Homeಮುಖಪುಟಚುನಾವಣಾ ಬಾಂಡ್‌: ‘ಕಚೇರಿ ಹೊರಗೆ ಡ್ರಾಪ್ ಬಾಕ್ಸ್ ಇಟ್ಟಿದ್ದೇವೆ, ಹಣ ಕೊಟ್ಟವರು ಯಾರೆಂಬುದು ಗೊತ್ತಿಲ್ಲ' ಎಂದ...

ಚುನಾವಣಾ ಬಾಂಡ್‌: ‘ಕಚೇರಿ ಹೊರಗೆ ಡ್ರಾಪ್ ಬಾಕ್ಸ್ ಇಟ್ಟಿದ್ದೇವೆ, ಹಣ ಕೊಟ್ಟವರು ಯಾರೆಂಬುದು ಗೊತ್ತಿಲ್ಲ’ ಎಂದ ಟಿಎಂಸಿ

- Advertisement -
- Advertisement -

ಚುನಾವಣಾ ಬಾಂಡ್ ಮೂಲಕ ಅಖಿಲ ಭಾರತ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಕೂಡ ಸಾಕಷ್ಟು ಮೊತ್ತದ ಫಂಡ್ ಸ್ವೀಕರಿಸಿದ್ದು, ‘ಚುನಾವಣಾ ಬಾಂಡ್‌ಗಳ ಯೋಜನೆಯಡಿ ಪಕ್ಷಕ್ಕೆ ಯಾರು ಹಣವನ್ನು ದೇಣಿಗೆ ನೀಡಿದ್ದಾರೆ ಎಂಬುದು ಪಕ್ಷಕ್ಕೆ ತಿಳಿದಿಲ್ಲ, ಅದರ ಮೊತ್ತ ಎಷ್ಟು ಎಂಬ ಬಗ್ಗೆ ಮಾಹಿತಿ ಇಲ್ಲ. ಪಕ್ಷದ ಕಚೇರಿಯ ಹೊರಗೆ ಡ್ರಾಪ್ ಬಾಕ್ಸ್ ಇಡಲಾಗಿದೆ’ ಎಂದು ಪಕ್ಷದ ಮುಖಂಡ ನಾಯಕ ಕುನಾಲ್ ಘೋಷ್ ಹೇಳಿದರು.

ಪಶ್ಚಿಮ ಬಂಗಾಳದಲ್ಲಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, “ನಾನು ಸ್ಪಷ್ಟವಾದ ಹೇಳಿಕೆಯನ್ನು ನೀಡುತ್ತೇನೆ, ಚುನಾವಣಾ ಬಾಂಡ್‌ಗಳನ್ನು ಬಿಜೆಪಿಯವರು ಪ್ರಾರಂಭಿಸಿದರು; ಅದನ್ನು ತರಲು ಅವರು ಕಾನೂನನ್ನು ಮಾಡಿದ್ದಾರೆ. (ಪಶ್ಚಿಮ ಬಂಗಾಳ ಮುಖ್ಯಮಂತ್ರಿ) ಮಮತಾ ಬ್ಯಾನರ್ಜಿ ಅವರು 90ರ ದಶಕದಿಂದಲೂ ರಾಜ್ಯದ ಹಣದ ಮೇಲೆ ಚುನಾವಣೆ ನಡೆಸಬೇಕು ಎಂದು ಒತ್ತಾಯಿಸುತ್ತಿದ್ದಾರೆ’ ಎಂದು ಘೋಷ್ ಸುದ್ದಿಗಾರರಿಗೆ ತಿಳಿಸಿದರು.

“ಕಪ್ಪುಹಣ, ದೊಡ್ಡ ಮೊತ್ತದ ಹಣದ ಒಳಹರಿವುಗಳನ್ನು ಕೊನೆಗಾಣಿಸಲು” ಮುಖ್ಯಮಂತ್ರಿಗಳು ಒತ್ತಾಯಿಸುತ್ತಿದ್ದಾರೆ ಎಂದು ಅವರು ಹೇಳಿದರು.

