Homeಅಂಕಣಗಳುಇದು ಕೇವಲ ಉಪ ಚುನಾವಣೆಯಲ್ಲ, ನೈತಿಕ ರಾಜಕಾರಣ ಉಳಿಸುವ ಗುರುತರ ಜವಾಬ್ಧಾರಿ!

ಇದು ಕೇವಲ ಉಪ ಚುನಾವಣೆಯಲ್ಲ, ನೈತಿಕ ರಾಜಕಾರಣ ಉಳಿಸುವ ಗುರುತರ ಜವಾಬ್ಧಾರಿ!

- Advertisement -
- Advertisement -

ಸರ್ವೋಚ್ಚ ನ್ಯಾಯಾಲಯ ಸ್ಪೀಕರ್ ಅವರಿಂದ ಶಿಕ್ಷೆಗೊಳಗಾದ 15 ಶಾಸಕರು ಉಪಚುನಾವಣೆಗೆ ನಿಲ್ಲಬಹುದೆಂದು ತೀರ್ಪು ನೀಡಿದೆ. ಸ್ಪೀಕರ್ ಅವರು ನೀಡಿದ್ದ ತೀರ್ಪನ್ನು ನ್ಯಾಯಾಧೀಶರು ಅಂಗೀಕರಿಸಿದರಾದರೂ ಶಿಕ್ಷೆಯ ಅವಧಿಯನ್ನು ತೀರ್ಮಾನಿಸುವ ಹಕ್ಕು ಅವರಿಗಿಲ್ಲ ಎಂದು ಹೇಳಿದೆ. ಒಟ್ಟಿನಲ್ಲಿ ಹೇಳುವುದಾದರೆ ಈ ಶಾಸಕರು ಶಿಕ್ಷಾರ್ಹರು ಆದರೆ Technical ground ಮೇಲೆ ಉಪಚುನಾವಣೆಗೆ ನಿಲ್ಲಲು ಅರ್ಹರು ಎಂದು ಹೇಳಿದ ಹಾಗಾಯಿತು. ಅನೇಕ ಸಾರಿ ಕಾನೂನಿಗನುಸಾರ ಸರಿ ಎನಿಸಿದ್ದು ನೈತಿಕವಾಗಿ ತಪ್ಪಾಗಿರುತ್ತದೆ. ಈಗ ಆಗಿರುವುದೂ ಅದೇ. ನ್ಯಾಯಾಧೀಶರು ತೀರ್ಪು ನೀಡುವ ಸಮಯದಲ್ಲಿ `ನೈತಿಕತೆ ಇಲ್ಲದವರನ್ನು ರಾಜಕೀಯ ಪಕ್ಷಗಳು ಪ್ರೋತ್ಸಾಹಿಸುತ್ತಿವೆ, ಅದರ ಫಲವನ್ನು ಅನುಭವಿಸುತ್ತವೆ’ ಎಂದು ಮಾರ್ಮಿಕವಾಗಿ ನುಡಿದಿದ್ದಾರೆ.

ಈ 15 ಶಾಸಕರು ಸಮಯಸಾಧಕರು. ಮಂತ್ರಿ ಪದವಿ ಸಿಗಲಿಲ್ಲವೆಂದು ಗುಂಪುಗಾರಿಕೆ ಮಾಡುವವರು. ಪಿತೂರಿ ಮಾಡುವವರು. ಇವರನ್ನು ಬಳಸಿಕೊಂಡು ಸಮ್ಮಿಶ್ರ ಸರಕಾರವನ್ನು ಕೆಡವಿ ತಾವು ಅಧಿಕಾರಕ್ಕೆ ಬರುವ ಹುನ್ನಾರ ಭಾರತೀಯ ಜನತಾ ಪಕ್ಷದ್ದಾಗಿತ್ತು.

