Homeಮುಖಪುಟಎಲೆಮರೆ-2: `ಲೋಕದ ಸುಕ್ಕುಗಳ ಇಸ್ತ್ರಿ ಮಾಡುವ ಕವಿ' - ಎಚ್‌.ನಾಗೇಂದ್ರಪ್ಪ..

ಎಲೆಮರೆ-2: `ಲೋಕದ ಸುಕ್ಕುಗಳ ಇಸ್ತ್ರಿ ಮಾಡುವ ಕವಿ’ – ಎಚ್‌.ನಾಗೇಂದ್ರಪ್ಪ..

ಒಬ್ಬ ಕವಿಯಾಗಿ ನಾಗೇಂದ್ರಪ್ಪ ಲೋಕದ ಗಾಯಗಳಿಗೆ ಮುಲಾಮು ಹುಡುಕುವಾಗ ಆಯ್ಕೆ ಮಾಡಿಕೊಳ್ಳುವುದು ಬುದ್ಧ ಬಸವ ಅಂಬೇಡ್ಕರ್ ಜ್ಯೋತಿಬಾಪುಲೆ ಗಾಂಧಿ ಮೊದಲಾದವರನ್ನು...

- Advertisement -
- Advertisement -

ಚಳ್ಳಕೆರೆಯ ವಿಠ್ಠಲನಗರದಲ್ಲಿ ಇಸ್ತ್ರಿ ಮಾಡುವ ಪೆಟ್ಟಿಗೆ ಅಂಗಡಿಯಲ್ಲೇ ಪುಸ್ತಕಗಳನ್ನು ನೀಟಾಗಿ ಒತ್ತರಿಸಿಟ್ಟು ಓದುಬರಹ ಮಾಡುವ ಜನಪದ ಕವಿ ಪಗಡಲಬಂಡೆ ಹೆಚ್. ನಾಗೇಂದ್ರಪ್ಪ. ಆಶುಕವಿ, ಸ್ವರಚಿತ ಕವಿತೆಗಳನ್ನು ಹಾಡಿಕೆ ಮೂಲಕ ಜನರಿಗೆ ತಲುಪಿಸುವಾತ. ಬಿ.ಎ ಪದವಿಯಲ್ಲಿ ಕನ್ನಡ ಮೇಜರ್ ಓದಿ ಕನ್ನಡ ಎಂ.ಎ ಸ್ನಾತಕೋತ್ತರ ಪದವಿ ಕನಸಿದ್ದರೂ ಮಾಡಲಾಗದೆ ಓದನ್ನು ನಿಲ್ಲಿಸಿದರು. ನಂತರ ಖಾಸಗಿ ಸಂಸ್ಥೆಯೊಂದರಲ್ಲಿ ಸಂಬಳವಿಲ್ಲದೆ ದುಡಿದು ಕೆಟ್ಟ ಅನುಭವದೊಂದಿಗೆ ವೃತ್ತಿ ಕಸಬು ಇಸ್ತ್ರಿಯ ಕೈಹಿಡಿದು, ಕಾಯಕದ ಜತೆ ನುಡಿ ವ್ಯವಸಾಯ ನಡೆಸಿದ್ದಾರೆ. ತಾರುಣ್ಯದಲ್ಲಿ ಅತ್ಯುತ್ತಮ ಕ್ರೀಡಾಪಟು. ಕುಸ್ತಿ, ಕಬಡ್ಡಿ, ರನ್ನಿಂಗ್ ರೇಸಲ್ಲಿ ಕಾಲೇಜಿಗೆ ಹೆಸರು ತಂದಾತ. ನಂತರದ ದಿನಗಳಲ್ಲಿ ಕಲೆಯತ್ತ ಹೊರಳಿ ಭಜನೆ, ಹಾಡಿಕೆ, ತತ್ವಪದ, ಏಕಪಾತ್ರಾಭಿನಯ, ದೊಡ್ಡಾಟ ಸಣ್ಣಾಟ ಹೀಗೆ ಬಹುಮುಖ ಪ್ರತಿಭೆಯಾಗಿ ರೂಪುಗೊಂಡರು.

