Homeಕರ್ನಾಟಕಚುನಾವಣೆ ವಿಶ್ಲೇಷಣೆ: ಹಾನಗಲ್‌ನಲ್ಲಿ ಬಿಜೆಪಿ ಸೋತಿದ್ದೇಕೆ? ಕ್ಷೇತ್ರದ ಮತದಾರರ ವೈಶಿಷ್ಟ್ಯವೇನು?

ಚುನಾವಣೆ ವಿಶ್ಲೇಷಣೆ: ಹಾನಗಲ್‌ನಲ್ಲಿ ಬಿಜೆಪಿ ಸೋತಿದ್ದೇಕೆ? ಕ್ಷೇತ್ರದ ಮತದಾರರ ವೈಶಿಷ್ಟ್ಯವೇನು?

- Advertisement -
- Advertisement -

ಒಂದು ಕಡೆ ಬೆಲೆ ಏರಿಕೆ, ಮತ್ತೊಂದು ಕಡೆ ಸಂವಿಧಾನಿಕ ಚೌಕಟ್ಟು ಮೀರಿದ ರಾಜಕೀಯ ಮಾತುಗಾರಿಕೆ. ಇದರ ನಡುವೆ ನಡೆದ ಉಪಚುನಾವಣೆಯ ಫಲಿತಾಂಶ ಹೊರಬಿದ್ದಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರ ತವರು ಜಿಲ್ಲೆಯಾದ ಹಾವೇರಿಯ ಹಾನಗಲ್‌ ಕ್ಷೇತ್ರದಲ್ಲಿ ಬಿಜೆಪಿಗೆ ಸೋಲಾಗಿದೆ.

ಉಪಚುನಾವಣೆ ಎಂದ ಮೇಲೆ ಆಡಳಿತರೂಢ ಪಕ್ಷಕ್ಕೆ ಪ್ರತಿಷ್ಟೆಯದ್ದಾಗಿರುತ್ತದೆ. ಹಾವೇರಿ ಜಿಲ್ಲೆಯು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರ ತವರು ಜಿಲ್ಲೆಯೂ ಆಗಿರುವುದರಿಂದ ಹಾನಗಲ್‌ ಕ್ಷೇತ್ರದಲ್ಲೇ ಠಿಕಾಣಿ ಹೂಡಿದ್ದರು. ಅವರು ಮುಖ್ಯಮಂತ್ರಿಯಾದ ಬಳಿಕ ಎದುರಿಸಿದ ಮೊದಲ ವಿಧಾನಸಭಾ ಉಪ ಚುನಾವಣೆಯೂ ಇದಾಗಿದ್ದು, ಪ್ರತಿಷ್ಠೆಯ ಕಣವಾಗಿತ್ತು.

ಮಾಜಿ ಸಚಿವ ಸಿ.ಎಂ.ಉದಾಸಿಯವರ ನಿಧನದಿಂದಾಗಿ ತೆರವಾಗಿರುವ ಕ್ಷೇತ್ರದಲ್ಲಿ, ಕಾಂಗ್ರೆಸ್‌ ಪಕ್ಷವು ಕ್ಷತ್ರೀಯ ಮರಾಠ ಸಮುದಾಯದ ಶ್ರೀನಿವಾಸ ಮಾನೆಯವರಿಗೆ ಟಿಕೆಟ್ ನೀಡಿತ್ತು. ಬಿಜೆಪಿಯಿಂದ ಗಾಣಿಗ ಸಮುದಾಯದ ಶಿವರಾಜ್‌ ಸಜ್ಜನರ್‌‌ ಕಣಕ್ಕಿಳಿದಿದ್ದರು. ಸಿ.ಎಂ. ಉದಾಸಿಯವರ ಭದ್ರಕೋಟೆಯಾಗಿದ್ದ ಹಾನಗಲ್‌ನಲ್ಲಿ ಅನೇಕ ಸಲ ಕಾಂಗ್ರೆಸ್ ಅಭ್ಯರ್ಥಿಗಳೂ ಮೇಲುಗೈ ಸಾಧಿಸಿದ್ದಾರೆ. ಈ ಹಿಂದೆ ಉದಾಸಿಯವರ ವರ್ಚಿಸ್ಸಿನಿಂದಾಗಿ ನೆಲೆ ಕಂಡಿದ್ದ ಜೆಡಿಎಸ್‌, ಮುಸ್ಲಿಂ ವ್ಯಕ್ತಿ ನಿಯಾಜ್‌ ಶೇಖ್‌ ಅವರನ್ನು ಈ ಬಾರಿ ಕಣಕ್ಕಿಳಿಸಿತ್ತು.

