Homeಮುಖಪುಟಚುನಾವಣಾ ಬಾಂಡ್ ನಿಧಿಗಳ ಮುಟ್ಟುಗೋಲು ತಿರಸ್ಕಾರದ ಆದೇಶ ಪರಿಶೀಲಿಸಲು ಅರ್ಜಿ

ಚುನಾವಣಾ ಬಾಂಡ್ ನಿಧಿಗಳ ಮುಟ್ಟುಗೋಲು ತಿರಸ್ಕಾರದ ಆದೇಶ ಪರಿಶೀಲಿಸಲು ಅರ್ಜಿ

- Advertisement -
- Advertisement -

ರಾಜಕೀಯ ಪಕ್ಷಗಳು ಚುನಾವಣಾ ಬಾಂಡ್‌ಗಳ ಮೂಲಕ ಪಡೆದ ಹಣವನ್ನು ಮರುಪಡೆಯಲು ಅಧಿಕಾರಿಗಳಿಗೆ ನಿರ್ದೇಶಿಸಲು ನಿರಾಕರಿಸಿದ ಆಗಸ್ಟ್ 2 ರ ಆದೇಶದ ವಿರುದ್ಧ ಬುಧವಾರ ಸುಪ್ರೀಂ ಕೋರ್ಟ್‌ನಲ್ಲಿ ಪರಿಶೀಲನಾ ಅರ್ಜಿಯನ್ನು ಸಲ್ಲಿಸಲಾಗಿದೆ ಎಂದು ಲೈವ್ ಲಾ ವರದಿ ಮಾಡಿದೆ. ಚುನಾವಣಾ ಬಾಂಡ್

ಚುನಾವಣಾ ಬಾಂಡ್ ವಹಿವಾಟುಗಳು ಕ್ವಿಡ್ ಪ್ರೊ ಕೋ ವ್ಯವಸ್ಥೆಯ ಭಾಗವಾಗಿದೆ ಎಂದು ವಾದಿಸಿ ಖೇಮ್ ಸಿಂಗ್ ಭಾಟಿ ಎಂಬ ವಕೀಲರು ಈ ಅರ್ಜಿಯನ್ನು ಸಲ್ಲಿಸಿದ್ದಾರೆ. ಕ್ವಿಡ್ ಪ್ರೊ ಕ್ವೋ ವ್ಯವಸ್ಥೆ ಎಂದರೆ ಇಬ್ಬರ ನಡುವೆ ಪರಸ್ಪತ ಸರಕು, ಸೇವೆಗಳು ಅಥವಾ ಇತರ ಅನುಕೂಲಗಳ ವಿನಿಮಯ ಮಾಡಿಕೊಳ್ಳುವ ವ್ಯವಸ್ಥೆಯಾಗಿದೆ.

ಈ ಯೋಜನೆಯ ಮೂಲಕ ರಾಜಕೀಯ ಪಕ್ಷಗಳು ಮತ್ತು ಕಾರ್ಪೊರೇಟ್ ದಾನಿಗಳ ನಡುವೆ ಪ್ರಯೋಜನಗಳನ್ನು ವಿನಿಮಯ ಮಾಡಿಕೊಳ್ಳಲಾಗಿದೆ ಎಂದು ವಕೀಲ ಭಾಟಿ ಆರೋಪಿಸಿದ್ದಾರೆ. ಹಾಗಾಗಿ, ಯೋಜನೆಯ ಮೂಲಕ ರಾಜಕೀಯ ಪಕ್ಷಗಳು ಪಡೆದ ಮೊತ್ತವನ್ನು ಮುಟ್ಟುಗೋಲು ಹಾಕಿಕೊಳ್ಳುವಂತೆ ಕೇಂದ್ರ ಸರ್ಕಾರ, ಚುನಾವಣಾ ಆಯೋಗ ಮತ್ತು ಕೇಂದ್ರ ವಿಜಿಲೆನ್ಸ್ ಸಮಿತಿಗೆ ನಿರ್ದೇಶನ ನೀಡಬೇಕೆಂದು ಅವರು ಸುಪ್ರೀಂ ಕೋರ್ಟ್ ಅನ್ನು ಒತ್ತಾಯಿಸಿದ್ದಾರೆ.

