Homeಕರ್ನಾಟಕಚುನಾವಣೆ ವಿಶ್ಲೇಷಣೆ: ಹಾನಗಲ್‌ನಲ್ಲಿ ಬಿಜೆಪಿ ಸೋತಿದ್ದೇಕೆ? ಕ್ಷೇತ್ರದ ಮತದಾರರ ವೈಶಿಷ್ಟ್ಯವೇನು?

ಚುನಾವಣೆ ವಿಶ್ಲೇಷಣೆ: ಹಾನಗಲ್‌ನಲ್ಲಿ ಬಿಜೆಪಿ ಸೋತಿದ್ದೇಕೆ? ಕ್ಷೇತ್ರದ ಮತದಾರರ ವೈಶಿಷ್ಟ್ಯವೇನು?

- Advertisement -
- Advertisement -

ಒಂದು ಕಡೆ ಬೆಲೆ ಏರಿಕೆ, ಮತ್ತೊಂದು ಕಡೆ ಸಂವಿಧಾನಿಕ ಚೌಕಟ್ಟು ಮೀರಿದ ರಾಜಕೀಯ ಮಾತುಗಾರಿಕೆ. ಇದರ ನಡುವೆ ನಡೆದ ಉಪಚುನಾವಣೆಯ ಫಲಿತಾಂಶ ಹೊರಬಿದ್ದಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರ ತವರು ಜಿಲ್ಲೆಯಾದ ಹಾವೇರಿಯ ಹಾನಗಲ್‌ ಕ್ಷೇತ್ರದಲ್ಲಿ ಬಿಜೆಪಿಗೆ ಸೋಲಾಗಿದೆ.

ಉಪಚುನಾವಣೆ ಎಂದ ಮೇಲೆ ಆಡಳಿತರೂಢ ಪಕ್ಷಕ್ಕೆ ಪ್ರತಿಷ್ಟೆಯದ್ದಾಗಿರುತ್ತದೆ. ಹಾವೇರಿ ಜಿಲ್ಲೆಯು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರ ತವರು ಜಿಲ್ಲೆಯೂ ಆಗಿರುವುದರಿಂದ ಹಾನಗಲ್‌ ಕ್ಷೇತ್ರದಲ್ಲೇ ಠಿಕಾಣಿ ಹೂಡಿದ್ದರು. ಅವರು ಮುಖ್ಯಮಂತ್ರಿಯಾದ ಬಳಿಕ ಎದುರಿಸಿದ ಮೊದಲ ವಿಧಾನಸಭಾ ಉಪ ಚುನಾವಣೆಯೂ ಇದಾಗಿದ್ದು, ಪ್ರತಿಷ್ಠೆಯ ಕಣವಾಗಿತ್ತು.

ಮಾಜಿ ಸಚಿವ ಸಿ.ಎಂ.ಉದಾಸಿಯವರ ನಿಧನದಿಂದಾಗಿ ತೆರವಾಗಿರುವ ಕ್ಷೇತ್ರದಲ್ಲಿ, ಕಾಂಗ್ರೆಸ್‌ ಪಕ್ಷವು ಕ್ಷತ್ರೀಯ ಮರಾಠ ಸಮುದಾಯದ ಶ್ರೀನಿವಾಸ ಮಾನೆಯವರಿಗೆ ಟಿಕೆಟ್ ನೀಡಿತ್ತು. ಬಿಜೆಪಿಯಿಂದ ಗಾಣಿಗ ಸಮುದಾಯದ ಶಿವರಾಜ್‌ ಸಜ್ಜನರ್‌‌ ಕಣಕ್ಕಿಳಿದಿದ್ದರು. ಸಿ.ಎಂ. ಉದಾಸಿಯವರ ಭದ್ರಕೋಟೆಯಾಗಿದ್ದ ಹಾನಗಲ್‌ನಲ್ಲಿ ಅನೇಕ ಸಲ ಕಾಂಗ್ರೆಸ್ ಅಭ್ಯರ್ಥಿಗಳೂ ಮೇಲುಗೈ ಸಾಧಿಸಿದ್ದಾರೆ. ಈ ಹಿಂದೆ ಉದಾಸಿಯವರ ವರ್ಚಿಸ್ಸಿನಿಂದಾಗಿ ನೆಲೆ ಕಂಡಿದ್ದ ಜೆಡಿಎಸ್‌, ಮುಸ್ಲಿಂ ವ್ಯಕ್ತಿ ನಿಯಾಜ್‌ ಶೇಖ್‌ ಅವರನ್ನು ಈ ಬಾರಿ ಕಣಕ್ಕಿಳಿಸಿತ್ತು.

