Homeಮುಖಪುಟಚುನಾವಣಾ ಬಾಂಡ್‌: ‘ಕಚೇರಿ ಹೊರಗೆ ಡ್ರಾಪ್ ಬಾಕ್ಸ್ ಇಟ್ಟಿದ್ದೇವೆ, ಹಣ ಕೊಟ್ಟವರು ಯಾರೆಂಬುದು ಗೊತ್ತಿಲ್ಲ' ಎಂದ...

ಚುನಾವಣಾ ಬಾಂಡ್‌: ‘ಕಚೇರಿ ಹೊರಗೆ ಡ್ರಾಪ್ ಬಾಕ್ಸ್ ಇಟ್ಟಿದ್ದೇವೆ, ಹಣ ಕೊಟ್ಟವರು ಯಾರೆಂಬುದು ಗೊತ್ತಿಲ್ಲ’ ಎಂದ ಟಿಎಂಸಿ

- Advertisement -
- Advertisement -

ಚುನಾವಣಾ ಬಾಂಡ್ ಮೂಲಕ ಅಖಿಲ ಭಾರತ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಕೂಡ ಸಾಕಷ್ಟು ಮೊತ್ತದ ಫಂಡ್ ಸ್ವೀಕರಿಸಿದ್ದು, ‘ಚುನಾವಣಾ ಬಾಂಡ್‌ಗಳ ಯೋಜನೆಯಡಿ ಪಕ್ಷಕ್ಕೆ ಯಾರು ಹಣವನ್ನು ದೇಣಿಗೆ ನೀಡಿದ್ದಾರೆ ಎಂಬುದು ಪಕ್ಷಕ್ಕೆ ತಿಳಿದಿಲ್ಲ, ಅದರ ಮೊತ್ತ ಎಷ್ಟು ಎಂಬ ಬಗ್ಗೆ ಮಾಹಿತಿ ಇಲ್ಲ. ಪಕ್ಷದ ಕಚೇರಿಯ ಹೊರಗೆ ಡ್ರಾಪ್ ಬಾಕ್ಸ್ ಇಡಲಾಗಿದೆ’ ಎಂದು ಪಕ್ಷದ ಮುಖಂಡ ನಾಯಕ ಕುನಾಲ್ ಘೋಷ್ ಹೇಳಿದರು.

ಪಶ್ಚಿಮ ಬಂಗಾಳದಲ್ಲಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, “ನಾನು ಸ್ಪಷ್ಟವಾದ ಹೇಳಿಕೆಯನ್ನು ನೀಡುತ್ತೇನೆ, ಚುನಾವಣಾ ಬಾಂಡ್‌ಗಳನ್ನು ಬಿಜೆಪಿಯವರು ಪ್ರಾರಂಭಿಸಿದರು; ಅದನ್ನು ತರಲು ಅವರು ಕಾನೂನನ್ನು ಮಾಡಿದ್ದಾರೆ. (ಪಶ್ಚಿಮ ಬಂಗಾಳ ಮುಖ್ಯಮಂತ್ರಿ) ಮಮತಾ ಬ್ಯಾನರ್ಜಿ ಅವರು 90ರ ದಶಕದಿಂದಲೂ ರಾಜ್ಯದ ಹಣದ ಮೇಲೆ ಚುನಾವಣೆ ನಡೆಸಬೇಕು ಎಂದು ಒತ್ತಾಯಿಸುತ್ತಿದ್ದಾರೆ’ ಎಂದು ಘೋಷ್ ಸುದ್ದಿಗಾರರಿಗೆ ತಿಳಿಸಿದರು.

“ಕಪ್ಪುಹಣ, ದೊಡ್ಡ ಮೊತ್ತದ ಹಣದ ಒಳಹರಿವುಗಳನ್ನು ಕೊನೆಗಾಣಿಸಲು” ಮುಖ್ಯಮಂತ್ರಿಗಳು ಒತ್ತಾಯಿಸುತ್ತಿದ್ದಾರೆ ಎಂದು ಅವರು ಹೇಳಿದರು.

