Homeಮುಖಪುಟಚುನಾವಣಾ ಬಾಂಡ್‌: ‘ಕಚೇರಿ ಹೊರಗೆ ಡ್ರಾಪ್ ಬಾಕ್ಸ್ ಇಟ್ಟಿದ್ದೇವೆ, ಹಣ ಕೊಟ್ಟವರು ಯಾರೆಂಬುದು ಗೊತ್ತಿಲ್ಲ' ಎಂದ...

ಚುನಾವಣಾ ಬಾಂಡ್‌: ‘ಕಚೇರಿ ಹೊರಗೆ ಡ್ರಾಪ್ ಬಾಕ್ಸ್ ಇಟ್ಟಿದ್ದೇವೆ, ಹಣ ಕೊಟ್ಟವರು ಯಾರೆಂಬುದು ಗೊತ್ತಿಲ್ಲ’ ಎಂದ ಟಿಎಂಸಿ

- Advertisement -
- Advertisement -

ಚುನಾವಣಾ ಬಾಂಡ್ ಮೂಲಕ ಅಖಿಲ ಭಾರತ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಕೂಡ ಸಾಕಷ್ಟು ಮೊತ್ತದ ಫಂಡ್ ಸ್ವೀಕರಿಸಿದ್ದು, ‘ಚುನಾವಣಾ ಬಾಂಡ್‌ಗಳ ಯೋಜನೆಯಡಿ ಪಕ್ಷಕ್ಕೆ ಯಾರು ಹಣವನ್ನು ದೇಣಿಗೆ ನೀಡಿದ್ದಾರೆ ಎಂಬುದು ಪಕ್ಷಕ್ಕೆ ತಿಳಿದಿಲ್ಲ, ಅದರ ಮೊತ್ತ ಎಷ್ಟು ಎಂಬ ಬಗ್ಗೆ ಮಾಹಿತಿ ಇಲ್ಲ. ಪಕ್ಷದ ಕಚೇರಿಯ ಹೊರಗೆ ಡ್ರಾಪ್ ಬಾಕ್ಸ್ ಇಡಲಾಗಿದೆ’ ಎಂದು ಪಕ್ಷದ ಮುಖಂಡ ನಾಯಕ ಕುನಾಲ್ ಘೋಷ್ ಹೇಳಿದರು.

ಪಶ್ಚಿಮ ಬಂಗಾಳದಲ್ಲಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, “ನಾನು ಸ್ಪಷ್ಟವಾದ ಹೇಳಿಕೆಯನ್ನು ನೀಡುತ್ತೇನೆ, ಚುನಾವಣಾ ಬಾಂಡ್‌ಗಳನ್ನು ಬಿಜೆಪಿಯವರು ಪ್ರಾರಂಭಿಸಿದರು; ಅದನ್ನು ತರಲು ಅವರು ಕಾನೂನನ್ನು ಮಾಡಿದ್ದಾರೆ. (ಪಶ್ಚಿಮ ಬಂಗಾಳ ಮುಖ್ಯಮಂತ್ರಿ) ಮಮತಾ ಬ್ಯಾನರ್ಜಿ ಅವರು 90ರ ದಶಕದಿಂದಲೂ ರಾಜ್ಯದ ಹಣದ ಮೇಲೆ ಚುನಾವಣೆ ನಡೆಸಬೇಕು ಎಂದು ಒತ್ತಾಯಿಸುತ್ತಿದ್ದಾರೆ’ ಎಂದು ಘೋಷ್ ಸುದ್ದಿಗಾರರಿಗೆ ತಿಳಿಸಿದರು.

“ಕಪ್ಪುಹಣ, ದೊಡ್ಡ ಮೊತ್ತದ ಹಣದ ಒಳಹರಿವುಗಳನ್ನು ಕೊನೆಗಾಣಿಸಲು” ಮುಖ್ಯಮಂತ್ರಿಗಳು ಒತ್ತಾಯಿಸುತ್ತಿದ್ದಾರೆ ಎಂದು ಅವರು ಹೇಳಿದರು.