ರಾಜಕೀಯ ಪಕ್ಷಗಳು ದಾನಿಗಳಿಗೆ ಒದಗಿಸಲಾಗಿದೆ ಎಂದು ಹೇಳಲಾದ ಅಕ್ರಮ ಪ್ರಯೋಜನಗಳ ಬಗ್ಗೆ ತನಿಖೆ ನಡೆಸಲು ಸುಪ್ರೀಂ ಕೋರ್ಟ್‌ನ ನಿವೃತ್ತ ನ್ಯಾಯಮೂರ್ತಿಯ ನೇತೃತ್ವದಲ್ಲಿ ಸಮಿತಿಯನ್ನು ರಚಿಸುವಂತೆಯೂ ವಕೀಲರು ಕೋರಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಆಗಸ್ಟ್‌ನಲ್ಲಿ, ನಿವೃತ್ತ ಮುಖ್ಯ ನ್ಯಾಯಮೂರ್ತಿ ಡಿ.ವೈ. ಚಂದ್ರಚೂಡ್ ನೇತೃತ್ವದ ಮೂವರು ನ್ಯಾಯಾಧೀಶರ ಪೀಠವು ಬಾಂಡ್‌ಗಳ ಮೂಲಕ ಕ್ವಿಡ್ ಪ್ರೊ ಕೋ ವ್ಯವಸ್ಥೆಗಳ ಆರೋಪದ ಪ್ರಕರಣಗಳನ್ನು ತನಿಖೆ ಮಾಡಲು ವಿಶೇಷ ತನಿಖಾ ತಂಡವನ್ನು ಸ್ಥಾಪಿಸಲು ನಿರಾಕರಿಸಿತ್ತು. ಚುನಾವಣಾ ಬಾಂಡ್

ಚುನಾವಣಾ ಬಾಂಡ್‌ಗಳು ಎಂದರೆ, ನಾಗರಿಕರು ಅಥವಾ ಕಾರ್ಪೊರೇಟ್ ಗುಂಪುಗಳು ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದಿಂದ ಖರೀದಿಸಿ ರಾಜಕೀಯ ಪಕ್ಷಕ್ಕೆ ನೀಡಬಹುದಾದ ವಿತ್ತೀಯ ಬಾಂಡ್‌ಗಳಾಗಿದ್ದು, ನಂತರ ಅವುಗಳನ್ನು ಪುನಃ ಪಡೆದುಕೊಳ್ಳುತ್ತವೆ. ಈ ಯೋಜನೆಯನ್ನು ಜನವರಿ 2018 ರಲ್ಲಿ ಕೇಂದ್ರದಲ್ಲಿರುವ ಬಿಜೆಪಿ ಸರ್ಕಾರ ಪರಿಚಯಿಸಿತು.

ಖರೀದಿದಾರರು ಈ ಬಡ್ಡಿರಹಿತ ಬಾಂಡ್‌ಗಳ ಖರೀದಿಯನ್ನು ಘೋಷಿಸಬೇಕಾಗಿಲ್ಲ ಮತ್ತು ರಾಜಕೀಯ ಪಕ್ಷಗಳು ಹಣದ ಮೂಲವನ್ನು ತೋರಿಸಬೇಕಾಗಿಲ್ಲದ ಕಾರಣ ಸಂಪೂರ್ಣ ಪ್ರಕ್ರಿಯೆಯು ಅನಾಮಧೇಯವಾಗಿತ್ತು. ಆದಾಗ್ಯೂ, ಕೇಂದ್ರ ಸರ್ಕಾರವು ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾವನ್ನು ನಿಯಂತ್ರಿಸುವುದರಿಂದ ದಾನಿಗಳ ಬಗ್ಗೆ ಮಾಹಿತಿಯನ್ನು ಪಡೆಯಲು ಅವಕಾಶವನ್ನು ಹೊಂದಿತ್ತು.

ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದ 29 ಅಧಿಕೃತ ಶಾಖೆಗಳ ಮೂಲಕ ಚುನಾವಣಾ ಬಾಂಡ್‌ಗಳನ್ನು ವಿತರಿಸಲು ಮತ್ತು ನಗದೀಕರಿಸಲು ಅಧಿಕಾರವನ್ನು ಹೊಂದಿತ್ತು. ಅದಾಗ್ಯೂ, ಫೆಬ್ರವರಿಯಲ್ಲಿ ಸುಪ್ರೀಂ ಕೋರ್ಟ್ ಚುನಾವಣಾ ಬಾಂಡ್‌ಗಳ ಯೋಜನೆಯನ್ನು ಅಸಂವಿಧಾನಿಕ ಎಂದು ರದ್ದುಗೊಳಿಸಿತ್ತು.

ಈ ಯೋಜನೆಯು ಮಾಹಿತಿ ಹಕ್ಕು, ವಾಕ್ ಸ್ವಾತಂತ್ರ್ಯವನ್ನು ಉಲ್ಲಂಘಿಸುತ್ತದೆ ಮತ್ತು ದಾನಿಗಳು ಮತ್ತು ರಾಜಕೀಯ ಪಕ್ಷಗಳ ನಡುವೆ ಕ್ವಿಡ್ ಪ್ರೊ ಕ್ವೋ ವ್ಯವಸ್ಥೆಗಳಿಗೆ ಕಾರಣವಾಗಲಿದೆ ಎಂದು ಅಭಿಪ್ರಾಯಪಟ್ಟಿತ್ತು. ನಂತರ ಬಿಡುಗಡೆಯಾದ ಮಾಹಿತಿಯ ಪ್ರಕಾರ, ಚುನಾವಣಾ ಬಾಂಡ್‌ಗಳ ಮೂಲಕ ಆಡಳಿತಾರೂಢ ಬಿಜೆಪಿ ಬೇರೆ ಎಲ್ಲಾ ಪಕ್ಷಗಳಿಗಿಂತ ಹೆಚ್ಚು ಲಾಭವನ್ನು ಪಡೆದಿದೆ ಎಂದು ಬಹಿರಂಗವಾಗಿತ್ತು.

ಇದನ್ನೂಓದಿ: ಕೋಲ್ಕತ್ತಾ ಅತ್ಯಾಚಾರ ಪ್ರಕರಣ – ಅಪರಾಧಿಗೆ ಮರಣದಂಡನೆ ಕೋರಿ ಹೈಕೋರ್ಟ್‌ ಮಟ್ಟಿಲೇರಿದ ಸಿಬಿಐ

ಕೋಲ್ಕತ್ತಾ ಅತ್ಯಾಚಾರ ಪ್ರಕರಣ – ಅಪರಾಧಿಗೆ ಮರಣದಂಡನೆ ಕೋರಿ ಹೈಕೋರ್ಟ್‌ ಮಟ್ಟಿಲೇರಿದ ಸಿಬಿಐ

ಇದನ್ನೂಓದಿ: ಕೋಲ್ಕತ್ತಾ ಅತ್ಯಾಚಾರ ಪ್ರಕರಣ – ಅಪರಾಧಿಗೆ ಮರಣದಂಡನೆ ಕೋರಿ ಹೈಕೋರ್ಟ್‌ ಮಟ್ಟಿಲೇರಿದ ಸಿಬಿಐ

