Homeಮುಖಪುಟಚುನಾವಣಾ ಜಾಹೀರಾತು: ಬಿಜೆಪಿಗೆ ಹೆಚ್ಚು ಅನುಕೂಲ ಮಾಡಿಕೊಟ್ಟ ಫೇಸ್‌ಬುಕ್!

ಚುನಾವಣಾ ಜಾಹೀರಾತು: ಬಿಜೆಪಿಗೆ ಹೆಚ್ಚು ಅನುಕೂಲ ಮಾಡಿಕೊಟ್ಟ ಫೇಸ್‌ಬುಕ್!

ಇತರ ಪಕ್ಷಗಳಿಗೆ ಹೋಲಿಸಿದರೆ ಬಿಜೆಪಿಯಿಂದ ಕಡಿಮೆ ಮೊತ್ತವನ್ನು ಪಡೆದು ಫೇಸ್‌ಬುಕ್‌ ಚುನಾವಣಾ ಜಾಹೀರಾತುಗಳನ್ನು ಪ್ರಕಟಿಸುತ್ತಿದೆ ಎಂಬ ಆತಂಕಕಾರಿ ಸಂಗತಿಯನ್ನು ರಿಪೋಟರ್ಸ್ ಕಲೆಕ್ಟಿವ್ ಮತ್ತು ಆಡ್‌.ವಾಚ್‌ ವರದಿ ಬಹಿರಂಗಪಡಿಸಿದೆ. (ಬಿಜೆಪಿ ಎಷ್ಟು ಪಾವತಿಸಿದೆ? ಇತರ ಪಕ್ಷಗಳು ಎಷ್ಟು ಪಾವತಿಸಿವೆ? ವಿವರಗಳಿಗೆ ಓದಿ ಮುಂದೆ ಓದಿ...)

- Advertisement -
- Advertisement -

ಇತರ ವಿರೋಧ ಪಕ್ಷಗಳಿಗೆ ಹೋಲಿಸಿದರೆ ಫೇಸ್‌ಬುಕ್‌ ಬಿಜೆಪಿಗೆ ಹೆಚ್ಚಿನ ಅನುಕೂಲ ಮಾಡಿಕೊಟ್ಟಿದೆ. ಉಳಿದ ಪಕ್ಷಗಳಿಗಿಂತ ಬಿಜೆಜೆಯ ಜಾಹೀರಾತಿಗಳಿಗೆ ಕಡಿಮೆ ಮೊತ್ತವನ್ನೂ ಪಡೆದಿದೆ ಎಂದು ರಿಪೋರ್ಟರ್ಸ್ ಕಲೆಕ್ಟಿವ್ ಮತ್ತು ಆಡ್‌.ವಾಚ್‌ ನಡೆಸಿದ ವೆಚ್ಚದ ವಿಶ್ಲೇಷಣೆಯು ಬಹಿರಂಗವಾಗಿದೆ.

2019ರ ಲೋಕಸಭಾ ಚುನಾವಣೆ ಸೇರಿದಂತೆ 10 ಚುನಾವಣೆಗಳಲ್ಲಿ ಒಂಬತ್ತರಲ್ಲಿ ಬಿಜೆಪಿ ಮೇಲುಗೈ ಸಾಧಿಸಿದೆ. ಬಿಜೆಪಿಯು ತನ್ನ ವಿರೋಧಿಗಳಿಗಿಂತ ಕಡಿಮೆ ದರವನ್ನು ಫೇಸ್‌ಬುಕ್‌‌ ಜಾಹೀರಾತುಗಳಿಗೆ ವಿಧಿಸಿದೆ. ಭಾರತದಲ್ಲಿ ಫೇಸ್‌ಬುಕ್‌ನ ಅತಿದೊಡ್ಡ ರಾಜಕೀಯ ಗ್ರಾಹಕನಾಗಿ ಬಿಜೆಪಿ ಬೆಳೆದಿದ್ದು, ಕಡಿಮೆ ಹಣಕ್ಕೆ ಹೆಚ್ಚಿನ ಮತದಾರರನ್ನು ತಲುಪಲು ಫೇಸ್‌ಬುಕ್‌ ಅನುವು ಮಾಡಿಕೊಟ್ಟಿದೆ. ಚುನಾವಣಾ ಪ್ರಚಾರಗಳಲ್ಲಿ ಬಿಜೆಪಿಗೆ ಹೆಚ್ಚಿನ ಅನುಕೂಲವಾಗಲು ಇದು ಸಹಕಾರಿಯಾಗಿದೆ” ಎಂದು ವರದಿ ಹೇಳಿದೆ.