ಇದನ್ನೂ ಓದಿರಿ: ಬಂಗಾಳ ಉಪಚುನಾವಣೆ: ಎಲ್ಲಾ ಕ್ಷೇತ್ರಗಳಲ್ಲಿ ಲಕ್ಷಕ್ಕೂ ಅಧಿಕ ಅಂತರಗಳಲ್ಲಿ ಸೋತ ಬಿಜೆಪಿ; ಭಾರಿ ಮುಖಭಂಗ!

ಸಿ.ಎಂ. ಉದಾಸಿ ಆರು ಬಾರಿ ಶಾಸಕರಾಗಿ ಆಯ್ಕೆಯಾಗಿ ದಾಖಲೆ ನಿರ್ಮಿಸಿದ್ದರೆ, ಕಾಂಗ್ರೆಸ್‌ನ ಮನೋಹರ ತಹಸೀಲ್ದಾರ್ ನಾಲ್ಕು ಬಾರಿ ಶಾಸಕರಾಗಿದ್ದರು. ಸಿ.ಎಂ. ಉದಾಸಿ ಜನತಾಪಕ್ಷ, ಜಾ.ದಳ, ಬಿಜೆಪಿ ಹಾಗೂ ಒಮ್ಮೆ ಪಕ್ಷೇತರರಾಗಿ ಗೆದ್ದಿದ್ದರು. ಹೀಗೆ ಸಿ.ಎಂ. ಉದಾಸಿಯವರಿಗೆ ಕ್ಷೇತ್ರದ ಮೇಲೆ ಹಿಡಿತ ಸಾಧಿಸಿದ್ದರು. ಬಿಜೆಪಿಯ ಭದ್ರಕೋಟೆಯಾಗಿಯೂ ಉದಾಸಿ ಕ್ಷೇತ್ರವನ್ನು ಬಲಪಡಿಸಿದ್ದರು. ಆದರೆ ಉದಾಸಿಯವರ ನಿಧನದ ನಂತರ ನಡೆದ ಚುನಾವಣೆ ಆಡಳಿತಾರೂಢ ಬಿಜೆಪಿಗೆ ಎಚ್ಚರಿಕೆಯ ಘಂಟೆಯಾಗಿ ಪರಿಣಮಿಸಿದೆ.

ಶ್ರೀನಿವಾಸ ಮಾನೆ ಮತ್ತು ಶಿವರಾಜ್‌ ಸಜ್ಜನರ್‌‌

ಮತ ಎಣಿಕೆಯ 19ನೇ ಸುತ್ತಿನ ಅಂತ್ಯಕ್ಕೆ ಕಾಂಗ್ರೆಸ್ ಅಭ್ಯರ್ಥಿ ಶ್ರೀನಿವಾಸ ಮಾನೆಯವರು 87,300 ಮತಗಳನ್ನು ಪಡೆದರೆ ಬಿಜೆಪಿ ಅಭ್ಯರ್ಥಿ ಶಿವರಾಜ್ ಸಜ್ಜನರ್‌‌ 79,874 ಮತಗಳಿಗೆ ಸೀಮಿತವಾದರು. ಇನ್ನು ಜೆಡಿಎಸ್‌ನ ನಿಯಾಜ್ ಶೇಖ್ ಕೇವಲ 923 ಮತಗಳನ್ನು ಪಡೆದಿದ್ದಾರೆ. 7,426 ಮತಗಳ ಅಂತದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಗೆದ್ದಿದ್ದಾರೆ.