ನಾಗೇಂದ್ರಪ್ಪ ಒಬ್ಬ ಜನಪದ ಕವಿ. ಹಾಗಾಗಿ ಇವರನ್ನು ಇತರೆ ಶಿಷ್ಟಕವಿಗಳ ಜತೆ ಹೋಲಿಸಲಾಗದು. ಅವರ ಕವಿತೆಗಳಲ್ಲಿ ತೀವ್ರವಾದ ರೂಪಕಗಳಾಗಲಿ, ಗಂಭೀರ ಶೋಧವಾಗಲಿ ಕಾಣುವುದಿಲ್ಲ. ಬದಲಾಗಿ ತನ್ನ ಸುತ್ತಮುತ್ತಣ ಯಕಶ್ಚಿತ್ ಎನ್ನುವಂತಹ ಸಂಗತಿಗಳನ್ನು ಆಯ್ದು ಅವುಗಳನ್ನು ಜನÀಪರವಾದ ಕೋರಿಕೆ, ದುಃಖ, ಅಸಹಾಯಕತೆ, ಪ್ರೀತಿ, ಸ್ನೇಹ, ಮೆಚ್ಚುಗೆ, ಬಂಧುತ್ವದಂತಹ ಭಾವನೆಗಳ ಜತೆ ಕಟ್ಟಿದ್ದಾರೆ. ಹೀಗೆ ದಿನದಿನದ ವಿದ್ಯಮಾನಗಳೇ ನಾಗೇಂದ್ರಪ್ಪನ ಕವಿತ್ವದಲ್ಲಿ ಹಾಡುಗಳಾಗಿವೆ. ಈ ಕಾರಣಕ್ಕೆ ಕವಿ ಬೇಂದ್ರೆ ನನಗೆ ಇಷ್ಟ ಎನ್ನುತ್ತಾರೆ.

ಚಳ್ಳಕೆರೆ ಭಾಗ ಕರ್ನಾಟಕದಲ್ಲಿಯೇ ಅತಿ ಕಡಿಮೆ ಮಳೆಬೀಳುವ ಪ್ರದೇಶ. ಹಾಗಾಗಿ ಮಳೆಯನ್ನು ನಂಬಿ ಬಿತ್ತನೆ ಮಾಡಿದ ರೈತರು ಹೆಚ್ಚಾಗಿ ಕೈಸುಟ್ಟುಕೊಳ್ಳುವುದೇ ಹೆಚ್ಚು. ಈ ಸಂಗತಿಯು ಕವಿಯನ್ನು ಬಹುವಾಗಿ ಕಾಡಿದೆ. ಈ ಕವಿತೆಗಳಲ್ಲಿ ರೈತ ಹೊಲ ಮಳೆ ಮೋಡ ಕುರಿತ ರೂಪಕಗಳು ಮತ್ತೆ ಮತ್ತೆ ಮರುಕಳಿಸಿವೆ. ಅಂತೆಯೇ ಮಳೆ ಕರೆಯುವ ಮೂರ್ನಾಲ್ಕು ಪದ್ಯಗಳಿವೆ. `ಮುನಿದೆ ಏಕೋ ಮಳೆರಾಯ’ ಎನ್ನುವ ಪದ್ಯದಲ್ಲಿ `ಉತ್ತಿದರು ಬಿತ್ತಿದರು ಕತ್ತೆತ್ತಿ ನೋಡಿ/ ಗೋಗರೆದರೂ ಕರಗಲಿಲ್ಲ/ ವರುಣ ದೇವನೆದೆ’ ಎನ್ನುತ್ತಾರೆ.