“ಇದು ಹಲವಾರು ವರ್ಷಗಳಿಂದ ಮಮತಾ ಬ್ಯಾನರ್ಜಿ ಅವರ ಬೇಡಿಕೆ ಮತ್ತು ಸಿದ್ಧಾಂತವಾಗಿದೆ. ಆದರೆ, ಬಿಜೆಪಿ ಅದಕ್ಕೆ ಕಿವಿಗೊಡಲಿಲ್ಲ. ಬಿಜೆಪಿಯು ಚುನಾವಣಾ ಬಾಂಡ್‌ಗಳ ರೂಪದಲ್ಲಿ ಹೊಸ ನಿಯಮವನ್ನು ತಂದಿತು ಮತ್ತು ನಾವೆಲ್ಲರೂ ಅದನ್ನು ಅನುಸರಿಸಿದ್ದೇವೆ. ತೃಣಮೂಲ ಕಾಂಗ್ರೆಸ್‌ಗೆ ಎಷ್ಟು ಹಣ ಬಂದಿದೆ ಎಂದು ತಿಳಿದಿಲ್ಲ. ತೃಣಮೂಲ ಕಾಂಗ್ರೆಸ್ ಕಟ್ಟಡದ ಮುಂದೆ ಡ್ರಾಪ್ ಬಾಕ್ಸ್ ಇಡಲಾಗಿತ್ತು; ಅದನ್ನು ಪಕ್ಷಕ್ಕೆ ನೀಡಲಾಗಿದೆ’ ಎಂದು ವಿವರಿಸಿದರು.

‘ಕೇಂದ್ರ ಸರ್ಕಾರ ಪರಿಚಯಿಸಿದ ಕಾನೂನಿನ ಪ್ರಕಾರ, ಚುನಾವಣಾ ಬಾಂಡ್‌ಗೆ ಆಲ್ಫಾನ್ಯೂಮರಿಕ್ ಕೋಡ್ ಮಾತ್ರ ಇರುತ್ತದೆ, ಅದರಲ್ಲಿ ಕೊಟ್ಟವರ ಹೆಸರಿಲ್ಲ” ಎಂದು ತೃಣಮೂಲ ಕಾಂಗ್ರೆಸ್ ನಾಯಕ ಹೇಳಿದರು.

“ಇದು ಯಾವ ಕಂಪನಿ ಅಥವಾ ದಾನಿ ಯಾರು ಎಂದು ನಮೂದಿಸಲಾಗಿಲ್ಲ. ಬಿಜೆಪಿ ಈ ವ್ಯವಸ್ಥೆಯನ್ನು ದೇಶದಲ್ಲಿ ಪರಿಚಯಿಸಿತು. ಕೇಂದ್ರೀಯ ತನಿಖಾ ಮತ್ತು ಜಾರಿ ನಿರ್ದೇಶನಾಲಯವು ಅವರ ಹಿಡಿತದಲ್ಲಿ ಇರುವುದರಿಂದ ಅವರಿಗೆ ಹಣ ನೀಡಿದವರು ಯಾರು ಎಂದು ಅವರಿಗೆ ತಿಳಿದಿದೆ. ಬಿಜೆಪಿಯವರು ಬಾಂಡ್‌ಗಳ ಮೂಲಕ ಹಣವನ್ನು ಸಂಗ್ರಹಿಸಲು ಈ ಏಜೆನ್ಸಿಗಳನ್ನು ಬಳಸಿದರು” ಎಂದು ಆರೋಪಿಸಿದರು.

