Homeಅಂಕಣಗಳುಇದು ಕೇವಲ ಉಪ ಚುನಾವಣೆಯಲ್ಲ, ನೈತಿಕ ರಾಜಕಾರಣ ಉಳಿಸುವ ಗುರುತರ ಜವಾಬ್ಧಾರಿ!

ಇದು ಕೇವಲ ಉಪ ಚುನಾವಣೆಯಲ್ಲ, ನೈತಿಕ ರಾಜಕಾರಣ ಉಳಿಸುವ ಗುರುತರ ಜವಾಬ್ಧಾರಿ!

- Advertisement -
- Advertisement -

ಸರ್ವೋಚ್ಚ ನ್ಯಾಯಾಲಯ ಸ್ಪೀಕರ್ ಅವರಿಂದ ಶಿಕ್ಷೆಗೊಳಗಾದ 15 ಶಾಸಕರು ಉಪಚುನಾವಣೆಗೆ ನಿಲ್ಲಬಹುದೆಂದು ತೀರ್ಪು ನೀಡಿದೆ. ಸ್ಪೀಕರ್ ಅವರು ನೀಡಿದ್ದ ತೀರ್ಪನ್ನು ನ್ಯಾಯಾಧೀಶರು ಅಂಗೀಕರಿಸಿದರಾದರೂ ಶಿಕ್ಷೆಯ ಅವಧಿಯನ್ನು ತೀರ್ಮಾನಿಸುವ ಹಕ್ಕು ಅವರಿಗಿಲ್ಲ ಎಂದು ಹೇಳಿದೆ. ಒಟ್ಟಿನಲ್ಲಿ ಹೇಳುವುದಾದರೆ ಈ ಶಾಸಕರು ಶಿಕ್ಷಾರ್ಹರು ಆದರೆ Technical ground ಮೇಲೆ ಉಪಚುನಾವಣೆಗೆ ನಿಲ್ಲಲು ಅರ್ಹರು ಎಂದು ಹೇಳಿದ ಹಾಗಾಯಿತು. ಅನೇಕ ಸಾರಿ ಕಾನೂನಿಗನುಸಾರ ಸರಿ ಎನಿಸಿದ್ದು ನೈತಿಕವಾಗಿ ತಪ್ಪಾಗಿರುತ್ತದೆ. ಈಗ ಆಗಿರುವುದೂ ಅದೇ. ನ್ಯಾಯಾಧೀಶರು ತೀರ್ಪು ನೀಡುವ ಸಮಯದಲ್ಲಿ `ನೈತಿಕತೆ ಇಲ್ಲದವರನ್ನು ರಾಜಕೀಯ ಪಕ್ಷಗಳು ಪ್ರೋತ್ಸಾಹಿಸುತ್ತಿವೆ, ಅದರ ಫಲವನ್ನು ಅನುಭವಿಸುತ್ತವೆ’ ಎಂದು ಮಾರ್ಮಿಕವಾಗಿ ನುಡಿದಿದ್ದಾರೆ.

ಈ 15 ಶಾಸಕರು ಸಮಯಸಾಧಕರು. ಮಂತ್ರಿ ಪದವಿ ಸಿಗಲಿಲ್ಲವೆಂದು ಗುಂಪುಗಾರಿಕೆ ಮಾಡುವವರು. ಪಿತೂರಿ ಮಾಡುವವರು. ಇವರನ್ನು ಬಳಸಿಕೊಂಡು ಸಮ್ಮಿಶ್ರ ಸರಕಾರವನ್ನು ಕೆಡವಿ ತಾವು ಅಧಿಕಾರಕ್ಕೆ ಬರುವ ಹುನ್ನಾರ ಭಾರತೀಯ ಜನತಾ ಪಕ್ಷದ್ದಾಗಿತ್ತು.

