Homeಮುಖಪುಟಎಲೆಮರೆ-2: `ಲೋಕದ ಸುಕ್ಕುಗಳ ಇಸ್ತ್ರಿ ಮಾಡುವ ಕವಿ' - ಎಚ್‌.ನಾಗೇಂದ್ರಪ್ಪ..

ಎಲೆಮರೆ-2: `ಲೋಕದ ಸುಕ್ಕುಗಳ ಇಸ್ತ್ರಿ ಮಾಡುವ ಕವಿ’ – ಎಚ್‌.ನಾಗೇಂದ್ರಪ್ಪ..

ಒಬ್ಬ ಕವಿಯಾಗಿ ನಾಗೇಂದ್ರಪ್ಪ ಲೋಕದ ಗಾಯಗಳಿಗೆ ಮುಲಾಮು ಹುಡುಕುವಾಗ ಆಯ್ಕೆ ಮಾಡಿಕೊಳ್ಳುವುದು ಬುದ್ಧ ಬಸವ ಅಂಬೇಡ್ಕರ್ ಜ್ಯೋತಿಬಾಪುಲೆ ಗಾಂಧಿ ಮೊದಲಾದವರನ್ನು...

- Advertisement -
- Advertisement -

ಚಳ್ಳಕೆರೆಯ ವಿಠ್ಠಲನಗರದಲ್ಲಿ ಇಸ್ತ್ರಿ ಮಾಡುವ ಪೆಟ್ಟಿಗೆ ಅಂಗಡಿಯಲ್ಲೇ ಪುಸ್ತಕಗಳನ್ನು ನೀಟಾಗಿ ಒತ್ತರಿಸಿಟ್ಟು ಓದುಬರಹ ಮಾಡುವ ಜನಪದ ಕವಿ ಪಗಡಲಬಂಡೆ ಹೆಚ್. ನಾಗೇಂದ್ರಪ್ಪ. ಆಶುಕವಿ, ಸ್ವರಚಿತ ಕವಿತೆಗಳನ್ನು ಹಾಡಿಕೆ ಮೂಲಕ ಜನರಿಗೆ ತಲುಪಿಸುವಾತ. ಬಿ.ಎ ಪದವಿಯಲ್ಲಿ ಕನ್ನಡ ಮೇಜರ್ ಓದಿ ಕನ್ನಡ ಎಂ.ಎ ಸ್ನಾತಕೋತ್ತರ ಪದವಿ ಕನಸಿದ್ದರೂ ಮಾಡಲಾಗದೆ ಓದನ್ನು ನಿಲ್ಲಿಸಿದರು. ನಂತರ ಖಾಸಗಿ ಸಂಸ್ಥೆಯೊಂದರಲ್ಲಿ ಸಂಬಳವಿಲ್ಲದೆ ದುಡಿದು ಕೆಟ್ಟ ಅನುಭವದೊಂದಿಗೆ ವೃತ್ತಿ ಕಸಬು ಇಸ್ತ್ರಿಯ ಕೈಹಿಡಿದು, ಕಾಯಕದ ಜತೆ ನುಡಿ ವ್ಯವಸಾಯ ನಡೆಸಿದ್ದಾರೆ. ತಾರುಣ್ಯದಲ್ಲಿ ಅತ್ಯುತ್ತಮ ಕ್ರೀಡಾಪಟು. ಕುಸ್ತಿ, ಕಬಡ್ಡಿ, ರನ್ನಿಂಗ್ ರೇಸಲ್ಲಿ ಕಾಲೇಜಿಗೆ ಹೆಸರು ತಂದಾತ. ನಂತರದ ದಿನಗಳಲ್ಲಿ ಕಲೆಯತ್ತ ಹೊರಳಿ ಭಜನೆ, ಹಾಡಿಕೆ, ತತ್ವಪದ, ಏಕಪಾತ್ರಾಭಿನಯ, ದೊಡ್ಡಾಟ ಸಣ್ಣಾಟ ಹೀಗೆ ಬಹುಮುಖ ಪ್ರತಿಭೆಯಾಗಿ ರೂಪುಗೊಂಡರು.

