Homeಕರ್ನಾಟಕಚುನಾವಣೆ ವಿಶ್ಲೇಷಣೆ: ಹಾನಗಲ್‌ನಲ್ಲಿ ಬಿಜೆಪಿ ಸೋತಿದ್ದೇಕೆ? ಕ್ಷೇತ್ರದ ಮತದಾರರ ವೈಶಿಷ್ಟ್ಯವೇನು?

ಚುನಾವಣೆ ವಿಶ್ಲೇಷಣೆ: ಹಾನಗಲ್‌ನಲ್ಲಿ ಬಿಜೆಪಿ ಸೋತಿದ್ದೇಕೆ? ಕ್ಷೇತ್ರದ ಮತದಾರರ ವೈಶಿಷ್ಟ್ಯವೇನು?

- Advertisement -
- Advertisement -

ಒಂದು ಕಡೆ ಬೆಲೆ ಏರಿಕೆ, ಮತ್ತೊಂದು ಕಡೆ ಸಂವಿಧಾನಿಕ ಚೌಕಟ್ಟು ಮೀರಿದ ರಾಜಕೀಯ ಮಾತುಗಾರಿಕೆ. ಇದರ ನಡುವೆ ನಡೆದ ಉಪಚುನಾವಣೆಯ ಫಲಿತಾಂಶ ಹೊರಬಿದ್ದಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರ ತವರು ಜಿಲ್ಲೆಯಾದ ಹಾವೇರಿಯ ಹಾನಗಲ್‌ ಕ್ಷೇತ್ರದಲ್ಲಿ ಬಿಜೆಪಿಗೆ ಸೋಲಾಗಿದೆ.

ಉಪಚುನಾವಣೆ ಎಂದ ಮೇಲೆ ಆಡಳಿತರೂಢ ಪಕ್ಷಕ್ಕೆ ಪ್ರತಿಷ್ಟೆಯದ್ದಾಗಿರುತ್ತದೆ. ಹಾವೇರಿ ಜಿಲ್ಲೆಯು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರ ತವರು ಜಿಲ್ಲೆಯೂ ಆಗಿರುವುದರಿಂದ ಹಾನಗಲ್‌ ಕ್ಷೇತ್ರದಲ್ಲೇ ಠಿಕಾಣಿ ಹೂಡಿದ್ದರು. ಅವರು ಮುಖ್ಯಮಂತ್ರಿಯಾದ ಬಳಿಕ ಎದುರಿಸಿದ ಮೊದಲ ವಿಧಾನಸಭಾ ಉಪ ಚುನಾವಣೆಯೂ ಇದಾಗಿದ್ದು, ಪ್ರತಿಷ್ಠೆಯ ಕಣವಾಗಿತ್ತು.

ಮಾಜಿ ಸಚಿವ ಸಿ.ಎಂ.ಉದಾಸಿಯವರ ನಿಧನದಿಂದಾಗಿ ತೆರವಾಗಿರುವ ಕ್ಷೇತ್ರದಲ್ಲಿ, ಕಾಂಗ್ರೆಸ್‌ ಪಕ್ಷವು ಕ್ಷತ್ರೀಯ ಮರಾಠ ಸಮುದಾಯದ ಶ್ರೀನಿವಾಸ ಮಾನೆಯವರಿಗೆ ಟಿಕೆಟ್ ನೀಡಿತ್ತು. ಬಿಜೆಪಿಯಿಂದ ಗಾಣಿಗ ಸಮುದಾಯದ ಶಿವರಾಜ್‌ ಸಜ್ಜನರ್‌‌ ಕಣಕ್ಕಿಳಿದಿದ್ದರು. ಸಿ.ಎಂ. ಉದಾಸಿಯವರ ಭದ್ರಕೋಟೆಯಾಗಿದ್ದ ಹಾನಗಲ್‌ನಲ್ಲಿ ಅನೇಕ ಸಲ ಕಾಂಗ್ರೆಸ್ ಅಭ್ಯರ್ಥಿಗಳೂ ಮೇಲುಗೈ ಸಾಧಿಸಿದ್ದಾರೆ. ಈ ಹಿಂದೆ ಉದಾಸಿಯವರ ವರ್ಚಿಸ್ಸಿನಿಂದಾಗಿ ನೆಲೆ ಕಂಡಿದ್ದ ಜೆಡಿಎಸ್‌, ಮುಸ್ಲಿಂ ವ್ಯಕ್ತಿ ನಿಯಾಜ್‌ ಶೇಖ್‌ ಅವರನ್ನು ಈ ಬಾರಿ ಕಣಕ್ಕಿಳಿಸಿತ್ತು.