ಮುಖ್ಯಮಂತ್ರಿ ಯಡಿಯೂರಪ್ಪನವರು ಪಕ್ಷದ ಕೋರ್ ಕಮಿಟಿಯ ಸಭೆಯಲ್ಲಿ ಹೇಳಿದರೆನ್ನಲಾದ ಮಾತುಗಳೇ ಇದಕ್ಕೆ ಸಾಕ್ಷಿ. ಕಾಂಗ್ರೆಸ್ ಮತ್ತು ಜೆಡಿಎಸ್‍ನ ಶಾಸಕ ಸ್ಥಾನಗಳಿಗೆ ರಾಜೀನಾಮೆ ನೀಡಿದವರನ್ನು ಬಿಜೆಪಿ ಶಾಸಕರಾದ ಡಾ. ಅಶ್ವತ್‍ನಾರಾಯಣ್ ಅವರ ಉಸ್ತುವಾರಿಯಲ್ಲಿ ಮುಂಬೈನ ಒಂದು ಹೊಟೇಲ್‍ಗೆ ಕರೆದುಕೊಂಡು ಹೋಗಿ ರೆಸಾರ್ಟ್ ರಾಜಕೀಯ ಮಾಡಿಸಿದ್ದು, ಅವರನ್ನು ಪಕ್ಷಾಂತರ ಮಾಡುವಂತೆ ಪ್ರೇರಣೆ ನೀಡಿದ್ದು ಬಿಜೆಪಿಯ ರಾಷ್ಟ್ರಾಧ್ಯಕ್ಷ ಅಮಿತ್‍ಷಾರವರು, ಹಾಗಾಗಿ ನಾವು ಅನರ್ಹ ಶಾಸಕರ ತ್ಯಾಗವನ್ನು ಸ್ಮರಿಸಬೇಕು ಎಂಬುದು ಅವರ ಮಾತಿನ ತಾತ್ಪರ್ಯ.

ಯಡಿಯೂರಪ್ಪನವರ ನೇತೃತ್ವದಲ್ಲಿ ಸಮ್ಮಿಶ್ರ ಸರ್ಕಾರದ ವಿರುದ್ಧ ಅವಿಶ್ವಾಸ ನಿರ್ಣಯವನ್ನು ಮಂಡಿಸಲಾಗಿತ್ತು. ಈ ಅಶಿಸ್ತಿನ ಶಾಸಕರು ಶಾಸನಸಭೆಗೆ ಸಾಮೂಹಿಕವಾಗಿ ರಾಜೀನಾಮೆ ನೀಡಿದ್ದರಿಂದ ಬಿಜೆಪಿ ಶಾಸಕರ ಸಂಖ್ಯಾಬಲ ಹೆಚ್ಚಾಯಿತು. ಈ ಕಾರಣದಿಂದ ಸಮ್ಮಿಶ್ರ ಸರ್ಕಾರ ಪತನವಾಗುವುದು ಅನಿವಾರ್ಯವಾಯ್ತು. ಬಿಜೆಪಿ ಅಧಿಕಾರಕ್ಕೆ ಬಂತು.

ಈ 15 ಶಾಸಕರು ತಮ್ಮ ಅನರ್ಹತೆ ತೆಗೆದುಹಾಕಬೇಕೆಂದು ಸರ್ವೋಚ್ಚ ನ್ಯಾಯಾಲಯಕ್ಕೆ ಮೊರೆ ಹೋದರು. ಅವರಿಗೆಲ್ಲ ಈಗ ಉಪಚುನಾವಣೆಗೆ ನಿಲ್ಲಲು ನ್ಯಾಯಾಲಯ ಅವಕಾಶ ಮಾಡಿಕೊಟ್ಟಿದೆ. ಅವರೆಲ್ಲ ಪಿತೂರಿ ನಡೆಸಿದಾಗಲೇ ತೀರ್ಮಾನವಾಗಿದ್ದಂತೆ ಈಗ ಬಿಜೆಪಿ ಸದಸ್ಯರಾಗಿ ನೋಂದಾಯಿಸಿಕೊಂಡಿದ್ದಾರೆ. ಅವರಲ್ಲಿ 13 ಮಂದಿಗೆ ಬಿಜೆಪಿ ಉಪಚುನಾವಣೆಯಲ್ಲಿ ಬಿಜೆಪಿ ಪರವಾಗಿ ಸ್ಪರ್ಧಿಸಲು ಅವಕಾಶ ಮಾಡಿಕೊಡಲಾಗಿದೆ.

