Homeಮುಖಪುಟಚುನಾವಣಾ ಆಯೋಗದ ಪಕ್ಷಪಾತ: ಬಿಜೆಪಿಯ ಉಲ್ಲಂಘನೆಗಳಿಗೆ ಮೌನಸಮ್ಮತಿ?!

ಚುನಾವಣಾ ಆಯೋಗದ ಪಕ್ಷಪಾತ: ಬಿಜೆಪಿಯ ಉಲ್ಲಂಘನೆಗಳಿಗೆ ಮೌನಸಮ್ಮತಿ?!

- Advertisement -
- Advertisement -

ಕಳೆದ ಎರಡು ವಾರಗಳಲ್ಲಿ ಹಲವಾರು ಸಲ ನೀತಿ ಸಂಹಿತೆ ಉಲ್ಲಂಘನೆಯಾಗಿದೆ, ಆಗುತ್ತಲೇ ಇದೆ. ವಿಪಕ್ಷಗಳ ವಿಚಾರದಲ್ಲಿ ಕಠೋರ ನಿಲುವು ತಾಳುತ್ತಿರುವ ಚುನಾವಣಾ ಆಯೋಗ ಗಂಭೀರ ತಪ್ಪು ಮಾಡಿದ ಬಿಜೆಪಿ ನಾಯಕರಿಗೆ ‘ಅಸಂತೋಷ’ದ ಸೂಚನೆ ನೀಡುತ್ತಿದೆ… ಇದನ್ನೆಲ್ಲ ಗಮಿನಿಸಿದರೆ, ಸಿಬಿಐ, ಐಟಿ ಇಲಾಖೆ ಹಾದಿಯಲ್ಲೇ ಆಯೋಗವೂ ಸಾಗುತ್ತಿರುವ ಸಾಧ್ಯತೆಗಳು ಗೋಚರಿಸುತ್ತಿವೆ..

ನಿನ್ನೆ ಏಪ್ರಿಲ್ 5ರಂದು ದೇಶದ ಪ್ರಜಾಪ್ರಭುತ್ವದ ‘ಒಂಬುಡ್ಸ್‍ಮನ್’ ಎಂದು ಕರೆಯಲ್ಪಡುವ ಚುನಾವಣಾ ಆಯೋಗವು ನೀತಿ ಸಂಹಿತೆ ಉಲ್ಲಂಘನೆಯ ಎರಡು  ಪ್ರಕರಣಗಳ ಕುರಿತಂತೆ ತಪ್ಪು  ತೀರ್ಪುಗಳನ್ನು ನೀಡಿದೆ. ಒಂದು, ಉತ್ತರಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥರು, ಭಾರತೀಯ ಸೇನೆಯನ್ನು ಮೋದಿಸೇನೆ ಎಂದ ಪ್ರಕರಣ.

ಮೋದಿ ಸಂಪುಟದ ಸಚಿವ ವಿ.ಕೆ. ಸಿಂಗ್ ಸೇರಿದಂತೆ, ಹಲವಾರು ಜನರ ಖಂಡನೆಯ ನಂತರ ಚುನಾವಣಾ ಆಯೋಗವು ಯೋಗಿಗೆ ‘ಜಾರೂಕರಾಗಿರುವಂತೆ ಸಲಹೆ’ ನೀಡುವ ಪತ್ರವನ್ನು ಕಳಿಸಿದೆ!

ಎರಡನೇಯ ನೀತಿ ಸಂಹಿತೆ ಉಲ್ಲಂಘನೆ, ನೀತಿ ಆಯೋಗದ ಉಪಾಧ್ಯಕ್ಷ  ರಾಜೀವಕುಮಾರ್, ಕಾಂಗ್ರೆಸ್‍ನ ‘ಕನಿಷ್ಠ ಆದಾಯ ಖಾತ್ರಿ’ಯ ಭರವಸೆ ಕುರಿತು ಮಾಡಿದ ಟೀಕೆ ಕುರಿತದ್ದು. ಈ ಕುರಿತಂತೆ ರಾಜೀವಕುಮಾರರಿಗೂ ಪತ್ರ ಕಳಿಸಿರುವ ಆಯೋಗ,  ಸಾರ್ವಜನಿಕ ಸೇವಕರು ನೀತಿ ಸಂಹಿತೆ ಪಾಲಿಸುವುದು, ಚುನಾವಣಾ ಪಾವಿತ್ರ್ಯವನ್ನು ಕಾಪಾಡುವುದು ಅಗತ್ಯ’ ಎಂದು ‘ಬೋಧನೆ’ ಮಾಡಿರುವ ಅದು, ‘ತಮ್ಮ ನಡೆ ಬಗ್ಗೆ ಆಯೋಗಕ್ಕೆ ಅಸಂತೋಷವಿದೆ, ಇನ್ನುಂದೆ ಹುಷಾರಾಗಿರಿ’ ಎಂದಿದೆ!