ಇದನ್ನೂ ಓದಿರಿ: ಬಂಗಾಳ ಉಪಚುನಾವಣೆ: ಎಲ್ಲಾ ಕ್ಷೇತ್ರಗಳಲ್ಲಿ ಲಕ್ಷಕ್ಕೂ ಅಧಿಕ ಅಂತರಗಳಲ್ಲಿ ಸೋತ ಬಿಜೆಪಿ; ಭಾರಿ ಮುಖಭಂಗ!

ಸಿ.ಎಂ. ಉದಾಸಿ ಆರು ಬಾರಿ ಶಾಸಕರಾಗಿ ಆಯ್ಕೆಯಾಗಿ ದಾಖಲೆ ನಿರ್ಮಿಸಿದ್ದರೆ, ಕಾಂಗ್ರೆಸ್‌ನ ಮನೋಹರ ತಹಸೀಲ್ದಾರ್ ನಾಲ್ಕು ಬಾರಿ ಶಾಸಕರಾಗಿದ್ದರು. ಸಿ.ಎಂ. ಉದಾಸಿ ಜನತಾಪಕ್ಷ, ಜಾ.ದಳ, ಬಿಜೆಪಿ ಹಾಗೂ ಒಮ್ಮೆ ಪಕ್ಷೇತರರಾಗಿ ಗೆದ್ದಿದ್ದರು. ಹೀಗೆ ಸಿ.ಎಂ. ಉದಾಸಿಯವರಿಗೆ ಕ್ಷೇತ್ರದ ಮೇಲೆ ಹಿಡಿತ ಸಾಧಿಸಿದ್ದರು. ಬಿಜೆಪಿಯ ಭದ್ರಕೋಟೆಯಾಗಿಯೂ ಉದಾಸಿ ಕ್ಷೇತ್ರವನ್ನು ಬಲಪಡಿಸಿದ್ದರು. ಆದರೆ ಉದಾಸಿಯವರ ನಿಧನದ ನಂತರ ನಡೆದ ಚುನಾವಣೆ ಆಡಳಿತಾರೂಢ ಬಿಜೆಪಿಗೆ ಎಚ್ಚರಿಕೆಯ ಘಂಟೆಯಾಗಿ ಪರಿಣಮಿಸಿದೆ.

ಶ್ರೀನಿವಾಸ ಮಾನೆ ಮತ್ತು ಶಿವರಾಜ್‌ ಸಜ್ಜನರ್‌‌

ಮತ ಎಣಿಕೆಯ 19ನೇ ಸುತ್ತಿನ ಅಂತ್ಯಕ್ಕೆ ಕಾಂಗ್ರೆಸ್ ಅಭ್ಯರ್ಥಿ ಶ್ರೀನಿವಾಸ ಮಾನೆಯವರು 87,300 ಮತಗಳನ್ನು ಪಡೆದರೆ ಬಿಜೆಪಿ ಅಭ್ಯರ್ಥಿ ಶಿವರಾಜ್ ಸಜ್ಜನರ್‌‌ 79,874 ಮತಗಳಿಗೆ ಸೀಮಿತವಾದರು. ಇನ್ನು ಜೆಡಿಎಸ್‌ನ ನಿಯಾಜ್ ಶೇಖ್ ಕೇವಲ 923 ಮತಗಳನ್ನು ಪಡೆದಿದ್ದಾರೆ. 7,426 ಮತಗಳ ಅಂತದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಗೆದ್ದಿದ್ದಾರೆ.

