Homeಮುಖಪುಟಪ್ರಚಾರಕ್ಕೆ ಪ್ರಧಾನಿ ಕಚೇರಿ, ವಿಮಾನ ಬಳಸುತ್ತಿರುವ ಮೋದಿಯಿಂದ ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ: ರಾವತ್

ಪ್ರಚಾರಕ್ಕೆ ಪ್ರಧಾನಿ ಕಚೇರಿ, ವಿಮಾನ ಬಳಸುತ್ತಿರುವ ಮೋದಿಯಿಂದ ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ: ರಾವತ್

- Advertisement -
- Advertisement -

ಲೋಕಸಭೆ ಚುನಾವಣೆಗೆ ಮುನ್ನ ಬಿಜೆಪಿ ಪರ ಪ್ರಚಾರಕ್ಕೆ ತಮ್ಮ ಕಚೇರಿಯನ್ನು ಬಳಸಿಕೊಳ್ಳುವ ಮೂಲಕ ಪ್ರಧಾನಿ ನರೇಂದ್ರ ಮೋದಿ ಅವರು ಮಾದರಿ ನೀತಿ ಸಂಹಿತೆ (ಎಂಸಿಸಿ) ಉಲ್ಲಂಘಿಸಿದ್ದಾರೆ ಎಂದು ಶಿವಸೇನಾ (ಯುಬಿಟಿ) ಸಂಸದ ಸಂಜಯ್ ರಾವುತ್ ಆರೋಪಿಸಿದ್ದಾರೆ.

“ಪ್ರಧಾನಿಯವರ ಪ್ರವಾಸಕ್ಕೆ ಸರ್ಕಾರಿ ವಿಮಾನವನ್ನು ಬಳಸುತ್ತಿದ್ದರೆ, ಚುನಾವಣಾ ಆಯೋಗವು ಅವರಿಗೆ ವೆಚ್ಚದ ಬಿಲ್ ಕಳುಹಿಸಬೇಕು ಮತ್ತು ಆ ಪಕ್ಷದ ಖಾತೆಯಿಂದ ಹಣವನ್ನು ವಸೂಲಿ ಮಾಡಬೇಕು. ಕಳೆದ ಕೆಲವು ದಿನಗಳಿಂದ, ಚುನಾವಣೆ ಘೋಷಣೆಯಾದ ನಂತರ, ನರೇಂದ್ರ ಮೋದಿ ಅವರು ಸರ್ಕಾರಿ ಹೆಲಿಕಾಪ್ಟರ್‌ಗಳಲ್ಲಿ ಸಂಚರಿಸುತ್ತಿದ್ದಾರೆ” ಎಂದು ರಾವತ್ ಹೇಳಿದ್ದಾರೆ.

ಪ್ರಧಾನಿ ಮೋದಿಯವರ ಇತ್ತೀಚಿನ ಮುಂಬೈ ಭೇಟಿಯನ್ನು ಟೀಕಿಸಿದ ರಾವತ್, “ಅದಾನಿಗೆ ನೀಡಲು ಭೂಮಿಯನ್ನು ಹುಡುಕಲು ಅವರು ನಗರಕ್ಕೆ ಬಂದಿದ್ದಾರೆ” ಎಂದು ಹೇಳಿದ್ದಾರೆ.

“ಧಾರಾವಿ ಪುನರಾಭಿವೃದ್ಧಿ ಯೋಜನೆಯನ್ನು (ಗೌತಮ್) ಅದಾನಿಗೆ ನೀಡಲಾಗಿದೆ. ಮುಂಬೈನಲ್ಲಿ 10 ಅಲ್ಲ 100 ಸಭೆಗಳನ್ನು ಮಾಡಿ. ಮುಂಬೈನಿಂದ ಬಿಜೆಪಿಯನ್ನು ಸಂಪೂರ್ಣವಾಗಿ ಹೊರಹಾಕಬೇಕೆಂದು ಮುಂಬೈ ಜನರು ನಿರ್ಧರಿಸಿದ್ದಾರೆ. ಇದು ದೇಶದಲ್ಲಿ ನಡೆಯುತ್ತಿದೆ. ಆದರೆ ಮುಂಬೈನಲ್ಲಿ ಹತ್ತು ಸಭೆಗಳು ನಡೆಯುತ್ತವೆ, ಅವರಿಗೆ ಒಂದು ಸ್ಥಾನವೂ ಸಿಗುವುದಿಲ್ಲ. ನನ್ನ ಮಾತುಗಳನ್ನು ನೆನಪಿನಲ್ಲಿ ಇಟ್ಟುಕೊಳ್ಳಿ” ಎಂದು ಅವರು ಹೇಳಿದರು.

