Homeಕರ್ನಾಟಕಬಿಜೆಪಿಯ 'ಕೋಮು ದ್ವೇಷದ ಪೋಸ್ಟ್‌'ನ್ನು ತೆಗೆದು ಹಾಕುವಂತೆ 'ಎಕ್ಸ್‌'ಗೆ ಸೂಚಿಸಿದ ಚು.ಆಯೋಗ

ಬಿಜೆಪಿಯ ‘ಕೋಮು ದ್ವೇಷದ ಪೋಸ್ಟ್‌’ನ್ನು ತೆಗೆದು ಹಾಕುವಂತೆ ‘ಎಕ್ಸ್‌’ಗೆ ಸೂಚಿಸಿದ ಚು.ಆಯೋಗ

- Advertisement -
- Advertisement -

ಬಿಜೆಪಿ ಕರ್ನಾಟಕ ತಮ್ಮ ಎಕ್ಸ್‌ ಖಾತೆಯಲ್ಲಿ ಹಂಚಿಕೊಂಡಿರುವ ಕೋಮು ದ್ವೇಷದ ಪೋಸ್ಟ್‌ನ್ನು ತೆಗೆದುಹಾಕಲು ಚುನಾವಣಾ ಆಯೋಗವು ಸಾಮಾಜಿಕ ಜಾಲತಾಣ ಎಕ್ಸ್‌ಗೆ ಸೂಚನೆಯನ್ನು ನೀಡಿದೆ.

ಭಾರತೀಯ ಚುನಾವಣಾ ಆಯೋಗ ಹೊರಡಿಸಿದ ಆದೇಶದಲ್ಲಿ ಜಂಟಿ ನಿರ್ದೇಶಕರು ಮತ್ತು ನೋಡಲ್‌ ಅಧಿಕಾರಿಯಾಗಿರುವ ಅನುಜ್‌ ಚಂದಕ್‌ ಈ ಕುರಿತು ಸೂಚನೆಯನ್ನು ನೀಡಿದ್ದಾರೆ. ಆದೇಶದಲ್ಲಿ ಬಿಜೆಪಿಯ ದ್ವೇಷದ ಪೋಸ್ಟ್‌ನ ಲಿಂಕ್‌ನ್ನು ಉಲ್ಲೇಖಿಸಿದ್ದಾರೆ. ಬಿಜೆಪಿಯ ಈ ಪೋಸ್ಟ್‌ ಕಾನೂನನ್ನು ಉಲ್ಲಂಘಿಸುತ್ತದೆ ಎಂದು ಉಲ್ಲೇಖಿಸಿದ್ದಾರೆ.

ಈ ಪ್ರಕರಣದಲ್ಲಿ ಈಗಾಗಲೇ ಎಫ್‌ಐಆರ್‌ ದಾಖಲಾಗಿದೆ. ಆಕ್ಷೇಪಾರ್ಹ ಪೋಸ್ಟ್‌ನ್ನು ತೆಗೆದುಹಾಕುವಂತೆ  ಈಗಾಗಲೇ 5-5-2024 ರಂದು ಮಾಹಿತಿ ತಂತ್ರಜ್ಞಾನ ಕಾಯ್ದೆ ನಿಯಮಾವಳಿಯಡಿ ಎಕ್ಸ್‌ಗೆ ನಿರ್ದೇಶನ ನೀಡಲಾಗಿದೆ. ಆದರೆ ಪೋಸ್ಟ್‌ನ್ನು ತೆಗೆದುಹಾಕಲಾಗಿಲ್ಲ. ಆದ್ದರಿಂದ ತಕ್ಷಣ ಈ ದ್ವೇಷ ಪೂರಿತ ವಿಡಿಯೋವನ್ನು ತೆಗೆದು ಹಾಕುವಂತೆ ಎಕ್ಸ್‌ಗೆ ಚುನಾವಣಾ ಆಯೋಗ ಸೂಚನೆಯನ್ನು ನೀಡಿದೆ.

