Homeಮುಖಪುಟಚುನಾವಣಾ ಬಾಂಡ್‌: ‘ಕಚೇರಿ ಹೊರಗೆ ಡ್ರಾಪ್ ಬಾಕ್ಸ್ ಇಟ್ಟಿದ್ದೇವೆ, ಹಣ ಕೊಟ್ಟವರು ಯಾರೆಂಬುದು ಗೊತ್ತಿಲ್ಲ' ಎಂದ...

ಚುನಾವಣಾ ಬಾಂಡ್‌: ‘ಕಚೇರಿ ಹೊರಗೆ ಡ್ರಾಪ್ ಬಾಕ್ಸ್ ಇಟ್ಟಿದ್ದೇವೆ, ಹಣ ಕೊಟ್ಟವರು ಯಾರೆಂಬುದು ಗೊತ್ತಿಲ್ಲ’ ಎಂದ ಟಿಎಂಸಿ

- Advertisement -
- Advertisement -

ಚುನಾವಣಾ ಬಾಂಡ್ ಮೂಲಕ ಅಖಿಲ ಭಾರತ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಕೂಡ ಸಾಕಷ್ಟು ಮೊತ್ತದ ಫಂಡ್ ಸ್ವೀಕರಿಸಿದ್ದು, ‘ಚುನಾವಣಾ ಬಾಂಡ್‌ಗಳ ಯೋಜನೆಯಡಿ ಪಕ್ಷಕ್ಕೆ ಯಾರು ಹಣವನ್ನು ದೇಣಿಗೆ ನೀಡಿದ್ದಾರೆ ಎಂಬುದು ಪಕ್ಷಕ್ಕೆ ತಿಳಿದಿಲ್ಲ, ಅದರ ಮೊತ್ತ ಎಷ್ಟು ಎಂಬ ಬಗ್ಗೆ ಮಾಹಿತಿ ಇಲ್ಲ. ಪಕ್ಷದ ಕಚೇರಿಯ ಹೊರಗೆ ಡ್ರಾಪ್ ಬಾಕ್ಸ್ ಇಡಲಾಗಿದೆ’ ಎಂದು ಪಕ್ಷದ ಮುಖಂಡ ನಾಯಕ ಕುನಾಲ್ ಘೋಷ್ ಹೇಳಿದರು.

ಪಶ್ಚಿಮ ಬಂಗಾಳದಲ್ಲಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, “ನಾನು ಸ್ಪಷ್ಟವಾದ ಹೇಳಿಕೆಯನ್ನು ನೀಡುತ್ತೇನೆ, ಚುನಾವಣಾ ಬಾಂಡ್‌ಗಳನ್ನು ಬಿಜೆಪಿಯವರು ಪ್ರಾರಂಭಿಸಿದರು; ಅದನ್ನು ತರಲು ಅವರು ಕಾನೂನನ್ನು ಮಾಡಿದ್ದಾರೆ. (ಪಶ್ಚಿಮ ಬಂಗಾಳ ಮುಖ್ಯಮಂತ್ರಿ) ಮಮತಾ ಬ್ಯಾನರ್ಜಿ ಅವರು 90ರ ದಶಕದಿಂದಲೂ ರಾಜ್ಯದ ಹಣದ ಮೇಲೆ ಚುನಾವಣೆ ನಡೆಸಬೇಕು ಎಂದು ಒತ್ತಾಯಿಸುತ್ತಿದ್ದಾರೆ’ ಎಂದು ಘೋಷ್ ಸುದ್ದಿಗಾರರಿಗೆ ತಿಳಿಸಿದರು.

“ಕಪ್ಪುಹಣ, ದೊಡ್ಡ ಮೊತ್ತದ ಹಣದ ಒಳಹರಿವುಗಳನ್ನು ಕೊನೆಗಾಣಿಸಲು” ಮುಖ್ಯಮಂತ್ರಿಗಳು ಒತ್ತಾಯಿಸುತ್ತಿದ್ದಾರೆ ಎಂದು ಅವರು ಹೇಳಿದರು.

