Homeಮುಖಪುಟಓವೈಸಿ ಕಾರಿನ ಮೇಲೆ ದಾಳಿ ಬೆನ್ನಲ್ಲೇ ಸ್ಟಾರ್ ಪ್ರಚಾರಕರಿಗೆ ಭದ್ರತೆ ನೀಡಲು ಚುನಾವಣಾ ಆಯೋಗ ಸೂಚನೆ

ಓವೈಸಿ ಕಾರಿನ ಮೇಲೆ ದಾಳಿ ಬೆನ್ನಲ್ಲೇ ಸ್ಟಾರ್ ಪ್ರಚಾರಕರಿಗೆ ಭದ್ರತೆ ನೀಡಲು ಚುನಾವಣಾ ಆಯೋಗ ಸೂಚನೆ

- Advertisement -
- Advertisement -

ಪಶ್ಚಿಮ ಉತ್ತರ ಪ್ರದೇಶದಲ್ಲಿ ಎಐಎಂಐಎಂ ಮುಖ್ಯಸ್ಥ ಅಸಾದುದ್ದೀನ್ ಓವೈಸಿ ಅವರ ಕಾರಿನ ಮೇಲೆ ಗುಂಡಿನ ದಾಳಿ ನಡೆದ ಕೆಲವೇ ದಿನಗಳಲ್ಲಿ, ರಾಜಕೀಯ ಪಕ್ಷಗಳ ಸ್ಟಾರ್ ಪ್ರಚಾರಕರಿಗೆ ಸೂಕ್ತ ಭದ್ರತೆ ಒದಗಿಸುವಂತೆ ಚುನಾವಣಾ ಆಯೋಗವು ಎಲ್ಲಾ ರಾಜ್ಯಗಳ ಮುಖ್ಯ ಕಾರ್ಯದರ್ಶಿಗಳಿಗೆ ಸೂಚಿಸಿದೆ.

ಚುನಾವಣಾ ಅವಧಿಯಲ್ಲಿ ತಮ್ಮ ರಾಜ್ಯಗಳೊಳಗಿನ ಚುನಾವಣೆ ಪ್ರಚಾರಕ್ಕೆ ಬರುವವರಿಗೆ ಸೂಕ್ತ ಭದ್ರತೆ ನೀಡುವಂತೆ ಮುಖ್ಯ ಕಾರ್ಯದರ್ಶಿಗಳಿಗೆ ತಿಳಿಸಿದೆ.

ಫೆಬ್ರವರಿ 5 ರಂದು ಚುನಾವಣಾ ಆಯೋಗವು ರಾಜ್ಯ ಮುಖ್ಯ ಚುನಾವಣಾ ಅಧಿಕಾರಿಗಳಿಗೆ ಬರೆದ ಪತ್ರದಲ್ಲಿ, “ಐದು ರಾಜ್ಯಗಳ ಶಾಸಕಾಂಗ ಸಭೆಗಳಿಗೆ ನಡೆಯುತ್ತಿರುವ ಸಾರ್ವತ್ರಿಕ ಚುನಾವಣೆಯಲ್ಲಿ ಸ್ಟಾರ್ ಪ್ರಚಾರಕರು ಭದ್ರತಾ ಸಮಸ್ಯೆಗಳನ್ನು ಎದುರಿಸಿದ್ದಾರೆ ಎಂಬುದು ತಮ್ಮ ಗಮನಕ್ಕೆ ಬಂದಿದೆ” ಎಂದು ಇಸಿ ಹೇಳಿದೆ.

’ಸ್ಟಾರ್ ಪ್ರಚಾರಕರು ಚುನಾವಣಾ ಪ್ರಕ್ರಿಯೆಯ ಅವಿಭಾಜ್ಯ ಅಂಗವಾಗಿದ್ದಾರೆ. ಮುಕ್ತ ಮತ್ತು ನ್ಯಾಯಸಮ್ಮತ ಚುನಾವಣೆಗಳನ್ನು ನಡೆಯಲು ಅವರ ಭದ್ರತೆಯು ಅತ್ಯಂತ ಮಹತ್ವದ್ದಾಗಿದೆ. ಅವರು ಭದ್ರತಾ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ ಎಂಬ ವಿಷಯ ತಿಳಿದುಕೊಂಡಿದ್ದು, ಅವರನ್ನು ಚುನಾವಣಾ ಪ್ರಚಾರಗಳಿಗೆ ನೇಮಿಸುವ ರಾಜಕೀಯ ಪಕ್ಷಗಳು ಚುನಾವಣೆ ನಡೆಸುವ ಅವಧಿಯಲ್ಲಿ ರಾಜ್ಯದೊಳಗೆ ಸಾಕಷ್ಟು ಭದ್ರತೆಯನ್ನು ಒದಗಿಸಬೇಕು” ಎಂದು ಹೇಳಿದೆ.