ಆ್ಯನಿಮೇಟೆಡ್ ವಿಡಿಯೋ ಪೋಸ್ಟ್ ಮಾಡಿರುವುದಕ್ಕೆ ಸಂಬಂಧಿಸಿದಂತೆ ಬಿಜೆಪಿ ನಾಯಕರ ವಿರುದ್ದ ಕೆಪಿಸಿಸಿ ಮಾಧ್ಯಮ ಮತ್ತು ಸಂವಹನ ವಿಭಾಗದ ಅಧ್ಯಕ್ಷ ರಮೇಶ್ ಬಾಬು ಬೆಂಗಳೂರಿನ ಹೈಗ್ರೌಂಡ್ಸ್ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ದೂರು ಆಧರಿಸಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ, ರಾಜ್ಯ ಘಟಕದ ಅಧ್ಯಕ್ಷ ಬಿವೈ ವಿಜಯೇಂದ್ರ ಮತ್ತು ಬಿಜೆಪಿ ಐಟಿ ಸೆಲ್ ಮುಖ್ಯಸ್ಥ ಅಮಿತ್ ಮಾಳವೀಯ ವಿರುದ್ದ ಎಫ್‌ಐಆರ್ ದಾಖಲಿಸಲಾಗಿತ್ತು.

ವಿಡಿಯೋದಲ್ಲೇನಿತ್ತು?

ಕರ್ನಾಟಕ ಬಿಜೆಪಿ ಸಾಮಾಜಿಕ ಜಾಲತಾಣ ಎಕ್ಸ್‌ನ ಅಧಿಕೃತ ಖಾತೆಯಲ್ಲಿ ಸುಳ್ಳು ಪ್ರತಿಪಾದಿಸುವ, ಮುಸ್ಲಿಮರ ವಿರುದ್ಧ ದ್ವೇಷವನ್ನು ಪ್ರೇರೇಪಿಸುವ ವಿಡಿಯೋವೊಂದನ್ನು ಹಂಚಿಕೊಂಡಿತ್ತು. ಎಚ್ಚರ..ಎಚ್ಚರ..ಎಚ್ಚರ.. ಎಂಬ ತಲೆ ಬರಹದಲ್ಲಿ ಬಿಜೆಪಿ ವಿಡಿಯೋವನ್ನು ಹಂಚಿಕೊಂಡಿದ್ದು, ಇದರಲ್ಲಿ ರಾಹುಲ್‌ ಗಾಂಧಿ ಮತ್ತು ಸಿದ್ದರಾಮಯ್ಯ ಅವರ ಕಾರ್ಟೂನ್‌ಗಳಿವೆ. ಈ ಇಬ್ಬರು ಎಸ್ಸಿ,ಎಸ್‌ಟಿ, ಒಬಿಸಿ ಎಂದು ಬರೆದ ಮೊಟ್ಟೆ ಬಳಿ ಮುಸ್ಲಿಂ ಎಂದು ಬರೆದ ದೊಡ್ಡ ಮೊಟ್ಟೆಯನ್ನು ತಂದು ಇಡುತ್ತಾರೆ. ಈ ಮೊಟ್ಟೆಯಿಂದ ಹೊರಬಂದ ಮುಸ್ಲಿಂ ಎಂದು ಬರೆದ ಹಕ್ಕಿಗೆ ರಾಹುಲ್‌ ಗಾಂಧಿ ಆಹಾರವನ್ನು ತಂದು ಸುರಿಯುವುದು, ಬಳಿಕ ಎಸ್ಸಿ, ಎಸ್‌ಟಿ ಒಬಿಸಿ ಎಂದು ಬರೆದ ಹಕ್ಕಿಯನ್ನು ಮುಸ್ಲಿಂ ಎಂದು ಬರೆದ ಹಕ್ಕಿ ಹೊರದಬ್ಬುವ ದ್ವೇಷ ಪೂರಿತ ಅಂಶಗಳು ಉಲ್ಲೇಖಿಸಲಾಗಿತ್ತು.