ಕೋಲ್ಕತ್ತಾ ಅತ್ಯಾಚಾರ ಪ್ರಕರಣ – ಅಪರಾಧಿಗೆ ಮರಣದಂಡನೆ ಕೋರಿ ಹೈಕೋರ್ಟ್‌ ಮಟ್ಟಿಲೇರಿದ ಸಿಬಿಐ

ಇದನ್ನೂಓದಿ: ಕೋಲ್ಕತ್ತಾ ಅತ್ಯಾಚಾರ ಪ್ರಕರಣ – ಅಪರಾಧಿಗೆ ಮರಣದಂಡನೆ ಕೋರಿ ಹೈಕೋರ್ಟ್‌ ಮಟ್ಟಿಲೇರಿದ ಸಿಬಿಐ

ಕೋಲ್ಕತ್ತಾ ಅತ್ಯಾಚಾರ ಪ್ರಕರಣ – ಅಪರಾಧಿಗೆ ಮರಣದಂಡನೆ ಕೋರಿ ಹೈಕೋರ್ಟ್‌ ಮಟ್ಟಿಲೇರಿದ ಸಿಬಿಐ

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಪೊಲೀಸರನ್ನು ನಿಯಂತ್ರಿಸದಿದ್ದರೆ ಜರ್ಮನಿಯ ನಾಜಿಗಳಂತೆ ಆಗಬಹುದು’: ದಲಿತ ವ್ಯಕ್ತಿಯ ಮೇಲಿನ ದೌರ್ಜನ್ಯ ಪ್ರಕರಣದಲ್ಲಿ ಪಾಟ್ನಾ ಹೈಕೋರ್ಟ್ ಕಳವಳ

ದಲಿತ ವ್ಯಕ್ತಿಯೊಬ್ಬರ ಜಾತಿ ತಿಳಿದ ನಂತರ ಅವರ ಮೇಲೆ ಕ್ರೂರವಾಗಿ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಬಿಹಾರದ ಮಾಜಿ ಪೊಲೀಸ್ ಅಧಿಕಾರಿಯ ವಿರುದ್ಧ ತಕ್ಷಣವೇ ಎಫ್‌ಐಆರ್ (FIR) ದಾಖಲಿಸುವಂತೆ ಪಾಟ್ನಾ ಹೈಕೋರ್ಟ್ ನಿರ್ದೇಶಿಸಿದೆ....

“ಎಷ್ಟೊಂದು ದುರಹಂಕಾರ!”: ಜೆ.ಪಿ.ನಡ್ಡಾ ಹೇಳಿಕೆಗೆ ಕಪಿಲ್ ಸಿಬಲ್ ತೀವ್ರ ಆಕ್ಷೇಪ; ಪ್ರತಿಭಟನಾನಿರತ ಸಿಜೆಪಿ ಬೆಂಬಲಿಸಿ ವೀಡಿಯೋ ಸಂದೇಶ

ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಕ್ರಾಂತಿಕಾರಿ ಜಿರಳೆ ಜನತಾ ಪಕ್ಷ (ಸಿಜೆಪಿ) ನಡೆಸುತ್ತಿರುವ ವಿದ್ಯಾರ್ಥಿ ಪ್ರತಿಭಟನೆಯ ವಿಚಾರದಲ್ಲಿ ಕೇಂದ್ರ ಸರ್ಕಾರದ ನಡೆಗೆ ದೇಶಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ. ಈ ನಡುವೆ ಕೇಂದ್ರ ಸಚಿವ ಜೆ.ಪಿ....

ವಿದ್ಯಾರ್ಥಿಗಳ ಮೇಲೆ ಪೊಲೀಸ್ ದೌರ್ಜನ್ಯ: ಮೋದಿ-ಅಮಿತ್ ಶಾ ರಾಜೀನಾಮೆಗೆ ರಾಹುಲ್ ಗಾಂಧಿ ಆಗ್ರಹ

ನೀಟ್‌ ಪ್ರಶ್ನೆ ಪತ್ರಿಕೆ ಸೋರಿಕೆ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ 'ಸಂಸತ್ ಚಲೋ' ಹಮ್ಮಿಕೊಂಡಿದ್ದ ವಿದ್ಯಾರ್ಥಿಗಳ ಮೇಲೆ ನಡೆದ ಪೊಲೀಸ್ ದೌರ್ಜನ್ಯವನ್ನು ಕಾಂಗ್ರೆಸ್ ನಾಯಕ ರಾಹುಲ್...