ಬಿಜೆಪಿಯ ಸೋಲಿಗೆ ಕಾರಣಗಳು

  1. ಕಾಂಗ್ರೆಸ್ ಅಭ್ಯರ್ಥಿ ಶ್ರೀನಿವಾಸ ಮಾನೆ ಅವರು ಕೋವಿಡ್ ಸಮಯದಲ್ಲಿ ಮಾಡಿರುವ ಕೆಲಸಗಳು ಕಾಂಗ್ರೆಸ್‌ ಪರ ಮತದಾರರು ವಾಲಲು ಕಾರಣವಾಯಿತು. ಶ್ರೀನಿವಾಸ ಮಾನೆ ಹಾಗೂ ಮನೋಹರ ತಹಸಿಲ್ದಾರ್‌ ಬಣದ ನಡುವಿನ ಕಿತ್ತಾಟಗಳು ಕೊನೆ ಹಂತದಲ್ಲಿ ತಣ್ಣಗಾಗಿದ್ದವು.
  2. ಎಲ್ಲ ಪಕ್ಷಗಳ ಅಭ್ಯರ್ಥಿಗಳೂ ಹೊರಗಿನವರಾಗಿದ್ದರು. ದುಡ್ಡು ಹೊರಗಿನದ್ದಾಗಿತ್ತು. ಪ್ರಚಾರದಲ್ಲಿ ಪಾಲ್ಗೊಂಡ ಬಹುತೇಕ ಕಾರ್ಯಕರ್ತರೂ ಹೊರಗಿನವರಾಗಿದ್ದರು. ವಾಹನಗಳೂ ಹೊರಗಿನವು, ಘೋಷಣೆ ಕೂಗುವವರು ಹೊರಗಿನವರಾಗಿದ್ದರು. ಮಾನೆಯವರು ಕ್ಷೇತ್ರದ ಹೊರಗಿನವರಾದರೂ ದೀರ್ಘಕಾಲದ ಸಂಪರ್ಕ ಸಾಧಿಸಿ, ಜನರಿಗೆ ಹತ್ತಿರವಾಗಿದ್ದರು.ಇದನ್ನೂ ಓದಿರಿ: ನಾಲ್ಕೂ ಸ್ಥಾನ ಕಾಂಗ್ರೆಸ್ ಪಾಲು: ಹಿಮಾಚಲ ಪ್ರದೇಶದಲ್ಲಿ ಬಿಜೆಪಿಗೆ ಹೀನಾಯ ಸೋಲು
  3. ಮಾನೆಯವರು ಕೋವಿಡ್ ಸಂದರ್ಭದಲ್ಲಿ ಮಾಡಿಸಿದ ಕೆಲಸಗಳನ್ನು ಮುನ್ನೆಲೆಗೆ ತಂದು ಪ್ರಚಾರ ಪಡೆದರು. ಶಿವರಾಜ್‌ ಸಜ್ಜನರ್‌ ಅವರು ದಿಢೀರನೆ ಕ್ಷೇತ್ರಕ್ಕೆ ಬಂದವರು. ಅವರ ಮೇಲೆ ಸಂಗೂರು ಸಕ್ಕರೆ ಕಾರ್ಖಾನೆ ವಿಚಾರದಲ್ಲಿ ಭ್ರಷ್ಟಾಚಾರದ ಆರೋಪಗಳಿದ್ದವು.
  4. ಕಾಂಗ್ರೆಸ್‌ ಮತ್ತು ಬಿಜೆಪಿ ಎರಡರಲ್ಲೂ ಬಿ ಟೀಮ್‌ಗಳು ಕೆಲಸ ಮಾಡಿದ್ದವು. ಕೊನೆಯ ಕ್ಷಣದಲ್ಲಿ ಕಾಂಗ್ರೆಸ್ ಬಿ ಟೀಮ್‌ನ ಕೆಲಸಗಳು ಸ್ಪಲ್ಪ ಗೌಣವಾಗಿಯಿತು. ಬಿಜೆಪಿ ಕಾರ್ಯಕರ್ತರೇ ‘ಬಿ’ ಟೀಮ್‌ ಆಗಿ ಪರಿವರ್ತನೆಯಾಗಿದ್ದರು. ಶಿವರಾಜ್‌ ಸಜ್ಜನರ್‌ ಆರ್‌‌ಎಸ್‌ಎಸ್‌ ಕಾರ್ಯಕರ್ತನಲ್ಲ, ಕ್ಷೇತ್ರದ ವ್ಯಕ್ತಿಯಲ್ಲ. ಆತ ತಮ್ಮ ಸಂಪರ್ಕದಲ್ಲೇ ಇಲ್ಲ ಎಂಬ ಭಾವನೆ ಕಾರ್ಯಕರ್ತರಿಗಿತ್ತು. ಸ್ಥಳೀಯ ಬಿಜೆಪಿ ಮುಖಂಡರಲ್ಲಿ ಯಾರನ್ನಾದರೂ ಚುನಾವಣೆಗೆ ನಿಲ್ಲಿಸಿದ್ದರೂ ಗೆಲುವು ಸಾಧಿಸಬಹುದಿತ್ತು ಎಂದು ಕೆಲವರು ಹೇಳುತ್ತಾರೆ.