ನೀತಿಸಂಹಿತೆ ಉಲ್ಲಂಘನೆ ಪ್ರಕರಣಗಳು, ಅದರಲ್ಲೂ ಬಿಜೆಪಿಗೆ ಸಂಬಂಧಿಸಿದ ಪ್ರಕರಣಗಳು ದಾಖಲಾಗುತ್ತಲೇ ಇವೆ. ನಿನ್ನೆಯೇ (ಏ.5) ವಿಪಕ್ಷಗಳು ‘ಹಫ್‍ಫೋಸ್ಟ್  ಬಯಲು ಮಾಡಿರುವ ‘’ಅಸೋಷಿಯೇಷನ್ ಆಫ್ ಬಿಲಿಯನ್ ಮೈಂಡ್ಸ್’ ಸಂಸ್ಥೆಯ ಮೇಲೆ ತ್ವರಿತ ಕಾನೂನು ಕ್ರಮಕ್ಕೆ ಆಗ್ರಹಿಸಿವೆ. ಬಿಜೆಪಿಯಿಂದ ತೆರೆಮರೆಯಲ್ಲಿ ನಡೆಸಲ್ಪಡುವ ಈ ಎನ್‍ಜಿಒ, ಕಳೆದ ಐದು ವರ್ಷಗಳ ಕಾಲ ಆನ್‍ಲೈನಿನಲ್ಲಿ ಬಿಜೆಪಿ ಪ್ರಪಗಂಡಾಗಳನ್ನು ವ್ಯವಸ್ಥಿತವಾಗಿ ಹರಡುವ ಕೆಲಸ ಮಾಡುತ್ತಿದೆ.

ಇದರ ವಿರುದ್ಧ ಆಯೋಗ ತ್ವರಿತ ಕ್ರಮ ಕೈಗೊಳ್ಳುತ್ತದೆ ಎಂದು ನಿರೀಕ್ಷಿಸುವುದೇ ಮೂರ್ಖತನವೇನೋ?  ‘ಈ ಸಮಾಜಕ್ಕಾಗಿ ಮೋದಿ ಮತ್ತೆ ಪ್ರಧಾನಿಯಾಗಬೇಕು’ ಎಂದ ರಾಜಸ್ಥಾನದ ರಾಜ್ಯಪಾಲ ಕಲ್ಯಾಣಸಿಂಗ್ ವಿಷಯದಲ್ಲೂ ಆಯೋಗ ಕಾಟಾಚಾರದ ಆಟವಾಡಿದೆ.

ಮೋದಿಯ ‘ಮೈ ಭಿ ಚೌಕಿದಾರ್’ ಕಾರ್ಯಕ್ರಮ ನೇರ ಪ್ರಸಾರ ಮಾಡಿದ ದೂರದರ್ಶನ, ನಿಯಮಗಳನ್ನು ಉಲ್ಲಂಘಿಸಿ ಹಠಾತ್ತನೇ ಹುಟ್ಟಿದ ‘ನಮೋ ಟಿವಿ’- ಇವೆಲ್ಲವಕ್ಕೂ ಆಯೋಗ ಸ್ಪಷ್ಟೀಕರಣ ಕೇಳುವ ಕೆಲಸ ಮಾಡುತ್ತಿದೆಯಷ್ಟೇ. ಮೋದಿಯ ಜೀವನಾಧಾರಿತ ಚಿತ್ರ ಬಿಡುಗಡೆಗೂ ಆಯೋಗದ ಆಕ್ಷೇಪವಿಲ್ಲ.

ಆದರೆ, ಆಂಧ್ರ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡುರಿಗೆ ಆಪ್ತರೆನ್ನಲಾದ ಅಲ್ಲಿನ ಮುಖ್ಯ ಕಾರ್ಯದರ್ಶಿಯನ್ನು ಹಳೆಯ ಆದೇಶವೊಂದರ ನೆಪದಲ್ಲಿ ಆಯೋಗ ಸಸ್ಪೆಂಡ್ ಮಾಡಿದೆ.

ಬರುವ ದಿನಗಳಲ್ಲಿ ಆಯೋಗವು ಬಿಜೆಪಿಯ ನೀತಿ ಸಂಹಿತೆ ಉಲ್ಲಂಘನೆಗಳ ವಿರುದ್ಧ ಕಠಿಣವಾಗಿ ವರ್ತಿಸಲಾರದು ಎಂಬ ಸಂದೇಶ ಈಗಾಗಲೇ ಬಿಜೆಪಿ ನಾಯಕರಿಗೆ ಮನದಟ್ಟಾಗುತ್ತಿದ್ದು, ಇನ್ನಷ್ಟು ದ್ವೇಷಾಸೂಯೆಯ, ಸೇನೆಯ ಹೆಸರು ದುರ್ಬಳಕೆಯ ಭಾಷಣಗಳು ಕೇಳಿ ಬರಲಿವೆ. ಜನ ಮಾತ್ರ ಇಂಥದಕ್ಕೆಲ್ಲ ಬಲಿಯಾಗಬಾರದು.

ಮೋದಿಯ ಬುಟ್ಟಿಯಲ್ಲಿ ಈಗ ಆಯೋಗವೂ ಸ್ಥಾನ ಪಡೆದುಕೊಂಡಿದೆ!

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...