ಮುಖ್ಯಮಂತ್ರಿ ಯಡಿಯೂರಪ್ಪನವರು ಪಕ್ಷದ ಕೋರ್ ಕಮಿಟಿಯ ಸಭೆಯಲ್ಲಿ ಹೇಳಿದರೆನ್ನಲಾದ ಮಾತುಗಳೇ ಇದಕ್ಕೆ ಸಾಕ್ಷಿ. ಕಾಂಗ್ರೆಸ್ ಮತ್ತು ಜೆಡಿಎಸ್‍ನ ಶಾಸಕ ಸ್ಥಾನಗಳಿಗೆ ರಾಜೀನಾಮೆ ನೀಡಿದವರನ್ನು ಬಿಜೆಪಿ ಶಾಸಕರಾದ ಡಾ. ಅಶ್ವತ್‍ನಾರಾಯಣ್ ಅವರ ಉಸ್ತುವಾರಿಯಲ್ಲಿ ಮುಂಬೈನ ಒಂದು ಹೊಟೇಲ್‍ಗೆ ಕರೆದುಕೊಂಡು ಹೋಗಿ ರೆಸಾರ್ಟ್ ರಾಜಕೀಯ ಮಾಡಿಸಿದ್ದು, ಅವರನ್ನು ಪಕ್ಷಾಂತರ ಮಾಡುವಂತೆ ಪ್ರೇರಣೆ ನೀಡಿದ್ದು ಬಿಜೆಪಿಯ ರಾಷ್ಟ್ರಾಧ್ಯಕ್ಷ ಅಮಿತ್‍ಷಾರವರು, ಹಾಗಾಗಿ ನಾವು ಅನರ್ಹ ಶಾಸಕರ ತ್ಯಾಗವನ್ನು ಸ್ಮರಿಸಬೇಕು ಎಂಬುದು ಅವರ ಮಾತಿನ ತಾತ್ಪರ್ಯ.

ಯಡಿಯೂರಪ್ಪನವರ ನೇತೃತ್ವದಲ್ಲಿ ಸಮ್ಮಿಶ್ರ ಸರ್ಕಾರದ ವಿರುದ್ಧ ಅವಿಶ್ವಾಸ ನಿರ್ಣಯವನ್ನು ಮಂಡಿಸಲಾಗಿತ್ತು. ಈ ಅಶಿಸ್ತಿನ ಶಾಸಕರು ಶಾಸನಸಭೆಗೆ ಸಾಮೂಹಿಕವಾಗಿ ರಾಜೀನಾಮೆ ನೀಡಿದ್ದರಿಂದ ಬಿಜೆಪಿ ಶಾಸಕರ ಸಂಖ್ಯಾಬಲ ಹೆಚ್ಚಾಯಿತು. ಈ ಕಾರಣದಿಂದ ಸಮ್ಮಿಶ್ರ ಸರ್ಕಾರ ಪತನವಾಗುವುದು ಅನಿವಾರ್ಯವಾಯ್ತು. ಬಿಜೆಪಿ ಅಧಿಕಾರಕ್ಕೆ ಬಂತು.

ಈ 15 ಶಾಸಕರು ತಮ್ಮ ಅನರ್ಹತೆ ತೆಗೆದುಹಾಕಬೇಕೆಂದು ಸರ್ವೋಚ್ಚ ನ್ಯಾಯಾಲಯಕ್ಕೆ ಮೊರೆ ಹೋದರು. ಅವರಿಗೆಲ್ಲ ಈಗ ಉಪಚುನಾವಣೆಗೆ ನಿಲ್ಲಲು ನ್ಯಾಯಾಲಯ ಅವಕಾಶ ಮಾಡಿಕೊಟ್ಟಿದೆ. ಅವರೆಲ್ಲ ಪಿತೂರಿ ನಡೆಸಿದಾಗಲೇ ತೀರ್ಮಾನವಾಗಿದ್ದಂತೆ ಈಗ ಬಿಜೆಪಿ ಸದಸ್ಯರಾಗಿ ನೋಂದಾಯಿಸಿಕೊಂಡಿದ್ದಾರೆ. ಅವರಲ್ಲಿ 13 ಮಂದಿಗೆ ಬಿಜೆಪಿ ಉಪಚುನಾವಣೆಯಲ್ಲಿ ಬಿಜೆಪಿ ಪರವಾಗಿ ಸ್ಪರ್ಧಿಸಲು ಅವಕಾಶ ಮಾಡಿಕೊಡಲಾಗಿದೆ.