  5. ಹಾನಗಲ್ ತಾಲ್ಲೂಕಿನಲ್ಲಿ ದುಡ್ಡು ಇಂದು ನಡೆದಿಲ್ಲ, ಹಿಂದೆಯೂ ನಡೆದಿಲ್ಲ, ಮುಂದೆಯೂ ನಡೆಯಲ್ಲ. ಸೋಲಿಸುವ ಚುನಾವಣೆಗಳನ್ನು ನಡೆಸುವುದು ಕ್ಷೇತ್ರದ ವೈಶಿಷ್ಟ್ಯ. ಸಿ.ಎಂ. ಉದಾಸಿಯವರ ಪುತ್ರ ಶಿವಕುಮಾರ್‌ ಉದಾಸಿಯವರ ಒಟ್ಟು ತಂಡವನ್ನು ಸೋಲಿಸುವ ಚುನಾವಣೆ ಇದಾಗಿತ್ತು. ಮಾನೆಯನ್ನು ಗೆಲ್ಲಿಸುವ ಚುನಾವಣೆ ಎಂಬುದಕ್ಕಿಂತ ಉದಾಸಿಯನ್ನು ಸೋಲಿಸುವ ಚುನಾವಣೆ ಇದಾಗಿತ್ತು ಎನ್ನುತ್ತಾರೆ ನೋಟಾ ಮತದಾನ ಜಾಗೃತಿ ಮೂಡಿಸುತ್ತಿರುವ ಪ್ರಶಾಂತ್‌ ಮುಚ್ಚಂಡಿ.
  6. ದುಡ್ಡು ತೆಗೆದುಕೊಂಡು ಬಂದು, ಜಾತಿ ಮುಂದೆ ಮಾಡಿ ಚುನಾವಣೆ ನಡೆಸುತ್ತೇನೆಂದರೆ ಇಲ್ಲಿ ನಡೆಯಲ್ಲ. ಕಡಿಮೆ ಅವಧಿಯ ತಂತ್ರಗಾರಿಕೆ ಫಲಿಸುವುದಿಲ್ಲ. ದೀರ್ಘಕಾಲೀನ ತಂತ್ರಗಾರಿಕೆ ಕ್ಷೇತ್ರದಲ್ಲಿ ಕೆಲಸ ಮಾಡುತ್ತದೆ. ಇದು ಸಿ.ಎಂ.ಉದಾಸಿಯವರಿಗೂ ತಿಳಿದಿತ್ತು. ಉದಾಸಿಯವರು ಒಮ್ಮೆ ಸೋತಾಗ ಬೆಳೆ ವಿಮೆ ಹೋರಾಟವನ್ನು ಆರಂಭಿಸಿದ್ದರು. ನಂತರದ ಚುನಾವಣೆಯಲ್ಲಿ ಅನಾಯಾಸವಾಗಿ ಗೆದ್ದರು. ಬೆಳೆ ವಿಮೆ ಹೋರಾಟ ಯಾವ ಮಟ್ಟಕ್ಕೆ ಆಗಿತ್ತೆಂದರೆ, ಹಣವನ್ನು ಹೆಚ್ಚಾಗಿ ಖರ್ಚು ಮಾಡುವ ಪ್ರಮೇಯವೇ ಅವರಿಗೆ ಬಂದಿರಲಿಲ್ಲ ಎಂದು ನೆನೆಯುತ್ತಾರೆ ಪ್ರಶಾಂತ್‌ ಮುಚ್ಚಂಡಿ.
  7. ಶಿವರಾಜ್ ಸಜ್ಜನರ್‌ ಅವರನ್ನು ಕ್ಷೇತ್ರಕ್ಕೆ ಕರೆತಂದಿದ್ದು ಬಿಜೆಪಿ ಮಾಡಿದ ತಪ್ಪೇನಲ್ಲ. ಆದರೆ ಕಡಿಮೆ ಅವಧಿಯಲ್ಲಿ ಸಜ್ಜನರ್‌ ಅವರನ್ನು ಕ್ಷೇತ್ರಕ್ಕೆ ತಂದರು. ಮೊದಲೇ ಕ್ಷೇತ್ರಕ್ಕೆ ಸಜ್ಜನರ್‌ ಬಂದು, ಜನರೊಂದಿಗೆ ಒಡನಾಡಿ, ಕಾರ್ಯಕ್ರಮಗಳಲ್ಲಿ ಭಾಗವಹಿಸಿ, ಭಾಷಣಗಳನ್ನು ಮಾಡಿ ವರ್ಚಸ್ಸು ವೃದ್ಧಿಸಿಕೊಳ್ಳಬೇಕಿತ್ತು. ಒಂದು ತಂಡವನ್ನು ರೂಪಿಸಿಕೊಳ್ಳಬೇಕಿತ್ತು, ಜನರಲ್ಲಿ ಭರವಸೆಗಳನ್ನು ಬಿತ್ತಬೇಕಿತ್ತು. ಇಷ್ಟಾದರೂ ಮಾಡಿದ್ದರೂ ಬಿಜೆಪಿಗೆ ಅನುಕೂಲವಾಗುತ್ತಿತ್ತು ಎಂಬುದು ಕ್ಷೇತ್ರದ ಮತದಾರರ ಅಭಿಪ್ರಾಯ.

