Homeಮುಖಪುಟಚುನಾವಣಾ ಬಾಂಡ್: ಸುಪ್ರೀಂ ಕೋರ್ಟ್ ವಕೀಲರ ಸಂಘದ ಅಧ್ಯಕ್ಷರಿಂದ ರಾಷ್ಟ್ರಪತಿಗೆ ಪತ್ರ, ಪದಾಧಿಕಾರಿಗಳಿಂದ ಆಕ್ಷೇಪ

ಚುನಾವಣಾ ಬಾಂಡ್: ಸುಪ್ರೀಂ ಕೋರ್ಟ್ ವಕೀಲರ ಸಂಘದ ಅಧ್ಯಕ್ಷರಿಂದ ರಾಷ್ಟ್ರಪತಿಗೆ ಪತ್ರ, ಪದಾಧಿಕಾರಿಗಳಿಂದ ಆಕ್ಷೇಪ

ಅಧ್ಯಕ್ಷರ ಪತ್ರಕ್ಕೂ ನಮಗೂ ಸಂಬಂಧವಿಲ್ಲ ಎಂದ ಸದಸ್ಯರು

- Advertisement -
- Advertisement -

ಚುನಾವಣಾ ಬಾಂಡ್‌ಗೆ ಸಂಬಂಧಿಸಿದಂತೆ ನೀಡಿರುವ ತೀರ್ಪನ್ನು ಮರು ಪರಿಶೀಲಿಸುವಂತೆ ಸುಪ್ರೀಂ ಕೋರ್ಟ್‌ಗೆ ಸೂಚಿಸಬೇಕು ಎಂದು ಕೋರಿ ಸುಪ್ರೀಂ ಕೋರ್ಟ್ ವಕೀಲರ ಸಂಘದ (ಎಸ್‌ಸಿಬಿಎ) ಅಧ್ಯಕ್ಷ ಆದಿಶ್ ಸಿ. ಅಗರ್ವಾಲ್ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ನಿನ್ನೆ (ಮಾ.12) ಪತ್ರ ಬರೆದಿದ್ದರು.

ಇದಕ್ಕೆ ಸುಪ್ರೀಂ ಕೋರ್ಟ್ ವಕೀಲರ ಸಂಘದ ಇತರ ಪದಾಧಿಕಾರಿಗಳು ವಿರೋಧ ವ್ಯಕ್ತಪಡಿಸಿದ್ದಾರೆ. ಅಧ್ಯಕ್ಷ ಆದಿಶ್ ಅಗರ್ವಾಲ್ ಅವರು ರಾಷ್ಟ್ರಪತಿಗೆ ಬರೆದ ಪತ್ರಕ್ಕೂ ನಮಗೂ ಯಾವುದೇ ಸಂಬಧವಿಲ್ಲ ಎಂದು ಸಂಘದ ಗೌರವ ಕಾರ್ಯದರ್ಶಿ ರೋಹಿತ್ಪಾಂಡೆ ಪ್ರಕಟಣೆ ಹೊರಡಿಸಿದ್ದಾರೆ.

“ಚುನಾವಣಾ ಬಾಂಡ್‌ಗೆ ಸಂಬಂಧಿಸಿದಂತೆ ಮಾರ್ಚ್‌ 11ರಂದು ಸುಪ್ರೀಂ ಕೋರ್ಟ್ ನೀಡಿರುವ ತೀರ್ಪಿನ ಜಾರಿ ತಡೆ ಹಿಡಿಯುವಂತೆ ಆದಿಶ್ ಅಗರ್ವಾಲ್ ಅವರು ರಾಷ್ಟ್ರಪತಿಗೆ ಪತ್ರ ಬರೆದಿರುವುದು ಮಾಧ್ಯಮ ವರದಿಗಳಿಂದ ತಿಳಿದು ಬಂದಿದೆ. ಸುಪ್ರೀ ಕೋರ್ಟ್ ವಕೀಲರ ಸಂಘ ಅಥವಾ ಅಖಿಲ ಭಾರತ ವಕೀಲರ ಸಂಘದ ಲೆಟರ್ ಹೆಡ್‌ನಲ್ಲಿ 7 ಪುಟಗಳ ಪತ್ರ ಬರೆಯಲಾಗಿದೆ. ಪತ್ರದ ಕೊನೆಯಲ್ಲಿ ಆದಿಶ್ ಅಗರ್ವಾಲ್ ಅವರು ತಮ್ಮ ಅಧ್ಯಕ್ಷ ಹುದ್ದೆಯನ್ನು ಉಲ್ಲೇಖಿಸಿ ಸಹಿ ಹಾಕಿದ್ದಾರೆ” ಎಂದು ರೋಹಿತ್ ಪಾಂಡೆ ಹೇಳಿದ್ದಾರೆ.

