂ ಪರಿಷತ್ ಆಗ್ರಹ

ರಾಮ ದೇಣಿಗೆ ವಿವಾದ ದುರುಪಯೋಗ ಕುರಿತು ಎಸ್‌ಐಟಿ ತನ್ನ ಪ್ರಾಥಮಿಕ ವರದಿಯನ್ನು ಸಲ್ಲಿಸಿದ ಕೂಡಲೇ, ಬಲಪಂಥೀಯ ಹಿಂದುತ್ವ ಸಂಘಟನೆ ವಿಶ್ವ ಹಿಂದೂ ಪರಿಷತ್ (ವಿಎಚ್‌ಪಿ) ಪ್ರಕರಣದಲ್ಲಿ ಎಫ್‌ಐಆರ್ ದಾಖಲಿಸಬೇಕೆಂದು ಒತ್ತಾಯಿಸಿದೆ. ವಿಎಚ್‌ಪಿ ಅಂತರರಾಷ್ಟ್ರೀಯ...

ಪಾಸ್‌ಪೋರ್ಟ್ ಪೌರತ್ವದ ದಾಖಲೆಯಲ್ಲ: ವಿದೇಶಾಂಗ ಸಚಿವಾಲಯ

ಪಾಸ್‌ಪೋರ್ಟ್ ಒಂದು ಪ್ರಯಾಣದ ದಾಖಲೆಯಾಗಿದೆಯೇ ಹೊರತು, ಪೌರತ್ವದ ದಾಖಲೆಯಲ್ಲ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯದ (ಎಂಇಎ) ಅಧಿಕಾರಿಗಳು ಬುಧವಾರ (ಜೂನ್ 24) ತಿಳಿಸಿದ್ದಾರೆ. ಈ ಮೂಲಕ ಅವರು ಭಾರತೀಯ ಪೌರತ್ವವನ್ನು ಖಚಿತವಾಗಿ ಸಾಬೀತುಪಡಿಸುವ...

90 ಪ್ರಶ್ನೆ ಪತ್ರಿಕೆ ಸೋರಿಕೆಯಾಗಿದೆ, ಲಕ್ಷಾಂತರ ವಿದ್ಯಾರ್ಥಿಗಳ ಭವಿಷ್ಯ ಹಾಳಾಗಿದೆ ಆದರೆ ಪ್ರಧಾನ್ ತಮ್ಮ ಕುರ್ಚಿಗೆ ಅಂಟಿಕೊಂಡಿದ್ದಾರೆ: ಮಲ್ಲಿಕಾರ್ಜುನ ಖರ್ಗೆ

ನವದೆಹಲಿ: ದೇಶಾದ್ಯಂತ ಭಾರಿ ಸಂಚಲನ ಮೂಡಿಸಿರುವ 'ನೀಟ್' (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ವಿರುದ್ಧ ವಿರೋಧ ಪಕ್ಷಗಳು ತಮ್ಮ ಆಕ್ರೋಶವನ್ನು ಮತ್ತಷ್ಟು ತೀವ್ರಗೊಳಿಸಿವೆ. ಪರೀಕ್ಷಾ ಅಕ್ರಮಗಳನ್ನು ವಿರೋಧಿಸಿ...

2023ರಿಂದ 20 ಸಾವಿರಕ್ಕೂ ಹೆಚ್ಚು ಪ್ಯಾಲೆಸ್ತೀನ್ ಮಕ್ಕಳನ್ನು ಹತ್ಯೆಗೈದ ಇಸ್ರೇಲ್; ಉದ್ದೇಶಪೂರ್ವಕ ‘ನರಮೇಧ’ ಎಂದ ವರದಿ

ಪ್ಯಾಲೆಸ್ತೀನ್ ಮಕ್ಕಳನ್ನು ಉದ್ದೇಶಪೂರ್ವಕವಾಗಿ ಗುರಿಯಾಗಿಸಿಕೊಂಡು ಹತ್ಯೆ ಮಾಡುವ ಮೂಲಕ ಇಸ್ರೇಲ್‌ ಸೇನೆ ನರಮೇಧ ನಡೆಸಿದೆ ಎಂದು ವಿಶ್ವಸಂಸ್ಥೆಯ ಸ್ವತಂತ್ರ ಅಂತಾರಾಷ್ಟ್ರೀಯ ವಿಚಾರಣಾ ಆಯೋಗ ಮಂಗಳವಾರ (ಜೂ.23) ತಿಳಿಸಿದೆ. ಇಸ್ರೇಲ್ ಪಡೆಗಳು ಅಕ್ಟೋಬರ್ 2023ರಿಂದ ಈವರೆಗೆ...

ಮೀಸಲಾತಿ ರದ್ದುಗೊಳಿಸಲು ಬಿಜೆಪಿ ಮೂರನೇ ಎರಡರಷ್ಟು ಬಹುಮತ ಬಯಸುತ್ತಿದೆ: ಜೈರಾಮ್‌ ರಮೇಶ್‌

ಲೋಕಸಭೆಯಲ್ಲಿ ಬಿಜೆಪಿ ಮೂರನೇ ಎರಡರಷ್ಟು ಬಹುಮತಕ್ಕಾಗಿ ಶ್ರಮಿಸುತ್ತಿದೆ. ಏಕೆಂದರೆ, ಮೀಸಲಾತಿಯನ್ನು ಕೊನೆಗೊಳಿಸಲು ಸಂವಿಧಾನವನ್ನು ತಿದ್ದುಪಡಿ ಮಾಡುವುದು ಅದರ ನಿಜವಾದ ಮತ್ತು ಅಂತಿಮ ಗುರಿಯಾಗಿದೆ ಎಂದು ಕಾಂಗ್ರೆಸ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್...