ಇದನ್ನೂ ಓದಿರಿ: ಹರಿಯಾಣ ಉಪಚುನಾವಣೆ: ಕೃಷಿ ಕಾನೂನುಗಳನ್ನು ವಿರೋಧಿಸಿ ರಾಜೀನಾಮೆ ಕೊಟ್ಟಿದ್ದ ಅಭಯ್ ಚೌಟಾಲಾಗೆ ಗೆಲುವು

ಶಿವಕುಮಾರ್‌ ಉದಾಸಿ ಕಡೆಗಣಿಸಲು ಸಾಧ್ಯವೆ?

ಬಿಜೆಪಿ ಅಭ್ಯರ್ಥಿಯಾಗಿರುವ ಶಿವರಾಜ್‌ ಸಜ್ಜನರ್ ಉದಾಸಿಯವರ ಕುಟುಂಬಕ್ಕೆ ಆಪ್ತರು. ಸಿ.ಎಂ.ಉದಾಸಿಯವರ ಮಾನಸಪುತ್ರ ಎಂದೇ ಖ್ಯಾತರಾಗಿದ್ದರು. ಸಜ್ಜನರ್‌ ಅವರಿಗೆ ನೀಡಿದ ಟಿಕೆಟ್‌, ಉದಾಸಿ ಕುಟುಂಬಕ್ಕೇ ನೀಡಿದ ಟಿಕೆಟ್ ಅಲ್ಲದೇ ಬೇರೇನೂ ಅಲ್ಲ ಎಂದು ಭಾವಿಸಲಾಗಿತ್ತು. ಈ ಸೋಲಿನ ನಂತರ ಸಿ.ಎಂ. ಉದಾಸಿಯವರ ಪುತ್ರ ಶಿವಕುಮಾರ್ ಉದಾಸಿಯವರನ್ನು ಬಿಜೆಪಿ ಕಡೆಗಣಿಸಲಿದೆಯೇ ಎಂಬ ಪ್ರಶ್ನೆ ಮೂಡುತ್ತದೆ.

ಈ ಸೋಲಿನ ನಂತದಲ್ಲಿ ಶಿವಕುಮಾರ್‌ ಉದಾಸಿ ಅವರನ್ನು  ಪರಿಗಣನೆಗೆ ತೆಗೆದುಕೊಳ್ಳದಿದ್ದರೆ ಮುಂದಿನ ಚುನಾವಣೆಗಳಲ್ಲಿ ಬಿಜೆಪಿಗೆ ತಿರುಗುಬಾಣವೂ ಆಗಬಹುದು ಎನ್ನುತ್ತಾರೆ ಕ್ಷೇತ್ರದ ಮುಖಂಡರು. ಒಂದು ದೊಡ್ಡ ತಂಡವನ್ನೇ ಬೇರೆ ಪಕ್ಷಕ್ಕೆ ತೆಗೆದುಕೊಂಡು ಹೋಗುವ ಸಾಮರ್ಥ್ಯ ಶಿವಕುಮಾರ್‌ ಉದಾಸಿಯವರಿಗಿದೆ. ಕಾಂಗ್ರೆಸ್‌ಗೆ ಹೋದರೂ ಹೋಗಬಹುದು. “ಎಂಎಲ್‌ಎ ಟಿಕೆಟ್‌ ನನ್ನ ಪತ್ನಿಗೆ ಕೊಡಿ, ಎಂಪಿ ಟಿಕೆಟ್‌ ನನಗೆ ಕೊಡಿ” ಎಂದು ಕಾಂಗ್ರೆಸ್‌ ಮುಂದೆ ಉದಾಸಿಯವರು ಬೇಡಿಕೆ ಇಡಬಹುದು. ಕಾಂಗ್ರೆಸ್‌ನವರು ಸುಲಭವಾಗಿ ಟಿಕೆಟ್‌ ಕೊಟ್ಟುಬಿಡುವ ಸಾಧ್ಯತೆಯೂ ಇದೆ. ಹೀಗಾಗಿ ಬಿಜೆಪಿ ಎಚ್ಚರಿಕೆಯ ಹೆಜ್ಜೆ ಇಡುವುದು ಖಚಿತ. ಒಂದು ವೇಳೆ ಉದಾಸಿಯವರನ್ನು ನಿರ್ಲಕ್ಷಿಸಿದರೆ ಕ್ಷೇತ್ರದಲ್ಲಿ ಬಿಜೆಪಿ ಒಡೆದುಹೋಗುವ ಸಾಧ್ಯತೆಯೇ ಹೆಚ್ಚು ಎನ್ನುತ್ತಾರೆ ವಿಶ್ಲೇಷಕರು.

