Homeಮುಖಪುಟಚುನಾವಣಾ ಜಾಹೀರಾತು: ಬಿಜೆಪಿಗೆ ಹೆಚ್ಚು ಅನುಕೂಲ ಮಾಡಿಕೊಟ್ಟ ಫೇಸ್‌ಬುಕ್!

ಚುನಾವಣಾ ಜಾಹೀರಾತು: ಬಿಜೆಪಿಗೆ ಹೆಚ್ಚು ಅನುಕೂಲ ಮಾಡಿಕೊಟ್ಟ ಫೇಸ್‌ಬುಕ್!

ಇತರ ಪಕ್ಷಗಳಿಗೆ ಹೋಲಿಸಿದರೆ ಬಿಜೆಪಿಯಿಂದ ಕಡಿಮೆ ಮೊತ್ತವನ್ನು ಪಡೆದು ಫೇಸ್‌ಬುಕ್‌ ಚುನಾವಣಾ ಜಾಹೀರಾತುಗಳನ್ನು ಪ್ರಕಟಿಸುತ್ತಿದೆ ಎಂಬ ಆತಂಕಕಾರಿ ಸಂಗತಿಯನ್ನು ರಿಪೋಟರ್ಸ್ ಕಲೆಕ್ಟಿವ್ ಮತ್ತು ಆಡ್‌.ವಾಚ್‌ ವರದಿ ಬಹಿರಂಗಪಡಿಸಿದೆ. (ಬಿಜೆಪಿ ಎಷ್ಟು ಪಾವತಿಸಿದೆ? ಇತರ ಪಕ್ಷಗಳು ಎಷ್ಟು ಪಾವತಿಸಿವೆ? ವಿವರಗಳಿಗೆ ಓದಿ ಮುಂದೆ ಓದಿ...)

- Advertisement -
- Advertisement -

ಇತರ ವಿರೋಧ ಪಕ್ಷಗಳಿಗೆ ಹೋಲಿಸಿದರೆ ಫೇಸ್‌ಬುಕ್‌ ಬಿಜೆಪಿಗೆ ಹೆಚ್ಚಿನ ಅನುಕೂಲ ಮಾಡಿಕೊಟ್ಟಿದೆ. ಉಳಿದ ಪಕ್ಷಗಳಿಗಿಂತ ಬಿಜೆಜೆಯ ಜಾಹೀರಾತಿಗಳಿಗೆ ಕಡಿಮೆ ಮೊತ್ತವನ್ನೂ ಪಡೆದಿದೆ ಎಂದು ರಿಪೋರ್ಟರ್ಸ್ ಕಲೆಕ್ಟಿವ್ ಮತ್ತು ಆಡ್‌.ವಾಚ್‌ ನಡೆಸಿದ ವೆಚ್ಚದ ವಿಶ್ಲೇಷಣೆಯು ಬಹಿರಂಗವಾಗಿದೆ.

2019ರ ಲೋಕಸಭಾ ಚುನಾವಣೆ ಸೇರಿದಂತೆ 10 ಚುನಾವಣೆಗಳಲ್ಲಿ ಒಂಬತ್ತರಲ್ಲಿ ಬಿಜೆಪಿ ಮೇಲುಗೈ ಸಾಧಿಸಿದೆ. ಬಿಜೆಪಿಯು ತನ್ನ ವಿರೋಧಿಗಳಿಗಿಂತ ಕಡಿಮೆ ದರವನ್ನು ಫೇಸ್‌ಬುಕ್‌‌ ಜಾಹೀರಾತುಗಳಿಗೆ ವಿಧಿಸಿದೆ. ಭಾರತದಲ್ಲಿ ಫೇಸ್‌ಬುಕ್‌ನ ಅತಿದೊಡ್ಡ ರಾಜಕೀಯ ಗ್ರಾಹಕನಾಗಿ ಬಿಜೆಪಿ ಬೆಳೆದಿದ್ದು, ಕಡಿಮೆ ಹಣಕ್ಕೆ ಹೆಚ್ಚಿನ ಮತದಾರರನ್ನು ತಲುಪಲು ಫೇಸ್‌ಬುಕ್‌ ಅನುವು ಮಾಡಿಕೊಟ್ಟಿದೆ. ಚುನಾವಣಾ ಪ್ರಚಾರಗಳಲ್ಲಿ ಬಿಜೆಪಿಗೆ ಹೆಚ್ಚಿನ ಅನುಕೂಲವಾಗಲು ಇದು ಸಹಕಾರಿಯಾಗಿದೆ” ಎಂದು ವರದಿ ಹೇಳಿದೆ.