“ಇದು ಹಲವಾರು ವರ್ಷಗಳಿಂದ ಮಮತಾ ಬ್ಯಾನರ್ಜಿ ಅವರ ಬೇಡಿಕೆ ಮತ್ತು ಸಿದ್ಧಾಂತವಾಗಿದೆ. ಆದರೆ, ಬಿಜೆಪಿ ಅದಕ್ಕೆ ಕಿವಿಗೊಡಲಿಲ್ಲ. ಬಿಜೆಪಿಯು ಚುನಾವಣಾ ಬಾಂಡ್‌ಗಳ ರೂಪದಲ್ಲಿ ಹೊಸ ನಿಯಮವನ್ನು ತಂದಿತು ಮತ್ತು ನಾವೆಲ್ಲರೂ ಅದನ್ನು ಅನುಸರಿಸಿದ್ದೇವೆ. ತೃಣಮೂಲ ಕಾಂಗ್ರೆಸ್‌ಗೆ ಎಷ್ಟು ಹಣ ಬಂದಿದೆ ಎಂದು ತಿಳಿದಿಲ್ಲ. ತೃಣಮೂಲ ಕಾಂಗ್ರೆಸ್ ಕಟ್ಟಡದ ಮುಂದೆ ಡ್ರಾಪ್ ಬಾಕ್ಸ್ ಇಡಲಾಗಿತ್ತು; ಅದನ್ನು ಪಕ್ಷಕ್ಕೆ ನೀಡಲಾಗಿದೆ’ ಎಂದು ವಿವರಿಸಿದರು.

‘ಕೇಂದ್ರ ಸರ್ಕಾರ ಪರಿಚಯಿಸಿದ ಕಾನೂನಿನ ಪ್ರಕಾರ, ಚುನಾವಣಾ ಬಾಂಡ್‌ಗೆ ಆಲ್ಫಾನ್ಯೂಮರಿಕ್ ಕೋಡ್ ಮಾತ್ರ ಇರುತ್ತದೆ, ಅದರಲ್ಲಿ ಕೊಟ್ಟವರ ಹೆಸರಿಲ್ಲ” ಎಂದು ತೃಣಮೂಲ ಕಾಂಗ್ರೆಸ್ ನಾಯಕ ಹೇಳಿದರು.

“ಇದು ಯಾವ ಕಂಪನಿ ಅಥವಾ ದಾನಿ ಯಾರು ಎಂದು ನಮೂದಿಸಲಾಗಿಲ್ಲ. ಬಿಜೆಪಿ ಈ ವ್ಯವಸ್ಥೆಯನ್ನು ದೇಶದಲ್ಲಿ ಪರಿಚಯಿಸಿತು. ಕೇಂದ್ರೀಯ ತನಿಖಾ ಮತ್ತು ಜಾರಿ ನಿರ್ದೇಶನಾಲಯವು ಅವರ ಹಿಡಿತದಲ್ಲಿ ಇರುವುದರಿಂದ ಅವರಿಗೆ ಹಣ ನೀಡಿದವರು ಯಾರು ಎಂದು ಅವರಿಗೆ ತಿಳಿದಿದೆ. ಬಿಜೆಪಿಯವರು ಬಾಂಡ್‌ಗಳ ಮೂಲಕ ಹಣವನ್ನು ಸಂಗ್ರಹಿಸಲು ಈ ಏಜೆನ್ಸಿಗಳನ್ನು ಬಳಸಿದರು” ಎಂದು ಆರೋಪಿಸಿದರು.