“ಆದರೆ, ತೃಣಮೂಲ ಕಾಂಗ್ರೆಸ್‌ಗೆ ಈ ಯಾವುದೇ ಏಜೆನ್ಸಿಗಳಿಲ್ಲ, ನಮಗೆ ಎಷ್ಟು ಹಣವನ್ನು ನೀಡಲಾಗಿದೆ ಎಂದು ನಮಗೆ ತಿಳಿದಿಲ್ಲ. ನಾವು ಡ್ರಾಪ್ ಬಾಕ್ಸ್‌ನಿಂದ ಹಣವನ್ನು ಸಂಗ್ರಹಿಸಿದ್ದೇವೆ, ಅದನ್ನು ಯಾವುದೇ ವೈಯಕ್ತಿಕ ಬ್ಯಾಂಕ್ ಖಾತೆಗಳಿಗೆ ಜಮಾ ಮಾಡಲಾಗಿಲ್ಲ. ನಂತರ ನಾವು ಎನ್‌ಕ್ಯಾಶ್ ಮಾಡಿದ್ದೇವೆ. ನಿಯಮಗಳ ಪ್ರಕಾರ ಹಣ ನೋಂದಾಯಿಸಲಾಗಿದೆ.  ಆದ್ದರಿಂದ, ತೃಣಮೂಲ ಕಾಂಗ್ರೆಸ್ ಆ ವ್ಯಕ್ತಿಯಿಂದ ಏಕೆ ಹಣವನ್ನು ತೆಗೆದುಕೊಂಡಿತು ಎಂಬ ಪ್ರಶ್ನೆಯು ನ್ಯಾಯಸಮ್ಮತವಲ್ಲ. ಏಕೆಂದರೆ, ನಮಗೆ ಹಣ ನೀಡಿದವರು ಯಾರು ಎಂದು ಪಕ್ಷಕ್ಕೆ ತಿಳಿದಿಲ್ಲ” ಎಂದು ಅವರು ಹೇಳಿದರು.

ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದ (ಎಸ್‌ಬಿಐ) ಚುನಾವಣಾ ಬಾಂಡ್‌ಗಳ ಮಾಹಿತಿಯ ಪ್ರಕಾರ, ತೃಣಮೂಲ ಕಾಂಗ್ರೆಸ್‌ಗೆ ಅಗ್ರ 10 ದೇಣಿಗೆದಾರ ಪಕ್ಷವಾಗಿದ್ದು, ₹1,198 ಕೋಟಿ ಫಂಡ್ ಸ್ವೀಕರಿಸಿದೆ.

ಫ್ಯೂಚರ್ ಗೇಮಿಂಗ್ ಮತ್ತು ಹೋಟೆಲ್ ಸರ್ವಿಸಸ್ ತೃಣಮೂಲ ಕಾಂಗ್ರೆಸ್‌ಗೆ ₹542 ಕೋಟಿ ನೀಡುವ ಮೂಲಕ ಅಗ್ರ ದಾನಿಯಾಗಿದ್ದು, ಹಲ್ದಿಯಾ ಎನರ್ಜಿ ಲಿಮಿಟೆಡ್ ₹281 ಕೋಟಿ, ಧರಿವಾಲ್ ಇನ್‌ಫ್ರಾಸ್ಟ್ರಕ್ಚರ್ ₹90 ಕೋಟಿ, ಎಂಕೆಜೆ ಎಂಟರ್‌ಪ್ರೈಸಸ್ ಮತ್ತು ಏವೀಸ್ ಟ್ರೇಡಿಂಗ್ ತಲಾ ₹46 ಕೋಟಿ ಮೌಲ್ಯದ ಬಾಂಡ್ ನೀಡಿದೆ.

ಬಿಜೆಪಿಗೆ ಟಾಪ್ 10 ದೇಣಿಗೆದಾರರು ಒಟ್ಟು ₹2,123 ಕೋಟಿ ದೇಣಿಗೆ ನೀಡಿದ್ದರೆ, ಕಾಂಗ್ರೆಸ್‌ಗೆ ₹615 ಕೋಟಿ ದೇಣಿಗೆ ನೀಡಿದ್ದಾರೆ ಎಂದು ಪ್ರಕಟವಾದ ಅಂಕಿಅಂಶಗಳು ಬಹಿರಂಗಪಡಿಸಿವೆ.

ಸುಮಾರು 1,300 ಘಟಕಗಳು ₹12,000 ಕೋಟಿಗೂ ಹೆಚ್ಚು ಮೌಲ್ಯದ ಚುನಾವಣಾ ಬಾಂಡ್‌ಗಳನ್ನು ಖರೀದಿಸಿವೆ. ನಂತರ ಅವುಗಳನ್ನು 23 ರಾಜಕೀಯ ಪಕ್ಷಗಳಿಗೆ ವಿತರಿಸಲಾಯಿತು ಎಂದು ಎಸ್‌ಬಿಐ ಅಂಕಿಅಂಶಗಳು ಮತ್ತಷ್ಟು ತೋರಿಸಿವೆ.

