Homeಮುಖಪುಟಚುನಾವಣಾ ಜಾಹೀರಾತು: ಬಿಜೆಪಿಗೆ ಹೆಚ್ಚು ಅನುಕೂಲ ಮಾಡಿಕೊಟ್ಟ ಫೇಸ್‌ಬುಕ್!

ಚುನಾವಣಾ ಜಾಹೀರಾತು: ಬಿಜೆಪಿಗೆ ಹೆಚ್ಚು ಅನುಕೂಲ ಮಾಡಿಕೊಟ್ಟ ಫೇಸ್‌ಬುಕ್!

ಇತರ ಪಕ್ಷಗಳಿಗೆ ಹೋಲಿಸಿದರೆ ಬಿಜೆಪಿಯಿಂದ ಕಡಿಮೆ ಮೊತ್ತವನ್ನು ಪಡೆದು ಫೇಸ್‌ಬುಕ್‌ ಚುನಾವಣಾ ಜಾಹೀರಾತುಗಳನ್ನು ಪ್ರಕಟಿಸುತ್ತಿದೆ ಎಂಬ ಆತಂಕಕಾರಿ ಸಂಗತಿಯನ್ನು ರಿಪೋಟರ್ಸ್ ಕಲೆಕ್ಟಿವ್ ಮತ್ತು ಆಡ್‌.ವಾಚ್‌ ವರದಿ ಬಹಿರಂಗಪಡಿಸಿದೆ. (ಬಿಜೆಪಿ ಎಷ್ಟು ಪಾವತಿಸಿದೆ? ಇತರ ಪಕ್ಷಗಳು ಎಷ್ಟು ಪಾವತಿಸಿವೆ? ವಿವರಗಳಿಗೆ ಓದಿ ಮುಂದೆ ಓದಿ...)

- Advertisement -
- Advertisement -

ಇತರ ವಿರೋಧ ಪಕ್ಷಗಳಿಗೆ ಹೋಲಿಸಿದರೆ ಫೇಸ್‌ಬುಕ್‌ ಬಿಜೆಪಿಗೆ ಹೆಚ್ಚಿನ ಅನುಕೂಲ ಮಾಡಿಕೊಟ್ಟಿದೆ. ಉಳಿದ ಪಕ್ಷಗಳಿಗಿಂತ ಬಿಜೆಜೆಯ ಜಾಹೀರಾತಿಗಳಿಗೆ ಕಡಿಮೆ ಮೊತ್ತವನ್ನೂ ಪಡೆದಿದೆ ಎಂದು ರಿಪೋರ್ಟರ್ಸ್ ಕಲೆಕ್ಟಿವ್ ಮತ್ತು ಆಡ್‌.ವಾಚ್‌ ನಡೆಸಿದ ವೆಚ್ಚದ ವಿಶ್ಲೇಷಣೆಯು ಬಹಿರಂಗವಾಗಿದೆ.

2019ರ ಲೋಕಸಭಾ ಚುನಾವಣೆ ಸೇರಿದಂತೆ 10 ಚುನಾವಣೆಗಳಲ್ಲಿ ಒಂಬತ್ತರಲ್ಲಿ ಬಿಜೆಪಿ ಮೇಲುಗೈ ಸಾಧಿಸಿದೆ. ಬಿಜೆಪಿಯು ತನ್ನ ವಿರೋಧಿಗಳಿಗಿಂತ ಕಡಿಮೆ ದರವನ್ನು ಫೇಸ್‌ಬುಕ್‌‌ ಜಾಹೀರಾತುಗಳಿಗೆ ವಿಧಿಸಿದೆ. ಭಾರತದಲ್ಲಿ ಫೇಸ್‌ಬುಕ್‌ನ ಅತಿದೊಡ್ಡ ರಾಜಕೀಯ ಗ್ರಾಹಕನಾಗಿ ಬಿಜೆಪಿ ಬೆಳೆದಿದ್ದು, ಕಡಿಮೆ ಹಣಕ್ಕೆ ಹೆಚ್ಚಿನ ಮತದಾರರನ್ನು ತಲುಪಲು ಫೇಸ್‌ಬುಕ್‌ ಅನುವು ಮಾಡಿಕೊಟ್ಟಿದೆ. ಚುನಾವಣಾ ಪ್ರಚಾರಗಳಲ್ಲಿ ಬಿಜೆಪಿಗೆ ಹೆಚ್ಚಿನ ಅನುಕೂಲವಾಗಲು ಇದು ಸಹಕಾರಿಯಾಗಿದೆ” ಎಂದು ವರದಿ ಹೇಳಿದೆ.