“ಇದು ಹಲವಾರು ವರ್ಷಗಳಿಂದ ಮಮತಾ ಬ್ಯಾನರ್ಜಿ ಅವರ ಬೇಡಿಕೆ ಮತ್ತು ಸಿದ್ಧಾಂತವಾಗಿದೆ. ಆದರೆ, ಬಿಜೆಪಿ ಅದಕ್ಕೆ ಕಿವಿಗೊಡಲಿಲ್ಲ. ಬಿಜೆಪಿಯು ಚುನಾವಣಾ ಬಾಂಡ್‌ಗಳ ರೂಪದಲ್ಲಿ ಹೊಸ ನಿಯಮವನ್ನು ತಂದಿತು ಮತ್ತು ನಾವೆಲ್ಲರೂ ಅದನ್ನು ಅನುಸರಿಸಿದ್ದೇವೆ. ತೃಣಮೂಲ ಕಾಂಗ್ರೆಸ್‌ಗೆ ಎಷ್ಟು ಹಣ ಬಂದಿದೆ ಎಂದು ತಿಳಿದಿಲ್ಲ. ತೃಣಮೂಲ ಕಾಂಗ್ರೆಸ್ ಕಟ್ಟಡದ ಮುಂದೆ ಡ್ರಾಪ್ ಬಾಕ್ಸ್ ಇಡಲಾಗಿತ್ತು; ಅದನ್ನು ಪಕ್ಷಕ್ಕೆ ನೀಡಲಾಗಿದೆ’ ಎಂದು ವಿವರಿಸಿದರು.

‘ಕೇಂದ್ರ ಸರ್ಕಾರ ಪರಿಚಯಿಸಿದ ಕಾನೂನಿನ ಪ್ರಕಾರ, ಚುನಾವಣಾ ಬಾಂಡ್‌ಗೆ ಆಲ್ಫಾನ್ಯೂಮರಿಕ್ ಕೋಡ್ ಮಾತ್ರ ಇರುತ್ತದೆ, ಅದರಲ್ಲಿ ಕೊಟ್ಟವರ ಹೆಸರಿಲ್ಲ” ಎಂದು ತೃಣಮೂಲ ಕಾಂಗ್ರೆಸ್ ನಾಯಕ ಹೇಳಿದರು.

“ಇದು ಯಾವ ಕಂಪನಿ ಅಥವಾ ದಾನಿ ಯಾರು ಎಂದು ನಮೂದಿಸಲಾಗಿಲ್ಲ. ಬಿಜೆಪಿ ಈ ವ್ಯವಸ್ಥೆಯನ್ನು ದೇಶದಲ್ಲಿ ಪರಿಚಯಿಸಿತು. ಕೇಂದ್ರೀಯ ತನಿಖಾ ಮತ್ತು ಜಾರಿ ನಿರ್ದೇಶನಾಲಯವು ಅವರ ಹಿಡಿತದಲ್ಲಿ ಇರುವುದರಿಂದ ಅವರಿಗೆ ಹಣ ನೀಡಿದವರು ಯಾರು ಎಂದು ಅವರಿಗೆ ತಿಳಿದಿದೆ. ಬಿಜೆಪಿಯವರು ಬಾಂಡ್‌ಗಳ ಮೂಲಕ ಹಣವನ್ನು ಸಂಗ್ರಹಿಸಲು ಈ ಏಜೆನ್ಸಿಗಳನ್ನು ಬಳಸಿದರು” ಎಂದು ಆರೋಪಿಸಿದರು.

“ಆದರೆ, ತೃಣಮೂಲ ಕಾಂಗ್ರೆಸ್‌ಗೆ ಈ ಯಾವುದೇ ಏಜೆನ್ಸಿಗಳಿಲ್ಲ, ನಮಗೆ ಎಷ್ಟು ಹಣವನ್ನು ನೀಡಲಾಗಿದೆ ಎಂದು ನಮಗೆ ತಿಳಿದಿಲ್ಲ. ನಾವು ಡ್ರಾಪ್ ಬಾಕ್ಸ್‌ನಿಂದ ಹಣವನ್ನು ಸಂಗ್ರಹಿಸಿದ್ದೇವೆ, ಅದನ್ನು ಯಾವುದೇ ವೈಯಕ್ತಿಕ ಬ್ಯಾಂಕ್ ಖಾತೆಗಳಿಗೆ ಜಮಾ ಮಾಡಲಾಗಿಲ್ಲ. ನಂತರ ನಾವು ಎನ್‌ಕ್ಯಾಶ್ ಮಾಡಿದ್ದೇವೆ. ನಿಯಮಗಳ ಪ್ರಕಾರ ಹಣ ನೋಂದಾಯಿಸಲಾಗಿದೆ.  ಆದ್ದರಿಂದ, ತೃಣಮೂಲ ಕಾಂಗ್ರೆಸ್ ಆ ವ್ಯಕ್ತಿಯಿಂದ ಏಕೆ ಹಣವನ್ನು ತೆಗೆದುಕೊಂಡಿತು ಎಂಬ ಪ್ರಶ್ನೆಯು ನ್ಯಾಯಸಮ್ಮತವಲ್ಲ. ಏಕೆಂದರೆ, ನಮಗೆ ಹಣ ನೀಡಿದವರು ಯಾರು ಎಂದು ಪಕ್ಷಕ್ಕೆ ತಿಳಿದಿಲ್ಲ” ಎಂದು ಅವರು ಹೇಳಿದರು.

ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದ (ಎಸ್‌ಬಿಐ) ಚುನಾವಣಾ ಬಾಂಡ್‌ಗಳ ಮಾಹಿತಿಯ ಪ್ರಕಾರ, ತೃಣಮೂಲ ಕಾಂಗ್ರೆಸ್‌ಗೆ ಅಗ್ರ 10 ದೇಣಿಗೆದಾರ ಪಕ್ಷವಾಗಿದ್ದು, ₹1,198 ಕೋಟಿ ಫಂಡ್ ಸ್ವೀಕರಿಸಿದೆ.

ಫ್ಯೂಚರ್ ಗೇಮಿಂಗ್ ಮತ್ತು ಹೋಟೆಲ್ ಸರ್ವಿಸಸ್ ತೃಣಮೂಲ ಕಾಂಗ್ರೆಸ್‌ಗೆ ₹542 ಕೋಟಿ ನೀಡುವ ಮೂಲಕ ಅಗ್ರ ದಾನಿಯಾಗಿದ್ದು, ಹಲ್ದಿಯಾ ಎನರ್ಜಿ ಲಿಮಿಟೆಡ್ ₹281 ಕೋಟಿ, ಧರಿವಾಲ್ ಇನ್‌ಫ್ರಾಸ್ಟ್ರಕ್ಚರ್ ₹90 ಕೋಟಿ, ಎಂಕೆಜೆ ಎಂಟರ್‌ಪ್ರೈಸಸ್ ಮತ್ತು ಏವೀಸ್ ಟ್ರೇಡಿಂಗ್ ತಲಾ ₹46 ಕೋಟಿ ಮೌಲ್ಯದ ಬಾಂಡ್ ನೀಡಿದೆ.

ಬಿಜೆಪಿಗೆ ಟಾಪ್ 10 ದೇಣಿಗೆದಾರರು ಒಟ್ಟು ₹2,123 ಕೋಟಿ ದೇಣಿಗೆ ನೀಡಿದ್ದರೆ, ಕಾಂಗ್ರೆಸ್‌ಗೆ ₹615 ಕೋಟಿ ದೇಣಿಗೆ ನೀಡಿದ್ದಾರೆ ಎಂದು ಪ್ರಕಟವಾದ ಅಂಕಿಅಂಶಗಳು ಬಹಿರಂಗಪಡಿಸಿವೆ.

ಸುಮಾರು 1,300 ಘಟಕಗಳು ₹12,000 ಕೋಟಿಗೂ ಹೆಚ್ಚು ಮೌಲ್ಯದ ಚುನಾವಣಾ ಬಾಂಡ್‌ಗಳನ್ನು ಖರೀದಿಸಿವೆ. ನಂತರ ಅವುಗಳನ್ನು 23 ರಾಜಕೀಯ ಪಕ್ಷಗಳಿಗೆ ವಿತರಿಸಲಾಯಿತು ಎಂದು ಎಸ್‌ಬಿಐ ಅಂಕಿಅಂಶಗಳು ಮತ್ತಷ್ಟು ತೋರಿಸಿವೆ.