ಈ 13 ಮಂದಿಯ ಭವಿಷ್ಯವನ್ನು ನಿರ್ಧರಿಸುವ ಜವಾಬ್ದಾರಿ ಈಗ ಮತದಾರರ ಕೋರ್ಟಿಗೆ ವರ್ಗಾವಣೆಯಾಗಿದೆ.
ಅನೇಕ ಚುನಾವಣೆಗಳನ್ನು ಅರಿತಿರುವ ನನಗೆ ಹೀಗೆನಿಸುತ್ತಿದೆ: ಮತದಾರರನ್ನು ರಾಜಕೀಯ ಪಕ್ಷಗಳು ತಮ್ಮ ಸ್ವಾರ್ಥಕ್ಕಾಗಿ ದುರುಪಯೋಗಮಾಡಿಕೊಳ್ಳುತ್ತವೆ. ಹಣ ಹೆಂಡಕೊಟ್ಟು ಅವರ ಮತವನ್ನು ಕೊಳ್ಳುತ್ತವೆ. 5, 10ರೂ.ಗಳಿಂದ ಆರಂಭವಾದ ಮತದಾರರ ಕೊಳ್ಳುವಿಕೆ ಈಗ ಒಂದು ಮತಕ್ಕೆ 500, 1000ಕ್ಕೆ ಏರಿದೆ. ಇಷ್ಟೆಲ್ಲ ಚುನಾವಣಾ ಭ್ರಷ್ಟಾಚಾರ ಇದ್ದಾಗ್ಯೂ ಕೆಲವೊಮ್ಮೆ ಅನಿರೀಕ್ಷಿತ ಫಲಿತಾಂಶ ಹೊರಬರುವುದನ್ನು ನಾನು ಕಂಡಿದ್ದೇನೆ. ಮತದಾರರೆಲ್ಲ ಮಾತನಾಡಿಕೊಂಡಂತೆ ಕಾಣುವ ಈ ಫಲಿತಾಂಶ ನೋಡಿದಾಗ ಮತದಾರರೆಲ್ಲರೂ ಸಾರಾಸಗಟಾಗಿ ಭ್ರಷ್ಟರು ಎಂದು ಹೇಳಲು ಬರುವುದಿಲ್ಲ.

ಉದಾಹರಣೆಗೆ ಮತದಾತ ಒಂದೇ ಪಕ್ಷಕ್ಕೆ ಪದೇಪದೇ ಮತಹಾಕಿ ನೋಡುತ್ತಾನೆ. ಆ ಪಕ್ಷ ತನ್ನ ನಿರೀಕ್ಷೆಯಂತೆ ನಡೆದುಕೊಳ್ಳುತ್ತಿಲ್ಲ ಆ ಪಕ್ಷದ ಶಾಸಕರು ಅನೀತಿವಂತರು, ಭ್ರಷ್ಟರು, ಸ್ವಾರ್ಥಿಗಳು ಎಂದು ಕಂಡುಬಂದಾಗ ಮತದಾರರೆಲ್ಲ ಮಾತನಾಡಿಕೊಂಡಂತೆ ಆ ಪಕ್ಷಕ್ಕೆ ಸೋಲುಣಿಸುತ್ತಾರೆ. ಮತದಾರರಿಗೆ ಚುನಾವಣೆಯಲ್ಲಿ ಸ್ಪರ್ಧಿಸಿದವರಲ್ಲೇ ಯಾರೋ ಒಬ್ಬರಿಗೆ ಮಾತ್ರ ಮತ ನೀಡುವ ಅನಿವಾರ್ಯತೆ ಇರುವುದರಿಂದ ಮತದಾರ ಇನ್ನೊಂದು ಭ್ರಷ್ಟ ಪಕ್ಷದ ಅಭ್ಯರ್ಥಿಗೆ ಮತಹಾಕಿ ಗೆಲ್ಲಿಸುತ್ತಾರೆ. ಕಾಂಗ್ರೆಸ್ 50 ವರ್ಷಕ್ಕೆ ಮೇಲ್ಪಟ್ಟು ಸಕ್ರಿಯ ಚುನಾವಣೆಯಲ್ಲಿ ಗೆದ್ದುಬರುತ್ತಿತ್ತು. ಸ್ವಾತಂತ್ರ್ಯ ಬಂದ ಹೊಸದರಲ್ಲಿ ಸ್ವಾತಂತ್ರ್ಯಕ್ಕೆ ಹೋರಾಟ ಮಾಡಿದ ನಿಜ ಜನಸೇವಕರು ಹೆಚ್ಚಾಗಿದ್ದರು. ಅವರು ಚಾರಿತ್ರ್ಯವಂತರಾಗಿದ್ದರು, ಜನಸಾಮಾನ್ಯರ ಸಮಸ್ಯೆಗೆ ಸ್ಪಂದಿಸುವಂತವರಾಗಿದ್ದರು. ಹಣವಿಲ್ಲದಿದ್ದರೂ ಗುಣವಂತರಾಗಿದ್ದರು. ಎಂತಹ ಲಕ್ಷಾಧಿಪತಿ ಇವರ ವಿರುದ್ಧವಾಗಿ ನಿಂತರೂ ಮತದಾತರು ಈ ಸ್ವಾತಂತ್ರ್ಯ ಹೋರಾಟಗಾರನಿಗೇ ತಮ್ಮ ಮತಹಾಕಿ ಗೆಲ್ಲಿಸತ್ತಿದ್ದರು. ಕಾಲಕ್ರಮದಲ್ಲಿ ಹೊಸ ತಲೆಮಾರಿನ ಜನ ಚುನಾವಣೆಗಳಲ್ಲಿ ಸ್ಪರ್ಧಿಸಲು ತೊಡಗಿದರು. ಅವರಿಗೆ ಸ್ವಾತಂತ್ರ್ಯ ಹೋರಾಟದ ಇತಿಹಾಸ ಗೊತ್ತಿಲ್ಲ, ತ್ಯಾಗ-ಬಲಿದಾನಗಳ ಪರಿಚಯವಿಲ್ಲ. ಅಪ್ಪನ ಆಸ್ತಿ ದೊರಕಿದೆ ಅದನ್ನು ಉಡಾಯಿಸುವುದು ನನ್ನ ಹಕ್ಕು ಎಂದು ಭಾವಿಸಿಕೊಂಡವರು. ಇವರ ಜೊತೆಗೆ ಅಧಿಕಾರದ ಅಮಲು ಅವರನ್ನು ಮತ್ತಷ್ಟು ಕೆಡಿಸಿತು. ಈ ಸ್ವಾರ್ಥಿಗಳು ಅಧಿಕಾರದ ಲಾಲಸೆಯಿಂದ ಪಕ್ಷಾಂತರ ಮಾಡುವ ಹವ್ಯಾಸ ಬೆಳೆಸಿಕೊಂಡರು. ಈಗ ಎಲ್ಲ ರಾಜಕೀಯ ಪಕ್ಷಗಳಲ್ಲೂ ಈ ಸ್ವಾರ್ಥಿಗಳದೇ ಪಾರುಪತ್ಯ. ಪ್ರಾಮಾಣಿಕರೂ, ನಿಸ್ವಾರ್ಥಿಗಳೂ, ಸಮಾಜಮುಖಿಗಳೂ ಆದ ಸದಸ್ಯರ ಸಂಖ್ಯೆ ಇಳಿಯುತ್ತಾ ಬಂದಿದೆ.

