Homeಮುಖಪುಟಪ್ರಚಾರಕ್ಕೆ ಪ್ರಧಾನಿ ಕಚೇರಿ, ವಿಮಾನ ಬಳಸುತ್ತಿರುವ ಮೋದಿಯಿಂದ ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ: ರಾವತ್

ಪ್ರಚಾರಕ್ಕೆ ಪ್ರಧಾನಿ ಕಚೇರಿ, ವಿಮಾನ ಬಳಸುತ್ತಿರುವ ಮೋದಿಯಿಂದ ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ: ರಾವತ್

- Advertisement -
- Advertisement -

ಲೋಕಸಭೆ ಚುನಾವಣೆಗೆ ಮುನ್ನ ಬಿಜೆಪಿ ಪರ ಪ್ರಚಾರಕ್ಕೆ ತಮ್ಮ ಕಚೇರಿಯನ್ನು ಬಳಸಿಕೊಳ್ಳುವ ಮೂಲಕ ಪ್ರಧಾನಿ ನರೇಂದ್ರ ಮೋದಿ ಅವರು ಮಾದರಿ ನೀತಿ ಸಂಹಿತೆ (ಎಂಸಿಸಿ) ಉಲ್ಲಂಘಿಸಿದ್ದಾರೆ ಎಂದು ಶಿವಸೇನಾ (ಯುಬಿಟಿ) ಸಂಸದ ಸಂಜಯ್ ರಾವುತ್ ಆರೋಪಿಸಿದ್ದಾರೆ.

“ಪ್ರಧಾನಿಯವರ ಪ್ರವಾಸಕ್ಕೆ ಸರ್ಕಾರಿ ವಿಮಾನವನ್ನು ಬಳಸುತ್ತಿದ್ದರೆ, ಚುನಾವಣಾ ಆಯೋಗವು ಅವರಿಗೆ ವೆಚ್ಚದ ಬಿಲ್ ಕಳುಹಿಸಬೇಕು ಮತ್ತು ಆ ಪಕ್ಷದ ಖಾತೆಯಿಂದ ಹಣವನ್ನು ವಸೂಲಿ ಮಾಡಬೇಕು. ಕಳೆದ ಕೆಲವು ದಿನಗಳಿಂದ, ಚುನಾವಣೆ ಘೋಷಣೆಯಾದ ನಂತರ, ನರೇಂದ್ರ ಮೋದಿ ಅವರು ಸರ್ಕಾರಿ ಹೆಲಿಕಾಪ್ಟರ್‌ಗಳಲ್ಲಿ ಸಂಚರಿಸುತ್ತಿದ್ದಾರೆ” ಎಂದು ರಾವತ್ ಹೇಳಿದ್ದಾರೆ.

ಪ್ರಧಾನಿ ಮೋದಿಯವರ ಇತ್ತೀಚಿನ ಮುಂಬೈ ಭೇಟಿಯನ್ನು ಟೀಕಿಸಿದ ರಾವತ್, “ಅದಾನಿಗೆ ನೀಡಲು ಭೂಮಿಯನ್ನು ಹುಡುಕಲು ಅವರು ನಗರಕ್ಕೆ ಬಂದಿದ್ದಾರೆ” ಎಂದು ಹೇಳಿದ್ದಾರೆ.

“ಧಾರಾವಿ ಪುನರಾಭಿವೃದ್ಧಿ ಯೋಜನೆಯನ್ನು (ಗೌತಮ್) ಅದಾನಿಗೆ ನೀಡಲಾಗಿದೆ. ಮುಂಬೈನಲ್ಲಿ 10 ಅಲ್ಲ 100 ಸಭೆಗಳನ್ನು ಮಾಡಿ. ಮುಂಬೈನಿಂದ ಬಿಜೆಪಿಯನ್ನು ಸಂಪೂರ್ಣವಾಗಿ ಹೊರಹಾಕಬೇಕೆಂದು ಮುಂಬೈ ಜನರು ನಿರ್ಧರಿಸಿದ್ದಾರೆ. ಇದು ದೇಶದಲ್ಲಿ ನಡೆಯುತ್ತಿದೆ. ಆದರೆ ಮುಂಬೈನಲ್ಲಿ ಹತ್ತು ಸಭೆಗಳು ನಡೆಯುತ್ತವೆ, ಅವರಿಗೆ ಒಂದು ಸ್ಥಾನವೂ ಸಿಗುವುದಿಲ್ಲ. ನನ್ನ ಮಾತುಗಳನ್ನು ನೆನಪಿನಲ್ಲಿ ಇಟ್ಟುಕೊಳ್ಳಿ” ಎಂದು ಅವರು ಹೇಳಿದರು.