ನಾಗೇಂದ್ರಪ್ಪ ಒಬ್ಬ ಜನಪದ ಕವಿ. ಹಾಗಾಗಿ ಇವರನ್ನು ಇತರೆ ಶಿಷ್ಟಕವಿಗಳ ಜತೆ ಹೋಲಿಸಲಾಗದು. ಅವರ ಕವಿತೆಗಳಲ್ಲಿ ತೀವ್ರವಾದ ರೂಪಕಗಳಾಗಲಿ, ಗಂಭೀರ ಶೋಧವಾಗಲಿ ಕಾಣುವುದಿಲ್ಲ. ಬದಲಾಗಿ ತನ್ನ ಸುತ್ತಮುತ್ತಣ ಯಕಶ್ಚಿತ್ ಎನ್ನುವಂತಹ ಸಂಗತಿಗಳನ್ನು ಆಯ್ದು ಅವುಗಳನ್ನು ಜನÀಪರವಾದ ಕೋರಿಕೆ, ದುಃಖ, ಅಸಹಾಯಕತೆ, ಪ್ರೀತಿ, ಸ್ನೇಹ, ಮೆಚ್ಚುಗೆ, ಬಂಧುತ್ವದಂತಹ ಭಾವನೆಗಳ ಜತೆ ಕಟ್ಟಿದ್ದಾರೆ. ಹೀಗೆ ದಿನದಿನದ ವಿದ್ಯಮಾನಗಳೇ ನಾಗೇಂದ್ರಪ್ಪನ ಕವಿತ್ವದಲ್ಲಿ ಹಾಡುಗಳಾಗಿವೆ. ಈ ಕಾರಣಕ್ಕೆ ಕವಿ ಬೇಂದ್ರೆ ನನಗೆ ಇಷ್ಟ ಎನ್ನುತ್ತಾರೆ.

ಚಳ್ಳಕೆರೆ ಭಾಗ ಕರ್ನಾಟಕದಲ್ಲಿಯೇ ಅತಿ ಕಡಿಮೆ ಮಳೆಬೀಳುವ ಪ್ರದೇಶ. ಹಾಗಾಗಿ ಮಳೆಯನ್ನು ನಂಬಿ ಬಿತ್ತನೆ ಮಾಡಿದ ರೈತರು ಹೆಚ್ಚಾಗಿ ಕೈಸುಟ್ಟುಕೊಳ್ಳುವುದೇ ಹೆಚ್ಚು. ಈ ಸಂಗತಿಯು ಕವಿಯನ್ನು ಬಹುವಾಗಿ ಕಾಡಿದೆ. ಈ ಕವಿತೆಗಳಲ್ಲಿ ರೈತ ಹೊಲ ಮಳೆ ಮೋಡ ಕುರಿತ ರೂಪಕಗಳು ಮತ್ತೆ ಮತ್ತೆ ಮರುಕಳಿಸಿವೆ. ಅಂತೆಯೇ ಮಳೆ ಕರೆಯುವ ಮೂರ್ನಾಲ್ಕು ಪದ್ಯಗಳಿವೆ. `ಮುನಿದೆ ಏಕೋ ಮಳೆರಾಯ’ ಎನ್ನುವ ಪದ್ಯದಲ್ಲಿ `ಉತ್ತಿದರು ಬಿತ್ತಿದರು ಕತ್ತೆತ್ತಿ ನೋಡಿ/ ಗೋಗರೆದರೂ ಕರಗಲಿಲ್ಲ/ ವರುಣ ದೇವನೆದೆ’ ಎನ್ನುತ್ತಾರೆ.