“ಸರಾಸರಿಯಾಗಿ, ಒಂದು ಜಾಹೀರಾತನ್ನು ಒಂದು ಮಿಲಿಯನ್ ಬಾರಿ ತೋರಿಸಲು ಬಿಜೆಪಿ, ಅದರ ಅಭ್ಯರ್ಥಿಗಳು ಮತ್ತು ಅಂಗಸಂಸ್ಥೆಗಳಿಗೆ ಫೇಸ್‌ಬುಕ್‌ 41,844 ರೂಪಾಯಿಗಳನ್ನು ವಿಧಿಸಿದೆ. ಆದರೆ ಇಷ್ಟೇ ಪ್ರಮಾಣದ ವೀವ್ಸ್‌‌ ಗಳಿಸಲು ಪ್ರಮುಖ ವಿರೋಧ ಪಕ್ಷವಾದ ಕಾಂಗ್ರೆಸ್, ಅದರ ಅಭ್ಯರ್ಥಿಗಳು ಮತ್ತು ಅಂಗಸಂಸ್ಥೆಗಳಿಗೆ 53,776 ರೂಪಾಯಿಗಳನ್ನು ಫೇಸ್‌ಬುಕ್‌ ವಿಧಿಸಿದೆ. ಬಿಜೆಪಿಗಿಂತ ಸುಮಾರು ಶೇ. 29 ಹೆಚ್ಚು ಮೊತ್ತವನ್ನು ವಿರೋಧ ಪಕ್ಷಗಳು ಪಾವತಿಸಬೇಕಾಗಿತ್ತು” ಎಂಬುದು ವರದಿಯಿಂದ ತಿಳಿದುಬಂದಿದೆ.

ತನಿಖೆ ನಡೆಸಿರುವ ಸಂಸ್ಥೆಗಳು ಪ್ರಾಥಮಿಕವಾಗಿ ಬಿಜೆಪಿಯನ್ನು ಕಾಂಗ್ರೆಸ್‌ನೊಂದಿಗೆ ಹೋಲಿಸಿ ವಿಶ್ಲೇಷಣೆ ಮಾಡಿವೆ. ಏಕೆಂದರೆ ಈ ಎರಡು ಪಕ್ಷಗಳು ರಾಜಕೀಯ ಜಾಹೀರಾತುಗಳಿಗೆ ಅತಿ ಹೆಚ್ಚು ಖರ್ಚು ಮಾಡುತ್ತಿವೆ. ವಿಶ್ಲೇಷಣೆಗೆ ಒಳಪಡಿಸಲಾಗಿರುವ 10 ಚುನಾವಣೆಗಳಲ್ಲಿ ಒಂಬತ್ತರಲ್ಲಿ ಬಿಜೆಪಿಗೆ ಅನುಕೂಲಕರ ವ್ಯವಹಾರ ಕುದಿರಿದೆ ಎಂಬುದು ತನಿಖೆಯಲ್ಲಿ ಬಹಿರಂಗವಾಗಿದೆ.

22 ತಿಂಗಳ ಅವಧಿಯಲ್ಲಿನ ದತ್ತಾಂಶಗಳ ಪ್ರಕಾರ, ಬಿಜೆಪಿ ಮತ್ತು ಅದರ ಅಂಗಸಂಸ್ಥೆಗಳು ತಮ್ಮ ಅಧಿಕೃತ ಪುಟಗಳ ಮೂಲಕ ಫೇಸ್‌ಬುಕ್‌ನಲ್ಲಿ ಜಾಹೀರಾತುಗಳನ್ನು ನೀಡಲು ಒಟ್ಟು 104.1 ಮಿಲಿಯನ್ ರೂಪಾಯಿಗಳಿಗಿಂತ ಹೆಚ್ಚು ಖರ್ಚು ಮಾಡಿದೆ. ಇದಕ್ಕೆ ಪ್ರತಿಯಾಗಿ, ಕಾಂಗ್ರೆಸ್ ಮತ್ತು ಅದರ ಅಂಗಸಂಸ್ಥೆಗಳು 64.4 ಮಿಲಿಯನ್ ರೂಪಾಯಿಗಳನ್ನು ಖರ್ಚು ಮಾಡಿವೆ.