ಮಾನೆ ಮುಂದಿದೆ ಸವಾಲು

ಶ್ರೀನಿವಾಸ ಮಾನೆಯವರ ಮುಂದೆ ಸಾಕಷ್ಟು ಸವಾಲುಗಳಿವೆ. ಕಡಿಮೆ ಅವಧಿಯಲ್ಲಿ ಮತ್ತೆ ಚುನಾವಣೆ ಎದುರಾಗಲಿದೆ. ಬಡವರ ಬೇಡಿಕೆಗಳನ್ನು ಬೇಗನೆ ಈಡೇರಿಸದಿದ್ದರೆ ಮುಂದಿನ ಚುಣಾವಣೆಯಲ್ಲಿ ಮಾನೆಯವರಿಗೆ ತಿರುಗುಬಾಣವಾಗಲು ಸಾಧ್ಯತೆಗಳಿವೆ. ಜೊತೆಗೆ ಬಿಜೆಪಿ ಸರ್ಕಾರ ಅಧಿಕಾರದಲ್ಲಿ ಇರುವುದರಿಂದ ಅಭಿವೃದ್ಧಿ ಕಾಮಗಾರಿಗಳನ್ನು ನಡೆಸಲು ಸಾಧ್ಯವಾಗದೆ ಇರಬಹುದು. ಹಾನಗಲ್‌ ಕ್ಷೇತ್ರದಲ್ಲಿ ಬಿಜೆಪಿ ಸಂಘಟಿತವಾಗಲು ಇದು ಸರಿಯಾದ ಸಮಯ.


ಇದನ್ನೂ ಓದಿರಿ: ರಾಜ್ಯ ಉಪಚುನಾವಣೆ ಫಲಿತಾಂಶ: ಸಿಂದಗಿಯಲ್ಲಿ ಬಿಜೆಪಿಗೆ ಭರ್ಜರಿ ಗೆಲುವು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹೊಸ ಕಾರ್ಮಿಕ ಕಾನೂನು ಶ್ರಮಿಕರ ಮೂಲಭೂತ ಹಕ್ಕುಗಳಿಗೆ ಕತ್ತರಿ!

"8 ಗಂಟೆ ಕೆಲಸ, 8 ಗಂಟೆ ಮನರಂಜನೆ, 8 ಗಂಟೆ ವಿಶ್ರಾಂತಿ" ಎಂಬ ತತ್ವವು ಸುಲಭವಾಗಿ ದೊರೆತದ್ದಲ್ಲ, ಇದು ದೀರ್ಘಕಾಲದ ಹೋರಾಟ, ತ್ಯಾಗ ಮತ್ತು ಏಕತೆಯ ಫಲವಾಗಿದೆ. ಕೆಲಸದ ಹೊರೆ ಅತಿಯಾಗಿ ಇದ್ದ...

ಮನರೇಗಾ ಯಶೋಗಾಥೆ: ಭಾಗ-1 ದಲಿತರು-ಮಹಿಳೆಯರಿಗೆ ಆರ್ಥಿಕ ಭದ್ರತೆ; ಗ್ರಾಮ ಸಬಲೀಕರಣಕ್ಕೆ ಮನರೇಗಾ ಕೊಟ್ಟ ಕೊಡುಗೆ ಅಪಾರ

2001-2004 ರವರೆಗಿನ ನಿರಂತರ ಬರ ಕರ್ನಾಟಕದ ಬಹುತೇಕ ಹಳ್ಳಿಗಳನ್ನು ಕಂಗಾಲಾಗಿಸಿದ್ದಂತೂ ನಿಜ. ಎಲ್ಲ ಕೆರೆಗಳು ಬತ್ತಿಹೋಗಿದ್ದರಿಂದ ದನಕರುಗಳಿಗೆ ನೀರು ಕುಡಿಸಲೂ ಜನ ಅಲೆದಾಡುತ್ತಿದ್ದರು. ಜನರಿಗೆ ಕುಡಿಯುವ ನೀರು ಪೂರೈಕೆ ಸಹ ಆ ಸಂದರ್ಭದಲ್ಲಿ...