ಈಗ ಕೋಟ್ಯಧಿಪತಿಗಳು ನಮ್ಮ ಪ್ರತಿನಿಧಿಗಳು. ಹಣದ ಮೂಲಕ ಗೆಲ್ಲುವ ಕಲೆಯನ್ನು ಕರಗತ ಮಾಡಿಕೊಂಡಿರುವ, ಜಾತಿಯ ಬಲ ಉಳ್ಳ ಇವರು ಮಾತ್ರ ಚುನಾವಣೆಗಳಲ್ಲಿ ಈಗ ಗೆಲ್ಲುವವರು.

ಈಗ ಈ ಉಪಚುನಾವಣೆಗೆ ನಿಂತಿರುವ ಬಿಜೆಪಿಯ 13 ಉಮೇದುದಾರರೂ ಈ ಕಲ್ಯಾಣ ಗುಣಗಳನ್ನು ಹೊಂದಿದವರು! ನಾಲ್ಕಾರು ತಿಂಗಳಿಂದ ಈ ನೀತಿಗೆಟ್ಟ ಶಾಸಕರ ಹುಚ್ಚಾಟವನ್ನು ಮತದಾತರು ನೋಡುತ್ತಿದ್ದಾರೆ. ಇವರು ಪ್ರಜಾಪ್ರತಿನಿಧಿಗಳಾಗಲು ಯೋಗ್ಯರಲ್ಲ ಎಂಬುದನ್ನು ಗಮನಿಸುತ್ತಾ ಬಂದಿದ್ದಾರೆ. ಈ 13 ಕ್ಷೇತ್ರಗಳ ಮತದಾರ ಅವರಿಗೆಲ್ಲ ಪಾಠ ಕಲಿಸುವರೆಂಬ ನಂಬಿಕೆ ನನ್ನದು.
ಮುಖ್ಯಮಂತ್ರಿ ಯಡಿಯೂರಪ್ಪನವರು ನೇರವಾಗಿ ಒಬ್ಬ ಶಾಸಕರನ್ನು ಕೊಳ್ಳುವ ಪ್ರಯತ್ನ ಮಾಡಿದ ಸಿಡಿಯೊಂದಿದೆ. ಅವರ ವಿರುದ್ಧ ಒಂದು ಕಟ್ಳೆಯನ್ನು ಹೂಡಲಾಗಿದೆ.