`ಲೋಕದ ಸುಕ್ಕುಗಳ ಇಸ್ತ್ರಿ ಮಾಡುವ ಕಾಯಕದಲಿ’ ಕವಿತೆ ಗಮನ ಸೆಳೆವ ಪದ್ಯ. ನಾಗೇಂದ್ರಪ್ಪ ಸ್ವತಃ ಮಡಿವಾಳ ಸಮುದಾಯಕ್ಕೆ ಸೇರಿದಾತ. ಜಗದ ಬಟ್ಟೆಗಳ ಮಡಿಮಾಡಿಕೊಡುವ ಕುಲಕಸಬನ್ನು ಮಾಡಿದಾತ. ಈಗಲೂ ಇಸ್ತ್ರಿ ಅಂಗಡಿಯಲ್ಲಿ ಲೋಕದ ಬಟ್ಟೆಗಳ ಗರಿಗರಿಯಾಗಿಸುವಾತ. ಇಂತಹ ಸಮುದಾಯದ ಅನುಭವಗಳನ್ನು ನಾಗೇಂದ್ರಪ್ಪ ತುಂಬಾ ಸೂಕ್ಷ್ಮವಾಗಿ ಹಿಡಿದಿದ್ದಾರೆ. `ಇದ್ದಿಲು ನಿಗಿನಿಗಿ ಹೊಳೆದು/ಹೊಟ್ಟೆ ಬಟ್ಟೆ ತೊಡಿಸಿ/ಸ್ಫೂರ್ತಿ ನೀಡಿತು/ಬೂದಿಮುಚ್ಚಿದ ಕೆಂಡವಿದ್ದು/ ಬದುಕಿನ ನೆರವಿನ ತಂಗಾಳಿ ಬೀಸಿದಾಗ ಮತ್ತೆ ಪ್ರಜ್ವಲಿಸಿತು/ ಅಗುಳಿನ ಗಳಿಗೆಯ ಚೀಲ ತುಂಬಿ ನಿದ್ರಿಸಿತು’ ಎನ್ನುತ್ತಾರೆ. ಅಂತೆಯೇ ಉಳ್ಳವರ ಬಟ್ಟೆಗಳನ್ನು ಇಸ್ತ್ರಿ ಮಾಡುವಾಗ ಕವಿ ಸಿರಿವಂತಿಕೆಯ ಮೇಲಿನ ಸಿಟ್ಟನ್ನು ತನ್ನ ಕಾಯಕದಲ್ಲಿ ದಾಟಿಸಿ ಹಗುರಾಗುವಂತಿದೆ. ಹಾಗಾಗಿಯೇ `ಜುಬ್ಬದ ದಿಬ್ಬ ನಿದ್ದೆಯ ಕೆಡಿಸಿ/ಸೊಕ್ಕಿದ ಸುಕ್ಕು ಕೊಬ್ಬನು ಕರಗಿಸಿ/ ಹಾಸಿಗೆ ಹಿಡಿಸಿತು/ ಆಶ್ರಯ ತಪ್ಪಿದ ಪ್ರತಿಭೆ/ತರಗೆಲೆಯಾಗಿ/ಕಮರಿ ಧೂಳಾಯಿತು’ ಎನ್ನುತ್ತಾರೆ. ಮುಂದುವರಿದು `ಲೋಕದ ಸುಕ್ಕುಗಳ/ಇಸ್ತ್ರಿ ಮಾಡುವ ಕಾಯಕದಲಿ/ ನಾನು ನನ್ನವರು/ ಸುಟ್ಟುಕೊಳ್ಳುತ್ತಲೇ/ ಗಟ್ಟಿಯಾಗುತ್ತಿದ್ದೇವೆ/ ಬದುಕೆಂಬ ಇಟ್ಟಿಗೆ ಭಟ್ಟಿಯಲಿ’ ಎಂದು ಬದುಕಿಗೆ ಚೈತನ್ಯ ಪಡೆಯುತ್ತಾರೆ.