ಸೋಮವಾರ ಪ್ರಧಾನಿ ಮೋದಿ ಅವರು ಭಾರತೀಯ ರಿಸರ್ವ್ ಬ್ಯಾಂಕ್ (ಆರ್‌ಬಿಐ) 90ನೇ ವಾರ್ಷಿಕೋತ್ಸವ ಸಮಾರಂಭವನ್ನು ಉದ್ದೇಶಿಸಿ ಮಾತನಾಡಲು ಮುಂಬೈಗೆ ಭೇಟಿ ನೀಡಿದ್ದರು.

ಆದರೆ ಇಂಡಿಯಾ ಮೈತ್ರಿಕೂಟದ ನಾಯಕರ ಆರೋಪಕ್ಕೆ ಬಿಜೆಪಿ ತಿರುಗೇಟು ಕೊಟ್ಟಿದೆ. ಪ್ರಧಾನಿ ಮೋದಿಯವರ ಜನಪ್ರಿಯತೆಗೆ ಪ್ರತಿಪಕ್ಷಗಳು ಹೆದರುತ್ತಿವೆ ಎಂದು ಮುಂಬೈ ಬಿಜೆಪಿ ಮುಖ್ಯಸ್ಥ ಆಶಿಶ್ ಶೇಲಾರ್ ಹೇಳಿದ್ದಾರೆ. ಹಿರಿಯರಿಗೆ ಅಗೌರವ ತೋರುವುದನ್ನು ಮರಾಠಿ ಸಂಸ್ಕೃತಿ ಕಲಿಸುವುದಿಲ್ಲ ಎಂದರು.

“ಮರಾಠಿ ಸಂಸ್ಕೃತಿಯು ನಿಮಗೆ ಹಿರಿಯರನ್ನು ಅಗೌರವ ತೋರುವುದುನ್ನು ಎಂದಿಗೂ ಕಲಿಸುವುದಿಲ್ಲ. ಉದ್ಧವ್ (ಠಾಕ್ರೆ) ಅಂತಹ ಹೇಳಿಕೆಗಳನ್ನು ಬೆಂಬಲಿಸುತ್ತಾರೆಯೇ? ಅವರು ಮೋದಿಯವರ ಜನಪ್ರಿಯತೆ ಮತ್ತು ಅವರ ನಾಯಕತ್ವಕ್ಕೆ ಹೆದರುತ್ತಾರೆ. ರಾವುತ್ ಅವರಿಗೆ ಮೂಲಭೂತ ನಾಗರಿಕ ಪ್ರಜ್ಞೆ ಮತ್ತು ಜ್ಞಾನದ ಕೊರತೆಯಿದೆ. ನಾವು ಅವರಿಗೆ ಕಲಿಯಲು ನಾಗರಿಕ ಪುಸ್ತಕಗಳನ್ನು ಕಳುಹಿಸುತ್ತೇವೆ. ನೀತಿ ಸಂಹಿತೆಯ ಸಮಯದಲ್ಲೂ , ಉನ್ನತ ಹುದ್ದೆಗಳು ತಮ್ಮ ಕರ್ತವ್ಯವನ್ನು ನಿರ್ವಹಿಸಬೇಕು. ಹೀಗಾಗಿ, ಪ್ರಧಾನಿ ಮೋದಿ ಇಂದು ಆರ್‌ಬಿಐ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಆದರೆ, ಈ ಕಾರ್ಯಕ್ರಮದಲ್ಲಿ ಪ್ರಧಾನಿ ಮೋದಿ ಯಾವುದೇ ರಾಜಕೀಯ ಕಾಮೆಂಟ್ ಮಾಡಲಿಲ್ಲ” ಎಂದು ಆಶಿಶ್ ಶೇಲಾರ್ ಹೇಳಿದ್ದಾರೆ.