ಈ 13 ಮಂದಿಯ ಭವಿಷ್ಯವನ್ನು ನಿರ್ಧರಿಸುವ ಜವಾಬ್ದಾರಿ ಈಗ ಮತದಾರರ ಕೋರ್ಟಿಗೆ ವರ್ಗಾವಣೆಯಾಗಿದೆ.
ಅನೇಕ ಚುನಾವಣೆಗಳನ್ನು ಅರಿತಿರುವ ನನಗೆ ಹೀಗೆನಿಸುತ್ತಿದೆ: ಮತದಾರರನ್ನು ರಾಜಕೀಯ ಪಕ್ಷಗಳು ತಮ್ಮ ಸ್ವಾರ್ಥಕ್ಕಾಗಿ ದುರುಪಯೋಗಮಾಡಿಕೊಳ್ಳುತ್ತವೆ. ಹಣ ಹೆಂಡಕೊಟ್ಟು ಅವರ ಮತವನ್ನು ಕೊಳ್ಳುತ್ತವೆ. 5, 10ರೂ.ಗಳಿಂದ ಆರಂಭವಾದ ಮತದಾರರ ಕೊಳ್ಳುವಿಕೆ ಈಗ ಒಂದು ಮತಕ್ಕೆ 500, 1000ಕ್ಕೆ ಏರಿದೆ. ಇಷ್ಟೆಲ್ಲ ಚುನಾವಣಾ ಭ್ರಷ್ಟಾಚಾರ ಇದ್ದಾಗ್ಯೂ ಕೆಲವೊಮ್ಮೆ ಅನಿರೀಕ್ಷಿತ ಫಲಿತಾಂಶ ಹೊರಬರುವುದನ್ನು ನಾನು ಕಂಡಿದ್ದೇನೆ. ಮತದಾರರೆಲ್ಲ ಮಾತನಾಡಿಕೊಂಡಂತೆ ಕಾಣುವ ಈ ಫಲಿತಾಂಶ ನೋಡಿದಾಗ ಮತದಾರರೆಲ್ಲರೂ ಸಾರಾಸಗಟಾಗಿ ಭ್ರಷ್ಟರು ಎಂದು ಹೇಳಲು ಬರುವುದಿಲ್ಲ.