ನಾಗೇಂದ್ರಪ್ಪ ಜನಪದ ಕವಿಯಾಗಿಯೂ ಆಧುನಿಕ ವೈಚಾರಿಕತೆ ಇವರ ಕವಿತೆಗಳಲ್ಲಿ ಹೆಣೆದುಕೊಂಡಿದೆ. ಈ ಕಾರಣಕ್ಕೆ ಇಲ್ಲಿ ಜನರ ಕಷ್ಟನಷ್ಟಗಳನ್ನು ಕವಿತೆಯನ್ನಾಗಿಸುತ್ತಲೇ ಇವುಗಳಿಂದ ಹೊರಬರಬಹುದಾದ ದಾರಿಗಳ ಬಗ್ಗೆಯೂ ಜಾಗೃತರಾಗಿದ್ದಾರೆ. ಈ ಸಂಕಲನದ `ಕ್ರಾಂತಿಗೀತೆ’ ಎನ್ನುವ ಕವಿತೆ ಗಮನ ಸೆಳೆಯುವಂತಿದೆ. `ನೆಲ ಅಗೆದರು ಮರ ಕಡಿದರು/ ಅದಿರು ತೆಗೆದರು ಮರಳು ಮಾರಿದರು/ಕನ್ನಡಮ್ಮನ ಬಂಜೆ ಮಾಡಿದರು/ಖಜಾನೆ ಲೂಟಿ ಹೊಡೆದರು’ ಎಂದು ವಾಸ್ತವದ ಕನ್ನಡಮ್ಮನ ನೆನೆಯುತ್ತಾರೆ. ಅಂತೆಯೇ `ಕ್ರಾಂತಿ ಕಹಳೆ ಮೊಳಗಲಿ/ಶಾಂತಿ ಬೀಡು ಆಗಲಿ/ಏಳಿರಿ ಸಿಡಿದೇಳಿರಿ’ ಎಂದು ಕರೆಕೊಡುತ್ತಾರೆ. ಇಷ್ಟರಮಟ್ಟಿಗೆ ಕವಿ ವರ್ತಮಾನವನ್ನು ಎಚ್ಚರದ ಕಣ್ಣಿಂದ ಗಮನಿಸಿದ್ದಾರೆ.

ಒಬ್ಬ ಕವಿಯಾಗಿ ನಾಗೇಂದ್ರಪ್ಪ ಲೋಕದ ಗಾಯಗಳಿಗೆ ಮುಲಾಮು ಹುಡುಕುವಾಗ ಆಯ್ಕೆ ಮಾಡಿಕೊಳ್ಳುವುದು ಬುದ್ಧ ಬಸವ ಅಂಬೇಡ್ಕರ್ ಜ್ಯೋತಿಬಾಪುಲೆ ಗಾಂಧಿ ಮೊದಲಾದವರನ್ನು ಎನ್ನುವುದು ಗಮನ ಸೆಳೆಯುತ್ತದೆ. ಹಾಗಾಗಿ ಇಲ್ಲಿ ಕವಿತೆಗಳನ್ನು ಕಟ್ಟುವಲ್ಲಿ ವಾಚ್ಯವಾದರೂ ಈ ಕವಿಗೆ ಕವಿತೆಯಲ್ಲಿ ತಾನು ಹೇಳಬೇಕಿರುವುದು ಏನನ್ನು ಮತ್ತು ಯಾರ ಧ್ವನಿಯನ್ನು ಎನ್ನುವ ಸ್ಪಷ್ಟತೆ ಇದೆ. ಹಾಗಾಗಿಯೇ ನೇಪಾಳದ ಭೂಕಂಪಕ್ಕೆ ಕಣ್ಣೀರಾಗುತ್ತಾರೆ. ರೈತರ ಬವಣೆಗೆ ಕರಗುತ್ತಾರೆ. ನಾಗೇಂದ್ರಪ್ಪ ಶಾಲೆಗಳಿಗೆ ತೆರಳಿ ಕವಿತೆಗಳನ್ನು ಹಾಡಿ ಮಕ್ಕಳನ್ನು ಖುಷಿಗೊಳಿಸುತ್ತಾರೆ. ಆ ಸಂದರ್ಭಗಳಲ್ಲಿ ಬಯಲಾಟ, ಏಕಪಾತ್ರಾಭಿನಯ ಮೊದಲಾದ ಕಲಾರೂಪಗಳಲ್ಲಿಯೂ ಅಭಿನಯಿಸಿ, ಕವಿತೆಯನ್ನು ವಾಚಿಸಿ ಕಾವ್ಯದ ಹಲವು ಸಾಧ್ಯತೆಗಳನ್ನು ಪ್ರಯೋಗಿಸಿದ್ದಾರೆ. ಹೀಗೆ ಜೀವಪರವಾಗಿ ತುಡಿಯುವ ಕವಿ ಇನ್ನಷ್ಟು ಗಟ್ಟಿಯಾಗಿ ಕವಿತೆಗಳನ್ನು ಕಟ್ಟಲಿ ಎಂದು ಆಶಿಸುವೆ..