ಮಣಿಪುರ: ಬುಡಕಟ್ಟು ಚರ್ಚ್ ನಾಯಕರ ಮೇಲೆ ಉಗ್ರ ದಾಳಿ:  ಹಲವೆಡೆ ಮೇಣದ ಬತ್ತಿಯ ಜೊತೆಗೆ ಶೋಕ ವ್ಯಕ್ತ ಪಡಿಸಿದ ಕುಕಿ ಸಮುದಾಯ 

ಇಂಫಾಲ್: ಮಣಿಪುರದ ಕಾಂಗ್‌ಪೋಕ್ಪಿ ಜಿಲ್ಲೆಯಲ್ಲಿ ಮೂವರು ಪ್ರಮುಖ ಕುಕಿ ಚರ್ಚ್ ನಾಯಕರನ್ನು ಹೊಂಚು ಹಾಕಿ ದಾಳಿ ನಡೆಸಿ ಕೊಲ್ಲಲಾಗಿದೆ. ಈ ಘಟನೆಯು ರಾಜ್ಯದಲ್ಲಿ ಜನಾಂಗೀಯ ಉದ್ವಿಗ್ನತೆಯನ್ನು ಮತ್ತಷ್ಟು ತೀವ್ರಗೊಳಿಸಿದೆ.  ಮೇ 13ರಂದು ಬೆಳಿಗ್ಗೆ ಚುರಾಚಂದ್‌ಪುರನಲ್ಲಿ...

ಗುಜರಾತ್| ಮದುವೆ ಮೆರವಣಿಗೆಯಲ್ಲಿ ಕುದುರೆ ಸವಾರಿ ಮಾಡಿದ ದಲಿತ ವರನ ಮೇಲೆ ಹಲ್ಲೆ

ಗುಜರಾತ್‌ನ ಮೆಹ್ಸಾನಾ ಜಿಲ್ಲೆಯ ಮಡಿ ಗ್ರಾಮದಲ್ಲಿ ಮದುವೆ ಮೆರವಣಿಗೆಯಲ್ಲಿ ಕುದುರೆ ಸವಾರಿ ಮಾಡುತ್ತಿದ್ದ ದಲಿತ ವರನ ಮೇಲೆ ಮೇಲ್ಜಾತಿಯ ಪುರುಷರ ಗುಂಪೊಂದು ಜಾತಿ ನಿಂದನೆ ಮಾಡಿ ನಿಂದಿಸಿದ್ದಾರೆ ಎಂದು ಆರೋಪಿಸಲಾಗಿದೆ. ಮೇ 10 ರಂದು...

ಆತಂಕಕಾರಿಯಾದ ಆನೆ ದಾಳಿ

ಆನೆ ದಾಳಿ ಹಿಂದೆಂದಿಗಿಂತಲೂ ದುಪ್ಪಟ್ಟಾಗಿದೆ. ಅರಣ್ಯಮಂತ್ರಿ ಈಶ್ವರ್ ಖಂಡ್ರೆಯವರ ಪ್ರಕಾರ ಆನೆಗಳ ಸಂಖ್ಯೆ ದುಪ್ಪಟ್ಟಾಗಿದೆ. ಕಾಡಿನ ಪ್ರಮಾಣ ಅಷ್ಟೆ ಇದೆ. ಅಂದರೆ ಕಾಡಿನ ಪ್ರಮಾಣ ಹೆಚ್ಚು ಮಾಡಬೇಕೆಂದರೆ ಮನುಷ್ಯರ ಆವಾಸ ಇಲ್ಲದೆ ಆನೆಗಳಿಗಾಗಿ...

ವೈದ್ಯಕೀಯ ಸೀಟುಗಳ ಹಂಚಿಕೆ ಕೇಂದ್ರೀಕರಣಕ್ಕೆ ದಕ್ಷಿಣದ ವಿರೋಧ; ನೀಟ್ ಪರೀಕ್ಷೆಯನ್ನೇ ರದ್ದುಗೊಳಿಸಲು ಇದು ಸಕಾಲ

ರಾಜ್ಯಪಟ್ಟಿಯಲ್ಲಿದ್ದ ಶಿಕ್ಷಣದ ಹಕ್ಕನ್ನು ನೀಟ್‌ ಹೆಸರಿನಲ್ಲಿ ಕೇಂದ್ರದ ಜಂಟಿ ಪಟ್ಟಿಗೆ ಸೇರಿಸುವ ಒಕ್ಕೂಟ ಸರ್ಕಾರದ ನಿರ್ಧಾರದಿಂದ ದಕ್ಷಿಣದ ರಾಜ್ಯಗಳು ಭಾರಿ ನಷ್ಟ ಅನುಭವಿಸುತ್ತಿವೆ. ಜೊತೆಗೆ, ನೀಟ್ ಪಾಸ್‌ ಮಾಡುವ ಒತ್ತಡ ತಾಳಲಾರದೆ ದೇಶದಾದ್ಯಂತ...