ಇದನ್ನೂ ಓದಿರಿ: ಬಂಗಾಳ ಉಪಚುನಾವಣೆ: ಎಲ್ಲಾ ಕ್ಷೇತ್ರಗಳಲ್ಲಿ ಲಕ್ಷಕ್ಕೂ ಅಧಿಕ ಅಂತರಗಳಲ್ಲಿ ಸೋತ ಬಿಜೆಪಿ; ಭಾರಿ ಮುಖಭಂಗ!

ಸಿ.ಎಂ. ಉದಾಸಿ ಆರು ಬಾರಿ ಶಾಸಕರಾಗಿ ಆಯ್ಕೆಯಾಗಿ ದಾಖಲೆ ನಿರ್ಮಿಸಿದ್ದರೆ, ಕಾಂಗ್ರೆಸ್‌ನ ಮನೋಹರ ತಹಸೀಲ್ದಾರ್ ನಾಲ್ಕು ಬಾರಿ ಶಾಸಕರಾಗಿದ್ದರು. ಸಿ.ಎಂ. ಉದಾಸಿ ಜನತಾಪಕ್ಷ, ಜಾ.ದಳ, ಬಿಜೆಪಿ ಹಾಗೂ ಒಮ್ಮೆ ಪಕ್ಷೇತರರಾಗಿ ಗೆದ್ದಿದ್ದರು. ಹೀಗೆ ಸಿ.ಎಂ. ಉದಾಸಿಯವರಿಗೆ ಕ್ಷೇತ್ರದ ಮೇಲೆ ಹಿಡಿತ ಸಾಧಿಸಿದ್ದರು. ಬಿಜೆಪಿಯ ಭದ್ರಕೋಟೆಯಾಗಿಯೂ ಉದಾಸಿ ಕ್ಷೇತ್ರವನ್ನು ಬಲಪಡಿಸಿದ್ದರು. ಆದರೆ ಉದಾಸಿಯವರ ನಿಧನದ ನಂತರ ನಡೆದ ಚುನಾವಣೆ ಆಡಳಿತಾರೂಢ ಬಿಜೆಪಿಗೆ ಎಚ್ಚರಿಕೆಯ ಘಂಟೆಯಾಗಿ ಪರಿಣಮಿಸಿದೆ.

ಶ್ರೀನಿವಾಸ ಮಾನೆ ಮತ್ತು ಶಿವರಾಜ್‌ ಸಜ್ಜನರ್‌‌

ಮತ ಎಣಿಕೆಯ 19ನೇ ಸುತ್ತಿನ ಅಂತ್ಯಕ್ಕೆ ಕಾಂಗ್ರೆಸ್ ಅಭ್ಯರ್ಥಿ ಶ್ರೀನಿವಾಸ ಮಾನೆಯವರು 87,300 ಮತಗಳನ್ನು ಪಡೆದರೆ ಬಿಜೆಪಿ ಅಭ್ಯರ್ಥಿ ಶಿವರಾಜ್ ಸಜ್ಜನರ್‌‌ 79,874 ಮತಗಳಿಗೆ ಸೀಮಿತವಾದರು. ಇನ್ನು ಜೆಡಿಎಸ್‌ನ ನಿಯಾಜ್ ಶೇಖ್ ಕೇವಲ 923 ಮತಗಳನ್ನು ಪಡೆದಿದ್ದಾರೆ. 7,426 ಮತಗಳ ಅಂತದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಗೆದ್ದಿದ್ದಾರೆ.