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬೆಂಗಳೂರಿನ ಅಪಾರ್ಟ್‌ಮೆಂಟ್‌ನಲ್ಲಿ ಪತ್ನಿಯ ಕತ್ತು ಹಿಸುಕಿ ಕೊಂದ ನಿವೃತ್ತ ಇಸ್ರೋ ಉದ್ಯೋಗಿ ಬಂಧನ

ಬೆಂಗಳೂರು: ಆಘಾತಕಾರಿ ಘಟನೆಯೊಂದರಲ್ಲಿ, 72 ವರ್ಷದ ನಿವೃತ್ತ ಇಸ್ರೋ ಉದ್ಯೋಗಿಯೊಬ್ಬರು ವೈಟ್‌ಫೀಲ್ಡ್ ವಿಭಾಗದ ಆವಲಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯ ತಮ್ಮ ಅಪಾರ್ಟ್‌ಮೆಂಟ್‌ನಲ್ಲಿ ಬುಧವಾರ ಪತ್ನಿಯನ್ನು ಕತ್ತು ಹಿಸುಕಿ ಕೊಂದಿರುವುದಾಗಿ ವರದಿಯಾಗಿದೆ.  ಬೊಮ್ಮನಹಳ್ಳಿಯ ಅಪಾರ್ಟ್‌ಮೆಂಟ್‌ನಲ್ಲಿ ಬೆಳಿಗ್ಗೆ...

ಮಧ್ಯಪ್ರದೇಶದಲ್ಲಿ ಶಾಸಕ ರಾಜಾ ಸಿಂಗ್‌ನಿಂದ ದ್ವೇಷ ಭಾಷಣ; ಪ್ರಚೋದನಕಾರಿ ‘ಶಿರಚ್ಛೇದನ’ ಹೇಳಿಕೆಗೆ ವಿರೋಧ

ತಮ್ಮ ಪ್ರಚೋದನಕಾರಿ ಹೇಳಿಕೆಗಳಿಂದಲೇ ಕುಖ್ಯಾತರಾಗಿರುವ ಹೈದರಾಬಾದ್‌ನ ಗೋಶಮಹಲ್ ಶಾಸಕ ಟಿ ರಾಜಾ ಸಿಂಗ್ ಸಾರ್ವಜನಿಕ ರ‍್ಯಾಲಿಯಲ್ಲಿ ಮತ್ತೊಮ್ಮೆ ಪ್ರಚೋದನಕಾರಿ ಹೇಳಿಕೆಗಳನ್ನು ನೀಡಿದ್ದಾರೆ. ಮಧ್ಯಪ್ರದೇಶದಲ್ಲಿ ಅವರು ಆಡಿದ ಮಾತುಗಳು ವಿವಾದಕ್ಕೆ ಕಾರಣವಾಗಿದೆ. "ಪ್ರತಿಯೊಬ್ಬ ಬಜರಂಗಿಗಳು...

ಪಂಜಾಬ್ ವಿಶ್ವವಿದ್ಯಾಲಯದಲ್ಲಿ ಜಾತಿ ಆಧಾರಿತ ತಾರತಮ್ಯ ಆರೋಪ; ‘ಬಡ್ತಿ ವಿಳಂಬವಾಗಿದೆ..’; ಎಂದ ದಲಿತ ಪ್ರಾಧ್ಯಾಪಕ

ಪಂಜಾಬ್ ವಿಶ್ವವಿದ್ಯಾಲಯದ ದಲಿತ ಸಹಾಯಕ ಪ್ರಾಧ್ಯಾಪಕ ಹರ್‌ಪ್ರೀತ್ ಸಿಂಗ್ ಅವರು ವಿಶ್ವವಿದ್ಯಾಲಯದಲ್ಲಿ ಜಾತಿ ಆಧಾರಿತ ತಾರತಮ್ಯ ಇದೆ ಎಂದು ಸಾರ್ವಜನಿಕವಾಗಿ ಆರೋಪಿಸಿದ್ದಾರೆ. ತನ್ನ ಜಾತಿಯ ಕಾರಣದಿಂದಾಗಿ ಉದ್ದೇಶಪೂರ್ವಕವಾಗಿ ಬಡ್ತಿ ವಿಳಂಬ ಮಾಡಲಾಗಿದೆ...