ಸೋಮವಾರ ಪ್ರಧಾನಿ ಮೋದಿ ಅವರು ಭಾರತೀಯ ರಿಸರ್ವ್ ಬ್ಯಾಂಕ್ (ಆರ್‌ಬಿಐ) 90ನೇ ವಾರ್ಷಿಕೋತ್ಸವ ಸಮಾರಂಭವನ್ನು ಉದ್ದೇಶಿಸಿ ಮಾತನಾಡಲು ಮುಂಬೈಗೆ ಭೇಟಿ ನೀಡಿದ್ದರು.

ಆದರೆ ಇಂಡಿಯಾ ಮೈತ್ರಿಕೂಟದ ನಾಯಕರ ಆರೋಪಕ್ಕೆ ಬಿಜೆಪಿ ತಿರುಗೇಟು ಕೊಟ್ಟಿದೆ. ಪ್ರಧಾನಿ ಮೋದಿಯವರ ಜನಪ್ರಿಯತೆಗೆ ಪ್ರತಿಪಕ್ಷಗಳು ಹೆದರುತ್ತಿವೆ ಎಂದು ಮುಂಬೈ ಬಿಜೆಪಿ ಮುಖ್ಯಸ್ಥ ಆಶಿಶ್ ಶೇಲಾರ್ ಹೇಳಿದ್ದಾರೆ. ಹಿರಿಯರಿಗೆ ಅಗೌರವ ತೋರುವುದನ್ನು ಮರಾಠಿ ಸಂಸ್ಕೃತಿ ಕಲಿಸುವುದಿಲ್ಲ ಎಂದರು.

“ಮರಾಠಿ ಸಂಸ್ಕೃತಿಯು ನಿಮಗೆ ಹಿರಿಯರನ್ನು ಅಗೌರವ ತೋರುವುದುನ್ನು ಎಂದಿಗೂ ಕಲಿಸುವುದಿಲ್ಲ. ಉದ್ಧವ್ (ಠಾಕ್ರೆ) ಅಂತಹ ಹೇಳಿಕೆಗಳನ್ನು ಬೆಂಬಲಿಸುತ್ತಾರೆಯೇ? ಅವರು ಮೋದಿಯವರ ಜನಪ್ರಿಯತೆ ಮತ್ತು ಅವರ ನಾಯಕತ್ವಕ್ಕೆ ಹೆದರುತ್ತಾರೆ. ರಾವುತ್ ಅವರಿಗೆ ಮೂಲಭೂತ ನಾಗರಿಕ ಪ್ರಜ್ಞೆ ಮತ್ತು ಜ್ಞಾನದ ಕೊರತೆಯಿದೆ. ನಾವು ಅವರಿಗೆ ಕಲಿಯಲು ನಾಗರಿಕ ಪುಸ್ತಕಗಳನ್ನು ಕಳುಹಿಸುತ್ತೇವೆ. ನೀತಿ ಸಂಹಿತೆಯ ಸಮಯದಲ್ಲೂ , ಉನ್ನತ ಹುದ್ದೆಗಳು ತಮ್ಮ ಕರ್ತವ್ಯವನ್ನು ನಿರ್ವಹಿಸಬೇಕು. ಹೀಗಾಗಿ, ಪ್ರಧಾನಿ ಮೋದಿ ಇಂದು ಆರ್‌ಬಿಐ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಆದರೆ, ಈ ಕಾರ್ಯಕ್ರಮದಲ್ಲಿ ಪ್ರಧಾನಿ ಮೋದಿ ಯಾವುದೇ ರಾಜಕೀಯ ಕಾಮೆಂಟ್ ಮಾಡಲಿಲ್ಲ” ಎಂದು ಆಶಿಶ್ ಶೇಲಾರ್ ಹೇಳಿದ್ದಾರೆ.

ಎನ್‌ಸಿಪಿ (ಎಸ್‌ಸಿಪಿ) ಶಾಸಕ ಜಿತೇಂದ್ರ ಅವ್ಹಾದ್ ಅವರು ಚುನಾವಣಾ ಆಯೋಗವು ಬಿಜೆಪಿಯ ವಿಸ್ತೃತ ಅಂಗವಾಗಿದೆ ಮತ್ತು ಅವರ ದೂರುಗಳ ಬಗ್ಗೆ ಕ್ರಮ ತೆಗೆದುಕೊಳ್ಳುತ್ತಿಲ್ಲ ಎಂದು ಆರೋಪಿಸಿದರು.