ಬಿಜೆಪಿ ಕರ್ನಾಟಕ ತನ್ನ ಸಾಮಾಜಿಕ ಮಾಧ್ಯಮ ಖಾತೆ ಎಕ್ಸ್‌ನಲ್ಲಿ ಸುಳ್ಳು ಸುದ್ದಿ ಮತ್ತು ದ್ವೇಷವನ್ನು ಹಬ್ಬಿಸುವ ಮೂಲಕ ಚುನಾವಣಾ ನೀತಿ ಸಂಹಿತೆಯನ್ನು ಉಲ್ಲಂಘಿಸಿದೆ ಎಂದು ವಿವಿಧ ಸಂಘಟನೆಗಳ ನಿಯೋಗವು ಚುನಾವಣಾ ಆಯೋಗಕ್ಕೆ ನಿನ್ನೆ ದೂರನ್ನು ನೀಡಿತ್ತು. ಬಹುತ್ವ ಕರ್ನಾಟಕ, ಆಲ್ ಇಂಡಿಯಾ ಲಾಯರ್ಸ್ ಅಸೋಸಿಯೇಷನ್ ಫಾರ್ ಜಸ್ಟಿಸ್ (AILAJ), ಕ್ಯಾಂಪೇನ್ ಎಗೇನ್ಸ್ಟ್ ಹೇಟ್ ಸ್ಪೀಚ್ (CAHS), ಆಲ್ ಇಂಡಿಯಾ ಡೆಮಾಕ್ರಟಿಕ್ ವುಮೆನ್ಸ್ ಅಸೋಸಿಯೇಷನ್ (AIDWA), ನಾವೆದ್ದು ನಿಲ್ಲದಿದ್ರೆ, ಪೀಪಲ್ಸ್ ಯೂನಿಯನ್ ಫಾರ್ ಸಿವಿಲ್ ಲಿಬರ್ಟೀಸ್ (PUCL) ಪ್ರತಿನಿಧಿಗಳು ನಿಯೋಗದ ಭಾಗವಾಗಿದ್ದರು.

ಇದನ್ನು ಓದಿ: ಸುಳ್ಳು ಸುದ್ದಿ, ದ್ವೇಷ ಹಬ್ಬಿಸುವ ಮೂಲಕ ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ: ಬಿಜೆಪಿ ವಿರುದ್ಧ ಚು.ಆಯೋಗಕ್ಕೆ ದೂರು ನೀಡಿದ ನಿಯೋಗ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತಕ್ಷಣವೇ ‘SIR ಹೆಲ್ಪ್‌ ಡೆಸ್ಕ್‌’ ಸ್ಥಾಪಿಸುವಂತೆ ಅಧಿಕಾರಿಗಳಿಗೆ ಸಿಎಂ ಸೂಚನೆ

ರಾಜ್ಯದಲ್ಲಿ ಭಾರತೀಯ ಚುನಾವಣಾ ಆಯೋಗದಿಂದ ನಡೆಯುತ್ತಿರುವ ಎಸ್‌ಐಆರ್ (Special Electoral Roll Purification) ಪ್ರಕ್ರಿಯೆ ಸಂದರ್ಭದಲ್ಲಿ ರಾಜ್ಯದ ಯಾವುದೇ ಪ್ರಜೆಯೂ ತನ್ನ ಅತ್ಯಮೂಲ್ಯವಾದ ಮತದಾನದ ಹಕ್ಕನ್ನು ಕಳೆದುಕೊಳ್ಳಬಾರದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ವಿಷಾಹಾರಕ್ಕೆ ಜಾಗತಿಕವಾಗಿ ವರ್ಷಕ್ಕೆ 15 ಲಕ್ಷ ಜನರು ಬಲಿ: ಮಕ್ಕಳಿಗೆ ಹೆಚ್ಚಿನ ಅಪಾಯ: ಭಾರತದ ಸ್ಥಿತಿಯೂ ಆತಂಕಕಾರಿ! 

ನಾವು ದಿನನಿತ್ಯ ಸೇವಿಸುವ ಆಹಾರವೇ ನಮ್ಮ ಜೀವಕ್ಕೆ ಕಂಟಕವಾಗುತ್ತಿದೆಯೇ? ಹೌದು ಎನ್ನುತ್ತದೆ ವಿಶ್ವ ಆರೋಗ್ಯ ಸಂಸ್ಥೆಯ (WHO) ಇತ್ತೀಚಿನ ಆಘಾತಕಾರಿ ವರದಿ. ಜಾಗತಿಕವಾಗಿ ಅಸುರಕ್ಷಿತ ಮತ್ತು ಕಲುಷಿತ ಆಹಾರದ ಸೇವನೆಯಿಂದಾಗಿ ಪ್ರತಿ ವರ್ಷ...

ಡಿಕೆಶಿ ಸಂಪುಟದಲ್ಲಿ ಅಲ್ಪಸಂಖ್ಯಾತರಿಗೆ ಸಿಗುತ್ತಾ ಸೂಕ್ತ ಪ್ರಾತಿನಿಧ್ಯ?