ಮಹಾರಾಷ್ಟ್ರ: ತಾಯಿ, ಸಹೋದರನ ಕಣ್ಣಿಗೆ ಮೆಣಸಿನ ಪುಡಿ ಎರೆಚಿ ಮದುವೆ ಸಿದ್ಧತೆಯಲ್ಲಿದ್ದ 21 ವರ್ಷದ ಯುವತಿಯ ಅಪಹರಣ

ಮುಂಬೈ: ಆಘಾತಕಾರಿ ಘಟನೆಯೊಂದರಲ್ಲಿ, ಮಹಾರಾಷ್ಟ್ರದ ಪುಣೆ ಜಿಲ್ಲೆಯ ಇಂದಾಪುರ ತಹಸಿಲ್‌ನ ಭಿಗ್ವಾನ್‌ನಲ್ಲಿ 21 ವರ್ಷದ ಯುವತಿಯನ್ನು ಆಕೆಯ ತಾಯಿ ಮತ್ತು ಸಹೋದರನ ಮುಂದೆಯೇ ಇಬ್ಬರು ವ್ಯಕ್ತಿಗಳು ಅಪಹರಿಸಿದ್ದಾರೆ ಎಂದು ಆರೋಪಿಸಲಾಗಿದೆ.ಮದುವೆ ಸಿದ್ಧತೆಯಲ್ಲಿದ್ದ ಯುವತಿ...

KERALA SIR | ಬಿಜೆಪಿ ಮುಖಂಡನ ದೂರು: ಪೌರತ್ವ ಸಾಬೀತುಪಡಿಸುವಂತೆ ಮುಸ್ಲಿಂ ವ್ಯಕ್ತಿಗೆ ನೋಟಿಸ್!

ಬಿಜೆಪಿ ಕಾಸರಗೋಡು ಜಿಲ್ಲಾ ಕಾರ್ಯದರ್ಶಿ ಲೋಕೇಶ್ ನೋಂಡಾ ಎಂಬಾತನ ದೂರಿನ ಮೇರೆಗೆ ಹಿರಿಯ ವಯಸ್ಸಿನ ಮುಸ್ಲಿಂ ವ್ಯಕ್ತಿಯೊಬ್ಬರಿಗೆ ಭಾರತೀಯ ಪೌರತ್ವ ಸಾಬೀತುಪಡಿಸುವಂತೆ ಚುನಾವಣಾ ನೋಂದಣಿ ಅಧಿಕಾರಿ (ಇಆರ್‌ಒ) ನೋಟಿಸ್ ಜಾರಿ ಮಾಡಿದ್ದು, ಆ...

ಚೀನಾ ನಿರ್ಮಿತ ರೋಬೋ ಡಾಗ್ ತಾವೇ ಅಭಿವೃದ್ಧಿಪಡಿಸಿದ್ದಾಗಿ ಹೇಳಿಕೊಂಡಿದ್ದ ಗ್ಯಾಲ್ಗೋಟಿಯಾ ವಿವಿ AI ಸಮ್ಮಿಟ್ ಎಕ್ಸ್‌ಪೋದಿಂದ ತೆರವು

ನವದೆಹಲಿ: ಚೀನಾ ನಿರ್ಮಿತ ರೋಬೋ ಡಾಗ್ ತಮ್ಮದೇ ಎಂದು ಪ್ರದರ್ಶಿಸಿದ್ದಕ್ಕಾಗಿ ಟೀಕೆಗೆ ಗುರಿಯಾದ ನಂತರ ಮತ್ತು ಕೇಂದ್ರ ಸರ್ಕಾರವು ವಿರೋಧ ಪಕ್ಷಗಳಿಂದ ಟೀಕೆಗೆ ಗುರಿಯಾದ ನಂತರ ನೋಯ್ಡಾ ಮೂಲದ ಗ್ಯಾಲ್ಗೋಟಿಯಾಸ್ ವಿಶ್ವವಿದ್ಯಾಲಯವನ್ನು ಬುಧವಾರ...