`ಲೋಕದ ಸುಕ್ಕುಗಳ ಇಸ್ತ್ರಿ ಮಾಡುವ ಕಾಯಕದಲಿ’ ಕವಿತೆ ಗಮನ ಸೆಳೆವ ಪದ್ಯ. ನಾಗೇಂದ್ರಪ್ಪ ಸ್ವತಃ ಮಡಿವಾಳ ಸಮುದಾಯಕ್ಕೆ ಸೇರಿದಾತ. ಜಗದ ಬಟ್ಟೆಗಳ ಮಡಿಮಾಡಿಕೊಡುವ ಕುಲಕಸಬನ್ನು ಮಾಡಿದಾತ. ಈಗಲೂ ಇಸ್ತ್ರಿ ಅಂಗಡಿಯಲ್ಲಿ ಲೋಕದ ಬಟ್ಟೆಗಳ ಗರಿಗರಿಯಾಗಿಸುವಾತ. ಇಂತಹ ಸಮುದಾಯದ ಅನುಭವಗಳನ್ನು ನಾಗೇಂದ್ರಪ್ಪ ತುಂಬಾ ಸೂಕ್ಷ್ಮವಾಗಿ ಹಿಡಿದಿದ್ದಾರೆ. `ಇದ್ದಿಲು ನಿಗಿನಿಗಿ ಹೊಳೆದು/ಹೊಟ್ಟೆ ಬಟ್ಟೆ ತೊಡಿಸಿ/ಸ್ಫೂರ್ತಿ ನೀಡಿತು/ಬೂದಿಮುಚ್ಚಿದ ಕೆಂಡವಿದ್ದು/ ಬದುಕಿನ ನೆರವಿನ ತಂಗಾಳಿ ಬೀಸಿದಾಗ ಮತ್ತೆ ಪ್ರಜ್ವಲಿಸಿತು/ ಅಗುಳಿನ ಗಳಿಗೆಯ ಚೀಲ ತುಂಬಿ ನಿದ್ರಿಸಿತು’ ಎನ್ನುತ್ತಾರೆ. ಅಂತೆಯೇ ಉಳ್ಳವರ ಬಟ್ಟೆಗಳನ್ನು ಇಸ್ತ್ರಿ ಮಾಡುವಾಗ ಕವಿ ಸಿರಿವಂತಿಕೆಯ ಮೇಲಿನ ಸಿಟ್ಟನ್ನು ತನ್ನ ಕಾಯಕದಲ್ಲಿ ದಾಟಿಸಿ ಹಗುರಾಗುವಂತಿದೆ. ಹಾಗಾಗಿಯೇ `ಜುಬ್ಬದ ದಿಬ್ಬ ನಿದ್ದೆಯ ಕೆಡಿಸಿ/ಸೊಕ್ಕಿದ ಸುಕ್ಕು ಕೊಬ್ಬನು ಕರಗಿಸಿ/ ಹಾಸಿಗೆ ಹಿಡಿಸಿತು/ ಆಶ್ರಯ ತಪ್ಪಿದ ಪ್ರತಿಭೆ/ತರಗೆಲೆಯಾಗಿ/ಕಮರಿ ಧೂಳಾಯಿತು’ ಎನ್ನುತ್ತಾರೆ. ಮುಂದುವರಿದು `ಲೋಕದ ಸುಕ್ಕುಗಳ/ಇಸ್ತ್ರಿ ಮಾಡುವ ಕಾಯಕದಲಿ/ ನಾನು ನನ್ನವರು/ ಸುಟ್ಟುಕೊಳ್ಳುತ್ತಲೇ/ ಗಟ್ಟಿಯಾಗುತ್ತಿದ್ದೇವೆ/ ಬದುಕೆಂಬ ಇಟ್ಟಿಗೆ ಭಟ್ಟಿಯಲಿ’ ಎಂದು ಬದುಕಿಗೆ ಚೈತನ್ಯ ಪಡೆಯುತ್ತಾರೆ.

ನಾಗೇಂದ್ರಪ್ಪ ಜನಪದ ಕವಿಯಾಗಿಯೂ ಆಧುನಿಕ ವೈಚಾರಿಕತೆ ಇವರ ಕವಿತೆಗಳಲ್ಲಿ ಹೆಣೆದುಕೊಂಡಿದೆ. ಈ ಕಾರಣಕ್ಕೆ ಇಲ್ಲಿ ಜನರ ಕಷ್ಟನಷ್ಟಗಳನ್ನು ಕವಿತೆಯನ್ನಾಗಿಸುತ್ತಲೇ ಇವುಗಳಿಂದ ಹೊರಬರಬಹುದಾದ ದಾರಿಗಳ ಬಗ್ಗೆಯೂ ಜಾಗೃತರಾಗಿದ್ದಾರೆ. ಈ ಸಂಕಲನದ `ಕ್ರಾಂತಿಗೀತೆ’ ಎನ್ನುವ ಕವಿತೆ ಗಮನ ಸೆಳೆಯುವಂತಿದೆ. `ನೆಲ ಅಗೆದರು ಮರ ಕಡಿದರು/ ಅದಿರು ತೆಗೆದರು ಮರಳು ಮಾರಿದರು/ಕನ್ನಡಮ್ಮನ ಬಂಜೆ ಮಾಡಿದರು/ಖಜಾನೆ ಲೂಟಿ ಹೊಡೆದರು’ ಎಂದು ವಾಸ್ತವದ ಕನ್ನಡಮ್ಮನ ನೆನೆಯುತ್ತಾರೆ. ಅಂತೆಯೇ `ಕ್ರಾಂತಿ ಕಹಳೆ ಮೊಳಗಲಿ/ಶಾಂತಿ ಬೀಡು ಆಗಲಿ/ಏಳಿರಿ ಸಿಡಿದೇಳಿರಿ’ ಎಂದು ಕರೆಕೊಡುತ್ತಾರೆ. ಇಷ್ಟರಮಟ್ಟಿಗೆ ಕವಿ ವರ್ತಮಾನವನ್ನು ಎಚ್ಚರದ ಕಣ್ಣಿಂದ ಗಮನಿಸಿದ್ದಾರೆ.