“ಸರಾಸರಿಯಾಗಿ, ಒಂದು ಜಾಹೀರಾತನ್ನು ಒಂದು ಮಿಲಿಯನ್ ಬಾರಿ ತೋರಿಸಲು ಬಿಜೆಪಿ, ಅದರ ಅಭ್ಯರ್ಥಿಗಳು ಮತ್ತು ಅಂಗಸಂಸ್ಥೆಗಳಿಗೆ ಫೇಸ್‌ಬುಕ್‌ 41,844 ರೂಪಾಯಿಗಳನ್ನು ವಿಧಿಸಿದೆ. ಆದರೆ ಇಷ್ಟೇ ಪ್ರಮಾಣದ ವೀವ್ಸ್‌‌ ಗಳಿಸಲು ಪ್ರಮುಖ ವಿರೋಧ ಪಕ್ಷವಾದ ಕಾಂಗ್ರೆಸ್, ಅದರ ಅಭ್ಯರ್ಥಿಗಳು ಮತ್ತು ಅಂಗಸಂಸ್ಥೆಗಳಿಗೆ 53,776 ರೂಪಾಯಿಗಳನ್ನು ಫೇಸ್‌ಬುಕ್‌ ವಿಧಿಸಿದೆ. ಬಿಜೆಪಿಗಿಂತ ಸುಮಾರು ಶೇ. 29 ಹೆಚ್ಚು ಮೊತ್ತವನ್ನು ವಿರೋಧ ಪಕ್ಷಗಳು ಪಾವತಿಸಬೇಕಾಗಿತ್ತು” ಎಂಬುದು ವರದಿಯಿಂದ ತಿಳಿದುಬಂದಿದೆ.

ತನಿಖೆ ನಡೆಸಿರುವ ಸಂಸ್ಥೆಗಳು ಪ್ರಾಥಮಿಕವಾಗಿ ಬಿಜೆಪಿಯನ್ನು ಕಾಂಗ್ರೆಸ್‌ನೊಂದಿಗೆ ಹೋಲಿಸಿ ವಿಶ್ಲೇಷಣೆ ಮಾಡಿವೆ. ಏಕೆಂದರೆ ಈ ಎರಡು ಪಕ್ಷಗಳು ರಾಜಕೀಯ ಜಾಹೀರಾತುಗಳಿಗೆ ಅತಿ ಹೆಚ್ಚು ಖರ್ಚು ಮಾಡುತ್ತಿವೆ. ವಿಶ್ಲೇಷಣೆಗೆ ಒಳಪಡಿಸಲಾಗಿರುವ 10 ಚುನಾವಣೆಗಳಲ್ಲಿ ಒಂಬತ್ತರಲ್ಲಿ ಬಿಜೆಪಿಗೆ ಅನುಕೂಲಕರ ವ್ಯವಹಾರ ಕುದಿರಿದೆ ಎಂಬುದು ತನಿಖೆಯಲ್ಲಿ ಬಹಿರಂಗವಾಗಿದೆ.

22 ತಿಂಗಳ ಅವಧಿಯಲ್ಲಿನ ದತ್ತಾಂಶಗಳ ಪ್ರಕಾರ, ಬಿಜೆಪಿ ಮತ್ತು ಅದರ ಅಂಗಸಂಸ್ಥೆಗಳು ತಮ್ಮ ಅಧಿಕೃತ ಪುಟಗಳ ಮೂಲಕ ಫೇಸ್‌ಬುಕ್‌ನಲ್ಲಿ ಜಾಹೀರಾತುಗಳನ್ನು ನೀಡಲು ಒಟ್ಟು 104.1 ಮಿಲಿಯನ್ ರೂಪಾಯಿಗಳಿಗಿಂತ ಹೆಚ್ಚು ಖರ್ಚು ಮಾಡಿದೆ. ಇದಕ್ಕೆ ಪ್ರತಿಯಾಗಿ, ಕಾಂಗ್ರೆಸ್ ಮತ್ತು ಅದರ ಅಂಗಸಂಸ್ಥೆಗಳು 64.4 ಮಿಲಿಯನ್ ರೂಪಾಯಿಗಳನ್ನು ಖರ್ಚು ಮಾಡಿವೆ.

ಬಿಜೆಪಿ ಹಾಗೂ ಕಾಂಗ್ರೆಸ್ ನಿಗದಿತ ವೀವ್ಸ್‌ಗಳಿಗಾಗಿ ಖರ್ಚು ಮಾಡಿದ ದರವನ್ನು ಹೋಲಿಸಿ ನೋಡಿದರೆ, ಕನಿಷ್ಠ 11.7 ಮಿಲಿಯನ್‌ ರೂ.ಗಳನ್ನು ಕಾಂಗ್ರೆಸ್‌ ಹೆಚ್ಚುವರಿಯಾಗಿ ಪಾವತಿಸಿದೆ. ಕಾಂಗ್ರೆಸ್‌ ಮೇಲೆ ಹೆಚ್ಚಿನ ದರವನ್ನು ಫೇಸ್‌ಬುಕ್‌ ವಿಧಿಸಿದೆ.