“ಆದರೆ, ತೃಣಮೂಲ ಕಾಂಗ್ರೆಸ್‌ಗೆ ಈ ಯಾವುದೇ ಏಜೆನ್ಸಿಗಳಿಲ್ಲ, ನಮಗೆ ಎಷ್ಟು ಹಣವನ್ನು ನೀಡಲಾಗಿದೆ ಎಂದು ನಮಗೆ ತಿಳಿದಿಲ್ಲ. ನಾವು ಡ್ರಾಪ್ ಬಾಕ್ಸ್‌ನಿಂದ ಹಣವನ್ನು ಸಂಗ್ರಹಿಸಿದ್ದೇವೆ, ಅದನ್ನು ಯಾವುದೇ ವೈಯಕ್ತಿಕ ಬ್ಯಾಂಕ್ ಖಾತೆಗಳಿಗೆ ಜಮಾ ಮಾಡಲಾಗಿಲ್ಲ. ನಂತರ ನಾವು ಎನ್‌ಕ್ಯಾಶ್ ಮಾಡಿದ್ದೇವೆ. ನಿಯಮಗಳ ಪ್ರಕಾರ ಹಣ ನೋಂದಾಯಿಸಲಾಗಿದೆ.  ಆದ್ದರಿಂದ, ತೃಣಮೂಲ ಕಾಂಗ್ರೆಸ್ ಆ ವ್ಯಕ್ತಿಯಿಂದ ಏಕೆ ಹಣವನ್ನು ತೆಗೆದುಕೊಂಡಿತು ಎಂಬ ಪ್ರಶ್ನೆಯು ನ್ಯಾಯಸಮ್ಮತವಲ್ಲ. ಏಕೆಂದರೆ, ನಮಗೆ ಹಣ ನೀಡಿದವರು ಯಾರು ಎಂದು ಪಕ್ಷಕ್ಕೆ ತಿಳಿದಿಲ್ಲ” ಎಂದು ಅವರು ಹೇಳಿದರು.

ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದ (ಎಸ್‌ಬಿಐ) ಚುನಾವಣಾ ಬಾಂಡ್‌ಗಳ ಮಾಹಿತಿಯ ಪ್ರಕಾರ, ತೃಣಮೂಲ ಕಾಂಗ್ರೆಸ್‌ಗೆ ಅಗ್ರ 10 ದೇಣಿಗೆದಾರ ಪಕ್ಷವಾಗಿದ್ದು, ₹1,198 ಕೋಟಿ ಫಂಡ್ ಸ್ವೀಕರಿಸಿದೆ.

ಫ್ಯೂಚರ್ ಗೇಮಿಂಗ್ ಮತ್ತು ಹೋಟೆಲ್ ಸರ್ವಿಸಸ್ ತೃಣಮೂಲ ಕಾಂಗ್ರೆಸ್‌ಗೆ ₹542 ಕೋಟಿ ನೀಡುವ ಮೂಲಕ ಅಗ್ರ ದಾನಿಯಾಗಿದ್ದು, ಹಲ್ದಿಯಾ ಎನರ್ಜಿ ಲಿಮಿಟೆಡ್ ₹281 ಕೋಟಿ, ಧರಿವಾಲ್ ಇನ್‌ಫ್ರಾಸ್ಟ್ರಕ್ಚರ್ ₹90 ಕೋಟಿ, ಎಂಕೆಜೆ ಎಂಟರ್‌ಪ್ರೈಸಸ್ ಮತ್ತು ಏವೀಸ್ ಟ್ರೇಡಿಂಗ್ ತಲಾ ₹46 ಕೋಟಿ ಮೌಲ್ಯದ ಬಾಂಡ್ ನೀಡಿದೆ.

ಬಿಜೆಪಿಗೆ ಟಾಪ್ 10 ದೇಣಿಗೆದಾರರು ಒಟ್ಟು ₹2,123 ಕೋಟಿ ದೇಣಿಗೆ ನೀಡಿದ್ದರೆ, ಕಾಂಗ್ರೆಸ್‌ಗೆ ₹615 ಕೋಟಿ ದೇಣಿಗೆ ನೀಡಿದ್ದಾರೆ ಎಂದು ಪ್ರಕಟವಾದ ಅಂಕಿಅಂಶಗಳು ಬಹಿರಂಗಪಡಿಸಿವೆ.

ಸುಮಾರು 1,300 ಘಟಕಗಳು ₹12,000 ಕೋಟಿಗೂ ಹೆಚ್ಚು ಮೌಲ್ಯದ ಚುನಾವಣಾ ಬಾಂಡ್‌ಗಳನ್ನು ಖರೀದಿಸಿವೆ. ನಂತರ ಅವುಗಳನ್ನು 23 ರಾಜಕೀಯ ಪಕ್ಷಗಳಿಗೆ ವಿತರಿಸಲಾಯಿತು ಎಂದು ಎಸ್‌ಬಿಐ ಅಂಕಿಅಂಶಗಳು ಮತ್ತಷ್ಟು ತೋರಿಸಿವೆ.