ಒಬ್ಬ ಕವಿಯಾಗಿ ನಾಗೇಂದ್ರಪ್ಪ ಲೋಕದ ಗಾಯಗಳಿಗೆ ಮುಲಾಮು ಹುಡುಕುವಾಗ ಆಯ್ಕೆ ಮಾಡಿಕೊಳ್ಳುವುದು ಬುದ್ಧ ಬಸವ ಅಂಬೇಡ್ಕರ್ ಜ್ಯೋತಿಬಾಪುಲೆ ಗಾಂಧಿ ಮೊದಲಾದವರನ್ನು ಎನ್ನುವುದು ಗಮನ ಸೆಳೆಯುತ್ತದೆ. ಹಾಗಾಗಿ ಇಲ್ಲಿ ಕವಿತೆಗಳನ್ನು ಕಟ್ಟುವಲ್ಲಿ ವಾಚ್ಯವಾದರೂ ಈ ಕವಿಗೆ ಕವಿತೆಯಲ್ಲಿ ತಾನು ಹೇಳಬೇಕಿರುವುದು ಏನನ್ನು ಮತ್ತು ಯಾರ ಧ್ವನಿಯನ್ನು ಎನ್ನುವ ಸ್ಪಷ್ಟತೆ ಇದೆ. ಹಾಗಾಗಿಯೇ ನೇಪಾಳದ ಭೂಕಂಪಕ್ಕೆ ಕಣ್ಣೀರಾಗುತ್ತಾರೆ. ರೈತರ ಬವಣೆಗೆ ಕರಗುತ್ತಾರೆ. ನಾಗೇಂದ್ರಪ್ಪ ಶಾಲೆಗಳಿಗೆ ತೆರಳಿ ಕವಿತೆಗಳನ್ನು ಹಾಡಿ ಮಕ್ಕಳನ್ನು ಖುಷಿಗೊಳಿಸುತ್ತಾರೆ. ಆ ಸಂದರ್ಭಗಳಲ್ಲಿ ಬಯಲಾಟ, ಏಕಪಾತ್ರಾಭಿನಯ ಮೊದಲಾದ ಕಲಾರೂಪಗಳಲ್ಲಿಯೂ ಅಭಿನಯಿಸಿ, ಕವಿತೆಯನ್ನು ವಾಚಿಸಿ ಕಾವ್ಯದ ಹಲವು ಸಾಧ್ಯತೆಗಳನ್ನು ಪ್ರಯೋಗಿಸಿದ್ದಾರೆ. ಹೀಗೆ ಜೀವಪರವಾಗಿ ತುಡಿಯುವ ಕವಿ ಇನ್ನಷ್ಟು ಗಟ್ಟಿಯಾಗಿ ಕವಿತೆಗಳನ್ನು ಕಟ್ಟಲಿ ಎಂದು ಆಶಿಸುವೆ..

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮುಂಗಾರು ಮಳೆ ಕೊರತೆ: ಇಡೀ ದೇಶದಲ್ಲಿ ಆತಂಕದ ಕಾರ್ಮೋಡ

ಭಾರತದ ಆಕಾಶದಲ್ಲಿ ಸದ್ಯ ಮೂಡುತ್ತಿರುವ ಉಪಗ್ರಹ ಚಿತ್ರಗಳು ಮತ್ತು ಹವಾಮಾನ ಇಲಾಖೆಯ ದತ್ತಾಂಶಗಳು ದೇಶಕ್ಕೆ ದೊಡ್ಡ ಗಂಡಾಂತರದ ಮುನ್ಸೂಚನೆ ನೀಡುತ್ತಿವೆ. ಕೃಷಿ ಚಟುವಟಿಕೆಗಳ ಅತ್ಯಂತ ನಿರ್ಣಾಯಕ ಅವಧಿಯಾದ ಜೂನ್ ತಿಂಗಳಲ್ಲೇ ಮುಂಗಾರು ಮಳೆ...