ಬಿಜೆಪಿಯ ಸೋಲಿಗೆ ಕಾರಣಗಳು

  1. ಕಾಂಗ್ರೆಸ್ ಅಭ್ಯರ್ಥಿ ಶ್ರೀನಿವಾಸ ಮಾನೆ ಅವರು ಕೋವಿಡ್ ಸಮಯದಲ್ಲಿ ಮಾಡಿರುವ ಕೆಲಸಗಳು ಕಾಂಗ್ರೆಸ್‌ ಪರ ಮತದಾರರು ವಾಲಲು ಕಾರಣವಾಯಿತು. ಶ್ರೀನಿವಾಸ ಮಾನೆ ಹಾಗೂ ಮನೋಹರ ತಹಸಿಲ್ದಾರ್‌ ಬಣದ ನಡುವಿನ ಕಿತ್ತಾಟಗಳು ಕೊನೆ ಹಂತದಲ್ಲಿ ತಣ್ಣಗಾಗಿದ್ದವು.
  2. ಎಲ್ಲ ಪಕ್ಷಗಳ ಅಭ್ಯರ್ಥಿಗಳೂ ಹೊರಗಿನವರಾಗಿದ್ದರು. ದುಡ್ಡು ಹೊರಗಿನದ್ದಾಗಿತ್ತು. ಪ್ರಚಾರದಲ್ಲಿ ಪಾಲ್ಗೊಂಡ ಬಹುತೇಕ ಕಾರ್ಯಕರ್ತರೂ ಹೊರಗಿನವರಾಗಿದ್ದರು. ವಾಹನಗಳೂ ಹೊರಗಿನವು, ಘೋಷಣೆ ಕೂಗುವವರು ಹೊರಗಿನವರಾಗಿದ್ದರು. ಮಾನೆಯವರು ಕ್ಷೇತ್ರದ ಹೊರಗಿನವರಾದರೂ ದೀರ್ಘಕಾಲದ ಸಂಪರ್ಕ ಸಾಧಿಸಿ, ಜನರಿಗೆ ಹತ್ತಿರವಾಗಿದ್ದರು.ಇದನ್ನೂ ಓದಿರಿ: ನಾಲ್ಕೂ ಸ್ಥಾನ ಕಾಂಗ್ರೆಸ್ ಪಾಲು: ಹಿಮಾಚಲ ಪ್ರದೇಶದಲ್ಲಿ ಬಿಜೆಪಿಗೆ ಹೀನಾಯ ಸೋಲು
  3. ಮಾನೆಯವರು ಕೋವಿಡ್ ಸಂದರ್ಭದಲ್ಲಿ ಮಾಡಿಸಿದ ಕೆಲಸಗಳನ್ನು ಮುನ್ನೆಲೆಗೆ ತಂದು ಪ್ರಚಾರ ಪಡೆದರು. ಶಿವರಾಜ್‌ ಸಜ್ಜನರ್‌ ಅವರು ದಿಢೀರನೆ ಕ್ಷೇತ್ರಕ್ಕೆ ಬಂದವರು. ಅವರ ಮೇಲೆ ಸಂಗೂರು ಸಕ್ಕರೆ ಕಾರ್ಖಾನೆ ವಿಚಾರದಲ್ಲಿ ಭ್ರಷ್ಟಾಚಾರದ ಆರೋಪಗಳಿದ್ದವು.
  4. ಕಾಂಗ್ರೆಸ್‌ ಮತ್ತು ಬಿಜೆಪಿ ಎರಡರಲ್ಲೂ ಬಿ ಟೀಮ್‌ಗಳು ಕೆಲಸ ಮಾಡಿದ್ದವು. ಕೊನೆಯ ಕ್ಷಣದಲ್ಲಿ ಕಾಂಗ್ರೆಸ್ ಬಿ ಟೀಮ್‌ನ ಕೆಲಸಗಳು ಸ್ಪಲ್ಪ ಗೌಣವಾಗಿಯಿತು. ಬಿಜೆಪಿ ಕಾರ್ಯಕರ್ತರೇ ‘ಬಿ’ ಟೀಮ್‌ ಆಗಿ ಪರಿವರ್ತನೆಯಾಗಿದ್ದರು. ಶಿವರಾಜ್‌ ಸಜ್ಜನರ್‌ ಆರ್‌‌ಎಸ್‌ಎಸ್‌ ಕಾರ್ಯಕರ್ತನಲ್ಲ, ಕ್ಷೇತ್ರದ ವ್ಯಕ್ತಿಯಲ್ಲ. ಆತ ತಮ್ಮ ಸಂಪರ್ಕದಲ್ಲೇ ಇಲ್ಲ ಎಂಬ ಭಾವನೆ ಕಾರ್ಯಕರ್ತರಿಗಿತ್ತು. ಸ್ಥಳೀಯ ಬಿಜೆಪಿ ಮುಖಂಡರಲ್ಲಿ ಯಾರನ್ನಾದರೂ ಚುನಾವಣೆಗೆ ನಿಲ್ಲಿಸಿದ್ದರೂ ಗೆಲುವು ಸಾಧಿಸಬಹುದಿತ್ತು ಎಂದು ಕೆಲವರು ಹೇಳುತ್ತಾರೆ.