ಕೇಂದ್ರ ಸಚಿವ ಜೆ.ಪಿ.ನಡ್ಡಾ ಅವರನ್ನು ಭೇಟಿಯಾದ ಸಿಜೆಪಿ ನಿಯೋಗ; ಮನವಿ ಪತ್ರ ಸಲ್ಲಿಕೆ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಆಗ್ರಹಿಸಿ ನವದೆಹಲಿಯಲ್ಲಿ ಪ್ರತಿಭಟನೆ ತೀವ್ರಗೊಂಡಿರುವ ಬೆನ್ನಲ್ಲೇ ಇಂದು ಕೇಂದ್ರ ಸಚಿವ ಜೆಪಿ ನಡ್ಡಾ ಅವರನ್ನು ಸಿಜೆಪಿ ಸದಸ್ಯರಾದ ಸೌರವ್ ದಾಸ್ ಮತ್ತು ಅಶುತೋಷ್ ರಂಕಾ...

‘ಸಂಸತ್ ಚಲೋ’: ‘ಸೋನಮ್ ವಾಂಗ್ಚುಕ್ ಪತ್ನಿ ಮೇಲೆ ದೆಹಲಿ ಪೊಲೀಸರಿಂದ ಹಲ್ಲೆ’: ವಿದ್ಯಾರ್ಥಿಗಳ ಮೇಲೂ ಲಾಠಿ ಚಾರ್ಜ್  

ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಆಯೋಜಿಸಲಾಗಿದ್ದ ‘ಸಂಸದ್ ಚಲೋ’ ಮೆರವಣಿಗೆಯ ವೇಳೆ ಶಿಕ್ಷಣ ತಜ್ಞ ಹಾಗೂ ಲಡಾಖ್ ಹೋರಾಟಗಾರ ಸೋನಮ್ ವಾಂಗ್ಚುಕ್ ಅವರ ಪತ್ನಿ ಗೀತಾಂಜಲಿ ಜೆ. ಆಂಗ್ಮೋ ಸೇರಿದಂತೆ ಹಲವಾರು ಪ್ರತಿಭಟನಾಕಾರರ ಮೇಲೆ...

ಕನಿಷ್ಠ 20 ಸಾವಿರ ‘ಕಾಕ್ರೋಚ್‌’ಗಳಿಂದ ಸಂಸತ್ತಿಗೆ ಮೆರವಣಿಗೆ; ವಿದ್ಯಾರ್ಥಿಗಳ ಮೇಲೆ ಪೊಲೀಸರಿಂದ ಲಾಠಿಚಾರ್ಜ್ – ಅಶ್ರುವಾಯು

ಧರ್ಮೇಂದ್ರ ಪ್ರಧಾನ್ ರಾಜೀನಾಮಗೆ ಒತ್ತಾಯಿಸಿ ಮುಂಗಾರು ಅಧಿವೇಶನದ ಮೊದಲ ದಿನದಂದು ಸಂಸತ್ತಿಗೆ ಮೆರವಣಿಗೆ ನಡೆಸಲು ದೆಹಲಿಯಲ್ಲಿ ಜಮಾಯಿಸಿದ್ದ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ಸಾವಿರಾರು ಬೆಂಬಲಿಗರನ್ನು ಚದುರಿಸಲು ದೆಹಲಿ ಪೊಳಿಸರು ಅಶ್ರುವಾಯು ಶೆಲ್‌ಗಳನ್ನು...