“ಇದು ಹಲವಾರು ವರ್ಷಗಳಿಂದ ಮಮತಾ ಬ್ಯಾನರ್ಜಿ ಅವರ ಬೇಡಿಕೆ ಮತ್ತು ಸಿದ್ಧಾಂತವಾಗಿದೆ. ಆದರೆ, ಬಿಜೆಪಿ ಅದಕ್ಕೆ ಕಿವಿಗೊಡಲಿಲ್ಲ. ಬಿಜೆಪಿಯು ಚುನಾವಣಾ ಬಾಂಡ್‌ಗಳ ರೂಪದಲ್ಲಿ ಹೊಸ ನಿಯಮವನ್ನು ತಂದಿತು ಮತ್ತು ನಾವೆಲ್ಲರೂ ಅದನ್ನು ಅನುಸರಿಸಿದ್ದೇವೆ. ತೃಣಮೂಲ ಕಾಂಗ್ರೆಸ್‌ಗೆ ಎಷ್ಟು ಹಣ ಬಂದಿದೆ ಎಂದು ತಿಳಿದಿಲ್ಲ. ತೃಣಮೂಲ ಕಾಂಗ್ರೆಸ್ ಕಟ್ಟಡದ ಮುಂದೆ ಡ್ರಾಪ್ ಬಾಕ್ಸ್ ಇಡಲಾಗಿತ್ತು; ಅದನ್ನು ಪಕ್ಷಕ್ಕೆ ನೀಡಲಾಗಿದೆ’ ಎಂದು ವಿವರಿಸಿದರು.

‘ಕೇಂದ್ರ ಸರ್ಕಾರ ಪರಿಚಯಿಸಿದ ಕಾನೂನಿನ ಪ್ರಕಾರ, ಚುನಾವಣಾ ಬಾಂಡ್‌ಗೆ ಆಲ್ಫಾನ್ಯೂಮರಿಕ್ ಕೋಡ್ ಮಾತ್ರ ಇರುತ್ತದೆ, ಅದರಲ್ಲಿ ಕೊಟ್ಟವರ ಹೆಸರಿಲ್ಲ” ಎಂದು ತೃಣಮೂಲ ಕಾಂಗ್ರೆಸ್ ನಾಯಕ ಹೇಳಿದರು.

“ಇದು ಯಾವ ಕಂಪನಿ ಅಥವಾ ದಾನಿ ಯಾರು ಎಂದು ನಮೂದಿಸಲಾಗಿಲ್ಲ. ಬಿಜೆಪಿ ಈ ವ್ಯವಸ್ಥೆಯನ್ನು ದೇಶದಲ್ಲಿ ಪರಿಚಯಿಸಿತು. ಕೇಂದ್ರೀಯ ತನಿಖಾ ಮತ್ತು ಜಾರಿ ನಿರ್ದೇಶನಾಲಯವು ಅವರ ಹಿಡಿತದಲ್ಲಿ ಇರುವುದರಿಂದ ಅವರಿಗೆ ಹಣ ನೀಡಿದವರು ಯಾರು ಎಂದು ಅವರಿಗೆ ತಿಳಿದಿದೆ. ಬಿಜೆಪಿಯವರು ಬಾಂಡ್‌ಗಳ ಮೂಲಕ ಹಣವನ್ನು ಸಂಗ್ರಹಿಸಲು ಈ ಏಜೆನ್ಸಿಗಳನ್ನು ಬಳಸಿದರು” ಎಂದು ಆರೋಪಿಸಿದರು.

“ಆದರೆ, ತೃಣಮೂಲ ಕಾಂಗ್ರೆಸ್‌ಗೆ ಈ ಯಾವುದೇ ಏಜೆನ್ಸಿಗಳಿಲ್ಲ, ನಮಗೆ ಎಷ್ಟು ಹಣವನ್ನು ನೀಡಲಾಗಿದೆ ಎಂದು ನಮಗೆ ತಿಳಿದಿಲ್ಲ. ನಾವು ಡ್ರಾಪ್ ಬಾಕ್ಸ್‌ನಿಂದ ಹಣವನ್ನು ಸಂಗ್ರಹಿಸಿದ್ದೇವೆ, ಅದನ್ನು ಯಾವುದೇ ವೈಯಕ್ತಿಕ ಬ್ಯಾಂಕ್ ಖಾತೆಗಳಿಗೆ ಜಮಾ ಮಾಡಲಾಗಿಲ್ಲ. ನಂತರ ನಾವು ಎನ್‌ಕ್ಯಾಶ್ ಮಾಡಿದ್ದೇವೆ. ನಿಯಮಗಳ ಪ್ರಕಾರ ಹಣ ನೋಂದಾಯಿಸಲಾಗಿದೆ.  ಆದ್ದರಿಂದ, ತೃಣಮೂಲ ಕಾಂಗ್ರೆಸ್ ಆ ವ್ಯಕ್ತಿಯಿಂದ ಏಕೆ ಹಣವನ್ನು ತೆಗೆದುಕೊಂಡಿತು ಎಂಬ ಪ್ರಶ್ನೆಯು ನ್ಯಾಯಸಮ್ಮತವಲ್ಲ. ಏಕೆಂದರೆ, ನಮಗೆ ಹಣ ನೀಡಿದವರು ಯಾರು ಎಂದು ಪಕ್ಷಕ್ಕೆ ತಿಳಿದಿಲ್ಲ” ಎಂದು ಅವರು ಹೇಳಿದರು.

ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದ (ಎಸ್‌ಬಿಐ) ಚುನಾವಣಾ ಬಾಂಡ್‌ಗಳ ಮಾಹಿತಿಯ ಪ್ರಕಾರ, ತೃಣಮೂಲ ಕಾಂಗ್ರೆಸ್‌ಗೆ ಅಗ್ರ 10 ದೇಣಿಗೆದಾರ ಪಕ್ಷವಾಗಿದ್ದು, ₹1,198 ಕೋಟಿ ಫಂಡ್ ಸ್ವೀಕರಿಸಿದೆ.

ಫ್ಯೂಚರ್ ಗೇಮಿಂಗ್ ಮತ್ತು ಹೋಟೆಲ್ ಸರ್ವಿಸಸ್ ತೃಣಮೂಲ ಕಾಂಗ್ರೆಸ್‌ಗೆ ₹542 ಕೋಟಿ ನೀಡುವ ಮೂಲಕ ಅಗ್ರ ದಾನಿಯಾಗಿದ್ದು, ಹಲ್ದಿಯಾ ಎನರ್ಜಿ ಲಿಮಿಟೆಡ್ ₹281 ಕೋಟಿ, ಧರಿವಾಲ್ ಇನ್‌ಫ್ರಾಸ್ಟ್ರಕ್ಚರ್ ₹90 ಕೋಟಿ, ಎಂಕೆಜೆ ಎಂಟರ್‌ಪ್ರೈಸಸ್ ಮತ್ತು ಏವೀಸ್ ಟ್ರೇಡಿಂಗ್ ತಲಾ ₹46 ಕೋಟಿ ಮೌಲ್ಯದ ಬಾಂಡ್ ನೀಡಿದೆ.

ಬಿಜೆಪಿಗೆ ಟಾಪ್ 10 ದೇಣಿಗೆದಾರರು ಒಟ್ಟು ₹2,123 ಕೋಟಿ ದೇಣಿಗೆ ನೀಡಿದ್ದರೆ, ಕಾಂಗ್ರೆಸ್‌ಗೆ ₹615 ಕೋಟಿ ದೇಣಿಗೆ ನೀಡಿದ್ದಾರೆ ಎಂದು ಪ್ರಕಟವಾದ ಅಂಕಿಅಂಶಗಳು ಬಹಿರಂಗಪಡಿಸಿವೆ.

ಸುಮಾರು 1,300 ಘಟಕಗಳು ₹12,000 ಕೋಟಿಗೂ ಹೆಚ್ಚು ಮೌಲ್ಯದ ಚುನಾವಣಾ ಬಾಂಡ್‌ಗಳನ್ನು ಖರೀದಿಸಿವೆ. ನಂತರ ಅವುಗಳನ್ನು 23 ರಾಜಕೀಯ ಪಕ್ಷಗಳಿಗೆ ವಿತರಿಸಲಾಯಿತು ಎಂದು ಎಸ್‌ಬಿಐ ಅಂಕಿಅಂಶಗಳು ಮತ್ತಷ್ಟು ತೋರಿಸಿವೆ.