ಮಹತ್ವದ ರಾಜಕೀಯ ಬೆಳವಣಿಗೆಯಲ್ಲಿ ರಾಜ್ಯದ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿ, ಡಿ.ಕೆ ಶಿವಕುಮಾರ್ ಹೊಸ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಾಗಿದೆ. ಈ ಮೂಲಕ ಕಳೆದ ಒಂದು ವರ್ಷದಿಂದ ನಡೆಯುತ್ತಿದ್ದ ಸಿಎಂ ಬದಲಾವಣೆಯ...

‘ಕರ್ನಾಟಕದಲ್ಲಿ SIR’ ಮತ ಉಳಿಸಿಕೊಳ್ಳುವಂತೆ ಕಾರ್ಯಕರ್ತರಿಗೆ CM ಡಿ.ಕೆ ಶಿವಕುಮಾರ್ ಕರೆ!

ಕರ್ನಾಟಕ ರಾಜಕಾರಣದಲ್ಲಿ ಹೊಸ ಯುಗ ಆರಂಭವಾಗಿದೆ. ರಾಜ್ಯದ 25ನೇ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವರು ಪ್ರಮಾಣವಚನ ಸ್ವೀಕರಿಸಿದ್ದಾರೆ. ಅಧಿಕಾರ ವಹಿಸಿಕೊಂಡ ಬೆನ್ನಲ್ಲೇ ಕೆಲಸ ಮಾಡದಿರುವ ಸಚಿವ ಮತ್ತು ಶಾಸಕರನ್ನು ಸುಮ್ಮನೆ ಬಿಡುವುದಿಲ್ಲ ಎಂದು...

ವೋಟರ್ ಐಡಿ, ಆಧಾರ್ ಇದ್ದರೂ ನೆಮ್ಮದಿ ಇಲ್ಲ, ಪಶ್ಚಿಮ ಬಂಗಾಳದಲ್ಲಿ ಶುರುವಾಯ್ತು ‘ಹೋಲ್ಡಿಂಗ್ ಸೆಂಟರ್’ಗಳ ಭಯ

ಪಶ್ಚಿಮ ಬಂಗಾಳದಲ್ಲಿ "ಯಾರು ಈಗಾಗಲೇ ಮತದಾರರ ಪಟ್ಟಿಯಿಂದ ಹೊರಗುಳಿದಿದ್ದಾರೋ ಮತ್ತು ಟ್ರಿಬ್ಯೂನಲ್‌ನ (ನ್ಯಾಯಮಂಡಳಿ) ಅನುಮೋದನೆಗಾಗಿ ಕಾಯುತ್ತಿದ್ದಾರೋ, ಅಂತಹವರಲ್ಲಿ ಹೊಸ ಪೊಲೀಸ್ ವ್ಯವಸ್ಥೆ ಮತ್ತು ಬಂಧನ ಕೇಂದ್ರಗಳು (ಡಿಟೆಂಷನ್ ಸೆಂಟರ್) ತಮ್ಮನ್ನು ವಿದೇಶಿಯರಂತೆ ನಡೆಸಿಕೊಳ್ಳಲ್ಪಡಬಹುದು...

ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹ : ಮೊದಲ ಬೀದಿ ಹೋರಾಟಕ್ಕೆ ಸಜ್ಜಾದ ಕಾಕ್ರೋಚ್ ಜನತಾ ಪಾರ್ಟಿ

ಸಾಮಾಜಿಕ ಜಾಲತಾಣಗಳಲ್ಲಿ ಹೊಸ ಅಲೆಯನ್ನು ಸೃಷ್ಟಿಸಿರುವ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ತನ್ನ ಮೊದಲ ಬೀದಿ ಹೋರಾಟಕ್ಕೆ ಸಜ್ಜಾಗಿದೆ. ಜೂನ್ 6, 2026ರಂದು ನವದೆಹಲಿಯ ಜಂತರ್ ಮಂತರ್‌ನಲ್ಲಿ ಸಿಜೆಪಿ ಪ್ರತಿಭಟನೆ ಆಯೋಜಿಸಿದ್ದು, ಇದರ...