ಇದನ್ನೂ ಓದಿ; ‘ಅರವಿಂದ್ ಕೇಜ್ರಿವಾಲ್ ಈಗ ಹೆಚ್ಚು ಅಪಾಯಕಾರಿ; ಪಿಎಂ ಮೋದಿ ದೆಹಲಿ ಸಿಎಂಗೆ ಹೆದರುತ್ತಿದ್ದಾರೆ’

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮುಸ್ಲಿಮರಿಗೆ ನೀಡಿದ್ದ 5% ಮೀಸಲಾತಿ ರದ್ದುಗೊಳಿಸಿದ ಮಹಾರಾಷ್ಟ್ರ ಸರ್ಕಾರದ ಕ್ರಮ ಪ್ರಶ್ನಿಸಿ ಬಾಂಬೆ ಹೈಕೋರ್ಟ್ ಗೆ ಅರ್ಜಿ 

ಶಿಕ್ಷಣ ಮತ್ತು ಸರ್ಕಾರಿ ಉದ್ಯೋಗಗಳಲ್ಲಿ ಮುಸ್ಲಿಮರಿಗೆ 5% ಮೀಸಲಾತಿಯನ್ನು ರದ್ದುಗೊಳಿಸಿದ ಮಹಾರಾಷ್ಟ್ರ ಸರ್ಕಾರದ ಇತ್ತೀಚಿನ ನಿರ್ಧಾರವನ್ನು ಮುಂಬೈ ಮೂಲದ ವಕೀಲರು ಬಾಂಬೆ ಹೈಕೋರ್ಟ್‌ನಲ್ಲಿ ಪ್ರಶ್ನಿಸಿದ್ದಾರೆ. ವಕೀಲ ಸೈಯದ್ ಎಜಾಜ್ ಅಬ್ಬಾಸ್ ನಖ್ವಿ ಅವರು ವಕೀಲ...

ವಿಧಾನಸಭಾ ಚುನಾವಣೆಯಲ್ಲಿ ನೇಮಮ್ ನಿಂದ ಸ್ಪರ್ಧಿಸುವ ಬಯಕೆಯನ್ನು ಪುನರುಚ್ಚರಿಸಿದ ಬಿಜೆಪಿ ಕೇರಳ ಅಧ್ಯಕ್ಷ ರಾಜೀವ್ ಚಂದ್ರಶೇಖರ್ 

ತಿರುವನಂತಪುರಂ: ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಕೇರಳದ ನೇಮಮ್ ಕ್ಷೇತ್ರದಿಂದ ಸ್ಪರ್ಧಿಸುವ ತಮ್ಮ ಇಚ್ಛೆಯನ್ನು ಬಿಜೆಪಿ ರಾಜ್ಯಾಧ್ಯಕ್ಷ ರಾಜೀವ್ ಚಂದ್ರಶೇಖರ್ ಭಾನುವಾರ ಪುನರುಚ್ಚರಿಸಿದ್ದಾರೆ. ನೇಮಮ್‌ನಲ್ಲಿ ಬಿಜೆಪಿಯ ಚುನಾವಣಾ ಗೋಡೆ ಬರಹ ಅಭಿಯಾನಕ್ಕೆ ಚಾಲನೆ ನೀಡಿದ ನಂತರ...

ಯುವತಿಯನ್ನು ಬಂಧಿಸಿಟ್ಟು ಚಿತ್ರಹಿಂಸೆ : ಆರೋಪಿಯ ಬಂಧನ

ಯುವಕನೋರ್ವ ತನ್ನ ಲಿವ್-ಇನ್ ಸಂಗಾತಿಯಾದ 19 ವರ್ಷದ ಯುವತಿಯನ್ನು ಕೊಠಡಿಯಲ್ಲಿ ಬಂಧಿಸಿಟ್ಟು ಚಿತ್ರಹಿಂಸೆ ನೀಡಿರುವ ಘಟನೆ ಗುರುಗಾಂವ್‌ನ ಸೆಕ್ಟರ್ 69ರಲ್ಲಿ ನಡೆದಿದೆ. ಆರೋಪಿಯನ್ನು ದೆಹಲಿಯ ನರೇಲಾ ನಿವಾಸಿ 19 ವರ್ಷದ ಶಿವಂ ಎಂದು ಗುರುತಿಸಲಾಗಿದೆ....