“ಅಧ್ಯಕ್ಷ ಆದಿಶ್ ಅಗರ್ವಾಲ್ ಅವರಿಗೆ ವಕೀಲರ ಸಂಘದ ಹೆಸರಿನಲ್ಲಿ ಪತ್ರ ಬರೆಯಲು ಸಂಘದ ಸದಸ್ಯರು ಅನುಮತಿ ನೀಡಿಲ್ಲ. ಅವರು ಪತ್ರದಲ್ಲಿ ವ್ಯಕ್ತಪಡಿಸಿರುವ ಅಭಿಪ್ರಾಯವೂ ಸಂಘದ ಸದಸ್ಯರದ್ದಲ್ಲ. ಆದಿಶ್ ಅಗರ್ವಾಲ್ ಅವರ ಪತ್ರ ಗೌರವಾನ್ವಿತ ಸುಪ್ರೀಂ ಕೋರ್ಟ್ ಆದೇಶವನ್ನು ಮೀರಿದೆ ಮತ್ತು ದುರ್ಬಲಗೊಳಿಸುವ ಪ್ರಯತ್ನವಾಗಿದೆ. ಇದನ್ನು ವಕೀಲರ ಸಂಘ ಬಲವಾಗಿ ಖಂಡಿಸುತ್ತದೆ” ಎಂದು ತಿಳಿಸಿದ್ದಾರೆ.

ಸುಪ್ರೀಂ ಕೋರ್ಟ್ ವಕೀಲರ ಸಂಘದ ಲೆಟರ್ ಹೆಡ್‌ನಲ್ಲಿ ರೋಹಿತ್ ಪಾಂಡೆ ಪ್ರಕಟನೆ ಹೊರಡಿಸಿದ್ದಾರೆ. ಈ ಮೂಲಕ ಸಂಘದ ಅಧ್ಯಕ್ಷ ಸುಪ್ರೀಂ ಕೋರ್ಟ್ ಆದೇಶದ ವಿರುದ್ದ ರಾಷ್ಟ್ರಪತಿಗೆ ಪತ್ರ ಬರೆದಿರುವುದು ಅವರ ವೈಯುಕ್ತಿಕ ಎಂದು ಸ್ಪಷ್ಟಪಡಿಸಿದ್ದಾರೆ. ಅಲ್ಲದೆ, ಸಂಘದ ಇತರ ಸದಸ್ಯರ ಅನುಮತಿ ಇಲ್ಲದೆ ಪತ್ರ ಬರೆದಿರುವ ಆದಿಶ್ ಅಗರ್ವಾಲ್ ಅವರ ನಡೆಯನ್ನು ಖಂಡಿಸಿದ್ದಾರೆ.

“ದೇಣಿಗೆ ನೀಡಿದವರ ಹೆಸರು ಮತ್ತು ಅವರು ವಿವಿಧ ರಾಜಕೀಯ ಪಕ್ಷಗಳಿಗೆ ನೀಡಿದ ಮೊತ್ತವನ್ನು ಬಹಿರಂಗಪಡಿಸಿದರೆ, ಅವರಿಂದ ಕಡಿಮೆ ದೇಣಿಗೆ ಪಡೆದ ಪಕ್ಷಗಳು ಕಿರುಕುಳ ನೀಡುವ ಸಾಧ್ಯತೆಯನ್ನು ತಳ್ಳಿಹಾಕುವಂತಿಲ್ಲ. ದೇಣಿಗೆ ಪಡೆಯುವಾಗ ಹೆಸರು ಬಹಿರಂಗಪಡಿಸುವುದಿಲ್ಲ ಎಂಬ ಮಾತು ಕೊಡಲಾಗಿತ್ತು. ಹೆಸರು ಬಹಿರಂಗಪಡಿಸಿದರೆ ವಚನ ಭಂಗ ಮಾಡಿದಂತೆ ಆಗುತ್ತದೆ” ಎಂದು ಆದಿಶ್ ಅಗರ್ವಾಲ್ ರಾಷ್ಟ್ರಪತಿಗೆ ಬರೆದ ಪತ್ರದಲ್ಲಿ ತಿಳಿಸಿದ್ದರು.

