Homeಮುಖಪುಟಚುನಾವಣಾ ಜಾಹೀರಾತು: ಬಿಜೆಪಿಗೆ ಹೆಚ್ಚು ಅನುಕೂಲ ಮಾಡಿಕೊಟ್ಟ ಫೇಸ್‌ಬುಕ್!

ಚುನಾವಣಾ ಜಾಹೀರಾತು: ಬಿಜೆಪಿಗೆ ಹೆಚ್ಚು ಅನುಕೂಲ ಮಾಡಿಕೊಟ್ಟ ಫೇಸ್‌ಬುಕ್!

ಇತರ ಪಕ್ಷಗಳಿಗೆ ಹೋಲಿಸಿದರೆ ಬಿಜೆಪಿಯಿಂದ ಕಡಿಮೆ ಮೊತ್ತವನ್ನು ಪಡೆದು ಫೇಸ್‌ಬುಕ್‌ ಚುನಾವಣಾ ಜಾಹೀರಾತುಗಳನ್ನು ಪ್ರಕಟಿಸುತ್ತಿದೆ ಎಂಬ ಆತಂಕಕಾರಿ ಸಂಗತಿಯನ್ನು ರಿಪೋಟರ್ಸ್ ಕಲೆಕ್ಟಿವ್ ಮತ್ತು ಆಡ್‌.ವಾಚ್‌ ವರದಿ ಬಹಿರಂಗಪಡಿಸಿದೆ. (ಬಿಜೆಪಿ ಎಷ್ಟು ಪಾವತಿಸಿದೆ? ಇತರ ಪಕ್ಷಗಳು ಎಷ್ಟು ಪಾವತಿಸಿವೆ? ವಿವರಗಳಿಗೆ ಓದಿ ಮುಂದೆ ಓದಿ...)

- Advertisement -
- Advertisement -

ಇತರ ವಿರೋಧ ಪಕ್ಷಗಳಿಗೆ ಹೋಲಿಸಿದರೆ ಫೇಸ್‌ಬುಕ್‌ ಬಿಜೆಪಿಗೆ ಹೆಚ್ಚಿನ ಅನುಕೂಲ ಮಾಡಿಕೊಟ್ಟಿದೆ. ಉಳಿದ ಪಕ್ಷಗಳಿಗಿಂತ ಬಿಜೆಜೆಯ ಜಾಹೀರಾತಿಗಳಿಗೆ ಕಡಿಮೆ ಮೊತ್ತವನ್ನೂ ಪಡೆದಿದೆ ಎಂದು ರಿಪೋರ್ಟರ್ಸ್ ಕಲೆಕ್ಟಿವ್ ಮತ್ತು ಆಡ್‌.ವಾಚ್‌ ನಡೆಸಿದ ವೆಚ್ಚದ ವಿಶ್ಲೇಷಣೆಯು ಬಹಿರಂಗವಾಗಿದೆ.

2019ರ ಲೋಕಸಭಾ ಚುನಾವಣೆ ಸೇರಿದಂತೆ 10 ಚುನಾವಣೆಗಳಲ್ಲಿ ಒಂಬತ್ತರಲ್ಲಿ ಬಿಜೆಪಿ ಮೇಲುಗೈ ಸಾಧಿಸಿದೆ. ಬಿಜೆಪಿಯು ತನ್ನ ವಿರೋಧಿಗಳಿಗಿಂತ ಕಡಿಮೆ ದರವನ್ನು ಫೇಸ್‌ಬುಕ್‌‌ ಜಾಹೀರಾತುಗಳಿಗೆ ವಿಧಿಸಿದೆ. ಭಾರತದಲ್ಲಿ ಫೇಸ್‌ಬುಕ್‌ನ ಅತಿದೊಡ್ಡ ರಾಜಕೀಯ ಗ್ರಾಹಕನಾಗಿ ಬಿಜೆಪಿ ಬೆಳೆದಿದ್ದು, ಕಡಿಮೆ ಹಣಕ್ಕೆ ಹೆಚ್ಚಿನ ಮತದಾರರನ್ನು ತಲುಪಲು ಫೇಸ್‌ಬುಕ್‌ ಅನುವು ಮಾಡಿಕೊಟ್ಟಿದೆ. ಚುನಾವಣಾ ಪ್ರಚಾರಗಳಲ್ಲಿ ಬಿಜೆಪಿಗೆ ಹೆಚ್ಚಿನ ಅನುಕೂಲವಾಗಲು ಇದು ಸಹಕಾರಿಯಾಗಿದೆ” ಎಂದು ವರದಿ ಹೇಳಿದೆ.