ಕೋಝಿಕ್ಕೋಡ್‌: ಆಹಾರ ಸೇವಿಸಿ, ಬಿಲ್ ಪಾವತಿಸಲು ನಿರಾಕರಿಸಿದ ಮೂವರ ತಂಡದಿಂದ ರೆಸ್ಟೋರೆಂಟ್ ಧ್ವಂಸ

ಕೋಝಿಕ್ಕೋಡ್ (ಕೇರಳ): ಆಹಾರ ಸೇವಿಸಿ, ಹಣ ನೀಡಲು ನಿರಾಕರಿಸಿದ ಮೂವರು ಸದಸ್ಯರ ಗುಂಪೊಂದು ಬಿಲ್ ಕೇಳಿದ್ದಕ್ಕೆ ರೆಸ್ಟೋರೆಂಟ್ ಅನ್ನು ಧ್ವಂಸಗೊಳಿಸಿದೆ ಎಂದು ಪೊಲೀಸರು ಭಾನುವಾರ ತಿಳಿಸಿದ್ದಾರೆ. ಪ್ರಕರಣ ಸಂಬಂಧ ಒಬ್ಬ ವ್ಯಕ್ತಿಯನ್ನು ವಶಕ್ಕೆ ತೆಗೆದುಕೊಳ್ಳಲಾಗಿದ್ದು,...

ಲೈಂಗಿಕ ದೌರ್ಜನ್ಯ ಆರೋಪ : ಸ್ವಾಮಿ ಅವಿಮುಕ್ತೇಶ್ವರಾನಂದ ವಿರುದ್ಧ ಎಫ್‌ಐಆರ್ ದಾಖಲಿಸಲು ಕೋರ್ಟ್ ಆದೇಶ

ಇಬ್ಬರು ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಜ್ಯೋತಿಷ್ ಪೀಠದ ಸ್ವಾಮಿ ಅವಿಮುಕ್ತೇಶ್ವರಾನಂದ ಸರಸ್ವತಿ ಮತ್ತು ಅವರ ಶಿಷ್ಯ ಮುಕುಂದಾನಂದ ಬ್ರಹ್ಮಚಾರಿ ವಿರುದ್ಧ ಎಫ್‌ಐಆರ್ ದಾಖಲಿಸಲು ಉತ್ತರ ಪ್ರದೇಶದ ಪ್ರಯಾಗ್‌ರಾಜ್‌ನ ವಿಶೇಷ ಪೋಕ್ಸೋ ನ್ಯಾಯಾಲಯ...

ಶೌಚಾಲಯ ತೊಳೆಯಲು ನಿರಾಕರಿಸಿದ ದಲಿತ ಬಾಲಕಿ ಮೇಲೆ ಶಿಕ್ಷಕಿಯಿಂದ ಹಲ್ಲೆ

ಶಾಲಾ ಶೌಚಾಲಯ ತೊಳೆಯಲು ನಿರಾಕರಿಸಿದ ದಲಿತ ಬಾಲಕಿ ಮೇಲೆ ಹಲ್ಲೆ ನಡೆಸಿದ ಶಿಕ್ಷಕಿ, ಆಕೆಯ ಹೆಸರನ್ನು ದಾಖಲಾತಿಯಿಂದ ತೆಗೆದು ಹಾಕುವುದಾಗಿ ಬೆದರಿಕೆ ಹಾಕಿರುವ ಆರೋಪ ಕೇಳಿ ಬಂದಿದೆ. ಉತ್ತರ ಪ್ರದೇಶದ ಅಲೀಗಢ ಜಿಲ್ಲೆಯ...

ಚಿಕ್ಕಮಗಳೂರಿನಲ್ಲಿ ಒಂದೇ ವಾರದಲ್ಲಿ ಕಾಡಾನೆ ದಾಳಿಗೆ ಎರಡನೇ ಸಾವು; ಆನೆ ಸೆರೆ; ಸರ್ಕಾರದ ವಿರುದ್ಧ ಸ್ಥಳೀಯರ ಪ್ರತಿಭಟನೆ

ಚಿಕ್ಕಮಗಳೂರಿನ ವ್ಯಾಪ್ತಿಯಲ್ಲಿ ದಿನದಿಂದ ದಿನಕ್ಕೆ ಮಾನವ ಹಾಗೂ ಪ್ರಾಣಿಗಳ ಸಂಘರ್ಷ ಹೆಚ್ಚಾಗುತ್ತಿದ್ದು, ಒಂದೇ ವಾರದಲ್ಲಿ ಕಾಡಾನೆ ದಾಳಿಯಿಂದ ಇಬ್ಬರು ಮೃತಪಟ್ಟಿದ್ದಾರೆ. ಭಾನುವಾರ ಬೆಳಗ್ಗೆ ತೋಟದ ಕೆಲಸಕ್ಕೆ ತೆರಳಿದಾಗ ಹೊಸಪೇಟೆ ಮೂಲದ ಬೋರಮ್ಮ(34), ಕಾಡಾನೆ...