ಇದನ್ನೂ ಓದಿ; ‘ಅರವಿಂದ್ ಕೇಜ್ರಿವಾಲ್ ಈಗ ಹೆಚ್ಚು ಅಪಾಯಕಾರಿ; ಪಿಎಂ ಮೋದಿ ದೆಹಲಿ ಸಿಎಂಗೆ ಹೆದರುತ್ತಿದ್ದಾರೆ’

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದಕ್ಷಿಣ ಪಿನಾಕಿನಿ ಜಲವಿವಾದ : ನ್ಯಾಯಮಂಡಳಿ ಸ್ಥಾಪಿಸಲು ಸುಪ್ರೀಂ ಕೋರ್ಟ್ ಆದೇಶ

ದಕ್ಷಿಣ ಪಿನಾಕಿನಿ (ಪೆನ್ನೈಯಾರ್) ನದಿ ನೀರಿನ ಹಂಚಿಕೆಗೆ ಸಂಬಂಧಿಸಿದಂತೆ ತಮಿಳುನಾಡು ಮತ್ತು ಕರ್ನಾಟಕ ರಾಜ್ಯಗಳ ನಡುವೆ ಬಾಕಿ ಇರುವ ವಿವಾದಗಳನ್ನು ಪರಿಹರಿಸಲು ನ್ಯಾಯಮಂಡಳಿ ಸ್ಥಾಪಿಸುವಂತೆ ಸುಪ್ರೀಂ ಕೋರ್ಟ್ ಸೋಮವಾರ (ಫೆ.2) ನಿರ್ದೇಶನ ನೀಡಿದೆ. ಕೇಂದ್ರ...

ಸಿಜೆ ರಾಯ್ ಸಾವು| ಯಾವುದೇ ಡೆತ್ ನೋಟ್ ಅಥವಾ ಡೈರಿ ಪತ್ತೆಯಾಗಿಲ್ಲ; ಸಾಕ್ಷ್ಯಗಳು ಆತ್ಮಹತ್ಯೆಯನ್ನು ಸೂಚಿಸುತ್ತವೆ: ಎಸ್‌ಐಟಿ

ಬೆಂಗಳೂರು: ಕಾನ್ಫಿಡೆಂಟ್ ಗ್ರೂಪ್ ಅಧ್ಯಕ್ಷ ಸಿಜೆ ರಾಯ್ ಸಾವಿನ ಕುರಿತು ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ)ಕ್ಕೆ ಅಪರಾಧ ಸ್ಥಳದಲ್ಲಿ ಯಾವುದೇ ಡೆತ್ ನೋಟ್ ಅಥವಾ ಡೈರಿ ಪತ್ತೆಯಾಗಿಲ್ಲ, ಮತ್ತು ಪ್ರಾಥಮಿಕ...

ಕೇಂದ್ರ ಬಜೆಟ್ ಅನ್ನು ‘ಹಂಪ್ಟಿ ಡಂಪ್ಟಿ’ ಎಂದ ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ

ಕೇಂದ್ರ ಬಜೆಟ್ ಅನ್ನು 'ಹಂಪ್ಟಿ ಡಂಪ್ಟಿ ಬಜೆಟ್' ಎಂದು ಮುಖ್ಯಮಂತ್ರಿ ಎಂದಿರುವ ಮಮತಾ ಬ್ಯಾನರ್ಜಿ, ಕೇಂದ್ರ ಸರ್ಕಾರ 'ದಿಕ್ಕು ತೋಚದ' ಬಜೆಟ್ ಮಂಡಿಸಿದೆ ಎಂದು ಭಾನುವಾರ ಟೀಕಿಸಿದರು. ರಾಷ್ಟ್ರ ರಾಜಧಾನಿಗೆ ಹೊರಡುವ ಮುನ್ನ, ಮುಂಬರುವ...