ಬಿಜೆಪಿಯ ಸೋಲಿಗೆ ಕಾರಣಗಳು

  1. ಕಾಂಗ್ರೆಸ್ ಅಭ್ಯರ್ಥಿ ಶ್ರೀನಿವಾಸ ಮಾನೆ ಅವರು ಕೋವಿಡ್ ಸಮಯದಲ್ಲಿ ಮಾಡಿರುವ ಕೆಲಸಗಳು ಕಾಂಗ್ರೆಸ್‌ ಪರ ಮತದಾರರು ವಾಲಲು ಕಾರಣವಾಯಿತು. ಶ್ರೀನಿವಾಸ ಮಾನೆ ಹಾಗೂ ಮನೋಹರ ತಹಸಿಲ್ದಾರ್‌ ಬಣದ ನಡುವಿನ ಕಿತ್ತಾಟಗಳು ಕೊನೆ ಹಂತದಲ್ಲಿ ತಣ್ಣಗಾಗಿದ್ದವು.
  2. ಎಲ್ಲ ಪಕ್ಷಗಳ ಅಭ್ಯರ್ಥಿಗಳೂ ಹೊರಗಿನವರಾಗಿದ್ದರು. ದುಡ್ಡು ಹೊರಗಿನದ್ದಾಗಿತ್ತು. ಪ್ರಚಾರದಲ್ಲಿ ಪಾಲ್ಗೊಂಡ ಬಹುತೇಕ ಕಾರ್ಯಕರ್ತರೂ ಹೊರಗಿನವರಾಗಿದ್ದರು. ವಾಹನಗಳೂ ಹೊರಗಿನವು, ಘೋಷಣೆ ಕೂಗುವವರು ಹೊರಗಿನವರಾಗಿದ್ದರು. ಮಾನೆಯವರು ಕ್ಷೇತ್ರದ ಹೊರಗಿನವರಾದರೂ ದೀರ್ಘಕಾಲದ ಸಂಪರ್ಕ ಸಾಧಿಸಿ, ಜನರಿಗೆ ಹತ್ತಿರವಾಗಿದ್ದರು.ಇದನ್ನೂ ಓದಿರಿ: ನಾಲ್ಕೂ ಸ್ಥಾನ ಕಾಂಗ್ರೆಸ್ ಪಾಲು: ಹಿಮಾಚಲ ಪ್ರದೇಶದಲ್ಲಿ ಬಿಜೆಪಿಗೆ ಹೀನಾಯ ಸೋಲು
  3. ಮಾನೆಯವರು ಕೋವಿಡ್ ಸಂದರ್ಭದಲ್ಲಿ ಮಾಡಿಸಿದ ಕೆಲಸಗಳನ್ನು ಮುನ್ನೆಲೆಗೆ ತಂದು ಪ್ರಚಾರ ಪಡೆದರು. ಶಿವರಾಜ್‌ ಸಜ್ಜನರ್‌ ಅವರು ದಿಢೀರನೆ ಕ್ಷೇತ್ರಕ್ಕೆ ಬಂದವರು. ಅವರ ಮೇಲೆ ಸಂಗೂರು ಸಕ್ಕರೆ ಕಾರ್ಖಾನೆ ವಿಚಾರದಲ್ಲಿ ಭ್ರಷ್ಟಾಚಾರದ ಆರೋಪಗಳಿದ್ದವು.
  4. ಕಾಂಗ್ರೆಸ್‌ ಮತ್ತು ಬಿಜೆಪಿ ಎರಡರಲ್ಲೂ ಬಿ ಟೀಮ್‌ಗಳು ಕೆಲಸ ಮಾಡಿದ್ದವು. ಕೊನೆಯ ಕ್ಷಣದಲ್ಲಿ ಕಾಂಗ್ರೆಸ್ ಬಿ ಟೀಮ್‌ನ ಕೆಲಸಗಳು ಸ್ಪಲ್ಪ ಗೌಣವಾಗಿಯಿತು. ಬಿಜೆಪಿ ಕಾರ್ಯಕರ್ತರೇ ‘ಬಿ’ ಟೀಮ್‌ ಆಗಿ ಪರಿವರ್ತನೆಯಾಗಿದ್ದರು. ಶಿವರಾಜ್‌ ಸಜ್ಜನರ್‌ ಆರ್‌‌ಎಸ್‌ಎಸ್‌ ಕಾರ್ಯಕರ್ತನಲ್ಲ, ಕ್ಷೇತ್ರದ ವ್ಯಕ್ತಿಯಲ್ಲ. ಆತ ತಮ್ಮ ಸಂಪರ್ಕದಲ್ಲೇ ಇಲ್ಲ ಎಂಬ ಭಾವನೆ ಕಾರ್ಯಕರ್ತರಿಗಿತ್ತು. ಸ್ಥಳೀಯ ಬಿಜೆಪಿ ಮುಖಂಡರಲ್ಲಿ ಯಾರನ್ನಾದರೂ ಚುನಾವಣೆಗೆ ನಿಲ್ಲಿಸಿದ್ದರೂ ಗೆಲುವು ಸಾಧಿಸಬಹುದಿತ್ತು ಎಂದು ಕೆಲವರು ಹೇಳುತ್ತಾರೆ.
