Homeಮುಖಪುಟಪ್ರಚಾರಕ್ಕೆ ಪ್ರಧಾನಿ ಕಚೇರಿ, ವಿಮಾನ ಬಳಸುತ್ತಿರುವ ಮೋದಿಯಿಂದ ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ: ರಾವತ್

ಪ್ರಚಾರಕ್ಕೆ ಪ್ರಧಾನಿ ಕಚೇರಿ, ವಿಮಾನ ಬಳಸುತ್ತಿರುವ ಮೋದಿಯಿಂದ ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ: ರಾವತ್

- Advertisement -
- Advertisement -

ಲೋಕಸಭೆ ಚುನಾವಣೆಗೆ ಮುನ್ನ ಬಿಜೆಪಿ ಪರ ಪ್ರಚಾರಕ್ಕೆ ತಮ್ಮ ಕಚೇರಿಯನ್ನು ಬಳಸಿಕೊಳ್ಳುವ ಮೂಲಕ ಪ್ರಧಾನಿ ನರೇಂದ್ರ ಮೋದಿ ಅವರು ಮಾದರಿ ನೀತಿ ಸಂಹಿತೆ (ಎಂಸಿಸಿ) ಉಲ್ಲಂಘಿಸಿದ್ದಾರೆ ಎಂದು ಶಿವಸೇನಾ (ಯುಬಿಟಿ) ಸಂಸದ ಸಂಜಯ್ ರಾವುತ್ ಆರೋಪಿಸಿದ್ದಾರೆ.

“ಪ್ರಧಾನಿಯವರ ಪ್ರವಾಸಕ್ಕೆ ಸರ್ಕಾರಿ ವಿಮಾನವನ್ನು ಬಳಸುತ್ತಿದ್ದರೆ, ಚುನಾವಣಾ ಆಯೋಗವು ಅವರಿಗೆ ವೆಚ್ಚದ ಬಿಲ್ ಕಳುಹಿಸಬೇಕು ಮತ್ತು ಆ ಪಕ್ಷದ ಖಾತೆಯಿಂದ ಹಣವನ್ನು ವಸೂಲಿ ಮಾಡಬೇಕು. ಕಳೆದ ಕೆಲವು ದಿನಗಳಿಂದ, ಚುನಾವಣೆ ಘೋಷಣೆಯಾದ ನಂತರ, ನರೇಂದ್ರ ಮೋದಿ ಅವರು ಸರ್ಕಾರಿ ಹೆಲಿಕಾಪ್ಟರ್‌ಗಳಲ್ಲಿ ಸಂಚರಿಸುತ್ತಿದ್ದಾರೆ” ಎಂದು ರಾವತ್ ಹೇಳಿದ್ದಾರೆ.

ಪ್ರಧಾನಿ ಮೋದಿಯವರ ಇತ್ತೀಚಿನ ಮುಂಬೈ ಭೇಟಿಯನ್ನು ಟೀಕಿಸಿದ ರಾವತ್, “ಅದಾನಿಗೆ ನೀಡಲು ಭೂಮಿಯನ್ನು ಹುಡುಕಲು ಅವರು ನಗರಕ್ಕೆ ಬಂದಿದ್ದಾರೆ” ಎಂದು ಹೇಳಿದ್ದಾರೆ.

“ಧಾರಾವಿ ಪುನರಾಭಿವೃದ್ಧಿ ಯೋಜನೆಯನ್ನು (ಗೌತಮ್) ಅದಾನಿಗೆ ನೀಡಲಾಗಿದೆ. ಮುಂಬೈನಲ್ಲಿ 10 ಅಲ್ಲ 100 ಸಭೆಗಳನ್ನು ಮಾಡಿ. ಮುಂಬೈನಿಂದ ಬಿಜೆಪಿಯನ್ನು ಸಂಪೂರ್ಣವಾಗಿ ಹೊರಹಾಕಬೇಕೆಂದು ಮುಂಬೈ ಜನರು ನಿರ್ಧರಿಸಿದ್ದಾರೆ. ಇದು ದೇಶದಲ್ಲಿ ನಡೆಯುತ್ತಿದೆ. ಆದರೆ ಮುಂಬೈನಲ್ಲಿ ಹತ್ತು ಸಭೆಗಳು ನಡೆಯುತ್ತವೆ, ಅವರಿಗೆ ಒಂದು ಸ್ಥಾನವೂ ಸಿಗುವುದಿಲ್ಲ. ನನ್ನ ಮಾತುಗಳನ್ನು ನೆನಪಿನಲ್ಲಿ ಇಟ್ಟುಕೊಳ್ಳಿ” ಎಂದು ಅವರು ಹೇಳಿದರು.