ಆದಿಶ್ ಅಗರ್ವಾಲ್ ಪತ್ರ ಬರೆದಿರುವುದು ಯಾಕೆ?

ರೋಹಿತ್ ಪಾಂಡೆಯ ಪ್ರಕಟನೆಯ ಕುರಿತು ಪ್ರತಿಕ್ರಿಯಿಸಿರುವ ಪತ್ರಕರ್ತ ರಾಜದೀಪ್ ಸರ್ದೇಸಾಯಿ,” ಸುಪ್ರೀಂ ಕೋರ್ಟ್ ವಕೀಲರ ಸಂಘದ ಅಧ್ಯಕ್ಷ ರಾಷ್ಟ್ರಪತಿಗಳಿಗೆ ಪತ್ರ ಬರೆದಿರುವುದು ಯಾಕೆ? ಅವರು ಪ್ರಚಾರಕ್ಕಾಗಿ ಬರೆದ್ರಾ? ಇಲ್ಲ, ಯಾರ ಸಲಹೆ ಮೇರೆಗೆ ಬರೆದ್ರಾ? ಎಂದು ಪ್ರಶ್ನಿಸಿದ್ದಾರೆ.

ಇದನ್ನೂ ಓದಿ: ಎಸ್‌ಬಿಐ ಮುಖ್ಯಸ್ಥರ ರಾಜೀನಾಮೆಗೆ ನೌಕರರ ಒಕ್ಕೂಟ ಒತ್ತಾಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. Mr. Adish agarwal , President of Supreme Court Bar association , must be arrested immediately for having written letter in ” All india bar association ” name and letterhead which is fake. He must have organised a bar association meet to raise consensus with regard to writing a letter to SC stopping the constitutional 5 justices bench judgement.
    I feel he is a broker to corporate company and bjp . If the details of ELECTROL BONDS are publicized many corporate CEO and ministers must go to jail.
    Simple Question to Mr.Adis agarwal is that why you have not legally interfered into he Court trial to express your point of view ?
    He can only file either review petition or Curative potion. But he have no right to demand for the stoppage of judgement.
    Judicial Review structure cannot be questioned by even the houses of parliament or any association. Let experts give clarification if I’m wrong. This my openion not judgemental.

LEAVE A REPLY

Please enter your comment!
Please enter your name here

- Advertisment -

ಕ್ಯಾಬಿನೆಟ್‌ನಲ್ಲಿ ಮಹಿಳೆಯರಿಗಿಲ್ಲ ಸ್ಥಾನ: ಸಿಎಂ ಡಿ.ಕೆ. ಶಿವಕುಮಾರ್ ಗೆ ‘ನಾವೆದ್ದು ನಿಲ್ಲದಿದ್ದರೆ-ಕರ್ನಾಟಕ’ ಸಂಘಟನೆಯಿಂದ ಬಹಿರಂಗ ಪತ್ರ

ಕರ್ನಾಟಕದ ನೂತನ ಸಚಿವ ಸಂಪುಟದಲ್ಲಿ ಒಬ್ಬರೇ ಒಬ್ಬರು ಮಹಿಳಾ ಶಾಸಕರಿಗೆ ಅವಕಾಶ ನೀಡದಿರುವುದನ್ನು ತೀವ್ರವಾಗಿ ಖಂಡಿಸಿರುವ ರಾಜ್ಯದ ಪ್ರಮುಖ ಮಹಿಳಾ ಹಾಗೂ ಜನಪರ ಸಂಘಟನೆಗಳ ಒಕ್ಕೂಟ ‘ನಾವೆದ್ದು ನಿಲ್ಲದಿದ್ದರೆ-ಕರ್ನಾಟಕ’ ಸಂಘಟನೆ ಮುಖ್ಯಮಂತ್ರಿಗಳಿಗೆ ಬಹಿರಂಗ...