ಇದನ್ನೂ ಓದಿ; ‘ಅರವಿಂದ್ ಕೇಜ್ರಿವಾಲ್ ಈಗ ಹೆಚ್ಚು ಅಪಾಯಕಾರಿ; ಪಿಎಂ ಮೋದಿ ದೆಹಲಿ ಸಿಎಂಗೆ ಹೆದರುತ್ತಿದ್ದಾರೆ’

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಾನಪದ ಕಲಾವಿದ ಡಿಂಗ್ರಿ ನರಸಪ್ಪ, ಬೆಂಗಳೂರಿನ ಚಂದ್ರಮ್ಮ ಸೇರಿದಂತೆ ಐದು ಜನರಿಗೆ ಬಾಬು ಜಗಜೀವನ್‌ ರಾಮ್‌ ಪ್ರಶಸ್ತಿ

ಹಿರಿಯ ಜಾನಪದ ಕಲಾವಿದ ಡಿಂಗ್ರಿ ನರಸಪ್ಪ, ಬೆಂಗಳೂರಿನ ಚಂದ್ರಮ್ಮ ಸೇರಿದಂತೆ ಐದು ಜನ ಹಿರಿಯ ಸಾಧಕರು 2026ನೇ ಸಾಲಿನ ಬಾಬು ಜಗಜೀವನ್‌ ರಾಮ್‌ ಪ್ರಶಸ್ತಿಗೆ ಭಾಜನರಾಗಿದ್ದಾರೆ. ರಾಯಚೂರು ಜಿಲ್ಲೆಯ ಹಿರಿಯ ದಲಿತ ಹೋರಾಟಗಾರ...

ಗಾಜಾ; ಗೊಂಬೆಯೊಂದಿಗೆ ‘ಅಂತ್ಯಕ್ರಿಯೆ’ ಆಟ ಆಡುವ ಎಳೆಯ ಮಕ್ಕಳ ವಿಡಿಯೋ ವೈರಲ್; ಸುತ್ತಲಿನ ಘಟನೆಯನ್ನು ಪುನರಾವರ್ತಿಸುವ ಮಕ್ಕಳು

ಅಕ್ಟೋಬರ್ 2023 ರಲ್ಲಿ ಇಸ್ರೇಲಿ ಮಿಲಿಟರಿ ದಾಳಿಯನ್ನು ಪ್ರಾರಂಭಿಸಿದ ನಂತರ ಗಾಜಾದಿಂದ ದುಃಖಕರ ದೃಶ್ಯಗಳು ಹೊರಹೊಮ್ಮುತ್ತಿವೆ. ಇತ್ತೀಚಿನ ಒಂದು ಘಟನೆಯಲ್ಲಿ, ಚಿಕ್ಕ ಮಕ್ಕಳು ಅಂತ್ಯಕ್ರಿಯೆಗಾಗಿ ಗೊಂಬೆಯನ್ನು ಹೊತ್ತುಕೊಂಡು ಹೋಗುವುದನ್ನು ಕಾಣಬಹುದು - ಇದು ಅವರು...

ದೆಹಲಿ| ಆಳವಾದ ಚರಂಡಿಗೆ ಬಿದ್ದು ನೈರ್ಮಲ್ಯ ಕಾರ್ಮಿಕ ಸಾವು; ನ್ಯಾಯಕ್ಕೆ ಆಗ್ರಹಿಸಿದ ಮೃತನ ಕುಟುಂಬ

ಮಾರ್ಚ್ 30 ರಂದು ಪೂರ್ವ ದೆಹಲಿಯ ದಿಲ್ಶಾದ್ ಗಾರ್ಡನ್ ಪ್ರದೇಶದಲ್ಲಿ ಸುರಕ್ಷತಾ ಸಾಧನಗಳಿಲ್ಲದೆ ಆಳವಾದ ಚರಂಡಿ ಸ್ವಚ್ಛಗೊಳಿಸುವ ಸಮಯದಲ್ಲಿ ಯುವ ನೈರ್ಮಲ್ಯ ಕಾರ್ಮಿಕ ರಾಹುಲ್ ಎಂಬುವವರು ಸಾವನ್ನಪ್ಪಿದ್ದಾರೆ. ಮಧ್ಯಾಹ್ನ 2:00 ರ ಸುಮಾರಿಗೆ...