  5. ಹಾನಗಲ್ ತಾಲ್ಲೂಕಿನಲ್ಲಿ ದುಡ್ಡು ಇಂದು ನಡೆದಿಲ್ಲ, ಹಿಂದೆಯೂ ನಡೆದಿಲ್ಲ, ಮುಂದೆಯೂ ನಡೆಯಲ್ಲ. ಸೋಲಿಸುವ ಚುನಾವಣೆಗಳನ್ನು ನಡೆಸುವುದು ಕ್ಷೇತ್ರದ ವೈಶಿಷ್ಟ್ಯ. ಸಿ.ಎಂ. ಉದಾಸಿಯವರ ಪುತ್ರ ಶಿವಕುಮಾರ್‌ ಉದಾಸಿಯವರ ಒಟ್ಟು ತಂಡವನ್ನು ಸೋಲಿಸುವ ಚುನಾವಣೆ ಇದಾಗಿತ್ತು. ಮಾನೆಯನ್ನು ಗೆಲ್ಲಿಸುವ ಚುನಾವಣೆ ಎಂಬುದಕ್ಕಿಂತ ಉದಾಸಿಯನ್ನು ಸೋಲಿಸುವ ಚುನಾವಣೆ ಇದಾಗಿತ್ತು ಎನ್ನುತ್ತಾರೆ ನೋಟಾ ಮತದಾನ ಜಾಗೃತಿ ಮೂಡಿಸುತ್ತಿರುವ ಪ್ರಶಾಂತ್‌ ಮುಚ್ಚಂಡಿ.
  6. ದುಡ್ಡು ತೆಗೆದುಕೊಂಡು ಬಂದು, ಜಾತಿ ಮುಂದೆ ಮಾಡಿ ಚುನಾವಣೆ ನಡೆಸುತ್ತೇನೆಂದರೆ ಇಲ್ಲಿ ನಡೆಯಲ್ಲ. ಕಡಿಮೆ ಅವಧಿಯ ತಂತ್ರಗಾರಿಕೆ ಫಲಿಸುವುದಿಲ್ಲ. ದೀರ್ಘಕಾಲೀನ ತಂತ್ರಗಾರಿಕೆ ಕ್ಷೇತ್ರದಲ್ಲಿ ಕೆಲಸ ಮಾಡುತ್ತದೆ. ಇದು ಸಿ.ಎಂ.ಉದಾಸಿಯವರಿಗೂ ತಿಳಿದಿತ್ತು. ಉದಾಸಿಯವರು ಒಮ್ಮೆ ಸೋತಾಗ ಬೆಳೆ ವಿಮೆ ಹೋರಾಟವನ್ನು ಆರಂಭಿಸಿದ್ದರು. ನಂತರದ ಚುನಾವಣೆಯಲ್ಲಿ ಅನಾಯಾಸವಾಗಿ ಗೆದ್ದರು. ಬೆಳೆ ವಿಮೆ ಹೋರಾಟ ಯಾವ ಮಟ್ಟಕ್ಕೆ ಆಗಿತ್ತೆಂದರೆ, ಹಣವನ್ನು ಹೆಚ್ಚಾಗಿ ಖರ್ಚು ಮಾಡುವ ಪ್ರಮೇಯವೇ ಅವರಿಗೆ ಬಂದಿರಲಿಲ್ಲ ಎಂದು ನೆನೆಯುತ್ತಾರೆ ಪ್ರಶಾಂತ್‌ ಮುಚ್ಚಂಡಿ.
  7. ಶಿವರಾಜ್ ಸಜ್ಜನರ್‌ ಅವರನ್ನು ಕ್ಷೇತ್ರಕ್ಕೆ ಕರೆತಂದಿದ್ದು ಬಿಜೆಪಿ ಮಾಡಿದ ತಪ್ಪೇನಲ್ಲ. ಆದರೆ ಕಡಿಮೆ ಅವಧಿಯಲ್ಲಿ ಸಜ್ಜನರ್‌ ಅವರನ್ನು ಕ್ಷೇತ್ರಕ್ಕೆ ತಂದರು. ಮೊದಲೇ ಕ್ಷೇತ್ರಕ್ಕೆ ಸಜ್ಜನರ್‌ ಬಂದು, ಜನರೊಂದಿಗೆ ಒಡನಾಡಿ, ಕಾರ್ಯಕ್ರಮಗಳಲ್ಲಿ ಭಾಗವಹಿಸಿ, ಭಾಷಣಗಳನ್ನು ಮಾಡಿ ವರ್ಚಸ್ಸು ವೃದ್ಧಿಸಿಕೊಳ್ಳಬೇಕಿತ್ತು. ಒಂದು ತಂಡವನ್ನು ರೂಪಿಸಿಕೊಳ್ಳಬೇಕಿತ್ತು, ಜನರಲ್ಲಿ ಭರವಸೆಗಳನ್ನು ಬಿತ್ತಬೇಕಿತ್ತು. ಇಷ್ಟಾದರೂ ಮಾಡಿದ್ದರೂ ಬಿಜೆಪಿಗೆ ಅನುಕೂಲವಾಗುತ್ತಿತ್ತು ಎಂಬುದು ಕ್ಷೇತ್ರದ ಮತದಾರರ ಅಭಿಪ್ರಾಯ.