ಬಿಜೆಪಿ ಹಾಗೂ ಕಾಂಗ್ರೆಸ್ ನಿಗದಿತ ವೀವ್ಸ್‌ಗಳಿಗಾಗಿ ಖರ್ಚು ಮಾಡಿದ ದರವನ್ನು ಹೋಲಿಸಿ ನೋಡಿದರೆ, ಕನಿಷ್ಠ 11.7 ಮಿಲಿಯನ್‌ ರೂ.ಗಳನ್ನು ಕಾಂಗ್ರೆಸ್‌ ಹೆಚ್ಚುವರಿಯಾಗಿ ಪಾವತಿಸಿದೆ. ಕಾಂಗ್ರೆಸ್‌ ಮೇಲೆ ಹೆಚ್ಚಿನ ದರವನ್ನು ಫೇಸ್‌ಬುಕ್‌ ವಿಧಿಸಿದೆ.

ಒಡಿಶಾ, ಅರುಣಾಚಲ ಪ್ರದೇಶ, ಸಿಕ್ಕಿಂ ಮತ್ತು ಆಂಧ್ರಪ್ರದೇಶದ ರಾಜ್ಯ ಚುನಾವಣೆ ಹಾಗೂ 2019ರ ಲೋಕಸಭಾ ಚುನಾವಣೆಗಳಿಗೆ ಮುನ್ನ ಮೂರು ತಿಂಗಳ ಪ್ರಚಾರಕ್ಕಾಗಿ ಫೇಸ್‌ಬುಕ್‌ ಅಲ್ಗಾರಿದಮ್ ಹೇಗೆ ಕೆಲಸ ಮಾಡಿತ್ತೆಂಬುದನ್ನು ವರದಿ ಉಲ್ಲೇಖಿಸಿದೆ.

ಫೇಸ್‌ಬುಕ್‌ನ ಅಲ್ಗಾರಿದಮ್ ಮೂಲಕ 1 ಮಿಲಿಯನ್ ವೀವ್ಸ್‌ಗಳನ್ನು ಪಡೆಯಲು ಬಿಜೆಪಿ ಮತ್ತು ಅದರ ಅಭ್ಯರ್ಥಿಗಳಿಗೆ ಸರಾಸರಿ 61,584 ರೂಪಾಯಿಗಳನ್ನು ವಿಧಿಸಲಾಗಿತ್ತು. ಆದರೆ ಅದೇ ಸಂಖ್ಯೆಯ ವೀವ್ಸ್‌ಗಳಿಗೆ ಕಾಂಗ್ರೆಸ್ 66,250 ರೂಪಾಯಿಗಳನ್ನು ಪಾವತಿಸಿದೆ.

“ಹರಿಯಾಣ ಮತ್ತು ಜಾರ್ಖಂಡ್‌ನಲ್ಲಿ ನಡೆದ ರಾಜ್ಯ ಚುನಾವಣೆಗಳಲ್ಲೂ  ಇದೇ ರೀತಿಯ ವ್ಯತ್ಯಾಸಗಳನ್ನು ಗುರುತಿಸಲಾಗಿದೆ. 2020ರ ದೆಹಲಿ ವಿಧಾನಸಭಾ ಚುನಾವಣಾ ಪ್ರಚಾರದಲ್ಲಿ, ಕಾಂಗ್ರೆಸ್ ಮತ್ತು ಅದರ ಅಭ್ಯರ್ಥಿಗಳು ಫೇಸ್‌ಬುಕ್‌ಗೆ ಸರಾಸರಿ ಪ್ರತಿ ಮಿಲಿಯನ್ ವೀಕ್ಷಣೆಗೆ 39,909 ರೂಪಾಯಿಗಳನ್ನು ಪಾವತಿಸಿದ್ದಾರೆ. ಆದರೆ ಬಿಜೆಪಿ ಪಾವತಿಸಿದ್ದು ಕೇವಲ 35,596 ರೂಪಾಯಿಗಳು ಮಾತ್ರ. ಬಿಜೆಪಿಯ ಪ್ರತಿಸ್ಪರ್ಧಿಯಾಗಿ ದೆಹಲಿ ಚುನಾವಣೆಯಲ್ಲಿ ಗೆದ್ದ ಆಮ್ ಆದ್ಮಿ ಪಕ್ಷದ (ಎಎಪಿ) ಪ್ರತಿ ಮಿಲಿಯನ್ ವೀಕ್ಷಣೆಗೆ 64,173 ರೂಪಾಯಿ ವಿಧಿಸಲಾಯಿತು. ಈ ಮೊತ್ತವು ಬಿಜೆಪಿ ಪಾವತಿಸಿದ್ದಕ್ಕಿಂತ ಶೇ. 80 ಹೆಚ್ಚಿತ್ತು” ಎಂದು ವರದಿ ಆತಂಕಪಡಿಸಿದೆ.