ನನ್ನ ಕ್ಷೇತ್ರದಲ್ಲಿಯೂ ಸಹ ಕ್ಷೇತ್ರದ ಹಲವು ಗೋಡೆಗಳಲ್ಲಿ ಬಿಜೆಪಿ ಚಿಹ್ನೆ ಕಾಣುತ್ತಿದೆ ಎಂದು ಚುನಾವಣಾ ಆಯೋಗಕ್ಕೆ ದೂರು ನೀಡಿದ್ದೇನೆ, ಚುನಾವಣಾ ಆಯೋಗ ಬಿಜೆಪಿಯ ಅಸ್ತ್ರವಾಗಿದೆ, ಅವರು ಕ್ರಮ ಕೈಗೊಳ್ಳುತ್ತಿಲ್ಲ ಎಂದರು.

ಇದನ್ನೂ ಓದಿ; ಮಹುವಾ ಮೊಯಿತ್ರಾ ವಿರುದ್ಧ ಮನಿ ಲಾಂಡರಿಂಗ್ ಕೇಸ್ ದಾಖಲಿಸಿದ ಜಾರಿ ನಿರ್ದೇಶನಾಲಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಬಾಲ ಕಾರ್ಮಿಕ’ ಶಂಕೆಯ ಮೇಲೆ 155 ಮುಸ್ಲಿಂ ವಿದ್ಯಾರ್ಥಿಗಳ ಬಂಧನ: ಧಾರ್ಮಿಕ ಗುರುತಿನ ಕಾರಣಕ್ಕೆ ಬಂಧಿಸಿರುವುದಾಗಿ ಪೋಷಕರ ಆರೋಪ

ಮಧ್ಯಪ್ರದೇಶದ ಕಟ್ನಿಯಲ್ಲಿ ಸರ್ಕಾರಿ ರೈಲ್ವೆ ಪೊಲೀಸರು (GRP) 155 ಮುಸ್ಲಿಂ ವಿದ್ಯಾರ್ಥಿಗಳು ಮತ್ತು ಎಂಟು ಶಿಕ್ಷಕರನ್ನು "ಬಾಲ ಕಾರ್ಮಿಕ" ಶಂಕೆಯ ಮೇಲೆ ಬಂಧಿಸಿದ ನಂತರ, ಪೋಷಕರು ಮುಸ್ಲಿಂ ವಿರೋಧಿ ಪಕ್ಷಪಾತವನ್ನು ಹೊಂದಿದ್ದಾರೆಂದು ಆರೋಪಿಸಿದ್ದಾರೆ....

ಜನಿವಾರದ ಹಿಂದೆ ಬಿದ್ದಿರುವ ವಿರೋಧ ಪಕ್ಷ ಮತ್ತು ಮಾಧ್ಯಮಗಳು

ಏಪ್ರಿಲ್ 23, 2026 ರಂದು ನಡೆದ ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆ (KCET) ವೇಳೆ ಬೆಂಗಳೂರಿನ ಕೋರಮಂಗಲದಲ್ಲಿರುವ ಕೃಪಾನಿಧಿ ಪಿಯು ಕಾಲೇಜಿನಲ್ಲಿ ಐವರು ಬ್ರಾಹ್ಮಣ ವಿದ್ಯಾರ್ಥಿಗಳ ಜನಿವಾರವನ್ನು ಬಲವಂತವಾಗಿ ತೆಗೆಸಿದ ಘಟನೆ ರಾಜಕೀಯ...

ಒಡಿಶಾ| ಸಾವಿನ ದಾಖಲೆ ಕೇಳಿದ ಬ್ಯಾಂಕ್‌ ಸಿಬ್ಬಂದಿ; ಸಮಾದಿ ಅಗೆದು ಸಹೋದರಿಯ ಅಸ್ಥಿಪಂಜರ ತಂದ ಬುಡಕಟ್ಟು ವ್ಯಕ್ತಿ