‘ತೆರೆಮರೆಯಲ್ಲಿ ಏನೋ ಅನುಮಾನಾಸ್ಪದ ಘಟನೆ ನಡೆದಿದೆ..’; ಅಜಿತ್ ವಿಮಾನ ಅಪಘಾತದ ಕುರಿತು ಅನುಮಾನ ವ್ಯಕ್ತಪಡಿಸಿದ ರಾವತ್

ಜನವರಿ 28, 2026 ರಂದು ಮಹಾರಾಷ್ಟ್ರದ ಬಾರಾಮತಿ ಬಳಿ ನಡೆದ ವಿಮಾನ ಅಪಘಾತದಲ್ಲಿ ಉಪಮುಖ್ಯಮಂತ್ರಿ ಮತ್ತು ಎನ್‌ಸಿಪಿ ನಾಯಕ ಅಜಿತ್ ಪವಾರ್ ಅವರ ಹಠಾತ್ ಸಾವು ಸಾಕಷ್ಟು ಅನುಮಾನಗಳನ್ನು ಹುಟ್ಟುಹಾಕಿದೆ. ರಾಜಕೀಯ ವಲಯದಿಂದ...

ಸಿಜೆ ರಾಯ್ ಸಾವಿನ ನ್ಯಾಯಾಂಗ ತನಿಖೆ ಆಗ್ರಹಿಸಿದ ಕೇರಳ ಸಿಎಂ ಪಿಣರಾಯಿ ವಿಜಯನ್ : ಲೋಕಸಭೆಯಲ್ಲಿ ಚರ್ಚೆಗೆ ಕಾಂಗ್ರೆಸ್ ಆಗ್ರಹ

ಕಾನ್ಫಿಡೆಂಟ್ ಗ್ರೂಪ್ ಅಧ್ಯಕ್ಷ ಸಿ.ಜೆ ರಾಯ್ ಅವರ ಸಾವಿನ ಬಗ್ಗೆ ನ್ಯಾಯಾಂಗ ತನಿಖೆಗೆ ಆದೇಶಿಸುವಂತೆ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಕೇಂದ್ರ ಸರ್ಕಾರವನ್ನು ಒತ್ತಾಯಿಸಿದ್ದಾರೆ. ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರಿಗೆ ಭಾನುವಾರ...

ಮಹಾರಾಷ್ಟ್ರ ಉಪ ಮುಖ್ಯಮಂತ್ರಿಯಾಗಿ ಸುನೇತ್ರಾ ಪವಾರ್ ನೇಮಕದ ಹಿಂದೆ ಬಿಜೆಪಿ ನಾಯಕತ್ವದ ಮಾಸ್ಟರ್ ಮೈಂಡ್: ‘ಸಾಮ್ನಾ’

ಮಹಾರಾಷ್ಟ್ರದ ವಿರೋಧ ಪಕ್ಷವಾದ ಶಿವಸೇನೆ (ಯುಬಿಟಿ), ರಾಷ್ಟ್ರೀಯತಾವಾದಿ ಕಾಂಗ್ರೆಸ್ ಪಕ್ಷದ (ಎನ್‌ಸಿಪಿ) ನಾಯಕಿ ಸುನೇತ್ರಾ ಪವಾರ್ ಅವರು ಪತಿ ಅಜಿತ್ ಪವಾರ್ ನಿಧನರಾದ ಕೆಲವೇ ದಿನಗಳಲ್ಲಿ ರಾಜ್ಯದ ಉಪಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ...

ಎಪ್‌ಸ್ಟೀನ್‌ ಫೈಲ್ಸ್‌ನಲ್ಲಿ ಹೆಸರು ಉಲ್ಲೇಖ : ಸಚಿವ ಹರ್ದೀಪ್ ಸಿಂಗ್ ಪುರಿ ಹೇಳಿದ್ದೇನು?