ಉದಾಹರಣೆಗೆ ಮತದಾತ ಒಂದೇ ಪಕ್ಷಕ್ಕೆ ಪದೇಪದೇ ಮತಹಾಕಿ ನೋಡುತ್ತಾನೆ. ಆ ಪಕ್ಷ ತನ್ನ ನಿರೀಕ್ಷೆಯಂತೆ ನಡೆದುಕೊಳ್ಳುತ್ತಿಲ್ಲ ಆ ಪಕ್ಷದ ಶಾಸಕರು ಅನೀತಿವಂತರು, ಭ್ರಷ್ಟರು, ಸ್ವಾರ್ಥಿಗಳು ಎಂದು ಕಂಡುಬಂದಾಗ ಮತದಾರರೆಲ್ಲ ಮಾತನಾಡಿಕೊಂಡಂತೆ ಆ ಪಕ್ಷಕ್ಕೆ ಸೋಲುಣಿಸುತ್ತಾರೆ. ಮತದಾರರಿಗೆ ಚುನಾವಣೆಯಲ್ಲಿ ಸ್ಪರ್ಧಿಸಿದವರಲ್ಲೇ ಯಾರೋ ಒಬ್ಬರಿಗೆ ಮಾತ್ರ ಮತ ನೀಡುವ ಅನಿವಾರ್ಯತೆ ಇರುವುದರಿಂದ ಮತದಾರ ಇನ್ನೊಂದು ಭ್ರಷ್ಟ ಪಕ್ಷದ ಅಭ್ಯರ್ಥಿಗೆ ಮತಹಾಕಿ ಗೆಲ್ಲಿಸುತ್ತಾರೆ. ಕಾಂಗ್ರೆಸ್ 50 ವರ್ಷಕ್ಕೆ ಮೇಲ್ಪಟ್ಟು ಸಕ್ರಿಯ ಚುನಾವಣೆಯಲ್ಲಿ ಗೆದ್ದುಬರುತ್ತಿತ್ತು. ಸ್ವಾತಂತ್ರ್ಯ ಬಂದ ಹೊಸದರಲ್ಲಿ ಸ್ವಾತಂತ್ರ್ಯಕ್ಕೆ ಹೋರಾಟ ಮಾಡಿದ ನಿಜ ಜನಸೇವಕರು ಹೆಚ್ಚಾಗಿದ್ದರು. ಅವರು ಚಾರಿತ್ರ್ಯವಂತರಾಗಿದ್ದರು, ಜನಸಾಮಾನ್ಯರ ಸಮಸ್ಯೆಗೆ ಸ್ಪಂದಿಸುವಂತವರಾಗಿದ್ದರು. ಹಣವಿಲ್ಲದಿದ್ದರೂ ಗುಣವಂತರಾಗಿದ್ದರು. ಎಂತಹ ಲಕ್ಷಾಧಿಪತಿ ಇವರ ವಿರುದ್ಧವಾಗಿ ನಿಂತರೂ ಮತದಾತರು ಈ ಸ್ವಾತಂತ್ರ್ಯ ಹೋರಾಟಗಾರನಿಗೇ ತಮ್ಮ ಮತಹಾಕಿ ಗೆಲ್ಲಿಸತ್ತಿದ್ದರು. ಕಾಲಕ್ರಮದಲ್ಲಿ ಹೊಸ ತಲೆಮಾರಿನ ಜನ ಚುನಾವಣೆಗಳಲ್ಲಿ ಸ್ಪರ್ಧಿಸಲು ತೊಡಗಿದರು. ಅವರಿಗೆ ಸ್ವಾತಂತ್ರ್ಯ ಹೋರಾಟದ ಇತಿಹಾಸ ಗೊತ್ತಿಲ್ಲ, ತ್ಯಾಗ-ಬಲಿದಾನಗಳ ಪರಿಚಯವಿಲ್ಲ. ಅಪ್ಪನ ಆಸ್ತಿ ದೊರಕಿದೆ ಅದನ್ನು ಉಡಾಯಿಸುವುದು ನನ್ನ ಹಕ್ಕು ಎಂದು ಭಾವಿಸಿಕೊಂಡವರು. ಇವರ ಜೊತೆಗೆ ಅಧಿಕಾರದ ಅಮಲು ಅವರನ್ನು ಮತ್ತಷ್ಟು ಕೆಡಿಸಿತು. ಈ ಸ್ವಾರ್ಥಿಗಳು ಅಧಿಕಾರದ ಲಾಲಸೆಯಿಂದ ಪಕ್ಷಾಂತರ ಮಾಡುವ ಹವ್ಯಾಸ ಬೆಳೆಸಿಕೊಂಡರು. ಈಗ ಎಲ್ಲ ರಾಜಕೀಯ ಪಕ್ಷಗಳಲ್ಲೂ ಈ ಸ್ವಾರ್ಥಿಗಳದೇ ಪಾರುಪತ್ಯ. ಪ್ರಾಮಾಣಿಕರೂ, ನಿಸ್ವಾರ್ಥಿಗಳೂ, ಸಮಾಜಮುಖಿಗಳೂ ಆದ ಸದಸ್ಯರ ಸಂಖ್ಯೆ ಇಳಿಯುತ್ತಾ ಬಂದಿದೆ.

ಈಗ ಕೋಟ್ಯಧಿಪತಿಗಳು ನಮ್ಮ ಪ್ರತಿನಿಧಿಗಳು. ಹಣದ ಮೂಲಕ ಗೆಲ್ಲುವ ಕಲೆಯನ್ನು ಕರಗತ ಮಾಡಿಕೊಂಡಿರುವ, ಜಾತಿಯ ಬಲ ಉಳ್ಳ ಇವರು ಮಾತ್ರ ಚುನಾವಣೆಗಳಲ್ಲಿ ಈಗ ಗೆಲ್ಲುವವರು.