ಇದನ್ನೂ ಓದಿ: ‘ನಮ್ಮ ಮೈತ್ರಿಕೂಟ ಅಧಿಕಾರಕ್ಕೆ ಬಂದರೆ 2 ಸಿಎಂ, 3 ಡಿಸಿಎಂ’: ಅಸಾದುದ್ದೀನ್ ಓವೈಸಿ

ಚುನಾವಣಾ ಆಯೋಗದ ಪತ್ರವು ಯಾವುದೇ ನಿರ್ದಿಷ್ಟ ಪ್ರಕರಣವನ್ನು ಉಲ್ಲೇಖಿಸದಿದ್ದರೂ, ಇತ್ತಿಚೇಗೆ ಗುಂಡಿನ ದಾಳಿಗೆ ಒಳಗಾದ ಎಐಎಂಐಎಂ ಮುಖ್ಯಸ್ಥ ಅಸಾದುದ್ದೀನ್ ಓವೈಸಿ, ಉತ್ತರ ಪ್ರದೇಶ ವಿಧಾನಸಭೆ ಚುನಾವಣೆಯ ಪ್ರಮುಖ ಸ್ಟಾರ್‌ ಪ್ರಚಾರಕರಾಗಿದ್ದಾರೆ.

ಇದಕ್ಕೆ ಸಂಬಂಧಿಸಿದಂತೆ ರಾಜಕೀಯ ಪಕ್ಷಗಳು ತಮ್ಮ ಸ್ಟಾರ್ ಪ್ರಚಾರಕರಿಗೆ ಅಗತ್ಯ ಭದ್ರತೆ ಒದಗಿಸಲು ಭೇಟಿಯ ಯೋಜನೆ, ಮಾರ್ಗದ ನಕ್ಷೆ ಮತ್ತು ಇತರ ಅಗತ್ಯ ಮಾಹಿತಿಯನ್ನು ಮುಖ್ಯ ಚುನಾವಣಾಧಿಕಾರಿ ಮತ್ತು ಸಂಬಂಧಪಟ್ಟ ಜಿಲ್ಲಾ ಚುನಾವಣಾಧಿಕಾರಿಗಳಿಗೆ ಒದಗಿಸಬೇಕು ಎಂದು ಆಯೋಗ ಸೂಚಿಸಿದೆ.

“ಸ್ಟಾರ್‌ ಪ್ರಚಾರಕರ ಭದ್ರತಾ ವ್ಯವಸ್ಥೆಗಳನ್ನು ರಾಜ್ಯ ಅಥವಾ ಕೇಂದ್ರಾಡಳಿತ ಪ್ರದೇಶಗಳಿಂದ ನೇಮಕವಾದ ರಾಜ್ಯ ಮಟ್ಟದಲ್ಲಿ ನೋಡಲ್ ಅಧಿಕಾರಿ ಮತ್ತು ಜಿಲ್ಲಾ ಮಟ್ಟದ ನೋಡಲ್ ಅಧಿಕಾರಿ ಮೇಲ್ವಿಚಾರಣೆ ಮಾಡಬೇಕಾಗುತ್ತದೆ” ಎಂದು ಪತ್ರದಲ್ಲಿ ತಿಳಿಸಲಾಗಿದೆ.