ಜಾರ್ಖಂಡ್ | ಜೆಪಿಎಸ್‌ಸಿ, ಜೆಎಸ್‌ಎಸ್‌ಸಿ ಪರೀಕ್ಷಾ ಅಕ್ರಮಗಳ ವಿರುದ್ಧ ತೀವ್ರಗೊಂಡ ಪ್ರತಿಭಟನೆ : ಆರು ಮಂದಿಯಿಂದ ಉಪವಾಸ ಸತ್ಯಾಗ್ರಹ

ಜಾರ್ಖಂಡ್ ಲೋಕ ಸೇವಾ ಆಯೋಗ (ಜೆಪಿಎಸ್‌ಸಿ) ಮತ್ತು ಜಾರ್ಖಂಡ್ ಸಿಬ್ಬಂದಿ ಆಯ್ಕೆ ಆಯೋಗ (ಜೆಎಸ್ಎಸ್‌ಸಿ) ನಡೆಸಿದ ವಿವಿಧ ನೇಮಕಾತಿ ಪರೀಕ್ಷೆಗಳಲ್ಲಿ ನಡೆದಿರುವ ಆಪಾದಿತ ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಅಕ್ರಮಗಳ ವಿರುದ್ಧದ ಪ್ರತಿಭಟನೆಯು ತೀವ್ರ...

ಸಚಿವ ಸ್ಥಾನ ಸಿಗದಿದ್ದಕ್ಕೆ, ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದೇನೆ ಎಂಬುದು ಸುಳ್ಳು: ಶಾಸಕ ಬಿ. ಆರ್‌ ಪಾಟೀಲ್‌ ಸ್ಪಷ್ಟನೆ

ಕರ್ನಾಟಕ ರಾಜ್ಯ ನೀತಿ ಮತ್ತು ಯೋಜನಾ ಆಯೋಗದ ಉಪಾಧ್ಯಕ್ಷ ಸ್ಥಾನಕ್ಕೆ ನಾನು ರಾಜೀನಾಮೆ ಸಲ್ಲಿಸಿರುವುದು ನಿಜ. ಆದರೆ, ಶಾಸಕ ಸ್ಥಾನಕ್ಕೂ ರಾಜೀನಾಮೆ ನೀಡುತ್ತಿದ್ದೇನೆ ಎಂದು ಮಾಧ್ಯಮಗಳು ಹಾಗೂ ಸಾಮಾಜಿಕ ಜಾಲತಾಣಗಳಲ್ಲಿ ಹರಡುತ್ತಿರುವ ಸುದ್ದಿಗಳು...

ಪ್ರಧಾನಿ ಮೋದಿ ವಿಡಿಯೋ ತೆಗೆದುಹಾಕಿದ ಪ್ರಕರಣ: ಮಾರ್ಕ್ ಝುಕರ್‌ಬರ್ಗ್‌ ಕ್ಷಮೆಯಾಚಣೆಗೆ ಒತ್ತಾಯಿಸಿದ ಸಂಸದೀಯ ಸಮಿತಿ; 3 ದಿನಗಳ ಗಡುವು

ಪ್ರಧಾನಿ ನರೇಂದ್ರ ಮೋದಿಯವರ ವೀಡಿಯೊವನ್ನು ಫೇಸ್‌ಬುಕ್‌ನಿಂದ ತೆಗೆದುಹಾಕಿದ್ದಕ್ಕೆ ಸಂಬಂಧಿಸಿದಂತೆ ಮೆಟಾ ಮುಖ್ಯಸ್ಥ ಮಾರ್ಕ್ ಜುಕರ್‌ಬರ್ಗ್ ಕ್ಷಮೆಯಾಚಿಸಬೇಕೆಂದು ಸಂಸದೀಯ ಸ್ಥಾಯಿ ಸಮಿತಿ ಒತ್ತಾಯಿಸಿದ್ದು, ಈ ಕ್ರಮವನ್ನು ಗಂಭೀರವಾಗಿ ಪರಿಗಣಿಸಲಾಗಿದೆ ಎಂದು ಹೇಳಿದೆ. ಇಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ...