ವರದಿ ಕೃಪೆ: ದಿ ವೈರ್‌‌


ಇದನ್ನೂ ಓದಿರಿ: ಬಿಜೆಪಿ ಪರ ಪ್ರಚಾರ ಮಾಡುತ್ತಿರುವ NEWJ ಫೇಸ್‌ಬುಕ್ ಪೇಜ್: ದುಡ್ಡು ಮಾತ್ರ ಅಂಬಾನಿಯದ್ದು!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ: ಆರು ಜನ ಹಿರಿಯರು ಸೇರಿದಂತೆ 41 ಜನ ನಕ್ಸಲ್ ಕಾರ್ಯಕರ್ತರು ಪೊಲೀಸರಿಗೆ ಶರಣು

ದೇಶದಲ್ಲಿ ಮಾವೋವಾದಿ ವಿರೋಧಿ ಕಾರ್ಯಾಚರಣೆಗಳಲ್ಲಿ ಪ್ರಮುಖ ಬೆಳವಣಿಗೆಯಲ್ಲಿ, ಆರು ಜನ ಹಿರಿಯರು ಸೇರಿದಂತೆ 41 ಜನ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾವೋವಾದಿ) ಕಾರ್ಯಕರ್ತರು ತೆಲಂಗಾಣ ಪೊಲೀಸರ ಮುಂದೆ ಇಂದು ಶರಣಾಗಿದ್ದಾರೆ. ಶರಣಾಗತಿ ಪ್ರಕ್ರಿಯೆಯ...

‘ವೀಸಾ ಅವಧಿ ಮುಗಿಯುವ ಮೊದಲು ಪಾಕ್ ಮಹಿಳೆಯ ಪೌರತ್ವ ಅರ್ಜಿ ಪರಿಗಣಿಸಿ..’; ಕೇಂದ್ರ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್‌ ಸೂಚನೆ

ಭಾರತದಲ್ಲಿ ವಾಸಿಸುತ್ತಿರುವ ಪಾಕಿಸ್ತಾನಿ ಪ್ರಜೆಯ ಹೊಸ ಪೌರತ್ವ ಅರ್ಜಿಯನ್ನು ಸಕ್ರಿಯವಾಗಿ ಪರಿಗಣಿಸುವ ಜೊತೆಗೆ ಅವರ ದೀರ್ಘಾವಧಿಯ ವೀಸಾ ಅವಧಿ ಮುಗಿಯುವ ಮೊದಲೇ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು ಎಂದು, ವಿದೇಶಾಂಗ ಸಚಿವಾಲಯ, ಗೃಹ ಸಚಿವಾಲಯ ಮತ್ತು...

ಎಚ್‌ಐವಿ ಪಾಸಿಟಿವ್ ಎಂದು ವಜಾಗೊಳಿಸಲಾದ ಬಿಎಸ್‌ಎಫ್ ಯೋಧನನ್ನು ಮತ್ತೆ ನೇಮಿಸುವಂತೆ ಹೈಕೋರ್ಟ್ ಆದೇಶ

ಜುಲೈ 2017 ರಲ್ಲಿ ಎಚ್‌ಐವಿ ಪಾಸಿಟಿವ್ ಎಂಬ ಕಾರಣಕ್ಕೆ ಸೇವೆಯಿಂದ ವಜಾಗೊಳಿಸಲಾದ ಗಡಿ ಭದ್ರತಾ ಪಡೆಯ ಕಾನ್‌ಸ್ಟೆಬಲ್‌ ಒಬ್ಬರನ್ನು ಮರುನೇಮಕ ಮಾಡುವಂತೆ ದೆಹಲಿ ಹೈಕೋರ್ಟ್ ಆದೇಶಿಸಿದೆ.  ನ್ಯಾಯಮೂರ್ತಿಗಳಾದ ಸಿ ಹರಿಶಂಕರ್ ಮತ್ತು ಓಂ ಪ್ರಕಾಶ್...