ಈಗ ಈ ಉಪಚುನಾವಣೆಗೆ ನಿಂತಿರುವ ಬಿಜೆಪಿಯ 13 ಉಮೇದುದಾರರೂ ಈ ಕಲ್ಯಾಣ ಗುಣಗಳನ್ನು ಹೊಂದಿದವರು! ನಾಲ್ಕಾರು ತಿಂಗಳಿಂದ ಈ ನೀತಿಗೆಟ್ಟ ಶಾಸಕರ ಹುಚ್ಚಾಟವನ್ನು ಮತದಾತರು ನೋಡುತ್ತಿದ್ದಾರೆ. ಇವರು ಪ್ರಜಾಪ್ರತಿನಿಧಿಗಳಾಗಲು ಯೋಗ್ಯರಲ್ಲ ಎಂಬುದನ್ನು ಗಮನಿಸುತ್ತಾ ಬಂದಿದ್ದಾರೆ. ಈ 13 ಕ್ಷೇತ್ರಗಳ ಮತದಾರ ಅವರಿಗೆಲ್ಲ ಪಾಠ ಕಲಿಸುವರೆಂಬ ನಂಬಿಕೆ ನನ್ನದು.
ಮುಖ್ಯಮಂತ್ರಿ ಯಡಿಯೂರಪ್ಪನವರು ನೇರವಾಗಿ ಒಬ್ಬ ಶಾಸಕರನ್ನು ಕೊಳ್ಳುವ ಪ್ರಯತ್ನ ಮಾಡಿದ ಸಿಡಿಯೊಂದಿದೆ. ಅವರ ವಿರುದ್ಧ ಒಂದು ಕಟ್ಳೆಯನ್ನು ಹೂಡಲಾಗಿದೆ.

ಈ 13 ಮಂದಿ ಭ್ರಷ್ಟ ಸ್ವಾರ್ಥಿ ಶಾಸಕರನ್ನು ಬಿಜೆಪಿಗೆ ಎಳೆಯಲು ಅವರನ್ನು ಮುಂಬಯಿನ ಹೊಟೇಲ್ ಒಂದರಲ್ಲಿ ವಾಸ್ತವ್ಯ ಮಾಡಿಸಿದ ಅಮಿತ್ ಷಾ ಅವರ ಗೇಮ್ ಕುರಿತು ಯಡಿಯೂರಪ್ಪನವರು ಬಿಜೆಪಿಯ ಕೋರ್ ಕಮಿಟಿ ಸಭೆಯಲ್ಲಿ ಮಾತನಾಡಿದರೆನ್ನಲಾದ ಧ್ವನಿಮುದ್ರಣವನ್ನು ಲಗತ್ತಿಸಿ ನ್ಯಾಯಾಲಯದಲ್ಲಿ ದೂರನ್ನಿತ್ತಿರುವ ವರದಿ ಪತ್ರಿಕೆಗಳಲ್ಲಿ ಪ್ರಕಟವಾಗಿದೆ. ಬಿಜೆಪಿ ರಾಷ್ಟ್ರಾಧ್ಯಕ್ಷರು ಮೋದಿ ಮಂತ್ರಿಮಂಡಲದಲ್ಲಿ ಗೃಹಮಂತ್ರಿಯಾಗಿರುವವರು. ಈಗ ಅವರ ಮೇಲೆ 17 ಪ್ರಜಾಪ್ರತಿನಿಧಿಗಳನ್ನು ಭ್ರಷ್ಟರಾಗಿಸಿದ ಆರೋಪ ಕೇಳಿಬಂದಿದೆ. ಮೋದಿಯವರು ಅವರ ಮೇಲೆ ಕ್ರಮಕೈಗೊಳ್ಳುತ್ತಾರಾ? ಅಷ್ಟೊಂದು ಪಾರದರ್ಶಕತೆ, ಪ್ರಾಮಾಣಿಕತೆ ಬಿಜೆಪಿ ಮತ್ತು ಅದನ್ನು ನಿಯಂತ್ರಿಸುತ್ತಿರುವ ಆರೆಸೆಸ್‍ಗಿದೆಯಾ? ಎಲ್ಲವೂ ಈ ಉಪಚುನಾವಣೆಯಲ್ಲಿ ಮತದಾರ ಕೊಡುವ ತೀರ್ಪನ್ನು ಅವಲಂಬಿಸಿದೆ. ಈಗ ನಾವು ಜಾಗೃತಗೊಳ್ಳದಿದ್ದರೆ ಭವಿಷ್ಯದಲ್ಲಿ ಇದಕ್ಕಿಂತಲೂ ಕೆಟ್ಟ ರಾಜಕೀಯ ಪ್ರಹಸನಗಳಿಗೆ ನಾವೇ ಕಾರಣೀಭೂತರಾಗುತ್ತೇವೆ. ಅಷ್ಟೇ ಅಲ್ಲ ಅಂತಹ ಪ್ರಹಸನಗಳ ಹೊರೆ ನಮ್ಮ ಮಕ್ಕಳ ಹೆಗಲೇರಲಿದೆ. ನಮಗಾಗಿ ಅಲ್ಲದಿದ್ದರೂ ನಮ್ಮ ಮುಂದಿನ ಪೀಳಿಗೆಯವರಿಗಾದರೂ ಒಂದಷ್ಟು ನೈತಿಕ ರಾಜಕಾರಣವನ್ನು ಉಳಿಸುವ ಗುರುತರವಾದ ಜವಾಬ್ಧಾರಿ ನಮ್ಮೆದುರಿಗಿದೆ. ಮತದಾರನ ತೀರ್ಪಿಗಾಗಿ ನಾನು ಆಶಾವಾದಿಯಾಗಿ ಕಾಯುತ್ತಿದ್ದೇನೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...