ಸೋಮವಾರ ಪ್ರಧಾನಿ ಮೋದಿ ಅವರು ಭಾರತೀಯ ರಿಸರ್ವ್ ಬ್ಯಾಂಕ್ (ಆರ್‌ಬಿಐ) 90ನೇ ವಾರ್ಷಿಕೋತ್ಸವ ಸಮಾರಂಭವನ್ನು ಉದ್ದೇಶಿಸಿ ಮಾತನಾಡಲು ಮುಂಬೈಗೆ ಭೇಟಿ ನೀಡಿದ್ದರು.

ಆದರೆ ಇಂಡಿಯಾ ಮೈತ್ರಿಕೂಟದ ನಾಯಕರ ಆರೋಪಕ್ಕೆ ಬಿಜೆಪಿ ತಿರುಗೇಟು ಕೊಟ್ಟಿದೆ. ಪ್ರಧಾನಿ ಮೋದಿಯವರ ಜನಪ್ರಿಯತೆಗೆ ಪ್ರತಿಪಕ್ಷಗಳು ಹೆದರುತ್ತಿವೆ ಎಂದು ಮುಂಬೈ ಬಿಜೆಪಿ ಮುಖ್ಯಸ್ಥ ಆಶಿಶ್ ಶೇಲಾರ್ ಹೇಳಿದ್ದಾರೆ. ಹಿರಿಯರಿಗೆ ಅಗೌರವ ತೋರುವುದನ್ನು ಮರಾಠಿ ಸಂಸ್ಕೃತಿ ಕಲಿಸುವುದಿಲ್ಲ ಎಂದರು.

“ಮರಾಠಿ ಸಂಸ್ಕೃತಿಯು ನಿಮಗೆ ಹಿರಿಯರನ್ನು ಅಗೌರವ ತೋರುವುದುನ್ನು ಎಂದಿಗೂ ಕಲಿಸುವುದಿಲ್ಲ. ಉದ್ಧವ್ (ಠಾಕ್ರೆ) ಅಂತಹ ಹೇಳಿಕೆಗಳನ್ನು ಬೆಂಬಲಿಸುತ್ತಾರೆಯೇ? ಅವರು ಮೋದಿಯವರ ಜನಪ್ರಿಯತೆ ಮತ್ತು ಅವರ ನಾಯಕತ್ವಕ್ಕೆ ಹೆದರುತ್ತಾರೆ. ರಾವುತ್ ಅವರಿಗೆ ಮೂಲಭೂತ ನಾಗರಿಕ ಪ್ರಜ್ಞೆ ಮತ್ತು ಜ್ಞಾನದ ಕೊರತೆಯಿದೆ. ನಾವು ಅವರಿಗೆ ಕಲಿಯಲು ನಾಗರಿಕ ಪುಸ್ತಕಗಳನ್ನು ಕಳುಹಿಸುತ್ತೇವೆ. ನೀತಿ ಸಂಹಿತೆಯ ಸಮಯದಲ್ಲೂ , ಉನ್ನತ ಹುದ್ದೆಗಳು ತಮ್ಮ ಕರ್ತವ್ಯವನ್ನು ನಿರ್ವಹಿಸಬೇಕು. ಹೀಗಾಗಿ, ಪ್ರಧಾನಿ ಮೋದಿ ಇಂದು ಆರ್‌ಬಿಐ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಆದರೆ, ಈ ಕಾರ್ಯಕ್ರಮದಲ್ಲಿ ಪ್ರಧಾನಿ ಮೋದಿ ಯಾವುದೇ ರಾಜಕೀಯ ಕಾಮೆಂಟ್ ಮಾಡಲಿಲ್ಲ” ಎಂದು ಆಶಿಶ್ ಶೇಲಾರ್ ಹೇಳಿದ್ದಾರೆ.