  5. ಹಾನಗಲ್ ತಾಲ್ಲೂಕಿನಲ್ಲಿ ದುಡ್ಡು ಇಂದು ನಡೆದಿಲ್ಲ, ಹಿಂದೆಯೂ ನಡೆದಿಲ್ಲ, ಮುಂದೆಯೂ ನಡೆಯಲ್ಲ. ಸೋಲಿಸುವ ಚುನಾವಣೆಗಳನ್ನು ನಡೆಸುವುದು ಕ್ಷೇತ್ರದ ವೈಶಿಷ್ಟ್ಯ. ಸಿ.ಎಂ. ಉದಾಸಿಯವರ ಪುತ್ರ ಶಿವಕುಮಾರ್‌ ಉದಾಸಿಯವರ ಒಟ್ಟು ತಂಡವನ್ನು ಸೋಲಿಸುವ ಚುನಾವಣೆ ಇದಾಗಿತ್ತು. ಮಾನೆಯನ್ನು ಗೆಲ್ಲಿಸುವ ಚುನಾವಣೆ ಎಂಬುದಕ್ಕಿಂತ ಉದಾಸಿಯನ್ನು ಸೋಲಿಸುವ ಚುನಾವಣೆ ಇದಾಗಿತ್ತು ಎನ್ನುತ್ತಾರೆ ನೋಟಾ ಮತದಾನ ಜಾಗೃತಿ ಮೂಡಿಸುತ್ತಿರುವ ಪ್ರಶಾಂತ್‌ ಮುಚ್ಚಂಡಿ.
  6. ದುಡ್ಡು ತೆಗೆದುಕೊಂಡು ಬಂದು, ಜಾತಿ ಮುಂದೆ ಮಾಡಿ ಚುನಾವಣೆ ನಡೆಸುತ್ತೇನೆಂದರೆ ಇಲ್ಲಿ ನಡೆಯಲ್ಲ. ಕಡಿಮೆ ಅವಧಿಯ ತಂತ್ರಗಾರಿಕೆ ಫಲಿಸುವುದಿಲ್ಲ. ದೀರ್ಘಕಾಲೀನ ತಂತ್ರಗಾರಿಕೆ ಕ್ಷೇತ್ರದಲ್ಲಿ ಕೆಲಸ ಮಾಡುತ್ತದೆ. ಇದು ಸಿ.ಎಂ.ಉದಾಸಿಯವರಿಗೂ ತಿಳಿದಿತ್ತು. ಉದಾಸಿಯವರು ಒಮ್ಮೆ ಸೋತಾಗ ಬೆಳೆ ವಿಮೆ ಹೋರಾಟವನ್ನು ಆರಂಭಿಸಿದ್ದರು. ನಂತರದ ಚುನಾವಣೆಯಲ್ಲಿ ಅನಾಯಾಸವಾಗಿ ಗೆದ್ದರು. ಬೆಳೆ ವಿಮೆ ಹೋರಾಟ ಯಾವ ಮಟ್ಟಕ್ಕೆ ಆಗಿತ್ತೆಂದರೆ, ಹಣವನ್ನು ಹೆಚ್ಚಾಗಿ ಖರ್ಚು ಮಾಡುವ ಪ್ರಮೇಯವೇ ಅವರಿಗೆ ಬಂದಿರಲಿಲ್ಲ ಎಂದು ನೆನೆಯುತ್ತಾರೆ ಪ್ರಶಾಂತ್‌ ಮುಚ್ಚಂಡಿ.
  7. ಶಿವರಾಜ್ ಸಜ್ಜನರ್‌ ಅವರನ್ನು ಕ್ಷೇತ್ರಕ್ಕೆ ಕರೆತಂದಿದ್ದು ಬಿಜೆಪಿ ಮಾಡಿದ ತಪ್ಪೇನಲ್ಲ. ಆದರೆ ಕಡಿಮೆ ಅವಧಿಯಲ್ಲಿ ಸಜ್ಜನರ್‌ ಅವರನ್ನು ಕ್ಷೇತ್ರಕ್ಕೆ ತಂದರು. ಮೊದಲೇ ಕ್ಷೇತ್ರಕ್ಕೆ ಸಜ್ಜನರ್‌ ಬಂದು, ಜನರೊಂದಿಗೆ ಒಡನಾಡಿ, ಕಾರ್ಯಕ್ರಮಗಳಲ್ಲಿ ಭಾಗವಹಿಸಿ, ಭಾಷಣಗಳನ್ನು ಮಾಡಿ ವರ್ಚಸ್ಸು ವೃದ್ಧಿಸಿಕೊಳ್ಳಬೇಕಿತ್ತು. ಒಂದು ತಂಡವನ್ನು ರೂಪಿಸಿಕೊಳ್ಳಬೇಕಿತ್ತು, ಜನರಲ್ಲಿ ಭರವಸೆಗಳನ್ನು ಬಿತ್ತಬೇಕಿತ್ತು. ಇಷ್ಟಾದರೂ ಮಾಡಿದ್ದರೂ ಬಿಜೆಪಿಗೆ ಅನುಕೂಲವಾಗುತ್ತಿತ್ತು ಎಂಬುದು ಕ್ಷೇತ್ರದ ಮತದಾರರ ಅಭಿಪ್ರಾಯ.