ಬಿಜೆಪಿ ಸೇರ್ಪಡೆಯಾದ ಅಸ್ಸಾಂ ಕಾಂಗ್ರೆಸ್ ಮಾಜಿ ಅಧ್ಯಕ್ಷ ಭೂಪೇನ್ ಬೋರಾ

ವಿಧಾನಸಭೆ ಚುನಾವಣೆಯ ಹೊಸ್ತಿಲಲ್ಲಿ ಅಸ್ಸಾಂ ಕಾಂಗ್ರೆಸ್‌ನ ಮಾಜಿ ರಾಜ್ಯಾಧ್ಯಕ್ಷ ಭೂಪೇನ್ ಬೋರಾ ಭಾನುವಾರ (ಫೆ.22) ಬಿಜೆಪಿಗೆ ಸೇರ್ಪಡೆಗೊಂಡಿದ್ದಾರೆ. ಬೋರಾ ಫೆ. 16ರಂದು ಕಾಂಗ್ರೆಸ್ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದರು. ಪಕ್ಷದಲ್ಲಿ ತಮ್ಮನ್ನು ನಿರ್ಲಕ್ಷಿಸಲಾಗುತ್ತಿದೆ...

ದೆಹಲಿಯಲ್ಲಿ ಭಯೋತ್ಪಾದನಾ ಸಂಚು ಆರೋಪ: ಬಾಂಗ್ಲಾದೇಶಿ ಪ್ರಜೆಗಳು ಸೇರಿ ಎಂಟು ಮಂದಿ ಬಂಧನ

ನವದೆಹಲಿ: ಪಾಕಿಸ್ತಾನದ ಐಎಸ್‌ಐ ಮತ್ತು ಬಾಂಗ್ಲಾದೇಶ ಮೂಲದ ಉಗ್ರಗಾಮಿ ಸಂಘಟನೆಗಳ ಸೂಚನೆಯ ಮೇರೆಗೆ ದೆಹಲಿಯಲ್ಲಿ ಪ್ರಮುಖ ಭಯೋತ್ಪಾದಕ ಪಿತೂರಿ ನಡೆಸಲು ಸಂಚು ರೂಪಿಸಿದ್ದ ಆರೋಪದ ಮೇಲೆ ಎಂಟು ಶಂಕಿತರನ್ನು ಬಂಧಿಸಲಾಗಿದೆ ಎಂದು ಪೊಲೀಸ್...

ಕ್ಷುಲ್ಲಕ ಕಾರಣಕ್ಕೆ ಮೂವರು ಮುಸ್ಲಿಮರ ಮೇಲೆ ಹಲ್ಲೆ ನಡೆಸಿದ ದುಷ್ಕರ್ಮಿ

ಕ್ಷುಲ್ಲಕ ಕಾರಣಕ್ಕೆ ಇಬ್ಬರು ಹಿರಿಯ ವಯಸ್ಕರು ಸೇರಿದಂತೆ ಮೂವರು ಮುಸ್ಲಿಂ ವ್ಯಕ್ತಿಗಳ ಮೇಲೆ ದುಷ್ಕರ್ಮಿಯೊಬ್ಬ ಅಮಾನವೀಯವಾಗಿ ಹಲ್ಲೆ ನಡೆಸಿರುವ ಘಟನೆ ಉತ್ತರ ಪ್ರದೇಶದ ಬದೌನ್ ಜಿಲ್ಲೆಯಲ್ಲಿ ನಡೆದಿದೆ. ಫೆಬ್ರವರಿ 15ರಂದು ಜಿಲ್ಲೆಯ ರುದಾಯನ್ ಪಟ್ಟಣದಲ್ಲಿ...