‘ಮತ’ ವ್ಯರ್ಥ ಮಾಡದ ಮತದಾರ: 2026ರಲ್ಲಿ ಕುಸಿಯಿತು ‘ನೋಟಾ’ ಅಬ್ಬರ

2026ರ ವಿಧಾನಸಭಾ ಚುನಾವಣೆಯಲ್ಲಿ ಅಸ್ಸಾಂ, ಕೇರಳ, ಪುದುಚೇರಿ, ತಮಿಳುನಾಡು ಮತ್ತು ಪಶ್ಚಿಮ ಬಂಗಾಳದಾದ್ಯಂತ ಸುಮಾರು 10.9 ಲಕ್ಷ ಮತಗಳು 'ನೋಟಾ' (ಯಾರಿಗೂ ಮತವಿಲ್ಲ) ಪಾಲಾಗಿವೆ. ಆದರೆ, 2016 ಮತ್ತು 2021ರ ಚುನಾವಣೆಗಳಿಗೆ ಹೋಲಿಸಿದರೆ...

ಕೇರಳದ 13ನೇ ಮುಖ್ಯಮಂತ್ರಿ ವಿ.ಡಿ. ಸತೀಶನ್: ವಿದ್ಯಾರ್ಥಿ ನಾಯಕನಿಂದ ಸಿಎಂ ಸ್ಥಾನದವರೆಗೆ ಸತೀಶನ್ ಪಯಣ

ತಿರುವನಂತಪುರಂ: ಕೇರಳಂನ ನೂತನ ಮುಖ್ಯಮಂತ್ರಿಯಾಗಿ ವಿ.ಡಿ. ಸತೀಶನ್ ಅವರನ್ನು ಕಾಂಗ್ರೆಸ್ ಹೈಕಮಾಂಡ್ ಆಯ್ಕೆ ಮಾಡಿದೆ. ಆ ಮೂಲಕ ಹಲವು ದಿನಗಳಿಂದ ಈ ಬಗ್ಗೆ ನಡೆಯುತ್ತಿದ್ದ ಕುತೂಹಲ ಮತ್ತು ಚರ್ಚೆಗಳಿಗೆ ತೆರೆ ಬಿದ್ದಿದೆ.  ಅಖಿಲ ಭಾರತ...

ದಲಿತರ ನ್ಯಾಯಕ್ಕೆ ಹೊಸ ಅಡ್ಡಿಯಾಗಲಿದೆಯೇ ‘ಸಾರ್ವಜನಿಕ ವೀಕ್ಷಣೆ’ ನಿಯಮ? ಪರಿಶಿಷ್ಟರನ್ನು ಆತಂಕಕ್ಕೆ ತಳ್ಳಿದ ಸುಪ್ರೀಂ ತೀರ್ಪು

ಸಾರ್ವಜನಿಕರು ನೋಡದ ಜಾಗದಲ್ಲಿ, ಅಂದರೆ ಯಾರೂ ನೋಡದ ಜಾಗದಲ್ಲಿ ಜಾತಿ ನಿಂದನೆ ಅಥವಾ ಅವಮಾನ ನಡೆದರೆ, ಅದು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆ 1989ರ ಅಡಿಯಲ್ಲಿ ಅಪರಾಧ...

ಪಶ್ಚಿಮ ಬಂಗಾಳ: “ಇದು ಬುಲ್ಡೋಜರ್ ರಾಜ್ಯವಲ್ಲ”: ಚುನಾವಣೋತ್ತರ ಹಿಂಸಾಚಾರದ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮತ್ತು ತೃಣಮೂಲ ಕಾಂಗ್ರೆಸ್ ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಚುನಾವಣೋತ್ತರ ಹಿಂಸಾಚಾರದ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ಗುರುವಾರ ವಕೀಲರ ನಿಲುವಂಗಿಯನ್ನು ಧರಿಸಿ ಕಲ್ಕತ್ತಾ ಹೈಕೋರ್ಟ್‌ಗೆ ಬಂದ ಅವರು ವಿಧಾನಸಭಾ...