ಇದನ್ನೂ ಓದಿರಿ: ಹರಿಯಾಣ ಉಪಚುನಾವಣೆ: ಕೃಷಿ ಕಾನೂನುಗಳನ್ನು ವಿರೋಧಿಸಿ ರಾಜೀನಾಮೆ ಕೊಟ್ಟಿದ್ದ ಅಭಯ್ ಚೌಟಾಲಾಗೆ ಗೆಲುವು

ಶಿವಕುಮಾರ್‌ ಉದಾಸಿ ಕಡೆಗಣಿಸಲು ಸಾಧ್ಯವೆ?

ಬಿಜೆಪಿ ಅಭ್ಯರ್ಥಿಯಾಗಿರುವ ಶಿವರಾಜ್‌ ಸಜ್ಜನರ್ ಉದಾಸಿಯವರ ಕುಟುಂಬಕ್ಕೆ ಆಪ್ತರು. ಸಿ.ಎಂ.ಉದಾಸಿಯವರ ಮಾನಸಪುತ್ರ ಎಂದೇ ಖ್ಯಾತರಾಗಿದ್ದರು. ಸಜ್ಜನರ್‌ ಅವರಿಗೆ ನೀಡಿದ ಟಿಕೆಟ್‌, ಉದಾಸಿ ಕುಟುಂಬಕ್ಕೇ ನೀಡಿದ ಟಿಕೆಟ್ ಅಲ್ಲದೇ ಬೇರೇನೂ ಅಲ್ಲ ಎಂದು ಭಾವಿಸಲಾಗಿತ್ತು. ಈ ಸೋಲಿನ ನಂತರ ಸಿ.ಎಂ. ಉದಾಸಿಯವರ ಪುತ್ರ ಶಿವಕುಮಾರ್ ಉದಾಸಿಯವರನ್ನು ಬಿಜೆಪಿ ಕಡೆಗಣಿಸಲಿದೆಯೇ ಎಂಬ ಪ್ರಶ್ನೆ ಮೂಡುತ್ತದೆ.

ಈ ಸೋಲಿನ ನಂತದಲ್ಲಿ ಶಿವಕುಮಾರ್‌ ಉದಾಸಿ ಅವರನ್ನು  ಪರಿಗಣನೆಗೆ ತೆಗೆದುಕೊಳ್ಳದಿದ್ದರೆ ಮುಂದಿನ ಚುನಾವಣೆಗಳಲ್ಲಿ ಬಿಜೆಪಿಗೆ ತಿರುಗುಬಾಣವೂ ಆಗಬಹುದು ಎನ್ನುತ್ತಾರೆ ಕ್ಷೇತ್ರದ ಮುಖಂಡರು. ಒಂದು ದೊಡ್ಡ ತಂಡವನ್ನೇ ಬೇರೆ ಪಕ್ಷಕ್ಕೆ ತೆಗೆದುಕೊಂಡು ಹೋಗುವ ಸಾಮರ್ಥ್ಯ ಶಿವಕುಮಾರ್‌ ಉದಾಸಿಯವರಿಗಿದೆ. ಕಾಂಗ್ರೆಸ್‌ಗೆ ಹೋದರೂ ಹೋಗಬಹುದು. “ಎಂಎಲ್‌ಎ ಟಿಕೆಟ್‌ ನನ್ನ ಪತ್ನಿಗೆ ಕೊಡಿ, ಎಂಪಿ ಟಿಕೆಟ್‌ ನನಗೆ ಕೊಡಿ” ಎಂದು ಕಾಂಗ್ರೆಸ್‌ ಮುಂದೆ ಉದಾಸಿಯವರು ಬೇಡಿಕೆ ಇಡಬಹುದು. ಕಾಂಗ್ರೆಸ್‌ನವರು ಸುಲಭವಾಗಿ ಟಿಕೆಟ್‌ ಕೊಟ್ಟುಬಿಡುವ ಸಾಧ್ಯತೆಯೂ ಇದೆ. ಹೀಗಾಗಿ ಬಿಜೆಪಿ ಎಚ್ಚರಿಕೆಯ ಹೆಜ್ಜೆ ಇಡುವುದು ಖಚಿತ. ಒಂದು ವೇಳೆ ಉದಾಸಿಯವರನ್ನು ನಿರ್ಲಕ್ಷಿಸಿದರೆ ಕ್ಷೇತ್ರದಲ್ಲಿ ಬಿಜೆಪಿ ಒಡೆದುಹೋಗುವ ಸಾಧ್ಯತೆಯೇ ಹೆಚ್ಚು ಎನ್ನುತ್ತಾರೆ ವಿಶ್ಲೇಷಕರು.