ಉತ್ತರ ಪ್ರದೇಶದ ಮೀರತ್‌ನಲ್ಲಿ ಚುನಾವಣಾ ಪ್ರಚಾರ ಮುಗಿಸಿ ದೆಹಲಿಗೆ ವಾಪಸಾಗುತ್ತಿದ್ದ ಎಐಎಂಐಎಂ ಅಸಾದುದ್ದೀನ್ ಓವೈಸಿ ಅವರ ಕಾರಿನ ಮೇಲೆ ಗುಂಡಿನ ದಾಳಿಯಾದ ಬೆನ್ನಲ್ಲೇ ಈ ಆದೇಶ ನೀಡಲಾಗಿದೆ. ಮೀರತ್‌ನ ಕಿತೌಧ್ ಪ್ರದೇಶದಲ್ಲಿ ಅವರ ಬೆಂಗಾವಲು ಪಡೆಯ ಮೇಲೆ ಗುಂಡು ಹಾರಿಸಿದ ಇಬ್ಬರನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಉತ್ತರ ಪ್ರದೇಶ, ಉತ್ತರಾಖಂಡ, ಗೋವಾ, ಪಂಜಾಬ್ ಮತ್ತು ಮಣಿಪುರದಲ್ಲಿ ಫೆಬ್ರವರಿ 10 ರಿಂದ ಮಾರ್ಚ್ 7 ರವರೆಗೆ ವಿಧಾನಸಭೆ ಚುನಾವಣೆ ನಡೆಯಲಿದೆ. ಮಾರ್ಚ್ 10 ರಂದು ಫಲಿತಾಂಶ ಪ್ರಕಟವಾಗಲಿದೆ.


ಇದನ್ನೂ ಓದಿ: ಅಸಾದುದ್ದೀನ್‌ ಓವೈಸಿ ಕಾರಿನ ಮೇಲೆ ಗುಂಡಿನ ದಾಳಿ; ಇಬ್ಬರ ಬಂಧನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದಿಶಾ ಸಾಲ್ಯಾನ್ ಸಾವು ಪ್ರಕರಣ: ಸಿಬಿಐ ತನಿಖೆಗೆ ಬಾಂಬೆ ಹೈಕೋರ್ಟ್ ಆದೇಶ

ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ಆಗಿದ್ದ ದಿಶಾ ಸಾಲಿಯಾನ್ ಅವರ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಂಬೆ ಹೈಕೋರ್ಟ್ ಬುಧವಾರ (ಸೆಪ್ಟೆಂಬರ್ 2) ಸಿಬಿಐ ತನಿಖೆಗೆ ಆದೇಶಿಸಿದೆ. ಜೂನ್...

ಸಂವಿಧಾನ ಬದಲಿಸಿ ಮನುಸ್ಮೃತಿ ತರಲು SIR ಷಡ್ಯಂತ್ರ: ನಟ ಕಿಶೋರ್

ದೇಶದ ಬಹುಕೋಟಿ ಉದ್ಯಮಿ ಗೌತಮ್ ಅದಾನಿಯದ್ದೇ ಇರಲಿ ಅಥವಾ ಒಬ್ಬ ಬಡ ರೈತನದ್ದೇ ಇರಲಿ, ಪ್ರಜಾಪ್ರಭುತ್ವದಲ್ಲಿ ಎಲ್ಲರ ಮತವೂ ಒಂದೇ ಸಮ. ಪ್ರಜೆಗಳನ್ನೆಲ್ಲ ಸಮಾನವಾಗಿ ಕಾಣುವ ಏಕೈಕ ಅಸ್ತ್ರ ಎಂದರೆ ಅದು ಮತದಾನದ...

Nepal: ಭೀಕರ ಪ್ರವಾಹಕ್ಕೆ ಸವಾಲೆಸೆದು ನಿಂತ ‘ಗ್ರೀನ್ ಹೌಸ್’ ಸ್ಟೋರಿ

'ನಮ್ಮ ಬದುಕು ಇಷ್ಟಕ್ಕೇ ಅಂತ್ಯವಾಯಿತು ಎನಿಸುವ ಕ್ಷಣಗಳು ಎದುರಾದಾಗ ಮನಸ್ಸಿನಲ್ಲಿ ಏನು ಓಡಬಹುದು? ಪ್ರವಾಹ ಬಂದಾಗ ನನಗೂ ಅದೇ ಅನಿಸಿತ್ತು' ಇದು ನೇಪಾಳದ ನುವಾಕೋಟ್ ಜಿಲ್ಲೆಯ ತ್ರಿಶೂಲಿ ನದಿಯಲ್ಲಿ ಹರಿದುಬಂದ ಭೀಕರ ಪ್ರವಾಹದಿಂದ...