ವೈದ್ಯೆ ಬುರ್ಖಾ ಎಳೆದ ನಿತೀಶ್‌ಕುಮಾರ್: ಶ್ರೀನಗರದಲ್ಲಿ ದೂರು ದಾಖಲಿಸಿದ ಇಲ್ತಿಜಾ ಮುಫ್ತಿ

ಪಾಟ್ನಾದಲ್ಲಿ ನಡೆದ ಸರ್ಕಾರಿ ಕಾರ್ಯಕ್ರಮದ ಸಂದರ್ಭದಲ್ಲಿ ಮುಸ್ಲಿಂ ಮಹಿಳಾ ವೈದ್ಯರ ನಿಖಾಬ್ (ಬುರ್ಖಾ) ಎಳೆಯುತ್ತಿರುವುದನ್ನು ತೋರಿಸುವ ವೈರಲ್ ವೀಡಿಯೊದ ಕುರಿತು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ವಿರುದ್ಧ ಎಫ್ಐಆರ್ ದಾಖಲಿಸಲು ಪೀಪಲ್ಸ್ ಡೆಮಾಕ್ರಟಿಕ್...

ಪ್ರಶ್ನೆಗಾಗಿ ಕಾಸು ಪ್ರಕರಣ: ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಸಲು ಅನುಮತಿಸಿದ್ದ ಲೋಕಪಾಲ್ ಆದೇಶ ರದ್ದು ಪಡಿಸಿದ ದೆಹಲಿ ಹೈಕೋರ್ಟ್

‘ಪ್ರಶ್ನೆಗಾಗಿ ಕಾಸು’ ಪ್ರಕರಣದಲ್ಲಿ ತೃಣಮೂಲ ಕಾಂಗ್ರೆಸ್(ಟಿಎಂಸಿ) ಸಂಸದೆ ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಸಲು ಸಿಬಿಐಗೆ ಅನುಮತಿ ನೀಡಿದ್ದ ಲೋಕಪಾಲ್ ಆದೇಶವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ರದ್ದುಗೊಳಿಸಿದೆ. ಇದರಿಂದಾಗಿ ಮೊಯಿತ್ರಾ ಅವರಿಗೆ ಈ...

ಜಮ್ಮು-ಕಾಶ್ಮೀರ: ಪತ್ರಕರ್ತನ ಮೊಬೈಲ್ ಫೋನ್ ವಶಪಡಿಸಿಕೊಂಡ ಪೊಲೀಸರು

ಕಿಶ್ತ್ವಾರ್‌ನಲ್ಲಿನ ವಿದ್ಯುತ್ ಯೋಜನೆಯಲ್ಲಿ ಸ್ವಜನಪಕ್ಷಪಾತ ಮತ್ತು ಭ್ರಷ್ಟಾಚಾರದ ಆರೋಪಗಳ ಕುರಿತು ವರದಿ ಮಾಡುತ್ತಿದ್ದಾಗ, ದಿ ವೈರ್ ಸುದ್ದಿ ಪೋರ್ಟಲ್‌ನ ಪತ್ರಕರ್ತ ಜೆಹಾಂಗೀರ್ ಅಲಿ ಅವರ ಮೊಬೈಲ್ ಫೋನ್ ಅನ್ನು ಬುಧವಾರ (ಡಿಸೆಂಬರ್ 17)...

ಕೇರಳದಲ್ಲಿ ಗುಂಪುಹತ್ಯೆ: ಛತ್ತೀಸ್‌ಗಢ ವಲಸೆ ಕಾರ್ಮಿಕನನ್ನು ‘ಕಳ್ಳ’ ಎಂದು ಥಳಿಸಿ ಕೊಂದ ಗುಂಪು 

ಕೇರಳದ ಪಾಲಕ್ಕಾಡ್ ಜಿಲ್ಲೆಯಲ್ಲಿ ಗುರುವಾರ ಛತ್ತೀಸ್‌ಗಢದಿಂದ ಬಂದ ವಲಸೆ ಕಾರ್ಮಿಕನೊಬ್ಬನನ್ನು ಕಳ್ಳನೆಂದು ಶಂಕಿಸಿ ಗುಂಪೊಂದು ಥಳಿಸಿ ಕೊಂದಿದೆ. ಕೊಲೆಯಾದ ವ್ಯಕ್ತಿಯನ್ನು ರಾಮನಾರಾಯಣ್ ಭಯಾರ್ (31) ಎಂದು ಗುರುತಿಸಲಾಗಿದ್ದು, ಕಳೆದ ಒಂದು ತಿಂಗಳಿನಿಂದ ಪಾಲಕ್ಕಾಡ್‌ನ ಕಾಂಜಿಕೋಡ್‌ನಲ್ಲಿರುವ...