ಮಾನೆ ಮುಂದಿದೆ ಸವಾಲು

ಶ್ರೀನಿವಾಸ ಮಾನೆಯವರ ಮುಂದೆ ಸಾಕಷ್ಟು ಸವಾಲುಗಳಿವೆ. ಕಡಿಮೆ ಅವಧಿಯಲ್ಲಿ ಮತ್ತೆ ಚುನಾವಣೆ ಎದುರಾಗಲಿದೆ. ಬಡವರ ಬೇಡಿಕೆಗಳನ್ನು ಬೇಗನೆ ಈಡೇರಿಸದಿದ್ದರೆ ಮುಂದಿನ ಚುಣಾವಣೆಯಲ್ಲಿ ಮಾನೆಯವರಿಗೆ ತಿರುಗುಬಾಣವಾಗಲು ಸಾಧ್ಯತೆಗಳಿವೆ. ಜೊತೆಗೆ ಬಿಜೆಪಿ ಸರ್ಕಾರ ಅಧಿಕಾರದಲ್ಲಿ ಇರುವುದರಿಂದ ಅಭಿವೃದ್ಧಿ ಕಾಮಗಾರಿಗಳನ್ನು ನಡೆಸಲು ಸಾಧ್ಯವಾಗದೆ ಇರಬಹುದು. ಹಾನಗಲ್‌ ಕ್ಷೇತ್ರದಲ್ಲಿ ಬಿಜೆಪಿ ಸಂಘಟಿತವಾಗಲು ಇದು ಸರಿಯಾದ ಸಮಯ.


ಇದನ್ನೂ ಓದಿರಿ: ರಾಜ್ಯ ಉಪಚುನಾವಣೆ ಫಲಿತಾಂಶ: ಸಿಂದಗಿಯಲ್ಲಿ ಬಿಜೆಪಿಗೆ ಭರ್ಜರಿ ಗೆಲುವು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತುಮಕೂರಿನಲ್ಲಿ ಮಲಹೊರುವ ಪದ್ದತಿ ಜೀವಂತ; ದಲಿತ ಕಾರ್ಮಿಕರನ್ನು ಶೌಚಗುಂಡಿ ಸ್ವಚ್ಛತೆಗೆ ನಿಯೋಜಿಸಿದ ಕೆಇಬಿ ಇಂಜಿನಿಯರ್ಸ್ ಸಂಘ

ದಶಕಗಳ ಹಿಂದೆಯೇ ತಲೆ ಮೇಲೆ ಮಲಹೊರುವ ಅನಿಷ್ಠ ಪದ್ಧತಿಯನ್ನು ದೇಶದಲ್ಲಿ ನಿಷೇಧಿಸಲಾಗಿದೆ. ಕಾನೂನಿನ ಪ್ರಕಾರ ಈ ಅಮಾನವೀಯ ಪದ್ಧತಿ ನಿಷೇದಗೊಂಡಿದ್ದರು ರಾಜ್ಯದಲ್ಲಿ ಮಾತ್ರ ಇನ್ನೂ ಜೀವಂತವಾಗಿರುವುದು ತುಮಕೂರಿನಲ್ಲಿ ಮತ್ತೊಮ್ಮೆ ಬಹಿರಂಗವಾಗಿದೆ. ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್...