ಜನರ ಆತಂಕಗಳಿಗೆ ಧ್ವನಿಯಾಗಲು CJP ಸಿದ್ಧತೆ: ಮಹಾರಾಷ್ಟ್ರದಲ್ಲಿ ಅಭಿಜೀತ್ ದೀಪ್ಕೆ ನೇತೃತ್ವದಲ್ಲಿ ಉನ್ನತ ಮಟ್ಟದ ಸಭೆ

ಕಾಕ್ರೋಚ್ ಜನತಾ ಪಾರ್ಟಿ (CJP) ಸದ್ಯಕ್ಕೆ ಒತ್ತಡದ ಗುಂಪಾಗಿ ಕೆಲಸ ಮಾಡಲಿದ್ದು, ಪ್ರಸಕ್ತ ಭಾರತಕ್ಕೆ ಬೇಕಾಗಿರುವುದು ಕೂಡ ಅದೇ ಆಗಿದೆ ಎಂದು ಸಿಜೆಪಿ ಸಂಸ್ಥಾಪಕ ಅಭಿಜೀತ್ ದೀಪ್ಕೆ ಬುಧವಾರ ಸ್ಪಷ್ಟಪಡಿಸಿದ್ದಾರೆ. ಮಹಾರಾಷ್ಟ್ರದ ಛತ್ರಪತಿ ಸಂಭಾಜಿನಗರದಲ್ಲಿ...

ರಾಯಚೂರು: ದಲಿತ ಮುಖಂಡ ಭೂಮಾನಂದ ಬರ್ಬರ ಹತ್ಯೆ; ಆಲ್ ಇಂಡಿಯಾ ಬಿಎಸ್‌ಪಿ ಹಾಗೂ ಜನಪರ ಸಂಘಟನೆಗಳ ತೀವ್ರ ಆಕ್ರೋಶ 

ರಾಯಚೂರು ಜಿಲ್ಲೆಯಲ್ಲಿ ದಲಿತ ಯುವ ನಾಯಕನೊಬ್ಬನ ಭೀಕರ ಕೊಲೆ ಪ್ರಕರಣ ವರದಿಯಾಗಿದ್ದು, ಇಡೀ ಜಿಲ್ಲೆಯಲ್ಲಿ ತೀವ್ರ ಆತಂಕ, ಕಾವು ಮತ್ತು ಆಕ್ರೋಶದ ವಾತಾವರಣ ನಿರ್ಮಾಣವಾಗಿದೆ. ದೇವದುರ್ಗ ತಾಲೂಕಿನ ಹದ್ದಿನಾಳ ಗ್ರಾಮದ ನಿವಾಸಿ, ಮಾದಿಗ...

ತಮಿಳುನಾಡು: ಹಿಂದೂ ‘ಮೇಲ್ಜಾತಿ’ ವ್ಯಕ್ತಿಯ ಜಮೀನಿನಲ್ಲಿ ಕುದುರೆ ಮೇಯಿಸುತ್ತಿದ್ದ ಎಂಬ ಕಾರಣಕ್ಕೆ 26 ವರ್ಷದ ದಲಿತ ವ್ಯಕ್ತಿಯ ಬರ್ಬರ ಹತ್ಯೆ 

ತಮಿಳುನಾಡಿನ ದಿಂಡಿಗಲ್ ಜಿಲ್ಲೆಯಲ್ಲಿ ಜಾತಿ ಗರ್ವದ ಬಲಿಪೀಠಕ್ಕೆ 26 ವರ್ಷದ ದಲಿತ ಯುವಕನೊಬ್ಬ ಬಲಿಯಾಗಿರುವ ಕ್ರೂರ ಘಟನೆ ವರದಿಯಾಗಿದೆ. ‘ಮೇಲ್ಜಾತಿ’ ಪ್ರಬಲ ಸಮುದಾಯಕ್ಕೆ ಸೇರಿದ ವ್ಯಕ್ತಿಯೊಬ್ಬನ ಜಮೀನಿನಲ್ಲಿ ಕುದುರೆ ಮೇಯುತ್ತಿತ್ತು ಎಂಬ ಕ್ಷುಲ್ಲಕ...