ಜಗತ್ತಿನಾದ್ಯಂತ ಚರ್ಚೆಯ ವಿಷಯವಾಗಿರುವ ಜೆಫ್ರಿ ಎಪ್‌ಸ್ಟೀನ್‌ ಫೈಲ್ಸ್‌ನಲ್ಲಿ ಕೇಂದ್ರ ಸಚಿವ ಹರ್ದೀಪ್ ಸಿಂಗ್ ಪುರಿ ಅವರ ಹೆಸರಿದೆ, ಪುರಿ ಮತ್ತು ಎಪ್‌ಸ್ಟೀನ್ ನಡುವೆ ಇ-ಮೇಲ್ ಸಂಭಾಷಣೆಗಳು ನಡೆದಿವೆ. ಈ ಇ-ಮೇಲ್‌ಗಳು ಕೇವಲ ವ್ಯವಹಾರಿಕ...

ಕೇಂದ್ರ ಬಜೆಟ್ 2026: ‘ಇದು ನನ್ನ ರಾಜಕೀಯ ಜೀವನದ ಅತ್ಯಂತ ನಿರಾಶಾದಾಯಕ ಬಜೆಟ್’: ಸಿಎಂ ಸಿದ್ದರಾಮಯ್ಯ

‘ಮೋದಿ ಸರ್ಕಾರ ಆರ್ಥಿಕ ದೂರದೃಷ್ಟಿಕೋನಗಳಿಲ್ಲದೆ, ದೇಶವನ್ನು ಯಾವ ದಿಕ್ಕಿನತ್ತ ಮುನ್ನಡೆಸಬೇಕು ಎನ್ನುವುದರ ಬಗ್ಗೆ ಸ್ಪಷ್ಟತೆ ಇಲ್ಲದೆ ದಣಿದಿದೆ ಎಂಬುದರ ಸಂಕೇತ ಈ 2026 ಬಜೆಟ್’ ಎಂದು ಸಿಎಂ ಸಿದ್ದರಾಮಯ್ಯ ಕಿಡಿ ಕಾರಿದ್ದಾರೆ.  ಕಲಬುರಗಿ ವಿಮಾನ...

ಕೇಂದ್ರ ಬಜೆಟ್ 2026: ಅಪರೂಪದ ಭೂಮಿಯ ಕಾರಿಡಾರ್‌ನಿಂದ ಹೈಸ್ಪೀಡ್ ರೈಲಿನವರೆಗೆ: ಚುನಾವಣೆ ನಡೆಯಲಿರುವ ರಾಜ್ಯಗಳಿಗೆ ಕೇಂದ್ರ ಬಜೆಟ್ ನಲ್ಲಿ ಸಿಕ್ಕಿದ್ದೇನು?

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಲೋಕಸಭೆಯಲ್ಲಿ ತಮ್ಮ ಸತತ 9 ನೇ ಬಜೆಟ್ ಅನ್ನು ಮಂಡಿಸಿದ್ದಾರೆ. ಈ ಬಜೆಟ್ ನಲ್ಲಿ ಕೇರಳ, ತಮಿಳುನಾಡು, ಪಶ್ಚಿಮ ಬಂಗಾಳ ಮತ್ತು ಅಸ್ಸಾಂನಂತಹ ಚುನಾವಣೆ...

ಬಲೂಚಿಸ್ತಾನ: ಭದ್ರತಾ ಕಾರ್ಯಾಚರಣೆಯಲ್ಲಿ 15 ಪಾಕ್ ಸೈನಿಕರು, 92 ಭಯೋತ್ಪಾದಕರು ಸಾವು

ಬಲೂಚಿಸ್ತಾನ ಪ್ರಾಂತ್ಯದ ಸುಮಾರು 12 ಸ್ಥಳಗಳಲ್ಲಿ ನಡೆದ ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಗಳಲ್ಲಿ ಕನಿಷ್ಠ 15 ಪಾಕಿಸ್ತಾನಿ ಸೈನಿಕರು ಮತ್ತು 92 ಭಯೋತ್ಪಾದಕರನ್ನು ಹತ್ಯೆ ಮಾಡಲಾಗಿದೆ ಎಂದು ಪಾಕಿಸ್ತಾನಿ ಸೇನೆ ತಿಳಿಸಿರುವುದಾಗಿ ಪಿಟಿಐ ವರದಿ...