“ಸರಾಸರಿಯಾಗಿ, ಒಂದು ಜಾಹೀರಾತನ್ನು ಒಂದು ಮಿಲಿಯನ್ ಬಾರಿ ತೋರಿಸಲು ಬಿಜೆಪಿ, ಅದರ ಅಭ್ಯರ್ಥಿಗಳು ಮತ್ತು ಅಂಗಸಂಸ್ಥೆಗಳಿಗೆ ಫೇಸ್‌ಬುಕ್‌ 41,844 ರೂಪಾಯಿಗಳನ್ನು ವಿಧಿಸಿದೆ. ಆದರೆ ಇಷ್ಟೇ ಪ್ರಮಾಣದ ವೀವ್ಸ್‌‌ ಗಳಿಸಲು ಪ್ರಮುಖ ವಿರೋಧ ಪಕ್ಷವಾದ ಕಾಂಗ್ರೆಸ್, ಅದರ ಅಭ್ಯರ್ಥಿಗಳು ಮತ್ತು ಅಂಗಸಂಸ್ಥೆಗಳಿಗೆ 53,776 ರೂಪಾಯಿಗಳನ್ನು ಫೇಸ್‌ಬುಕ್‌ ವಿಧಿಸಿದೆ. ಬಿಜೆಪಿಗಿಂತ ಸುಮಾರು ಶೇ. 29 ಹೆಚ್ಚು ಮೊತ್ತವನ್ನು ವಿರೋಧ ಪಕ್ಷಗಳು ಪಾವತಿಸಬೇಕಾಗಿತ್ತು” ಎಂಬುದು ವರದಿಯಿಂದ ತಿಳಿದುಬಂದಿದೆ.

ತನಿಖೆ ನಡೆಸಿರುವ ಸಂಸ್ಥೆಗಳು ಪ್ರಾಥಮಿಕವಾಗಿ ಬಿಜೆಪಿಯನ್ನು ಕಾಂಗ್ರೆಸ್‌ನೊಂದಿಗೆ ಹೋಲಿಸಿ ವಿಶ್ಲೇಷಣೆ ಮಾಡಿವೆ. ಏಕೆಂದರೆ ಈ ಎರಡು ಪಕ್ಷಗಳು ರಾಜಕೀಯ ಜಾಹೀರಾತುಗಳಿಗೆ ಅತಿ ಹೆಚ್ಚು ಖರ್ಚು ಮಾಡುತ್ತಿವೆ. ವಿಶ್ಲೇಷಣೆಗೆ ಒಳಪಡಿಸಲಾಗಿರುವ 10 ಚುನಾವಣೆಗಳಲ್ಲಿ ಒಂಬತ್ತರಲ್ಲಿ ಬಿಜೆಪಿಗೆ ಅನುಕೂಲಕರ ವ್ಯವಹಾರ ಕುದಿರಿದೆ ಎಂಬುದು ತನಿಖೆಯಲ್ಲಿ ಬಹಿರಂಗವಾಗಿದೆ.

22 ತಿಂಗಳ ಅವಧಿಯಲ್ಲಿನ ದತ್ತಾಂಶಗಳ ಪ್ರಕಾರ, ಬಿಜೆಪಿ ಮತ್ತು ಅದರ ಅಂಗಸಂಸ್ಥೆಗಳು ತಮ್ಮ ಅಧಿಕೃತ ಪುಟಗಳ ಮೂಲಕ ಫೇಸ್‌ಬುಕ್‌ನಲ್ಲಿ ಜಾಹೀರಾತುಗಳನ್ನು ನೀಡಲು ಒಟ್ಟು 104.1 ಮಿಲಿಯನ್ ರೂಪಾಯಿಗಳಿಗಿಂತ ಹೆಚ್ಚು ಖರ್ಚು ಮಾಡಿದೆ. ಇದಕ್ಕೆ ಪ್ರತಿಯಾಗಿ, ಕಾಂಗ್ರೆಸ್ ಮತ್ತು ಅದರ ಅಂಗಸಂಸ್ಥೆಗಳು 64.4 ಮಿಲಿಯನ್ ರೂಪಾಯಿಗಳನ್ನು ಖರ್ಚು ಮಾಡಿವೆ.

ಬಿಜೆಪಿ ಹಾಗೂ ಕಾಂಗ್ರೆಸ್ ನಿಗದಿತ ವೀವ್ಸ್‌ಗಳಿಗಾಗಿ ಖರ್ಚು ಮಾಡಿದ ದರವನ್ನು ಹೋಲಿಸಿ ನೋಡಿದರೆ, ಕನಿಷ್ಠ 11.7 ಮಿಲಿಯನ್‌ ರೂ.ಗಳನ್ನು ಕಾಂಗ್ರೆಸ್‌ ಹೆಚ್ಚುವರಿಯಾಗಿ ಪಾವತಿಸಿದೆ. ಕಾಂಗ್ರೆಸ್‌ ಮೇಲೆ ಹೆಚ್ಚಿನ ದರವನ್ನು ಫೇಸ್‌ಬುಕ್‌ ವಿಧಿಸಿದೆ.