ಇದನ್ನೂ ಓದಿರಿ: ಹರಿಯಾಣ ಉಪಚುನಾವಣೆ: ಕೃಷಿ ಕಾನೂನುಗಳನ್ನು ವಿರೋಧಿಸಿ ರಾಜೀನಾಮೆ ಕೊಟ್ಟಿದ್ದ ಅಭಯ್ ಚೌಟಾಲಾಗೆ ಗೆಲುವು

ಶಿವಕುಮಾರ್‌ ಉದಾಸಿ ಕಡೆಗಣಿಸಲು ಸಾಧ್ಯವೆ?

ಬಿಜೆಪಿ ಅಭ್ಯರ್ಥಿಯಾಗಿರುವ ಶಿವರಾಜ್‌ ಸಜ್ಜನರ್ ಉದಾಸಿಯವರ ಕುಟುಂಬಕ್ಕೆ ಆಪ್ತರು. ಸಿ.ಎಂ.ಉದಾಸಿಯವರ ಮಾನಸಪುತ್ರ ಎಂದೇ ಖ್ಯಾತರಾಗಿದ್ದರು. ಸಜ್ಜನರ್‌ ಅವರಿಗೆ ನೀಡಿದ ಟಿಕೆಟ್‌, ಉದಾಸಿ ಕುಟುಂಬಕ್ಕೇ ನೀಡಿದ ಟಿಕೆಟ್ ಅಲ್ಲದೇ ಬೇರೇನೂ ಅಲ್ಲ ಎಂದು ಭಾವಿಸಲಾಗಿತ್ತು. ಈ ಸೋಲಿನ ನಂತರ ಸಿ.ಎಂ. ಉದಾಸಿಯವರ ಪುತ್ರ ಶಿವಕುಮಾರ್ ಉದಾಸಿಯವರನ್ನು ಬಿಜೆಪಿ ಕಡೆಗಣಿಸಲಿದೆಯೇ ಎಂಬ ಪ್ರಶ್ನೆ ಮೂಡುತ್ತದೆ.

ಈ ಸೋಲಿನ ನಂತದಲ್ಲಿ ಶಿವಕುಮಾರ್‌ ಉದಾಸಿ ಅವರನ್ನು  ಪರಿಗಣನೆಗೆ ತೆಗೆದುಕೊಳ್ಳದಿದ್ದರೆ ಮುಂದಿನ ಚುನಾವಣೆಗಳಲ್ಲಿ ಬಿಜೆಪಿಗೆ ತಿರುಗುಬಾಣವೂ ಆಗಬಹುದು ಎನ್ನುತ್ತಾರೆ ಕ್ಷೇತ್ರದ ಮುಖಂಡರು. ಒಂದು ದೊಡ್ಡ ತಂಡವನ್ನೇ ಬೇರೆ ಪಕ್ಷಕ್ಕೆ ತೆಗೆದುಕೊಂಡು ಹೋಗುವ ಸಾಮರ್ಥ್ಯ ಶಿವಕುಮಾರ್‌ ಉದಾಸಿಯವರಿಗಿದೆ. ಕಾಂಗ್ರೆಸ್‌ಗೆ ಹೋದರೂ ಹೋಗಬಹುದು. “ಎಂಎಲ್‌ಎ ಟಿಕೆಟ್‌ ನನ್ನ ಪತ್ನಿಗೆ ಕೊಡಿ, ಎಂಪಿ ಟಿಕೆಟ್‌ ನನಗೆ ಕೊಡಿ” ಎಂದು ಕಾಂಗ್ರೆಸ್‌ ಮುಂದೆ ಉದಾಸಿಯವರು ಬೇಡಿಕೆ ಇಡಬಹುದು. ಕಾಂಗ್ರೆಸ್‌ನವರು ಸುಲಭವಾಗಿ ಟಿಕೆಟ್‌ ಕೊಟ್ಟುಬಿಡುವ ಸಾಧ್ಯತೆಯೂ ಇದೆ. ಹೀಗಾಗಿ ಬಿಜೆಪಿ ಎಚ್ಚರಿಕೆಯ ಹೆಜ್ಜೆ ಇಡುವುದು ಖಚಿತ. ಒಂದು ವೇಳೆ ಉದಾಸಿಯವರನ್ನು ನಿರ್ಲಕ್ಷಿಸಿದರೆ ಕ್ಷೇತ್ರದಲ್ಲಿ ಬಿಜೆಪಿ ಒಡೆದುಹೋಗುವ ಸಾಧ್ಯತೆಯೇ ಹೆಚ್ಚು ಎನ್ನುತ್ತಾರೆ ವಿಶ್ಲೇಷಕರು.