ಹಸು ಕೇವಲ ಉಪಯುಕ್ತ ಪ್ರಾಣಿ, ದೇವತೆಯಲ್ಲ ಎಂದಿದ್ದ ಸಾವರ್ಕರ್, ಕೋರ್ಟ್‌ನಲ್ಲಿ ಸಾವರ್ಕರ್ ಮೊಮ್ಮಗನ ಮಹತ್ವದ ಹೇಳಿಕೆ

ವಿನಾಯಕ ದಾಮೋದರ ಸಾವರ್ಕರ್ ಅವರು ಗೋಪೂಜೆಯನ್ನು ಸ್ಪಷ್ಟವಾಗಿ ವಿರೋಧಿಸಿದ್ದರು ಮತ್ತು ಹಸುವನ್ನು ಕೇವಲ ಒಂದು ಉಪಯುಕ್ತ ಪ್ರಾಣಿಯನ್ನಾಗಿಷ್ಟೇ ಪರಿಗಣಿಸುತ್ತಿದ್ದರು" ಎಂದು ಅವರ ಮೊಮ್ಮಗ ಸತ್ಯಕಿ ಸಾವರ್ಕರ್ ಪುಣೆಯ ವಿಶೇಷ ಜನಪ್ರತಿನಿಧಿಗಳ ನ್ಯಾಯಾಲಯದಲ್ಲಿ ಹೇಳಿಕೆ...

ಯಾದಗಿರಿ: ಫಾರ್ಮಾ ಘಟಕದಲ್ಲಿ ವಿಷಾನಿಲ ಸೋರಿಕೆ, ಮೂವರು ಕಾರ್ಮಿಕರ ದಾರುಣ ಸಾವು, FIR ದಾಖಲು

ಜಿಲ್ಲೆಯ ಸೈದಾಪುರ ಪೊಲೀಸ್ ಠಾಣೆ ವ್ಯಾಪ್ತಿಯ ಕಡೇಚೂರು–ಬಾಡಿಯಾಳ ಕೈಗಾರಿಕಾ ಪ್ರದೇಶದಲ್ಲಿರುವ 'ಸಿಲ್ ಲ್ಯಾಬೊರೇಟರೀಸ್ ಪ್ರೈವೇಟ್ ಲಿಮಿಟೆಡ್' (Sil Laboratories Pvt Ltd) ಔಷಧಿ ತಯಾರಿಕಾ ಘಟಕದಲ್ಲಿ ಬುಧವಾರ ಮುಂಜಾನೆ ಸಂಭವಿಸಿದ ಭೀಕರ ರಾಸಾಯನಿಕ...

‘ಮದ್ರಸಾಗಳು ಭಯೋತ್ಪಾದನೆಯನ್ನು ಉತ್ಪಾದಿಸುತ್ತವೆ’: ಯುಪಿ ಉಪಮುಖ್ಯಮಂತ್ರಿ ಕೇಶವ್ ಪ್ರಸಾದ್ ಮೌರ್ಯ ದ್ವೇಷ ಭಾಷಣಕ್ಕೆ ವ್ಯಾಪಕ ಆಕ್ರೋಶ

‘ಮದ್ರಸಾಗಳು ಭಯೋತ್ಪಾದನೆಯನ್ನು ಉತ್ಪಾದಿಸುತ್ತವೆ’ ಎಂಬ ಉತ್ತರ ಪ್ರದೇಶದ ಉಪಮುಖ್ಯಮಂತ್ರಿ ಕೇಶವ್ ಪ್ರಸಾದ್ ಮೌರ್ಯ ಅವರ ಹೇಳಿಕೆಯು ತೀವ್ರ ಸ್ವರೂಪದ ವಿವಾದಕ್ಕೆ ಕಾರಣವಾಗಿದೆ. ಧಾರ್ಮಿಕ ಅಲ್ಪಸಂಖ್ಯಾತರ ಶಿಕ್ಷಣ ಸಂಸ್ಥೆಗಳನ್ನು ಗುರಿಯಾಗಿಸಿಕೊಂಡು ನೀಡಿರುವ ಈ ಹೇಳಿಕೆಯು...