ನೀಟ್ ಪರೀಕ್ಷೆ ಪದೇ ಪದೇ ಬರೆಯುವಂತೆ ಮಾಡಿದ್ದು ಯಾರು? : ಬಿ.ಕೆ ಹರಿಪ್ರಸಾದ್

ನೀಟ್ ಪರೀಕ್ಷೆ ಪದೇ ಪದೇ ಬರೆಯುವಂತೆ ಮಾಡಿದ್ದು ಯಾರು? ಬಿಜೆಪಿ ನಾಯಕರ ಆರೋಪಗಳನ್ನು ನೋಡಿದರೆ, ತಪ್ಪು ಮಾಡಿದವರೇ ಉಪದೇಶ ಮಾಡುವ ಸ್ಥಿತಿಗೆ ಬಂದಂತಿದೆ ಎಂದು ಕೆಪಿಸಿಸಿ ನೂತನ ಅಧ್ಯಕ್ಷ ಬಿ.ಕೆ ಹರಿಪ್ರಸಾದ್ ಹೇಳಿದರು....

ಎಸ್‌ಐಆರ್‌ನಲ್ಲಿ ಕೈಬಿಟ್ಟ ವ್ಯಕ್ತಿ ಕುರಿತು ಮಹತ್ವದ ಹೇಳಿಕೆ ನೀಡಿದ ಸುಪ್ರೀಂ ಕೋರ್ಟ್

ವಿಶೇಷ ತೀವ್ರ ಪರಿಷ್ಕರಣೆಯ (Special Intensive Revision) ಸಂದರ್ಭದಲ್ಲಿ ಮತದಾರರ ಪಟ್ಟಿಯಿಂದ ಹೆಸರು ಕೈಬಿಟ್ಟಿರುವ ಅಥವಾ ಹೊರಗಿಟ್ಟಿರುವ ಬಂಗಾಳದ ಮುರ್ಷಿದಾಬಾದ್‌ನ 75 ವರ್ಷದ ವಕೀಲರೊಬ್ಬರು "ಪಶ್ಚಿಮ ಬಂಗಾಳದ ನಿಜವಾದ ಮತ್ತು ವಿಶ್ವಾಸಾರ್ಹ ನಾಗರಿಕ" ನಂತೆ...

ನೀಟ್ ಅಕ್ರಮ, ವ್ಯವಸ್ಥೆಯ ವೈಫಲ್ಯಕ್ಕೆ ಮತ್ತೊಂದು ಬಲಿ: ಮರು ಪರೀಕ್ಷೆ ಹಿಂದಿನ ದಿನವೇ ಆತ್ಮಹತ್ಯೆಗೆ ಶರಣಾದ ಪ್ರತಿಭಾವಂತ ವಿದ್ಯಾರ್ಥಿನಿ 

ಹೈದರಾಬಾದ್: ದೇಶದಲ್ಲಿ ವೈದ್ಯಕೀಯ ಶಿಕ್ಷಣದ ಪ್ರವೇಶಾತಿಗಾಗಿ ನಡೆಯುವ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆಯ (NEET) ಸುತ್ತ ಹಬ್ಬಿರುವ ಅಕ್ರಮಗಳ ಜಾಲ ಮತ್ತು ವ್ಯವಸ್ಥೆಯ ನಿರಂತರ ಗೊಂದಲಗಳು ಮತ್ತೊಂದು ಯುವ ಜೀವವನ್ನು ಬಲಿಪಡೆದಿವೆ.  ಜೂನ್...

ಸತತ ಮೂರನೇ ದಿನವೂ ಜಂತರ್ ಮಂತರ್‌ನಲ್ಲಿ ಮುಂದುವರೆದ ಸಿಜೆಪಿ ಪ್ರತಿಭಟನೆ; ಪ್ರಧಾನ್ ರಾಜೀನಾಮೆಗೆ ಪಟ್ಟು

ಪರೀಕ್ಷಾ ಅಕ್ರಮಗಳು ಮತ್ತು ಮೇ 3 ರ ನೀಟ್ ಪತ್ರಿಕೆ ಸೋರಿಕೆಯ ವಿರುದ್ಧ ತಮ್ಮ ಪ್ರತಿಭಟನೆಯನ್ನು ಮುಂದುವರಿಸಿರುವ ಜಿರಳೆ ಜನತಾ ಪಕ್ಷ (ಸಿಜೆಪಿ) ಸೋಮವಾರ ಸತತ ಮೂರನೇ ದಿನವೂ ಜಂತರ್ ಮಂತರ್‌ನಲ್ಲಿಯೇ ಕುಳಿತಿದ್ದಾರೆ. ಶನಿವಾರ...

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...