ಇದನ್ನೂ ಓದಿ; ‘ಅರವಿಂದ್ ಕೇಜ್ರಿವಾಲ್ ಈಗ ಹೆಚ್ಚು ಅಪಾಯಕಾರಿ; ಪಿಎಂ ಮೋದಿ ದೆಹಲಿ ಸಿಎಂಗೆ ಹೆದರುತ್ತಿದ್ದಾರೆ’

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ: ಆರು ಜನ ಹಿರಿಯರು ಸೇರಿದಂತೆ 41 ಜನ ನಕ್ಸಲ್ ಕಾರ್ಯಕರ್ತರು ಪೊಲೀಸರಿಗೆ ಶರಣು

ದೇಶದಲ್ಲಿ ಮಾವೋವಾದಿ ವಿರೋಧಿ ಕಾರ್ಯಾಚರಣೆಗಳಲ್ಲಿ ಪ್ರಮುಖ ಬೆಳವಣಿಗೆಯಲ್ಲಿ, ಆರು ಜನ ಹಿರಿಯರು ಸೇರಿದಂತೆ 41 ಜನ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾವೋವಾದಿ) ಕಾರ್ಯಕರ್ತರು ತೆಲಂಗಾಣ ಪೊಲೀಸರ ಮುಂದೆ ಇಂದು ಶರಣಾಗಿದ್ದಾರೆ. ಶರಣಾಗತಿ ಪ್ರಕ್ರಿಯೆಯ...

‘ವೀಸಾ ಅವಧಿ ಮುಗಿಯುವ ಮೊದಲು ಪಾಕ್ ಮಹಿಳೆಯ ಪೌರತ್ವ ಅರ್ಜಿ ಪರಿಗಣಿಸಿ..’; ಕೇಂದ್ರ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್‌ ಸೂಚನೆ

ಭಾರತದಲ್ಲಿ ವಾಸಿಸುತ್ತಿರುವ ಪಾಕಿಸ್ತಾನಿ ಪ್ರಜೆಯ ಹೊಸ ಪೌರತ್ವ ಅರ್ಜಿಯನ್ನು ಸಕ್ರಿಯವಾಗಿ ಪರಿಗಣಿಸುವ ಜೊತೆಗೆ ಅವರ ದೀರ್ಘಾವಧಿಯ ವೀಸಾ ಅವಧಿ ಮುಗಿಯುವ ಮೊದಲೇ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು ಎಂದು, ವಿದೇಶಾಂಗ ಸಚಿವಾಲಯ, ಗೃಹ ಸಚಿವಾಲಯ ಮತ್ತು...

ಎಚ್‌ಐವಿ ಪಾಸಿಟಿವ್ ಎಂದು ವಜಾಗೊಳಿಸಲಾದ ಬಿಎಸ್‌ಎಫ್ ಯೋಧನನ್ನು ಮತ್ತೆ ನೇಮಿಸುವಂತೆ ಹೈಕೋರ್ಟ್ ಆದೇಶ

ಜುಲೈ 2017 ರಲ್ಲಿ ಎಚ್‌ಐವಿ ಪಾಸಿಟಿವ್ ಎಂಬ ಕಾರಣಕ್ಕೆ ಸೇವೆಯಿಂದ ವಜಾಗೊಳಿಸಲಾದ ಗಡಿ ಭದ್ರತಾ ಪಡೆಯ ಕಾನ್‌ಸ್ಟೆಬಲ್‌ ಒಬ್ಬರನ್ನು ಮರುನೇಮಕ ಮಾಡುವಂತೆ ದೆಹಲಿ ಹೈಕೋರ್ಟ್ ಆದೇಶಿಸಿದೆ.  ನ್ಯಾಯಮೂರ್ತಿಗಳಾದ ಸಿ ಹರಿಶಂಕರ್ ಮತ್ತು ಓಂ ಪ್ರಕಾಶ್...