NEET: ದೇಶಾದ್ಯಂತ ಪ್ರತಿಭಟನಾಕಾರರ ವಿರುದ್ದ ದಾಖಲಾಗಿದ್ದ ಎಲ್ಲಾ FIRಗಳನ್ನು ರದ್ದುಗೊಳಿಸಿದ ಸುಪ್ರೀಂ ಕೋರ್ಟ್

ಮರುಪರೀಕ್ಷೆ ಮತ್ತು ಪ್ರಶ್ನೆ ಪತ್ರಿಕೆ ಸೋರಿಕೆ ವಿರೋಧಿ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ಯ (CJP) ಪ್ರತಿಭಟನಾಕಾರರ ವಿರುದ್ಧ ದಾಖಲಾಗಿದ್ದ ಎಲ್ಲಾ FIR ಗಳನ್ನು ಸುಪ್ರೀಂ ಕೋರ್ಟ್ ಮಂಗಳವಾರ ರದ್ದುಗೊಳಿಸಿದೆ. ಕೇಂದ್ರ ಸರ್ಕಾರವು ಈ...

ಚುನಾವಣಾ ಆಯೋಗ ಚಲೋ: ನಟ ಪ್ರಕಾಶ್ ರಾಜ್ ಸೇರಿದಂತೆ ನೂರಾರು SIR ಸಂತ್ರಸ್ತರು, ಹೋರಾಟಗಾರರನ್ನು ವಶಕ್ಕೆ ಪಡೆದ ಪೊಲೀಸರು

ಕರ್ನಾಟಕ ರಾಜ್ಯದ ಅರ್ಹ ಮತದಾರರ ‘ಮತಹರಣ’ ಖಂಡಿಸಿ ‘ಎಸ್‌ಐಆರ್ ವಿರೋಧಿ ಒಕ್ಕೂಟ’ ಹಮ್ಮಿಕೊಂಡಿದ್ದ ‘ಚುನಾವಣಾ ಆಯೋಗ ಚಲೋ’ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಬಹುಭಾಷಾ ನಟ ಪ್ರಕಾಶ್ ರಾಜ್, ಕಿಶೋರ್ ಹಾಗೂ ಪ್ರಮುಖ ನಾಯಕರು ಸೇರಿದಂತೆ...

‘ಚುನಾವಣಾ ಆಯೋಗ ಚಲೋ’: ‘ಮುಚ್ಚಿದ ಬಾಗಿಲಿನ ಮಾತುಕತೆ ಬೇಡ, ಎಲ್ಲವೂ ಸಾರ್ವಜನಿಕರ ಮುಂದೆಯೇ ಇತ್ಯರ್ಥವಾಗಬೇಕು’: ನೂರ್ ಶ್ರೀಧರ್ ಆಗ್ರಹ

ಬೆಂಗಳೂರು: ಕರ್ನಾಟಕದಲ್ಲಿ ನಡೆದ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ರಾಜ್ಯದ ಪ್ರಜಾಸತ್ತಾತ್ಮಕ ವ್ಯವಸ್ಥೆಯಲ್ಲಿ ಬೃಹತ್ ಕಳವಳವನ್ನು ಸೃಷ್ಟಿಸಿದೆ. ಕೇಂದ್ರ ಚುನಾವಣಾ ಆಯೋಗವು ಬಿಡುಗಡೆ ಮಾಡಿರುವ ನೂತನ ಕರಡು ಮತದಾರರ...