ಈ 13 ಮಂದಿ ಭ್ರಷ್ಟ ಸ್ವಾರ್ಥಿ ಶಾಸಕರನ್ನು ಬಿಜೆಪಿಗೆ ಎಳೆಯಲು ಅವರನ್ನು ಮುಂಬಯಿನ ಹೊಟೇಲ್ ಒಂದರಲ್ಲಿ ವಾಸ್ತವ್ಯ ಮಾಡಿಸಿದ ಅಮಿತ್ ಷಾ ಅವರ ಗೇಮ್ ಕುರಿತು ಯಡಿಯೂರಪ್ಪನವರು ಬಿಜೆಪಿಯ ಕೋರ್ ಕಮಿಟಿ ಸಭೆಯಲ್ಲಿ ಮಾತನಾಡಿದರೆನ್ನಲಾದ ಧ್ವನಿಮುದ್ರಣವನ್ನು ಲಗತ್ತಿಸಿ ನ್ಯಾಯಾಲಯದಲ್ಲಿ ದೂರನ್ನಿತ್ತಿರುವ ವರದಿ ಪತ್ರಿಕೆಗಳಲ್ಲಿ ಪ್ರಕಟವಾಗಿದೆ. ಬಿಜೆಪಿ ರಾಷ್ಟ್ರಾಧ್ಯಕ್ಷರು ಮೋದಿ ಮಂತ್ರಿಮಂಡಲದಲ್ಲಿ ಗೃಹಮಂತ್ರಿಯಾಗಿರುವವರು. ಈಗ ಅವರ ಮೇಲೆ 17 ಪ್ರಜಾಪ್ರತಿನಿಧಿಗಳನ್ನು ಭ್ರಷ್ಟರಾಗಿಸಿದ ಆರೋಪ ಕೇಳಿಬಂದಿದೆ. ಮೋದಿಯವರು ಅವರ ಮೇಲೆ ಕ್ರಮಕೈಗೊಳ್ಳುತ್ತಾರಾ? ಅಷ್ಟೊಂದು ಪಾರದರ್ಶಕತೆ, ಪ್ರಾಮಾಣಿಕತೆ ಬಿಜೆಪಿ ಮತ್ತು ಅದನ್ನು ನಿಯಂತ್ರಿಸುತ್ತಿರುವ ಆರೆಸೆಸ್‍ಗಿದೆಯಾ? ಎಲ್ಲವೂ ಈ ಉಪಚುನಾವಣೆಯಲ್ಲಿ ಮತದಾರ ಕೊಡುವ ತೀರ್ಪನ್ನು ಅವಲಂಬಿಸಿದೆ. ಈಗ ನಾವು ಜಾಗೃತಗೊಳ್ಳದಿದ್ದರೆ ಭವಿಷ್ಯದಲ್ಲಿ ಇದಕ್ಕಿಂತಲೂ ಕೆಟ್ಟ ರಾಜಕೀಯ ಪ್ರಹಸನಗಳಿಗೆ ನಾವೇ ಕಾರಣೀಭೂತರಾಗುತ್ತೇವೆ. ಅಷ್ಟೇ ಅಲ್ಲ ಅಂತಹ ಪ್ರಹಸನಗಳ ಹೊರೆ ನಮ್ಮ ಮಕ್ಕಳ ಹೆಗಲೇರಲಿದೆ. ನಮಗಾಗಿ ಅಲ್ಲದಿದ್ದರೂ ನಮ್ಮ ಮುಂದಿನ ಪೀಳಿಗೆಯವರಿಗಾದರೂ ಒಂದಷ್ಟು ನೈತಿಕ ರಾಜಕಾರಣವನ್ನು ಉಳಿಸುವ ಗುರುತರವಾದ ಜವಾಬ್ಧಾರಿ ನಮ್ಮೆದುರಿಗಿದೆ. ಮತದಾರನ ತೀರ್ಪಿಗಾಗಿ ನಾನು ಆಶಾವಾದಿಯಾಗಿ ಕಾಯುತ್ತಿದ್ದೇನೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....