ದೆಹಲಿ: ‘ಮಾಳವೀಯ ನಗರ’ ಅಗ್ನಿ ದುರಂತಕ್ಕೆ 21 ಜನರು ಬಲಿ: ವ್ಯವಸ್ಥೆಯ ವೈಫಲ್ಯದ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿರುವ ನಾಗರೀಕರು 

ದೆಹಲಿಯ ಅತ್ಯಂತ ಜನನಿಬಿಡ ಮತ್ತು ವಾಣಿಜ್ಯ ಪ್ರದೇಶವಾದ ಮಾಳವೀಯ ನಗರದಲ್ಲಿ 2026 ಜೂನ್ 3, ಬುಧವಾರ ನಸುಕಿನ ಜಾವ ಸಂಭವಿಸಿದ ಭೀಕರ ಅಗ್ನಿ ದುರಂತವು ಇಡೀ ದೇಶವನ್ನು ಬೆಚ್ಚಿಬೀಳಿಸಿದೆ. 'ಫ್ಲೋರಿಶ್ ಸ್ಟೇ ಬಿ...

“ವಿಷ ಕಾರದೆ ಮಾತನಾಡಿ”: ಕಲ್ಲಡ್ಕ ಪ್ರಭಾಕರ ಭಟ್‌ಗೆ ಹೈಕೋರ್ಟ್ ತಾಕೀತು

ಹೆಚ್ಚು ಮಕ್ಕಳನ್ನು ಹೆರುವ ಮುಸ್ಲಿಂ ಮಹಿಳೆಯರನ್ನು ಲೇವಡಿ ಮಾಡುವ ಮೂಲಕ ಕೋಮು ದ್ವೇಷ ಹರಡಿದ್ದಾರೆ ಎಂಬ ಆರೋಪ ಎದುರಿಸುತ್ತಿರುವ ಹಿಂದುತ್ವ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ಕಲ್ಲಡ್ಕ ಅವರಿಗೆ ತಮ್ಮ ಮುಂದಿನ ಭಾಷಣಗಳಲ್ಲಿ...

ಪತ್ರಕರ್ತ- ಚಿತ್ರ ನಿರ್ಮಾಪಕ ಸೇರಿದಂತೆ ಹಲವು ಕ್ಷೇತ್ರಗಳ ಪ್ರಮುಖರನ್ನು ವಕ್ತಾರರನ್ನಾಗಿ ನೇಮಿಸಿದ ಸಿಜೆಪಿ

ಆನ್‌ಲೈನ್ ಸೆನ್ಸೇಷನ್ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ)ಯು ಶಿಕ್ಷಣ ವ್ಯವಸ್ಥೆಯಲ್ಲಿನ ವೈಫಲ್ಯಗಳ ವಿರುದ್ಧ ಪ್ರಸ್ತಾಪಿಸಿದ ಪ್ರತಿಭಟನೆಗೆ ಮುಂಚಿತವಾಗಿ ತನ್ನ ವ್ಯಾಪ್ತಿಯನ್ನು ವಿಸ್ತರಿಸುವ ಸಲುವಾಗಿ ಮೂವರು ವಕ್ತಾರರ ಹೆಸರನ್ನು ಘೋಷಿಸಿದೆ. ಎಕ್ಸ್‌ನಲ್ಲಿನ ಪೋಸ್ಟ್‌ ಮಾಡಿರುವ ಅಭಿಜೀತ್...

CBSE ಪರೀಕ್ಷೆಯಲ್ಲಿ OSM ವಿವಾದ | ಸಂಸದೀಯ ಸಮಿತಿಯ ಮುಂದೆ ಹಾಜರಾದ ವಿದ್ಯಾರ್ಥಿ ಸಾರ್ಥಕ್ ಸಿದ್ಧಾಂತ್

ಸೆಂಟ್ರಲ್ ಬೋರ್ಡ್ ಆಫ್ ಸೆಕೆಂಡರಿ ಎಜುಕೇಶನ್ (ಸಿಬಿಎಸ್‌ಸಿ) ಆನ್-ಸ್ಕ್ರೀನ್ ಮಾರ್ಕಿಂಗ್ (ಒಎಸ್‌ಎಂ) ಮೌಲ್ಯಮಾಪನ ವ್ಯವಸ್ಥೆಯಲ್ಲಿನ ಗಂಭೀರ ಲೋಪಗಳ ಕುರಿತು ವಿವಾದ ಭುಗಿಲೆದ್ದಿರುವ ನಡುವೆ, 17 ವರ್ಷದ ವಿದ್ಯಾರ್ಥಿ ಸಾರ್ಥಕ್ ಸಿದ್ಧಾಂತ್ ನವದೆಹಲಿಯ ಸಂಸತ್ ಭವನದಲ್ಲಿ...