“ಸರಾಸರಿಯಾಗಿ, ಒಂದು ಜಾಹೀರಾತನ್ನು ಒಂದು ಮಿಲಿಯನ್ ಬಾರಿ ತೋರಿಸಲು ಬಿಜೆಪಿ, ಅದರ ಅಭ್ಯರ್ಥಿಗಳು ಮತ್ತು ಅಂಗಸಂಸ್ಥೆಗಳಿಗೆ ಫೇಸ್‌ಬುಕ್‌ 41,844 ರೂಪಾಯಿಗಳನ್ನು ವಿಧಿಸಿದೆ. ಆದರೆ ಇಷ್ಟೇ ಪ್ರಮಾಣದ ವೀವ್ಸ್‌‌ ಗಳಿಸಲು ಪ್ರಮುಖ ವಿರೋಧ ಪಕ್ಷವಾದ ಕಾಂಗ್ರೆಸ್, ಅದರ ಅಭ್ಯರ್ಥಿಗಳು ಮತ್ತು ಅಂಗಸಂಸ್ಥೆಗಳಿಗೆ 53,776 ರೂಪಾಯಿಗಳನ್ನು ಫೇಸ್‌ಬುಕ್‌ ವಿಧಿಸಿದೆ. ಬಿಜೆಪಿಗಿಂತ ಸುಮಾರು ಶೇ. 29 ಹೆಚ್ಚು ಮೊತ್ತವನ್ನು ವಿರೋಧ ಪಕ್ಷಗಳು ಪಾವತಿಸಬೇಕಾಗಿತ್ತು” ಎಂಬುದು ವರದಿಯಿಂದ ತಿಳಿದುಬಂದಿದೆ.

ತನಿಖೆ ನಡೆಸಿರುವ ಸಂಸ್ಥೆಗಳು ಪ್ರಾಥಮಿಕವಾಗಿ ಬಿಜೆಪಿಯನ್ನು ಕಾಂಗ್ರೆಸ್‌ನೊಂದಿಗೆ ಹೋಲಿಸಿ ವಿಶ್ಲೇಷಣೆ ಮಾಡಿವೆ. ಏಕೆಂದರೆ ಈ ಎರಡು ಪಕ್ಷಗಳು ರಾಜಕೀಯ ಜಾಹೀರಾತುಗಳಿಗೆ ಅತಿ ಹೆಚ್ಚು ಖರ್ಚು ಮಾಡುತ್ತಿವೆ. ವಿಶ್ಲೇಷಣೆಗೆ ಒಳಪಡಿಸಲಾಗಿರುವ 10 ಚುನಾವಣೆಗಳಲ್ಲಿ ಒಂಬತ್ತರಲ್ಲಿ ಬಿಜೆಪಿಗೆ ಅನುಕೂಲಕರ ವ್ಯವಹಾರ ಕುದಿರಿದೆ ಎಂಬುದು ತನಿಖೆಯಲ್ಲಿ ಬಹಿರಂಗವಾಗಿದೆ.

22 ತಿಂಗಳ ಅವಧಿಯಲ್ಲಿನ ದತ್ತಾಂಶಗಳ ಪ್ರಕಾರ, ಬಿಜೆಪಿ ಮತ್ತು ಅದರ ಅಂಗಸಂಸ್ಥೆಗಳು ತಮ್ಮ ಅಧಿಕೃತ ಪುಟಗಳ ಮೂಲಕ ಫೇಸ್‌ಬುಕ್‌ನಲ್ಲಿ ಜಾಹೀರಾತುಗಳನ್ನು ನೀಡಲು ಒಟ್ಟು 104.1 ಮಿಲಿಯನ್ ರೂಪಾಯಿಗಳಿಗಿಂತ ಹೆಚ್ಚು ಖರ್ಚು ಮಾಡಿದೆ. ಇದಕ್ಕೆ ಪ್ರತಿಯಾಗಿ, ಕಾಂಗ್ರೆಸ್ ಮತ್ತು ಅದರ ಅಂಗಸಂಸ್ಥೆಗಳು 64.4 ಮಿಲಿಯನ್ ರೂಪಾಯಿಗಳನ್ನು ಖರ್ಚು ಮಾಡಿವೆ.