ಎನ್‌ಸಿಪಿ (ಎಸ್‌ಸಿಪಿ) ಶಾಸಕ ಜಿತೇಂದ್ರ ಅವ್ಹಾದ್ ಅವರು ಚುನಾವಣಾ ಆಯೋಗವು ಬಿಜೆಪಿಯ ವಿಸ್ತೃತ ಅಂಗವಾಗಿದೆ ಮತ್ತು ಅವರ ದೂರುಗಳ ಬಗ್ಗೆ ಕ್ರಮ ತೆಗೆದುಕೊಳ್ಳುತ್ತಿಲ್ಲ ಎಂದು ಆರೋಪಿಸಿದರು.

ನನ್ನ ಕ್ಷೇತ್ರದಲ್ಲಿಯೂ ಸಹ ಕ್ಷೇತ್ರದ ಹಲವು ಗೋಡೆಗಳಲ್ಲಿ ಬಿಜೆಪಿ ಚಿಹ್ನೆ ಕಾಣುತ್ತಿದೆ ಎಂದು ಚುನಾವಣಾ ಆಯೋಗಕ್ಕೆ ದೂರು ನೀಡಿದ್ದೇನೆ, ಚುನಾವಣಾ ಆಯೋಗ ಬಿಜೆಪಿಯ ಅಸ್ತ್ರವಾಗಿದೆ, ಅವರು ಕ್ರಮ ಕೈಗೊಳ್ಳುತ್ತಿಲ್ಲ ಎಂದರು.

ಇದನ್ನೂ ಓದಿ; ಮಹುವಾ ಮೊಯಿತ್ರಾ ವಿರುದ್ಧ ಮನಿ ಲಾಂಡರಿಂಗ್ ಕೇಸ್ ದಾಖಲಿಸಿದ ಜಾರಿ ನಿರ್ದೇಶನಾಲಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಂದೇ ಮಾತರಂ ಗೀತೆಯ 6 ಚರಣಕ್ಕೆ ಕರ್ನಾಟಕ ಸರ್ಕಾರದ ಬ್ರೇಕ್

ವಂದೇ ಮಾತರಂ ಗೀತೆಯ ಗಾಯನಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ನಿರ್ಧಾರ ಮತ್ತು ಕಡ್ಡಾಯ ನೀತಿಗೆ ಕರ್ನಾಟಕ ಸರ್ಕಾರ ನೇರವಾಗಿ ಸೆಡ್ಡು ಹೊಡೆದಿದೆ. ರಾಜ್ಯ ಸರ್ಕಾರದ ಅಧಿಕೃತ ಕಾರ್ಯಕ್ರಮಗಳಲ್ಲಿ ವಂದೇ ಮಾತರಂ ಗೀತೆಯ ಸಂಪೂರ್ಣ...

ಸಿಜೆಪಿ ಪ್ರತಿಭಟನೆಯಲ್ಲಿ ಬಾಲಕಿ ನಿಶು ಆಜಾದ್‌ಗೆ ಬೆದರಿಕೆ; ಕ್ರಮಕ್ಕೆ ಸುಪ್ರೀಂ ಕೋರ್ಟ್ ಸೂಚನೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ 14 ವರ್ಷದ ನಿಶು ಆಜಾದ್‌ಗೆ ಕಿಡಿಗೇಡಿಗಳು ಅತ್ಯಾಚಾರದ ಬೆದರಿಕೆ ಹಾಕಿದ್ದಾರೆ ಹಾಗೂ ಅವರ ಮನೆ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ ಎಂಬ...

ಜಾದವ್‌ಪುರ ವಿವಿ ವಿರುದ್ಧ ಸುವೇಂದು ಅಧಿಕಾರಿಯ ‘ಕೇಸರಿ ಯಾತ್ರೆ’: ‘ಆಜಾದಿ’, ‘ಲಾಲ್ ಸಲಾಂ’ ಕೂಗುವವರನ್ನು ಬೇರುಸಹಿತ ಕಿತ್ತುಹಾಕುತ್ತೇನೆ ಎಂದು ಬೆದರಿಕೆ

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಬಿಜೆಪಿ ನಾಯಕ ಹಾಗೂ ಮುಖ್ಯಮಂತ್ರಿ ಸುವೇಂದು ಅಧಿಕಾರಿ ನೇತೃತ್ವದಲ್ಲಿ ಕೋಲ್ಕತ್ತಾದ ಜಾದವ್‌ಪುರ ವಿಶ್ವವಿದ್ಯಾಲಯದತ್ತ ನಡೆದ ‘ಗೆರುವಾ ಸಮ್ಮಾನ್ ಯಾತ್ರೆ’ (ಕೇಸರಿ ಗೌರವ ಮೆರವಣಿಗೆ) ಇದೀಗ ರಾಜ್ಯದ ರಾಜಕೀಯ ವಲಯದಲ್ಲಿ...