ಮಾನೆ ಮುಂದಿದೆ ಸವಾಲು

ಶ್ರೀನಿವಾಸ ಮಾನೆಯವರ ಮುಂದೆ ಸಾಕಷ್ಟು ಸವಾಲುಗಳಿವೆ. ಕಡಿಮೆ ಅವಧಿಯಲ್ಲಿ ಮತ್ತೆ ಚುನಾವಣೆ ಎದುರಾಗಲಿದೆ. ಬಡವರ ಬೇಡಿಕೆಗಳನ್ನು ಬೇಗನೆ ಈಡೇರಿಸದಿದ್ದರೆ ಮುಂದಿನ ಚುಣಾವಣೆಯಲ್ಲಿ ಮಾನೆಯವರಿಗೆ ತಿರುಗುಬಾಣವಾಗಲು ಸಾಧ್ಯತೆಗಳಿವೆ. ಜೊತೆಗೆ ಬಿಜೆಪಿ ಸರ್ಕಾರ ಅಧಿಕಾರದಲ್ಲಿ ಇರುವುದರಿಂದ ಅಭಿವೃದ್ಧಿ ಕಾಮಗಾರಿಗಳನ್ನು ನಡೆಸಲು ಸಾಧ್ಯವಾಗದೆ ಇರಬಹುದು. ಹಾನಗಲ್‌ ಕ್ಷೇತ್ರದಲ್ಲಿ ಬಿಜೆಪಿ ಸಂಘಟಿತವಾಗಲು ಇದು ಸರಿಯಾದ ಸಮಯ.


ಇದನ್ನೂ ಓದಿರಿ: ರಾಜ್ಯ ಉಪಚುನಾವಣೆ ಫಲಿತಾಂಶ: ಸಿಂದಗಿಯಲ್ಲಿ ಬಿಜೆಪಿಗೆ ಭರ್ಜರಿ ಗೆಲುವು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮೊಬೈಲ್ ಪತ್ತೆ ಪ್ರಕರಣ: ಪ್ರಜ್ವಲ್ ರೇವಣ್ಣ 2 ದಿನ ಪೊಲೀಸ್ ಕಸ್ಟಡಿಗೆ

ಅತ್ಯಾಚಾರ ಪ್ರಕರಣದಲ್ಲಿ ಶಿಕ್ಷೆಗೆ ಗುರಿಯಾಗಿ ಸಜಾ ಕೈದಿಯಾಗಿ ಪರಪ್ಪನ ಅಗ್ರಹಾರ ಜೈಲು ಸೇರಿರುವ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರಿಗೆ ಮತ್ತೊಂದು ಕಾನೂನು ಸಂಕಷ್ಟ ಎದುರಾಗಿದೆ. ಜೈಲಿನ ಅವರ ಕೊಠಡಿಯಲ್ಲಿ ಅಕ್ರಮವಾಗಿ ಮೊಬೈಲ್...

ರಾಜ್ಯದಲ್ಲಿ ಅವಧಿ ಮೀರಿದ ಆಹಾರ ಪೂರೈಕೆಯ ಬೃಹತ್ ದಂಧೆ: ₹1.43 ಕೋಟಿಯ ಉತ್ಪನ್ನಗಳು ಜಪ್ತಿ

ಆನ್‌ಲೈನ್ ಮತ್ತು ಇ-ಕಾಮರ್ಸ್ ವೇದಿಕೆಗಳ ಮೂಲಕ ಸಾರ್ವಜನಿಕರಿಗೆ ಅವಧಿ ಮೀರಿದ ಹಾಗೂ ಕಳಪೆ ಗುಣಮಟ್ಟದ ಆಹಾರ ಉತ್ಪನ್ನಗಳನ್ನು ಸರಬರಾಜು ಮಾಡುತ್ತಿದ್ದ ಬೃಹತ್ ದಂಧೆಯನ್ನು ಕರ್ನಾಟಕ ಆಹಾರ ಸುರಕ್ಷತೆ ಮತ್ತು ಔಷಧ ಆಡಳಿತ ಇಲಾಖೆ...

ಭಾರತೀಯ ಮಹಿಳೆಯನ್ನು ಬಾಂಗ್ಲಾ ಗಡಿಯಾಚೆಗೆ ತಳ್ಳಿದ ಪ್ರಕರಣ : 2 ಲಕ್ಷ ರೂ. ಪರಿಹಾರ ಪಾವತಿಸಲು ಅಸ್ಸಾಂ ಸರ್ಕಾರಕ್ಕೆ ಗುವಾಹಟಿ ಹೈಕೋರ್ಟ್ ಆದೇಶ