ಮುಂಬೈ: ಬಜೆಟ್ ಅಧಿವೇಶನದ ನಡುವೆ ವಿಧಾನ ಭವನದ ಬಳಿ ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ: ವಶಕ್ಕೆ ಪಡೆದ ಪೊಲೀಸರು

ಮುಂಬೈ: ಮಾರ್ಚ್ 11, ಬುಧವಾರ ಮಹಾರಾಷ್ಟ್ರ ವಿಧಾನ ಭವನದ ಹೊರಗೆ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿರುವುದಾಗಿ ವರದಿಯಾಗಿದೆ. ತಕ್ಷಣವೇ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದಾರೆ.  2026 ರ ಮಹಾರಾಷ್ಟ್ರ ಬಜೆಟ್ ಅಧಿವೇಶನ ವಿಧಾನ ಭವನದಲ್ಲಿ...

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿಕ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...

ತಮಿಳುನಾಡು| ಪೊಲೀಸ್ ದೌರ್ಜನ್ಯದಿಂದ ಎರಡು ತಿಂಗಳಲ್ಲಿ ನಾಲ್ವರು ದಲಿತರು ಸಾವು

ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿರುವ ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿರುವುದನ್ನು ಪ್ರತಿಬಿಂಬಿಸುವ ಆತಂಕಕಾರಿ ವಿಚಾರವೊಂದು ಮುನ್ನಲೆಗೆ ಬಂದಿದ್ದು, ಪೊಲೀಸ್ ಹಿಂಸಾಚಾರದಿಂದಾಗಿ ಎರಡು ತಿಂಗಳ ಅವಧಿಯಲ್ಲಿ ನಾಲ್ವರು ದಲಿತರು ಸಾವನ್ನಪ್ಪಿದ್ದಾರೆ. ಈ ಸಾವುಗಳಲ್ಲಿ, ಎರಡು ಪ್ರಕರಣಗಳನ್ನು...

ಪಶ್ಚಿಮ ಏಷ್ಯಾ ಸಂಘರ್ಷ| ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿದ್ದಾಗಿ ವಿಡಿಯೋ ಹಂಚಿಕೊಂಡ ಅಮೆರಿಕ ಸೇನೆ

ಪಶ್ಚಿಮ ಏಷ್ಯಾದಿಂದ ತೈಲ ರಫ್ತನ್ನು ತಡೆಯಲು ಇರಾನ್ ಪ್ರಯತ್ನಿಸುತ್ತಿರುವುದರಿಂದ ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿರುವುದಾಗಿ ಅಮೆರಿಕ ಸೇನೆ ಹೇಳಿಕೊಂಡಿದೆ.  ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ಹಿಂದೆ ಇರಾನ್ ಜಲಸಂಧಿಯಲ್ಲಿ ಗಣಿಗಳನ್ನು...

13 ವರ್ಷಗಳಿಂದ ಕೋಮಾದಲ್ಲಿರುವ ಯುವಕನ ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅನುಮತಿ

ಕಳೆದ 13 ವರ್ಷಗಳಿಂದ ಕೋಮಾದಲ್ಲಿರುವ 32 ವರ್ಷದ ಹರೀಶ್ ರಾಣಾ ಎಂಬ ಯುವಕನ ಪರೋಕ್ಷ (ನಿಷ್ಕ್ರಿಯ) ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಬುಧವಾರ (ಮಾ.11) ಅನುಮತಿ ನೀಡಿದೆ ಎಂದು livelaw.in ವರದಿ ಮಾಡಿದೆ. ದೆಹಲಿ ಮೂಲದ ಹರೀಶ್...