ವರ್ಷ ಪೂರೈಸಿದ ಎಸ್‌ಐಆರ್‌ ಪ್ರಕ್ರಿಯೆ; ಸುಮಾರು 6 ಕೋಟಿ ಹೆಸರುಗಳು ಡಿಲೀಟ್

ಸುಮಾರು ಆರು ಕೋಟಿ ಮತದಾರರನ್ನು ಅಳಿಸಲು ಕಾರಣವಾದ, ವಿರೋಧ ಪಕ್ಷಗಳು ಮತ್ತು ಚುನಾವಣಾ ಆಯೋಗದ ನಡುವೆ ಘರ್ಷಣೆಗೆ ಕಾರಣವಾದ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯು 19 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ...

ರಾಮ ಮಂದಿರ ಹಗರಣ | ಶಿವಸೇನೆ ಕೊಟ್ಟ 1 ಕೋಟಿ ರೂ.ಗೆ ರಸೀದಿ ಸಿಕ್ಕಿಲ್ಲ : ಸಂಜಯ್ ರಾವತ್

ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರಕ್ಕೆ ನೀಡಿದ 1 ಕೋಟಿ ರೂಪಾಯಿ ದೇಣಿಗೆಗೆ ತಮ್ಮ ಪಕ್ಷ ಶಿವಸೇನೆ (ಯುಬಿಟಿ) ರಸೀದಿಯನ್ನು ಸ್ವೀಕರಿಸಿಲ್ಲ ಎಂದು ಸಂಜಯ್ ರಾವತ್ ಶುಕ್ರವಾರ (ಜೂ.26) ಹೇಳಿದ್ದಾರೆ. ರಾಮ ಮಂದಿರದ ದೇಣಿಗೆ...

ರಾಮ ಮಂದಿರ ಹಗರಣ: ಶ್ರೀರಾಮ ಜನ್ಮಭೂಮಿ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್ ಮತ್ತು ಟ್ರಸ್ಟಿ ಅನಿಲ್ ಮಿಶ್ರಾ ರಾಜೀನಾಮೆ

ಶ್ರೀ ರಾಮ ಜನ್ಮಭೂಮಿ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್, ರಾಮ ಮಂದಿರ ದೇಣಿಗೆ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ನೈತಿಕ ಹೊಣೆ ಹೊತ್ತು, ಸದಸ್ಯ ಟ್ರಸ್ಟಿ ಅನಿಲ್ ಮಿಶ್ರಾ ಅವರೊಂದಿಗೆ ಶುಕ್ರವಾರ ರಾಜೀನಾಮೆ...

‘ಕೂಡಿ ಹಾಕಿ ಥಳಿಸುತ್ತಿದ್ದರು, ತಪ್ಪಿಸಿಕೊಳ್ಳದಂತೆ ನಾಯಿ ಬಿಟ್ಟಿದ್ದರು’: ಭೀಕರ ಶೋಷಣೆಯಿಂದ 12 ಜೀತ ಕಾರ್ಮಿಕರ ರಕ್ಷಣೆ

ಮೂರು ತಿಂಗಳ ಕಾಲ 68 ವರ್ಷದ ಮೆಹರ್ಬಾನ್ ಶಾ ಅನಿಶ್ಚಿತತೆಯಲ್ಲಿ ಜೀವನ ನಡೆಸುತ್ತಿದ್ದರು. ದುಡಿಯಲು ಹೋಗಿದ್ದ ಅವರ ಕಿರಿಯ ಮಗ ದಿಲ್ಶಾದ್ ಮೊಹಮ್ಮದ್ ಜೀವಂತವಾಗಿದ್ದಾನಾ?, ಇಲ್ಲಾ ಮರಣ ಹೊಂದಿದ್ದಾನಾ? ಎಂಬುವುದು ಅವರಿಗೆ ಗೊತ್ತಿರಲಿಲ್ಲ. 24...

ಅಯ್ಯೋಧ್ಯೆ ರಾಮ ಮಂದಿರ ಹಗರಣ: ಎಂಟು ಜನರ ವಿರುದ್ಧ ಎಫ್‌ಐಆರ್; ಪ್ರಭಾವಿ ವ್ಯಕ್ತಿಗಳನ್ನು ರಕ್ಷಿಸಲಾಗಿದೆ ಎಂದು ಪ್ರತಿಪಕ್ಷಗಳ ಆರೋಪ 

ಅಯೋಧ್ಯೆ: ವಿಶ್ವದಾದ್ಯಂತ ಕೋಟ್ಯಂತರ ಭಕ್ತರ ಆರಾಧ್ಯ ದೈವವಾಗಿರುವ ಅಯೋಧ್ಯೆಯ ಶ್ರೀ ರಾಮ ಮಂದಿರದಲ್ಲಿ ಭಕ್ತರು ಸಮರ್ಪಿಸಿದ ನಗದು, ಚಿನ್ನಾಭರಣ ಸೇರಿದಂತೆ ಇತರೆ ಬೆಲೆಬಾಳುವ ಕಾಣಿಕೆಗಳ ಕಳ್ಳತನ ಮತ್ತು ಹಣ ದುರುಪಯೋಗದ ಗಂಭೀರ ಹಗರಣವೊಂದು...