ನಿವೃತ್ತ ನ್ಯಾಯಮೂರ್ತಿ ಸಂತೋಷ್‌ ಹೆಗ್ಡೆ ಆಸ್ಪತ್ರೆಗೆ ದಾಖಲು; ಕಾರ್ಯಕ್ರಮದಲ್ಲಿ ಏಕಾಏಕಿ ಕುಸಿದು ಬಿದ್ದು ಅಸ್ವಸ್ಥ

ಬೆಂಗಳೂರು: ಕರ್ನಾಟಕದ ನಿವೃತ್ತ ಲೋಕಾಯುಕ್ತ ಎನ್‌.ಸಂತೋಷ್‌ ಹೆಗ್ಡೆ ಅವರ ಆರೋಗ್ಯದಲ್ಲಿ ಏರುಪೇರು ಉಂಟಾಗಿದ್ದು, ಭಾಷಣದ ವೇಳೆ ಕುಸಿದು ಬಿದ್ದು ಅಸ್ವಸ್ಥರಾಗಿದ್ದ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಏಪ್ರಿಲ್ 4ರ, ಶುಕ್ರವಾರ ಬೆಂಗಳೂರಿನ ಕೊಂಡಜಿ ಬಸಪ್ಪ ಸಭಾಂಗಣದಲ್ಲಿ...

ಎಸ್‌ಎಸ್‌ಎಲ್‌ಸಿಯಲ್ಲಿ ತೃತೀಯ ಭಾಷೆಗೆ ಗ್ರೇಡ್: ನಿರ್ಧಾರ ಪರಿಶೀಲಿಸುವಂತೆ ರಾಜ್ಯ ಸರ್ಕಾರಕ್ಕೆ ಸೂಚಿಸಿದ ರಾಜ್ಯಪಾಲ ಗೆಹ್ಲೋಟ್ 

ಬೆಂಗಳೂರು: 10ನೇ ತರಗತಿ ಪರೀಕ್ಷೆಯಲ್ಲಿ ತೃತೀಯ ಭಾಷೆಯ ವಿಷಯಕ್ಕೆ ಅಂಕಗಳನ್ನು ಬದಲಿಸುವ ನಿರ್ಧಾರವನ್ನು ಮರುಪರಿಶೀಲಿಸುವಂತೆ ಕರ್ನಾಟಕ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ರಾಜ್ಯ ಸರ್ಕಾರವನ್ನು ಕೇಳಿದ್ದಾರೆ. ಸರ್ಕಾರವು ಈ ನಿರ್ಧಾರವನ್ನು "ಸಮಗ್ರವಾಗಿ ಪರಿಶೀಲಿಸಬೇಕು" ಎಂದು ಲೋಕಭವನವು...

ತಿರುಚ್ಚಿ ಪೂರ್ವದ ಪೆರಂಬೂರಿನಲ್ಲಿ ಟಿವಿಕೆ ಸಂಸ್ಥಾಪಕ ವಿಜಯ್ ಸಲ್ಲಿಸಿದ ಅಫಿಡವಿಟ್‌ಗಳಲ್ಲಿ ಹಲವು ವ್ಯತ್ಯಾಸಗಳಿರುವುದಾಗಿ ವರದಿ  

ಚೆನ್ನೈ: ನಟ ಮತ್ತು ಟಿವಿಕೆ ಸಂಸ್ಥಾಪಕ ವಿಜಯ್ ಸಲ್ಲಿಸಿದ ಎರಡು ಪ್ರತ್ಯೇಕ ಚುನಾವಣಾ ಅಫಿಡವಿಟ್‌ಗಳಲ್ಲಿ ವ್ಯತ್ಯಾಸಗಳು ಕಾಣಿಸಿಕೊಂಡಿದ್ದು, ವಿಧಾನಸಭಾ ಚುನಾವಣೆಗೆ ಮುನ್ನ ಕಾನೂನು ಮತ್ತು ರಾಜಕೀಯ ಪರಿಶೀಲನೆಗೆ ಅವಕಾಶ ನೀಡುವ ಸಾಧ್ಯತೆಯಿದೆ. ಪೆರಂಬೂರು ಮತ್ತು...