ಬಿಜೆಪಿ ಹಾಗೂ ಕಾಂಗ್ರೆಸ್ ನಿಗದಿತ ವೀವ್ಸ್‌ಗಳಿಗಾಗಿ ಖರ್ಚು ಮಾಡಿದ ದರವನ್ನು ಹೋಲಿಸಿ ನೋಡಿದರೆ, ಕನಿಷ್ಠ 11.7 ಮಿಲಿಯನ್‌ ರೂ.ಗಳನ್ನು ಕಾಂಗ್ರೆಸ್‌ ಹೆಚ್ಚುವರಿಯಾಗಿ ಪಾವತಿಸಿದೆ. ಕಾಂಗ್ರೆಸ್‌ ಮೇಲೆ ಹೆಚ್ಚಿನ ದರವನ್ನು ಫೇಸ್‌ಬುಕ್‌ ವಿಧಿಸಿದೆ.

ಒಡಿಶಾ, ಅರುಣಾಚಲ ಪ್ರದೇಶ, ಸಿಕ್ಕಿಂ ಮತ್ತು ಆಂಧ್ರಪ್ರದೇಶದ ರಾಜ್ಯ ಚುನಾವಣೆ ಹಾಗೂ 2019ರ ಲೋಕಸಭಾ ಚುನಾವಣೆಗಳಿಗೆ ಮುನ್ನ ಮೂರು ತಿಂಗಳ ಪ್ರಚಾರಕ್ಕಾಗಿ ಫೇಸ್‌ಬುಕ್‌ ಅಲ್ಗಾರಿದಮ್ ಹೇಗೆ ಕೆಲಸ ಮಾಡಿತ್ತೆಂಬುದನ್ನು ವರದಿ ಉಲ್ಲೇಖಿಸಿದೆ.

ಫೇಸ್‌ಬುಕ್‌ನ ಅಲ್ಗಾರಿದಮ್ ಮೂಲಕ 1 ಮಿಲಿಯನ್ ವೀವ್ಸ್‌ಗಳನ್ನು ಪಡೆಯಲು ಬಿಜೆಪಿ ಮತ್ತು ಅದರ ಅಭ್ಯರ್ಥಿಗಳಿಗೆ ಸರಾಸರಿ 61,584 ರೂಪಾಯಿಗಳನ್ನು ವಿಧಿಸಲಾಗಿತ್ತು. ಆದರೆ ಅದೇ ಸಂಖ್ಯೆಯ ವೀವ್ಸ್‌ಗಳಿಗೆ ಕಾಂಗ್ರೆಸ್ 66,250 ರೂಪಾಯಿಗಳನ್ನು ಪಾವತಿಸಿದೆ.

“ಹರಿಯಾಣ ಮತ್ತು ಜಾರ್ಖಂಡ್‌ನಲ್ಲಿ ನಡೆದ ರಾಜ್ಯ ಚುನಾವಣೆಗಳಲ್ಲೂ  ಇದೇ ರೀತಿಯ ವ್ಯತ್ಯಾಸಗಳನ್ನು ಗುರುತಿಸಲಾಗಿದೆ. 2020ರ ದೆಹಲಿ ವಿಧಾನಸಭಾ ಚುನಾವಣಾ ಪ್ರಚಾರದಲ್ಲಿ, ಕಾಂಗ್ರೆಸ್ ಮತ್ತು ಅದರ ಅಭ್ಯರ್ಥಿಗಳು ಫೇಸ್‌ಬುಕ್‌ಗೆ ಸರಾಸರಿ ಪ್ರತಿ ಮಿಲಿಯನ್ ವೀಕ್ಷಣೆಗೆ 39,909 ರೂಪಾಯಿಗಳನ್ನು ಪಾವತಿಸಿದ್ದಾರೆ. ಆದರೆ ಬಿಜೆಪಿ ಪಾವತಿಸಿದ್ದು ಕೇವಲ 35,596 ರೂಪಾಯಿಗಳು ಮಾತ್ರ. ಬಿಜೆಪಿಯ ಪ್ರತಿಸ್ಪರ್ಧಿಯಾಗಿ ದೆಹಲಿ ಚುನಾವಣೆಯಲ್ಲಿ ಗೆದ್ದ ಆಮ್ ಆದ್ಮಿ ಪಕ್ಷದ (ಎಎಪಿ) ಪ್ರತಿ ಮಿಲಿಯನ್ ವೀಕ್ಷಣೆಗೆ 64,173 ರೂಪಾಯಿ ವಿಧಿಸಲಾಯಿತು. ಈ ಮೊತ್ತವು ಬಿಜೆಪಿ ಪಾವತಿಸಿದ್ದಕ್ಕಿಂತ ಶೇ. 80 ಹೆಚ್ಚಿತ್ತು” ಎಂದು ವರದಿ ಆತಂಕಪಡಿಸಿದೆ.