ಪಶ್ಚಿಮ ಬಂಗಾಳ ಮೂಲದ ಮುಸ್ಲಿಂ ಮಹಿಳೆಯೊಬ್ಬರಿಗೆ ವಿದೇಶಿಯರ ನ್ಯಾಯಾಧಿಕರಣದ (ಫಾರಿನರ್ಸ್ ಟ್ರಿಬ್ಯೂನಲ್) ಆದೇಶವನ್ನು ಪ್ರಶ್ನಿಸಲು ಯಾವುದೇ ಅವಕಾಶ ನೀಡದೆ, ಅವರನ್ನು ಬಾಂಗ್ಲಾ ಗಡಿಯಾಚೆಗೆ ತಳ್ಳಿದ್ದಕ್ಕಾಗಿ ಮಧ್ಯಂತರ ಪರಿಹಾರವಾಗಿ ಆಕೆಯ ಪತಿಗೆ 2 ಲಕ್ಷ...

ಮಂಡಿಯ ಐಐಟಿ ಕ್ಯಾಂಪಸ್‌ನಲ್ಲಿ ‘ಶೂದ್ರರು ಮೇಲ್ವರ್ಗಗಳ ಸೇವಕರು’ ಎಂಬ ವರ್ಣ ಶ್ರೇಣೀಕರಣ ಚಿತ್ರಣ: ಜಾತಿ ವಿವಾದದ ನಂತರ ತನಿಖೆಗೆ ಆದೇಶ

ಮಂಡಿ: ಶೂದ್ರರನ್ನು ‘ಉನ್ನತ ವರ್ಗಗಳಿಗೆ ಸೇವೆ ಸಲ್ಲಿಸಲು ಉದ್ದೇಶಿಸಿರುವವರು’ ಎಂದು ಬಿಂಬಿಸುವ ಪೋಸ್ಟರ್‌ವೊಂದು ಹಿಮಾಚಲ ಪ್ರದೇಶದ ಐಐಟಿ ಮಂಡಿಯಲ್ಲಿ ಜಾತಿ ವಿವಾದಕ್ಕೆ ಕಾರಣವಾಗಿದ್ದು, ಪ್ರಕರಣದ ಕುರಿತು ಸಂಸ್ಥೆ ತನಿಖೆಗೆ ಆದೇಶಿಸಿದೆ. ಸೆಪ್ಟೆಂಬರ್ 4ರಂದು...

ಎಸ್ಐಆರ್ ಬಳಿಕ ಮಣಿಪುರ, ಸಿಕ್ಕಿಂ, ಮಿಜೋರಾಂನಲ್ಲಿ 2.24 ಲಕ್ಷ ಮತದಾರರ ಹೆಸರು ಕಡಿತ: ಸಿಕ್ಕಿಂನಲ್ಲಿ ಶೇ.11.15ರಷ್ಟು ಇಳಿಕೆ 

ನವದೆಹಲಿ: ವಿಶೇಷ ತೀವ್ರ ಮತದಾರರ ಪಟ್ಟಿ ಪರಿಷ್ಕರಣೆ (SIR) ಬಳಿಕ ಈಶಾನ್ಯ ಭಾರತದ ಮಣಿಪುರ, ಸಿಕ್ಕಿಂ ಮತ್ತು ಮಿಜೋರಾಂ ರಾಜ್ಯಗಳ ಮತದಾರರ ಪಟ್ಟಿಯಲ್ಲಿ ದೊಡ್ಡ ಪ್ರಮಾಣದ ಬದಲಾವಣೆ ಕಂಡುಬಂದಿದೆ. ಈ ಮೂರು ರಾಜ್ಯಗಳಲ್ಲಿ...

ಜೆಎನ್‌ಯು ಪ್ರೊಫೆಸರ್ ವಿರುದ್ಧ ಲೈಂಗಿಕ ಕಿರುಕುಳ ಆರೋಪ : 10ಕ್ಕೂ ಹೆಚ್ಚು ವಿದ್ಯಾರ್ಥಿನಿಯರಿಂದ ದೂರು

ದೆಹಲಿಯ ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ (ಜೆಎನ್‌ಯು) ಆಂತರಿಕ ದೂರುಗಳ ಸಮಿತಿಯು (ಐಸಿಸಿ), ಸುಮಾರು ಹನ್ನೊಂದು ವಿದ್ಯಾರ್ಥಿನಿಯರು ಪ್ರೊಫೆಸರ್ ಒಬ್ಬರ ವಿರುದ್ಧ ಮಾಡಿರುವ ಲೈಂಗಿಕ ಕಿರುಕುಳದ ಆರೋಪಗಳ ಕುರಿತು ಪ್ರಸ್ತುತ ತನಿಖೆ ನಡೆಸುತ್ತಿದೆ ಎಂದು...