ಒಡಿಶಾ, ಅರುಣಾಚಲ ಪ್ರದೇಶ, ಸಿಕ್ಕಿಂ ಮತ್ತು ಆಂಧ್ರಪ್ರದೇಶದ ರಾಜ್ಯ ಚುನಾವಣೆ ಹಾಗೂ 2019ರ ಲೋಕಸಭಾ ಚುನಾವಣೆಗಳಿಗೆ ಮುನ್ನ ಮೂರು ತಿಂಗಳ ಪ್ರಚಾರಕ್ಕಾಗಿ ಫೇಸ್‌ಬುಕ್‌ ಅಲ್ಗಾರಿದಮ್ ಹೇಗೆ ಕೆಲಸ ಮಾಡಿತ್ತೆಂಬುದನ್ನು ವರದಿ ಉಲ್ಲೇಖಿಸಿದೆ.

ಫೇಸ್‌ಬುಕ್‌ನ ಅಲ್ಗಾರಿದಮ್ ಮೂಲಕ 1 ಮಿಲಿಯನ್ ವೀವ್ಸ್‌ಗಳನ್ನು ಪಡೆಯಲು ಬಿಜೆಪಿ ಮತ್ತು ಅದರ ಅಭ್ಯರ್ಥಿಗಳಿಗೆ ಸರಾಸರಿ 61,584 ರೂಪಾಯಿಗಳನ್ನು ವಿಧಿಸಲಾಗಿತ್ತು. ಆದರೆ ಅದೇ ಸಂಖ್ಯೆಯ ವೀವ್ಸ್‌ಗಳಿಗೆ ಕಾಂಗ್ರೆಸ್ 66,250 ರೂಪಾಯಿಗಳನ್ನು ಪಾವತಿಸಿದೆ.

“ಹರಿಯಾಣ ಮತ್ತು ಜಾರ್ಖಂಡ್‌ನಲ್ಲಿ ನಡೆದ ರಾಜ್ಯ ಚುನಾವಣೆಗಳಲ್ಲೂ  ಇದೇ ರೀತಿಯ ವ್ಯತ್ಯಾಸಗಳನ್ನು ಗುರುತಿಸಲಾಗಿದೆ. 2020ರ ದೆಹಲಿ ವಿಧಾನಸಭಾ ಚುನಾವಣಾ ಪ್ರಚಾರದಲ್ಲಿ, ಕಾಂಗ್ರೆಸ್ ಮತ್ತು ಅದರ ಅಭ್ಯರ್ಥಿಗಳು ಫೇಸ್‌ಬುಕ್‌ಗೆ ಸರಾಸರಿ ಪ್ರತಿ ಮಿಲಿಯನ್ ವೀಕ್ಷಣೆಗೆ 39,909 ರೂಪಾಯಿಗಳನ್ನು ಪಾವತಿಸಿದ್ದಾರೆ. ಆದರೆ ಬಿಜೆಪಿ ಪಾವತಿಸಿದ್ದು ಕೇವಲ 35,596 ರೂಪಾಯಿಗಳು ಮಾತ್ರ. ಬಿಜೆಪಿಯ ಪ್ರತಿಸ್ಪರ್ಧಿಯಾಗಿ ದೆಹಲಿ ಚುನಾವಣೆಯಲ್ಲಿ ಗೆದ್ದ ಆಮ್ ಆದ್ಮಿ ಪಕ್ಷದ (ಎಎಪಿ) ಪ್ರತಿ ಮಿಲಿಯನ್ ವೀಕ್ಷಣೆಗೆ 64,173 ರೂಪಾಯಿ ವಿಧಿಸಲಾಯಿತು. ಈ ಮೊತ್ತವು ಬಿಜೆಪಿ ಪಾವತಿಸಿದ್ದಕ್ಕಿಂತ ಶೇ. 80 ಹೆಚ್ಚಿತ್ತು” ಎಂದು ವರದಿ ಆತಂಕಪಡಿಸಿದೆ.

ವರದಿ ಕೃಪೆ: ದಿ ವೈರ್‌‌


ಇದನ್ನೂ ಓದಿರಿ: ಬಿಜೆಪಿ ಪರ ಪ್ರಚಾರ ಮಾಡುತ್ತಿರುವ NEWJ ಫೇಸ್‌ಬುಕ್ ಪೇಜ್: ದುಡ್ಡು ಮಾತ್ರ ಅಂಬಾನಿಯದ್ದು!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....