ನೋಯ್ಡಾ ಪೊಲೀಸ್ ಠಾಣೆಯೊಳಗೆ ವಕೀಲೆ ಮೇಲೆ ಲೈಂಗಿಕ ದೌರ್ಜನ್ಯ ಆರೋಪ; ಸಿಸಿಟಿವಿ ದೃಶ್ಯಾವಳಿ ಕೇಳಿದ ಸುಪ್ರೀಂ ಕೋರ್ಟ್

ಮಹಿಳಾ ವಕೀಲೆಯೊಬ್ಬರನ್ನು 14 ಗಂಟೆಗಳ ಕಾಲ ಅಕ್ರಮವಾಗಿ ಬಂಧಿಸಿ ಪೊಲೀಸರು ಲೈಂಗಿಕ ದೌರ್ಜನ್ಯ esgi, ಕಸ್ಟಡಿಯಲ್ಲಿ ಚಿತ್ರಹಿಂಸೆ ನೀಡಿದ ಆರೋಪದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸುಪ್ರೀಂ ಕೋಡರ್ಟ್, ಮುಚ್ಚಿದ ಕವರ್‌ನಲ್ಲಿ ಸಿಸಿಟಿವಿ ದೃಶ್ಯಾವಳಿಗಳನ್ನು...

ಹಾಲು ಉತ್ಪಾದಕರಿಗೆ 1 ಲೀಟರ್ ಹಾಲಿನ ಪ್ರೋತ್ಸಾಹಧನ 5 ರಿಂದ 7 ರೂಗೆ ಏರಿಕೆ: ಅಧಿವೇಶನದಲ್ಲಿ ಸಿದ್ದರಾಮಯ್ಯ ಘೋಷಣೆ

ರೈತರ ಹಿತದೃಷ್ಠಿಯಿಂದ 1 ಲೀಟರ್ ಹಾಲಿಗೆ ಪ್ರೋತ್ಸಾಹಧನವನ್ನು 7 ರೂಪಾಯಿಗೆ ಏರಿಕೆ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಡಿಸೆಂಬರ್ 19ರಂದು ಬೆಳಗಾವಿ ಅಧಿವೇಶನದ ಕೊನೆಯ ದಿನ ಮಾತನಾಡಿದ ಅವರು, ರೈತರಿಗೆ ಹಸುಗಳನ್ನು ಸಾಕಿ...

ಬಾಂಗ್ಲಾ ದಂಗೆ: ಮಾಧ್ಯಮ ಸಂಸ್ಥೆಗಳಿಗೆ ಬೆಂಕಿ ಹಚ್ಚಿದ ಪ್ರತಿಭಟನಾಕಾರರು, ಉರಿಯುತ್ತಿದ್ದ ಕಚೇರಿಗಳಿಂದ 25 ಕ್ಕೂ ಹೆಚ್ಚು ಪತ್ರಕರ್ತರ ರಕ್ಷಣೆ

ಜುಲೈ ದಂಗೆಯ ನಾಯಕ ಷರೀಫ್ ಉಸ್ಮಾನ್ ಹಾದಿ ಅವರ ನಿಧನದ ಸುದ್ದಿ ಕೇಳಿದ ಬೆನ್ನಲ್ಲೇ ಶುಕ್ರವಾರ ಬಾಂಗ್ಲಾದೇಶದ ವಿವಿಧ ಭಾಗಗಳಲ್ಲಿ ತೀವ್ರ ಪ್ರತಿಭಟನೆಗಳು ಆರಂಭವಾಗಿದ್ದು ಹಿಂಸಾಚಾರಕ್ಕೆ ನಾಂದಿ ಹಾಡಿವೆ. ಅನೇಕ ಪ್ರತಿಭಟನಾಕಾರರು ಬೀದಿಗಿಳಿದಿದ್ದು,...