ವೈದ್ಯೆ ಬುರ್ಖಾ ಎಳೆದ ನಿತೀಶ್‌ಕುಮಾರ್: ಶ್ರೀನಗರದಲ್ಲಿ ದೂರು ದಾಖಲಿಸಿದ ಇಲ್ತಿಜಾ ಮುಫ್ತಿ

ಪಾಟ್ನಾದಲ್ಲಿ ನಡೆದ ಸರ್ಕಾರಿ ಕಾರ್ಯಕ್ರಮದ ಸಂದರ್ಭದಲ್ಲಿ ಮುಸ್ಲಿಂ ಮಹಿಳಾ ವೈದ್ಯರ ನಿಖಾಬ್ (ಬುರ್ಖಾ) ಎಳೆಯುತ್ತಿರುವುದನ್ನು ತೋರಿಸುವ ವೈರಲ್ ವೀಡಿಯೊದ ಕುರಿತು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ವಿರುದ್ಧ ಎಫ್ಐಆರ್ ದಾಖಲಿಸಲು ಪೀಪಲ್ಸ್ ಡೆಮಾಕ್ರಟಿಕ್...

ಪ್ರಶ್ನೆಗಾಗಿ ಕಾಸು ಪ್ರಕರಣ: ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಸಲು ಅನುಮತಿಸಿದ್ದ ಲೋಕಪಾಲ್ ಆದೇಶ ರದ್ದು ಪಡಿಸಿದ ದೆಹಲಿ ಹೈಕೋರ್ಟ್

‘ಪ್ರಶ್ನೆಗಾಗಿ ಕಾಸು’ ಪ್ರಕರಣದಲ್ಲಿ ತೃಣಮೂಲ ಕಾಂಗ್ರೆಸ್(ಟಿಎಂಸಿ) ಸಂಸದೆ ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಸಲು ಸಿಬಿಐಗೆ ಅನುಮತಿ ನೀಡಿದ್ದ ಲೋಕಪಾಲ್ ಆದೇಶವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ರದ್ದುಗೊಳಿಸಿದೆ. ಇದರಿಂದಾಗಿ ಮೊಯಿತ್ರಾ ಅವರಿಗೆ ಈ...

ಜಮ್ಮು-ಕಾಶ್ಮೀರ: ಪತ್ರಕರ್ತನ ಮೊಬೈಲ್ ಫೋನ್ ವಶಪಡಿಸಿಕೊಂಡ ಪೊಲೀಸರು

ಕಿಶ್ತ್ವಾರ್‌ನಲ್ಲಿನ ವಿದ್ಯುತ್ ಯೋಜನೆಯಲ್ಲಿ ಸ್ವಜನಪಕ್ಷಪಾತ ಮತ್ತು ಭ್ರಷ್ಟಾಚಾರದ ಆರೋಪಗಳ ಕುರಿತು ವರದಿ ಮಾಡುತ್ತಿದ್ದಾಗ, ದಿ ವೈರ್ ಸುದ್ದಿ ಪೋರ್ಟಲ್‌ನ ಪತ್ರಕರ್ತ ಜೆಹಾಂಗೀರ್ ಅಲಿ ಅವರ ಮೊಬೈಲ್ ಫೋನ್ ಅನ್ನು ಬುಧವಾರ (ಡಿಸೆಂಬರ್ 17)...

ಕೇರಳದಲ್ಲಿ ಗುಂಪುಹತ್ಯೆ: ಛತ್ತೀಸ್‌ಗಢ ವಲಸೆ ಕಾರ್ಮಿಕನನ್ನು ‘ಕಳ್ಳ’ ಎಂದು ಥಳಿಸಿ ಕೊಂದ ಗುಂಪು 

ಕೇರಳದ ಪಾಲಕ್ಕಾಡ್ ಜಿಲ್ಲೆಯಲ್ಲಿ ಗುರುವಾರ ಛತ್ತೀಸ್‌ಗಢದಿಂದ ಬಂದ ವಲಸೆ ಕಾರ್ಮಿಕನೊಬ್ಬನನ್ನು ಕಳ್ಳನೆಂದು ಶಂಕಿಸಿ ಗುಂಪೊಂದು ಥಳಿಸಿ ಕೊಂದಿದೆ. ಕೊಲೆಯಾದ ವ್ಯಕ್ತಿಯನ್ನು ರಾಮನಾರಾಯಣ್ ಭಯಾರ್ (31) ಎಂದು ಗುರುತಿಸಲಾಗಿದ್ದು, ಕಳೆದ ಒಂದು ತಿಂಗಳಿನಿಂದ ಪಾಲಕ್ಕಾಡ್‌ನ ಕಾಂಜಿಕೋಡ್‌ನಲ್ಲಿರುವ...