SIR : ಒಂದೇ ಮತಗಟ್ಟೆಯ 729 ಮತದಾರರಲ್ಲಿ 728 ಮಂದಿಯ ಹೆಸರು ಡಿಲೀಟ್!

ದೆಹಲಿಯ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್‌) ಮುನ್ನ, ಯಮುನಾ ನದಿ ಪಾತ್ರದ ಕೊಳಗೇರಿ ಪ್ರದೇಶವಾದ ಬೇಲಾ ಎಸ್ಟೇಟ್‌ನ ಭಾಗವೊಂದನ್ನು ಒಳಗೊಂಡಿರುವ ಮತಗಟ್ಟೆಯಲ್ಲಿ 729 ನೋಂದಾಯಿತ ಮತದಾರರಿದ್ದರು. ಆದರೆ, ಆಗಸ್ಟ್‌ನಲ್ಲಿ ಕರಡು...

ಬಂಗಾಳದ ನಾನ್‌ವೆಜ್ ವಿವಾದ: ಬಾಗೇಶ್ವರ್ ಬಾಬಾ ಹೇಳಿಕೆಗೆ ಹಿಂದೂ ವಲಯದಲ್ಲೇ ವಿರೋಧ; ‘ಹಿಂದೂ ಧರ್ಮ ಆಹಾರದ ಕೋಡ್ ಅಲ್ಲ!

ದುರ್ಗಾ ಪೂಜೆಯ ಸಂದರ್ಭದಲ್ಲಿ ಮೀನು, ಮಾಂಸ ಸೇವನೆ ಹಾಗೂ ಮಾರಾಟದ ವಿರುದ್ಧ ಬಾಗೇಶ್ವರ್ ಧಾಮದ ಮುಖ್ಯಸ್ಥ ಧೀರೇಂದ್ರ ಕೃಷ್ಣ ಶಾಸ್ತ್ರಿ ನೀಡಿದ್ದ ಹೇಳಿಕೆ ಪಶ್ಚಿಮ ಬಂಗಾಳದಲ್ಲಿ ರಾಜಕೀಯ ವಿವಾದ ಹುಟ್ಟುಹಾಕಿದ ಬೆನ್ನಲ್ಲೇ, ಇದೀಗ...

SIR: ಪಂಜಾಬ್‌ ಮತದಾರರ ಪಟ್ಟಿಯಿಂದ ಡಿಲೀಟ್ ಆಗಿದ್ದ ರಾಘವ್ ಚಡ್ಡಾ ಹೆಸರು ದೆಹಲಿಯಲ್ಲಿ ಎಂಟ್ರಿ!

ರಾಜ್ಯಸಭಾ ಸಂಸದ ರಾಘವ್ ಚಡ್ಡಾ ಅವರ ಹೆಸರು ಪಂಜಾಬ್‌ನ ಕರಡು ಮತದಾರರ ಪಟ್ಟಿಯಿಂದ ತೆಗೆದುಹಾಕಲ್ಪಟ್ಟ ಕೆಲವೇ ದಿನಗಳಲ್ಲಿ, ದೆಹಲಿಯ ಮತದಾರರ ಪಟ್ಟಿಯಲ್ಲಿ ದಿಢೀರನೆ ಪ್ರತ್ಯಕ್ಷವಾಗಿರುವುದು ದೇಶಾದ್ಯಂತ ಭಾರಿ ರಾಜಕೀಯ ಚರ್ಚೆಗೆ ಕಾರಣವಾಗಿದೆ. ಈ...