ಒಡಿಶಾ, ಅರುಣಾಚಲ ಪ್ರದೇಶ, ಸಿಕ್ಕಿಂ ಮತ್ತು ಆಂಧ್ರಪ್ರದೇಶದ ರಾಜ್ಯ ಚುನಾವಣೆ ಹಾಗೂ 2019ರ ಲೋಕಸಭಾ ಚುನಾವಣೆಗಳಿಗೆ ಮುನ್ನ ಮೂರು ತಿಂಗಳ ಪ್ರಚಾರಕ್ಕಾಗಿ ಫೇಸ್‌ಬುಕ್‌ ಅಲ್ಗಾರಿದಮ್ ಹೇಗೆ ಕೆಲಸ ಮಾಡಿತ್ತೆಂಬುದನ್ನು ವರದಿ ಉಲ್ಲೇಖಿಸಿದೆ.

ಫೇಸ್‌ಬುಕ್‌ನ ಅಲ್ಗಾರಿದಮ್ ಮೂಲಕ 1 ಮಿಲಿಯನ್ ವೀವ್ಸ್‌ಗಳನ್ನು ಪಡೆಯಲು ಬಿಜೆಪಿ ಮತ್ತು ಅದರ ಅಭ್ಯರ್ಥಿಗಳಿಗೆ ಸರಾಸರಿ 61,584 ರೂಪಾಯಿಗಳನ್ನು ವಿಧಿಸಲಾಗಿತ್ತು. ಆದರೆ ಅದೇ ಸಂಖ್ಯೆಯ ವೀವ್ಸ್‌ಗಳಿಗೆ ಕಾಂಗ್ರೆಸ್ 66,250 ರೂಪಾಯಿಗಳನ್ನು ಪಾವತಿಸಿದೆ.

“ಹರಿಯಾಣ ಮತ್ತು ಜಾರ್ಖಂಡ್‌ನಲ್ಲಿ ನಡೆದ ರಾಜ್ಯ ಚುನಾವಣೆಗಳಲ್ಲೂ  ಇದೇ ರೀತಿಯ ವ್ಯತ್ಯಾಸಗಳನ್ನು ಗುರುತಿಸಲಾಗಿದೆ. 2020ರ ದೆಹಲಿ ವಿಧಾನಸಭಾ ಚುನಾವಣಾ ಪ್ರಚಾರದಲ್ಲಿ, ಕಾಂಗ್ರೆಸ್ ಮತ್ತು ಅದರ ಅಭ್ಯರ್ಥಿಗಳು ಫೇಸ್‌ಬುಕ್‌ಗೆ ಸರಾಸರಿ ಪ್ರತಿ ಮಿಲಿಯನ್ ವೀಕ್ಷಣೆಗೆ 39,909 ರೂಪಾಯಿಗಳನ್ನು ಪಾವತಿಸಿದ್ದಾರೆ. ಆದರೆ ಬಿಜೆಪಿ ಪಾವತಿಸಿದ್ದು ಕೇವಲ 35,596 ರೂಪಾಯಿಗಳು ಮಾತ್ರ. ಬಿಜೆಪಿಯ ಪ್ರತಿಸ್ಪರ್ಧಿಯಾಗಿ ದೆಹಲಿ ಚುನಾವಣೆಯಲ್ಲಿ ಗೆದ್ದ ಆಮ್ ಆದ್ಮಿ ಪಕ್ಷದ (ಎಎಪಿ) ಪ್ರತಿ ಮಿಲಿಯನ್ ವೀಕ್ಷಣೆಗೆ 64,173 ರೂಪಾಯಿ ವಿಧಿಸಲಾಯಿತು. ಈ ಮೊತ್ತವು ಬಿಜೆಪಿ ಪಾವತಿಸಿದ್ದಕ್ಕಿಂತ ಶೇ. 80 ಹೆಚ್ಚಿತ್ತು” ಎಂದು ವರದಿ ಆತಂಕಪಡಿಸಿದೆ.

ವರದಿ ಕೃಪೆ: ದಿ ವೈರ್‌‌


ಇದನ್ನೂ ಓದಿರಿ: ಬಿಜೆಪಿ ಪರ ಪ್ರಚಾರ ಮಾಡುತ್ತಿರುವ NEWJ ಫೇಸ್‌ಬುಕ್ ಪೇಜ್: ದುಡ್ಡು ಮಾತ್ರ ಅಂಬಾನಿಯದ್ದು!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...