ಪೋಕ್ಸೋ ಕೇಸ್ : ವಚನಾನಂದ ಸ್ವಾಮಿಯ ನಿರೀಕ್ಷಣಾ ಜಾಮೀನು ರದ್ದು

ಪೋಕ್ಸೋ ಪ್ರಕರಣದಲ್ಲಿ ವಚನಾನಂದ ಸ್ವಾಮಿಗೆ ಸೆಷನ್ಸ್ ಕೋರ್ಟ್ ನೀಡಿದ್ದ ನಿರೀಕ್ಷಣಾ ಜಾಮೀನನ್ನು ಹೈಕೋರ್ಟ್ ಗುರುವಾರ (ಜೂನ್ 25) ರದ್ದುಗೊಳಿಸಿದೆ. ಅಲ್ಲದೆ, ಸೆಷನ್ಸ್ ಕೋರ್ಟ್ ಜಾಮೀನು ನೀಡಿದ ರೀತಿಯ ಬಗ್ಗೆ ತೀವ್ರ ಕಳವಳ ಮತ್ತು...

ಎಸ್‌ಐಆರ್‌ಗೂ ಸರ್ಕಾರಿ ಸೌಲಭ್ಯಕ್ಕೂ ಲಿಂಕ್; ಅರ್ಜಿ ವಿಚಾರಣೆಗೆ ಸುಪ್ರೀಂ ನಕಾರ : ನಿಜವಾದ ಆತಂಕ

ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳದ ಹೊಸ ಸರ್ಕಾರ ನೀಡಿರುವ ಆದೇಶಗಳ ವಿರುದ್ಧ ಸಲ್ಲಿಕೆಯಾಗಿದ್ದ ಅರ್ಜಿಯೊಂದರ ತುರ್ತು ವಿಚಾರಣೆಗೆ ಸುಪ್ರೀಂ ಕೋರ್ಟ್ 23 ಜೂನ್ 2026ರಂದು ನಿರಾಕರಿಸಿದೆ. ವಿಧಾನಸಭೆ ಚುನಾವಣೆಗೆ ಮುನ್ನ ನಡೆದ ವಿಶೇಷ...

ಒಂಬತ್ತನೇ ತರಗತಿ ಪಠ್ಯಪುಸ್ತಕದಲ್ಲಿ ತುರ್ತು ಪರಿಸ್ಥಿತಿ ಅಧ್ಯಾಯ ಸೇರಿಸಿದ ಎನ್‌ಸಿಇಆರ್‌ಟಿ

ಭಾರತದಲ್ಲಿ ತುರ್ತು ಪರಿಸ್ಥಿತಿ ಘೋಷಿಸಲ್ಪಟ್ಟ ಸುಮಾರು ಐದು ದಶಕಗಳ ನಂತರ, ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ ಮತ್ತು ತರಬೇತಿ ಮಂಡಳಿ (ಎನ್‌ಸಿಇಆರ್‌ಟಿ) ಈ ವಿಷಯವನ್ನು 9 ನೇ ತರಗತಿಯ ಸಮಾಜ ವಿಜ್ಞಾನ ಪಠ್ಯಪುಸ್ತಕದಲ್ಲಿ ಮೊದಲ...

‘ಆರ್‌ಎಸ್‌ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದೆ’: ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ

ಬೆಂಗಳೂರು: ರಾಷ್ಟ್ರೀಯ ಸ್ವಯಂಸೇವಕ ಸಂಘ (RSS) ಹಾಗೂ ಆಡಳಿತಾರೂಢ ಬಿಜೆಪಿ ವಿರುದ್ಧ ಕರ್ನಾಟಕದ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಮತ್ತೊಮ್ಮೆ ತೀವ್ರ ಸ್ವರೂಪದ ಸೈದ್ಧಾಂತಿಕ ದಾಳಿ ನಡೆಸಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ಸರಣಿ ಪ್ರಶ್ನೆಗಳನ್ನು...