ಎನ್‌ಸಿಪಿ (ಎಸ್‌ಸಿಪಿ) ಶಾಸಕ ಜಿತೇಂದ್ರ ಅವ್ಹಾದ್ ಅವರು ಚುನಾವಣಾ ಆಯೋಗವು ಬಿಜೆಪಿಯ ವಿಸ್ತೃತ ಅಂಗವಾಗಿದೆ ಮತ್ತು ಅವರ ದೂರುಗಳ ಬಗ್ಗೆ ಕ್ರಮ ತೆಗೆದುಕೊಳ್ಳುತ್ತಿಲ್ಲ ಎಂದು ಆರೋಪಿಸಿದರು.

ನನ್ನ ಕ್ಷೇತ್ರದಲ್ಲಿಯೂ ಸಹ ಕ್ಷೇತ್ರದ ಹಲವು ಗೋಡೆಗಳಲ್ಲಿ ಬಿಜೆಪಿ ಚಿಹ್ನೆ ಕಾಣುತ್ತಿದೆ ಎಂದು ಚುನಾವಣಾ ಆಯೋಗಕ್ಕೆ ದೂರು ನೀಡಿದ್ದೇನೆ, ಚುನಾವಣಾ ಆಯೋಗ ಬಿಜೆಪಿಯ ಅಸ್ತ್ರವಾಗಿದೆ, ಅವರು ಕ್ರಮ ಕೈಗೊಳ್ಳುತ್ತಿಲ್ಲ ಎಂದರು.

ಇದನ್ನೂ ಓದಿ; ಮಹುವಾ ಮೊಯಿತ್ರಾ ವಿರುದ್ಧ ಮನಿ ಲಾಂಡರಿಂಗ್ ಕೇಸ್ ದಾಖಲಿಸಿದ ಜಾರಿ ನಿರ್ದೇಶನಾಲಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...

ಪೊಲೀಸರ ಅನುಮತಿ ಪಡೆದಿದ್ದರೂ ನೀಟ್ ಪ್ರತಿಭಟನೆಗೆ ವಾಟ್ಸಾಪ್ ಗ್ರೂಪ್ ರಚಿಸಿದ್ದಕ್ಕಾಗಿ ಅಸ್ಸಾಂನಲ್ಲಿ ಮೂವರು ಮುಸ್ಲಿಂ ವಿದ್ಯಾರ್ಥಿಗಳ ಬಂಧನ

ಅಸ್ಸಾಂನಲ್ಲಿ ಬಿಜೆಪಿ ಸರ್ಕಾರದ ಕೋಮುವಾದಿ ಧೋರಣೆ ಮತ್ತು ಪ್ರಜಾಸತ್ತಾತ್ಮಕ ಹಕ್ಕುಗಳ ದಮನದ ದಾರುಣ ಚಿತ್ರಣವೊಂದು ಮತ್ತೆ ಮುನ್ನೆಲೆಗೆ ಬಂದಿದೆ. ದೇಶಾದ್ಯಂತ ಸದ್ದು ಮಾಡಿದ್ದ 'ನೀಟ್' (NEET) ಅಕ್ರಮಗಳ ವಿರುದ್ಧ ಧ್ವನಿ ಎತ್ತಲು ಮತ್ತು...

‘ವಿದ್ಯಾರ್ಥಿಗಳ ಮೇಲಿನ ವಿಕೃತ ದಾಳಿಗೆ ನಿಮ್ಮ ಸಮ್ಮತಿ ಇತ್ತೇ?’: ಪತ್ರದ ಮೂಲಕ ಅಮಿತ್ ಶಾಗೆ ರಾಹುಲ್ ಗಾಂಧಿ ಪ್ರಶ್ನೆ

ನವದೆಹಲಿ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಕಾರಣವಾದ ದೇಶವ್ಯಾಪಿ ವಿದ್ಯಾರ್ಥಿ ಆಂದೋಲನದ ವೇಳೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯ ಮತ್ತು ಮಿತಿಮೀರಿದ ಬಲಪ್ರಯೋಗದ ವಿರುದ್ಧ ಲೋಕಸಭೆಯ ವಿರೋಧ...

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...