ಸಿಜೆಪಿ ಪ್ರತಿಭಟನೆಗೆ ನಡುಗಿದ ಕೇಂದ್ರ ಸರ್ಕಾರ; ತರಾತುರಿಯಲ್ಲಿ ಸಂಸತ್ತಿನ ಗೇಟ್ ಮುಚ್ಚಿದ ಭದ್ರತಾ ಸಿಬ್ಬಂದಿ

ನೀಟ್‌ ಪರೀಕ್ಷೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳನ್ನು ವಿರೋಧಿಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಒತ್ತಾಯಿಸಿ ಇಂದು ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಹಮ್ಮಿಕೊಂಡಿರುವ ಸಂಸತ್ ಮೆರವಣಿಗೆಗೆ ಕೇಂದ್ರ ಸರ್ಕಾರ...

ಹಕ್ಕುಗಳ ಕಾಯ್ದೆಗೆ 7 ವರ್ಷ: ಕಾಗದದಲ್ಲಷ್ಟೇ ಸಮಾನತೆ, ಉದ್ಯೋಗ ಸಿಗದೆ ಬೀದಿಗೆ ತಳ್ಳಲ್ಪಡುತ್ತಿರುವ ಟ್ರಾನ್ಸ್‌ಜೆಂಡರ್‌ ಸಮುದಾಯ

ಬೆಂಗಳೂರು: ರಾಷ್ಟ್ರೀಯ ಮಟ್ಟದಲ್ಲಿ ‘ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ಕಾಯ್ದೆ-2019’ ಜಾರಿಗೆ ಬಂದು ಏಳು ವರ್ಷಗಳು ಕಳೆದಿದ್ದರೂ, ಸಮುದಾಯದ ಆರ್ಥಿಕ ಸಬಲೀಕರಣ ಇನ್ನೂ ಕನಸಾಗಿಯೇ ಉಳಿದಿದೆ. ಬೆಂಗಳೂರಿನ ಸಾಮಾಜಿಕ ಮತ್ತು ಆರ್ಥಿಕ ಬದಲಾವಣೆ...

ಸಂಸತ್‌ ಚಲೋ: ಕಾಕ್ರೋಚ್ ಜನತಾ ಪಾರ್ಟಿ ಪ್ರತಿಭಟನೆಗೆ ಭಾರೀ ಬೆಂಬಲ

ದೇಶಾದ್ಯಂತ ಭಾರಿ ಸಂಚಲನ ಸೃಷ್ಟಿಸಿರುವ ನೀಟ್‌ (NEET) ಪ್ರಶ್ನೆಪತ್ರಿಕೆ ಸೋರಿಕೆ, ಸಾಲು ಸಾಲು ವಿದ್ಯಾರ್ಥಿಗಳ ಆತ್ಮಹತ್ಯೆ ಹಾಗೂ ದೇಶದ ಪರೀಕ್ಷಾ ವ್ಯವಸ್ಥೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ (CJP) ಆಯೋಜಿಸಿರುವ...

ಡಿಜಿಟಲೀಕರಣಗೊಂಡ 2002ರ ಮತದಾರರ ಪಟ್ಟಿಯಿಂದ ಬೆಂಗಳೂರಿನ ಮತಗಟ್ಟೆಗಳೇ ಮಾಯ: ಮಾಹಿತಿ ಸಿಗದೆ ಆತಂಕದಲ್ಲಿ ನೂರಾರು ಮತದಾರರು

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನ ಹಲವು ಭಾಗಗಳಲ್ಲಿ 2002ರ ಡಿಜಿಟಲೀಕರಣಗೊಂಡ ಮತದಾರರ ಪಟ್ಟಿಯಿಂದ ಇಡೀ ಮತಗಟ್ಟೆಗಳೇ ಕಾಣೆಯಾಗಿರುವ ಗಂಭೀರ ಪ್ರಕರಣವೊಂದು ಬೆಳಕಿಗೆ ಬಂದಿದೆ. ಇದರಿಂದಾಗಿ ನೂರಾರು ಮತದಾರರು ಆತಂಕ ಮತ್ತು ಗೊಂದಲಕ್ಕೊಳಗಾಗಿದ್ದಾರೆ ಎಂದು...