ನೋಯ್ಡಾ ಪೊಲೀಸ್ ಠಾಣೆಯೊಳಗೆ ವಕೀಲೆ ಮೇಲೆ ಲೈಂಗಿಕ ದೌರ್ಜನ್ಯ ಆರೋಪ; ಸಿಸಿಟಿವಿ ದೃಶ್ಯಾವಳಿ ಕೇಳಿದ ಸುಪ್ರೀಂ ಕೋರ್ಟ್

ಮಹಿಳಾ ವಕೀಲೆಯೊಬ್ಬರನ್ನು 14 ಗಂಟೆಗಳ ಕಾಲ ಅಕ್ರಮವಾಗಿ ಬಂಧಿಸಿ ಪೊಲೀಸರು ಲೈಂಗಿಕ ದೌರ್ಜನ್ಯ esgi, ಕಸ್ಟಡಿಯಲ್ಲಿ ಚಿತ್ರಹಿಂಸೆ ನೀಡಿದ ಆರೋಪದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸುಪ್ರೀಂ ಕೋಡರ್ಟ್, ಮುಚ್ಚಿದ ಕವರ್‌ನಲ್ಲಿ ಸಿಸಿಟಿವಿ ದೃಶ್ಯಾವಳಿಗಳನ್ನು...

ಹಾಲು ಉತ್ಪಾದಕರಿಗೆ 1 ಲೀಟರ್ ಹಾಲಿನ ಪ್ರೋತ್ಸಾಹಧನ 5 ರಿಂದ 7 ರೂಗೆ ಏರಿಕೆ: ಅಧಿವೇಶನದಲ್ಲಿ ಸಿದ್ದರಾಮಯ್ಯ ಘೋಷಣೆ

ರೈತರ ಹಿತದೃಷ್ಠಿಯಿಂದ 1 ಲೀಟರ್ ಹಾಲಿಗೆ ಪ್ರೋತ್ಸಾಹಧನವನ್ನು 7 ರೂಪಾಯಿಗೆ ಏರಿಕೆ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಡಿಸೆಂಬರ್ 19ರಂದು ಬೆಳಗಾವಿ ಅಧಿವೇಶನದ ಕೊನೆಯ ದಿನ ಮಾತನಾಡಿದ ಅವರು, ರೈತರಿಗೆ ಹಸುಗಳನ್ನು ಸಾಕಿ...

ಬಾಂಗ್ಲಾ ದಂಗೆ: ಮಾಧ್ಯಮ ಸಂಸ್ಥೆಗಳಿಗೆ ಬೆಂಕಿ ಹಚ್ಚಿದ ಪ್ರತಿಭಟನಾಕಾರರು, ಉರಿಯುತ್ತಿದ್ದ ಕಚೇರಿಗಳಿಂದ 25 ಕ್ಕೂ ಹೆಚ್ಚು ಪತ್ರಕರ್ತರ ರಕ್ಷಣೆ

ಜುಲೈ ದಂಗೆಯ ನಾಯಕ ಷರೀಫ್ ಉಸ್ಮಾನ್ ಹಾದಿ ಅವರ ನಿಧನದ ಸುದ್ದಿ ಕೇಳಿದ ಬೆನ್ನಲ್ಲೇ ಶುಕ್ರವಾರ ಬಾಂಗ್ಲಾದೇಶದ ವಿವಿಧ ಭಾಗಗಳಲ್ಲಿ ತೀವ್ರ ಪ್ರತಿಭಟನೆಗಳು ಆರಂಭವಾಗಿದ್ದು ಹಿಂಸಾಚಾರಕ್ಕೆ ನಾಂದಿ ಹಾಡಿವೆ. ಅನೇಕ ಪ್ರತಿಭಟನಾಕಾರರು ಬೀದಿಗಿಳಿದಿದ್ದು,...