ಉತ್ತಮ್ ನಗರದಲ್ಲಿ ಶಾಂತಿ ಕಾಪಾಡುವಲ್ಲಿ ದೆಹಲಿ ಪೊಲೀಸರ ಪ್ರಯತ್ನಗಳನ್ನು ಶ್ಲಾಘಿಸಿದ ಎಪಿಸಿಆರ್

ಈದ್ ಅಲ್-ಫಿತರ್, ರಾಮ ನವಮಿ ಮತ್ತು ಹನುಮಾನ್ ಜಯಂತಿ ಸೇರಿದಂತೆ ಧಾರ್ಮಿಕ ಹಬ್ಬಗಳ ಆಚರಣೆಯ ಸಂದರ್ಭದಲ್ಲಿ ರಾಷ್ಟ್ರ ರಾಜಧಾನಿಯ ಉತ್ತಮ್ ನಗರ ಪ್ರದೇಶದಲ್ಲಿ ಶಾಂತಿ ಮತ್ತು ಭದ್ರತೆಯನ್ನು ಕಾಪಾಡಿದ್ದಕ್ಕಾಗಿ ನಾಗರಿಕ ಹಕ್ಕುಗಳ ರಕ್ಷಣಾ...

ದಲಿತ ಸಮುದಾಯಕ್ಕೆ ಕ್ಷಮೆಯಾಚಿಸಿದ ನೇಪಾಳದ ಹೊಸ ಸರ್ಕಾರ

ಪ್ರಧಾನಿ ಬಾಲೇಂದ್ರ ಶಾ ಅವರ ನೇಪಾಳದ ಹೊಸ ಸರ್ಕಾರದ 100 ಅಂಶಗಳ ಸುಧಾರಣಾ ಕಾರ್ಯಸೂಚಿಯಡಿಯಲ್ಲಿ, ಮುಂದಿನ 15 ದಿನಗಳ ಒಳಗೆ ದಲಿತರು ಮತ್ತು ಐತಿಹಾಸಿಕವಾಗಿ ಹೊರಗಿಡಲ್ಪಟ್ಟ ಇತರೆ ಸಮುದಾಯಗಳಿಗೆ 'ಔಪಚಾರಿಕ ಕ್ಷಮೆಯಾಚನೆ' ಕೇಳುವುದಾಗಿ...

‘ಯಾರು ಹೆದರುತ್ತಾನೋ ಅವನು ಸತ್ತಂತೆ’: ರಾಘವ್ ಛಡ್ಡಾಗೆ ತೀವ್ರವಾಗಿ ಪ್ರತಿಕ್ರಿಯೆ ನೀಡಿದ ಎಎಪಿ ನಾಯಕ ಸೌರಭ್ ಭಾರದ್ವಾಜ್ 

ಆಮ್ ಆದ್ಮಿ ಪಕ್ಷದ (ಎಎಪಿ) ನಾಯಕ ಮತ್ತು ದೆಹಲಿ ಘಟಕದ ಮುಖ್ಯಸ್ಥ ಸೌರಭ್ ಭಾರದ್ವಾಜ್ ಅವರು ವೀಡಿಯೊ ಸಂದೇಶದಲ್ಲಿ ಆಪ್ ಸಂಸದ ರಾಘವ್ ಛಡ್ಡಾ ಅವರು ಸಂಸತ್ತಿನಲ್ಲಿ "ಸಾಫ್ಟ್ ಪಿಆರ್" ನಲ್ಲಿ ತೊಡಗಿದ್ದಾರೆ...

ಚಂಡೀಗಢ ಬಿಜೆಪಿ ಕಚೇರಿ ಸ್ಫೋಟ: ಪಂಜಾಬ್ ಕೌಂಟರ್ ಇಂಟೆಲಿಜೆನ್ಸ್ ಪಡೆಯಿಂದ ಇಬ್ಬರು ಶಂಕಿತರ ಮನೆಗಳ ಮೇಲೆ ದಾಳಿ

ಚಂಡೀಗಢದಲ್ಲಿರುವ ಪಂಜಾಬ್ ಬಿಜೆಪಿ ಕಚೇರಿಯ ಹೊರಗೆ ಸ್ಫೋಟ ನಡೆಸಿದ ಆರೋಪದ ಮೇಲೆ ಇಬ್ಬರು ಶಂಕಿತರ ಮನೆಗಳ ಮೇಲೆ  ಪಂಜಾಬ್ ಪೊಲೀಸರ ಗುಪ್ತಚರ ನಿಗ್ರಹ ದಳವು ಇಂದು ಮುಂಜಾನೆ ದಾಳಿ ನಡೆಸಿದೆ.  ರೋಪರ್ ಜಿಲ್ಲೆಯ ಮೊರಿಂಡಾ ಪ್ರದೇಶದ...