ಹಿಂದೂ ಧಾರ್ಮಿಕ ಸಂಘಟನೆ ನಿಯೋಗದ ಭೇಟಿ ವೇಳೆ ಮಹಿಳಾ ಸಿಬ್ಬಂದಿಯನ್ನು ದೂರವಿಟ್ಟ ಆರೋಪ; ಈಫೆಲ್ ಟವರ್‌ನಲ್ಲಿ ನೌಕರರ ಮುಷ್ಕರ

ಹಿಂದೂ ಧಾರ್ಮಿಕ ಸಂಘಟನೆ ಬಿಎಪಿಎಸ್ (BAPS) ನಿಯೋಗದ ಭೇಟಿಯ ವೇಳೆ ಮಹಿಳಾ ಸಿಬ್ಬಂದಿಯನ್ನು ಕೆಲಸದ ಸ್ಥಳಗಳಿಂದ ದೂರವಿಡಲಾಗಿತ್ತು ಎಂಬ ಆರೋಪ ಫ್ರಾನ್ಸ್‌ನಲ್ಲಿ ವಿವಾದಕ್ಕೆ ಕಾರಣವಾಗಿದೆ. ಘಟನೆಯನ್ನು ಖಂಡಿಸಿ ಈಫೆಲ್ ಟವರ್‌ನ ಸಿಬ್ಬಂದಿ ಸೋಮವಾರ...

KPSC ಪಶುವೈದ್ಯಾಧಿಕಾರಿ ನೇಮಕಾತಿ ಅಕ್ರಮ: CID ತನಿಖೆಯಲ್ಲಿ ರೂ. 12 ಕೋಟಿಗೂ ಅಧಿಕ ಡೀಲ್ ಬಯಲು!

ಕರ್ನಾಟಕ ಲೋಕಸೇವಾ ಆಯೋಗ (KPSC) ನಡೆಸಿದ ಪಶುವೈದ್ಯಾಧಿಕಾರಿ ಹುದ್ದೆಗಳ ನೇಮಕಾತಿ ಪರೀಕ್ಷೆಯ ಅಕ್ರಮ ಪ್ರಕರಣದ ತನಿಖೆ ತೀವ್ರಗೊಂಡಿದ್ದು, ಸಿಐಡಿ (CID) ತನಿಖೆಯಲ್ಲಿ ಸಾಲು ಸಾಲು ಆಘಾತಕಾರಿ ಸಂಗತಿಗಳು ಹೊರಬಿದ್ದಿವೆ. ಒಟ್ಟು 24 ಅಭ್ಯರ್ಥಿಗಳು ಹಣ...

ದೆಹಲಿಯಲ್ಲಿ ಮಣಿಪುರದ ಸಂಗೀತಗಾರನ ಗುಂಪು ಹತ್ಯೆ : ಎಂಟು ಜನರ ಬಂಧನ

ದೆಹಲಿಯ ಆಶ್ರಮ್ ಪ್ರದೇಶದಲ್ಲಿ ವಾಸಿಸುತ್ತಿದ್ದ ಮಣಿಪುರದ ಸಂಗೀತಗಾರ ಚೊಂಗ್ಥಾಮ್ ವಿಕ್ರಮ್ ಸಿಂಗ್ ಅವರು ಭಾನುವಾರ (ಸೆ.6) ರಾತ್ರಿ ಗುಂಪೊಂದರಿಂದ ಕಲ್ಲು ತೂರಾಟ ಅಥವಾ ಹಲ್ಲೆಗೆ ಒಳಗಾಗಿ, ಅದರಿಂದ ಉಂಟಾದ ಗಂಭೀರ ಗಾಯಗಳಿಂದಾಗಿ ಸೋಮವಾರ...

SIR: ಚಿಂತಕ ಪರಕಾಲ ಪ್ರಭಾಕರ್‌ಗೆ ಚುನಾವಣಾ ಆಯೋಗದಿಂದ ನೋಟಿಸ್

ಅರ್ಥಶಾಸ್ತ್ರಜ್ಞ, ರಾಜಕೀಯ ವಿಶ್ಲೇಷಕ ಡಾ. ಪರಕಾಲ ಪ್ರಭಾಕರ್ ಅವರಿಗೂ ಈಗ ‘ವಿಶೇಷ ತೀವ್ರ ಪರಿಷ್ಕರಣೆ’ (SIR) ಪ್ರಕ್ರಿಯೆಯಡಿ ಚುನಾವಣಾ ಆಯೋಗದ ನೋಟಿಸ್ ಜಾರಿಯಾಗಿದೆ. ವೋಟರ್ ಐಡಿ ಪರಿಶೀಲನೆಯಲ್ಲಿ ‘Logical Discrepancy’ (ತಾರ್ಕಿಕ ಅಸಂಗತತೆ)...