ಒಡಿಶಾದ ಕಿಯೋಂಜಾರ್ ಜಿಲ್ಲೆಯಲ್ಲಿ, ಬುಡಕಟ್ಟು ವ್ಯಕ್ತಿಯೊಬ್ಬ ತನ್ನ ಮೃತ ಸಹೋದರಿಯ ಅಸ್ಥಿಪಂಜರವನ್ನು ಅಗೆದು ಗ್ರಾಮೀಣ ಬ್ಯಾಂಕ್‌ಗೆ ತೆಗೆದುಕೊಂಡು ಹೋಗಿದ್ದಾನೆ. ಆಕೆಯ ಸಾವನ್ನು ಸಾಬೀತುಪಡಿಸುವ ಮೂಲಕ ಆಕೆಯ ಖಾತೆಯಲ್ಲಿ ಜಮಾ ಮಾಡಿದ ಹಣವನ್ನು ಪಡೆಯಲು...

ಜಾತಿ ಕಿರುಕುಳಕ್ಕೆ ದಲಿತ ವಿದ್ಯಾರ್ಥಿ ಸಾವು ಪ್ರಕರಣ: ಇಂದು ಸಂಜೆ 6 ರವರೆಗೆ ಕೇರಳ ಬಂದ್

ಜಾತಿ ಆಧಾರಿತ ಕಿರುಕುಳದಿಂದ ಮನನೊಂದಿದ್ದ ಕೇರಳದ ಅಂಚರಕಂಡಿಯ ಕಣ್ಣೂರು ದಂತ ಕಾಲೇಜಿನಲ್ಲಿ ಪ್ರಥಮ ವರ್ಷದ ಬಿಡಿಎಸ್ ವಿದ್ಯಾರ್ಥಿ ಆರ್.ಎಲ್. ನಿತಿನ್ ರಾಜ್ ಆತ್ಮಹತ್ಯೆಗೆ ರಾಜ್ಯದಾದ್ಯಂತ ಆಕ್ರೋಶ ವ್ಯಕ್ತವಾಗಿದೆ. ಕಾಲೇಜು ಕಟ್ಟಡದಿಂದ ಹಾರಿ ಆತ್ಮಹತ್ಯೆ...

‘ಹೊತ್ತಿ ಉರಿಯುತ್ತಿರುವ ಮಣಿಪುರ’: ಶತಮಾನದ ಬೆಂಕಿಗೆ ತುಪ್ಪ ಸುರಿದ ಬಿಜೆಪಿಯ ಕೋಮುರಾಜಕಾರಣ

ಭಾರತದ ಈಶಾನ್ಯ ರಾಜ್ಯ ಮಣಿಪುರ ಅಕ್ಷರಶಃ ಹೊತ್ತಿ ಉರಿಯುತ್ತಿದೆ. ಶತಮಾನಗಳಿಂದ ಹೊಗೆಯಾಡುತ್ತಿದ್ದ ಹಗೆತನಕ್ಕೆ ಕೋಮುರಾಜಕಾರಣದ ಬಣ್ಣ ಬಳಿದ ಬಿಜೆಪಿ ಮತ್ತು ಕೇಂದ್ರ ಸರ್ಕಾರ ಮಣಿಪುರದ ಜನರತ್ತ ತಿರುಗಿಯೂ ನೋಡುತ್ತಿಲ್ಲ. 2023ರಲ್ಲಿ ಭುಗಿಲೆದ್ದ ಉದ್ವಿಗ್ನತೆ...

ಮಧ್ಯಪ್ರದೇಶ| ದಲಿತ ದಂಪತಿಗೆ ಹನುಮಾನ್ ದೇಗುಲ ಪ್ರವೇಶ ನಿರಾಕರಣೆ; ಸಾಮಾಜಿಕ ಬಹಿಷ್ಕಾರ

ಮಧ್ಯಪ್ರದೇಶದ ಖಾರ್ಗೋನ್ ಜಿಲ್ಲೆಯ ಹನುಮಾನ್ ದೇವಸ್ಥಾನಕ್ಕೆ ನವವಿವಾಹಿತ ದಲಿತ ದಂಪತಿಗೆ ಪ್ರವೇಶ ನಿರಾಕರಿಸಲಾಗಿದೆ ಎಂಬ ಆರೋಪ ಕೇಳಿಬಂದಿದ್ದು, ಇದು ಗ್ರಾಮದಲ್ಲಿ ಉದ್ವಿಗ್ನತೆಯನ್ನು ಉಂಟುಮಾಡಿದೆ. ಈ ಘಟನೆಯು ಜಾತಿ ಆಧಾರಿತ ತಾರತಮ್ಯದ ಕುರಿತು ಕಳವಳ...

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...