ಉತ್ತರ ಪ್ರದೇಶ| ಅಹಮದಾಬಾದ್-ಗೋರಖ್‌ಪುರ ಎಕ್ಸ್‌ಪ್ರೆಸ್‌ನಲ್ಲಿ ಟಿಟಿಇಯಿಂದ ಸೇನಾ ಆಕಾಂಕ್ಷಿಯ ಮೇಲೆ ಅತ್ಯಾಚಾರ

ಉತ್ತರ ಪ್ರದೇಶದ ಅಹಮದಾಬಾದ್-ಗೋರಖ್‌ಪುರ ಎಕ್ಸ್‌ಪ್ರೆಸ್‌ನಲ್ಲಿ ಪ್ರಯಾಣಿಸುತ್ತಿದ್ದಾಗ ಟಿಕೆಟ್ ಪರೀಕ್ಷಕನೊಬ್ಬ (ಟಿಟಿಇ) ತನ್ನ ಮೇಲೆ ಅತ್ಯಾಚಾರ ಎಸಗಿದ್ದಾನೆ ಎಂದು ಸೇನಾ ನೇಮಕಾತಿಗೆ ತಯಾರಿ ನಡೆಸುತ್ತಿದ್ದ ಯುವತಿ ಆರೋಪಿಸಿದ್ದಾರೆ. ಇಂದಾರಾ ಮತ್ತು ಡಿಯೋರಿಯಾ ರೈಲು ನಿಲ್ದಾಣಗಳ ನಡುವೆ...

ನಾನು ಭಾರತಕ್ಕೆ ಯಾವಾಗ ಹಿಂತಿರುಗುತ್ತೇನೆಂದು ಹೇಳಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌ಗೆ ತಿಳಿಸಿದ ಮಲ್ಯ

ವಂಚನೆ ಮತ್ತು ಹಣ ವರ್ಗಾವಣೆಯ ಹಲವಾರು ಪ್ರಕರಣಗಳನ್ನು ಎದುರಿಸುತ್ತಿರುವ, ದೇಶದಿಂದ ಪರಾರಿಯಾಗಿರುವ ಉದ್ಯಮಿ ವಿಜಯ್ ಮಲ್ಯ, "ಯುಕೆ ತೊರೆಯುವುದನ್ನು ನನಗೆ ಕಾನೂನುಬದ್ಧವಾಗಿ ನಿಷೇಧಿಸಲಾಗಿರುವುದರಿಂದ ಯಾವಾಗ ಭಾರತಕ್ಕೆ ಹಿಂತಿರುಗುತ್ತೇನೆ ಎಂದು ಹೇಳಲು ಸಾಧ್ಯವಿಲ್ಲ" ಎಂದು...

ಕಾಂಗ್ರೆಸ್‌ನಲ್ಲಿದ್ದಾಗ ನಾನು ಮುಖ್ಯಮಂತ್ರಿ ಆಗದಂತೆ ತಡೆದಿದ್ದು ರಾಹುಲ್ ಗಾಂಧಿ : ಅಸ್ಸಾಂ ಸಿಎಂ ಹಿಮಂತ ಬಿಸ್ವಾ ಶರ್ಮಾ

ಕಾಂಗ್ರೆಸ್‌ನಲ್ಲಿದ್ದಾಗ ನಾನು ಮುಖ್ಯಮಂತ್ರಿಯಾಗದಂತೆ ರಾಹುಲ್ ಗಾಂಧಿ ತಡೆದಿದ್ದಾರೆ ಎಂದು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಮಂಗಳವಾರ (ಫೆ.17) ಆರೋಪಿಸಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, "2014 ರಲ್ಲಿ ಅಂದಿನ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ...

ಮಮತಾ ಬ್ಯಾನರ್ಜಿ ವಿರುದ್ಧ ಇಡಿ ಅರ್ಜಿ: ಮಾರ್ಚ್ 18ಕ್ಕೆ ವಿಚಾರಣೆ ಮುಂದೂಡಿಕೆ

ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಹಾಗೂ ಇತರರ ವಿರುದ್ಧದ ಐ-ಪ್ಯಾಕ್ ಕಚೇರಿ ಶೋಧಕ್ಕೆ ಸಂಬಂಧಿಸಿದ ಪ್ರಕರಣದ ವಿಚಾರಣೆಯ ಸಂದರ್ಭದಲ್ಲಿ, ಕೇಂದ್ರ ಜಾರಿ ನಿರ್ದೇಶನಾಲಯದ (ಇಡಿ) ಪರವಾಗಿ ಹೆಚ್ಚುವರಿ ಸಾಲಿಸಿಟರ್ ಜನರಲ್ ಎಸ್‌ವಿ...