ರಾಜ್ಯ ಕಾಂಗ್ರೆಸ್‌ಗೆ 35 ನೂತನ ಜಿಲ್ಲಾಧ್ಯಕ್ಷರ ನೇಮಕ; ಹೈಕಮಾಂಡ್ ಪಟ್ಟಿಯಲ್ಲಿ ಮಹಿಳೆಯರಿಗಿಲ್ಲ ಪ್ರಾತಿನಿಧ್ಯ!

ಕರ್ನಾಟಕ ಕಾಂಗ್ರೆಸ್‌ನ ಬಹುನಿರೀಕ್ಷಿತ ಜಿಲ್ಲಾ ಪುನರ್‌ರಚನೆಗೆ ಕೊನೆಗೂ ಚಾಲನೆ ದೊರೆತಿದ್ದು, ರಾಜ್ಯದ 35 ಸಾಂಸ್ಥಿಕ ಜಿಲ್ಲಾ ಕಾಂಗ್ರೆಸ್ ಸಮಿತಿಗಳಿಗೆ (DCC) ನೂತನ ಅಧ್ಯಕ್ಷರನ್ನು ನೇಮಕ ಮಾಡಲಾಗಿದೆ. ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ....

ತ್ರಿಪುರ| ಬಿಜೆಪಿ ಬೇಡಿಕೆಗೆ ಸ್ಪಂದಿಸಿದ ಇಸಿಐ; ಗ್ರಾಮ ಸಮಿತಿ ಚುನಾವಣೆ ಹಿನ್ನೆಲೆಯಲ್ಲಿ ಎಸ್‌ಐಆರ್ ಪ್ರಕ್ರಿಯೆ ಮುಂದೂಡಿಕೆ

ಆಡಳಿತರೂಢ ಭಾರತೀಯ ಜನತಾ ಪಕ್ಷ (ಬಿಜೆಪಿ) ಸೇರಿದಂತೆ ವಿವಿಧ ರಾಜಕೀಯ ಪಕ್ಷಗಳ ಬೇಡಿಕೆಗೆ ಸ್ಪಂದಿಸಿರುವ ಭಾರತೀಯ ಚುನಾವಣಾ ಆಯೋಗ (ಇಸಿಐ), ರಾಜ್ಯದ ಬುಡಕಟ್ಟು ಪ್ರದೇಶಗಳಲ್ಲಿ ಸೆಪ್ಟೆಂಬರ್ 28 ರಂದು ನಡೆಯಲಿರುವ ಗ್ರಾಮ ಸಮಿತಿ...

SIR: ಸ್ವತಃ BLO ಗೆ ನೋಟಿಸ್ ನೀಡಿದ ಚುನಾವಣಾ ಆಯೋಗ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ತಾಂತ್ರಿಕ ಎಡವಟ್ಟುಗಳು ಮತ್ತು ಗೊಂದಲಗಳು ಪ್ರತಿದಿನವೂ ಒಂದಲ್ಲ ಒಂದು ವಿಲಕ್ಷಣ ಘಟನೆಗಳಿಗೆ ಕಾರಣವಾಗುತ್ತಿದ್ದು, ಇದೀಗ ಸ್ವತಃ ಮತದಾರರ ಪಟ್ಟಿ ಪರಿಷ್ಕರಣೆ...

‘ಎಸ್‌ಐಆರ್ ಪ್ರಜಾಪ್ರಭುತ್ವಕ್ಕೆ ವಂಚನೆ’: 2025ಕ್ಕೆ ಹೋಲಿಸಿದರೆ ದೆಹಲಿಯ 58.60 ಲಕ್ಷ ಮತದಾರರ ಹೆಸರುಗಳು ಮಾಯ: ನಾಗರೀಕ ಸಂಘಟನೆಗಳ ಆಕ್ರೋಶ

ನವದೆಹಲಿ: ದೆಹಲಿಯಲ್ಲಿ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಮತದಾರರ ಪಟ್ಟಿಯ ಶುದ್ಧೀಕರಣದ ಸಾಮಾನ್ಯ ಆಡಳಿತಾತ್ಮಕ ಕ್ರಮವಲ್ಲ, ಬದಲಾಗಿ ನಾಗರಿಕರ ಮತದಾನದ ಹಕ್ಕಿನ ಮೇಲೆ ಗಂಭೀರ ಪರಿಣಾಮ ಬೀರುವ...