ವರದಿ ಕೃಪೆ: ದಿ ವೈರ್‌‌


ಇದನ್ನೂ ಓದಿರಿ: ಬಿಜೆಪಿ ಪರ ಪ್ರಚಾರ ಮಾಡುತ್ತಿರುವ NEWJ ಫೇಸ್‌ಬುಕ್ ಪೇಜ್: ದುಡ್ಡು ಮಾತ್ರ ಅಂಬಾನಿಯದ್ದು!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...

ಮುಂಬೈ: ಬಜೆಟ್ ಅಧಿವೇಶನದ ನಡುವೆ ವಿಧಾನ ಭವನದ ಬಳಿ ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ: ವಶಕ್ಕೆ ಪಡೆದ ಪೊಲೀಸರು

ಮುಂಬೈ: ಮಾರ್ಚ್ 11, ಬುಧವಾರ ಮಹಾರಾಷ್ಟ್ರ ವಿಧಾನ ಭವನದ ಹೊರಗೆ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿರುವುದಾಗಿ ವರದಿಯಾಗಿದೆ. ತಕ್ಷಣವೇ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದಾರೆ.  2026 ರ ಮಹಾರಾಷ್ಟ್ರ ಬಜೆಟ್ ಅಧಿವೇಶನ ವಿಧಾನ ಭವನದಲ್ಲಿ...

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿಕ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...

ತಮಿಳುನಾಡು| ಪೊಲೀಸ್ ದೌರ್ಜನ್ಯದಿಂದ ಎರಡು ತಿಂಗಳಲ್ಲಿ ನಾಲ್ವರು ದಲಿತರು ಸಾವು

ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿರುವ ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿರುವುದನ್ನು ಪ್ರತಿಬಿಂಬಿಸುವ ಆತಂಕಕಾರಿ ವಿಚಾರವೊಂದು ಮುನ್ನಲೆಗೆ ಬಂದಿದ್ದು, ಪೊಲೀಸ್ ಹಿಂಸಾಚಾರದಿಂದಾಗಿ ಎರಡು ತಿಂಗಳ ಅವಧಿಯಲ್ಲಿ ನಾಲ್ವರು ದಲಿತರು ಸಾವನ್ನಪ್ಪಿದ್ದಾರೆ. ಈ ಸಾವುಗಳಲ್ಲಿ, ಎರಡು ಪ್ರಕರಣಗಳನ್ನು...

ಪಶ್ಚಿಮ ಏಷ್ಯಾ ಸಂಘರ್ಷ| ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿದ್ದಾಗಿ ವಿಡಿಯೋ ಹಂಚಿಕೊಂಡ ಅಮೆರಿಕ ಸೇನೆ

ಪಶ್ಚಿಮ ಏಷ್ಯಾದಿಂದ ತೈಲ ರಫ್ತನ್ನು ತಡೆಯಲು ಇರಾನ್ ಪ್ರಯತ್ನಿಸುತ್ತಿರುವುದರಿಂದ ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿರುವುದಾಗಿ ಅಮೆರಿಕ ಸೇನೆ ಹೇಳಿಕೊಂಡಿದೆ.  ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ಹಿಂದೆ ಇರಾನ್ ಜಲಸಂಧಿಯಲ್ಲಿ ಗಣಿಗಳನ್ನು...