SIR ಎಂಬುದು ಪ್ರಜಾಪ್ರಭುತ್ವವನ್ನು ಹಾಳುಮಾಡುವ ದೊಡ್ಡ ಸಂಚು ಮತ್ತು ಮೋಸ: ಪ್ರಕಾಶ್ ರಾಜ್

"ನಾನು ಸಣ್ಣವನಿದ್ದಾಗ ಮುಕ್ಕೂಟಿ ಕನ್ನಡಿಗರು ಎನ್ನುತ್ತಿದ್ದರು. ದಶಕಗಳ ನಂತರ ಪಂಚಕೋಟಿ ಕನ್ನಡಿಗರಾಗಿ, ಈಗ ಶತಕೋಟಿ ಆಗಬೇಕಿತ್ತು. ಆದರೆ ಮತದಾರರ ಪಟ್ಟಿ ವಿಶೇಷ ಸಾಂದ್ರ ಪರಿಷ್ಕರಣೆ (SIR) ಹೆಸರಿನಲ್ಲಿ ಮತ್ತೆ ಮುಕ್ಕೂಟಿಗೆ ತಂದು ನಿಲ್ಲಿಸಲಾಗುತ್ತಿದೆ....

‘ಚುನಾವಣಾ ಆಯೋಗ ಚಲೋ’: ಎಸ್ಐಆರ್ ಅನ್ಯಾಯವನ್ನು ಪ್ರಶ್ನಿಸಲು ನಾವು ಚುನಾವಣಾ ಆಯೋಗಕ್ಕೆ ಮುತ್ತಿಗೆ ಹಾಕುತ್ತಿದ್ದೇವೆ: ಯೂಸುಫ್ ಕನ್ನಿ

ಬೆಂಗಳೂರು: ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಹೆಸರಿನಲ್ಲಿ ಅರ್ಹ ನಾಗರಿಕರ ಮತದಾನದ ಹಕ್ಕನ್ನು ಕಸಿದುಕೊಳ್ಳಲಾಗುತ್ತಿದೆ ಎಂದು ಆರೋಪಿಸಿ ‘ಎಸ್‌ಐಆರ್ ವಿರೋಧಿ ಕರ್ನಾಟಕ’ ವೇದಿಕೆಯು 2026 ಸೆಪ್ಟಂಬರ್ 01, ಮಂಗಳವಾರ ಹಮ್ಮಿಕೊಂಡಿದ್ದ...

SIR:‘ನಾವು ಕಳ್ಳರಲ್ಲ, ಈ ದೇಶದ ಮೂಲ ನಿವಾಸಿಗಳು’ SIR ಸಂತ್ರಸ್ತರ ಜೊತೆ ಪ್ರಕಾಶ್ ರಾಜ್ ಸಂವಾದ

"ನಾವು ಈ ದೇಶದ ನಾಗರಿಕರು, ಕಳ್ಳರಲ್ಲ. ಮತದಾರರ ಪಟ್ಟಿಯಿಂದ ಹೆಸರು ಡಿಲೀಟ್ ಮಾಡಿ ನಮ್ಮ ಸ್ವಾಭಿಮಾನಕ್ಕೆ ಧಕ್ಕೆ ತರಲಾಗುತ್ತಿದೆ. ನಮ್ಮ ಹಕ್ಕನ್ನು ಉಳಿಸಿಕೊಳ್ಳಲು ನಾವು ಹೋರಾಟ ನಡೆಸುತ್ತಿದ್ದೇವೆ," ಎಂದು ಬಹುಭಾಷಾ ನಟ ಹಾಗೂ...

‘ವಿದೇಶದಲ್ಲಿ ಚಿನ್ನ ಖರೀದಿಸಬೇಡಿ, ವಿವಾಹವಾಗಬೇಡಿ’: ಭಾರತೀಯರಿಗೆ ಮೋದಿ ಮನವಿ

ಭಾರತೀಯರು ಅನಗತ್ಯವಾಗಿ ವಿದೇಶಿ ಪ್ರವಾಸ ಕೈಗೊಳ್ಳುವುದನ್ನು, ವಿದೇಶಗಳಲ್ಲಿ ವಿವಾಹವಾಗುವುದನ್ನು ಹಾಗೂ ಅಗತ್ಯವಿಲ್ಲದಿದ್ದರೆ ವಿದೇಶದಿಂದ ಚಿನ್ನ ಖರೀದಿಸುವುದನ್ನು ಸಂಪೂರ್ಣವಾಗಿ ತಪ್ಪಿಸಬೇಕು ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಮನವಿ ಮಾಡಿದ್ದಾರೆ. ಸ್ವಾವಲಂಬನೆಗೆ ಉತ್ತೇಜನ ನೀಡುವುದರ...